ದಿನದ ಸುದ್ದಿ
ಇರುಳ ತಾರೆಗಳಂತೆ ಬೆಳಕೊಂದು ಮಿನುಗುವುದು..!
- ಪ್ರೀತಿ.ಟಿ.ಎಸ್, ದಾವಣಗೆರೆ
ಬೇಂದ್ರೆಯವರು “ಇರುಳ ತಾರೆಗಳಂತೆ ಬೆಳಕೊಂದು ಮಿನುಗುವುದು, ಕಳೆದ ದುಃಖಗಳಲ್ಲಿ ನೆನೆದಂತೆಯೆ” ಎಂದು ತಮ್ಮ ಸಖೀ ಗೀತದಲ್ಲಿ ಹಾಡುತ್ತಾರೆ. ಆದರೆ ಈ ಹೊಸ ವರ್ಷದಲ್ಲಿ ಕಹಿದಿನಗಳ ನೆನಪೇ ಬೇಡ, ಸಿಹಿ ಕಹಿ ಕನಸುಗಳನ್ನು ಕಂಡಂತಹ ಎಳೆತನದ, ಕೆಳೆತನದ ದಿನಗಳ ನೆನಪೇ ಸ್ಥಿರವಾಗಿರಲಿ; ಕಾಲನ ಹೊಡೆತಕ್ಕೆ ಆ ಕನಸುಗಳ ನೆನಪು ಮರೆಯಾಗದಿರಲಿ.
ಹೊಸ ವರ್ಷದಲ್ಲಿ ಇದೆಂತ ಬರಿತ್ತಿದ್ದಾರೆ ಅಂತೀರ! ನಿಮಗಿಂದು ಬರೀ ಹೊಸ ವರುಷ. ಆದರೆ ನನಗೋ ನನ್ನ ಜೀವನ ಪಾವನವಾಗಿಸುವ ದಿನ. ಯಾಕೇ ಗೊತ್ತಾ? ನನ್ನ ಸಾಹಿತ್ಯ ಕ್ಷೇತ್ರಕ್ಕೆ ಅನುಕರಿಣಿಸಿ, ಸಮಾಜ ಕ್ಷೇತ್ರದಲ್ಲಿ ನನ್ನನ್ನ ತೊಡಗುವಂತೆ ಮಾಡಿ, ಕಿಂಚಿತಾದರೂ ನನ್ನಲ್ಲಿ ದಯೆ, ಕರುಣೆ, ವಿಶ್ವಾಸ, ಪ್ರೀತಿ ಹೀಗೆ ಅನೇಕ ಭಾವಗಳನ್ನ ಚಿಕ್ಕಂದಿನಿಂದ ತಿದ್ದಿ ತೀಡಿದ ನನ್ನ ತಂದೆ ತಾಯಿಯ ಜನುಮ ದಿನ.
ಹೊಸ ವರುಷಕ್ಕಿಂತ ಇವರೀರ್ವರ ಜನುಮವೇ ಅದೇನೋ ಸಂಭ್ರಮ. ಅದೇನೋ ಸಡಗರ. ಹಳೆಯ ನೆನಪಿನ ಬುತ್ತಿಯನ್ನು ಮುಚ್ಚಿಟ್ಟು ಹೊಸ ಜೀವನದ ಪಯಣಕ್ಕೆ ಅದೇನೋ ಕಾತುರದಿಂದ ಗಡಿಬಿಡಿಯಾಗುವಾಗ ಅಪ್ಪಾಜಿ ಬಂದು ಹಾದಿಯಲ್ಲಿ ಕಲ್ಲು- ಮುಳ್ಳುಗಳಿರಬಹುದು ಎಚ್ಚರ! ಆದರೆ ಅದನ್ನು ಎದುರಿಸಿ ಮುನ್ನಡೆದಾಗಲೇ ಸುಖ ಸಾಗರ ಎಂಬ ಅವರ ಆಶಯದ ನುಡಿ ಮಾತುಗಳು ಬಹುಶಃ ಇಂದು ನನ್ನನ್ನು ಇಲ್ಲಿಯವರೆಗೂ ತಂದು ನಿಲ್ಲಿಸಿದೆ.
ಮಾಮೂಲೀ ವಾಟ್ಸ್ಆ್ಯಪ್, ಫೇಸ್ಬುಕ್, ಇನ್ಸ್ಟಾಗ್ರಾಮ್ ನಲ್ಲಿ ತಂದೆ-ತಾಯಿಯ ಪೋಸ್ಟ್ ಹಾಕಿ ವಿಶ್ ಮಾಡಿದ್ರೆ ಮುಗಿತಿತ್ತು. ಆದರೆ ಈ ಭಾರಿ, ನನಗಾಗುತ್ತಿರುವುದು ವಿಚಿತ್ರ ಅನುಭವ. ಸಾವಿರ ನೋವು, ದುಃಖ-ದುಮ್ಮಾನಗಳು ಎದೆಯಲ್ಲಿದ್ರು ನಮ್ಮ ಮುಂದೆ ತೋರಿಸದೆ ಮನಸ್ಸಲ್ಲೇ ಇಟ್ಟು ಕೊರಗುತ್ತ ಒಳ್ಳೆಯ ವಿದ್ಯಾಭ್ಯಾಸ ನೀಡಿ, ಸಂಸ್ಕೃತಿ, ನಾಡು-ನುಡಿ, ಸಂಸ್ಕಾರವನ್ನು ಭಿತ್ತುತ್ತ ಬಂದಿದ್ದಾರೆ. ಸುಖದಲ್ಲೆ ಬೆಳೆದ ನಮಗೆ ಕಹಿ ಜೀವನದ ಅನುಭವ ಕಡಿಮೆಯೇ!
ಅಪ್ಪಜಿ-ಅಮ್ಮನ ಆಸೆಯಂತೆ ಮಾಸ್ಟರ್ ಆಫ್ ಜರ್ನಲಿಸಂ ಅಲ್ಲಿ ಎರಡು ಬಂಗಾರದ ಪದಕ ಗೆದ್ದು ಅವರಿಗೆ ನೀಡಿ ಆಸೆ ತೀರಿಸಿದ ನಂತರವಷ್ಟೇ ತಿಳಿದ್ದದ್ದು. ಜೀವನದ ಆಳವೆಷ್ಟು ಎಂದು? ಅಪ್ಪಾಜಿ ಅಮ್ಮನನ್ನು ಬಿಟ್ಟು ಕೆಲಸ ಹುಡುಕುತ್ತ ಬೆಂಗಳೂರಿಗೆ ಬಂದಾಗ ನಿಜವಾದ ರೋಧನೆ, ನೋವು, ಒಂಟಿತನ, ಕಷ್ಟ, ಉಪವಾಸ, ಅನ್ನದ ಬೆಲೆ ಹೀಗೆ ಬದುಕಿನ ಅಷ್ಟು ಪಾಠಗಳು ತಿಳಿಯುತ್ತ ಹೋದದ್ದು. ಎಂತಹ ಒದ್ದಾಟದಲ್ಲೂ ನನ್ನ ತಂದೆ-ತಾಯಿಗೆ ತಿಳಿಸದೆ ನಗ್ತ ನಗ್ತ ಮಾತಾಡಿದ್ರು ಕ್ಷಣಮಾತ್ರದಲ್ಲಿ ಅಪ್ಪಜಿ ಮಾತ್ರ ನನ್ನ ನಗುವಿನ ಹಿಂದಿನ ದುಃಖನ ಗುರುತಿಸಿ, ಮತ್ತಷ್ಟು ಬಲ ತುಂಬುತ್ತ ಬಂದವರು.
ಜನವರಿ 1 ಬಂತೆಂದರೆ ಅಪ್ಪಾಜಿ ಅಮ್ಮನ ಹುಟ್ಟು ಹಬ್ಬ. ಈ ಭಾರಿ ನಾನು ನಿಮಗೆನೂ ಮಾಡಿದೇನು? ಕಡೆಪಕ್ಷ ಅವರ ಮುಂದೆ ಹೋಗಿ ನಿಂತು ಶುಭಾಶಯ ತಿಳಿಸಿ ಬಂದು ಬಿಡಲೇ ಎಂದರೆ ಕೈಯಲ್ಲಿ ಕಾಸಿಲ್ಲ. ಇಲ್ಲಿಂದಲೇ ಶುಭಾಶಯ ತಿಳಿಸಿ ಸುಮ್ಮನಾಗಿ ಬಿಡಲೇ ಎಂದರೆ ಮನಸ್ಸು ಒಪ್ಪುತ್ತಿಲ್ಲ. ಇದೀಗ ದುಡಿತ್ತಿದ್ದಿನಾದರು ಕಣ್ಣ ಮುಂದಿರುವ ಅಷ್ಟು ಹೊಣೆಗಾರಿಕೆಗಳು ನನ್ನನ್ನ ಕಟ್ಟಿಹಾಕ್ತಿದೆ. ಈ ಗೊಂದಲದ ನಡುವೇ ಈ ಲೇಖನ ನಿಮಗಾಗಿ.
ಅಪ್ಪಜಿ-ಅಮ್ಮ ಈ ಭಾರಿ ಹೊಸ ವರುಷದ ಹೊಸ ಆಚರಣೆ ಸಾಧ್ಯವಾಗದಿದ್ದರು ಬೇಸರಿಸದಿರಿ. ಯಾಕೆಂದರೆ ನಿಮಗಾಗಿ ನೀವು ಕಂಡ ಹೊಸ ಕನಸಿನ ಗೂಡೊಂದನ್ನ ಹೊತ್ತು ತರುತ್ತಿದ್ದೇನೆ. ತಂದ ದಿನವೇ ನಿಮ್ಮ ಈ ಜನುಮೋತ್ಸವವನ್ನು ಆಚರಿಸ್ತೇನೆ. ಇದನ್ನ ನಿಮ್ಮೊಡನೇ ಹೇಳಬಹುದಿತ್ತಾದರು, ನನ್ನ ಸಹಪಯಣಿಗರೊಡನೆ ಹಂಚಿಕೊಂಡ ಈ ಕನಸುಗಳು ನಮ್ಮ ಬಾಳಿನ ಮುಂದಿನ ಪಯಣದ ಬುತ್ತಿಯಾಗುತ್ತದೆ ಎಂಬುದು ನನ್ನ ಭಾವನೆ.
ಇಂತಹ ಅದೆಷ್ಟೋ ಅನುಭವಗಳು ಮನೆ ಬಿಟ್ಟು, ತಂದೆ ತಾಯಿಯ ಆಶಯವನ್ನು ನೆನಸಾಗಿಸೋ ಸಾವಿರ ಕನಸುಗಳನ್ನು ಹೊತ್ತು ಬಂದ ಅದೆಷ್ಟೋ ಮನಸ್ಸುಗಳಿಗೆ ಆಗಿರುತ್ತೆ. ಇನ್ನು ಕೆಲವರಿಗೆ ಇಡೀ ವರ್ಷದ ಶ್ರಮದಾಯಕ ದುಡಿಮೆ ಬಳಿಕ ಮನಸ್ಸು ಸ್ವಲ್ಪ ವಿಶ್ರಾಂತಿಯನ್ನು, ಮನೋರಂಜನೆಯನ್ನು ಬಯಸುತ್ತದೆ. ಕುಟುಂಬದ ಬಂಧವನ್ನು ಗಟ್ಟಿಗೊಳಿಸಲು ಮತ್ತು ಪ್ರೀತಿ, ಅನುಬಂಧವನ್ನು ಬಿತ್ತಲು ಹೊಸವರ್ಷವೊಂದು ಸುವರ್ಣಾವಕಾಶ. ನಮ್ಮ ಎಲ್ಲ ಕೆಲಸಕ್ಕೆ ಸ್ವಲ್ಪ ಸಮಯ ವಿಶ್ರಾಂತಿ ಕೊಟ್ಟು ರಿಲ್ಯಾಕ್ಸ್ ಮಾಡುವ ಮೂಲಕ ಸಂಭ್ರಮ, ಸಡಗರಕ್ಕೆ ಅಣಿಯಾಗೋಣ. ನಿಮ್ಮೆಲ್ಲರ ಆಸೆ, ನಿರೀಕ್ಷೆಗಳು ನೆರವೇರಲಿ ಎಂದು ಮನಸ್ಸಲ್ಲೆ ಪ್ರಾರ್ಥಿಸುತ್ತಾ, ಮುಸ್ಸಂಜೆ ಕವಿಯುತ್ತಿರುವಾಗಲೂ ಮರುದಿನದ ಬೆಳಗು ಆಶಾಕಿರಣವನ್ನು ಹೊತ್ತು ತರಲಿ ಎಂದು ಹಾರೈಸುತ್ತೇನೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ
ಸುದ್ದಿದಿನ,ದಾವಣಗೆರೆ: ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್ ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ ಕಾಯಿಲೆಗಳ ಚಿಕಿತ್ಸಾ ಸೌಲಭ್ಯವನ್ನು ವಿಸ್ತರಿಸಿದೆ.
ಈ ಉಪಕ್ರಮದ ಮೂಲಕ, ಪಾಲಿಸಿದಾರರಿಗೆ ‘ಟಾಕ್ ಟು ಸ್ಟಾರ್’ ಸೇವೆ ಹಾಗೂ ಮನೆ ಬಾಗಿಲಿನ ಆರೋಗ್ಯ ಸೇವೆ ಕಲ್ಪಿಸಿಕೊಡಲಾಗುತ್ತಿದೆ. ಇದರ ನೆರವಿನಿಂದ ಆರಂಭಿಕ ಹಂತದಲ್ಲೇ ಅಗತ್ಯ ವೈದ್ಯಕೀಯ ಸಲಹೆ ಮತ್ತು ಪರೀಕ್ಷೆಗಳ ನೆರವು ಒದಗಿಸಲಾಗುತ್ತಿದೆ. ಜೊತೆಗೆ, ಸಾರ್ವಜನಿಕರು ಸ್ಟಾರ್ ಹೆಲ್ತ್ ಕಸ್ಟಮರ್ ಆ್ಯಪ್ ಮೂಲಕ 24*7 ಉಚಿತ ವರ್ಚುವಲ್ ವೈದ್ಯರ ಸಮಾಲೋಚನೆ ಪಡೆಯುವ ಅವಕಾಶವನ್ನೂ ಕಲ್ಪಿಸಲಾಗಿದೆ ಎಂದು ಸ್ಟಾರ್ ಹೆಲ್ತ್ ಇನ್ಶುರನ್ಸ್ ಕರ್ನಾಟಕ ವಹಿವಾಟು ವಿಭಾಗದ ಮುಖ್ಯಸ್ಥ ಆದಿತ್ಯ ಓಂಪ್ರಕಾಶ್ ಬಿಯಾನಿ ಹೇಳಿದ್ದಾರೆ.
ಪಾಲಿಸಿದಾರರಿಗೆ ಅನಿಯಮಿತ ಟೆಲಿ ಸಮಾಲೋಚನೆಯಡಿ ಪಾಲಿಸಿ ಅವಧಿಯಲ್ಲಿ ಎಷ್ಟೇ ಬಾರಿ ಬೇಕಾದರೂ ದೂರವಾಣಿ ಅಥವಾ ಆನ್ಲೈನ್ ಮೂಲಕ ವೈದ್ಯರ ಸಲಹೆ ಪಡೆಯಬಹುದು. ಜ್ವರ ಅಥವಾ ಸೋಂಕಿನ ಆರಂಭಿಕ ಲಕ್ಷಣಗಳು ಕಂಡುಬಂದ ಕೂಡಲೇ ವೈದ್ಯಕೀಯ ಸಲಹೆ ಪಡೆಯಲು ಇದು ನೆರವಾಗುತ್ತದೆ. ಸಾರ್ವಜನಿಕರಿಗೆ ಉಚಿತ ವರ್ಚುವಲ್ ವೈದ್ಯರ ಸಮಾಲೋಚನೆಯೂ ಇರುತ್ತದೆ.
ಅಂತೆಯೇ ಪಾಲಿಸಿದಾರರು ‘ಟಾಕ್ ಟು ಸ್ಟಾರ್’ ಸೇವೆಯಡಿ 7200 222 333 ಸಂಖ್ಯೆಗೆ ಕರೆ ಮಾಡಿ ಮಾರ್ಗದರ್ಶನ ಪಡೆಯಬಹುದು. ನಗದುರಹಿತ ಮನೆ ಬಾಗಿಲಿನ ಆರೋಗ್ಯ ಸೇವೆಯಡಿ ಅರ್ಹ ಪಾಲಿಸಿದಾರರಿಗೆ ಸ್ಟಾರ್ ಹೆಲ್ತ್ ಕ್ಯಾಷ್ಲೆಸ್- ಸೌಲಭ್ಯದ ಮೂಲಕ ಮನೆ ಬಾಗಿಲಿಗೇ ಆರೋಗ್ಯ ಸೇವೆ ಒದಗಿಸಲಾಗುತ್ತದೆ. ವೈದ್ಯರ ಸಲಹೆಯಂತೆ ನಸಿರ್ಂಗ್ ಸೇವೆ, ರಕ್ತ ಪರೀಕ್ಷೆ, ಆರೋಗ್ಯ ಮೇಲ್ವಿಚಾರಣೆ, ಐವಿ ಫ್ಲೂಯಿಡ್ಸ್ ಹಾಗೂ ಚುಚ್ಚುಮದ್ದು ಸೇರಿದಂತೆ ಅಗತ್ಯ ಚಿಕಿತ್ಸೆಗಳನ್ನು ಮನೆಯಲ್ಲೇ ನೀಡಲಾಗುತ್ತದೆ ಎಂದು ಪ್ರಕಟಣೆ ಹೇಳಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್.ಐ.ಆರ್.ಕುರಿತು ಮಾಹಿತಿ ನೀಡಲು ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಜಿಲ್ಲೆಯ ಎಲ್ಲಾ ಬಿಎಲ್ಒಗಳು ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಅರ್ಜಿಗಳನ್ನು ವಿತರಿಸಿ, ಸ್ವೀಕರಿಸುತ್ತಿದ್ದಾರೆ. ಶೇ. 91 ರಷ್ಟು ಜನರಿಗೆ ಫಾರಂ ಭರ್ತಿ ಮಾಡಲು ತಿಳಿಯದ ಕಾರಣ ಬಿಎಲ್ಒಗಳೇ ಸಾರ್ವಜನಿಕರಿಗೆ ಸಹಾಯ ಮಾಡುತ್ತಿದ್ದಾರೆ ಎಂದರು.
ಸಾರ್ವಜನಿಕರ ಅನುಕೂಲಕ್ಕಾಗಿ ದಾವಣಗೆರೆ ನಗರದಲ್ಲಿ 45 ಕೇಂದ್ರಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ತಾಲೂಕು ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಯಾವುದೇ ಅನುಮಾನಗಳಿದ್ದಲ್ಲಿ ಸಾರ್ವಜನಿಕರು ಬಿಎಲ್ಒಗಳನ್ನು ಅಥವಾ ಚುನಾವಣಾ ವೆಬ್ಸೈಟ್ನಲ್ಲಿ ಲಭ್ಯವಿರುವ ನೋಡಲ್ ಅಧಿಕಾರಿಗಳು ಮತ್ತು ಸೂಪರ್ವೈಸರ್ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.
ಸದ್ಯಕ್ಕೆ ಸಾರ್ವಜನಿಕರಿಂದ ಯಾವುದೇ ದಾಖಲೆಗಳನ್ನು ಸಂಗ್ರಹಿಸುತ್ತಿಲ್ಲ. ಆಗಸ್ಟ್ 7 ರ ನಂತರ ಯಾರು ಯಾವ ದಾಖಲೆಗಳನ್ನು ನೀಡಬೇಕು ಎಂಬುದನ್ನು ಸ್ಪಷ್ಟಪಡಿಸಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದರು.
ವಿವಿಧ ತಾಂತ್ರಿಕ ಹಾಗೂ ನೈಜ ಕಾರಣಗಳಿಂದಾಗಿ ಒಟ್ಟು 17,499 ಮತದಾರರ ಗಣತಿ ನಮೂನೆಗಳು ವಾಪಸ್ ಬಂದಿಲ್ಲ. ಇದರಲ್ಲಿ ಪ್ರಮುಖವಾಗಿ 7,487 ಮರಣ ಪ್ರಕರಣಗಳು , 263 ವಿಳಾಸ ಪತ್ತೆಯಾಗದವರು , 6,677 ಶಾಶ್ವತವಾಗಿ ಸ್ಥಳಾಂತರಗೊಂಡವರು , 2,994 ದ್ವಿಪ್ರತಿ ದಾಖಲಾತಿ (Double Entry) ಹಾಗೂ 78 ಇತರೆ ಕಾರಣ ಎಂದು ತಿಳಿಸಿದರು.
1,200 ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ಗುರುತಿಸಿ, ಅಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮತದಾರರ ಪರಿಷ್ಕರಣೆಯ ಕಾರ್ಯವಿಧಾನದ ಕುರಿತು ವಿವಿಧ ರಾಜಕೀಯ ಪಕ್ಷಗಳೊಂದಿಗೆ ನಡೆದ ಸಭೆ ಯಲ್ಲಿ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸುವ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ಜುಲೈ 29ರ ವರೆಗೆ ಮಾತ್ರ ಕಾಲಾವಕಾಶ ಇರುವುದರಿಂದ ಬಿಎಲ್ಒಗಳು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರು ಅವರೊಂದಿಗೆ ಶಾಂತಿಯುತವಾಗಿ ವರ್ತಿಸಿ, ಸೂಕ್ತ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಒಂದು ವೇಳೆ ದ್ವಿಪ್ರತಿ (Double Entry) ಸೇರಿದಂತೆ ಯಾವುದೇ ತಪ್ಪು ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ನೀಡಿದಲ್ಲಿ, ಅಂತವರ ವಿರುದ್ಧ ಎಫ್ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಡಾ.ಮಹಾಂತೇಶ್ ಚುನಾವಣಾ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆ ನಡೆಸುವಂತೆ ದೂರು ನೀಡಿ 5 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತಾಗೆ ದೂರು ಸಲ್ಲಿಸಿದ್ದಾರೆ.
ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ವಿಭಾಗ-2 ರ ವ್ಯಾಪ್ತಿಗೆ ಒಳಪಡುವ ಮಾಯಕೊಂಡ, ಹೊನ್ನಾಳಿ, ಚನ್ನಗಿರಿ ಉಪ ವಿಭಾಗಗಳು ಹಾಗೂ ವಿಭಾಗ-2ರ ಕಛೇರಿಯ ವ್ಯಾಪ್ತಿಗೆ 2023-24 ರಿಂದ 2025-26ನೇ ಸಾಲಿನ ಅವಧಿಯಲ್ಲಿ ಬಿಡುಗಡೆಯಾಗಿರುವ ಸ್ಥಳೀಯ ಶಾಸಕರ ಅನುದಾನದಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಹಣವನ್ನು ಇಲಾಖೆಯ ವಾಹನಗಳ ಇಂಧನ ವೆಚ್ಚಕ್ಕೆಂದು ನಿಯಮಬಾಹಿರವಾಗಿ ದುರ್ಬಳಕೆ ಮಾಡಿಕೊಂಡಿರುವುದು ಮಾತ್ರವಲ್ಲದೆ, ಬಹುತೇಕ ಕಡೆಗಳಲ್ಲಿ ಯಾವುದೇ ಕಾಮಗಾರಿ ನಡೆಸದೆ ನಕಲಿ ಕಡತ ಸೃಷ್ಟಿಸಿ ಸ್ಥಳೀಯ ಶಾಸಕರ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ವಿಷಯವು ಅಧಿಕೃತ ಮೂಲಗಳಿಂದ ತಿಳಿದು ಬಂದ ಕಾರಣ ಮಾಹಿತಿಹಕ್ಕು ಅಡಿಯಲ್ಲಿ ಹಲವಾರು ಭಾರಿ ಅರ್ಜಿ ಸಲ್ಲಿಸಿ, ಮಾಹಿತಿ ಕೋರಿದಾಗಲೂ ನಿಯಮಬಾಹಿರವಾಗಿ ಹಿಂಬರಹ ನೀಡುತ್ತ ಬಂದಿರುತ್ತಾರೆ.
ಆದ ಕಾರಣ ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸಿ, ಕೈಗೊಂಡ ಕ್ರಮದ ವರದಿಯನ್ನು ನೀಡುವಂತೆ ವ್ಯವಸ್ಥಾಪಕ ನಿರ್ದೇಶಕರು, ಕೆ.ಆರ್.ಐ.ಡಿ.ಎಲ್, ಬೆಂಗಳೂರು ಇವರಿಗೆ ದಿನಾಂಕ: 06-02-2026 ರಂದು ದೂರು ನೀಡಲಾಗಿತ್ತು. ಆದರೆ ದೂರು ನೀಡಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ದಿನಾಂಕ: 21-04-2026 ರಂದು ಜ್ಞಾಪನ ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ 2 ತಿಂಗಳು ಕಳೆದರೂ ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ಗೌಡ ಎಂ.ಬಿ ಇವರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.
ಆದ ಕಾರಣ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತ ಕಾಯ್ದೆಯ ಅನುಸಾರ ಪ್ರಕರಣ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ
-
ಅಂಕಣ5 days agoಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
-
ದಿನದ ಸುದ್ದಿ4 days agoಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ
-
ದಿನದ ಸುದ್ದಿ2 days agoಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ2 days agoಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
-
ದಿನದ ಸುದ್ದಿ7 hours agoಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

