Connect with us

ದಿನದ ಸುದ್ದಿ

ಅಭಿಯಾನದಲ್ಲಿ ಪೋಸ್ಟರ್ ಅಸ್ತ್ರ: ಸಲ್ಲದ ಎಡವಟ್ಟು..!

Published

on

ಸಾಂದರ್ಭಿಕ ಚಿತ್ರ
  • ಪ್ರಜ್ವಲ್ ತೇಜ ಡಿ.ಎಸ್, ಪ್ರಥಮ ವರ್ಷದ ಸ್ನಾತಕೋತ್ತರ ಪದವಿ ವಿದ್ಯಾರ್ಥಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಬೆಂಗಳೂರು ವಿಶ್ವವಿದ್ಯಾಲಯ

ತ್ತೀಚಿನ ದಿನಗಳಲ್ಲಿ ಪ್ರತಿ ಮಾಧ್ಯಮದಲ್ಲಿನ ಸಹ ಹೆಚ್ಚು ಸುದ್ದಿಯಲ್ಲಿರುವ ಪೋಸ್ಟರ್ ಅಭಿಯಾನ ಸಾಕಷ್ಟು ಗಮನ ಸೆಳೆಯುವುದರಲ್ಲಿ ಗೆದ್ದಿದ್ದರು. ಇದು ಸಹ ಸಾರ್ವಜನಿಕರಲ್ಲಿ ಪ್ರಜ್ಞೆಯನ್ನು ಮೂಡಿಸುವಲ್ಲಿ ಎಷ್ಟು ಮಾತ್ರ ಯಶಸ್ಸು ಕಂಡಿದೆ ಎಂಬುದು ಗಮನಿಸಬೇಕಾದ ವಿಷಯ.

ಸಾಮಾನ್ಯವಾಗಿ ಯಾವುದೇ ಚುನಾವಣಾ ಅಭಿಯಾನಗಳಲ್ಲಿ ತಮ್ಮ ಪಕ್ಷಗಳ ಈ ಹಿಂದಿನ ಯಶಸ್ಸು, ಕಾರ್ಯ ಮತ್ತು ಸಾಧನೆಗಳನ್ನು ತೋರ್ಪಡಿಸುವುದು ಅಥವಾ ಮುಂದೆ ತಮ್ಮ ಗುರಿಯೇನು ಎನ್ನುವುದು ಜನರಲ್ಲಿ ಪ್ರಜ್ಞಾವಂತಿಗೆ ಮೂಡಿಸುವ ಕೆಲಸ ಮಾಡುತ್ತಿತ್ತು. ಅದುವೇ ಪ್ರಚಾರದ ಭಾಗವಾಗಿತು. ಆದರೆ ಈಗ ಸುದ್ದಿಯಲ್ಲಿರುವ ಪೋಸ್ಟರ್ ಅಭಿಯಾನಗಳು ಜನರಲ್ಲಿ ಆಸಕ್ತಿ ಮೂಡಿಸುವ ಬದಲು ಪಕ್ಷಗಳ ಪರಸ್ಪರ ಸಂಘರ್ಷ, ಒಬ್ಬರ ಮೇಲೊಬ್ಬರು ಮಾಡುತ್ತಿರುವ ಆರೋಪಗಳು ಮಾತ್ರ ಕಾಣಸಿಗುತ್ತದೆ. ಇದು ಯಾವ ರೀತಿ ಉಪಯುಕ್ತವೆನ್ನುವುದು ರಾಜಕೀಯ ಪಕ್ಷಗಳು ಒಮ್ಮೆ ಯೋಚಿಸಬೇಕಾಗಿದೆ.

ಮುಖ್ಯವಾಗಿ ಜನರಿಗೆ ಪಕ್ಷವು ಯಾವ ರೀತಿಯ ಸಂದೇಶವನ್ನು ನೀಡುತ್ತಿದ್ದೇವೆ ಎಂದು ಯೋಚಿಸಬೇಕು. ಈ ಹಿಂದೆ ಪೋಸ್ಟರ್ ಗಳು ತಮ್ಮ ತಮ್ಮ ರಾಜಕೀಯ ಪಕ್ಷಗಳ ಯೋಜನೆ ಮತ್ತು ಜನರನ್ನು ತಲುಪುವ ಪ್ರಚಾರದ ಸಾಧನವಾಗಿ ಇರುತ್ತಿತು. ಆದರೆ, ಈಗ ಎದುರಾಳಿ ಪಕ್ಷದ ತೇಜೋವಧೆ ಮಾಡುವ ಸಾಧನವಾಗಿದೆ. ಈ ಪೋಸ್ಟರ್ ಅಭಿಯಾನವು ವಿರೋಧ ಪಕ್ಷ ಕಾಂಗ್ರೆಸ್ ನ ನಾಯಕರು ‘ಪೇ ಸಿಎಂ’ ಎಂದು ಶುರು ಮಾಡಿದ ಕಾರಣ ಅದು ಆಡಳಿತ ಪಕ್ಷದ ಕೆಂಗಣ್ಣಿಗೆ ಗುರಿಯಾಗಿ ಸಾಕಷ್ಟು ಕೋಲಹಲ ಮತ್ತು ಚರ್ಚೆಗೆ ಕಾರಣವಾಗಿತ್ತು. ಆ ಪೋಸ್ಟರ್ ಗಳಲ್ಲಿ ಕ್ಯೂಆರ್ ಕೋಡ್ ಇರಿಸಿ 40% ಕಮಿಷನ್ ಆರೋಪಿಗಳಿಗೆ ತುಪ್ಪ ಸುರಿಯಿತು. ಅದನ್ನು ಆಡಳಿತ ಪಕ್ಷವು ಅದನ್ನು ಸರಿಪಡಿಸಲು ಅಥವಾ ಸಮರ್ಥನೆ ನೀಡಲು ಹೋಗದೆ ಪ್ರತ್ಯುತ್ತರವಾಗಿ ಮತ್ತೊಂದು ಪೋಸ್ಟರ್ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ತಾವು ಹಿಂದೆ ಬಿದ್ದಿಲ್ಲ ಎಂದು ತೋರಿಸುವ ಪ್ರಯತ್ನವಾಯಿತು

ಅದರಿಂದಾಗಿ ಹೊರಗೆ ಬಂದ ಸವಾಲು ಕೆಪಿಸಿಸಿ (ಕರ್ನಾಟಕ ಪ್ರೋವಿಜಿನಲ್ ಕರಪ್ಶನ್ ಕಂಪನಿ) ಪೋಸ್ಟರ್ ಗಳು. ಇದರಿಂದ ಒಬ್ಬರ ಮೇಲೆ ಒಬ್ಬರು ಕೆಸರು ಎರಚುವ ಕೆಲಸ ಮಾಡಿದ್ದಾರೆ. ಹೊರತು ಅದರಿಂದ ಯಾವುದೇ ಸಕಾರಾತ್ಮಕ ಬೆಳವಣಿಗೆಗೆ ದಾರಿ ಮಾಡಲಿಲ್ಲ. ಈ ಗಲಭೆ ಅಲ್ಲಿಗೆ ನಿಲ್ಲದೆ ಹೊಸ ರೂಪ ಪಡೆಯುತ್ತಾ ಸೇ ಸಿಎಂ ಮತ್ತು ಸೇ ಮೇಯರ್ ಎಂದು ವಿವಿಧ ನಗರಗಳ ಆಡಳಿತ ಪಕ್ಷದ ಮೇಯರ್ ಗಳ ಮೇಲೆ ದಾಳಿ ನಡೆಸುವ ಕೆಲಸ ಪ್ರತಿಪಕ್ಷವು ಮುಂದುವರೆಸಿದೆ.

ಇದು ಪರಸ್ಪರ ವಾಗ್ದಾಳಿಗೆ ಮತ್ತು ಕೋಲಾಹಲ ಸೃಷ್ಟಿಸುತ್ತಿದೆ. ಈ ರೀತಿಯ ಬೆಳವಣಿಗೆ ಎಷ್ಟು ಮಾತ್ರ ಉಪಯುಕ್ತ ಎನ್ನುವುದು ಪರಸ್ಪರ ಎಲ್ಲಾ ರಾಜಕೀಯ ಪಕ್ಷಗಳು ಒಮ್ಮೆ ಯೋಚಿಸುವುದು ಸರಿ ಇಲ್ಲವಾದಲ್ಲಿ ಅದು ನಗೆ ಪಾಟಲು ಆಗುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ.
ಒಂದೆಡೆ ಸಾಕಷ್ಟು ಸಾವು ನೋವುಗಳು ಮತ್ತು ವರುಣನ ಆರ್ಭಟ ಹೆಚ್ಚಾಗಿ ರಾಜ್ಯವೇ ಅಲ್ಲೋಲ ಕಲ್ಲೋಲ ಆಗಿರುವ ಸಮಯದಲ್ಲಿ ಈ ರೀತಿಯ ಪರಸ್ಪರ ವಾಗ್ದಾಳಿಗಳು ಯಾವ ರೀತಿ ಪ್ರಜ್ಞಾವಂತಿಕೆ ಯನ್ನು ಜನರಲ್ಲಿ ಮೂಡಿಸುತ್ತಿದ್ದಾರೆ ಎಂಬುದನ್ನು ತಿಳಿಯಬೇಕಾಗಿದೆ.

ಚರ್ಚಿಸಲು ಮತ್ತು ಗಮನಿಸಬೇಕಾದ ಸಾಕಷ್ಟು ಸಮಸ್ಯೆಗಳಿರುವಾಗ ಜನರಲ್ಲಿ ಮತ್ತು ರಾಜಕೀಯ ಪಕ್ಷಗಳ ವಲಯದಲ್ಲಿ ಈ ಪೋಸ್ಟರ್ ವಿವಾದವು ಯಾವುದೇ ಏಳಿಗೆ ಮಾಡುವಲ್ಲಿ ಉಪಯೋಗವಿಲ್ಲ. ಇದರ ಜತೆ ಜತೆಗೆ ನಡೆಯುತ್ತಿರುವ ಜನ ಸಂಕಲ್ಪ ಮತ್ತು ಭಾರತ್ ಜೋಡೋ ಯಾತ್ರೆಗಳು ಇದಕ್ಕೆ ಒಂದಷ್ಟು ಪುಷ್ಟಿ ನೀಡುವ ಕೆಲಸ ಮಾಡುತ್ತಿದೆ. ಚುನಾವಣೆಯ ಪ್ರಚಾರವೆಂದರೆ ಜನರು ತಮ್ಮನ್ನು ತಮ್ಮ ಪಕ್ಷವನ್ನು ಏಕೆ ಜನ ಆರಿಸಬೇಕು ಎಂಬುದು ತಿಳಿ ಹೇಳಬೇಕೆ ಹೊರತು ಅದು ತಮ್ಮ ಎದುರಾಳಿ ಪಕ್ಷಕ್ಕೆ ಧಕ್ಕೆ ಮತ್ತು ತೇಜೋವಧೆ ಮಾಡುವಂತಿರಬಾರದು, ಇದು ಕೇವಲ ನೈತಿಕತೆಯ ವಿಚಾರವಲ್ಲ ಅದು ಕಾನೂನಿನಲ್ಲಿರುವ ಒಂದು ಚೌಕಟ್ಟು.

ಪ್ರಜ್ವಲ್ ತೇಜ ಡಿ.ಎಸ್

ಪ್ರತಿಪಕ್ಷಗಳನ್ನು ಚುನಾವಣೆಯ ಸಮಯದಲ್ಲಿ ತೇಜೋವಧೆ ಮಾಡುವುದು ಅಥವಾ ಅವರ ಮನೋಭಾವನೆಗಳನ್ನು ನೋಯಿಸುವುದು ಕಾನೂನು ರೀತಿಯಲ್ಲಿ ಅಪರಾಧವಾಗುತ್ತದೆ. ಜನರಿಗೆ ಬಿಡಿಸಿ ಹೇಳಬೇಕಾಗಿರುವ ಸ್ಥಾನದಲ್ಲಿರುವ ನಾಯಕರೇ ಅಪರಾಧಿಗಳಾಗಿ ನಿಲ್ಲುವುದು ಎಷ್ಟು ಸರಿ. ಪೋಸ್ಟರ್ ಎನ್ನುವುದು ಸ್ವಯಂ ಪ್ರಚಾರಕ್ಕಾಗಿ ಮೂಡಿ ಬಂದಿರುವ ಒಂದು ಸಾಧನ ಅಷ್ಟೇ ಅದಕ್ಕೆ ಅದರದ್ದೇ ಆದ ಮಹತ್ವವನ್ನು ಹೊಂದಿದೆ. ಈ ಪೋಸ್ಟರ್ ಅಭಿಯಾನ ಚುನಾವಣೆ ಮುಗಿಯುವವರೆಗೂ ಚಲಾವಣಾಯಾಗುವ ಎಲ್ಲ ಸಾಧ್ಯತೆಗಳು ಇವೆ.

ಮೊದಲು ಕೇವಲ ಬೆಂಗಳೂರು ನಗರದಲ್ಲಿ ಶುರುವಾಗಿ ನಂತರ ಈಗ ರಾಜ್ಯದ ನಾನಾ ಭಾಗಗಳಿಗೂ ವಿಸ್ತರಿಸಿದೆ. ಹೊಸ ಹೊಸ ರೂಪದಲ್ಲಿ ಜನರಿಗೆ ದರ್ಶನ ನೀಡುತ್ತಿದೆ. ಶುರುವಾಗಿ ಸಾಕಷ್ಟು ದಿನಗಳು ಕಳೆದರು ಸಹ ಇದರ ಕಾವು ಇನ್ನು ಕಡಿಮೆಯಾಗಿಲ್ಲ, ಜತೆ ಜತೆಗೆ ಇದಕ್ಕೆ ಸಾಮಾನ್ಯರು ಕೂಡ ಸಮೂಹ ಮಾಧ್ಯಮಗಳಲ್ಲಿ ಪ್ರಚಾರ ಮಾಡುತ್ತಿರುವುದು ವಿಪರ್ಯಾಸ. ಇದು ಜನರಲ್ಲಿ ಒಂದು ರೀತಿಯ ಮನರಂಜನೆ ಮತ್ತು ವ್ಯಂಗ್ಯ ಚಿತ್ರಣ ಹಾಸ್ಯವಾಗಿ ಮೂಡಿ ಬರುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸುದ್ದಿ ಮಾಡುತ್ತಿದೆ. ಸುದ್ದಿಯಾಗಿದೆ ಅಂದರೆ ಅದು ಇಷ್ಟವಾಗಿದೆ ಎಂದು ತಿಳಿಯುವುದು ಮೂರ್ಖತನವಾಗುತ್ತದೆ. ಈ ಪೋಸ್ಟರ್ ಅಭಿಯಾನ ಮಾಡುವ ಬದಲು ಜನರಲ್ಲಿ ವಿಶ್ವಾಸ ಮೂಡಿಸುವ ಸಾಕಷ್ಟು ಅವಕಾಶಗಳು ಇರುವುದನ್ನು ಬಳಸಿಕೊಳ್ಳುವುದೇ ಉತ್ತಮ.

ಈಗ ಆಗಿರುವ ಬದಲಾವಣೆಗಳು ಸಾಮಾನ್ಯರಿಗೆ ಉಪಯುಕ್ತ ಆಗುವ ಲಕ್ಷಣಗಳಿಲ್ಲ, ಇವುಗಳನ್ನು ಮಾಡುವ ಬದಲು ಜನರಿಗೆ ಬೇಕಾದ ಅಥವಾ ಉಪಯುಕ್ತವಾದ ವಿಚಾರಗಳನ್ನು ಚರ್ಚಿಸುವ ಅವಶ್ಯಕತೆ ಪ್ರಸ್ತುತ ಹೆಚ್ಚಿದೆ. ಈ ಹಿಂದೆ ಮತ್ತು ಪ್ರಸ್ತುತ ನಡೆಯುತ್ತಿರುವಂತಹ ಯಾತ್ರೆಗಳಿಗಿಂತ ಈ ಪೋಸ್ಟರ್ ಅಭಿಯಾನ ಹೆಚ್ಚು ಸುದ್ದಿಯಾಗಿರುವುದು ವಿಪರ್ಯಾಸವೇ ಸರಿ. ಈ ರೀತಿಯ ಅಭಿಯಾನಗಳು ಜನರಲ್ಲಿ ವಿಶ್ವಾಸ ಮತ್ತು ಸಕಾರಾತ್ಮಕತೆ ಮೂಡಿಸುವ ಬದಲು ನಕಾರಾತ್ಮಕವಾದ ವಾತಾವರಣ ಸೃಷ್ಟಿಯಾಗುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾನುವಾರವೂ ಕ್ಯಾಶ್ ಕೌಟರ್ ಓಪನ್ ; ವಿದ್ಯುತ್ ಬಿಲ್ ಬಾಕಿ ಪಾವತಿಸಿ : ಬೆಸ್ಕಾಂ

Published

on

ಸುದ್ದಿದಿನಡೆಸ್ಕ್:ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕದ ಕಡಿತದಿಂದ ತೊಂದರೆಗೊಳಗಾಗದಂತೆ ನಾಳೆ ಮತ್ತು ಇದೇ 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್ ಕೌಂಟರ್‌ಗಳು ತೆರೆದಿರಲಿವೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕ ಕಡಿತದಿಂದ ತೊಂದರೆಗೆ ಒಳಗಾಗಬಾರದು ಹಾಗೂ ಆನ್‌ಲೈನ್ ಪೇಮೆಂಟ್ ಬಳಸದವರ ಅನಕೂಲಕ್ಕಾಗಿ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಿದ್ದು, ಸೆಪ್ಟೆಂಬರ್ 1ರಿಂದಲೇ ಈ ನಿಯಮ ಜಾರಿಯಾಗಿದೆ ಎಂದು ಹೇಳಿದೆ.

ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂಪಾಯಿ ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ಗೃಹ ಜ್ಯೋತಿಯೋಜನೆ ಅಡಿ ಶೂನ್ಯ ಬಿಲ್ ಪಡೆಯುತ್ತಿರುವ ಗ್ರಾಹಕರ ಹಿಂಬಾಕಿ ಶೂನ್ಯವಿದ್ದಲ್ಲಿ ಈ ಬಗ್ಗೆ ಚಿಂತಿಸಬೇಕಿಲ್ಲ ಎಂದು ಪ್ರಕಟಣೆ ಸ್ಪಷ್ಟಪಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ

Published

on

ಸುದ್ದಿದಿನಡೆಸ್ಕ್:ಹತ್ತು ವರ್ಷಗಳ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ನಿರ್ಣಯ ತೆಗೆದುಕೊಳ್ಳಲು ಸೆಪ್ಟೆಂಬರ್ 17ಕ್ಕೆ ಸಂಪುಟ ಸಭೆ ನಡೆಯಲಿದೆ.

ಜಿಲ್ಲೆಯ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಬಗ್ಗೆ ವಿಶೇಷ ಆದ್ಯತೆ ನೀಡಲು ನಿರ್ಧರಿಸಲಾಗಿದೆ. ಈ ಹಿಂದೆ 2014ರ ನವೆಂಬರ್ 28ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ

Published

on

ಸುದ್ದಿದಿನಡೆಸ್ಕ್:ಇಂದು ಗಣೇಶ ಚತುರ್ಥಿ, ದೇಶ ಸೇರಿ ನಾಡಿನದ್ಯಂತ ಹಿಂದೂ ಸಂಪ್ರದಾಯದಲ್ಲಿ ನಾಡಿನ ಜನತೆ ತಮ್ಮ ಒಳಿತಿಗಾಗಿ, ಜ್ಞಾನ ಸಮೃದ್ಧಿಗಾಗಿ ಶಿವನ ಪುತ್ರ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ ಅತ್ಯಂತ ಶ್ರದ್ದಾ ಭಕ್ತಿಯಿಂದ ಈ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ ಅದರಂತೆ ಬೆಂಗಳೂರು ಜನತೆ ಮನೆ ಮನೆಗಳಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶನ ಮೂರ್ತಿಗಳನ್ನು ಜಲ ಮೂಲಗಳಲ್ಲಿ ವಿಸರ್ಜಿಸಲು ಬೆಂಗಳೂರು ಮಹಾ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಇನ್ನೂ ಗಣೇಶ ಚತುರ್ಥಿ ವಿಶೇಷವಾಗಿ ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತ್ತೆ ಅನೇಕ ಸಚಿವರು ಹಾಗೂ ಗಣ್ಯರು ಶುಭ ಹಾರೈಸಿದ್ದಾರೆ.

ಗಣೇಶ ಹಬ್ಬದ ಆಚರಣೆಯ ಸಂದರ್ಭದಲ್ಲಿ ಮದ್ಯಪಾನಾಸಕ್ತರು ಗಲಭೆಮಾಡುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ ನಿಯಮಗಳಡಿ ಇಂದಿನಿಂದ ಉಡುಪಿ ಜಿಲ್ಲೆಯಾದ್ಯಂತ ಹಾಗೂ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಇದೇ 9 ಮತ್ತು ಸೆಪ್ಟೆಂಬರ್ 11 ರಂದು ಮಧ್ಯಾಹ್ನ 2 ರಿಂದ ಮದ್ಯರಾತ್ರಿ 12.00 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ನೈಸರ್ಗಿಕವಾಗಿ ತಯಾರಿಸಿದ ಮಣ್ಣಿನ ಗಣೇಶನ ವಿಗ್ರಹಗಳನ್ನು ಮಾತ್ರ ಬಳಸುವ ಮೂಲಕ ಕೆರೆ, ನದಿ ಮೂಲಗಳು ಕಲುಷಿತಗೊಳಿಸದಂತೆ ಕಾಪಾಡುವುದು ನಮ್ಮ ಕರ್ತವ್ಯ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending