ದಿನದ ಸುದ್ದಿ
ಚುನಾವಣೆ | ದಾವಣಗೆರೆ ಜಿಲ್ಲೆಯ ಕ್ಷೇತ್ರವಾರು ಕಂಪ್ಲೀಟ್ ಡೀಟೆಲ್ಸ್
ಸುದ್ದಿದಿನ,ದಾವಣಗೆರೆ : ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ದಾವಣಗೆರೆ ಜಿಲ್ಲೆಯ7 ಕ್ಷೇತ್ರಗಳಿಂದ 6 ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹಾಗೂ ಒಬ್ಬರು ಬಿಜೆಪಿಯಿಂದ ಜಯ ಗಳಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ.
ಜಯಗಳಿಸಿದವರಲ್ಲಿ ಜಗಳೂರು ಕ್ಷೇತ್ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಿ.ದೇವೇಂದ್ರಪ್ಪ, ಹರಿಹರ ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ಪಿ.ಹರೀಶ್, ದಾವಣಗೆರೆ ಉತ್ತರ ಕಾಂಗ್ರೆಸ್ ಪಕ್ಷದ ಎಸ್.ಎಸ್.ಮಲ್ಲಿಕಾರ್ಜುನ್, ದಾವಣಗೆರೆ ದಕ್ಷಿಣ ಕಾಂಗ್ರೆಸ್ ಪಕ್ಷದ ಶಾಮನೂರು ಶಿವಶಂಕರಪ್ಪ, ಮಾಯಕೊಂಡ ಕಾಂಗ್ರೆಸ್ ಪಕ್ಷದ ಕೆ.ಎಸ್.ಬಸವಂತಪ್ಪ, ಚನ್ನಗಿರಿ ಕಾಂಗ್ರೆಸ್ ಪಕ್ಷದ ಬಸವರಾಜು ವಿ.ಶಿವಗಂಗ, ಹೊನ್ನಾಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಡಿ.ಜಿ.ಶಾಂತನಗೌಡ ಇವರು ಜಯಗಳಿಸಿದ್ದಾರೆ.
ಕ್ಷೇತ್ರವಾರು ವಿವರ ; ಜಗಳೂರು
ಮಲ್ಲಾಪುರ ದೇವರಾಜ ಜೆಡಿಎಸ್1972, ಬಿ.ದೇವೇಂದ್ರಪ್ಪ ಕಾಂಗ್ರೆಸ್50765, ಎಸ್.ವಿ.ರಾಮಚಂದ್ರ ಬಿಜೆಪಿ 49891, ಜಿ.ಸ್ವಾಮಿ ಸಮಾಜವಾದಿ ಪಾರ್ಟಿ 367, ಪಕ್ಷೇತರರಾದ ಪಿ.ಅಜ್ಜಯ್ಯ 149, ಡಿ.ತಿಪ್ಪೇಸ್ವಾಮಿ114, ದಿವಾಕರ ಓ 93, ನಾಗರಾಜ.ಎಂ 140, ಭೀಮಪ್ಪ ಜಿ.ಎನ್ 869, ರಾಘವೇಂದ್ರ ಕೆ.ಆರ್685ಹಾಗೂ ಹೆಚ್.ಪಿ.ರಾಜೇಶ್ 49442ಮತಗಳನ್ನು ಪಡೆದಿದ್ದು ಕಾಂಗ್ರೆಸ್ ಪಕ್ಷದ ಬಿ.ದೇವೇಂದ್ರಪ್ಪ ಜಯಗಳಿಸಿದ್ದು ಸಮೀಪದ ಸ್ಪರ್ಧಿ ಬಿ.ಜೆ.ಪಿ.ಯ ಎಸ್.ವಿ.ರಾಮಚಂದ್ರಗಿಂತ 874 ಮತಗಳನ್ನು ಹೆಚ್ಚಿಗೆ ಪಡೆದಿದ್ದಾರೆ.
ಹರಿಹರ
ಬಿ.ಪಿ.ಹರೀಶ್ ಬಿಜೆಪಿ 63924, ಶ್ರೀನಿವಾಸ್ ಎನ್.ಹೆಚ್. (ನಂದಿಗಾವಿ) ಕಾಂಗ್ರೆಸ್59620, ಹೆಚ್.ಎಸ್.ಶಿವಶಂಕರ್ ಜೆಡಿಎಸ್ 40580, ಗಣೇಶಪ್ಪ ಕೆ.ದುರ್ಗದ ಆಮ್ ಅದ್ಮಿ ಪಾರ್ಟಿ 1488, ಕೃಷ್ಣ.ಎಂ ಉತ್ತಮ ಪ್ರಜಾಕೀಯ ಪಾರ್ಟಿ 697 , ಡಿ.ಹನುಮಂತಪ್ಪ ಬಹುಜನ ಸಮಾಜ ಪಾರ್ಟಿ592 , ಪಕ್ಷೇತರರಾದ ಮೂರ್ತಿ ಹೆಚ್.ಕೆ. 360, ಪರಶುರಾಮ ಎಂ. 226, ಜಯಕುಮಾರ ಟಿ.ಹೆಚ್.191, ಬಿ.ಎಸ್. ಉಜ್ಜನಪ್ಪ 140, ಸಂಕೇತ್ರಾಜ್ ಎಸ್ 98 ಮತಗಳನ್ನು ಪಡೆದಿದ್ದಾರೆ. ಇದರಲ್ಲಿ ಬಿಜೆಪಿ ಬಿ.ಪಿ.ಹರೀಶ್ ಇವರು ಜಯಗಳಿಸಿದ್ದು ಸಮೀಪದ ಸ್ಪರ್ಧಿ ಕಾಂಗ್ರೆಸ್ನ ಶ್ರೀನಿವಾಸ್ ಎನ್.ಹೆಚ್. ಇವರಿಗಿಂತ 4304 ಮತಗಳ ಅಂತರದಲ್ಲಿ ಜಯಗಳಿಸಿರುವರು.
ದಾವಣಗೆರೆ ಉತ್ತರ
ಲೋಕಿಕೆರೆ ನಾಗರಾಜ್ ಬಿಜೆಪಿ 69547, ಎಸ್.ಎಸ್.ಮಲ್ಲಿಕಾರ್ಜುನ್ ಕಾಂಗ್ರೆಸ್ 94019, ಬಾತಿ ಶಂಕರ್ ಜೆಡಿಎಸ್ 935 , ಶೀಧರ್ ಪಾಟೀಲ್.ಸಿ ಆಮ್ ಆದ್ಮಿ ಪಾರ್ಟಿ 391,ಚಂದ್ರಶೇಖರ.ಬಿ ಉತ್ತಮ ಪ್ರಜಾಕೀಯ ಪಾರ್ಟಿ1143, ಕೆ.ಮಲ್ಲಣ್ಣ ಕರ್ನಾಟಕ ರಾಷ್ಟç ಸಮಿತಿ 139, ಸುರ್ಜಿತ್.ಜಿ ಸಂಯುಕ್ತ ವಿಕಾಸ್ ಪಾರ್ಟಿ49, ಪಕ್ಷೇತರರಾದ ಕೀರ್ತಿಕುಮಾರ್.ಕೆ.ಎಸ್68, ಮಲ್ಲಿಕಾರ್ಜುನಪ್ಪ.ಕೆ.ಎಂ 108, ಮಹಮ್ಮದ್ ಹಯಾತ್.ಎಮ್ 80, ಇಡ್ಲಿ ಮಂಜು125 , ರುದ್ರೇಶ್ ಗೌಡ 87, ಎಂ.ಜಿ.ಶ್ರೀಕಾಂತ್ 281 ಮತಗಳನ್ನು ಪಡೆದಿರುವರು. ಕಾಂಗ್ರೆಸ್ ಪಕ್ಷದ ಎಸ್.ಎಸ್.ಮಲ್ಲಿಕಾರ್ಜುನ್ ಇವರು ಸಮೀಪದ ಸ್ಪರ್ಧಿ ಬಿಜೆಪಿಯ ಲೋಕಿಕೆರೆ ನಾಗರಾಜ್ಗಿಂತ 24472ಮತಗಳನ್ನು ಹೆಚ್ಚಿಗೆ ಪಡೆದು ಜಯಗಳಿಸಿದ್ದಾರೆ.
ದಾವಣಗೆರೆ ದಕ್ಷಿಣ
ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್ 84298, ಅಜಯ್ ಕುಮಾರ್ ಬಿ.ಜಿ. ಭಾರತೀಯ ಜನತಾ ಪಾರ್ಟಿ56410 , ಇಸ್ಮಾಯಿಲ್ ಜಬೀವುಲ್ಲಾ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ 1311, ಅಮಾನುಲ್ಲಾಖಾನ್. ಜೆ ಜೆಡಿಎಸ್ 1296, ಸಾಜಿದ್ ಆಮ್ ಆದ್ಮಿ ಪಾರ್ಟಿ 562, ಈಶ್ವರ ಉತ್ತಮ ಪ್ರಜಾಕೀಯ ಪಾರ್ಟಿ522 , ಮಹಮದ್ ಖಲೀಮ್ ಬಿಎಸ್ಪಿ 293, ಗೌಸ್ಪೀರ್ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ 221, ಭಾರತಿ.ಕೆ ಸೋಷಿಯಲಿಸ್ ಯುನಿಟಿ ಸೆಂಟರ್ ಆಫ್ ಇಂಡಿಯಾ 121, ಹೆಚ್.ಕೆ.ದಾವಲ್ ಸಾಬ್ ಕರ್ನಾಟಕ ರಾಷ್ಟ್ರ ಸಮಿತಿ 57, ಪಕ್ಷೇತರರಾದ ಬಿ.ರಾಜಶೇಖರ್233 , ಶೇಕ್ ಅಹಮದ್ 164, ನೌಶಿನ್ತಾಜ್ 101, ಜಿ.ಆರ್.ಶಿವಕುಮಾರ ಸ್ವಾಮಿ 72, ಈರಣ್ಣ 66 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಪಕ್ಷದ ಶಾಮನೂರು ಶಿವಶಂಕರಪ್ಪ ಇವರು ಸಮೀಪದ ಸ್ಪರ್ಧಿ ಬಿಜೆಪಿಯ ಅಜಯ್ ಕುಮಾರ್ ಬಿಜಿ ಇವರಿಗಿಂತ 27888 ಮತಗಳನ್ನು ಪಡೆದು ಜಯಗಳಿಸಿದ್ದಾರೆ.
ಮಾಯಕೊಂಡ
ಆನಂದಪ್ಪ.ಹೆಚ್ ಜೆಡಿಎಸ್12857, ಪ್ರೊ.ಧರ್ಮಾನಾಯ್ಕ ಎಸ್. ಆಮ್ ಆದ್ಮಿ ಪಾರ್ಟಿ 512, ಕೆ.ಎಸ್.ಬಸವಂತಪ್ಪ ಕಾಂಗ್ರೆಸ್ 70346 , ಎಂ.ಬಸವರಾಜ ನಾಯ್ಕ ಬಿಜೆಪಿ 34248, ಅಜ್ಜಪ್ಪ.ಎನ್ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯ 445, ಚೇತನ್ಕುಮಾರ್ ನಾಯ್ಕ.ಕೆ ಉತ್ತಮ ರಾಜಕೀಯ ಪಕ್ಷ 1226, ಎನ್.ಶಾಂತಬಾಯಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ 223, ಸೋಮಶೇಖರ.ಬಿ ಅಡ್ವಕೇಟ್ ಕರ್ನಾಟಕ ರಾಷ್ಟ್ರ ಸಮಿತಿ 210, ಪಕ್ಷೇತರರಾದ ಎ.ಕೆ. ಗಣೇಶ್ 609, ಬಿ.ಎಂ.ಪುಷ್ಪ. ವಾಗೀಶಸ್ವಾಮಿ37431, ಮಂಜು ಮಾದಿಗ 192, ಲೋಕೇಶ್.ಪಿ.ಡಿ 586 , ಪಿ.ಆರ್.ಶ್ರೀನಿವಾಸ್ 438, ಸವಿತಾಬಾಯಿ ಮಲ್ಲೇಶನಾಯ್ಕ 532 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಪಕ್ಷದ ಕೆ.ಎಸ್.ಬಸವಂತಪ್ಪ ಇವರು ಸಮೀಪ ಸ್ಪರ್ಧಿ ಪಕ್ಷೇತರರಾದ ಬಿ.ಎಂ.ಪುಷ್ಪ ವಾಗೀಶಸ್ವಾಮಿ ಇವರಿಗಿಂತ 32915 ಹೆಚ್ಚಿನ ಮತಗಳನ್ನು ಪಡೆದು ಜಯಗಳಿಸಿದ್ದಾರೆ.
ಚನ್ನಗಿರಿ
ಆದಿಲ್ ಖಾನ್ ಎಸ್.ಕೆ. ಆಮ್ ಆದ್ಮಿ ಪಾರ್ಟಿ245 , ತೇಜಸ್ವಿ ವಿ.ಪಟೇಲ್ ಜೆಡಿಎಸ್ 1216, ಪ್ರವೀಣ.ಹೆಚ್ ಬಿಎಸ್ಪಿ 523, ಬಸವರಾಜು ವಿ.ಶಿವಗಂಗ ಕಾಂಗ್ರೆಸ್ 78263, ಹೆಚ್. ಎಸ್.ಶಿವಕುಮಾರ್ ಬಿಜೆಪಿ 21467, ಚಂದ್ರಶೇಖರ ಚನ್ನಗಿರಿ ಉತ್ತಮ ಪ್ರಜಾಕೀಯ ಪಾರ್ಟಿ1017 , ದೋಣಿಹಳ್ಳಿ ಮಂಜುನಾಥಗೌಡ್ರು ಕರ್ನಾಟಕ ರಾಷ್ಟç ಸಮಿತಿ 197, ಎಂ.ರೂಪ ಕಗತೂರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ 183, ಪಕ್ಷೇತರರಾದ ಕುಬೇಂದ್ರಸ್ವಾಮಿ.ಟಿ 437, ಮಾಡಾಳು ಮಲ್ಲಿಕಾರ್ಜುನ 61828, ಹರೀಶ್ ಹಳ್ಳಿ 470 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಪಕ್ಷದ ಬಸವರಾಜು ವಿ.ಶಿವಗಂಗ ಇವರು ಸಮೀಪದ ಪಕ್ಷೇತರ ಅಭ್ಯರ್ಥಿ ಮಾಡಾಳು ಮಲ್ಲಿಕಾರ್ಜುನ್ ಇವರಿಗಿಂತ 16435 ಹೆಚ್ಚಿನ ಮತಗಳನ್ನು ಪಡೆದು ಜಯಗಳಿಸಿದ್ದಾರೆ.
ಹೊನ್ನಾಳಿ
ಡಿ.ಜಿ.ಶಾಂತನಗೌಡ ಕಾಂಗ್ರೆಸ್ 92392, ಎಂ.ಪಿ.ರೇಣುಕಾಚಾರ್ಯ ಬಿಜೆಪಿ 75832, ಗಣೇಶ ಬಿ.ಎ. ಉತ್ತಮ ಪ್ರಜಾಕೀಯ ಪಾರ್ಟಿ 945, ಕುಂಕೋವ ಕೃಷ್ಣಪ್ಪ ಬಿಎಸ್ಪಿ 349, ನರಸಿಂಹಪ್ಪ. ಕೆ ಆಮ್ ಆದ್ಮಿ 234, ಹನುಮಂತಪ್ಪ ಸೊರಟೂರು ಕರ್ನಾಟಕ ರಾಷ್ಟ್ರ ಸಮಿತಿ 146, ಪಕ್ಷೇತರರಾದ ವಾಸಪ್ಪ.ಎಂ 254, ದೊಡ್ಡೆತ್ತಿನಹಳ್ಳಿ ಚಂದ್ರಶೇಖರಪ್ಪ 236, ಲಕ್ಷ್ಮೀಕಾಂತ ಹೆಚ್.ಟಿ 176 ಮತಗಳನ್ನು ಪಡೆದಿರುವರು. ಕಾಂಗ್ರೆಸ್ ಪಕ್ಷದ ಡಿ.ಜಿ.ಶಾಂತನಗೌಡ ಇವರು ಸಮೀಪದ ಸ್ಪರ್ಧಿ ಬಿಜೆಪಿಯ ರೇಣುಕಾಚಾರ್ಯ ಇವರಿಗಿಂತ 17560 ಮತಗಳನ್ನು ಹೆಚ್ಚಿಗೆ ಪಡೆದು ಜಯಗಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ
ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.
ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.
ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು
ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.
ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.
ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.
ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ
ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.
ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.
ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.
“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”
ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ದಿನದ ಸುದ್ದಿ
ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.
ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.
ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.
ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.
“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.
ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.
ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.
ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ5 days agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ6 days agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
-
ದಿನದ ಸುದ್ದಿ7 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
-
ದಿನದ ಸುದ್ದಿ19 hours agoಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ

