ದಿನದ ಸುದ್ದಿ
ನನ್ನೊಡನೆ ಬಹಿರಂಗ ಚರ್ಚೆಗೆ ಬನ್ನಿ, ನಿಮ್ಮದೇ ಸ್ಥಳ, ನಿಮ್ಮದೇ ಸಮಯ : ಮೋದಿಗೆ ಸಿದ್ದು ಓಪನ್ ಚಾಲೆಂಜ್
![](https://suddidina.com/wp-content/uploads/2018/05/cm-siddaramaiah_narendra-modi.png)
ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನ ತಮ್ಮ ಭಾಷಣದಲ್ಲಿ ಕಾಂಗ್ರೆಸ್ ಪಕ್ಷದ ಬಗ್ಗೆ ಮಾಡಿರುವ ಆರೋಪಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಪ್ರತಿಕ್ರಿಯೆ ನೀಡಿದ್ದಾರೆ.
ಸಿದ್ದರಾಮಯ್ಯ ಪ್ರತಿಕ್ರಿಯೆ
ಕಾಂಗ್ರೆಸ್ ಪಕ್ಷ ಮಾಧ್ಯಮಗಳ ಸುಳ್ಳು ಸಮೀಕ್ಷೆಗಳನ್ನು ಪ್ರಸಾರ ಮಾಡಿ ಬೆಂಬಲ ಗಳಿಸಲು ಹೊರಟಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೊಟ್ಟೆ ಉರ್ಕೊಳ್ಳುತ್ತಿರುವುದು ನೋಡಿದಾಗ ಕನಿಕರ ಹುಟ್ಟುತ್ತಿದೆ.
ಏನಿದರ ಅರ್ಥ ಮೋದಿಯವರೇ? ನಿಮ್ಮನ್ನು ಹಾಡಿ ಹೊಗಳುತ್ತಿರುವ ಮಾಧ್ಯಮಗಳ ವಿಶ್ವಾಸಾರ್ಹತೆಯನ್ನು ನೀವೇ ಸಂಶಯಿಸುತ್ತಿದ್ದೀರಾ? ಮನುಷ್ಯ ಇಷ್ಟೊಂದು ಕೃತಘ್ನರಾಗಬಾರದು.
ನರೇಂದ್ರ ಮೋದಿಯವರು ರಾಜ್ಯ ಬಿಜೆಪಿಯ ಪ್ರಣಾಳಿಕೆಯನ್ನು ಸಂಕಲ್ಪಪತ್ರ ಎಂದು ಬಣ್ಣಿಸಿದ್ದಾರೆ.
2018ರ ತನ್ನ ಪ್ರಣಾಳಿಕೆಯ ಶೇಕಡಾ 90ರಷ್ಟು ಭರವಸೆಗಳನ್ನು ಬಿಜೆಪಿ ಸರ್ಕಾರ ಈಡೇರಿಸಿಲ್ಲ. 2013ರ ಕಾಂಗ್ರೆಸ್ ಪ್ರಣಾಳಿಕೆಯ 165 ಭರವಸೆಗಳಲ್ಲಿ 158 ಭರವಸೆಗಳನ್ನು ನಮ್ಮ ಸರ್ಕಾರ ಈಡೇರಿಸಿದೆ. ನಿಮ್ಮ ಸಂಕಲ್ಪ ಪ್ರಾಮಾಣಿಕವಾದುದಾಗಿದ್ದರೆ 2013ರ ನಮ್ಮ ಪ್ರಣಾಳಿಕೆ ಮತ್ತು 2018ರ ನಿಮ್ಮ ಪ್ರಣಾಳಿಕೆಯನ್ನು ಮುಂದಿಟ್ಟು ಈಡೇರಿಸಿದ ಭರವಸೆಗಳ ಬಗ್ಗೆ ನನ್ನೊಡನೆ ಬಹಿರಂಗ ಚರ್ಚೆಗೆ ಬನ್ನಿ, ಸಿದ್ಧ ಇದ್ದೀರಾ? ನಿಮ್ಮದೇ ಸ್ಥಳ, ನಿಮ್ಮದೇ ಸಮಯ, ಉತ್ತರಕ್ಕಾಗಿ ಕಾಯುತ್ತಿರುವೆ.
ಬಿಜೆಪಿಯ ಡಬಲ್ ಎಂಜಿನ್ ಸರ್ಕಾರ ಮೂರುವರೆ ವರ್ಷಗಳ ಅಧಿಕಾರವಧಿಯಲ್ಲಿ ಹಿಂದಿನ ಸರ್ಕಾರದ ತಪ್ಪುಗಳನ್ನು ಸರಿಪಡಿಸವುದರಲ್ಲಿಯೇ ಕಳೆದುಹೋಯಿತು ಎಂದು ನರೇಂದ್ರ ಮೋದಿಯವರು ನೊಂದುಕೊಂಡಿದ್ದಾರೆ.
ಮೂರುವರೆ ವರ್ಷಗಳಲ್ಲಿ ಡಬಲ್ ಎಂಜಿನ್ ಸರ್ಕಾರದ ಸಾಧನೆ ಭ್ರಷ್ಟಾಚಾರ, ಬೆಲೆ ಏರಿಕೆ, ನಿರುದ್ಯೋಗ ಮತ್ತು ಕೋಮುದ್ವೇಷವನ್ನಷ್ಟೇ ಡಬಲ್ ಮಾಡಿದೆ. ಬಿಜೆಪಿ ಮಾಡಿಟ್ಟ ಪಾಪವನ್ನು ತೊಳೆಯಲು ಕಾವೇರಿ ಮತ್ತು ಕೃಷ್ಣಾ ನದಿಗಳ ನೀರು ಸಾಲದು.
ರಾಜ್ಯದಲ್ಲಿರುವುದು ಡಬಲ್ ಎಂಜಿನ್ ಸರ್ಕಾರ ಅಲ್ಲ, ಟ್ರಿಪಲ್ ಎಂಜಿನ್ ಸರ್ಕಾರ. ಒಂದು ರಾಜ್ಯದಲ್ಲಿ, ಇನ್ನೊಂದು ದೆಹಲಿಯಲ್ಲಿ ಮತ್ತೊಂದು ನಾಗಪುರದಲ್ಲಿ. ಪ್ರಧಾನಿಯಿಂದ ಹಿಡಿದು ಮುಖ್ಯಮಂತ್ರಿ ಮತ್ತು ಸಚಿವರ ವರೆಗೆ ಎಲ್ಲರೂ ನಾಗಪುರದ ಗೊಂಬೆಯಾಟದವರ ಕೈಯಲ್ಲಿರುವ ಗೊಂಬೆಗಳು ಅಷ್ಟೆ. ಝಂಡಾ ಮಾತ್ರ ಪಕ್ಷದ್ದು ಅಜೆಂಡಾ ಆರ್.ಎಸ್.ಎಸ್ ನದ್ದು.
ಡಬಲ್ ಎಂಜಿನ ಸರ್ಕಾರ ಇದ್ದರೂ
ಅರ್ಧ ಕರ್ನಾಟಕ ನೆರೆನೀರಿನಲ್ಲಿ ಮುಳುಗಿರುವಾಗ ನೆರವು ಹರಿದುಬರಲಿಲ್ಲ. ಕೇಂದ್ರಕ್ಕೆ ಕೊಟ್ಟ ಒಂದು ರೂಪಾಯಿಯಲ್ಲಿ ವಾಪಸ್ ರಾಜ್ಯಕ್ಕೆ ಬಂದದ್ದು ಕೇವಲ 16ಪೈಸೆ.
ಮಹಾರಾಷ್ಟ್ರ ಸರ್ಕಾರ ಬೆಳಗಾವಿ ಗಡಿಪ್ರದೇಶಕ್ಕೆ ಅತಿಕ್ರಮಣ ಮಾಡಿದರೂ ಮಧ್ಯೆ ಪ್ರವೇಶ ಮಾಡಲಿಲ್ಲ. ಇಂಥ ಡಬ್ಬಲ್ ಇಂಜಿನ್ ಸರ್ಕಾರ ಯಾಕೆ ಬೇಕಿದೆ?
ಪ್ರಧಾನಿ ನರೇಂದ್ರ ಮೋದಿಯವರು ಕನ್ನಡದ ಕೆಲವು ಶಬ್ದಗಳನ್ನು ತಪ್ಪುತಪ್ಪಾಗಿಯಾದರೂ ಆಡುತ್ತಿರುವುದು ಸ್ವಾಗತಾರ್ಹ. ಆದರೆ ಈ ನಾಟಕದ ಮಾತುಗಳಿಂದ ಕೇಂದ್ರ ಬಿಜೆಪಿ ಸರ್ಕಾರ ಕನ್ನಡಿಗರಿಗೆ ಮಾಡಿರುವ ಅನ್ಯಾಯವನ್ನು ಮುಚ್ಚಿಡಲಾಗದು. ನಿಜವಾದ ಕನ್ನಡಿಗನಾಗುವುದೆಂದರೆ ನಾಡಭಾಷೆ, ನಾಡಗೀತೆ ಮತ್ತು ನಾಡಧ್ವಜವನ್ನು ಒಪ್ಪಿಕೊಳ್ಳುವುದು. ಕರ್ನಾಟಕದ ನಾಡಧ್ವಜಕ್ಕೆ ಅಂಗೀಕಾರ ನೀಡಿ ನೀವು ನಿಜವಾದ ಕನ್ನಡಿಗರಾಗುವಿರಾ ಮೋದಿಯವರೇ?
ಭಯೋತ್ಪಾದನೆ ತಡೆಯಲು ಕಾಂಗ್ರೆಸ್ ಸರ್ಕಾರ ಸೋತಿತ್ತು ಎಂದು ಹೇಳಿರುವ ಪ್ರಧಾನಿ ಮೋದಿಯವರೇ,
ಭಯೋತ್ಪಾದನೆಯನ್ನು ದಿಟ್ಟತನದಿಂದ ಎದುರಿಸಿ ಹುತಾತ್ಮರಾದ ಇಬ್ಬರು ಪ್ರಧಾನಿಗಳು ಯಾವ ಪಕ್ಷದವರು ಎನ್ನುವುದನ್ನು ನಿಮ್ಮ ಆತ್ಮಸಾಕ್ಷಿಯನ್ನೊಮ್ಮೆ ಕೇಳಿ ನೋಡಿ, ಉತ್ತರ ಸಿಗಬಹುದು.
ಕಳೆದ ಕೆಲವು ದಿನಗಳಿಂದ ಇಡೀ ಮಣಿಪುರ ಹೊತ್ತಿ ಉರಿಯುತ್ತಿದೆ. ದೇಶದ ಪ್ರಧಾನಮಂತ್ರಿ ಮತ್ತು ಗೃಹಸಚಿವರು ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಮಾಡುತ್ತಾ ಆರಾಮಾಗಿದ್ದಾರೆ, “ರೋಮ್ ಹೊತ್ತಿ ಉರಿಯುವಾಗ ದೊರೆ ನೀರೊ ಪಿಟೀಲು ಬಾರಿಸುತ್ತಿದ್ದನಂತೆ”, ಹಾಗಾಯಿತು ನಿಮ್ಮ ಕತೆ. ಚೀನಾದ ಗಡಿ ಅತಿಕ್ರಮಣವನ್ನು ಹಿಮ್ಮೆಟ್ಟಿಸಲಾಗಲಿಲ್ಲ, ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ನಿಯಂತ್ರಿಸಿ ಶಾಂತಿ ಸ್ಥಾಪಿಸಲಾಗಲಿಲ್ಲ. ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡುವ ಯಾವ ನೈತಿಕತೆ ನಿಮಗಿದೆ ನರೇಂದ್ರ ಮೋದಿಯವರೇ?
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ಮಾದಕ ವಸ್ತುಗಳಿಗೆ ಕಡಿವಾಣ ; ಸ್ವಾಸ್ಥ್ಯ ಬದುಕಿಗೆ ಸೋಪಾನ
![](https://suddidina.com/wp-content/uploads/2024/06/Tobacco_suddidina.jpg)
- ಡಾ.ಗೀತಾ ಬಸವರಾಜು, ಉಪನ್ಯಾಸಕರು, ಎ.ವಿ.ಕೆ ಮಹಿಳಾ ಕಾಲೇಜು, ದಾವಣಗೆರೆ
ಜಗತ್ತಿನಲ್ಲಿರುವ 84 ಕೋಟಿ ಜೀವರಾಶಿಗಳಲ್ಲಿ ಮಾನವ ಶ್ರೇಷ್ಟ ಪ್ರಾಣಿ. ಏಕೆಂದರೆ ಮಾತನಾಡುವ, ಆಲೋಚಿಸುವ, ಭಾವನೆಗಳನ್ನು ಅಭಿವ್ಯಕ್ತಿಸುವ ವಿಶೇಷವಾದ ಸಾಮರ್ಥ್ಯ ಅವನಿಗಿದೆ.
ಈ ಶಕ್ತಿಯ ಮೂಲಕ ತುಂಬಾ ಶ್ರೇಷ್ಟನಾಗಬೇಕಾದ ಮಾನವ ನಗರೀಕರಣ, ಕೈಗಾರಿಕೀಕರಣ, ಪಾಶ್ಚಾತ್ಯೀಕರಣದ ಪ್ರಭಾವದಿಂದ ಪ್ರೇರಿತನಾಗಿ ಮೂಲ ಸಂಸ್ಕೃತಿಯನ್ನು ಮರೆತು ಮೃಗೀಯ ವರ್ತನೆಗೆ ದಾಸನಾಗಿದ್ದಾನೆ. ಪ್ರಸ್ತುತ ವೈಜ್ಞಾನಿಕವಾಗಿ, ತಾಂತ್ರಿಕವಾಗಿ ಎಷ್ಟೇ ಮುಂದುವರೆದಿದ್ದರೂ, 20ನೇ ಶತಮಾನದಿಂದೀಚೆಗೆ ಜಗತ್ತನ್ನೇ ತಲ್ಲಣಗೊಳಿಸುವ ಸಾಮಾಜಿಕ ಪಿಡುಗುಗಳಾದ ಬಡತನ, ಭಿಕ್ಷಾಟನೆ, ನಿರುದ್ಯೋಗ, ವರದಕ್ಷಿಣೆ, ಅಪರಾಧ ಮಾದಕ ವಸ್ತು ವ್ಯಸನವು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿವೆ.
ಈ ಸಮಸ್ಯೆಗಳನ್ನು ಪರಿಹರಿಸಬೇಕಾಧ ಯುವಜನತೆ ಇಂತಹ ದುಶ್ಚಟಗಳ ಸೆಲೆಯಲ್ಲಿ ಸಿಕ್ಕು ತಮ್ಮ ಅಮೂಲ್ಯ ಬದುಕನ್ನು ಹಾಳು ಮಾಡಿಕೊಳ್ಳುತ್ತಿರುವುದು ಆತಂಕಕಾರಿ.
ಯುವಶಕ್ತಿಯೇ ದೇಶದ ಶಕ್ತಿಯಾಗಿದ್ದು ಭವ್ಯಭಾರತ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಬೇಕಾದ ಯುವಜನತೆ ಮಾದಕ ವಸ್ತುಗಳ ದುಶ್ಚಟಕ್ಕೆ ಒಳಗಾಗಿ ಮಾನವೀಯ ಮೌಲ್ಯಗಳನ್ನು ಕಳೆದುಕೊಂಡು ಅಂಧಕಾರದಲ್ಲಿ ಜೀವನ ನಡೆಸುತ್ತ ಚಿಕ್ಕ ವಯಸ್ಸಿನಲ್ಲಿಯೇ ಮರಣ ಹೊಂದುತ್ತಿರುವುದು ಆಘಾತದ ವಿಷಯ.
ಜೋಸೆಫ್ ಜ್ಯೂಲಿಯನ್ ರವರ ಪ್ರಕಾರ ಮಾದಕ ವಸ್ತುಗಳೆಂದರೆ ಯಾವುದೇ ರಾಸಾಯನಿಕ ವಸ್ತುವಾಗಿದ್ದು ಅದರ ಸೇವನೆಯಿಂದ ದೈಹಿಕ ಕಾರ್ಯ, ಮನಸ್ಥಿತಿ, ಗ್ರಹಣ ಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ. ಇದನ್ನು ಪದೇ ಪದೇ ಬಳಸುವುದರಿಂದ ವ್ಯಕ್ತಿ ಮಾದಕ ವಸ್ತು ವ್ಯಸನಿಯಾಗುತ್ತಾನೆ. ಮಾದಕ ವಸ್ತುವು ಮನಸ್ಸಿಗೆ ಗೊಂದಲವನ್ನು ತರುವ ಪದಾರ್ಥವಾಗಿದ್ದು ಅಮಲು ರೋಗವಾಗಿದೆ. ಭಾರತದ ನಗರ ಪ್ರದೇಶಗಳಲ್ಲಷ್ಟೇ ಅಲ್ಲದೆ ಹಳ್ಳಿ ಹಳ್ಳಿಗಳಲ್ಲಿಯೂ ಇದರ ಬಳಕೆ ಕಂಡುಬರುತ್ತದೆ. ಶ್ರೀಮಂತರು, ಮಧ್ಯಮ ವರ್ಗದವರು, ವಿದ್ಯಾವಂತರು, ಯುವಕರು, ಮಹಿಳೆಯರು ಎಂಬ ಭೇದವಿಲ್ಲದೆ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಆರೋಗ್ಯವನ್ನು ಕಳೆದುಕೊಳ್ಳುತ್ತಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆಯವರು ನಡೆಸಿದ ಸಮೀಕ್ಷೆಯ ಪ್ರಕಾರ ಭಾರತದ ವಿದ್ಯಾರ್ಥಿಗಳಲ್ಲಿ ಶೇ 10 ರಷ್ಟು ಒಂದಿಲ್ಲೊAದು ದುಶ್ಚಟಕ್ಕೆ ಒಳಗಾಗಿದ್ದು ಅದರಲ್ಲಿ 14 ರಿಂದ 22 ರ ವಯೋಮಾನದವರು ಹೆಚ್ಚಿದ್ದಾರೆ. ಸ್ವಾತಂತ್ಯç ಪೂರ್ವದಲ್ಲಿ ಶೇ 2 ರಷ್ಟಿದ್ದ ವ್ಯಸನಿಗಳು ಪ್ರಸ್ತುತ ಶೇ 30 ಕ್ಕಿಂತ ಹೆಚ್ಚಿದ್ದಾರೆ. ಜಗತ್ತಿನ ಸುಮಾರು 20 ಕೋಟಿಯಷ್ಟು ಇರುವ ಮಾದಕ ವ್ಯಸನಿಗಳಲ್ಲಿ ಭಾರತದಲ್ಲಿ ಶೇ 7.5 ಕೋಟಿ ವ್ಯಸನಿಗಳಿದ್ದಾರೆಂದು ಅಂದಾಜಿಸಲಾಗಿದೆ.
ನಶೆಯ ಅಲೆ ಸಾವಿನ ಬಲೆಯಾಗುತ್ತಿದ್ದರೂ ಕೂಡ ಈ ದೇಶದಲ್ಲಿ ಊಟವಿಲ್ಲದೆ ಸಾಯುವವರ ಸಂಖ್ಯೆಗಿAತಲೂ ಚಟವನ್ನು ಬೆಳೆಸಿಕೊಂಡು ಸಾಯುವವರು ಹೆಚ್ಚಾಗಿದ್ದಾರೆ.
ಮಾದಕ ವಸ್ತು ಬಳಸುವ ಆತಂಕದ ರಾಷ್ಟçಗಳಲ್ಲಿ ಭಾರತ ಪ್ರಥಮ ಸ್ಥಾನದಲ್ಲಿದೆ. ಅಮಲು ಪದಾರ್ಥಗಳಿಗೆ ಬಲಿಯಾಗುತ್ತಿರುವವರಲ್ಲಿ ವಿದ್ಯಾರ್ಥಿಗಳನ್ನೂ ಒಳಗೊಂಡAತೆ ಯುವಜನತೆ ಹೆಚ್ಚಾಗಿದ್ದು ಇದು ದೇಶದ ಭವಿಷ್ಯಕ್ಕೆ ಮಾರಕವಾಗಿದೆ.
ದುಶ್ಚಟಗಳ ಆರಂಭಕ್ಕೆ ಕಾರಣಗಳು
• ಕ್ಷಣಕಾಲ ಸುಖ ಅನಂತಕಾಲ ದು:ಖಕ್ಕೆ ಕಾರಣ ಎನ್ನುವುದು ಗೊತ್ತಿದ್ದೂ ಅಫೀಮು, ಹೆರಾಯಿನ್, ಬೀಡಿ, ಸಿಗರೇಟು, ಮದ್ಯಪಾನ ಮುಂತಾದ ದುಶ್ಚಟಗಳಿಗೆ ವಿದ್ಯಾವಂತ ಯುವಕರೇ ಬಲಿಯಾಗುತ್ತಿದ್ದಾರೆ.
• ಉಲ್ಲಾಸಕ್ಕಾಗಿ, ಫ್ಯಾಷನ್ಗಾಗಿ, ದುರ್ಬಲ ಮನಸ್ಸು, ಏಕಾಂಗಿತನ, ಒತ್ತಡ ನಿವಾರಣೆ ಮಾಡಿಕೊಳ್ಳಲು
• ನೋವು, ದು:ಖಕ್ಕೆ ಪರಿಹಾರವೆಂಬ ಭ್ರಮೆಗೆ ಒಳಗಾಗಿ ತನಗೆ ಅರಿವಿಲ್ಲದಂತೆ ದೊಡ್ಡ ಕಂದಕಕ್ಕೆ ಬಿದ್ದು ನರಳಾಡುವಂತ ಸಂದರ್ಭ ತಂದುಕೊಂಡು ಮಾದಕ ವಸ್ತುಗಳ ಮಾಯಾಜಾಲಕ್ಕೆ ಒಳಗಾಗುತ್ತಿದ್ದಾರೆ. ತೆರಣಿಯ ಹುಳು ತಾನು ಸುತ್ತಿದ ಬಲೆಯಲ್ಲಿ ತಾನೇ ಬಿದ್ದು ಹೊರಳಾಡುವಂತೆ ಅವರ ಪರಿಸ್ಥಿತಿಯಾಗಿದೆ.
ದುಶ್ಚಟಗಳಿಂದಾಗುವ ಪರಿಣಾಮಗಳು
• ದೇಹ ಮತ್ತು ಮನಸ್ಸಿನ ಸಮತೋಲನ ಕಳೆದುಕೊಳ್ಳುವುದು.
• ವ್ಯಕ್ತಿ ತನ್ನನ್ನು ದಹಿಸಿಕೊಳ್ಳುವುದರ ಜೊತೆಗೆ ಕುಟುಂಬದ ನೆಮ್ಮದಿಗಿ ಭಂಗ ತರುತ್ತಾನೆ.
• ಕುಟುಂಬ, ಸಮಾಜದಿಂದ ನಿಂದನೆಗೆ ಒಳಗಾಗುವನು.
• ಜ್ಞಾನೇಂದ್ರಿಯಗಳ ಮೇಲೆ ಹತೋಟಿ ಕಳೆದುಕೊಳ್ಳುವನು
• ಸಮಾಜಬಾಹಿರ ಚಟುವಟಿಕೆಗಳಾದ ಕಳ್ಳತನ, ಅತ್ಯಾಚಾರ, ಕೊಲೆ ಇಂತಹ ದುಷ್ಕೃತ್ಯಗಳನ್ನು ಮಾಡುವನು.
• ದಾಂಪತ್ಯದಲ್ಲಿ ವಿರಸವುಂಟಾಗಿ ವಿಚ್ಚೇದನಗಳಾಗುವ ಸಾಧ್ಯತೆ.
• ರಸ್ತೆ ಅಪಘಾತಗಳಲ್ಲಿ ಶೇ 1/3 ರಷ್ಟು ಮದ್ಯಪಾನ ಮತ್ತು ಮಾದಕ ವಸ್ತು ಸೇವನೆಯಿಂದಾಗುತ್ತದೆ. ಈ ಹಿನ್ನೆಲೆಯಲ್ಲಿ ಮಹಾತ್ಮ ಗಾಂಧೀಜಿಯವರು ಬೆಂಕಿ ದೇಹವನ್ನು ನಾಶ ಮಾಡಿದರೆ ಕುಡಿತ ದೇಹ ಮತ್ತು ಆತ್ಮಗಳೆರಡನ್ನೂ ನಾಶ ಮಾಡುತ್ತದೆ ಎಂದಿದ್ದಾರೆ.
ಪರಿಹಾರ ಕ್ರಮಗಳು
• ಮಾದಕ ವಸ್ತುಗಳ ಹಿಡಿತಕ್ಕೆ ಸಿಲುಕದೆ ಅದರಿಂದ ದೂರವಿರುವುದು.
• ಮಾದಕ ವಸ್ತು ಸೇವಿಸುವುದಿಲ್ಲವೆಂದು ಪ್ರತಿಜ್ಞೆ ಮಾಡುವುದು.
• ಸಹೋದ್ಯೋಗಿ, ಸ್ನೇಹಿತರಿಗೆ ತಿಳುವಳಿಕೆ ನೀಡುವುದು.
• 18 ವರ್ಷ ವಯಸ್ಸಿನವರೆಗೂ ಪೋಷಕರು ಮಕ್ಕಳ ಬಗ್ಗೆ ಗಮನ ನೀಡಿ ಮಾರ್ಗದರ್ಶನ ಮಾಡುವುದು.
• ಶಾಲೆ ಕಾಲೇಜುಗಳಲ್ಲಿ ಶಿಕ್ಷಕರು ಮಕ್ಳಳಲ್ಲಿ ಜೀವನ ಕೌಶಲಗಳನ್ನು ಬೆಳೆಸುವ ರಾಯಭಾರಿಗಳಾಗಿ ಕಾರ್ಯನಿರ್ವಹಿಸುವುದು.
• ವಿದ್ಯಾರ್ಥಿಗಳನ್ನು ಸಹಪಠ್ಯ ಚಟುವಟಿಕೆಗಳಲ್ಲಿ ತೊಡಗಿಸಿ ಆರೋಗ್ಯಕರವಾದ ಹವ್ಯಾಸಗಳನ್ನು ಬೆಳೆಸುವುದು.
ಭಾರತ ಸರ್ಕಾರವು 1951ರಲ್ಲಿ ಅಪಾಯಕಾರಿ ವಸ್ತುಗಳ ಕಾಯ್ದೆಯನ್ನು ಜಾರಿಗೆ ತಂದಿತು. ಈ ಕಾಯ್ದೆ ಮಾದಕ ವಸ್ತು ತಯಾರಿಕೆ, ಸಾಗಾಣಿಕೆ, ಮಾರಾಟ ಮತ್ತು ಬಳಕೆಯ ಮೇಲೆ ನಿರ್ಬಂಧ ಹೇರಿದೆ. 1985 ರಲ್ಲಿ ಡ್ರಗ್ಸ್ ಆಕ್ಟ್ ಜಾರಿಗೊಳಿಸಿದೆ. ಈ ಕಾಯ್ದೆ ಮಾದಕ ವಸ್ತುಗಳ ಕಳ್ಳ ವ್ಯಾಪಾರದಲ್ಲಿ ತೊಡಗಿದ ಅಪರಾಧಿಗಳಿಗೆ ಕನಿಷ್ಠ 10 ರಿಂದ 20 ವರ್ಷ ಕಠಿಣ ಶಿಕ್ಷೆ, 1 ರಿಂದ 2 ಲಕ್ಷದವರೆಗೆ ದಂಡ ಘೋಷಿಸಿದೆ.
ಡಿಸೆಂಬರ್-7 1987 ರ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾದಕ ವಸ್ತುಗಳ ದುರ್ಬಳಕೆಯನ್ನು ತಡೆಗಟ್ಟುವ ನಿಯಮಾವಳಿಗಳ ಅಂಗೀಕಾರವನ್ನು ಹಲವಾರು ರಾಷ್ಟçಗಳು ಒಪ್ಪಿಕೊಂಡು ವಿಶ್ವದಾದ್ಯಂತ ಮಾದಕ ವಸ್ತುಗಳ ದುರ್ಬಳಕೆ ನಿಯಂತ್ರಿಸುವ ತೀರ್ಮಾನವನ್ನು ಮಾಡಿದವು.
ಜೂನ್-26 ವಿಶ್ವಸಂಸ್ಥೆಯು ಮಾದಕ ವಸ್ತು ದುರ್ಬಳಕೆ ಮತ್ತು ಕಳ್ಳಸಾಗಣೆ ವಿರುದ್ಧದ ಅಂತರರಾಷ್ಟ್ರೀಯ ದಿನವನ್ನು ಆಚರಿಸಿ ಈ ಸಮಸ್ಯೆಯ ನಿಯಂತ್ರಣ ಮತ್ತು ಪರಿಹಾರದ ಕುರಿತು ನಿವಾರಣೆಯಲ್ಲಿ ಸಮುದಾಯ, ಸಮವಯಸ್ಕರು, ಕುಟುಂಬ, ಸಂಘ ಸಂಸ್ಥೆಗಳವರು ಪ್ರಮುಖ ಪಾತ್ರ ವಹಿಸಬೇಕಾಗಿದೆಎಂದು ಮನವರಿಕೆ ಮಾಡಿತು. ಮಾದಕ ವಸ್ತು ದುರ್ಬಳಕೆ ಒಂದು ಮಾನಸಿಕ, ಸಾಮಾಜಿಕ ಸಮಸ್ಯೆಯಾಗಿದ್ದು ಇಡೀ ಸಮುದಾಯವೇ ಇದರ ನಿವಾರಣೋಪಾಯದಲ್ಲಿ ಪಾಲ್ಗೊಳ್ಳಬೇಕೆಂದು ಸೂಚಿಸಿತು.
ವ್ಯಕ್ತಿ ಒಮ್ಮೆ ಈ ಚಕ್ರವ್ಯೂಹದಲ್ಲಿ ಸಿಲುಕಿಕೊಂಡರೆ ಹೊರಬರುವುದು ಕಷ್ಟಸಾಧ್ಯ. ಆರೋಗ್ಯ ಜೀವನ ನಡೆಸಲು ಮಾದಕ ವಸ್ತುಗಳನ್ನು ತ್ಯಜಿಸಿ ಸುಂದರ ಜೀವನ ನಡೆಸಿ ಎಂಬ ಸಂದೇಶ ಸಾರುತ್ತ ನಾವೆಲ್ಲರೂ ಸಂಘಟಿತರಾಗಿ ಸಮಾಜದಲ್ಲಿ ಜಾಗೃತಿ ಮೂಡಿಸಿದಾಗ ದುಶ್ಚಟಮುಕ್ತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. (ಜೂನ್-26 ರಂದು ಅಂತರರಾಷ್ಟೀಯ ಮಾದಕ ವಸ್ತುಗಳ ದುರ್ಬಳಕೆ ವಿರೋಧಿ ದಿನ ತನ್ನಿಮಿತ್ತ ಈ ಲೇಖನ – ಡಾ. ಗೀತಾ ಬಸವರಾಜು,ಉಪನ್ಯಾಸಕರು,ಎ.ವಿ.ಕೆ ಮಹಿಳಾ ಕಾಲೇಜು,ದಾವಣಗೆರೆ)
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ನಿರುದ್ಯೋಗಿಗಳಿಗೆ ಸಿಹಿ ಸುದ್ದಿ
![](https://suddidina.com/wp-content/uploads/2024/06/job_news_suddidina.jpg)
ಸುದ್ದಿದಿನ,ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂ. 29 ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.
ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ :08182-255293/ 9108235132/8151093747/ 9482023412 ಗಳ ಮೂಲಕ ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ಟಿಇಟಿ ಪರೀಕ್ಷೆಗೆ ಸಕಲ ಸಿದ್ಧತೆ
![](https://suddidina.com/wp-content/uploads/2024/06/tet_exam_suddidina.jpg)
ಸುದ್ದಿದಿನ,ದಾವಣಗೆರೆ:ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಟಿಇಟಿ ಜೂನ್ 30 ರಂದು ರಾಜ್ಯಾದ್ಯಂತ ನಡೆಯಲಿದ್ದು ದಾವಣಗೆರೆ ನಗರದ 19 ಕೇಂದ್ರಗಳಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಟಿಇಟಿ ಪರೀಕ್ಷಾ ಪೂರ್ವ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಟಿಇಟಿ ಪರೀಕ್ಷೆಯನ್ನು ಯಾವುದೇ ಲೋಪ ದೋಷಗಳಿಗೆ ಅವಕಾಶ ಇಲ್ಲದಂತೆ ಪಾರದರ್ಶಕವಾಗಿ ನಡೆಸಬೇಕು. ಪರೀಕ್ಷಾ ಪಾವಿತ್ರ್ಯತೆ ಗೆ ಯಾವುದೇ ಧಕ್ಕೆಯಾಗದಂತೆ ನಡೆಸಲು ಕೇಂದ್ರದ ಅಧೀಕ್ಷಕರು ಗಳಿಗೆ ಸೂಚನೆ ನೀಡಿ ಕೇಂದ್ರದಲ್ಲಿ ಎಲ್ಲಾ ಮೂಲಭೂತ ಸೌಕರ್ಯ ಕಲ್ಪಿಸಲು ತಿಳಿಸಿದರು.
ಜೂನ್ 30 ಭಾನುವಾರ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ 11 ಕೇಂದ್ರಗಳಲ್ಲಿ 3805 ಮತ್ತು ಮಧ್ಯಾಹ್ನ 2 ರಿಂದ ಸಂಜೆ 4.30 ವರೆಗೆ 19 ಕೇಂದ್ರಗಳಲ್ಲಿ 6150 ಅಭ್ಯರ್ಥಿಗಳು ಪರೀಕ್ಷೆ ಬರೆಯುವರು.
144 ಸೆಕ್ಷನ್ ಜಾರಿ. ಪರೀಕ್ಷಾ ಅವ್ಯವಹಾರ ಹಾಗೂ ಸುಗಮ ಪರೀಕ್ಷೆಗಾಗಿ ಕೇಂದ್ರದ ಸುತ್ತಮುತ್ತ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಇರುತ್ತದೆ. ಕೇಂದ್ರದ ಸುತ್ತಮುತ್ತ ಜೆರಾಕ್ಸ್ ಅಂಗಡಿ, ಇಂಟರ್ ನೆಟ್ ಸೆಂಟರ್ ಮುಚ್ಚಲು ಆದೇಶಿಸಲಾಗುತ್ತದೆ. ಮತ್ತು ಪರೀಕ್ಷಾ ಕೇಂದ್ರದೊಳಗೆ ಯಾವುದೇ ಮೊಬೈಲ್, ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ತರುವಂತಿಲ್ಲ. ಕೇಂದ್ರದ ಪ್ರವೇಶಕ್ಕೂ ಮೊದಲು ತಪಾಸಣೆ ಮಾಡಿ ಪ್ರವೇಶ ನೀಡಬೇಕೆಂದು ಸೂಚಿಸಿದರು.
ಸಭೆಯಲ್ಲಿ ಜಿ.ಪಂ. ಉಪಕಾರ್ಯದರ್ಶಿ ಕೃಷ್ಣನಾಯ್ಕ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೊಟ್ರೇಶ್, ಡಯಟ್ ಪ್ರಾಂಶುಪಾಲರಾದ ಗೀತಾ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ಕ್ರೀಡೆ6 days ago
ಈ ಕ್ಷಣದ ಪ್ರಮುಖ ಸುದ್ದಿಗಳು
-
ದಿನದ ಸುದ್ದಿ7 days ago
ಗೃಹಲಕ್ಷ್ಮೀ ಹಣ ನಿಮ್ಮ ಖಾತೆಗೆ ಜಮಾ ಆಗಿಲ್ಲವೇ ? ಇವರನ್ನು ಸಂಪರ್ಕಿಸಿ
-
ದಿನದ ಸುದ್ದಿ6 days ago
ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ; 7ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೆ ಸಿಎಂಗೆ ಅಧಿಕಾರ
-
ದಿನದ ಸುದ್ದಿ7 days ago
ನಿನ್ನೆ ನಡೆದ NET ಪರೀಕ್ಷೆ ರದ್ದು..!
-
ದಿನದ ಸುದ್ದಿ5 days ago
JOB NEWS | ಜಲ ಜೀವನ್ ಮಿಷನ್ ; ಎಂಐಎಸ್ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯ ವೇತನ ; ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ವಿದ್ಯುತ್ ಮೋಟಾರ್ ರಿವೈಂಡಿಂಗ್ ತರಬೇತಿ ; ಸಂಪರ್ಕಿಸಿ
-
ದಿನದ ಸುದ್ದಿ6 days ago
ದಾವಣಗೆರೆಯಲ್ಲಿ ಹೊಸ ಕೆರೆಗಳ ನಿರ್ಮಾಣ : ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ