Connect with us

ದಿನದ ಸುದ್ದಿ

ವಾರಾಣಸಿಯಲ್ಲಿ ಕಾಶಿ-ತಮಿಳು ಸಂಗಮ; ಇಂದಿನಿಂದ ಆರಂಭ

Published

on

ಸುದ್ದಿದಿನ ಡೆಸ್ಕ್ : ವಾರಾಣಸಿಯಲ್ಲಿ (Varanasi) ಒಂದು ತಿಂಗಳ ಕಾಲ ನಡೆಯಲಿರುವ ಕಾಶಿ-ತಮಿಳು ಸಂಗಮ ( Kashi – Tamil Sangam ) ಇಂದಿನಿಂದ ಆರಂಭವಾಗಿದೆ.

ತಮಿಳುನಾಡಿನ ಪ್ರತಿನಿಧಿಗಳ ಮೊದಲ ತಂಡ ನಾಳೆ ತಡರಾತ್ರಿ ವಾರಾಣಸಿ ತಲುಪಲಿದೆ. “ಆಜಾದಿ ಕಾ ಅಮೃತ್ ಮಹೋತ್ಸವ” ದ ಭಾಗವಾಗಿ ಮತ್ತು “ಏಕ್ ಭಾರತ್ ಶ್ರೇಷ್ಠ ಭಾರತ” ದ ಸ್ಪೂರ್ತಿಯನ್ನು ಎತ್ತಿ ಹಿಡಿಯಲು ಈ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರ ಆಯೋಜಿಸುತ್ತಿದೆ.

ಖ್ಯಾತ ಶಿಕ್ಷಣತಜ್ಞ ಮತ್ತು ಭಾರತೀಯ ಶಿಕ್ಷಣ ಸಚಿವಾಲಯದ ಭಾರತೀಯ ಭಾಷೆಗಳ ಪ್ರಚಾರದ ಉನ್ನತಾಧಿಕಾರ ಸಮಿತಿಯ ಅಧ್ಯಕ್ಷ ಪ್ರೊ.ಚಾಮು ಕೃಷ್ಣಶಾಸ್ತ್ರಿ, ಈ ಸಂಗಮ ಕಾರ್ಯಕ್ರಮ ಭಾಷೆಯ ಮಟ್ಟದಲ್ಲಿ ಎರಡು ವಿಭಿನ್ನ ಪ್ರದೇಶಗಳ ಜನರನ್ನು ಒಟ್ಟುಗೂಡಿಸುತ್ತದೆ ಎಂದು ಆಕಾಶವಾಣಿಗೆ ತಿಳಿಸಿದ್ದಾರೆ.

ತಮಿಳುನಾಡಿನಿಂದ ಬರುವ ಪ್ರತಿನಿಧಿಗಳು ಕಾಶಿ ವಿಶ್ವನಾಥ ದೇವಸ್ಥಾನ, ಅಯೋಧ್ಯೆ ದೇವಸ್ಥಾನ, ಪ್ರಯಾಗ್ ರಾಜ್ ಮತ್ತು ವಾರಾಣಸಿಯ ಪ್ರಸಿದ್ಧ ಗಂಗಾ ಆರತಿಯನ್ನು ವೀಕ್ಷಿಸಲಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ಪ್ರಧಾನಿ ನರೇಂದ್ರಮೋದಿ ಅವರು ಶನಿವಾರ ಕಾರ್ಯಕ್ರಮವನ್ನು ಔಪಚಾರಿಕವಾಗಿ ಉದ್ಘಾಟಿಸಲಿದ್ದಾರೆ.
ಕಾಶಿ ತಮಿಳು ಸಂಗಮಂ, ಎರಡು ಪ್ರದೇಶಗಳ ವಿದ್ವಾಂಸರು, ವಿದ್ಯಾರ್ಥಿಗಳು, ತತ್ವಜ್ಞಾನಿಗಳು, ವ್ಯಾಪಾರಿಗಳು, ಕುಶಲಕರ್ಮಿಗಳು, ಕಲಾವಿದರು ಮತ್ತು ಜೀವನದ ಇತರ ಕ್ಷೇತ್ರಗಳ ಜನರು ಒಟ್ಟಿಗೆ ಸೇರಲು, ಅವರ ಜ್ಞಾನ, ಸಂಸ್ಕೃತಿ ಮತ್ತು ಉತ್ತಮ ಅಭ್ಯಾಸಗಳನ್ನು ಹಂಚಿಕೊಳ್ಳಲು ಮತ್ತು ಪರಸ್ಪರರ ಅನುಭವದಿಂದ ಕಲಿಯಲು ಅವಕಾಶವನ್ನು ಒದಗಿಸುವ ಗುರಿ ಹೊಂದಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಚೀಟಿ ವ್ಯವಹಾರದಲ್ಲಿ ಮೋಸ ; ಅತಿಆಸೆಗೆ ಬಲಿಯಾದ ಗಣಿನಾಡಿನ ಜನ

Published

on

  • ಗಿರೀಶ್ ಕುಮಾರ್ ಗೌಡ, ಬಳ್ಳಾರಿ

ಸುದ್ದಿದಿನ,ಬಳ್ಳಾರಿ:ನಗರದ ಗೋಲ್ಡ್ ಸ್ಮಿತ್ ರಸ್ತೆಯ ಕುಂಬಾರ ಓಣಿ ಬಳಿಯ ವಾಸವಿ ಸ್ವಗೃಹ ಹೋಮ್ ನೀಡ್ ಎಂಬ ಅಂಗಡಿ ತೆರೆದು ಅಲ್ಲಿಗೆ ಬಂದ ಗ್ರಾಹಕರಿಂದ ಚೀಟಿ ರೂಪದಲ್ಲಿ ಹಣ ಪಡೆದು ತಿಂಗಳಿಗೆ ಶೇ.25 ರಷ್ಟು ಲಾಭ ನೀಡುವುದಾಗಿ ವಂಚಿಸುತ್ತಿದ್ದ ವಿಶ್ವನಾಥ ಎಂಬ ವ್ಯಕ್ತಿಯನ್ನು ಬ್ರೂಸ್ ಪೇಟೆ ಪೊಲೀಸರು ಬಂಧಿಸಿದ್ದರು.

ಚೀಟಿ ವ್ಯವಹಾರ ಮಾಡಿ‌ ಮೋಸ

ಗ್ರಾಹಕರಿಗೆ ತಾವು ಕೊಡುವ ಹಣಕ್ಕೆ ಲಾಭಾಂಶವನ್ನು ಕೊಡುವುದಾಗಿ ನಂಬಿಸಿ ಗ್ರಾಹಕರಿಂದ ಹಣವನ್ನು ಪಡೆದು ಯಾವುದೇ ಲಾಭಾಂಶವನ್ನು ಕೊಡದೇ ಚೀಟಿ ವ್ಯವಹಾರ ಮಾಡಿ ಮೋಸ ಮಾಡುತ್ತಿದ್ದರು ಎಂದು ವಾಸವಿ ಸ್ವಗೃಹ ಹೋಮ್ ನೀಡ್ ಅಂಗಡಿಯ ಮಾಲಿಕ ಟಿ.ವಿಶ್ವನಾಥ(58)ರ ಮೇಲೆ ದೂರು ಬಂದ ಹಿನ್ನೆಲೆಯಲ್ಲಿ ಈತನನ್ನು ಪೊಲೀಸರು ಬಂಧಿಸಿ 19,38,500 ರೂ. ಮತ್ತು ಗ್ರಾಹಕರು ಆಪಾದಿತನಿಗೆ ಹಣ ಕಟ್ಟುತ್ತಿದ್ದ ಬಗ್ಗೆ ಇದ್ದ ಚೀಟಿಗಳು ಹಾಗು ವ್ಯವಹಾರಕ್ಕೆ ಬಳಸುತ್ತಿದ್ದ ಸಲಕರಣೆ ವಶಪಡಿಸಿಕೊಂಡಿದ್ದರು.

ಗ್ಯಾನಪ್ಪ ನೀಟಿದ ದೂರಿನಿಂದ ಪೊಲೀಸರು ಎಂಟ್ರಿ

ಸಹಕಾರ ಸಂಘಗಳ ಸಹಾಯಕ ನಿಬಂಧಕ ಗ್ಯಾನಪ್ಪ ನೀಡಿದ ದೂರಿನನ್ವಯ ಕಳೆದ ಆರು ತಿಂಗಳಿಂದಲೂ ಸರ್ಕಾರದಿಂದ ಅಥವಾ ಮಂಜೂರು ಮಾಡುವ ಯಾವುದೇ ಪ್ರಾಧಿಕಾರದಿಂದ ಪೂರ್ವ ಮಂಜುರಾತಿ ಪಡೆಯದೇ ಗ್ರಾಹಕರಿಗೆ ಮೋಸ ಮಾಡುವ ದುರುದ್ದೇಶದಿಂದ, ಗ್ರಾಹಕರಿಂದ ಅನಧಿಕೃತವಾಗಿ ಚೀಟಿಯ ರೂಪದಲ್ಲಿ ನಗದು ಹಣವನ್ನು ಕಟ್ಟಿಸಿಕೊಂಡು ಹಣಕ್ಕೆ 25% ಹಣವನ್ನು ಬೋನಸ್ ರೂಪದಲ್ಲಿ ಕೊಡುವುದಾಗಿ ನಂಬಿಸಿ ಗ್ರಾಹಕರಿಗೆ ಯಾವುದೇ ಲಾಭಾಂಶವನ್ನು ಕೊಡದೇ ಚೀಟಿ ವ್ಯವಹಾರ ಮಾಡುತ್ತಿದ್ದ ವಿಶ್ವನಾಥ ವಿರುದ್ಧ ಆರೋಪ ಕೇಳಿಬಂತು.ಆಗ ಪೊಲೀಸರು ಎಂಟ್ರಿ ಆಗಿದ್ದಾರೆ‌.ಗಣಿನಾಡು ಬಳ್ಖಾರಿ ನಗರದಲ ಇಂತ ವ್ಯವಹಾರಗಳು ಬಹಳ ನಡೆಯುತ್ತೇವೆ ನಿಧಾನಗತಿಯಲ್ಲಿ ಮೋಸ ಹೋದ ಮೇಲೆ ಬೆಳಕಿಗೆ ಬರುತ್ತವೆ.

ಮೋಸಕ್ಕೆ ಬಲಿಯಾಗುವ ಜನರು

ಗಣಿನಾಡು ಬಳ್ಳಾರಿ ನಗರದಲ್ಲಿ ಜನರು ಆಸೆ,ಅತಿಆಸೆಯಿಂದ ಬೇಗ ಹಣವನ್ನು ಸಂಪಾದನೆ ಮಾಡಬಹುದು ಎಂದು ಈ ಮಾರ್ಗಗಳನ್ನು ಅನುಸರಿಸ ಮೋಸ ಹೋಗುತ್ತಾರೆ. ಟಿ.ವಿಶ್ವನಾಥ ಗ್ರಾಹಕರೊಂದಿಗೆ ನಿಶ್ಚಿತ ಅವದಿಗೆ ನಿಯತಕಾಲಿಕ ಕಂತುಗಳ ರೂಪದಲ್ಲಿ ಹಣದ ನಿಶ್ಚಿತ ಹಣವನ್ನು ಕೊಡಲು ಒಪ್ಪಿ ಚೀಟಿ ಒಪ್ಪಂದ ಮಾಡಿಕೊಂಡು ಗ್ರಾಹಕರಿಗೆ ಯಾವುದೇ ಲಾಭಾಂಶವನ್ನು ಕೊಡದೇ ಚೀಟಿ ವ್ಯವಹಾರ ಮಾಡಿ ಮೋಸ ಮಾಡುತ್ತಿರುವುದು ಕಂಡು ಬಂದಿದ್ದರಿಂದ ಆತನನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿತ್ತು.ಆದರೆ ಸಾರ್ವಜನಿಕರಿಂದ ನೊಂದವರಿಂದ ದೂರ ಬಾರದ ಹಿನ್ನೆಲೆಯಲ್ಲಿ ಆತನಿಗೆ ವಿಚಾರಣೆ ಮಾಡಿ ಠಾಣಾ ಬೇಲ್ ನೀಡಿ ನೋಟಿಸ್ ಕೊಟ್ಟು ಕಳುಹಿಸಲಾಗಿತ್ತು.

ಪೊಲೀಸರ ಪಾತ್ರ ಏನು ?

ಈ‌ ಹಿಂದೆ ಗಣಿನಾಡು ಬಳ್ಳಾರ ನಗರದ ವಿವಿಧ ಠಾಣೆಗೆ ಸಂಬಂಧಿಸಿದಂತೆ ಹಣಕಾಸಿನ ವಿಚಾರವಾಗಿ ಮೋಸ ಮಾಡಿದ ಘಟನೆಗಳು ನಡೆದಿದೆ. ಆದರೆ ಮೋಸ ಮಾಡಿದ ವ್ಯಕ್ತಿಗಳಿಂದ ಮೋಸಕ್ಕೆ ಒಳಗಾದ ಜನರಿಗೆ ಹಣವನ್ನು ಕೊಡಿಸಿಲ್ಲ ಎನ್ನುವ ಆರೋಪ ಸಹ ಇದೆ. ಇಲ್ಲಿ ಪೊಲೀಸ್ ಇಲಾಖೆಯ ಪಾತ್ರ ಏನು ? ಎನ್ನುವ ಅಂಶ ಸಾರ್ವಜನಿಕರಲ್ಲಿ ಚರ್ಚೆ ಆಗುತ್ತಿದೆ.
ಬಳಿಕ ವಿಶ್ವನಾಥ ಗ್ರಾಹಕರಿಗೆ ಮೊನ್ನೆ ನಿಮ್ಮ ಹಣ ವಾಪಾಸ್ ಕೊಡುವೆ ಅಂಗಡಿ ಬಳಿ ಬನ್ನಿ ಎಂದಿದ್ದರು. ಆದರೆ ನಿನ್ನೆ ವಿಶ್ವನಾಥ ಅಂಗಡಿ ಬಳಿ ತೆರಳಿದ ನೂರಾರು ಗ್ರಾಹಕರಿಗೆ ಬಿಗ್ ಶಾಕ್ ಕಾದಿತ್ತು. ವಿಶ್ವನಾಥ ಎಸ್ಕೇಪ್ ಆಗಿದ್ದ ಇದನ್ನ ಕಂಡ ಗ್ರಾಹಕರು ಕಣ್ಣೀರಾಕಿ ಬ್ರೂಸ್ ಪೇಟೆ ಪೋಲಿಸ್ ಠಾಣೆ ಬಳಿ ಜಮಾಯಿಸಿದ್ದಾರೆ. ಪೋಲಿಸ ಮುಂದೆ ತಾವು ಕಟ್ಟಿದ ಹಣದ ಬಗ್ಗೆ ವಿವರಿಸಿ ಠಾಣೆಯಲ್ಲಿ ಒಬ್ಬರಾಗಿ ಬರೆಸುತ್ತ ನಿಂತಿದ್ದಾರೆ.

ಶಾಸಕ ಭರತ್ ರೆಡ್ಡಿ ಭರವಸೆ

ಎಲ್ಲರೂ ಕಟ್ಟಿದ ಹಣ ಎರಡು ಕೋಟಿ ದಾಟುವ ಸಂಭವವಿದೆ ಎನ್ನಲಾಗುತ್ತಿದೆ. ನೊಂದ ಜನ ಠಾಣೆಯಿಂದ ನಿನ್ನೆ ಮದ್ಯಾಹ್ನ ಶಾಸಕ ನಾರಾ ಭರತ್ ರೆಡ್ಡಿ ಕಛೇರಿಗೆ ತೆರಳಿ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಜನರು ಕಣ್ಣೀರು ನೋಡದ ಶಾಸಕರು ನಾನೇ ಠಾಣೆಗೆ ಬರುವೆ ಎಂದು ಹೇಳಿ ಮಂಗಳವಾರ ಸಂಜೆ ಶಾಸಕ ನಾರಾ ಭರತ್ ರೆಡ್ಡಿ ಬ್ರೂಸ್ ಪೇಟೆ ಠಾಣೆಗೆ ಭೇಟಿ ನೀಡಿ ನ್ಯಾಯ ಕೊಡಿಸಿ ಆರೋಪಿಯನ್ನು ಕೊಡಲೇ ಬಂಧಿಸಿ ಎಂದು ಇನ್ಸ್ ಪೆಕ್ಟರ್ ಮಹಾಂತೇಶ್ ಗೆ ಸೂಚಿಸಿ ಜನರಿಗೆ ಸಾಂತ್ವನ ಹೇಳಿ ನ್ಯಾಯ ಕೊಡಿಸುವ ಭರವಸೆ ನೀಡಿದ್ದಾರೆ.

ಜನರು ಬುದ್ಧಿವಂತರಾಗಿ

ಮನೆಯಲ್ಲಿ ಹಣ ಇದೆ ಎಂದು ಆಸೆ,ಅತಿಆಸೆಗೆ ಒಳಗಾಗದೇ ಗೊತ್ತಿಲ್ಲದ ಇರುವ ವ್ಯಕ್ತಿಗಳಿಗೆ ಕೊಟ್ಟಿ ಮೋಸ ಹೋಗಬಾರದು ಎನ್ನುವುದು ನಮ್ಮ ಆಸೆಯವಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚನ್ನಗಿರಿ | ‘ಕುವೆಂಪು ಓದು : ಕಮ್ಮಟ’ ; ಚರ್ಚೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು

Published

on

ಸುದ್ದಿದಿನ.ಚನ್ನಗಿರಿ: ಕನ್ನಡ ಸಂಸ್ಕೃತಿ ಇಲಾಖೆ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಹಾಗೂ ಶ್ರೀ ಶಿವಲಿಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಂಯಕ್ತ ಆಶ್ರಯದಲ್ಲಿ ಬುಧವಾರ ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಕಮ್ಮಟದ ಉದ್ಘಾಟನೆಯನ್ನು ಪ್ರಾಂಶುಪಾಲ ಅಮೃತೇಶ್ವರ ಬಿ.ಜಿ, ಮಾಡಿದರು. ಸಂಚಾಲಕಿ ಭಾರತೀದೇವಿ ಹಾಗೂ ಸಾಹಿತಿ ಡಾ.ಎಚ್.ಟಿ.ಕೃಷ್ಣಮೂರ್ತಿ ಕಮ್ಮಟವನ್ನು ನಡೆಸಿಕೊಟ್ಟರು. 50 ವಿದ್ಯಾರ್ಥಿಗಳು ಕಮ್ಮಟದಲ್ಲಿ ಭಾಗವಹಿಸಿ ಚರ್ಚೆನಡೆಸಿದರು.

ಪ್ರಾಂಶುಪಾಲರಾದ ಡಾ.ಬಿ‌.ಜಿ. ಅಮೃತೇಶ್ವರ ಅವರು ಕಮ್ಮಟ ದ ಅಧ್ಯಕ್ಷತೆವಹಿಸಿದ್ದರು. ಐ.ಕ್ಯು.ಎ.ಸಿ‌ ಸಂಚಾಲಕರಾದ ವಿಜಯ್ ಕುಮಾರ್ ಎನ್.ಸಿ, ಇಂಗ್ಲಿಶ್ ವಿಭಾಗದ ಮುಖ್ಯಸ್ಥ ರಾದ ಜಯಪ್ಪ.ಸಿ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ರವಿ, ಸಹಾಯಕ ಪ್ರಾಧ್ಯಾಪಕ ಷಣ್ಮುಖಪ್ಪ ಕೆ.ಎಚ್. ಹಾಗೂ ಕಾಲೇಜಿನ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಡಾ.ಶಕೀಲ್ ಅಹಮ್ಮದ್ ನಿರೂಪಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿಯುಸಿ : ಸೈನ್ಸ್ ಅಕಾಡೆಮಿ ಪದವಿಪೂರ್ವ ಕಾಲೇಜಿಗೆ ಶೇ.93.52 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ: 2024-25 ನೇ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಸೈನ್ಸ್ ಅಕಾಡೆಮಿ ಪದವಿ ಪೂರ್ವ ಕಾಲೇಜು, ದಾವಣಗೆರೆಯ ವಿದ್ಯಾರ್ಥಿಗಳು ಅತ್ಯತ್ತಮವಾದ ಫಲಿತಾಂಶ ಪಡೆದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.

ಕು.ಸುಷ್ಮಿತಾ ಕೆ.ಎಂ. ಒಟ್ಟಾರೆ 600 ಅಂಕಗಳಿಗೆ 574 ಅಂಕಗಳನ್ನು ಗಳಿಸಿ, 95.7% ಫಲಿತಾಂಶ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ಕು. ಆದ್ಯ ಎನ್. ಎಂ (569/600) 94.8%, ಫಲಿತಾಂಶದೊAದಿಗೆ ದ್ವಿತೀಯ ಸ್ಥಾನವನ್ನೂ, ಕು. ಮಧುಮಿತಾ ಎಂ. (568/600) 94.7% ತೃತೀಯ ಸ್ಥಾನವನ್ನೂ ಕು.ಡಿ.ಇ. ಸಂಜನಾ (567/600) 94.5%, ಹಾಗೂ ಕು.ಎಸ್.ಎ ರಾಹುಲ್ (566/600) 94.3% ಫಲಿತಾಂಶ ಪಡೆದು ಕ್ರಮವಾಗಿ ಕಾಲೇಜಿಗೆ ನಾಲ್ಕು ಹಾಗೂ ಐದನೇ ಸ್ಥಾನಗಳನ್ನು ಪಡೆದುಕೊಂಡಿರುತ್ತಾರೆ.

ಒಟ್ಟು ಕನ್ನಡ ಭಾಷಾ ವಿಷಯದಲ್ಲಿ 3 ವಿದ್ಯಾರ್ಥಿಗಳು, ಗಣಿತದಲ್ಲಿ 2 ವಿದ್ಯಾರ್ಥಿಗಳು, ಜೀವಶಾಸ್ತçದಲ್ಲಿ 1 ವಿದ್ಯಾರ್ಥಿ 100/100 ಅಂಕಗಳನ್ನು ಗಳಿಸಿರುತ್ತಾರೆ. ಒಟ್ಟಾರೆ 47 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ಹಾಗೂ ವಿದ್ಯಾರ್ಥಿಗಳು 149 ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

ಒಟ್ಟಾರೆ ಕಾಲೇಜಿಗೆ 93.52 % ಫಲಿತಾಂಶ ಬಂದಿದ್ದು, ಈ ಎಲ್ಲಾ ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿವರ್ಗದವರು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending