ದಿನದ ಸುದ್ದಿ
ನವಿಲೇಹಾಳಿನಲ್ಲಿ 67ನೇ ಕನ್ನಡ ರಾಜ್ಯೋತ್ಸವ ; ಪುನೀತ್ ರಾಜ್ ಕುಮಾರ್ ಪುಣ್ಯಸ್ಮರಣೆ
ಸುದ್ದಿದಿನ,ದಾವಣಗೆರೆ: ಚನ್ನಗಿರಿ ತಾಲ್ಲೂಕು ಕರ್ನಾಟಕ ರಕ್ಷಣಾ ವೇದಿಕೆ,ಗ್ರಾಮ ಘಟಕ ನವಿಲೇಹಾಳಿನಲ್ಲಿ 67 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಾಗೂ ಕರ್ನಾಟಕ ರತ್ನ ಡಾ.ಪುನೀತ್ ರಾಜಕುಮಾರ್ ಅವರ ಮೊದಲ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮ ಶನಿವಾರ ನಡೆಯಿತು.
ಕನ್ನಡ ದ್ವಜಾರೋಹಣವನ್ನು ಮಂಗಳೂರು ಘಟಕದ ಆರಕ್ಷಕ ಉಪ ನಿರೀಕ್ಷಕರಾದ ಶ್ರೀಯುತ ಪ್ರದೀಪ್ ರವರು ನಾಡಗೀತೆ ಯೊಂದಿಗೆ ನೆರವೇರಿಸಿದರು.
ಬೃಹತ್ ಗಾತ್ರದ ನಾಡ ಬಾವುಟದ ಮೆರವಣಿಗೆಗೆ ನವಿಲೇಹಾಳು ಪದ್ಮಶ್ರೀ ಪ್ರೌಢ ಶಾಲೆಗೆ ಭೂ ಧಾನ ಮಾಡಿದ ಶ್ರೀಯುತ ಎನ್.ವಿ. ಮಂಜುನಾಥರವರು ಚಾಲನೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸದರಿ ಗ್ರಾಮದ
ಕ.ರ.ವೇ ಗೌರವಾಧ್ಯಕ್ಷರಾದ ಶ್ರೀ ಜಿ.ಮಹೇಶ್ವರಪ್ಪ ವಹಿಸಿದ್ದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಉದಯ ಟಿವಿ ಹರಟೆ ಖ್ಯಾತಿಯ ಹಾಸ್ಯ ಭಾಷಣ
ಕಾರರಾದ ಕಲಬುರುಗಿಯ ಶ್ರೀಮತಿ ಇಂದುಮತಿ ಸಾಲಿಮಠ್ ರವರು ನೆರವೇರಿಸಿ, ತಮ್ಮ ಹಾಸ್ಯ ಭಾಷಣದಿಂದ ಮತ್ತು ಹಾಸ್ಯ ಹಾಡುಗಳಿಂದ ನೆರೆದಿದ್ದ ಗ್ರಾಮಸ್ಥರ ಜನಸ್ತೋಮವನ್ನು ನಗೆ ಕಡಲಿನಲ್ಲಿ ತೇಲಿಸಿದರು. ವರ ನಟ ಡಾ. ರಾಜಕುಮಾರ್ ರವರ ಸುಪುತ್ರ ಕರ್ನಾಟಕ ರತ್ನ,ಚಂದನ ವನದ ಧ್ರುವತಾರೆ ಪುನೀತ್ ರಾಜಕುಮಾರ್ ರವರ ಸಾಮಾಜಿಕ ಸೇವೆಯನ್ನು ತಾವೆಲ್ಲರೂ ಅನುಸರಿಸಬೇಕು, ಅಪ್ಪುತಮ್ಮ ಕಣ್ಣಿನ ಧಾನದಿಂದ ಇಂದು ನಾಲ್ಕು ಜನರ ಜೀವನಕ್ಕೆ ಬೆಳಕಾಗಿದೆ ಎಂದರು.
ಇಂದು ನೀವೆಲ್ಲರೂ ಈ ಕಾರ್ಯಕ್ರಮದಲ್ಲಿ ಅಪ್ಪು ಮೊದಲ ವರ್ಷದ ಪುಣ್ಯ ಸ್ಮರಣೆ ಹಮ್ಮಿಕೊಂಡಿರುವುದು ಅತೀವ ಸಂತೋಷ ತಂದಿದೆ,ನಾನು ಕೂಡ ನನ್ನ ದೇಹವನ್ನು ಈಗಾಗಲೇ ತನ್ನ ಮರಣದ ನಂತರ ಧಾನ ಮಾಡಲಿಕ್ಕೆ ನೊಂದಣಿ ಮಾಡಿಕೊಂಡಿರುವ ಸತ್ಯ ಸಂಗತಿಯನ್ನು ತಿಳಿಸಿ,ಇಂದು ನವಿಲೇಹಾಳು ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಊರಿನ ಹಿರಿಯರು- ಕಿರಿಯರು,ಗ್ರಾಮಸ್ಥರು,ಶಾಲಾ ಮಕ್ಕಳು,ಕನ್ನಡ ಮನಗಳು,ಕ.ರ.ವೇ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ತಾಯಿ ಭುವನೇಶ್ವರಿ ಕೃಪೆಗೆ ಪಾತ್ರರಾಗಿರುವುದ್ದಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿದರು.
ಮದ್ಯಪಾನ ಒಳ್ಳೆಯ ಅಭ್ಯಾಸ ಅಲ್ಲ,ಯಾರು ಸಹ ಕುಡಿಯಬೇಡಿ ಎಂಬ ಉತ್ತಮ ಸಂದೇಶವನ್ನು ತಿಳಿಸಿದರು.ಎಲ್ಲರೂ ಸಹ ಕನ್ನಡ ಕಲಿಯಿರಿ,ಕಲಿಸಿರಿ,
ಕನ್ನಡವನ್ನು ಉಳಿಸಿರಿ, ಕನ್ನಡ ನಾಡು-ನುಡಿ ಸೇವೆಗೆ ತಮ್ಮ ಸಮಯ ಮೀಸಲಿಡಿ ಎಂಬುದಾಗಿ ತಿಳಿಸಿದರು.
ಕಾರ್ಯಕ್ರಮದ ಕೇಂದ್ರ ಬಿಂದುಗಳಾದ ನವಿಲೇಹಾಳಿನ ಶಾಲಾ ಮಕ್ಕಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಒಂದಕ್ಕಿಂತ ಒಂದು ಆಕರ್ಷಣೆಯಾಗಿ,ಎಲ್ಲಾರ ಪ್ರಶಂಸೆಯೊಂದಿಗೆ ಮೆಚ್ಚುಗೆ ಗಳಿಸಿದವು.ಮುಖ್ಯ ಅಥಿತಿಗಳಾಗಿ ಆಗಮನಿಸಿದ್ದ ಚಾಮರಾಜನಗರದ ಸಾಹಿತಿಗಳಾದ ಶ್ರೀ ಕೆ.ಶ್ರೀಧರ್(ಕೆ. ಸಿರಿ)ನವಿಲೇಹಾಳುನ ಸಾಹಿತಿಗಳಾದ ಡಾ.ಶ್ರೀ ಷಕೀಬ್ ಕಣದ್ಮನೆ ರವರು ರಚಿಸಿರುವ ನಮ್ಮೂರು ನವಿಲೂರು ಎಂಬ ಕವನ ವಾಚನ ದೊಂದಿಗೆ ತಮ್ಮ ಮಾತನ್ನು ಪ್ರಾರಂಭಿಸಿ, ಇತಿಹಾಸದ ಪುಟಗಳ ಸಂಗ್ರಹದೊಂದಿಗೆ ನವಿಲೂರು ನವಿಲೇಹಾಳು ಆದ ಸಂಗತಿಯನ್ನು ಬಿಚ್ಚಿಟ್ಟರು.ಹಾಗೂ ನವಿಲೇಹಾಳು ಗ್ರಾಮದಲ್ಲಿನ ಹಿಂದೂ-ಮುಸ್ಲಿಂ ಜನತೆಯ ಬಾಂಧವ್ಯವನ್ನು ಕೊಂಡಾಡಿದರು.
ಆರಕ್ಷಕ ಉಪ ನಿರೀಕ್ಷಕರಾದ ಶ್ರೀ ಪ್ರದೀಪ್ ರವರು ಮಾತನಾಡಿ ತಮ್ಮ ವ್ಯಾಪ್ತಿಗೆ ಬಂದತಹ ಎರಡು ಸೂಕ್ಷ್ಮ ಅಪರಾಧ ತನಿಖೆಗಳನ್ನು ಕೆಲವೇ ದಿನಗಳಲ್ಲಿ ಗುರುತಿಸಿದ್ದಕ್ಕಾಗಿ ಕರ್ನಾಟಕ ಸರ್ಕಾರ ತಮ್ಮ ಸೇವೆ ಗುರುತಿಸಿ,ಮುಖ್ಯ ಮಂತ್ರಿ ಪದಕ ನೀಡಿದ ಸಂಗತಿಯನ್ನು ತಿಳಿಸಿದರು.
ನಮ್ಮೂರು ಎಲ್ಲಾ ಗ್ರಾಮಸ್ಥರ ಪ್ರೋತ್ಸಾಹದೊಂದಿಗೆ ಶೈಕ್ಷಣಿಕವಾಗಿ, ಆರ್ಥಿಕವಾಗಿ,ಸಾಮಾಜಿಕವಾಗಿ ಉನ್ನತ ಅಭಿವೃದ್ಧಿಯೊಂದಿಗೆ ಸ್ವಚ್ಛ ಗ್ರಾಮವಾಗಿ ಹೊರಹೊಮ್ಮಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಹಾಲಕ್ಕಿ ನುಡಿತೈತೆ ಕೃತಿ ಬಿಡುಗಡೆ
67 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸ್ಥಳೀಯ ನವಿಲೇಹಾಳು ಪ್ರತಿಭೆ ಭದ್ರಾವತಿಯ ನವಚೇತನ ಕನ್ನಡ ಶಾಲೆಯ ಶಿಕ್ಷಕರಾದ ಸಿ.ಎಚ್.ನಾಗೇಂದ್ರಪ್ಪ ರವರ ಚೊಚ್ಚಲ ಕೃತಿಯಾದ ಹಾಲಕ್ಕಿ ನುಡಿತೈತೆ ಕವನ ಸಂಕಲನವನ್ನು
ನಿವೃತ್ತ ಮುಖ್ಯ ಶಿಕ್ಷಕರಾದ ಶ್ರೀ ಜಿ.ಮಹೇಶ್ವರಪ್ಪ ರವರು ಮರು ಬಿಡುಗಡೆ ಗೊಳಿಸಿದರು.
ಸನ್ಮಾನ ಕಾರ್ಯಕ್ರಮ
ನವಿಲೇಹಾಳಿನ ಪದ್ಮಶ್ರೀ ಪ್ರೌಢ ಶಾಲೆಗೆ ಭೂ ಧಾನ ಮಾಡಿದ ನಿವಾಸಿಗಳಾದ ಶ್ರೀಯುತ ಎನ್.ವಿ.ಮಂಜುನಾಥ್ ಮತ್ತು ಹಿರಿಯರಾದ ಶ್ರೀಯುತ ದೊಡ್ಡ ಹನುಮಪ್ಪ ರವರನ್ನು, ಮಂಗಳೂರು ವಿಭಾಗದ ಆರಕ್ಷಕ ಉಪ ನಿರೀಕ್ಷಕರಾದ ಶ್ರೀ ಪ್ರದೀಪ್ ರವರನ್ನು,ಶ್ರೀಮತಿ ಇಂದುಮತಿ ಸಾಲಿಮಠ ರವರನ್ನು,ಶ್ರೀ ಕೆ.ಶ್ರೀಧರ್ ರವರನ್ನು,ನೇತಾಜಿ ಪ್ರೌಢಶಾಲೆ,
ಬಲ್ಲಮಾವಟಿ ಗ್ರಾಮ,ಕೊಡುಗು ಜಿಲ್ಲೆಯ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ನವಿಲೇಹಾಳು ಗ್ರಾಮದ ಶ್ರೀ ಎನ್.ಕೆ. ಮಹಬೂಬ್ ಸಾಬ್ ರವರನ್ನು, ಸ್ಥಳೀಯ ಪ್ರತಿಭೆಗಳಾದ ರಾಜ್ಯಮಟ್ಟದ ಬಸವ ಪ್ರಶಸ್ತಿ ಪುರಸ್ಕೃತರು,ಶಿಕ್ಷಕ,ಯುವ ಸಾಹಿತಿಗಳಾದ ಶ್ರೀ ಡಿ.ಸನಾವುಲ್ಲಾ ರವರನ್ನು,ಸುದ್ದಿದಿನ ಕನ್ನಡ ದಿನಪತ್ರಿಕೆಯ ಸಂಪಾದಕರು, ಸಾಹಿತಿಗಳಾದ ಶ್ರೀ ಗೋವರ್ಧನ್ ರವರನ್ನು,ರಾಜ್ಯಮಟ್ಟದ ಉದ್ಯೋನ್ಮುಖ ಕಾವ್ಯ ಚೇತನ ಪ್ರಶಸ್ತಿ ವಿಜೇತರಾದ ಯುವ ಕವಿ ಶ್ರೀ ವಿಜಯ್ ಕುಮಾರ್ ರವರನ್ನು,ಕರ್ನಾಟಕ ಶಿಲ್ಪಾಕಲಾ ಅಕಾಡಮಿ ಪ್ರಶಸ್ತಿ ವಿಜೇತರಾದ ಶ್ರೀ ಸದ್ದಾಂ ಹುಸೇನ್ ಸನ್ಮಾನಿಸಲಾಯಿತು.
ನವಿಲೇಹಾಳು ಕ.ರ.ವೇ ಘಟಕದ ಗೌರವಾಧ್ಯಕ್ಷರಾದ ಶ್ರೀ ಜಿ. ಮಹೇಶ್ವರರವನ್ನು,ಈ ದಿನದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆಗೊಂಡ ಹಾಲಕ್ಕಿ ನುಡಿತೈತೆ ಕೃತಿಯ ಲೇಖಕರಾದ,ಸಾಹಿತಿ ಶಿಕ್ಷಕರಾದ ಶ್ರೀ ಸಿ.ಎಚ್.ನಾಗೇಂದ್ರಪ್ಪ ರವರನ್ನು,
ನವಿಲೇಹಾಳು ಘಟಕದ ಕ.ರ.ವೇ ಅಧ್ಯಕ್ಷರಾದ ಶ್ರೀ ಎಸ್.ಶೇಕ್ ಹುಸೇನ್ ರವರನ್ನು,ನವಿಲೇಹಾಳು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಶ್ರೀಮತಿ ಬಿ.ಹೆಚ್.ಶಬ್ ನಮ್ ರವರನ್ನು,ಉಪಾಧ್ಯಕ್ಷರಾದ ಶ್ರೀ ಹನುಮಂತಪ್ಪ ರವರನ್ನು,ಸದಸ್ಯರಾದ ಶ್ರೀ ಎಸ್. ಎನ್.ದೇವಣ್ಣ ರವರನ್ನು,ಪದ್ಮಶ್ರೀ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಶಿವಪ್ಪ ರವರನ್ನು ಇದೇ ಸಂದರ್ಭದಲ್ಲಿ ಕ.ರ.ವೇ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಗೌರವಿಸಿ ಸನ್ಮಾನಿಸಿದರು.
ಕಾರ್ಯಕ್ರಮದ ನಿರೂಪಣೆಯನ್ನು ಶ್ರೀ ಕೃಷ್ಣಪ್ಪ, ಸ್ವಾಗತವನ್ನು ಶಿಕ್ಷಕರಾದ ಶ್ರೀ ಇಸ್ಮಾಯಿಲ್ ರವರು, ವಂದನಾರ್ಪಣೆಯನ್ನು ಶ್ರೀ ಎನ್. ಎಸ್.ಜಗದೀಶ್ ರವರು ನಡೆಸಿಕೊಟ್ಟರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ5 days agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ4 days agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ


