Connect with us

ದಿನದ ಸುದ್ದಿ

ಚುನಾವಣೆ ; ಜಿಲ್ಲೆಗಳ ಈ ಕೇಂದ್ರಗಳಲ್ಲಿ ಮತ ಎಣಿಕೆ ನಡಯಲಿದೆ

Published

on

ಸುದ್ದಿದಿನ ಡೆಸ್ಕ್ : ಕಳೆದ 10 ರಂದು ನಡೆದ ಕರ್ನಾಟಕ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಮತಗಳ ಎಣಿಕೆ ನಾಳೆ ಆರಂಭವಾಗಲಿದೆ.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ 34 ಕೇಂದ್ರಗಳಲ್ಲಿ ಏಕಕಾಲಕ್ಕೆ ಬೆಳಿಗ್ಗೆ 8 ಗಂಟೆಗೆ ಆರಂಭವಾಗಲಿದ್ದು, ಎಣಿಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ತಿಳಿಸಿದೆ.

ಎಲ್ಲ ಜಿಲ್ಲೆಗಳ ಜಿಲ್ಲಾ ಕೇಂದ್ರದಲ್ಲಿ ಮತಗಳ ಎಣಿಕೆ ನಡೆಯಲಿದೆ. ಬೆಳಗಾವಿಯಲ್ಲಿ ರಾಣಿ ಪಾರ್ವತಿ ದೇವಿ ಕಾಲೇಜ್‌ನಲ್ಲಿ ಮತ ಎಣಿಕೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ತಿಳಿಸಿದ್ದಾರೆ.

ಬಾಗಲಕೋಟೆಯಲ್ಲಿ ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ, ವಿಜಯಪುರ ಸೈನಿಕ ಶಾಲೆ ಆವರಣದಲ್ಲಿ ಮತ ಎಣಿಕೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಯಾದಗಿರಿಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಕಲಬುರಗಿಯಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಮತ ಎಣಿಕೆಗೆ ಸಿದ್ಧತೆ ಪೂರ್ಣಗೊಂಡಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಬೀದರ್‌ನ ಬಿವಿಬಿ ಕಾಲೇಜಿನಲ್ಲಿ, ರಾಯಚೂರಿನಲ್ಲಿ ಎಲ್‌ವಿಡಿ ಕಾಲೇಜ್ ಕ್ಯಾಂಪಸ್, ಕೊಪ್ಪಳದಲ್ಲಿ ಗವಿಸಿದ್ದೇಶ್ವರ ವಿಜ್ಞಾನ, ಕಲಾ ವಾಣಿಜ್ಯ ಕಾಲೇಜಿನಲ್ಲಿ ಹಾಗೂ ಗದಗ್‌ನಲ್ಲಿ ಜಗದ್ಗರ ತೊಂಟದಾರ್ಯ ಇಂಜಿನಿಯರಿಂಗ್ ಕಾಲೇಜ್, ಧಾರವಾಡದ ಕೃಷಿ ವಿಶ್ವವಿದ್ಯಾಲಯ, ಉತ್ತರ ಕನ್ನಡದ ಕುಮಟಾದ ಡಾ.ಎ.ವಿ.ಬಾಳಿಗಾ ಕಲಾ ಮತ್ತು ವಿಜ್ಞಾನ ಕಾಲೇಜು, ಹಾವೇರಿಯಲ್ಲಿ ದೇವಿಗಿರಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್, ವಿಜಯನಗರ ಜಿಲ್ಲೆಯ ಹೊಸಪೇಟೆ ಪ್ರೌಢದೇವರಾಜ ವಿಜ್ಞಾನ ಸಂಸ್ಥೆ, ಬಳ್ಳಾರಿ ರಾವ್ ಬಹದ್ದೂರಿ ಮಹಾಬಲೇಶ್ವರಪ್ಪ ಇಂಜಿನಿಯರಿಂಗ್ ಕಾಲೇಜ್, ಚಿತ್ರದುರ್ಗದ ಸರ್ಕಾರಿ ವಿಜ್ಞಾನದ ನೂತನ ಕಟ್ಟಡದಲ್ಲಿ, ದಾವಣಗೆರೆಯ ಶಿವಗಂಗೋತ್ರಿ ದಾವಣೆಗೆರೆ ವಿಶ್ವವಿದ್ಯಾಲಯ, ಶಿವಮೊಗ್ಗದ ಸಹ್ಯಾದ್ರಿ ಕಲಾ ಕಾಲೇಜು, ಉಡುಪಿಯ ಬ್ರಹ್ಮಗಿರಿಯ ಸಮೂಹ ಸಂಸ್ಥೆಯಲ್ಲಿ, ಚಿಕ್ಕಮಗಳೂರು ಇಂದಾವರ ದೊಡ್ಡ ಸಿದ್ದಲಿಂಗೇಗೌಡ ಕಾಲೇಜ್, ತುಮಕೂರಿನ ಬಿ.ಎಚ್.ರಸ್ತೆಯಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್, ತುಮಕೂರು ವಿಶ್ವವಿದ್ಯಾಲಯದ ವಿಜ್ಞಾನ ಕಾಲೇಜು ಹಾಗೂ ತುಮಕೂರು ವಿಶ್ವವಿದ್ಯಾಲಯದ ಕಲಾ ಕಾಲೇಜಿನಲ್ಲಿ ಮತಗಳ ಎಣಿಕೆ ನಡೆಯಲಿದೆ.

ಚಿಕ್ಕಬಳ್ಳಾಪುರದ ಪ್ರಥಮ ದರ್ಜೆ ಸರ್ಕಾರಿ ಕಾಲೇಜಿನಲ್ಲಿ, ಕೋಲಾರದ ಸರ್ಕಾರಿ ವಿದ್ಯಾರ್ಥಿಗಳ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಮೂರು ಕಡೆ ಮತಗಳ ಎಣಿಕೆ ನಡೆಯಲಿದೆ. ಬಸವನಗುಡಿಯಲ್ಲಿ ಬಿಎಂಎಸ್ ಮಹಿಳಾ ಕಾಲೇಜು, ಮೌಂಟ್ ಕಾರ್ಮಲ್ ಕಾಲೇಜ್, ಎಸ್‌ಎಸ್‌ಆರ್‌ಎಂವಿ ಪಿಯು ಕಾಲೇಜು, ಬೆಂಗಳೂರು ನಗರ ಜಿಲ್ಲೆಯ ಮತಗಳ ಎಣಿಕೆ ಸೆಂಜೊಸೆಫ್ ಇಂಡಿಯನ್ ಹೈಸ್ಕೂಲ್, ಬೆಂಗಳೂರು ಗ್ರಾಮಾಂತರ ಮತಗಳ ಎಣಿಕೆ ದೇವನಹಳ್ಳಿ ಪಟ್ಟಣದ ಆಕಾಶ್ ಇಂಟರ್ ನ್ಯಾಷನಲ್ ಸ್ಕೂಲ್‌ನಲ್ಲಿ ನಡೆಯಲಿದೆ.

ರಾಮನಗರ ಜಿಲ್ಲೆಯ ಮತಗಳ ಎಣಿಕೆ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್ ರಾಮನಗರದಲ್ಲಿ ನಡೆಯಲಿದೆ. ಮಂಡ್ಯದ ಮತಗಳ ಎಣಿಕೆ ಮಂಡ್ಯ ವಿಶ್ವವಿದ್ಯಾಲಯ, ಹಾಸನದ ಮತಗಳ ಎಣಿಕೆ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್ ಹಾಸನ್, ದಕ್ಷಿಣ ಕನ್ನಡ ಮತಗಳ ಎಣಿಕೆ ಸೂರತ್ಕಲ್‌ನ ನ್ಯಾಷನಲ್ ಇನ್ಸೂಟೂಟ್ ಆಫ್ ಟೆಕ್ನಾಲಜಿಯಲ್ಲಿ, ಕೊಡಗಿನಲ್ಲಿ ಸೆಂಜೊಸೆಫ್ ಕಾಲೇಜಿನಲ್ಲಿ ಹಾಗೂ ಮೈಸೂರಿನ ಮಹಾರಾಣಿ ಮಹಿಳಾ ವಾಣಿಜ್ಯ ಕಾಲೇಜಿನಲ್ಲಿ ಹಾಗೂ ಚಾಮರಾಜನಗರದ ಎಣಿಕೆ ಬಿದರಾಪುರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮತಗಳ ಎಣಿಕೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಚುನಾವಣಾ ಫಲಿತಾಂಶವನ್ನು https://results.eci.gov.in/
ವೀಕ್ಷಿಸಬಹುದು. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಎಲ್ಲ ಮತ ಯಂತ್ರಗಳನ್ನು ಭದ್ರವಾಗಿ ಇಡಲಾಗಿದ್ದು, ಸ್ಟ್ರಾಂಗ್ ರೂಂಗಳಲ್ಲಿ 3 ಹಂತದ ಭದ್ರತೆಯನ್ನು ಏರ್ಪಡಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಎಲ್ಲಾ ಜಿಲ್ಲೆಗಳ ಚುನಾವಣಾಧಿಕಾರಿಗಳು ಸ್ಟ್ರಾಂಗ್ ರೂಂ ಕೇಂದ್ರಗಳಿಗೆ ಭೇಟಿ ನೀಡಿ ಸುರಕ್ಷತೆಯನ್ನು ಪರಿಶೀಲಿಸಿದರು. ನಾಳೆ 34 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದ್ದು, ನಾಳೆಯೇ ಫಲಿತಾಂಶ ಹೊರಬೀಳುವ ನಿರೀಕ್ಷೆ ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಾಳೆ ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆ ಅಣುಕು ಅಭ್ಯಾಸ

Published

on

ಸುದ್ದಿದಿನ, ಹರಿಹರ :ಇದೇ 14 ರಂದು ಗುರುವಾರ (ನಾಳೆ) ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆಯ ಅಣುಕು ಅಭ್ಯಾಸವನ್ನು ಬೆಳಗ್ಗೆ 8:30 ಕ್ಕೆ ನಡೆಸಲಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್‌ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳ ಸಮನ್ವಯದಲ್ಲಿ ಅಣಕು ಅಭ್ಯಾಸವು ನಡೆಸಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು

Published

on

ಸುದ್ದಿದಿನಡೆಸ್ಕ್:ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ (47) ಅವರ ಅಕಾಲಿಕ ನಿಧನವು ಇಡೀ ಸ್ಯಾಂಡಲ್‌ವುಡ್ ಅನ್ನು ದಿಗ್ಭ್ರಮೆಗೊಳಿಸಿದೆ. ಕೇವಲ 47 ವರ್ಷ ವಯಸ್ಸಿನ ಈ ಪ್ರತಿಭಾನ್ವಿತ ಕಲಾವಿದ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಆದರೆ ಅವರ ಈ ಸಾವಿನ ಹಿಂದೆ ಒಂದು ಬೇಸರದ ಸಂಗತಿಯೂ ಅಡಗಿದೆ, ಅದೇನೆಂದರೆ ಅವರ ಆರೋಗ್ಯದ ಕುರಿತು ತೋರಿದ ಒಂದು ನಿರ್ಲಕ್ಷ್ಯ!

ನಟ ನಿರ್ಮಾಪಕ ದಿಲೀಪ್ ರಾಜ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಇಡೀ ಸ್ಯಾಂಡಲ್‌ವುಡ್ ದಿಗ್ಭ್ರಮೆಗೊಂಡಿದೆ. ಕೆಲವು ದಿನಗಳ ಹಿಂದೆ ಗೋವಾ ಪ್ರವಾಸದಲ್ಲಿದ್ದಾಗಲೇ ಅವರಿಗೆ ಆಗಾಗ ಎದೆನೋವು ಕಾಣಿಸಿಕೊಂಡಿತ್ತು, ಆದರೆ ಪ್ರವಾಸದ ಖುಷಿಯಲ್ಲಿದ್ದ ಅವರು ಅದನ್ನ ಗಂಭೀರವಾಗಿ ಪರಿಗಣಿಸಿರಲಿಲ್ಲ.. ಬೆಂಗಳೂರಿಗೆ ಮರಳಿದ ನಂತರ ಇಂದು ವೈದ್ಯಕೀಯ ತಪಾಸಣೆಗೆ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು;

ತಪಾಸಣೆಗೆ ಹೋಗುವ ಮುನ್ನವೇ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡು ಕುಮಾರಸ್ವಾಮಿ ಲೇಔಟ್‌ನ ಅಪೋಲೋ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ನೋವು ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಗೆ ದಾಖಲಾಗಿದ್ದರೆ ಇಂದು ಪರಿಸ್ಥಿತಿ ಬೇರೆಯೇ ಇರುತ್ತಿತ್ತು ಎಂದು ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ.
ನಟ ದಿಲೀಪ್ ರಾಜ್ ಅವರು ಕೆಲವೇ ದಿನಗಳ ಹಿಂದೆ ಗೋವಾಗೆ ಪ್ರವಾಸ ತೆರಳಿದ್ದರು.

ಅಲ್ಲಿ ಗೆಳೆಯರೊಂದಿಗೆ ಕಾಲ ಕಳೆಯುವಾಗಲೇ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು ಎನ್ನಲಾಗುತ್ತಿದೆ. ಅಂದೇ ಹೃದಯವು ಅಪಾಯದ ಮುನ್ಸೂಚನೆ ನೀಡಿದ್ದರೂ, ದಿಲೀಪ್ ಅವರು ಅದನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ತೋರಿದ್ದರು. ಗೋವಾ ಟ್ರಿಪ್‌ನಲ್ಲಿದ್ದಾಗಲೇ ಆಗಾಗ ನೋವು ಕಾಣಿಸಿಕೊಂಡರೂ, ಅವರು ಅದನ್ನು ಕೇರ್ ಮಾಡಿರಲಿಲ್ಲ.

ಬೆಂಗಳೂರಿಗೆ ಮರಳಿದ ನಂತರ ಅವರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ನಿರ್ಧರಿಸಿದ್ದರು. ವಿಪರ್ಯಾಸವೆಂದರೆ, ಇಂದು ಅವರು ಆಸ್ಪತ್ರೆಗೆ ತೆರಳಿ ಹೃದಯ ತಪಾಸಣೆ ಮಾಡಿಸಿಕೊಳ್ಳಬೇಕಿತ್ತು ಮತ್ತು ಅದಕ್ಕಾಗಿ ವೈದ್ಯರ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು. ನಿನ್ನೆ ರಾತ್ರಿ ಕೂಡ ಧಾರಾವಾಹಿ ಕಲಾವಿದರ ಜೊತೆ ಫೋನ್‌ನಲ್ಲಿ ಆತ್ಮೀಯವಾಗಿ ಮಾತನಾಡಿದ್ದ ನಟನಿಗೆ, ಮಧ್ಯರಾತ್ರಿ ತೀವ್ರವಾದ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳುವ ಮುನ್ನವೇ ಅವರು ಏಕಾಏಕಿ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!

Published

on

ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.

ನಡೆದಿದ್ದೇನು?

ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.

ಡೆತ್ ನೋಟ್‌ನಲ್ಲಿತ್ತು ಕೊನೆಯ ಆಸೆ

ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.

ತಮಿಳುನಾಡಿನಲ್ಲಿ ಅಂತ್ಯಕ್ರಿಯೆ

ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.

ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending