Connect with us

ದಿನದ ಸುದ್ದಿ

ಮ.ರಾಮಮೂರ್ತಿಯವರ ಕೊಟ್ಟ ಕನ್ನಡದ ಬಾವುಟ ; ಹೋರಾಟದ ಜವಾಬ್ದಾರಿಯ ಹಸ್ತಾಂತರಕ್ಕೆ ಮೆರಗು

Published

on

  • ಸುಮನ್ ಜೆ.ಎಸ್,ಪ್ರಥಮ ವರ್ಷದ ಸ್ನಾತಕೋತ್ತರ ಪದವಿ, ವಿದ್ಯಾರ್ಥಿ,ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,ಬೆಂಗಳೂರು ವಿಶ್ವವಿದ್ಯಾಲಯ

ಕನ್ನಡ ನಾಡಿನ ಅಭಿಮಾನ ಸ್ವಾಭಿಮಾನ ಮತ್ತು ಅಸ್ಮಿತೆಯಾಗಿ ಕನ್ನಡಿಗರ ಉಸಿರಲ್ಲಿ ಬೆರೆತು ಹೋಗಿರುವ ಕೆಂಪು-ಹಳದಿ ಬಾವುಟದ ನಿರ್ಮಾತೃ ಮ.ರಾಮಮೂರ್ತಿ ಎಂದು ಈ ಹೆಸರು ಕೇಳಿದ ತಕ್ಷಣವೇ ಕನ್ನಡಿಗರ ನರನಾಡಿಗಳಲ್ಲಿ ಸಂಚಲನ ಉಂಟಾಗುತ್ತದ್ದೆ ನಮ್ಮ ತಾಯಿನಾಡು ಅನುಭವಿಸುತ್ತಿರುವ ವೇದನೆಗಳಿಗೆ ತೀವ್ರವಾಗಿ ಪ್ರತಿರೋಧಿಸುವ ಪ್ರೇರಕ ಶಕ್ತಿಯೊಂದು ಇಡಿ ದೇಹದ ತುಂಬೆಲ್ಲಾ ವಿದ್ಯುತ್ತಿನಂತೆ ಸಂಚರಿಸುತ್ತದೆ ಅಂತಹ ಒಂದು ಪ್ರಚೋದಕ ಶಕ್ತಿಯಿಂದ ಕೂಡಿರುವ ವ್ಯಕ್ತಿತ್ವವಾಗಿತ್ತು.

ರಾಮಮೂರ್ತಿ ರವರು ಮಾರ್ಚ್ 11, -1918ರಂದು ನಂಜನಗೂಡಿನ ಗಾಂಧಿವಾದಿಯಾಗಿ ವೀರ ಕೇಸರಿ ಪತ್ರಿಕೆಯ ಸಂಪಾದರಾಗಿದ್ದ ಸೀತಾರಾಮ ಶಾಸ್ತ್ರಿ ಮತ್ತು ಸುಬ್ಬಮ್ಮ ಅವರ ಪುತ್ರನಾಗಿ ಹುಟ್ಟಿದ ರವರು ಶೈಕ್ಷಣಿಕ ಜೀವನವೂ ಹುಟ್ಟೂರಲ್ಲಿ ಸೇರಿದಂತೆ ಬೆಂಗಳೂರಿನ ಗಾಂಧಿನಗರದಲ್ಲಿರುವ ಆರ್ಯ ವಿದ್ಯಾಶಾಲೆಯಲ್ಲಿ ಮುಂದೊರೆಯಿತು. ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾದ ಸುಬ್ರಮಣ್ಯ ಅಯ್ಯರ್ ಅವರಿಂದ ಮತ್ತು ಮಾಧ್ಯಮಿಕ ಶಾಲೆಯಿಂದ ಶಿಕ್ಷಕರಾದ ದೇವುಡು ಅವರಿಂದ ವಿಶೇಷ ಕಾಳಜಿಗೊಳಪಟ್ಟು ಅವರಿಂದ ಪ್ರಭಾವಿತರಾದರು.ಹುಟ್ಟಿನಿಂದ ಪ್ರತಿಭಾವಂತರಾಗಿದ್ದ ರಾಮಮೂರ್ತಿ ರವರಿಗೆ ಚಳವಳಿಗಳಿಗೆ ಧುಮುಕಲು ಮೊದಲ ಪ್ರೇರಣೆಯಾಗಿದ್ದು ಅವರ ತಂದೆಯವರಾದ ಸೀತಾರಾಮಶಾಸ್ತ್ರಿ,

ಗಾಂಧೀಜಿಯವರ ವಿಚಾರಗಳಿಂದ ಪ್ರಭಾವಿತರಾಗಿ ಚಳವಳಿಗಳತ್ತ ಮುಖ ಮಾಡಿದ ಶಾಸ್ತ್ರಿ ಅದರ ಪ್ರಚಾರಕ್ಕಾಗಿ ‘ವೀರ ಕೇಸರಿ’ ಎನ್ನುವ ಪತ್ರಿಕೆಯನ್ನು ಹೊರಡಿಸುತ್ತಿದ್ದರು. ಮುಂದೆ ರಾಮಮೂರ್ತಿ ಪತ್ರಕರ್ತರಾಗಿ ಹೊರಹೊಮ್ಮುವಲ್ಲಿ ಬಹಳ ದೊಡ್ಡ ಪಾತ್ರವಹಿಸಿದ್ದು ಇದೆ ವೀರಕೇಸರಿ ಪತ್ರಿಕೆ.

ತನ್ನ ತಂದೆಯವರು ಸ್ಥಾಪಿಸಿದ ಪತ್ರಿಕೆಯಲ್ಲಿ ಸ್ವತಃ ತಾನೂ ಕೂಡ ತಂದೆಯವರೊಂದಿಗೆ ತೊಡಗಿಸಿಕೊಂಡು ಮುಂದೆ ತಾವೇ ವೀರಕೇಸರಿ ಪತ್ರಿಕೆಯ ಸಂಪಾದಕರಾದರು. ಸ್ವತಂತ್ರ ಚಳವಳಿ ಉತ್ತುಂಗದಲ್ಲಿದ್ದ ಕಾಲದಲ್ಲಿದಲ್ಲಿ ಈ ಪತ್ರಿಕೆಯು ತನ್ನ ಓದುಗರನ್ನ ಚಳುವಳಿಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುತ್ತಿತ್ತು ಆ ಪತ್ರಿಕೆಯು ಭಾರತ ಸ್ವತಂತ್ರವಾಗಿ ಭಾಷಾವಾರು ರಾಜ್ಯಗಳು ರಚನೆಯಾದ ಮೇಲೆ ಕರ್ನಾಟಕದ ಹಲವಾರು ಮೂಲಭೂತ ಸಮಸ್ಯೆಗಳನ್ನು ನಾಡಿನ ಜನತೆಯ ಎದುರು ತೆರೆದಿಡಲು ರಾಮಮೂರ್ತಿ ರವರ ಸಂಪಾದಕತ್ವದಲ್ಲಿ ಆರಂಭಿಸಿತು.

ಅನೇಕ ಕಾರಣಾಂತರಗಳಿಂದ ವೀರಕೇಸರಿ ಪತ್ರಿಕೆಯು ನಿಂತುಕೊಂಡ ಮೇಲೆ ಮಹತ್ವಾಕಾಂಕ್ಷೆಯ ವ್ಯಕ್ತಿತ್ವಯುಳ್ಳ ರಾಮಮೂರ್ತಿ ವಿನೋದಿನಿ, ಕಥಾವಾಣಿ, ವಿನೋದವಾಣಿ ಅಂತಹ ಪತ್ರಿಕೆಗಳನ್ನು ಹುಟ್ಟುಹಾಕಿ ತನ್ನ ಸಕ್ರಿಯತೆಯನ್ನು ಕಾಯ್ದುಕೊಂಡರು. ನಾಡಿನಲ್ಲಿ ಲೈಂಗಿಕ ವಿಜ್ಞಾನದ ಪತ್ರಿಕೆಯ ಕೊರತೆಯನ್ನು ಅರಿತು ರಾಮಮೂರ್ತಿ, ‘ಕಾಮಕಲಾ’ ಎನ್ನುವ ಪತ್ರಿಕೆ ಹೊರಡಿಸಿದರು. ಇಂತಹ ಹಲವಾರು ಸಮಸ್ಯೆಗಳು ಎದುರಾದಾಗ ಪತ್ರಿಕೆಯನ್ನು ಮುಚ್ಚಿದರು ಹೀಗೆ ಒಬ್ಬ ಸೃಜನಶೀಲ ಪತ್ರಕರ್ತರಾಗಿ ಕಾರ್ಯನಿರ್ವಹಿಸಿ ಅನೇಕ ಏಳು ಬೀಳುಗಳು ನಡುವೆ ಜಗ್ಗದೆ ಹೋರಾಟ ನಡೆಸಿದರು.

ರಾಮಮೂರ್ತಿ ಪ್ರಾಥಮಿಕ ಶಾಲಾ ಹಂತದಿಂದಲೇ ಸಾಹಿತ್ಯಾಸಕ್ತರಾಗಿದ್ದರು. ಆ ಆಸಕ್ತಿಯೇ ಮುಂದೆ ಅವರಿಗೆ ಬರಹಗಾರರಾಗಿ, ಪತ್ತೆದಾರಿ ಕಾದಂಬರಿಕಾರರಾಗಿ ರೂಪಗೊಳ್ಳುವಲ್ಲಿ ಪ್ರಚೋದಿಸಿದರ ಕಾರಣದಿಂದಾಗಿ 1950-60ರ ದಶಕದಲ್ಲಿ ವಿಪ್ಲವ, ಇಬ್ಬರು ರಾಣಿಯರು, ಚಿತ್ರಲೇಖ, ರಾಜದಂಡ, ವಿಷಕನ್ಯೆ ಮರೆಯಾಗಿದ್ದ ವಜ್ರಗಳು ಇಂತಹ ಪತ್ತೆದಾರಿ ಕಾದಂಬರಿಗಳಲ್ಲದೆ ಭಾಗ್ಯದ ಮದುವೆ, ಪ್ರೇಮಮಂದಿರ, ಹಿಪ್ಪರಗಿ ಇಂತಹ ಐತಿಹಾಸಿಕ ಕಾದಂಬರಿಗಳನ್ನ ಒಳಗೊಂಡು ಸುಮಾರು 150ಕ್ಕೂ ಹೆಚ್ಚು ಕಾದಂಬರಿಗಳು ಇವರ ವಿದ್ವತ್ತಿಗೆ ಸಾಕ್ಷಿಯಾಗಿವೇ. ಕನ್ನಡದ ಓದುಗರಿಗೆ ಸುಲಭವಾಗಿ ಎಟುಕುವ ದರದಲ್ಲಿ ತನ್ನ ಪುಸ್ತಕಗಳನ್ನು ಪ್ರಕಟಿಸುತ್ತಿದ್ದ ವಿಶಾಲ ಮನಸ್ಸು ಕೂಡ ರಾಮಮೂರ್ತಿಯವದಾಗಿತ್ತು.

ಇದಕೊಂದು ನಿದರ್ಶನ ಕೊಡುವುದಾದರೆ 120-130ರ ಪುಟಗಳ ಪುಸ್ತಕ ಅವರು ಬರವಣಿಗೆ ಮಾರಾಟದ ದರವನ್ನು ನಿಗದಿ ಪಡಿಸಿದ್ದು, ಇದು ಕನ್ನಡದ ಸಾಹಿತ್ಯದ ಬೆಳವಣಿಗೆಗಾಗಿ ಅವರು ಕೈಗೊಂಡ ಕೆಲಸಗಳಲ್ಲಿ ಒಂದು ಎಂದರು ಉತ್ಪ್ರೇಕ್ಷೆ ಅಲ್ಲ.

ಬಹುರೂಪಿಯಾಗಿದ್ದ ರಾಮಮೂರ್ತಿ ಸಾಹಿತಿಯಾಗಿ, ಪತ್ತೆದಾರಿ ಕಾದಂಬರಿಕಾರರಾಗಿ, ಪ್ರಖರ ಪತ್ರಕರ್ತರಾಗಿ, ಸ್ವತಂತ್ರ ಹೋರಾಟಗಾರರಾಗಿ, ಕನ್ನಡಪರ ಹೋರಾಟಗಾರರಾಗಿ ತನ್ನ ನಿರಂತರತೆಯನ್ನ ಸಮಾಜದೊಂದಿಗೆ ಸೆಣೆಸುತ್ತಲೆ ಬಂದವರು. ಈ ನಾಡು ಇಂದು ಪ್ರತಿಯೊಂದು ಕ್ಷಣದಲ್ಲು ಮ.ರಾಮಮೂರ್ತಿ ರವರನ್ನು ಸ್ಮರಿಸಲು ಹಲವಾರು ಕಾರಣಗಳಿವೆ. ಅವರು ಬದುಕಿ ಬಾಳಿದ ಕಾಲವೂ ಸ್ವತಂತ್ರ ಚಳುವಳಿ, ಸಾಮಾಜಿಕ ಚಳುವಳಿಗಳು ಸೇರಿದಂತೆ ಹಲವಾರು ಚಳುವಳಿಗಳು ಉತ್ತುಂಗದಲ್ಲಿ ಕಾಲವದು ಭಾರತವೂ 1947ರಲ್ಲಿ ಸ್ವಾತಂತ್ರ್ಯವನ್ನು ಪಡೆದ ನಂತರ ಆಂತರಿಕವಾಗಿ ಭಾರತವೂ ಹಲವಾರು ಹೋರಾಟಗಳು ತನ್ನೊಳಗಿನ ಅಸ್ತವ್ಯಸ್ತತೆಯನ್ನು ಸರಿ ಪಡಿಸಿಕೊಳ್ಳುವತ್ತ ಸಾಗಿತ್ತು.

ಇತ್ತ ಕರ್ನಾಟಕದಲ್ಲೂ ಸಹ ಹಲವಾರು ಹೋರಾಟಗಳು ಮುನ್ನೆಲೆಗೆ ಬಂದವು, ಭಾಷಾವಾರು ರಾಜ್ಯಗಳ ರಚನೆಗಳಾದಾಗ ಕರ್ನಾಟಕವೂ ತೀವ್ರ ತರದ ಸಮಸ್ಯೆಗಳನ್ನು ಎದುರಿಸಬೇಕಾಗಿತ್ತು. ಈ ಸಮಸ್ಯೆಗಳನ್ನು ಪ್ರತಿನಿಧಿಸಲು ಬೇಕಾದ ಪ್ರತಿನಿಧಿಗಳು ಹಲವಾರಿದ್ದರು. ರಾಮಮೂರ್ತಿ ಮತ್ತವರ ಸಮಕಾಲಿನವರಾದ
ಕನ್ನಡ ಚಳವಳಿಗಳ ಹರಿಕಾರರು ಎಂದೆ ಪ್ರಸಿದ್ಧರಾಗಿರುವ ಕೊಣಂದೂರು ಲಿಂಗಪ್ಪ, ಅ.ನ.ಕೃ, ಮೈ.ಸು.ನಟರಾಜ್, ಮೈ.ಸು. ಶೇಷಗಿರಿರಾವ್, ನಾಡಿಗೇರ ಕೃಷ್ಣರಾವ್, ಕರ್ಲಮಂಗಲಂ ಶ್ರೀಕಂಠಯ್ಯ ಮೊದಲಾದವರುಗಳ ಜತೆಗೆ ಗುರುತಿಸಿಕೊಂಡವರು.

ಮ.ರಾಮಮೂರ್ತಿ ಕನ್ನಡ ಚಳವಳಿಗಳು ನಿರ್ಣಾಯಕ ಹಂತದಲ್ಲಿರುವ ಕಾಲಘಟ್ಟದಲ್ಲಿ ಹಲವಾರು ಹೋರಾಟಗಳಲ್ಲಿ ಮಹತ್ವದ ಪಾತ್ರವನ್ನು ವಹಿಸಿದರು.1956ರಲ್ಲಿ ಭಾಷಾವಾರು ರಾಜ್ಯಗಳ ರಚನೆ ಆದಾಗಾ ಕರ್ನಾಟಕವೂ ಸುತ್ತುಮುತ್ತಲಿನ ಅನ್ಯಭಾಷಿಕರಿಂದ ಹಲವು ಸಮಸ್ಯೆಗಳು ಎದುರಿಸುತ್ತಿತ್ತು. ವಿಶೇಷವಾಗಿ ಬೆಂಗಳೂರು ಅನ್ಯಭಾಷಿಕರಿಂದ ಸಮಸ್ಯೆಗಳನ್ನ ಎದುರಿಸುತ್ತಿತ್ತು. ಅಂತಹ ಕಾಲದಲ್ಲಿ ಇದರ ವಿರುದ್ಧವಾಗಿ ಕನ್ನಡ ನೆಲದ ಹಿತಾಸಕ್ತಿಯನ್ನು ಕಾಪಾಡಲು ಮುಂದಾದ ನೂರಾರು ಮಹನೀಯರಲ್ಲಿ ಮ.ರಾಮಮೂರ್ತಿ ಪ್ರಾತಃಸ್ಮರಣಿಯರು ಇಡಿ ಬದುಕೆ ಕನ್ನಡ ನಾಡಿನ ಹಿತಕ್ಕಾಗಿ ಸವೆಸಿದರು.

ಬೆಂಗಳೂರಲ್ಲಿನ ಹಲವಾರು ಬಡಾವಣೆಗಳಲ್ಲಿ ಕನ್ನಡಕ್ಕೆ ಗೌರವ ಕೊಡೊದಲ್ಲೆ ಇರಲಿ ಕನ್ನಡ ಎಂದರೆ ಎನ್ನಡ ಎನ್ನುವ ಸ್ಥಿತಿ ತಲುಪಿತ್ತು. ನಂತರ ದಿನದಲ್ಲಿ ಕನ್ನಡದ ಕುವರರಾದ ಕೋಣಂದೂರ ಲಿಂಗಪ್ಪಾ, ಬಂದಗದ್ದೆ ರಮೇಶ್ ಅನ್ನು ತರುಣ ವಿಧ್ಯಾರ್ಥಿಗಳು ‘ಕನ್ನಡ ಯುವಜನ‌ ಸಭಾ’‌ ಎನ್ನುವ ಹೆಸರಲ್ಲಿ ಕನ್ನಡ ವಿರೋಧಿ ಶಕ್ತಿಗಳಿಗೆ ಪ್ರತಿರೋಧ ಒಡ್ಡಲು ಆರಂಭಿಸಿದರು.

ಅದು ಸ್ಪೋಟಗೊಂಡಿದ್ದು, ಮತ್ತೆ ಮ.ರಾಮಮೂರ್ತಿ ಮತ್ತೆ ಅ.ನ.ಕೃ ಅವರು 04.02.1962ರಲ್ಲಿ ಆಯೋಜಿಸಿದ್ದ ‘ಬೆಂಗಳೂರು ಕನ್ನಡಿಗರ ಸಮಾವೇಶ’ ನಡೆಸಿ ಅದರ ಪ್ರಚಾರಕ್ಕಾಗಿ ಮತ್ತು ಕನ್ನಡ ಪರ ಸಂಘಟನೆಗಳಲ್ಲಿ ಹೋರಾಟದ ಶಕ್ತಿ ತುಂಬಲು ‘ಕನ್ನಡ ಯುವಜನ’ ಎನ್ನುವ ಪಾಕ್ಷಿಕ ಪತ್ರಿಕೆ ಹೊರಡಿಸಿ ಚಳವಳಿಗೆ ಹೊಸ ಆಯಾಮ ನೀಡಿದರು.

ಪುನಃ 27.05.1963ರಂದು ಚಾಮರಾಜಪೇಟೆ ರಾಮಸೇವಾ ಮಂಡಳಿಯಲ್ಲಿ ಎಂ.ಎಸ್‌. ಸುಬ್ಬಲಕ್ಷ್ಮೀ ಅವರ ಸಂಗೀತ ಕಚೇರಿ ವ್ಯವಸ್ಥೆಯಾಗಿತ್ತು, ಕನ್ನಡಕ್ಕೆ ಅವಕಾಶವೆ ಇಲ್ಲದ ಕಾರ್ಯಕ್ರಮವನ್ನು ಮ.ರಾಮಮೂರ್ತಿ ಮತ್ತು ಅ.ನ.ಕೃ ಅವರು ತೀವ್ರವಾಗಿ ಖಂಡಿಸಿ ಪ್ರತಿಭಟನೆ ಮಾಡಿದ್ದರ ಫಲವಾಗಿ ಆ ಕಚೇರಿ ರದ್ದಾಯಿತು. ಕನ್ನಡ ಅಂತ ಬಂದಾಗ ಯಾವುದಕ್ಕೂ ಸಹ ರಾಜಿಯಾಗದ ವ್ಯಕ್ತಿತ್ವ ರಾಮಮೂರ್ತಿಯವರದಾಗಿತ್ತು. ಈ ಪ್ರತಿಭಟನೆಯು ಹೊಸ ಒಂದು ಹೆಜ್ಜೆಗೆ ನಾಂದಿ ಹಾಡಿತ್ತು.

ಅದೇನೆಂದರೆ ಸುಮಾರು 60ಕ್ಕೂ ಹೆಚ್ಚು ಕನ್ನಡಪರ ಸಂಘಟನೆಗಳು ಒಳಗೊಂಡ ‘ಕರ್ನಾಟಕ ಸಂಯುಕ್ತ ರಂಗ’ದ ಉದಯವಾಯಿತು. ಅ.ನ.ಕೃರವರು ಅಧ್ಯಕ್ಷರಾದರು. ರಾಮಮೂರ್ತಿ ಕಾರ್ಯದರ್ಶಿಯಾಗಿ ಹಲವಾರು ಐತಿಹಾಸಿಕ ನಿರ್ಧಾರಗಳು, ಹೋರಾಟಗಳು ಕೈಗೊಂಡರು.

ಅಜಾನುಬಾಹು ದೇಹ ನಿರ್ಭಿತ ಹೆಜ್ಜೆಗಳಿಂದ ಕೂಡಿದ ರಾಮಮೂರ್ತಿ ವ್ಯಕ್ತಿತ್ವಕ್ಕೆ “ಕನ್ನಡದ ವೀರ ಸೇನಾನಿ” ಎನ್ನುವ ಬಿರುದು ಬರಲು ಒಂದು ರೋಚಕ ಘಟನೆಯೇ ಇದೆ. ಇದು ರಾಮಮೂರ್ತಿರವರ ಎದೆಗಾರಿಕೆಗೆ ಸಾಕ್ಷಿಯಾಗಿದೆ.

ಸುಮನ್

ಅಂದಿನ ಕಾಲದಲ್ಲಿ ಚಿತ್ರದುರ್ಗದ ಹಿರಿಯೂರಲ್ಲಿ ನಿರ್ಮಾಣವಾಗಿದ್ದ ವಾಣಿ ವಿಲಾಸ ಸಾಗರ ಕಟ್ಟುವಾಗ ಕೂಲಿ ಕಾರ್ಮಿಕರಾಗಿ ತಮಿಳರೇ ಇದ್ದರು. ಇಡೀ ಹಿರಿಯೂರು ಪಟ್ಟಣವೇ ತಮಿಳರ ಕೈವಶ ಮಾಡಿಕೊಂಡು ಪಟ್ಟಣದಲ್ಲಿ ಡಿಎಂಕೆ ಪಕ್ಷದ ಬಾವುಟವನ್ನು ಹಾರಿಸಿದ್ದರು. ಇದು ಅಲ್ಲಿನ ಕನ್ನಡಪರ ಮನಸ್ಸುಗಳಲ್ಲಿ ತಳಮಳ ಉಂಟಾದರು ಏನೂ ಮಾಡದ ಸ್ಥಿತಿಯಲ್ಲಿದ್ದಾಗ ವಿಷಯ ರಾಮಮೂರ್ತಿ ಗಮನಕ್ಕೆ ಬಂದು ಬಾವುಟವನ್ನು ತೆಗೆಯುವಂತೆ ಮೌಖಿಕವಾಗಿ ಸೂಚಿಸಿದರು.

ನಂತರ ಅದನ್ನ ಕಡೆಗಣಿಸಿದ ತಮಿಳರು ಕನ್ನಡಿಗರ ತಾಳ್ಮೆ ಮತ್ತಷ್ಟು ಪರೀಕ್ಷೆ ಮಾಡಿದರು. ಇದನ್ನ ಸಹಿಸದ ರಾಮಮೂರ್ತಿ ಹಿರಿಯೂರ ಪಟ್ಟಣದಲ್ಲಿ ಪ್ರತಿಭಟನೆ ಹಮ್ಮಿಕೊಂಡು ಆವಾಗಲೂ ಕೂಡ ತಾವಾಗಿಯೇ ಬಾವುಟ ತೆಗೆಯಿರಿ ಇಲ್ಲಾ ನಾನು ಇದನ್ನ ತೆಗೆದು ಎಸೆಯುತ್ತೆನೆ ಎಂದು ಹೇಳಿದ್ದು, ಲಘುವಾಗಿ ತಗೊಂಡ ತಮಿಳರು ಇವರ ಮಾತನ್ನು ಕಡೆಗಣಿಸಿದಾಗ ರೊಚ್ಚಿಗೆದ್ದ ರಾಮಮೂರ್ತಿ ತಾನೇ ಆ ಡಿಎಂಕೆ ಬಾವುಟ ಕಿತ್ತೆಸೆಯಲು ಮುಂದಾದಾಗ ಒಬ್ಬ ತಮಿಳು ಯುವಕ ಅವರನ್ನ ತಡೆದು ತಾನೆ ಬಾವುಟ ತೆಗೆದ ತಮಿಳರು ಕ್ನನಡಿಗರಿಗೆ ಕ್ಷಮೆ ಯಾಚಿಸಿದರು. ಈ ಒಂದು ದಿಟ್ಟ ನಡೆಯಿಂದ ಅವರಿಗೆ ವೀರ ಸೇನಾನಿ ಎಂಬ ಬಿರುದು ಅಭಿಮಾನಪೂರ್ವಕವಾಗಿ ಅರ್ಪಿಸಲಾಯಿತು.

ರಾಮಮೂರ್ತಿ ಪ್ರತಿಯೊಂದು ಹೋರಾಟವೂ ಕನ್ನಡಿಗರ ಲಾಭಕ್ಕಾಗಿ, ಉದ್ದಾರಕ್ಕಾಗಿ ನಾಡಿನ ಸಮಗ್ರ ಹಿತಕ್ಕಾಗಿಯೇ ಇತ್ತು. ಎನ್ನುವುದಕ್ಕೆ ಬಹಳಷ್ಟು ಸಾಕ್ಷಿಗಳಿವೆ. ಡಬ್ಬಿಂಗ್ ಚಿತ್ರ ವಿರೋಧಿ ಹೋರಾಟ, ಸ್ಥಳಿಯ ಕೆಲಸಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಆದ್ಯತೆ, ಕನ್ನಡ ಶಿಕ್ಷಣ ಮಾಧ್ಯಮ ಭಾಷೆ ಮಾಡಲು, ಕನ್ನಡ ಚಿತ್ರಗಳಿಗೆ ಥಿಯೇಟರ್‌ ಸಲುವಾಗಿ ಇಂತಹ ದೂರಾಲೋಚನೆಗಳು ಕನ್ನಡಿಗರ ಭವಿಷ್ಯದ ಹಿತಕ್ಕಾಗಿ ನಡೆದ ನಡೆಯಬೇಕಾದ ಹೋರಾಟಗಳಾದರೆ.

ಅನ್ಯಭಾಷಿಕರಿಂದ ಕನ್ನಡಕ್ಕಾಗುತ್ತಿರುವ ಅನ್ಯಾಯ, ಕಾರ್ಖನೆಗಳಲ್ಲಿ ದುಡಿಯುವ ಕನ್ನಡದ ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯವನ್ನು ನಿರಂತರವಾಗಿ ಪ್ರತಿಭಟಿಸಿದರು. ಇದಕ್ಕೆ ಒಳ್ಳೆಯ ನಿದರ್ಶನ ಎಂದರೆ ಮೈಕೊ ಕಾರ್ಖನೆಯ ಕಾರ್ಮಿಕರ ಪರವಾಗಿ ಹೋರಾಟ ಮಾಡಿದ್ದು ಅವರಿಗೆ ಕನ್ನಡದ ದುಡಿಯುವ ಜನರ ಮೇಲಿರುವ ಪ್ರೀತಿಯನ್ನು ತೋರಿಸುತ್ತದೆ.

ಇಂತಹ ಒಂದು ಘನ ವ್ಯಕ್ತಿತ್ವದ ರಾಮಮೂರ್ತಿ ರವರ ಕನಕಪುರ ರಸ್ತೆ ಪಕ್ಕದ ತಲೆಘಟ್ಟಪೂರದಲ್ಲಿ ಡಿಸೆಂಬರ್ 27.1962ರಲ್ಲಿ ತಮ್ಮ ಜಮೀನಿನಲ್ಲಿ ಬಾವಿಗೆ ನೀರು ಬಂದಿದೆ ಎನ್ನುವ ಖುಷಿಯಲ್ಲಿ ಕೆಲಸಗಾರರೊಂದಿಗೆ ಬಾವಿಗಿಳಿದಾಗ ಮೇಲಿಂದ ಮಣ್ಣು ಕುಸಿದು ಇಬ್ಬರು ಕೆಲಸಗಾರರೊಂದಿಗೆ ದುರಂತವಾಗಿ ಸಾವಿಗಿಡಾದರು. ಕನ್ನಡ ಬಹುದೊಡ್ಡ ಶಕ್ತಿಯೊಂದು ವಿಧಿ ಕನ್ನಡಿಗರಿಂದ ಕಿತ್ತುಕೊಂಡು ಬಿಟ್ಟಿತ್ತು.

ಕನ್ನಡವು ಸುಮ್ಮನೆ ಯಾವುದು ಕೂಡ ಉಳಿಸಿಕೊಂಡಿಲ್ಲ ಪ್ರತಿಯೊಂದರ ಹಿಂದೆ ರೋಚಕ ಇತಿಹಾಸವಿದೆ ಆ ಇತಿಹಾಸ ರೂಪಿಸುವಲ್ಲಿ ಸಾಹಿತಿಗಳು, ಕವಿಗಳು, ಹೋರಾಟಗಾರರು, ಪತ್ರಕರ್ತರು, ಗೋಪಾಲಗೌಡರಂತಹ ಕನ್ನಡ ಪ್ರೇಮಿ ರಾಜಕಾರಣಿಗಳು ಸೇರಿದಂತೆ ಪ್ರತಿಯೊಬ್ಬರು ದುಡಿದಿದ್ದಾರೆ. ಇಂತಹ ಹಲವಾರು ಮಹನೀಯರ ಕನಸಿನ ಕನ್ನಡ ನಾಡು ಅಂದು ಅವರು ಎದುರುಗೊಂಡು ಹೋರಾಡಿದ ಸಮಸ್ಯೆಗಳು ಇಂದು ಮತ್ತೆ ಅದರ ಹತ್ತರಷ್ಟಾಗಿ ಕನ್ನಡಿಗರ ಎದುರಿಗೆ ಬೃಹದಾಕಾರದಲ್ಲಿ ನಿಂತಿದೆ.

ಮ.ರಾಮಮೂರ್ತಿ ಅವರಂತಹ ಕನ್ನಡದ ಕಲಿಗಳು ಹಾಕಿಕೊಟ್ಟ ದಾರಿಯಲ್ಲೇ ಮತ್ತೆ ನಾವೂ ಸಾಗಬೇಕಾಗಿದೆ. ನಮ್ಮ ನಾಡು ನುಡಿ ನೆಲ ಜಲ ಇಂದು ಅನುಭವಿಸುತ್ತಿರುವ ನೋವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಾಗಿದೆ. ರಾಮಮೂರ್ತಿ ಅವರು ತನ್ನ ಹೋರಾಟವನ್ನ ಬಾವುಟವನ್ನು ನಿರ್ಮಿಸಿ ನಾಡಿಗೆ ಅರ್ಪಿಸುವ ಮೂಲಕ ನಾಡು ನುಡಿಗಾಗಿ ಹೋರಾಡುವ ಜವಾಬ್ದಾರಿಯನ್ನು ಕೂಡ ಕನ್ನಡಿಗರ ಹೆಗಲಿಗೆ ವಹಿಸಿದ್ದಾರೆ. “ಒಂದಲ್ಲಾ ಒಂದು ದಿನ ಈ ರಾಜ್ಯದಲ್ಲಿ ಕನ್ನಡ ಬಾವುಟ ಹಾರಿಸುತ್ತೇನೆ. ಎಲ್ಲೆಡೆ ಕನ್ನಡ ಕಾಣುವಂತೆ ಮಾಡುವವರೆಗೆ ವಿರಮಿಸಲಾರೆ” ಎನ್ನುವ ಅವರ ಕೆಚ್ಚೆದೆಯ ಘೋಷವಾಕ್ಯವೂ ನಮ್ಮ ಕನ್ನಡಿಗರ ಎದೆಬಡಿತವಾಗಬೇಕಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾನುವಾರವೂ ಕ್ಯಾಶ್ ಕೌಟರ್ ಓಪನ್ ; ವಿದ್ಯುತ್ ಬಿಲ್ ಬಾಕಿ ಪಾವತಿಸಿ : ಬೆಸ್ಕಾಂ

Published

on

ಸುದ್ದಿದಿನಡೆಸ್ಕ್:ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕದ ಕಡಿತದಿಂದ ತೊಂದರೆಗೊಳಗಾಗದಂತೆ ನಾಳೆ ಮತ್ತು ಇದೇ 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್ ಕೌಂಟರ್‌ಗಳು ತೆರೆದಿರಲಿವೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕ ಕಡಿತದಿಂದ ತೊಂದರೆಗೆ ಒಳಗಾಗಬಾರದು ಹಾಗೂ ಆನ್‌ಲೈನ್ ಪೇಮೆಂಟ್ ಬಳಸದವರ ಅನಕೂಲಕ್ಕಾಗಿ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಿದ್ದು, ಸೆಪ್ಟೆಂಬರ್ 1ರಿಂದಲೇ ಈ ನಿಯಮ ಜಾರಿಯಾಗಿದೆ ಎಂದು ಹೇಳಿದೆ.

ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂಪಾಯಿ ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ಗೃಹ ಜ್ಯೋತಿಯೋಜನೆ ಅಡಿ ಶೂನ್ಯ ಬಿಲ್ ಪಡೆಯುತ್ತಿರುವ ಗ್ರಾಹಕರ ಹಿಂಬಾಕಿ ಶೂನ್ಯವಿದ್ದಲ್ಲಿ ಈ ಬಗ್ಗೆ ಚಿಂತಿಸಬೇಕಿಲ್ಲ ಎಂದು ಪ್ರಕಟಣೆ ಸ್ಪಷ್ಟಪಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ

Published

on

ಸುದ್ದಿದಿನಡೆಸ್ಕ್:ಹತ್ತು ವರ್ಷಗಳ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ನಿರ್ಣಯ ತೆಗೆದುಕೊಳ್ಳಲು ಸೆಪ್ಟೆಂಬರ್ 17ಕ್ಕೆ ಸಂಪುಟ ಸಭೆ ನಡೆಯಲಿದೆ.

ಜಿಲ್ಲೆಯ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಬಗ್ಗೆ ವಿಶೇಷ ಆದ್ಯತೆ ನೀಡಲು ನಿರ್ಧರಿಸಲಾಗಿದೆ. ಈ ಹಿಂದೆ 2014ರ ನವೆಂಬರ್ 28ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ

Published

on

ಸುದ್ದಿದಿನಡೆಸ್ಕ್:ಇಂದು ಗಣೇಶ ಚತುರ್ಥಿ, ದೇಶ ಸೇರಿ ನಾಡಿನದ್ಯಂತ ಹಿಂದೂ ಸಂಪ್ರದಾಯದಲ್ಲಿ ನಾಡಿನ ಜನತೆ ತಮ್ಮ ಒಳಿತಿಗಾಗಿ, ಜ್ಞಾನ ಸಮೃದ್ಧಿಗಾಗಿ ಶಿವನ ಪುತ್ರ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ ಅತ್ಯಂತ ಶ್ರದ್ದಾ ಭಕ್ತಿಯಿಂದ ಈ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ ಅದರಂತೆ ಬೆಂಗಳೂರು ಜನತೆ ಮನೆ ಮನೆಗಳಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶನ ಮೂರ್ತಿಗಳನ್ನು ಜಲ ಮೂಲಗಳಲ್ಲಿ ವಿಸರ್ಜಿಸಲು ಬೆಂಗಳೂರು ಮಹಾ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಇನ್ನೂ ಗಣೇಶ ಚತುರ್ಥಿ ವಿಶೇಷವಾಗಿ ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತ್ತೆ ಅನೇಕ ಸಚಿವರು ಹಾಗೂ ಗಣ್ಯರು ಶುಭ ಹಾರೈಸಿದ್ದಾರೆ.

ಗಣೇಶ ಹಬ್ಬದ ಆಚರಣೆಯ ಸಂದರ್ಭದಲ್ಲಿ ಮದ್ಯಪಾನಾಸಕ್ತರು ಗಲಭೆಮಾಡುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ ನಿಯಮಗಳಡಿ ಇಂದಿನಿಂದ ಉಡುಪಿ ಜಿಲ್ಲೆಯಾದ್ಯಂತ ಹಾಗೂ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಇದೇ 9 ಮತ್ತು ಸೆಪ್ಟೆಂಬರ್ 11 ರಂದು ಮಧ್ಯಾಹ್ನ 2 ರಿಂದ ಮದ್ಯರಾತ್ರಿ 12.00 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ನೈಸರ್ಗಿಕವಾಗಿ ತಯಾರಿಸಿದ ಮಣ್ಣಿನ ಗಣೇಶನ ವಿಗ್ರಹಗಳನ್ನು ಮಾತ್ರ ಬಳಸುವ ಮೂಲಕ ಕೆರೆ, ನದಿ ಮೂಲಗಳು ಕಲುಷಿತಗೊಳಿಸದಂತೆ ಕಾಪಾಡುವುದು ನಮ್ಮ ಕರ್ತವ್ಯ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending