Connect with us

ದಿನದ ಸುದ್ದಿ

ಟ್ರ್ಯೂಕಾಲರ್‌ನಲ್ಲಿ ಸರ್ಕಾರಿ ಸೇವೆಗಳು

Published

on


ಡಿಜಿಟಲ್‌ ಸರ್ಕಾರಿ, ಡೈರೆಕರಿಯು ಡಿಜಿಟಲ್ ಸಂವಹನದಲ್ಲಿ ವಿಶ್ವಾಸವನ್ನು ಮೂಡಿಸುತ್ತದೆ ಮತ್ತು ಎಲ್ಲ ರಾಜ್ಯಗಳಲ್ಲೂ ಪರಿಶೀಲಿಸಿದ ಸಂಪರ್ಕಗಳ ಮೂಲಕ ಸಾರ್ವಜನಿಕ ಪ್ರತಿನಿಧಿಗಳು ಮತ್ತು ಪ್ರಾಧಿಕಾರಗಳನ್ನು ಸಂಪರ್ಕಿಸಲು ನಾಗರಿಕರಿಗೆ ಅನುವು ಮಾಡಿಕೊಡುತ್ತದೆ.


ಸುದ್ದಿದಿನ,ನವದೆಹಲಿ: ಭಾರತ ಸರ್ಕಾರ ಮತ್ತು ನಾಗರಿಕರ ಮಧ್ಯೆ ಸರಾಗ ಸಂವಹನಕ್ಕೆ ಬೆಂಬಲ ನೀಡುವುದಕ್ಕಾಗಿ ಆ್ಯಪ್ ಒಳಗೆ ಡಿಜಿಟಲ್ ಸರ್ಕಾರಿ ಡೈರೆಕ್ಟರಿಯನ್ನು ಟ್ರ್ಯೂಕಾಲರ್ ಬಿಡುಗಡೆ ಮಾಡಿದೆ. ಇದರಿಂದಾಗಿ ಸಾವಿರಾರು ಸರ್ಕಾರಿ ಅಧಿಕಾರಗಳನ್ನು ಅವರ ಪರಿಶೀಲಿಸಿದ ಸಂಪರ್ಕ ಸಂಖ್ಯೆಗಳನ್ನು ಬಳಸಿಕೊಂಡು ಸಂಪರ್ಕಿಸಲು ಅನುವಾಗಲಿದೆ. ಯಾವುದೇ ಸ್ಪ್ಯಾಮ್‌ಗಳು, ಮೋಸ ಮತ್ತು ಸ್ಪ್ಯಾಮ್‌ನಿಂದ ಬಳಕೆದಾರರನ್ನು ರಕ್ಷಿಸುವ ಮೂಲಕ ನಾಗರಿಕ ಸೇವೆಗಳಲ್ಲಿ ನಾಗರಿಕರಲ್ಲಿ ವಿಶ್ವಾಸ ಮೂಡಿಸಲು ಇದು ಅತ್ಯಂತ ಮಹತ್ವದ ಹೆಜ್ಜೆಯಾಗಿದೆ.

ಡಿಜಿಟಲ್ ಸರ್ಕಾರಿ ಡೈರೆಕ್ಟರಿಯು ಸಹಾಯವಾಣಿಗಳು, ಕಾನೂನು ಜಾರಿ ಏಜೆನ್ಸಿಗಳು, ರಾಜತಾಂತ್ರಿಕ ಕಚೇರಿಗಳು, ಶೈಕ್ಷಣಿಕ ಸಂಸ್ಥೆಗಳು, ಆಸ್ಪತ್ರೆಗಳು ಮತ್ತು ಇತರ ಪ್ರಮುಖ ಇಲಾಖೆಗಳನ್ನು ಸಂಪರ್ಕಿಸುವ ಅವಕಾಶವನ್ನು ನೀಡುತ್ತದೆ. ಇದು 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರತದೇಶಗಳಲ್ಲಿರುವ ಟ್ರ್ಯೂಕಾಲರ್ ಆಪ್ ಬಳಕೆದಾರರಿಗೆ ಲಭ್ಯವಿದೆ.

ಈ ಮಾಹಿತಿಯನ್ನು ಸರ್ಕಾರದಿಂದ ಮತ್ತು ಸರ್ಕಾರಿ ಅಧಿಕಾರಿ ಮೂಲಗಳಿಂದ ನೇರವಾಗಿ ಪಡೆಯಲಾಗಿರುತ್ತದೆ. ಸರ್ಕಾರಿ ಅಧಿಕಾರಿಗಳಿಗೆ ಸಾರ್ವಜನಿಕ ಸೌಲಭ್ಯವನ್ನು ಸರಾಗಗೊಳಿಸುವುದು ಮತ್ತು ನಾಗರಿಕರಿಗೆ ಸಹಾಯ ಮಾಡುವ ಉದ್ದೇಶವನ್ನು ಈ ಉಪಕ್ರಮ ಒಳಗೊಂಡಿದ್ದು, ಕಿರಿಕಿರಿ ಇಲ್ಲದೇ ಸರ್ಕಾರದೊಂದಿಗೆ 240 ಮಿಲಿಯನ್ ಟ್ರ್ಯೂ ಕಾಲ‌ರ್ ಭಾರತೀಯ ಬಳಕೆದಾರರಿಗೆ ನೆರವು ನೀಡುವುದು ಉದ್ದೇಶವಾಗಿದೆ.

ಅಂತರ್ಜಾಲ ಬಳಕೆದಾರರು ಮತ್ತು ಸೂಕ್ತ ಪಾಲುದಾರರ ಜೊತೆಗೆ ನಡೆಸಿದ ಸಂವಹನವನ್ನು ಆಧರಿಸಿ, ಫೋನ್ ವಿಷಯದಲ್ಲಿ ಅತ್ಯಂತ ಸಾಮಾನ್ಯವಾಗಿ ನಡೆಯುವ ಮೋಸ ಎಂದರೆ, ಸರ್ಕಾರಿ ಅಧಿಕಾರಿ ಎಂದು ಸುಳ್ಳುಗುರುತು ನೀಡುವುದಾಗಿದೆ. ಟ್ರ್ಯೂಕಾಲರ್ ಬಳಕೆದಾರರು ಮೋಸ ಹೋಗದಂತೆ ತಡೆಯಬೇಕು ಎಂಬುದು ಮತ್ತು ಸಂವಹನದಲ್ಲಿ ವಿಶ್ವಾಸವನ್ನು ಮೂಡಿಸಬೇಕು ಎಂಬ ಧೈಯಕ್ಕೆ ಪರಿಶೀಲನೆಗೆ ಒಳಪಟ್ಟಿ ಸರ್ಕಾರಿ ಸಂಪರ್ಕ ಡೈರೆಕ್ಟರಿ ನಿರ್ಮಾಣ ಪೂರಕವಾಗಿದೆ.

ಬಳಕೆದಾರರಿಗೆ ಈ ಸಂಖ್ಯೆ ಪರಿಶೀಲನೆಗೆ ಒಳಪಟ್ಟಿದ ಎಂಬುದನ್ನು ಸೂಚಿಸಲು ಹಸಿರು ಹಿನ್ನೆಲೆ ಮತ್ತು ನೀಲಿ ಗುರುತು ಕಾಣಿಸುತ್ತದೆ, ಈ ಡೈರೆಕ್ಟರಿಯನ್ನು ವಿಸ್ತರಿಸಲು ವಿವಿಧ ಸರ್ಕಾರಿ ಇಲಾಖೆಗಳ ಜೊತೆಗೆ ಹಿನ್ನೆಲೆಯಲ್ಲಿ ಕೆಲಸ ಮಾಡುತ್ತಿದೆ ಮತ್ತು ಮುಂದಿನ ಹಂತದಲ್ಲಿ ಬಳಕೆದಾರರ ಪ್ರತಿಕ್ರಿಯೆಯನ್ನು ಆಧರಿಸಿ ಜಿಲ್ಲೆ ಮತ್ತು ಪುರಸಭೆಯ ಮಟ್ಟದಲ್ಲೂ ಸಂಪರ್ಕ ಸಂಖ್ಯೆಗಳನ್ನು ಸೇರಿಸುವ ಪ್ರಯತ್ನ ನಡೆಸುತ್ತದೆ. ಮಾಹಿತಿ ಹಂಚಿಕೊಳ್ಳಲು ಮತ್ತು ಡೈರೆಕ್ಟರಿಯಲ್ಲಿ ಪರಿಶೀಲನೆಗೆ ಒಳಪಡಲು ಸರಳ ಪ್ರಕ್ರಿಯೆಯನ್ನೂ ಟೂಕಾಲರ್ ರಚಿಸಿಕೊಂಡಿದೆ.

ಈ ವೈಶಿಷ್ಟ್ಯದ ಬಗ್ಗೆ ಮಾತನಾಡಿದ ಟ್ರ್ಯೂಕಾಲರ್ ಸಾರ್ವಜನಿಕ ವ್ಯವಹಾರಗಳ ನಿರ್ದೇಶಕ ಪ್ರಜ್ಞಾ ಮಿಶ್ರಾ “ಟ್ರ್ಯೂಕಾಲರ್ ಕೇವಲ ಕಾಲ‌ ಐಡೆಂಟಿಫಿಕೇಶನ್ ಆ್ಯಪ್ ಆಗಿ ಉಳಿದಿಲ್ಲ. ಇಂದು ಇದು ನಗರ ಮತ್ತು ಆರೆ ನಗರ/ಗ್ರಾಮೀಣ ಪ್ರದೇಶಗಳ ಮಧ್ಯೆ ಇರುವ ಡಿಜಿಟಲ್ ಕೊರತೆಯನ್ನು ನೀಗಿಸುವ ಸಾಧನವಾಗಿದೆ. ಅಲ್ಲದೆ, ಡಿಜಿಟಲ್ ಸಂವಹನದಲ್ಲಿ ವಿಶ್ವಾಸವನ್ನು ಮೂಡಿಸುತ್ತಿದೆ. ಸರ್ಕಾರಿ ಅಧಿಕಾರಿಗಳು ಎಂದು ಹೇಳಿಕೊಂಡು ಜನರನ್ನು ಮೋಸ ಮಾಡುವುದನ್ನು ತಡೆಯುವುದು ನಮ್ಮ ಉದ್ದೇಶವಾಗಿದೆ.

ಈ ವೈಶಿಷ್ಟ್ಯವನ್ನು ಬಳಸಿಕೊಂಡು ಅಗತ್ಯವಿದ್ದಾಗ ಸರಿಯಾದ ಅಧಿಕಾರಿಗಳನ್ನು ನಾಗರಿಕರು ಸುಲಭವಾಗಿ ಸಂಪರ್ಕಿಸಬಹುದು. ಇದೇ ಮೊದಲ ಬಾರಿಗೆ ಸರ್ಕಾರದ ಅಧಿಕಾರಿಗಳ ಮತ್ತು ಇಲಾಖೆಗಳ ಡಿಜಿಟಲ್ ಡೈರೆಕ್ಟರಿ ಆಗಿದ್ದು, ಬಳಕೆದಾರರ ಪ್ರತಿಕ್ರಿಯೆಯನ್ನು ಆಧರಿಸಿ ಇದನ್ನು ಸುಧಾರಿಸಲಾಗುತ್ತದೆ. ನಮ್ಮ ಸಂವಹನವನ್ನು ಸುರಕ್ಷಿತವಾಗಿಡುವ ನಮ್ಮ ಪ್ರಯತ್ನವನ್ನು ನಾವು ಮುಂದುವರಿಸುತ್ತೇವೆ.’

‘ಟ್ರ್ಯೂಕಾಲರ್’ ಬಗ್ಗೆ

ಜನರ ಮಧ್ಯೆ ಸುರಕ್ಷಿತ ಮತ್ತು ಸೂಕ್ತ ಸಂವಾದಗಳನ್ನು ನಡೆಸಲು ನಾವು ಅವಕಾಶ ಮಾಡಿಕೊಡುತ್ತಿದ್ದೇವೆ ಮತ್ತು ಗ್ರಾಹಕರ ಜೊತೆಗೆ ಉದ್ಯಮಗಳು ಸಂವಹನ ನಡೆಸುವುದನ್ನು ಹೆಚ್ಚು ದಕ್ಷವಾಗಿಸುತ್ತೇವೆ. ಮೋಸದ ಮತ್ತು ಅನಗತ್ಯದ ಸಂವಹನವು ಡಿಜಿಟಲ್ ಆರ್ಥಿಕತೆಗಳು ಮತ್ತು ಬೆಳೆಯುತ್ತಿರುವ ಮಾರುಕಟ್ಟೆಗಳಿಗೆ ಸಾಂಕ್ರಾಮಿಕ ರೋಗದಂತೆ, ಸಂವಹನದಲ್ಲಿ ವಿಶ್ವಾಸವನ್ನು ಮೂಡಿಸುವ ಧೈಯವನ್ನು ನಾವು ಹೊಂದಿದ್ದೇವೆ.

ಟ್ರ್ಯೂಕಾಲ‌ರ್ ಪ್ರತಿದಿನದ ಸಂವಹನಕ್ಕೆ ಅನುವು ಮಾಡುವ ಸಾಧನವಾಗಿದ್ದು, 330 ಮಿಲಿಯನ್‌ ಗೂ ಹೆಚ್ಚು ಸಕ್ರಿಯ ಬಳಕೆದಾರರನ್ನು ಹೊಂದಿದೆ, ಇದು ಬಿಡುಗಡೆಯಾದಾಗಿನಿಮದಲೂ ಬಿಲಿಯನ್‌ಗೂ ಹೆಚ್ಚು ಡೌನ್‌ ಲೋಡ್‌ಗಳಾಗಿವೆ ಮತ್ತು 2021 ರಲ್ಲೇ 38 ಜಿಲಿಯನ್ ಅನಗತ್ಯ ಕರೆಗಳನ್ನು ಗುರುತಿಸಿ ತಡೆಹಿಡಿಯಲಾಗಿದೆ.

2009 ರಿಂದಲೂ ಸ್ಟಾಕ್‌ ಹೋಮ್‌ನಲ್ಲಿ ಕೇಂದ್ರ ಕಚೇರಿ ಹೊಂದಿರುವ ನಾವು ಸಹಸಂಸ್ಥಾಪಕರ ನೇತೃತ್ವದ ಉದ್ಯಮಶೀಲ ಕಂಪನಿಯಾಗಿದ್ದು, ಅತ್ಯಂತ ಅನುಭವಿ ಆಡಳಿತ ಮಂಡಳಿಯನ್ನು ಹೊಂದಿದೆ. 2021 ಆಕ್ಟೋಬರ್ 8 ರಿಂದಲೂ ನಾಸ್‌ಡಾಕ ಸ್ಟಾಕ್‌ ಹೋಮ್‌ನಲ್ಲಿ ಟ್ರ್ಯೂಕಾಲರ್ ಲಿಸ್ಟ್ ಆಗಿದೆ. ಇನ್ನಷ್ಟು ಮಾಹಿತಿಗೆ ದಯವಿಟ್ಟು ಈ ವೆಬ್‌ಸೈಟ್‌ಗೆ ಭೇಟಿ ಕೊಡಿ www.truecaller.com.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರ ಪುರಷ್ಕೃತ ಕೃಷಿಯೋನ್ನತಿ ಯೋಜನೆಯಡಿ ‘’ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು’’ (National Mission on Edible Oil – Oilseeds (NMEO-OS) ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ.

ಎಣ್ಣೆಕಾಳು ಬೆಳೆಗಾರರು ಮತ್ತು ಮೌಲ್ಯ ಸರಪಳಿ ಪಾಲುದಾರರನ್ನು (Value Chain Partners) ಸಂಸ್ಕರಣಾದಾರರೊಂದಿಗೆ ಸಂಪರ್ಕಿಸಲು ಮತ್ತು ಅವರಿಗೆ ಮಾರುಕಟ್ಟೆ ಕಲ್ಪಿಸುವುದರೊಂದಿಗೆ ಉತ್ತಮ ಲಾಭವನ್ನು ಪಡೆಯುವಂತೆ ಖಾತ್ರಿಪಡಿಸುವುದು ಯೋಜನೆಯ ಗುರಿಗಳಲ್ಲಿ ಒಂದಾಗಿದೆ.

ಸದರಿ ಯೋಜನೆಯಡಿ ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು ಹಾಗೂ ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲವಾಗುವಂತೆ ಪ್ರೇರೇಪಿಸಲು ಸೂಕ್ತವಾಗುವಂತೆ ಹಾಗೂ ಮೌಲ್ಯ ಸರಪಳಿಯನ್ನು ಉತ್ತೇಜಿಸಲು, ಸಂಸ್ಕರಣಾ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳನ್ನು ಪಡೆಯಲು/ಪ್ರಾಥಮಿಕ ಮತ್ತು ದ್ವಿತೀಯ ಎಣ್ಣೆಕಾಳು ಕೊಯ್ಲೋತ್ತರ ಮೂಲ ಸೌಕರ್ಯ ಸೌಲಭ್ಯ ಪಡೆಯಲು ಗರಿಷ್ಠ ಯೋಜನಾ ವರದಿಯ ಶೇ.33 ರಷ್ಟು ಅಥವಾ ರೂ.9.99 ಲಕ್ಷಕ್ಕೆ ಮೀರದಂತೆ ಅನುದಾನವನ್ನು ನೀಡಲಾಗುವುದು. ಸದರಿ ಯೋಜನೆಯ ಘಟಕದಡಿ ಕಟ್ಟಡ ವೆಚ್ಚ ಮತ್ತು ಭೂಮಿ ಬಾಡಿಗೆಯನ್ನು ಪರಿಗಣಿಸಲಾಗುವುದಿಲ್ಲ.

ಸದರಿ ಯೋಜನೆಯಡಿ ಸೌಲಭ್ಯ ಪಡೆಯಲು ಸರ್ಕಾರ / ಸರ್ಕಾರೇತರ ಸಂಸ್ಥೆಗಳು, FPOs ಗಳು ಜುಲೈ 04 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಯೋಜನೆಯ ಮಾರ್ಗಸೂಚಿಯನ್ವಯ ಜಿಲ್ಲಾ ಕಾರ್ಯಕಾರಿ ಸಮಿತಿಯಲ್ಲಿ ಫಲಾನುಭವಿ ಆಯ್ಕೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಉಪ ಕೃಷಿ ನಿರ್ದೇಶಕರ ಕಛೇರಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending