Connect with us

ದಿನದ ಸುದ್ದಿ

ಶಾಮನೂರರಿಗೆ ಕೇವಲ 92, ಉತ್ಸಾಹ ಕುಂದಿಲ್ಲ : ಜೆ.ಆರ್.ಷಣ್ಮುಖಪ್ಪ

Published

on

ಸುದ್ದಿದಿನ, ಕುಕ್ಕುವಾಡ : ಶಾಸಕ ಶಾಮನೂರು ಶಿವಶಂಕರಪ್ಪಗೆ ವಯಸ್ಸು 92 ಆಗಿರಬಹುದು ಆದರೆ ಉತ್ಸಾಹ ಕುಂದಿಲ್ಲ ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಜೆ.ಆರ್.ಷಣ್ಮುಖಪ್ಪ ಹೇಳಿದರು.

ಕುಕ್ಕುವಾಡದ ಸಕ್ಕರೆ ಕಾರ್ಖಾನೆಯಲ್ಲಿ ಸ್ವಸಹಾಯ ಸಂಘಗಳ ಬಹಿರಂಗ ಸಭೆಯಲ್ಲಿ ಮಹಿಳೆಯರ ಸಮಸ್ಯೆ ಆಲಿಸಿ ನಂತರ ಮಾತನಾಡಿ, ಎಲ್ಲರೂ ಶಾಮನೂರು ಶಿವಶಂಕರಪ್ಪಗೆ ವಯಸ್ಸಾಗಿದೆ ಎನ್ನುತ್ತಾರೆ. ಆದರೆ ಅವರು ಈಗಲೂ ಬೆಳಗ್ಗೆ ಎದ್ದು ಮತ ಪ್ರಚಾರಕ್ಕೆ ಹೋಗುತ್ತಾರೆ. ಈಗಾಗಲೇ 25 ವರ್ಷ ಆಡಳಿತ ನಡೆಸಿದ್ದಾರೆ. ಇದು ಅವರಿಗೆ 6 ನೇ ಚುನಾವಣೆಯಾಗಿದ್ದು, ಜನರ ಬಳಿ ಹೋಗುತ್ತಾರೆ. ಅವರನ್ನು ಗೆಲ್ಲಿಸಲು ಇಡೀ ಕುಟುಂಬ ಓಡಾಟ ನಡೆಸಿದೆ. ಬಿಜೆಪಿ ಸರಕಾರ ಇದ್ದಾಗ ದಾವಣಗೆರೆ ಜನರಿಗೆ ವ್ಯಾಕ್ಸಿನ್ ನೀಡಲಿಲ್ಲ. ಈ ಸಂದರ್ಭದಲ್ಲಿ 6 ಕೋಟಿ ವೌಲ್ಯದ ವ್ಯಾಕ್ಸಿನ್ ನನ್ನು ಜನರಿಗೆ ಉಚಿತವಾಗಿ ನೀಡಿ ಜನರ ಜೀವ ಉಳಿಸಿದರು ಎಂದರು.

ಈಗಾಗಲೇ ಬಿಜೆಪಿ ಸರಕಾರ ನಮ್ಮ ನಂದಿನಿಯನ್ನು ಅಮೂಲ್‌ನಲ್ಲಿ ವಿಲೀನ ಮಾಡಲು ಹೊರಟಿದೆ. ನಮ್ಮ ರೈತರ ಶ್ರಮ ನಂದಿನಿ ಹಾಲಿನಲ್ಲಿದೆ. ಈಗಾಗಲೇ ಬ್ಯಾಂಕ್‌ನ್ನು ವಿಲೀನಗೊಳಿಸಿದ್ದ ಕಾರಣ ಸಾಕಷ್ಟು ಜನರು ನಿರುದ್ಯೋಗಿಗಳು ಆಗಿದ್ದಾರೆ. ಬರೋಡ ಬ್ಯಾಂಕ್‌ನ್ನು ರಾಜ್ಯಕ್ಕೆ ತರುವ ಮೂಲಕ ಮೊದಲ ಭಾಗವಾಗಿ ಕರ್ನಾಟಕಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಆದ್ದರಿಂದ ಅಭಿವೃದ್ಧಿಗೆ ಮತ ನೀಡಿ ಎಂದು ಹೇಳಿದರು.

ಕುಕ್ಕುವಾಡದ ಎಂಡಿ ಎಸ್.ಎಸ್.ಗಣೇಶ್, ಪ್ರಣಾಳಿಕೆಯನ್ನು ಬಿಜೆಪಿ ಸರಕಾರ ಬಿಡುಗಡೆ ಮಾಡಿದ್ದುಘಿ, ಕಾಂಗ್ರೆಸ್ 10 ರೂ.ನೀಡಿದ್ರೆಘಿ, ಬಿಜೆಪಿ ಎಂಟಾಣಿ ನೀಡಿದೆ. ಮೂಲ ಸೌಕರ್ಯಗಳನ್ನು ಬಗೆಹರಿಸಲಾಗುವುದು. ಇನ್ನು ಸ್ವಸಹಾಯ ಸಂಘಗಳು ಸಾಲ ಪಡೆದು ಆರ್ಥಿಕವಾಗಿ ಸಭಲಗೊಳ್ಳಿಘಿ. ಆದರೆ ಬಡ್ಡಿಗೆ ಬಿಡಬೇಡಿ. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ನಿಮ್ಮ ಸಮಸ್ಯೆಗಳಿಗೆ ಬ್ರೇಕ್ ಬೀಳಲಿದೆ ಎಂದರು.

ಶಾಮನೂರು ಸೊಸೆ ಪ್ರಭಾ ಮಲ್ಲಿಕಾರ್ಜುನ್ ಮಾತನಾಡಿ, ನಾನು ನಮ್ಮ ಮಾವನರಿಗೆ 92 ವರ್ಷ ಆದರೆ ಅವರ ಅರ್ಧದಷ್ಟು ವಯಸ್ಸು ನನಾಗಿಲ್ಲಘಿ. ಅವರಿಗೆ ಅನುಭವ ಹೆಚ್ಚುಘಿ, ಮನೆಗೆ ಬಂದವರ ಸಂಕಷ್ಟವನ್ನು ಈಗಲೂ ಕೇಳುತ್ತಾರೆ. ಕಷ್ಟ ಬಂದಾಗ ಅವರ ಸಮಸ್ಯೆ ಬಗೆಹರಿಸುತ್ತಾರೆ. ಹೆರಿಗೆ, ಡಯಾಲಿಸಿಸ್, ಕಣ್ಣಿನಪೊರೆ ತೆಗೆಸಿಕೊಳ್ಳುವ ಬಡವರಿಗೆ ಉಚಿತ ಚಿಕಿತ್ಸೆಯನ್ನು ಶಾಮನೂರು ಶಿವಶಂಕರಪ್ಪ ಮಾಡಿದ್ದಾರೆ ಎಂದರು.

ಎಸ್‌ಎಸ್ ಗಣೇಶ್ ಸೊಸೆ ಸ್ವಾತಿ ಮಾತನಾಡಿ, ನಾನು ಈ ಮನೆಗೆ ಬಂದು ಐದು ವರ್ಷವಾಯಿತು..ಶಾಮನೂರು ಶಿವಶಂಕರಪ್ಪ ಜಿಲ್ಲೆಯಲ್ಲಿ ಎಷ್ಟು ಕೆಲಸ ಮಾಡಿದ್ದಾರೆ ಎಂಬುದು ನಿಮಗೆಲ್ಲ ಗೊತ್ತಿದೆ. ಕ್ಷೇತ್ರ ಅಭಿವೃದ್ಧಿಗೆ ಅವರ ಕೊಡುಗೆ ಅನನ್ಯವಾಗಿದೆ. ಅವರಿಗೆ ವಯಸ್ಸಾಗಿಲ್ಲ, ಈಗಲೂ ಚಿರ ಯುವಕನಂತೆ ಓಡಾಡುತ್ತಾರೆ. ಆದ್ದರಿಂದ ಉತ್ತರದಲ್ಲಿ ಎಸ್‌ಎಸ್ ಮಲ್ಲಿಕಾರ್ಜುನ್, ದಕ್ಷಿಣದಲ್ಲಿ ಶಾಮನೂರು ಶಿವಶಂಕರಪ್ಪ ಗೆಲ್ಲಿಸಿ ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ರೇಖಾ ಗಣೇಶ್, ಅಭಿಜಿತ್, ಹದಡಿ ನಿಂಗಪ್ಪ, ಕುಕ್ಕುವಾಡ ಮಲ್ಲೇಶ್, ಬೇತೂರು ರಾಜಣ್ಣ ಇದ್ದರು. ಸುಮಾರು ಎಂಟನೂರುಕ್ಕೂ ಹೆಚ್ಚು ಸ್ವಸಹಾಯ ಸಂಘದ ಮಹಿಳೆಯರು ಇದ್ದರು. ಕಾಂಗ್ರೆಸ್‌ನಾಯಕಿ ಪ್ರಭಾ ಮಲ್ಲಿಕಾರ್ಜುನ್ ಮಹಿಳೆಯರ ಜತೆ ಕೆಲ ಕಾಲ ಸಂವಾದ ನಡೆಸಿದರು.

ಬಾರ್ ಕ್ಲೋಸ್ ಮಾಡಿ

  • ಹಳ್ಳಿಗಳಲ್ಲಿ ಬಾರ್‌ಗಳು ಇದ್ದು, ದುಡಿಮೆ ಮಾಡಿದ ಹಣವನ್ನು ಎಣ್ಣೆ ಅಂಗಡಿಗೆ ಹಾಕುತ್ತಿದ್ದಾರೆ, ಆದ್ದರಿಂದ ಬಾರ್ ಕ್ಲೋಸ್ ಮಾಡ್ಸಿ, ಮನೆ, ನಿವೇಶನ ಕೊಡಿ ಸೇರಿದಂತೆ ಅನೇಕ ಸಮಸ್ಯೆಗಳನ್ನು ಮಹಿಳೆಯರು ಹೇಳಿಕೊಂಡರು. ಈ ಬಗ್ಗೆ ಗಮನಹರಿಸುವುದಾಗಿ ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ಮೂವರು ಸೊಸೆಯರಿಂದ ಮತ ಪ್ರಚಾರ

ಯಶಸ್ವಿ ಪುರಷನ ಹಿಂದೆ ಮಹಿಳೆ ಇರುತ್ತಾಳೆ ಎಂಬುದಕ್ಕೆ ಶಾಮನೂರು ಕುಟುಂಬದ ಮಹಿಳೆಯರು ಸಾಕ್ಷಿಯಾದರು. ಮಾವನನ್ನು ಗೆಲ್ಲಿಸಲು ಇಡೀ ಊರು ಸುತ್ತುತ್ತಿದ್ದು, ಅಭಿವೃದ್ಧಿ ಕಾರ್ಯಗಳನ್ನು ಹಿಡಿದು ಮತಪ್ರಚಾರ ಮಾಡುತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಉಗ್ರರನ್ನು ಸದೆಬಡಿಯಲು ಕೇಂದ್ರಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನಡೆಸ್ಕ್:ಪಹಲ್ಗಾಮ್ ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟ ಬೆಂಗಳೂರಿನ ಭರತ್ ಭೂಷಣ್ ಅವರ ಪಾರ್ಥಿವ ಶರೀರವನ್ನು ಮತ್ತಿಕೆರೆಯ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ.

ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್, ಕೇಂದ್ರ ಸಚಿವ ವಿ. ಸೋಮಣ್ಣ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಹಲವು ಗಣ್ಯರು ಭೇಟಿ ನೀಡಿ ಗೌರವ ನಮನ ಸಲ್ಲಿಸಿದರು. ಮಧ್ಯಾಹ್ನದ ನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

ಉಗ್ರರನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ನಮ್ಮ ಸರ್ಕಾರ ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಗ್ರಹಿಸಿ, ಉಗ್ರರನ್ನು ಸದೆಬಡಿಯುವ ನಿಟ್ಟಿನಲ್ಲಿ ಕೇಂದ್ರಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿಂದು ತಿಳಿಸಿದ್ದಾರೆ.

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾಗಿರುವ ಮಂಜುನಾಥ ರಾವ್ ಹಾಗೂ ಭರತ್ ಭೂಷಣ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವದೊಂದಿಗೆ ನೆರವೇರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದರು.

ಭಯೋತ್ಪಾದಕ ದಾಳಿಯಂತಹ ಹೀನ ಕೃತ್ಯದಲ್ಲಿ ಅಮಾಯಕ ಜೀವಗಳು ಬಲಿಯಾಗಿರುವುದು ಅತ್ಯಂತ ದುಃಖದ ವಿಚಾರ. ಈ ದಾಳಿಯಲ್ಲಿ ಮಡಿದ ಕನ್ನಡಿಗರ ಅಂತ್ಯಸಂಸ್ಕಾರವನ್ನು ಗೌರವದಿಂದ ನೆರವೇರಿಸಬೇಕಿರುವುದು ನಮ್ಮ ಸರ್ಕಾರದ ಕರ್ತವ್ಯವೆಂದು ಭಾವಿಸಿ, ಈ ನಿರ್ಣಯ ತೆಗೆದುಕೊಂಡಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಅರಿವಿನ ವಿಸ್ತಾರದ ಪ್ರಕ್ರಿಯೆಯೇ ಸಂಶೋಧನೆ : ಡಾ.ಚಿತ್ತಯ್ಯ

Published

on

ಸುದ್ದಿದಿನ,ಚನ್ನಗಿರಿ:ಭೂತದ ಮಾಹಿತಿ ಕೆದಕುತ್ತಾ ವರ್ತಮಾನಕ್ಕೆ ಹೊಸ ಹೊಳಹು ನೀಡುವ ಕ್ರಮ ಮತ್ತು ಅರಿವಿನ ವಿಸ್ತಾರದ ಪ್ರಕ್ರಿಯೆಯನ್ನೇ ನಾವು ಸಂಶೋಧನೆ ಎಂದು ಕರೆಯುತ್ತೇವೆ ಎಂದು ಚಳ್ಳಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಚಿತ್ತಯ್ಯ ಅವರು ಅಭಿಪ್ರಾಯಪಟ್ಟರು.

ಪಟ್ಟಣದ ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಕನ್ನಡ ಮತ್ತು ಪತ್ರಿಕೋದ್ಯಮ ವಿಭಾಗದಿಂದ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ‘ಸಂಶೋಧನಾ ವಿಧಾನಗಳು’ ವಿಷಯ ಕುರಿತು ಅವರು ಮಾತನಾಡಿದರು.

ಏನು?ಏಕೆ?ಹೇಗೆ?ಎಲ್ಲಿ?ಯಾವಾಗ? ಎಂಬ ಪ್ರಶ್ನೆಗಳಿಗೆ ಸಂಶೋಧನೆಯ ಮೂಲಕ ನಾವು ಉತ್ತರ ಕಂಡುಕೊಳ್ಳಬಹುದು. ನಮ್ಮಲ್ಲಿನ ಪ್ರಶ್ನಾ ಮನೋಭಾವವು ಸಂಶೋಧನಾ ದಾರಿ ಎಡೆಗೆ ಕೊಂಡುಯ್ಯುತ್ತದೆ. ಯಾವುದೋ ಒಂದು ವಿಷಯ ನಮ್ಮನ್ನು ಕಾಡುವ ಕ್ರಮವೇ ಸಂಶೋಧನೆ. ಕಾಡಿಸದಿದ್ದರೆ ಅಲ್ಲಿ ಸಂಶೋಧನೆ ಆಗಲಾರದು. ಸಂಶೋಧನೆಗೆ ಅದೊಂದು ಮೆಟ್ಟಿಲಹಾಗೆ ಕಾರ್ಯನಿರ್ವಹಿಸುತ್ತದೆ ಎಂದರು.

ಸಂಶೋಧನ ಮೀಮಾಂಸೆ’ಯು ಡಾಕ್ಟರೇಟ್ ಪದವಿಗಾಗಿ ನಿಬಂಧ ಸಿದ್ಧಪಡಿಸುವ ಮತ್ತು ಸಲ್ಲಿಸುವ ನಾಲ್ಕು ವರ್ಷದ ಮಟ್ಟಿಗೆ ಸಂಶೋಧಕರಿಗಾಗಿ ಸಿದ್ಧಪಡಿಸಿದ ಮಾರ್ಗದರ್ಶಿ ಎಂದು ತಿಳಿಯಬೇಕಾಗುತ್ತದೆ. ಏಕೆಂದರೆ ಪದವಿಯ ಹಂಗಿಲ್ಲದೆ ಸಂಶೋಧನೆಯನ್ನು ಬಾಳಿನ ಮುಖ್ಯ ಉದ್ದೇಶವಾಗಿರಿಸಿಕೊಂಡ ಸಂಶೋಧಕರ ನಡುವಿನ ಸೂಕ್ಷ್ಮ ಗೆರೆಯನ್ನು ರಹಮತ್ ತರೀಕೆರೆ ಗುರುತಿಸಿದ್ದಾರೆ‌ ಎಂದು ತಿಳಿಸಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಅಮೃತೇಶ್ವರ ಬಿ.ಜಿ ಅವರು ಮಾಡಿದರು. ಉಪನ್ಯಾಸಕ ಡಾ.ಶಕೀಲ್ ಅಹಮ್ಮದ್ ಸ್ವಾಗತಿಸಿದರು. ವಿದ್ಯಾರ್ಥಿ ರೇಣುಕ ನಿರೂಪಿಸಿದರು. ಸೃಷ್ಟಿ ವಂದಿಸಿದರು. ತೇಜು ಆಶಯ ಗೀತೆ ಹಾಡಿದರು.

ಈ ಸಂದರ್ಭದಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ರವಿ, ಸಹಾಯಕ ಪ್ರಾಧ್ಯಾಪಕ ಷಣ್ಮುಕಪ್ಪ ಕೆ.ಎಚ್, ಉಪನ್ಯಾಸಕ ಹನುಮಂತಪ್ಪ, ಗೋವರ್ಧನ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಳ್ಳಾರಿ ಕಿಷ್ಕಿಂದ ವಿಶ್ವವಿದ್ಯಾಲಯದಲ್ಲಿ ಹಗಲು ದರೋಡೆ ; ಹಣ ಕೊಡದಿದ್ರೆ ಪರೀಕ್ಷೇಲಿ ಫೇಲ್ ..! ವಿದ್ಯಾರ್ಥಿಗಳ ಗೋಳು ಕೇಳೋರ್ ಯಾರು..? ಓದಿ ಈ ಸ್ಟೋರಿ..!

Published

on

  • ವಿಶೇಷ ವರದಿ : ಗಿರೀಶ್ ಕುಮಾರ್, ಬಳ್ಳಾರಿ

ಸುದ್ದಿದಿನಡೆಸ್ಕ್:ಗಣಿನಾಡು ಬಳ್ಳಾರಿ ನಗರದ ಕಿಷ್ಕಿಂದ ವಿಶ್ವವಿದ್ಯಾಲಯ ಆರಂಭವಾಗಿ ಎರಡು ವರ್ಷ ಕಳೆದಿಲ್ಲ, ಆಗಾಲೇ ವಿದ್ಯಾರ್ಥಿಗಳಿಗೆ ಡೋನೇಷನ್ ಹಾವಾಳಿ ಹೆಚ್ಚಾಗಿದೆ. ಚೆನ್ನಾಗಿ ಪರೀಕ್ಷೆ ಬರೆದರು, 4-5 ಪುಟಗಳ ಮೌಲ್ಯಮಾಪನ ಮಾಡದೇ ಇರೋದು. ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆಯ ನಕಲು ಪ್ರತಿ ಕೇಳಿದರೇ ಕೊಡೀದಿಲ್ಲ ಎನ್ನುವ ಬಹು ದೊಡ್ಡ ಆರೋಪ ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಂದ ಕೇಳಿಬಂದಿದೆ.

ಹಾಜರಾತಿ 85 ಶೇಕಡ ಏಕೆ..?

ಈ ಬಳ್ಳಾರಿ ಕಿಷ್ಕಿಂದ ವಿಶ್ವವಿದ್ಯಾಲಯದಲ್ಲಿ ದೇಶದ ಯಾವುದೇ ವಿಶ್ವವಿದ್ಯಾಲಯದಲ್ಲಿ ಇರದೇ ಇರೋ ನಿಯಮಗಳು ಇಲ್ಲಿ ಇದೆ. ರಾಜ್ಯ ಮತ್ತು ದೇಶದ ವಿಶ್ವವಿದ್ಯಾಲಯಗಳಲ್ಲಿ ಪ್ರತಿಯೊಂದು ವಿದ್ಯಾರ್ಥಿಗೆ ಶೇಕಡ 75 ಹಾಜರಾಗಿ ಇದ್ದರೆ, ಈ ಕಿಷ್ಕಿಂದ ವಿಶ್ವವಿದ್ಯಾಲಯದಲ್ಲಿ 85 ಶೇಕಡಾ ಹಾಜರಾತಿ ಅಂತೆ, ಇಲ್ಲದಿದ್ದರೇ ದಂಡ ಹಾಕುತ್ತಾರೆ ಎನ್ನುವ ಆರೋಪ ಸಹ ಇದೆ. ಪರೀಕ್ಷೆ ಸಮಯದಲ್ಲಿ ದಂಡದ ಹಣ ನೀಡದಿದ್ದರೆ ಹಾಲ್ ಟಿಕೆಟ್ ಕೊಡಲ್ಲವಂತೆ.

ನಗದು ಹಣ 60 ಸಾವಿರ ಡೋನೆಷನ್ ನೀಡಲು ಒತ್ತಾಯ

ಕಿಷ್ಕಿಂದ ವಿಶ್ವವಿದ್ಯಾಲಯದಲ್ಲಿ ಓದುವ ವಿದ್ಯಾರ್ಥಿಗಳಿಗೆ 1 ಲಕ್ಷ 60 ಸಾವಿರ ಆನ್ ಲೈನ್ ಮೂಲಕ ಶುಲ್ಕ ಪಾವತಿ ಮಾಡಿಸಿಕೊಂಡು ನಂತರ ಪರೀಕ್ಷೆ ಹತ್ತಿರ ಬರುವ ಮುಂಚೆಯೇ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ 60 ಸಾವಿರ ನಗದು ರೂಪಾಯಿ ಹಣವನ್ನು ನೀಡಬೇಕೆಂದು ಒತ್ತಾಯ ಮಾಡುತ್ತಾರೆ, ಹಣ ಕಟ್ಟದಿದ್ದರೆ ಪರೀಕ್ಷೆಯಲ್ಲಿ ಅನುತ್ತೀರ್ಣಾ ಮಾಡುತ್ತಾರೆ ಎನ್ನುವ ಆರೋಪ ಇದೆ. ಒಂದು ಪರೀಕ್ಷೆ ಅನುತ್ತಿಣಾ ಹೊಂದಿದ್ದರೆ ಪ್ರತಿಯೊಬ್ಬ ವಿದ್ಯಾರ್ಥಿಗಳು ಅದಕ್ಕೆ ಪ್ರತ್ಯೇಕವಾಗಿ ಹಣವನ್ನು ಕಟ್ಟಬೇಕು ಅದು ಸಹ ದುಬಾರಿ ಇದೆ. ಒಂದು ವಿಷಯಕ್ಕೆ ಒಬ್ಬ ವಿದ್ಯಾರ್ಥಿಗೆ 700 ರೂಪಾಯಿ ಪಾವತಿಸಬೇಕು.

ಪೋಷಕರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಭಯದ ವಾತಾವರಣ

ಕಿಷ್ಕಿಂದ ವಿಶ್ವವಿದ್ಯಾಲಯ ಆಗಿರುವುದರಿಂದ ಇಲ್ಲಯೇ ಪ್ರಶ್ನೆ ಪತ್ರಿಕೆ ತಯಾರಾಗುತ್ತದೆ ಹಾಗೇಯೇ ಇಲ್ಲಿಯ ಉಪನ್ಯಾಸಕರು ಮೌಲ್ಯಮಾಪನ ಮಾಡುತ್ತಾರೆ ಆದರೆ ಈ ಉಪನ್ಯಾಸಕರು ಮೇಲೆ ಆಡಳಿತ ಮಂಡಳಿ ವಿ.ವಿ ಒತ್ತಾಯ ಇದೆಯೇ ಎನ್ನುವ ಪ್ರಶ್ನೆ ಕಾಡುತ್ತದೆ.

ಇನ್ನು ಮೂರು – ನಾಲ್ಕು ವರ್ಷ ಹೇಗೆ ? ಓದು ಪೂರ್ಣಗೊಳಿಸಬೇಕು ಅನ್ನೋ ಭಯ

ಈ ಕಿಷ್ಕಿಂದ ವಿಶ್ವವಿದ್ಯಾಲಯ ಬಳ್ಳಾರಿ ನಗರದಲ್ಲಿ ಹೊಸದಾಗಿ ಆರಂಭವಾಗಿದೆ. ಕಡಿಮೆ ಹಣ ಎಂದು ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಇನ್ನು ನಮ್ಮ ಮಕ್ಕಳು ವಿದ್ಯಾಭ್ಯಾಸ ಗತಿ ಹೇಗೆ ? ಎಂದು ಭಯದ ವಾತಾವರಣದಲ್ಲಿ‌ ಇದ್ದಾರೆ.

10 ಲಕ್ಷ ಕಟ್ಟಿ ಹೋಗಿ ಎನ್ನುವ ವಿವಿಯ ಅಧಿಕಾರಿಗಳು

ಇನ್ನು ಈ ವಿಚಾರವಾಗಿ ಕಿಷ್ಕಿಂದ ವಿಶ್ವವಿದ್ಯಾಲಯದ ಪ್ರವೇಶ ಪಡೆದ ನೂರಾರು ವಿದ್ಯಾರ್ಥಿಗಳು ಈ ಡೋನೇಷನ್, ಶುಲ್ಕ, ಇನ್ನಿತರ ದಂಡಗಳನ್ನು ಪಡೆಯಲು ಹಾಗೂ ಹಗಲು ದರೋಡೆ ಮಾಡುತ್ತಿದ್ದಾರೆ. ವಿವಿ ಬಿಟ್ಟು ಹೋಗಲು ನಿರ್ಧರಿಸಿದ ವಿದ್ಯಾರ್ಥಿಗಳಿಗೆ ಉಳಿದ ವರ್ಷದ 10 ಲಕ್ಷ ಹಣ ಕಟ್ಟಿ ಹೋಗಿ ಎಂದು ಬೆದರಿಕೆ ಹಾಕುತ್ತಿದ್ದಾರೆ ಎನ್ನುವ ಆರೋಪ ಸಹ ಇದೆ.

ಇನ್ನು ಇಲ್ಲಿ ಕೆಲಸ ಮಾಡುವ ಸಿಬ್ಬಂದಿಗಳು ನಿಮ್ಮನೆಲ್ಲಾ ಫೇಲ್ ಮಾಡಿದರೇ ವಿಶ್ವವಿದ್ಯಾಲಯ ನಡೆಯೋದ್ ಹೇಗೆ ? ನಮಗೆ ಸಂಬಳ ಕೊಡೋರ್ ಯಾರು ? ಎಂದು ವಿದ್ಯಾರ್ಥಿಗಳಿಗೆ ಉತ್ತರಿಸಿದ್ದು ಸಹ ನಾಚಿಕೆಗೆಡಿನ ಸಂಗತಿಯಾಗಿದೆ. ಇನ್ನು ದುಡ್ಡು ಕೊಟ್ಟರೆ ಮಾತ್ರ ವಿದ್ಯಾರ್ಥಿಗಳು ಪಾಸು ಎನ್ನುವ ಮಾತು ಪೋಷಕರಿಂದ ಕೇಳಿಬಂದಿದೆ.

ಇನ್ನು ಪೋಷಕರು ಈ ಕಿಷ್ಕಿಂದ ವಿಶ್ವವಿದ್ಯಾಲಯ ಹೊಸದಾಗಿ ಆರಂಭಾಗಿದೆ, ಕಡಿಮೆ ಶುಲ್ಕ ಇದೆ ಎಂದು ಪ್ರವೇಶಾತಿ ಪಡೆದಿದ್ದಾರೆ ಆದರೆ ಈ ವಿವಿಯಲ್ಲಿ ನಿರಂತರವಾಗಿ ಪೋಷಕರಿಂದ ಹಣವನ್ನು ಕೀಳುತ್ತಿದ್ದಾರೆ. ಈಗಲಾದರೂ ಪೋಷಕರು ಎಚ್ಚೆತ್ತುಕೊಳ್ಳಬೇಕಿದೆ.

ಇನ್ನು ಈ ವಿಚಾರವಾಗಿ ದೂರವಾಣಿ ಕರೆ ಮಾಡಿ ಮಾತನಾಡಿದ ಕಿಷ್ಕಿಂದ ವಿಶ್ವವಿದ್ಯಾಲಯ ಅಮರೇಶಯ್ಯ ಅವರು ಇಲ್ಲ ನಮ್ಮಲ್ಲಿ ಹಾಗೇನು ನಡೆದಿಲ್ಲ, ಡೊನೆಷನ್ ತೆಗೆದುಕೊಳ್ಳುವುದಿಲ್ಲ, ವಿವಿಗೆ ಕಟ್ಟಿದ ಶುಲ್ಕ ನೇರವಾಗಿ ಪೋಷಕರಿಗೆ ಮೆಸೇಜ್ ಹೋಗುತ್ತದೆ ಎಂದರು.

ಇದರಲ್ಲಿ ಯಾರು ಸುಳ್ಳುರು ಎನ್ನುವ ಅಂಶ ಹೊರಗಡೆ ಬರಲಿ

ಇನ್ನು ಕಿಷ್ಕಿಂದ ಟ್ರಸ್ಟ್ ಮೌನಕ್ಕೆ ಜಾರಿದೆಯೇ ಕಾದು ನೋಡಬೇಕಿದೆ. ಬಳ್ಳಾರಿ ಜಿಲ್ಲಾಧಿಕಾರಿ ಹಾಗೂ ವಿವಿಯ ಕುಲಪತಿಯಾದ ಶ್ರೀ ರಾಜ್ಯಪಾಲರು ಯಾವ ರೀತಿಯ ಕ್ರಮ ತೆಗೆದುಕೊಳ್ಳುತ್ತಾರೋ..?

ಒಟ್ಟಾರೆಯಾಗಿ ಹೊಸ ವಿಶ್ವವಿದ್ಯಾಲಯ ಆರಂಭವಾಗಿ ಅಭಿವೃದ್ಧಿ ಹೊಂದಬೇಕು ಹಾಗೂ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳು ಅನುಕೂಲಕರವಾಗ ಬೇಕು ಎನ್ನುವುದು ನಮ್ಮ ಆಶಯ.


  • ಆರಂಭದಲ್ಲಿ 1.65 ಲಕ್ಷ ಹಣ ಕಟ್ಟಿದ್ದೆವೆ, ಆದರೆ 60 ಸಾವಿರ ಡೋನೇಷನ್ ನಗದು ಹಣ ತಂದು ಕೊಡು ಅಂತ ಹೇಳ್ತಾರೆ, ಉತ್ತರ ಪತ್ರಿಕೆ ಸರಿಯಾಗಿ ಮೌಲ್ಯ ಮಾಪನ ಮಾಡೊಲ್ಲ, ಫೇಲ್ ಮಾಡ್ತಾರೆ, ಉತ್ತರ ಪತ್ರಿಕೆ ನಕಲು ಪ್ರತಿ ಕೇಳಿದ್ರೆ ಕೊಡೋದಿಲ್ಲ, ಮತ್ತೆ ಪರೀಕ್ಷೆ ಬರೆದಿದ್ದೆವೆ, 85 ರಷ್ಟು ಹಾಜರಾತಿ ಕಡ್ಡಾಯ ಎಂದು ಕಿಷ್ಕಿಂದ ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಹಾಗೂ ಅವರು ಪೋಷಕರು ಅವರಿಗೆ ಆದ ನೋವನ್ನು ಹೇಳಿಕೊಂಡಿದ್ದಾರೆ.

|ನೊಂದ ವಿದ್ಯಾರ್ಥಿಗಳು, ಪೋಷಕರು, ಬಳ್ಳಾರಿ


ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 hours ago

ಉಗ್ರರನ್ನು ಸದೆಬಡಿಯಲು ಕೇಂದ್ರಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನಡೆಸ್ಕ್:ಪಹಲ್ಗಾಮ್ ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟ ಬೆಂಗಳೂರಿನ ಭರತ್ ಭೂಷಣ್ ಅವರ ಪಾರ್ಥಿವ ಶರೀರವನ್ನು ಮತ್ತಿಕೆರೆಯ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ. ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್,...

ದಿನದ ಸುದ್ದಿ3 hours ago

ಅರಿವಿನ ವಿಸ್ತಾರದ ಪ್ರಕ್ರಿಯೆಯೇ ಸಂಶೋಧನೆ : ಡಾ.ಚಿತ್ತಯ್ಯ

ಸುದ್ದಿದಿನ,ಚನ್ನಗಿರಿ:ಭೂತದ ಮಾಹಿತಿ ಕೆದಕುತ್ತಾ ವರ್ತಮಾನಕ್ಕೆ ಹೊಸ ಹೊಳಹು ನೀಡುವ ಕ್ರಮ ಮತ್ತು ಅರಿವಿನ ವಿಸ್ತಾರದ ಪ್ರಕ್ರಿಯೆಯನ್ನೇ ನಾವು ಸಂಶೋಧನೆ ಎಂದು ಕರೆಯುತ್ತೇವೆ ಎಂದು ಚಳ್ಳಕೆರೆ ಸರ್ಕಾರಿ ಪ್ರಥಮ...

ದಿನದ ಸುದ್ದಿ4 hours ago

ಬಳ್ಳಾರಿ ಕಿಷ್ಕಿಂದ ವಿಶ್ವವಿದ್ಯಾಲಯದಲ್ಲಿ ಹಗಲು ದರೋಡೆ ; ಹಣ ಕೊಡದಿದ್ರೆ ಪರೀಕ್ಷೇಲಿ ಫೇಲ್ ..! ವಿದ್ಯಾರ್ಥಿಗಳ ಗೋಳು ಕೇಳೋರ್ ಯಾರು..? ಓದಿ ಈ ಸ್ಟೋರಿ..!

ವಿಶೇಷ ವರದಿ : ಗಿರೀಶ್ ಕುಮಾರ್, ಬಳ್ಳಾರಿ ಸುದ್ದಿದಿನಡೆಸ್ಕ್:ಗಣಿನಾಡು ಬಳ್ಳಾರಿ ನಗರದ ಕಿಷ್ಕಿಂದ ವಿಶ್ವವಿದ್ಯಾಲಯ ಆರಂಭವಾಗಿ ಎರಡು ವರ್ಷ ಕಳೆದಿಲ್ಲ, ಆಗಾಲೇ ವಿದ್ಯಾರ್ಥಿಗಳಿಗೆ ಡೋನೇಷನ್ ಹಾವಾಳಿ ಹೆಚ್ಚಾಗಿದೆ....

ದಿನದ ಸುದ್ದಿ3 days ago

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಸುದ್ದಿದಿನ,ದಾವಣಗೆರೆ:ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಏಪ್ರಿಲ್ 24 ಮತ್ತು 25 ರಂದು ಆಯೋಜಿಸಲಾಗಿದೆ. ಆಸಕ್ತ ರೈತರು ಆಧಾರ್...

ದಿನದ ಸುದ್ದಿ3 days ago

ಆಸ್ತಿ ಕಲಹವೇ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆಗೆ ಕಾರಣವಾಯ್ತಾ..?

ಸುದ್ದಿದಿನಡೆಸ್ಕ್:ಭಾನುವಾರ ಹತ್ಯೆಯಾದ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಹಿಂದೆ ಆಸ್ತಿ ಕಲಹವಿರಬಹುದು ಎಂಬ ಆರೋಪಗಳು ಕೇಳಿ ಬರುತ್ತಿವೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕೋಟ್ಯಂತರ ಮೌಲ್ಯದ...

ಅಂಕಣ4 days ago

ಕವಿತೆ | ಅವಳೀಗ ಕಾಯುವುದಿಲ್ಲ

ಶಮೀಮ ಕುತ್ತಾರ್, ಮಂಗಳೂರು ಬೆಳಕು ಬರಲೆಂದು ಕಿಟಕಿಯನ್ನೊಂಚೂರು ಸರಿಸಹೊರಟಿದ್ದಳು… ಒಳಗಿನಿಂದಲೇ ಸರಪಳಿಗಳು ಕೈಗಳ ಬಿಗಿದಾಗ ಬೆಳಕಿಗಿಂತ ಬಿಡುಗಡೆಯೇ ಸಾಕೆನಿಸಿತ್ತು. ಬಯಕೆಗಳು ಶಾಪವಾದಾಗ ಇರವನ್ನೂ ಮರೆಯಬೇಕವಳು ಓದಿ ಮುಗಿಸಲಾಗದ...

ದಿನದ ಸುದ್ದಿ5 days ago

ಬಳ್ಳಾರಿ ಪೊಲೀಸ್ ಅಧಿಕಾರಿಗಳ ಪಡಿತರ ಅಕ್ಕಿ ಕಳ್ಳಾಟ : ಠಾಣೆ ಮುಂದೆ ಇದ್ದ ಲಾರಿ ಮಾಯ ; ಈ ಸ್ಟೋರಿ ಓದಿ..!

ಗಿರೀಶ್ ಕುಮಾರ್ ಗೌಡ,ಬಳ್ಳಾರಿ ಸುದ್ದಿದಿನಡೆಸ್ಕ್:ಗಣಿನಾಡು ಬಳ್ಳಾರಿ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಅಕ್ರಮ ಪಡಿತರ ಅಕ್ಕಿ ರಾತ್ರಿ ವೇಳೆ ಜಿಲ್ಲೆಯಿಂದ ಬೇರೆ ಬೇರೆ ರಾಜ್ಯಗಳಿಗೆ ಲಾರಿಗಳಲ್ಲಿ ಕಳ್ಳತನದ ಮೂಲಕ...

ದಿನದ ಸುದ್ದಿ5 days ago

ಭಾರತದ ಮೊದಲ ಉಪಗ್ರಹ ಆರ್ಯಭಟ ಉಡಾವಣೆಯಾಗಿ 50 ವರ್ಷ; ನೆಹರು ತಾರಾಲಯದಲ್ಲಿ ವಿಶೇಷ ಕಾರ್ಯಕ್ರಮ

ಸುದ್ದಿದಿನಡೆಸ್ಕ್:ಭಾರತದ ಮೊದಲ ಉಪಗ್ರಹ ಆರ್ಯಭಟ ಉಡಾವಣೆ ಮಾಡಿ ಇಂದಿಗೆ 50 ವರ್ಷಗಳು ಸಂದಿವೆ. 1975ರಲ್ಲಿ ಈ ದಿನದಂದು ಉಡಾವಣೆ ಮಾಡಲಾದ ಈ ಉಪಗ್ರಹಕ್ಕೆ ಪ್ರಾಚೀನ ಭಾರತೀಯ ಗಣಿತಜ್ಞ...

ದಿನದ ಸುದ್ದಿ5 days ago

ಜೆಇಇ ಮೇನ್ಸ್ ಫಲಿತಾಂಶ ಪ್ರಕಟ : 24 ವಿದ್ಯಾರ್ಥಿಗಳಿಗೆ ನೂರಕ್ಕೆ ನೂರು ಅಂಕ

ಸುದ್ದಿದಿನಡೆಸ್ಕ್:ರಾಷ್ಟ್ರೀಯ ಪರೀಕ್ಷಾ ಸಂಸ್ಥೆ – ಎನ್‌ಟಿಎ ಇಂದು ಪ್ರಸಕ್ತ ವರ್ಷದ ಜಂಟಿ ಪ್ರವೇಶ ಪರೀಕ್ಷೆ – ಜೆಇಇ ಮುಖ್ಯ ಫಲಿತಾಂಶ -2 ಅನ್ನು ಪ್ರಕಟಿಸಿದೆ. ಈ ಭಾರಿ...

ದಿನದ ಸುದ್ದಿ5 days ago

ಇ-ಸ್ವತ್ತು ಸಮಸ್ಯೆ ಪರಿಹಾರಕ್ಕಾಗಿ‌‌ ಕಾರ್ಯನಿರ್ವಹಣಾ ಸಮಿತಿ ರಚನೆ

ಸುದ್ದಿದಿನಡೆಸ್ಕ್:ಗ್ರಾಮೀಣಾಭಿವೃದ್ಧಿ ಇಲಾಖೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ, 12 ಜನ ಅಧಿಕಾರಿಗಳನ್ನು ಒಳಗೊಂಡ, ಇ-ಸ್ವತ್ತು ಕಾರ್ಯನಿರ್ವಹಣಾ ಸಮಿತಿ ರಚಿಸಲಾಗಿದೆ ಎಂದು, ಪಂಚಾಯತ್‌ರಾಜ್ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ. ಇದನ್ನೂ...

Trending

Shares
FacebookWhatsAppXSMSRedditPinterestSumoMe