ದಿನದ ಸುದ್ದಿ
ಅಂತಃಕರಣೆಯ ಹುಡುಕುತ್ತಾ..
- ಬಿ.ಶ್ರೀನಿವಾಸ
ಒಂದು ಊರಿನ ಮೌನ ಅರ್ಥವಾಗಬೇಕಾದರೆ, ದುಃಖ ಅರ್ಥವಾಗಬೇಕಾದರೆ ನಾವು ಏನನ್ನು ಮಾಡಬೇಕು? ನಾವು ಹೇಗೆ ಬದುಕಬೇಕು? ಗಾಯಗೊಂಡ ಬೆಟ್ಟ-ಗುಡ್ಡ ,ನದಿ ತೊರೆಗಳ ಬತ್ತಿಹೋದ ನೆಲದ ಕಣ್ಣಿಂದ ಪ್ರಾಣಿ-ಪಕ್ಷಿಗಳ ಆ ದೈನೇಸಿ ನೋಟಗಳಿಂದ ತಪ್ಪಿಸಿಕೊಳ್ಳುವುದಾದರೂ ಹೇಗೆ? ಪ್ರೀತಿ ,ಸಹಾನುಭೂತಿ ಗಳನ್ನು ಕಳೆದುಕೊಂಡವರು ಮಾತ್ರ ನಮ್ಮ ಸುತ್ತಮುತ್ತಲ ಬದುಕು ನರಕ ಸದೃಶವಾಗಿದ್ದರೂ ನೆಮ್ಮದಿಯಿಂದ ಉಣ್ಣ ಬಲ್ಲರು. ನಿದ್ರಿಸಬಲ್ಲರು, ಬರೆಯಬಲ್ಲರು.
ಬಳ್ಳಾರಿ ಜಿಲ್ಲೆಯ ಸೊಂಡೂರು ಮತ್ತು ಸುತ್ತಮುತ್ತಲಿನ ಪ್ರದೇಶದ ಬಹುತೇಕ ಹಳ್ಳಿಗಳು ರೋಗಗ್ರಸ್ತ ಪೀಡಿತರಂತೆ ಕಾಣುತ್ತಿವೆ .ಕಳೆದ ದಶಕದ ಅವಧಿಯೊಂದರಲ್ಲಿ ನಡೆದ ಗಣಿಗಾರಿಕೆಯಿಂದಾಗಿ ಇಡೀ ಪ್ರದೇಶ ಶಾಶ್ವತ ಬರಪೀಡಿತ ಪ್ರದೇಶವಾಗಿ ಬಿಟ್ಟಿದೆ. ಅದಿರು ಸಾಗಾಣಿಕೆಯ ಹೆಚ್ಚಳದಿಂದಾಗಿ ಕಾರ್ಬನ್ ಡೈಯಾಕ್ಸೈಡ್ ಆಸ್ಫೋಟಿಸಿದೆ. ಅಪರೂಪದ ಗಿಡ-ಮರಗಳು, ಪಕ್ಷಿಗಳು ,ಅಳಿವಿನಂಚಿಗೆ ತಳ್ಳಲ್ಪಟ್ಟಿವೆ.
ಶಾಲೆಗಳು ಮಕ್ಕಳಿಲ್ಲದೆ ಮುಚ್ಚಲ್ಪಟ್ಟವು. ಅದಿರು ಹೊತ್ತ ಲಾರಿಗಳಲ್ಲಿ ಮಕ್ಕಳ ಅಕ್ಷರಗಳನ್ನು ತುಂಬಿ ಕಳುಹಿಸಲಾಯಿತು. ಜನರು ಇಂತಹ ಬದುಕಿಗೆ ಹೊಂದಿಕೊಳ್ಳದೆ ಅನ್ಯ ಮಾರ್ಗವೇ ಇರಲಿಲ್ಲ. ಸತತ ಒಂದೂವರೆ ದಶಕಕ್ಕೂ ಹೆಚ್ಚು ಕಾಲ ನಡೆದ ಗಣಿಗಾರಿಕೆಯಿಂದಾಗಿ ಜನರ ಸಾಕ್ಷರತೆಯ ಪ್ರಮಾಣ ಮತ್ತು ಜೀವನಾಯುಷ್ಯ ಪ್ರಮಾಣ ಪಾತಾಳಕ್ಕೆ ಕುಸಿದಿದೆ . ರಕ್ತಹೀನತೆಯಿಂದ ಬಳಲುವ ಮಹಿಳೆಯರ ಸಂಖ್ಯೆ, ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆಗಿಂತಲೂ ಜಾಸ್ತಿಯಾಗಿದೆ. 5 ವರ್ಷದೊಳಗಿನ ಮಕ್ಕಳ ಮರಣ ಪ್ರಮಾಣವು ಅಧಿಕವಾಗಿದೆ.
ಇಲ್ಲಿನ ಸಂಪನ್ಮೂಲ ಇರುವುದೇ ತಮ್ಮ ಭೋಗ ವಿಲಾಸಕ್ಕೆ ಎಂದು ರಾಜಕೀಯವರ್ಗ,ಉದ್ಯಮಿಗಳು ಮತ್ತು ಕೆಲ ಆಡಳಿತಶಾಹಿ ಅಧಿಕಾರಿಗಳು ತಿಳಿದುಕೊಂಡಿದ್ದರು ಬಳ್ಳಾರಿ ಜಿಲ್ಲೆ ಇರುವುದೇ ಲೋಲುಪತೆ ಗೋಸ್ಕರ ಇಲ್ಲಿ ಹಣವೊಂದಿದ್ದರೆ ಏನೆಲ್ಲಾ ಸಾಧಿಸಬಹುದು ಮತಗಳನ್ನು ಮತದಾರರನ್ನು ಕೊಂಡುಕೊಳ್ಳಬಹುದು, ರಾಜಕೀಯ ಚುನಾವಣಾ ಪ್ರಚಾರಕ್ಕೆ ದಿನವೊಂದಕ್ಕೆ ಲಕ್ಷದಂತೆ ತಿಂಗಳುಗಟ್ಟಲೆ ಪ್ರಚಾರ ಮಾಡಿದ ಸಿನಿತಾರೆಯರಿಗೇನೂ ಕಡಿಮೆ ಇಲ್ಲ.ಸಂಪನ್ಮೂಲಗಳ ಹಗಲು ದರೋಡೆ ರಾಜಾರೋಷವಾಗಿ ನಡೆದುಹೋಯಿತು.
ಈ ಊರುಗಳಲ್ಲಿ ಬುಡುಬುಡುಕಿಯವರಿದ್ದರು, ಹಗಲುವೇಷಗಾರರು, ನಕ್ಕುನಗಿಸುವ ಹಾಡುಗಾರರು, ಬಯಲಾಟದವರು,ಕುರ್ರಮಾಮುಡು ವಸ್ತುನ್ನಾಡು…ಟಿಮ್ ಟಿಮ್….ಎನ್ನುತ್ತ ಬರುವವರು,ಗಿಣಿಶಾಸ್ತ್ರ ಹೇಳುವವರು ,ಬಣ್ಣಬಣ್ಣದ ಹರಳು ಮಾರುವ ಮಹಾ ಗಟ್ಟಿಗಿತ್ತಿಯರು, ಕಾಡಿನ ಗರ್ಭ ಹೊಕ್ಕು ಒಣ ಮರದ ಕಟ್ಟಿಗೆ ತಂದು, ಹೊತ್ತು ಮಾರಿ ಜೀವಿಸುವ ಲಂಬಾಣಿ ಯಾಡಿಗಳಿದ್ದರು. ಜೊತೆಗೆ ಅವರ ಉಡಿಗಳಲ್ಲಿ ಕಾರಿ, ಕವಳಿ,ಪುಟ್ಲಾಸು, ಬಿಕ್ಕಿ ಹಣ್ಣಿನಂತಹ ಹಣ್ಣುಗಳು ಇರುತ್ತಿದ್ದವು.
ಆಹಾರ ಸಂಪಾದನೆಯ ಬೇರೆ ಮೂಲಗಳೇ ಗೊತ್ತಿಲ್ಲದ ಇವರಿಗೆ ಭಿಕ್ಷೆಯೊಂದೇ ಉಳಿದಿರುವ ಮಾರ್ಗ. ಇವರುಗಳೆಲ್ಲಾ ಸಮಾಜದ ಕಣ್ಣಿನಲ್ಲಿ ಅಪರಾಧಿಗಳಂತೆ ಕಾಣುತ್ತಿರುವುದು ಪರಿಸ್ಥಿತಿಯ ವ್ಯಂಗ್ಯ .ಇವರನ್ನು ಇವರ ಕಲೆಯನ್ನು ಗೌರವಿಸುವ ಒಂದು ಸಮುದಾಯವೇ ನಾಶವಾಗಿಹೋಯಿತು.ರೊಕ್ಕಾ ಕೊಟ್ಟರೆ ಏನು ಬೇಕಾದುದನ್ನು ಪಡೆಯಬಹುದೆಂಬ ಅಹಂ-ಭಾವಹೀನ ಮನುಷ್ಯರನ್ನು ಸೃಷ್ಟಿಸುತ್ತಾ ನಡೆದಿದೆ.
ಸೊಂಡೂರು -ಬಳ್ಳಾರಿ ಜಿಲ್ಲೆಯ ಮಲೆನಾಡು .ಪುಟ್ಟ ಕಾಶ್ಮೀರ. ಬೆಟ್ಟ ಗುಡ್ಡಗಳಿಂದ ಆವೃತವಾದ ಸುಂದರನಾಡು .ಅತಿ ಫಲವತ್ತಾದ ಮಣ್ಣು ತುಂಬಿದ ನೆಲ. ಜಲಮೂಲಗಳುಳ್ಳ ಅತಿ ಹೆಚ್ಚು ಮಳೆ ಬೀಳುವ ಪ್ರದೇಶ, ಸೊಂಡೂರಿನ ಸುತ್ತಮುತ್ತ ಸುಮಾರು 40 ಕಿಲೋಮೀಟರ್ ಉದ್ದದ, 15 ಕಿಲೋಮೀಟರುಗಳಷ್ಟು ಅಗಲದ ಬೆಟ್ಟಗಳಲ್ಲಿ ಕಬ್ಬಿಣ, ತಾಮ್ರ ಮತ್ತು ಮ್ಯಾಂಗನೀಸ್ ಅದಿರಿನ ಗಣಿಗಳಿವೆ. ಇಲ್ಲಿ ದೊರೆಯುವ ಹೆಮಟೈಟ್ ಉತ್ತಮ ದರ್ಜೆಯ ಕಬ್ಬಿಣದ ಅದಿರು. ಹಾಗೆಯೇ ಮ್ಯಾಂಗನೀಸ್ ಕೂಡ ಡೇರಸ್ ಫಿಲೈಟ್ ಎಂಬ ಕಲ್ಲುಗಳಲ್ಲಿ ಹೇರಳವಾಗಿ ದೊರೆಯುತ್ತದೆ.
ಇದೇ ರೀತಿಯ ಸಂಪತ್ತು ಬೇರೆ ಕಡೆಗಳಲ್ಲಿ ಸಿಗುವುದಿಲ್ಲ ಎಂದಲ್ಲ. ವಿಶ್ವದರ್ಜೆಯ ಶ್ರೇಷ್ಠ ಮಟ್ಟದ ಮ್ಯಾಂಗನೀಸ್ ಅದಿರಿನ ನಿಕ್ಷೇಪಗಳು ಸುಬ್ರಾಯನಹಳ್ಳಿ ,ರಾಮಘಡಗಳಂತಹ ಹಳ್ಳಿಗಳ ಶಿಖರಗಳಲ್ಲಿ ದೊರೆಯುತ್ತವೆ. ಈ ಅದಿರಿನ ವಿಶೇಷವೆಂದರೆ ಬಹುತೇಕ ಅದಿರುಗಳಲ್ಲಿ ಸೇರಿಹೋಗಿರುವ ಫಾಸ್ಪೇಟ್ ಮತ್ತು ಸಲ್ಫರ ನಿಗದಿತ ಅಂಶಕ್ಕಿಂತ ಕಡಿಮೆ ಇರುವುದರಿಂದ ಇಲ್ಲಿನ ಮ್ಯಾಂಗನೀಸ್ ವಿಶ್ವ ಪ್ರಸಿದ್ಧವಾಗಿದೆ ಹಾಗಾಗಿ ಇಲ್ಲಿನ ಅದಿರಿಗೆ ವಿಶೇಷ ಬೇಡಿಕೆ.
ಬಳ್ಳಾರಿ ಜಿಲ್ಲೆಯ ಸೊಂಡೂರು ಕೇವಲ ಒಂದು ಊರು,ಪ್ರದೇಶ ಆಗಿರಬಹುದು .ಆದರೆ ಆತ ಊರಿನ ದುರಂತ ಇಡೀ ಪ್ರಪಂಚವನ್ನೇ ಪ್ರತಿನಿಧಿಸುವುದರ ಸಂಕೇತ. ಗಣಿಗಾರಿಕೆ ಆರಂಭವಾದಾಗಲೇ ಊರಿನ ಅವನತಿಯ ಆರಂಭವಾಯಿತು. ಯಥೇಚ್ಛವಾಗಿ ಗಣಿಗಾರಿಕೆಗೆ ಸರ್ಕಾರವೇ ಅನುಮತಿ ನೀಡುವಾಗ ಅದರ ಹೆಸರಿನಲ್ಲಿ ರಾಜಕಾರಣಿಗಳು ಅಕ್ರಮ ಗಣಿಗಾರಿಕೆ ನಡೆಸುವಾಗಲಂತೂ ಊರು ಆಹುತಿಯಾಗಿ ಬಿಟ್ಟಿತ್ತು. ಮನುಷ್ಯರು ಕೂಲಿಯ ಯಂತ್ರಗಳಾಗಿ ಹೋದರು.
ಮನುಷ್ಯನೇ ಸಂಶೋಧಿಸಿದ ಮೂಲ ಕಸುಬುಗಳಾದ ಕೃಷಿ ,ಬಡಗಿತನ, ಕ್ರೀಡೆ ಹಾಗೂ ಮೈಥುನಗಳು ಸಹ ಕೇವಲ ಯಾಂತ್ರಿಕವೆಂಬಂತೆ ಆಗಿಹೋದವು.ಎಷ್ಟೋ ದಿನಗಟ್ಟಲೆ,ತಿಂಗಳುಗಟ್ಟಲೆ, ಗಣಿಗಾರಿಕೆ ಬೆಟ್ಟಗಳ ತುತ್ತತುದಿಯಲ್ಲಿ ನಡೆಯುತ್ತಿತ್ತು.ಕೂಲಿಯವರೂ ಅಷ್ಟೂ ದಿನಗಳ ಕಾಲ ಅಲ್ಲಿಯೇ ಇರಬೇಕಾಗುತ್ತಿತ್ತು. ಕೂಲಿಯ ಹೆಣ್ಣು ಗಂಡುಗಳು ಅದಿರಿನ ನಿಕ್ಷೇಪದ ಬಯಲಿನಲ್ಲಿಯೇ ಮೈಥುನಕ್ಕಿಳಿದುಬಿಡುತ್ತಿದ್ದರು.ಮಕ್ಕಳು ಉಣ್ಣುವ ಅನ್ನದಲ್ಲಿ ಕೆಂಪುಧೂಳು ಸೇರಿಸಿಯೇ ಉಣ್ಣಬೇಕಾಗುತ್ತತ್ತು. ಕಂಟೇನರುಗಳಲ್ಲಿಯೇಇವರ ಜೀವನ ಮುಗಿದುಹೋಗಿರುತ್ತಿತ್ತು.ಮನುಷ್ಯ ಹೀಗೂ ಬದುಕಬಲ್ಲ ಎಂಬುದನ್ನು ಯಾರೂ ಕೂಡ ಯೋಚಿಸಲಿಲ್ಲ.
ಗಣಿ ಸಾವ್ಕಾರಗಳು ಸಾಮಾನ್ಯ ಜನರ ಕಣ್ಣಿಗೆ ಇಂದಿಗೂ ವೈಭೋಗದ ತುಣುಕುಗಳ ಹಾಗೆ ಕಾಣಿಸುತ್ತಿದ್ದಾರೆ. ಜನರನ್ನು ,ಅವರ ಗಮನವನ್ನು ಬೇರೆಡೆಗೆ ಸೆಳೆಯದಂತೆ ಎಷ್ಟು ಪ್ರಯತ್ನಗಳು ನಡೆದಿರುತ್ತವೆ ಎಂದರೆ, ಊರಿನಲ್ಲಿ ಎಲೆಕ್ಷನ್ ಇರಲಿ ,ಇಲ್ಲದಿರಲಿ ,ಧಣಿ- ರಾಜಕಾರಣಿಯ ವಿವಿಧ ರೀತಿಯ ಬಣ್ಣಬಣ್ಣದ ಕಟೌಟುಗಳು ದಾರಿಯುದ್ದಕ್ಕೂ ರಾರಾಜಿಸುತ್ತವೆ. ಪ್ರತಿವಾರವೂ ಕಟೌಟ್ಗಳು ಬದಲಾಗುತ್ತಲೇ ಇರುತ್ತದೆ.
ಇನ್ನು ಕೆಲ ಸಾಹುಕಾರ ಗಳಂತೂ ತಾವೇ ಆಧುನಿಕ ಶ್ರೀ ಕೃಷ್ಣದೇವರಾಯ ಎಂದು ಭಾವಿಸಿ ,ಅವನಂತೆಯೇ ವೇಷಧರಿಸಿ ನಿಂತು ಬೃಹತ್ ಕಟೌಟುಗಳನ್ನು ನಗರದ ವಿವಿಧ ಕಡೆಗಳಲ್ಲಿ ನಿಲ್ಲಿಸಲಾಯಿತು.ಬಳ್ಳಾರಿಯ ಗಣಿಧಣಿಗಳದ್ದೂ ಇನ್ನೊಂದು ರೀತಿ.ಮುಂಜಾನೆಯ ಟಿಫನ್ನಿಗೆ ಬೆಂಗಳೂರಿನ ಎಂ.ಟಿ.ಆರ್.ಹೋಟೆಲ್ಲಿಗೆ ಹೆಲಿಕಾಪ್ಟರ್ ನಲ್ಲಿ ಹೋದರೆ,ಅದಕ್ಕೂ ಮುನ್ನ ಹೆಲಿಕಾಪ್ಟರ್ ನಲ್ಲಿ ಹೈದರಾಬಾದ್ ವರೆಗೂ ವಾಕಿಂಗ್ ಹೋಗುವವರಿದ್ದರು.ವಿಮಾನದಲ್ಲಿ ಮಧ್ಯಾನ್ಹದ ಊಟಕ್ಕೆ ಬೊಂಬಾಯಿಗೆ ಹೋಗುತ್ತಿದ್ದರು.ರಾತ್ರಿ ಮತ್ತೆಲ್ಲಿಗೋ…!ಎಷ್ಟೋ ಜನ ಸಿನಿಮಾದವರು ರಾತ್ರೋರಾತ್ರಿ ಬಂದುಹೋಗುವುದನ್ನು ನೋಡಿದವರು ಇದ್ದರು.
ಲೋಲುಪತೆಗೆ ಜನರ ಬದುಕನ್ನೆ ಆಹುತಿ ತೆಗೆದುಕೊಂಡ ಧಣಿಗಳು,ಕೊನೆಗೆ ಜನರು ತಮ್ಮ ಕಡೆಗೆ ದೃಷ್ಟಿ ಹರಿಸಲೆಂದು ಸದಾ ಒಂದಿಲ್ಲೊಂದು ಸುದ್ದಿಯಿಂದ ಜನರನ್ನು ಭ್ರಮಾಲೋಕದಲ್ಲಿ ತಿರುಗುವಂತೆ ನೋಡಿಕೊಂಡರು.”ಸಾಮೂಹಿಕ ಮದುವೆ”ಗಳಂತಹ ಕೃತ್ರಿಮ ಕಾರ್ಯಕ್ರಮಗಳಿಗೆ ಕೈ ಹಾಕಿದರು.ಆ ಮೂಲಕ ಅಲ್ಲಿ ಬಂದ ವಧು-ವರರಿಗೆ ತಾಳಿ- ಬಟ್ಟೆ ಕೊಡುವುದರ ಮೂಲಕ “ದಾನಶೂರ”ರು ಎನಿಸಿಕೊಂಡರು.ಆದರೆ ಇಂತಹ ವಿವಾಹಗಳು ಹೆಸರಿನಲ್ಲಿ ಜನರು ಪ್ರಶ್ನೆ ಕೇಳುವುದನ್ನು,ಆಲೋಚನೆಯನ್ನೆ ಮಾಡದಿರುವ ಹಾಗೆ,ಅರ್ಥಮಾಡಿಕೊಳ್ಳುವ ಅವರು ಗುಣವನ್ನೆ ನಾಶಪಡಿಸಲಾಯಿತು.ಇಂತಹ ಗಣಿಧಣಿಗಳ ಭಿಕ್ಷೆಗೆ ಕೆಲ ಮಠಾಧೀಶರು ಕೈಚಾಚಿದರು.
ಜನರ ಬದುಕು ಕುಸಿಯಲು ಎಷ್ಟೊಂದು ಜನ ಒಂದಾದರು?
ನೆನೆಸಿಕೊಂಡರೆ ರೋಷ ಆವೇಶವೂ ಅಂತಕರುಣೆಯೂ ಒಟ್ಟಿಗೆಉಕ್ಕಿಬರುತ್ತದೆ.
ಜಿಲ್ಲೆಯ ಗಡಿಪ್ರದೇಶದ ಒಂದು ಬಹುಮುಖ್ಯವಾದ ಹಳ್ಳಿ ಕಮ್ಮತ್ತೂರು. ಈ ಊರಿನಲ್ಲಿ ನಡೆದಷ್ಟು ಗಣಿಗಾರಿಕೆ ಮತ್ತು ಡಿಪ್ಪಿಂಗ್ ಬೇರೆಲ್ಲೂ ನಡೆದಿರಲಿಕ್ಕಿಲ್ಲ .ಊರಿನ ಮನೆ ಗಳಿಗಿಂತಲೂ ಅಧಿಕವಾದ ಸ್ಟಾಕ್ ಯಾರ್ಡ್ಗಳು ನಿರ್ಮಾಣವಾದವು. ಧೂಳಿನಿಂದಾಗಿ ಮತ್ತು ವಿಪರೀತ ಶಬ್ದದಿಂದಾಗಿ ಅಸ್ತಮಕ್ಕೆ, ಕಿವುಡುತನಕ್ಕೆ ಬಲಿಯಾದವರಿಗೆ ಲೆಕ್ಕವಿಲ್ಲ. ಅಪರಿಮಿತ ಗಣಿಗಾರಿಕೆಯ ಪ್ರಭಾವದಿಂದಾಗಿ ಆಕ್ಸಿಜನ್ ಪ್ರಮಾಣ ಕುಸಿತ ಕಂಡಿತು. ಇಡೀ ಊರಿಗೆ ಊರೇ ಐಸಿಯುನಲ್ಲಿ ಇರುವಂತೆ ಭಾಸವಾಗುತ್ತಿದೆ.ಇಂತಹ ಎಷ್ಟೋ ಹಳ್ಳಿಗಳು ಉಸಿರಾಡಲು ಕಷ್ಟಪಡುತ್ತಿವೆ.
ಒಂದು ಕಾಲದ ರೈತ ಹೊಲ, ಗದ್ದೆ, ಮಣ್ಣನ್ನು ಪೂಜಿಸುತ್ತಿದ್ದ. ಆರಾಧಿಸುತ್ತಿದ್ದ .ಗುಡ್ಡಬೆಟ್ಟ ಸೂರ್ಯ ಚಂದ್ರ ತಾರೆಯರೇ ಆತನ ದೇವರುಗಳಾಗಿದ್ದವು. ದುಡಿಮೆಯೇ ಆತನ ಸಂಪತ್ತು. ಇಂತಹ ಕುಟುಂಬಗಳು ಇಲ್ಲದ, ಪ್ರಕೃತಿಯೂ ಇಲ್ಲದ ,ಅಭಿಶಾಪದ ಊರುಗಳಲ್ಲಿ ಶಾಪಗ್ರಸ್ತರಂತೆ ಮತ್ತೊಮ್ಮೆ ಯುದ್ಧಕ್ಕೆ ಹೊರಟ ಕೆಂಪು ಸೈನಿಕರಂತೆ ಇಲ್ಲಿನ ಜನ ಕಾಣಿಸುತ್ತಾರೆ.
ಎಲ್ಲಾ ಮುಗಿದ ಮೇಲೆ ಊರ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ದಿನಾಂಕ: 6 -10-2016 ರಂದು ಸರ್ಕಾರ ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಿ ಆದೇಶಿಸಿತು.
ಕಾಲವೀಗ ತಣ್ಣಗೆ ನಿಶ್ಯಬ್ದ..!
ಯಾರದ್ದೋ ಹೆಣವೊಂದು ಸದ್ದಿಲ್ಲದೆ ಬಿದ್ದುಕೊಂಡಿರುವ, ಇನ್ನೂ ಯಾರೋ ಬರುವವರಿದ್ದಾರೆ ಎಂದು ಹೆಣವನ್ನು ಎತ್ತದೆ, ಕಾದು ಕುಳಿತಿರುವಂತೆ ಸೊಂಡೂರಿನ ಬೀದಿಗಳಿವೆ.
ಬಡತನದ ರೇಖೆಗಳನ್ನೆಲ್ಲಾ ಮೈಮೇಲೆ ಹೊದ್ದು ಕುಳಿತವರಂತೆ ಕಾಣುವ ಮುದುಕರು ,ಸಾಯಲಿಕ್ಕೂ ಆಗದೆ ಬದುಕಲೂ ಆಗಿದೆ, ದುಸ್ಥಿತಿಗೆ ಕಾರಣವನ್ನು ಹುಡುಕುತ್ತಿರುವವರ ಹಾಗೆ ಹಣೆಗೆ ಕೈ ಹಚ್ಚಿ ಕುಳಿತ ದೃಶ್ಯಗಳು ಹೃದಯವನ್ನು ಕಲಕುತ್ತದೆ .ಇದು ನಾಗರಿಕ ಸಮಾಜವೊಂದು ತನ್ನದೇ ಊರಿನ ಸಮುದಾಯವನ್ನು ಚಿತ್ರಹಿಂಸೆಗೆ ಒಳಪಡಿಸಿದ ಹಾಗೆ.ನಾನು ಕಂಡು ಮಾತನಾಡಿಸಿದರವಲ್ಲಿ ” ನನ್ನ ಹಣೆಬರಹ…ನೋಡಪಾ, ಅಲಸಂದಿ,ಅವರೆ,ಜ್ವಾಳ,ನವಣಿ,
ಸಜ್ಜಿ ಬೆಳೀತಿದ್ದೆ. ಏಪೆಂಪ್ಸಿಗೆ ಹಾಕಿ ರೊಕ್ಕ ಎಣಿಸ್ಕಂಡು ಬರ್ತಿದ್ದೆ.ಮಕ್ಕಳು ಮೀರಿ ಎಲ್ಲ ಆರಾಮಾಗಿದ್ವಿ…ಮೈನ್ಸು ಮೈನ್ಸೂ ಅಂತಂದು ಮೈಯೆಲ್ಲಾ ತಗಂಬುಡ್ತು ನನ್ನಪ್ಪನೆ” ಎಂದು ವಿಷಾದದಿಂದ ಹೇಳುತ್ತಾರೆ.
ದೂರದ ಊರುಗಳ ಗೆಳೆಯರಿಗೆ ಸೊಂಡೂರು ಎನ್ನುವುದು ಸುಂದರ ಸ್ವಪ್ನದ ಹಾಗೆ, ಕಾಡುತ್ತಲೇ ಇರುತ್ತದೆ. ಗಣಿಗಾರಿಕೆಯಿಂದ ರಾಜ್ಯ,ದೇಶ ವ್ಯಾಪಿ ಸುದ್ದಿಯಾಗಿ, ಅಂತರಾಷ್ಟ್ರೀಯ ಪ್ರಖ್ಯಾತಿಯನ್ನು ಗಳಿಸಿಬಿಟ್ಟಿತು. ಈಗಲೂ ‘ಚುನಾವಣೆ ‘ಎಂಬ ಶಬ್ದ ಕೇಳಿದರೆ ಸಾಕು, ಜನರ ಕಣ್ಣಲ್ಲಿ ಹೊಳಪು ಮೂಡುತ್ತದೆ. ಬಾಯಲ್ಲಿ ನೀರೂರುತ್ತದೆ. ಚುನಾವಣೆ ಎನ್ನುವುದು ಪ್ರಜಾಪ್ರಭುತ್ವದ ಹಬ್ಬ ಎಂದು ನಾವು ಭಾವಿಸಿದ್ದು ,ಇಲ್ಲಿ ಅಣಕದಂತೆ ಭಾಸವಾಗುತ್ತಿದೆ.
*******
ಆದರೆ ,ಅಭಿವೃದ್ಧಿಯ ದೃಷ್ಟಿಯಿಂದ ಹೊರಗಿನ ಪ್ರಪಂಚಕ್ಕೆ ಸಾಕಷ್ಟು ಶ್ರೀಮಂತ, ಎಲ್ಲಾ ಬ್ರಾಂಡೆಡ್ ಕಂಪನಿಗಳ ಅಂಗಡಿಗಳಿರುವ ಹೊಸಪೇಟೆ-ಬಳ್ಳಾರಿಯಂತಹ ಊರುಗಳಲ್ಲಿ ಸ್ಟಾರ್ ಹೋಟೆಲ್ಗಳು ನಡೆಯುತ್ತಿವೆ. ಸೊಂಡೂರಿನ ಗಾಂಧಿ ಕರಕುಶಲ ಕೈಗಾರಿಕಾ ಕೇಂದ್ರಕ್ಕೂ ಬೀಗ ಬಿದ್ದಿದೆ.
ಹೌದು, ಅಭಿವೃದ್ಧಿಯೆಂದರೆ ಈ ಪ್ರದೇಶಗಳ ಜನತೆ ಹಸಿವಿನಿಂದ ಸ್ವಾತಂತ್ರ್ಯ ಪಡೆದಿದ್ದಾರೆಯೆ ?ಲಿಂಗ ಅಸಮಾನತೆಯಿಂದ ಸಾಮಾಜಿಕ ಅಸಮಾನತೆಯ,ಅವಮಾನಳಿಂದ ಸ್ವಾತಂತ್ರ್ಯ ಪಡೆದಿದ್ದಾರೆಯೆ ?ಎನ್ನುವ ಅಮರ್ತ್ಯಸೇನರು ಕೇಳುವ ಪ್ರಶ್ನೆಗಳನ್ನು ಕೇಳಿಕೊಂಡರೆ…ಎಲ್ಲಾ ಪ್ರಶ್ನೆಗಳಿಗೂ “ಇಲ್ಲ”ಎಂಬ ರೆಡಿ ಉತ್ತರ ದೊರಕುವುದು.
ಈ ಎಲ್ಲಾ ಸ್ವಾತಂತ್ರ್ಯಗಳನ್ನು ಯಾರೋ ಕೊಡಲು ಸಾಧ್ಯವಿಲ್ಲ.ಅವರು ಪಡೆದುಕೊಳ್ಳುವ ಸಾಮರ್ಥ್ಯವನ್ನು ನಿರ್ಮಾಣ ಮಾಡುವುದು ನಮ್ಮ ನಿಮ್ಮೆಲ್ಲರ ಸಾಮಾಜಿಕ ಜವಾಬ್ದಾರಿ.
***
ವಯಸ್ಸಾಗಿ ಮುದುಕರಾದಾಗ ಮೂಲೆಯಲ್ಲಿ ಎಲ್ಲೋ ಒಂದು ಕಡೆ ಕುಳಿತು ಅಂತರ್ಮುಖಿಗಳಾಗಿಬಿಡುವುದು ವಯೋಸಹಜ ಗುಣ. ಆದರಿಲ್ಲಿ ಮಕ್ಕಳೂ ಅಂತರ್ಮುಖಿಗಳಾದರೆ… ?ಕಥೆಗಳು ಬೆಂಕಿಯ ಕೆನ್ನಾಲಗೆ ಹಾಗೆ ಸುಡುತ್ತಿವೆ. ಈ ಜನಗಳು ಅನುಭವಿಸಿದ, ಅನುಭವಿಸುತ್ತಿರುವ ಕರಾಳ ನೋವುಗಳನ್ನು ಹಿಡಿದಿಡಲು ಒಂದು ಜೀವನ ಸಾಕಾಗುವುದಿಲ್ಲ ಎನಿಸುತ್ತಿದೆ.
ಇಲ್ಲಿನ ಎಲ್ಲಾ ಅಕ್ಷರಗಳು ವರ್ತಮಾನದ ಒತ್ತಡಗಳಿಂದಲೇ ಬಂದಿರುವುವು ಎಂದೇ ಭಾವಿಸಿದ್ದೇನೆ. ಹಿಂದಿನಿಂದಲೂ ನನ್ನನ್ನು ಕಾಡುತ್ತಿದ್ದ ಘಟನೆಗಳು, ನಂತರದಲ್ಲಿ ಗಣಿಗಾರಿಕೆಯೆಂಬ ಪೀಕ್ ಅವಧಿಯಲ್ಲಿನ ಘಟನೆಗಳು ,ಜನರ ಬದುಕು, ನಂತರದ ದಿನಗಳಲ್ಲಿ ಅಕ್ರಮ ಗಣಿಗಾರಿಕೆಯಿಂದ ಬೀದಿಪಾಲಾದ ಕುಟುಂಬಗಳ ರೋದನವನ್ನು ಕೆಲಮಟ್ಟಿಗಾದರೂ ತಿಳಿಸಬೇಕಿತ್ತು.
ಬರಹಗಾರನೊಬ್ಬ ಯಾಕೆ ಬರೆಯುತ್ತಾನೆ ಎಂಬುದನ್ನು ಪೂರ್ಣ ಅರ್ಥಮಾಡಿಸಿದ್ದು ಈ ಬರಹಗಳೆ.ಎದೆಯ ಮೂಲೆಯಲ್ಲಿ ಅಡಗಿದ್ದ ಭಾವಗಳು ಕಾಡಿದಾಗಲೆಲ್ಲ ಸಣ್ಣ ಸಣ್ಣ ಚೀಟಿಗಳಲ್ಲಿ ಬರೆದು,ಇತ್ತೀಚೆಗೆ ಮೊಬೈಲಿನಲ್ಲಿ ಟೈಪಿಸಿ ಕೊಂಡು ನಿರಾಳವಾಗುತ್ತಿದ್ದೆ.ಬಹಳ ವರ್ಷಗಳ ಹಿಂದಿನಿಂದಲೂ ಹಿಡಿದಿಟ್ಟುಕೊಂಡಿದ್ದ ಕರಾಳ ಸತ್ಯಗಳನ್ನು ಬರೆಯುವಾಗ ಕಣ್ಣು ಮುಂಜಾದದ್ದು,ಎದೆ ಭಾರವಾದದ್ದೂ ಇದೆ.ಸಾಮಾನ್ಯ ಕೃಷಿಕನೋರ್ವ ಕಣ್ಣೆದುರೇ ಹುಚ್ಚನಾಗಿ ತಿರುಗಾಡುವಾಗ ತುಂಬಾ ಡಿಸ್ಟರ್ಬ್ ಆಗಿದ್ದಿದೆ.
ಹೀಗೆ ನನ್ನನ್ನು ,ಡಿಸ್ಟರ್ಬ್ ಮಾಡಿದ ಈ ಭಾವಗಳು ನನ್ನ ಎದೆಯಿಂದ ಹಾರಿ ಹೀಗೆ ಹೊರಬರುವ ತನಕವೂ ಸಮಾಧಾನವಿದ್ದಿಲ್ಲ.ನಾನು ಸಾಮಾಜಿಕ ಜವಾಬ್ದಾರಿಯೊಂದಿಗೆ ನನಗನಿಸಿದ ಭಾವಗಳನ್ನು ಹೊರಹಾಕಿರುವೆ…..ನಿಟ್ಟುಸಿರಿನೊಂದಿಗೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
EV ನೋಂದಣಿಯಲ್ಲಿ ಕರ್ನಾಟಕದ ಸಾಧನೆ – ಶುದ್ಧ ಚಲನೆಗೆ ಬೆಸ್ಕಾಂ ಮುನ್ನಡೆ
ಸುದ್ದಿದಿನ,ಬೆಂಗಳೂರು: ರಾಜ್ಯವು ಇವಿ ನೋಂದಣಿಯಲ್ಲಿ ದೇಶದಲ್ಲೇ ಪ್ರಮುಖ ಸ್ಥಾನ ಪಡೆದಿದ್ದು, ಶುದ್ಧ ಚಲನೆಗೆ ತಂತ್ರಜ್ಞಾನ ಮತ್ತು ಮೂಲಸೌಕರ್ಯವನ್ನು ಒದಗಿಸುವಲ್ಲಿ ಮುಂಚೂಣಿಯಲ್ಲಿದೆ ಹಾಗೂ ವಿಶ್ವ ಇವಿ ದಿನದ ಸಂದರ್ಭದಲ್ಲಿ ಭಾರತದ ಎಲೆಕ್ಟ್ರಿಕ್ ವಾಹನ ಕ್ರಾಂತಿಗೆ ಮುನ್ನಡೆ ಸಾಧಿಸಿರುವುದು ಶ್ಲಾಘನೀಯ.
http://Visit : www.suddidina.com
ಕರ್ನಾಟಕವು ಒಟ್ಟು ಇವಿ ನೋಂದಣಿಯಲ್ಲಿ 3ನೇ ಸ್ಥಾನ ಪಡೆದಿದ್ದು, e-2W (ಎಲೆಕ್ಟ್ರಿಕ್ ಎರಡು ಚಕ್ರ ವಾಹನ) ಮತ್ತು e-4W (ಎಲೆಕ್ಟ್ರಿಕ್ ನಾಲ್ಕು ಚಕ್ರ ವಾಹನ) ನೋಂದಣಿಯಲ್ಲಿ 2ನೇ ಸ್ಥಾನ ಪಡೆದಿದೆ. ಇದು ರಾಜ್ಯದ ಜನರು ಎಲೆಕ್ಟ್ರಿಕ್ ವಾಹನಗಳನ್ನು ಸ್ವೀಕರಿಸುವ ಪ್ರಮಾಣ ಹೆಚ್ಚುತ್ತಿರುವುದನ್ನು ತೋರಿಸುತ್ತದೆ. 2027 ಹಣಕಾಸು ವರ್ಷದಲ್ಲಿ EV ಪ್ರವೇಶ ಪ್ರಮಾಣ 14.67% ಆಗಿದ್ದು, ಇದು ದೇಶದ ಮಟ್ಟದಲ್ಲಿ ಗಮನಾರ್ಹ ಸಾಧನೆಯಾಗಿದೆ.
ರಾಜ್ಯದ ಇವಿ ಮೂಲಸೌಕರ್ಯ ಅಭಿವೃದ್ಧಿಗೆ ಬೆಸ್ಕಾಂ ನೊಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇವಿ ಚಾರ್ಜಿಂಗ್ ಸ್ಟೇಷನ್ಗಳ ಸ್ಥಾಪನೆ, ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗುವ ಚಾರ್ಜಿಂಗ್ ಸೌಲಭ್ಯ, ಹಾಗೂ ಶುದ್ಧ ಚಲನೆಗೆ ಅಗತ್ಯವಾದ ತಂತ್ರಜ್ಞಾನವನ್ನು ಒದಗಿಸುವಲ್ಲಿ ಬೆಸ್ಕಾಂ ಪ್ರಮುಖ ಪಾತ್ರವಹಿಸಿದೆ.
ಕರ್ನಾಟಕ ಸರ್ಕಾರವು ಶುದ್ಧ ಚಲನೆಗೆ ಉತ್ತೇಜನ ನೀಡಲು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇವಿ ಖರೀದಿಗೆ ಪ್ರೋತ್ಸಾಹಕ ಯೋಜನೆಗಳು, ಚಾರ್ಜಿಂಗ್ ಮೂಲಸೌಕರ್ಯ ವಿಸ್ತರಣೆ, ಹಾಗೂ ಹಸಿರು ತಂತ್ರಜ್ಞಾನವನ್ನು ಉತ್ತೇಜಿಸುವ ಕ್ರಮಗಳು ಇವಿ ಕ್ರಾಂತಿಗೆ ಬಲ ನೀಡಿವೆ.
ಇವಿ ಬಳಕೆಯ ಹೆಚ್ಚಳದಿಂದ ಪರಿಸರ ಮಾಲಿನ್ಯ ಕಡಿಮೆಯಾಗುವುದು, ಇಂಧನ ಅವಲಂಬನೆ ಕಡಿಮೆಯಾಗುವುದು ಹಾಗೂ ಶುದ್ಧ ಶಕ್ತಿಯ ಬಳಕೆ ಹೆಚ್ಚಾಗುವುದು. ಇದು ಕರ್ನಾಟಕವನ್ನು ಹಸಿರು ರಾಜ್ಯವಾಗಿ ರೂಪಿಸುವತ್ತ ಪ್ರಮುಖ ಹೆಜ್ಜೆಯಾಗಿದೆ.
ವಿಶ್ವ ಇವಿ ದಿನದ ಅಂಗವಾಗಿ, ಕರ್ನಾಟಕವು ತನ್ನ ಸಾಧನೆಗಳನ್ನು ಹಂಚಿಕೊಂಡು, ಮುಂದಿನ ದಿನಗಳಲ್ಲಿ ಶುದ್ಧ ಚಲನೆಗೆ ಇನ್ನಷ್ಟು ಬಲ ನೀಡಲು ಬದ್ಧವಾಗಿದೆ. ಇವಿ ಕ್ರಾಂತಿಯ ಮೂಲಕ ಕರ್ನಾಟಕವು ಭಾರತದ ಭವಿಷ್ಯವನ್ನು ಹಸಿರು ಮತ್ತು ಶಾಶ್ವತ ದಿಕ್ಕಿನಲ್ಲಿ ಮುನ್ನಡೆಸುತ್ತಿದೆ.

ದಿನದ ಸುದ್ದಿ
ಬೆಂಗಳೂರು ಸೆಪ್ಟೆಂಬರ್ನಲ್ಲಿ 31.9 ಡಿ.ಸೆ. ದಾಖಲೆ – ಹವಾಮಾನ ಇಲಾಖೆ ಎಚ್ಚರಿಕೆ
ಸುದ್ದಿದಿನ,ಬೆಂಗಳೂರು: ಪ್ರತಿ ವರ್ಷ ಮಳೆಗಾಲದ ಅಂತ್ಯದಲ್ಲಿ ನೈಋತ್ಯ ಮಾನ್ಸೂನ್ ಶೀತವಾಗಿರುತ್ತದೆ. ಆದರೆ ಈ ಬಾರಿ, 75 ವರ್ಷಗಳ ಬಳಿಕ ಬೆಂಗಳೂರಿನಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. 2026ರ ಸೆಪ್ಟೆಂಬರ್ 8ರಂದು ನಗರದಲ್ಲಿ 31.9 ಡಿ.ಸೆ. ತಾಪಮಾನ ದಾಖಲಾಗಿದ್ದು, ಇದು ಕಳೆದ ಹಲವು ದಶಕಗಳ ಬಳಿಕ ಕಂಡುಬಂದ ಅತಿ ಹೆಚ್ಚು ಮಟ್ಟವಾಗಿದೆ.
http://Visit : www.suddidina.com
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿರುವ ಮಾಹಿತಿಯ ಪ್ರಕಾರ, 1951ರಿಂದ ಇಂದಿನವರೆಗಿನ ದಾಖಲೆಗಳಲ್ಲಿ 33.3 ಡಿ.ಸೆ. ಗರಿಷ್ಠ ತಾಪಮಾನವು ದಾಖಲಾಗಿತ್ತು. ಈ ಬಾರಿ 31.9 ಡಿ.ಸೆ. ತಾಪಮಾನವು ಆ ದಾಖಲೆಗಳಿಗೆ ಸಮೀಪವಾಗಿದೆ. ಇದೇ ದಿನ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 33.4 ಡಿ.ಸೆ. ತಾಪಮಾನ ದಾಖಲಾಗಿದ್ದು, ಇದು ನಗರದ ಉಷ್ಣಾಂಶ ಏರಿಕೆಯನ್ನು ಸ್ಪಷ್ಟಪಡಿಸುತ್ತದೆ.
ಹಿಂದಿನ ವರ್ಷಗಳ ದಾಖಲೆಗಳನ್ನು ನೋಡಿದರೆ, 2025ರಲ್ಲಿ 29.9 ಡಿ.ಸೆ., 2024ರಲ್ಲಿ 31.6 ಡಿ.ಸೆ., 2023ರಲ್ಲಿ 30.8 ಡಿ.ಸೆ., 2022ರಲ್ಲಿ 31 ಡಿ.ಸೆ., 2021ರಲ್ಲಿ 31.3 ಡಿ.ಸೆ., 2020ರಲ್ಲಿ 30.6 ಡಿ.ಸೆ., 2019ರಲ್ಲಿ 30.8 ಡಿ.ಸೆ., 2018ರಲ್ಲಿ 31.7 ಡಿ.ಸೆ., 2017ರಲ್ಲಿ 31.1 ಡಿ.ಸೆ., 2016ರಲ್ಲಿ 30.6 ಡಿ.ಸೆ. ದಾಖಲಾಗಿತ್ತು. ಈ ಹೋಲಿಕೆಯಿಂದ, 2026ರ ಸೆಪ್ಟೆಂಬರ್ನಲ್ಲಿ ದಾಖಲಾಗಿರುವ ಉಷ್ಣಾಂಶವು ಅತಿ ಹೆಚ್ಚು ಮಟ್ಟದಲ್ಲಿದೆ ಎಂಬುದು ಸ್ಪಷ್ಟವಾಗುತ್ತದೆ.
ಹವಾಮಾನ ತಜ್ಞರ ಪ್ರಕಾರ, ಎಲ್ನಿನೋ ಒತ್ತಡ ಮುಂದುವರಿದಿರುವುದರಿಂದ ಉಷ್ಣಾಂಶ ಏರಿಕೆಗೆ ಕಾರಣವಾಗಿದೆ. ಆದರೆ, ಇದು ತಾತ್ಕಾಲಿಕವಾಗಿರಬಹುದು ಎಂದು ಹವಾಮಾನ ಇಲಾಖೆ ಹೇಳಿದೆ. ಮುಂದಿನ ತಿಂಗಳುಗಳಲ್ಲಿ ಶೀತಮಾನ್ಸೂನ್ ಬಲಿಷ್ಠವಾಗುವ ಸಾಧ್ಯತೆ ಇದೆ. ಅಂದಾಜು 1 ರಿಂದ 3 ಡಿ.ಸೆ. ಅಂತರದಲ್ಲಿ ಶಾಖದ ಮಟ್ಟ ಹೆಚ್ಚಾಗಬಹುದು ಎಂದು ತಜ್ಞರು ವಿಶ್ಲೇಷಿಸಿದ್ದಾರೆ.
ಮಳೆ ಆಗದಿರುವುದರಿಂದ ಕಾವೇರಿ ನದಿಯ ನೀರಿನ ಮಟ್ಟ ತೀವ್ರವಾಗಿ ಕುಸಿದಿದೆ. ಹವಾಮಾನ ಇಲಾಖೆ ಪ್ರಕಾರ, ಸೆಪ್ಟೆಂಬರ್ 16ರ ನಂತರ ಮಳೆಯಾಗುವ ಸಾಧ್ಯತೆಗಳಿವೆ. ಇದರಿಂದ ನೀರಿನ ಮಟ್ಟ ಸುಧಾರಿಸಬಹುದು ಎಂಬ ನಿರೀಕ್ಷೆ ಇದೆ.
ಒಟ್ಟಿನಲ್ಲಿ, ಬೆಂಗಳೂರಿನಲ್ಲಿ ದಾಖಲಾಗಿರುವ ಉಷ್ಣಾಂಶ ಏರಿಕೆ ಹವಾಮಾನ ಬದಲಾವಣೆಯ ಗಂಭೀರತೆಯನ್ನು ತೋರಿಸುತ್ತದೆ. ಮುಂದಿನ ದಿನಗಳಲ್ಲಿ ಮಳೆಯ ನಿರೀಕ್ಷೆ ಇದ್ದರೂ, ತಾತ್ಕಾಲಿಕವಾಗಿ ಉಷ್ಣಾಂಶ ಏರಿಕೆ ಸಾರ್ವಜನಿಕ ಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ದಿನದ ಸುದ್ದಿ
KPSCExam: ಬೆಂಗಳೂರು ಸೇರಿದಂತೆ ಜಿಲ್ಲೆಗಳಲ್ಲಿ ವೈದ್ಯರ ಕೊರತೆ – ತಕ್ಷಣ ನೇಮಕಾತಿ ಅಗತ್ಯ
ಸುದ್ದಿದಿನ,ಕಲಬುರ್ಗಿ: ಕರ್ನಾಟಕದಲ್ಲಿ ವೈದ್ಯಾಧಿಕಾರಿ ಹುದ್ದೆಗಳ ಖಾಲಿತನವು ದಿನದಿಂದ ದಿನಕ್ಕೆ ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಕರ್ನಾಟಕ ಸಾರ್ವಜನಿಕ ಸೇವಾ ಆಯೋಗ (KPSC) ಅಡಿಯಲ್ಲಿ ನೇಮಕಾತಿ ಪ್ರಕ್ರಿಯೆ ವಿಳಂಬವಾಗಿರುವುದರಿಂದ, ರಾಜ್ಯದ ಅನೇಕ ಆಸ್ಪತ್ರೆಗಳು ವೈದ್ಯರ ಕೊರತೆಯಿಂದ ಬಳಲುತ್ತಿವೆ. ವಿಶೇಷವಾಗಿ ಬೆಂಗಳೂರು ಹಾಗೂ ಇತರ ನಗರ ಪ್ರದೇಶಗಳಲ್ಲಿ ರೋಗಿಗಳಿಗೆ ತಕ್ಷಣ ಚಿಕಿತ್ಸೆ ನೀಡಲು ತೊಂದರೆ ಉಂಟಾಗಿದೆ.
http://Visit : www.suddidina.com
ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆಯಿಂದಾಗಿ ರೋಗಿಗಳ ಆರೈಕೆ ವಿಳಂಬವಾಗುತ್ತಿದೆ. ತುರ್ತು ಚಿಕಿತ್ಸೆಗೆ ಬರುವವರು ಸಮಯಕ್ಕೆ ಚಿಕಿತ್ಸೆ ಪಡೆಯಲು ಕಷ್ಟ ಅನುಭವಿಸುತ್ತಿದ್ದಾರೆ. ಸಿಬ್ಬಂದಿ ಕೊರತೆಯಿಂದಾಗಿ ಆಸ್ಪತ್ರೆಗಳ ಕಾರ್ಯಾಚರಣೆ ಹಿನ್ನಡೆಯಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಿದ್ದು, ಅಲ್ಲಿ ವೈದ್ಯರ ಕೊರತೆಯಿಂದ ಮೂಲಭೂತ ಆರೋಗ್ಯ ಸೇವೆಗಳೇ ಕುಂಠಿತವಾಗಿವೆ.
ಸರ್ಕಾರವು ಈ ಸಮಸ್ಯೆಯನ್ನು ಪರಿಹರಿಸಲು ತಕ್ಷಣ ಕ್ರಮ ಕೈಗೊಳ್ಳಬೇಕಿದೆ. ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ವೇಗಗೊಳಿಸುವ ಅಗತ್ಯವಿದೆ. ಆರೋಗ್ಯ ಸೇವೆ ಜನಜೀವನಕ್ಕೆ ನೇರವಾಗಿ ಸಂಬಂಧಿಸಿದುದರಿಂದ, ವೈದ್ಯರ ಕೊರತೆಯು ಸಾರ್ವಜನಿಕ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತದೆ.
ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಆಸ್ಪತ್ರೆಗಳು ವೈದ್ಯರ ಕೊರತೆಯಿಂದಾಗಿ ನಿರ್ವಹಣಾ ತೊಂದರೆ ಎದುರಿಸುತ್ತಿವೆ. ರೋಗಿಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ, ವೈದ್ಯರ ಕೊರತೆ ಇನ್ನಷ್ಟು ಸ್ಪಷ್ಟವಾಗಿ ಗೋಚರಿಸುತ್ತಿದೆ. ತುರ್ತು ಸೇವೆ, ಶಸ್ತ್ರಚಿಕಿತ್ಸೆ ಹಾಗೂ ದಿನನಿತ್ಯದ ಚಿಕಿತ್ಸಾ ಕಾರ್ಯಗಳಲ್ಲಿ ವಿಳಂಬ ಉಂಟಾಗುತ್ತಿದೆ.
ಸರ್ಕಾರದ ಯೋಜನೆಯ ಪ್ರಕಾರ, ಶೀಘ್ರದಲ್ಲೇ ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ. ಇದರಿಂದ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆಯನ್ನು ನಿವಾರಿಸಲು ಸಾಧ್ಯವಾಗುತ್ತದೆ ಎಂಬ ನಿರೀಕ್ಷೆ ಇದೆ. ಆದರೆ, ಪ್ರಕ್ರಿಯೆ ವಿಳಂಬವಾದರೆ ಆರೋಗ್ಯ ಸೇವೆಯ ಮೇಲೆ ಇನ್ನಷ್ಟು ಹಾನಿ ಉಂಟಾಗುವ ಸಾಧ್ಯತೆ ಇದೆ.
ರೋಗಿ ಆರೈಕೆ, ಆಸ್ಪತ್ರೆಗಳ ಕಾರ್ಯಾಚರಣೆ ಹಾಗೂ ಸಾರ್ವಜನಿಕ ಆರೋಗ್ಯವನ್ನು ಕಾಪಾಡಲು ವೈದ್ಯರ ನೇಮಕಾತಿ ತುರ್ತು ಅಗತ್ಯವಾಗಿದೆ. ವೈದ್ಯರ ಕೊರತೆಯಿಂದಾಗಿ ಚಿಕಿತ್ಸೆ ವಿಳಂಬವಾಗುವುದು, ರೋಗಿಗಳ ತೃಪ್ತಿ ಕಡಿಮೆಯಾಗುವುದು ಹಾಗೂ ಆರೋಗ್ಯ ಸೇವೆಯ ಗುಣಮಟ್ಟ ಕುಸಿಯುವುದು ಸಾಮಾನ್ಯ.
ಒಟ್ಟಿನಲ್ಲಿ, ಕರ್ನಾಟಕದಲ್ಲಿ ವೈದ್ಯಾಧಿಕಾರಿ ಹುದ್ದೆಗಳ ಖಾಲಿತನವು ಆರೋಗ್ಯ ಸೇವೆಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಸರ್ಕಾರವು ತಕ್ಷಣ ಕ್ರಮ ಕೈಗೊಂಡು ನೇಮಕಾತಿ ಪ್ರಕ್ರಿಯೆಯನ್ನು ವೇಗಗೊಳಿಸಿದರೆ, ಆಸ್ಪತ್ರೆಗಳಲ್ಲಿ ಸೇವೆ ಸುಧಾರಿಸಿ, ಸಾರ್ವಜನಿಕ ಆರೋಗ್ಯವನ್ನು ಕಾಪಾಡಲು ಸಾಧ್ಯವಾಗುತ್ತದೆ.

-
ದಿನದ ಸುದ್ದಿ7 hours agoಬೆಂಗಳೂರು ಇ-ಕಾಮರ್ಸ್ ಡಾರ್ಕ್ ಸ್ಟೋರ್ಗಳಲ್ಲಿ ಅವಧಿ ಮೀರಿದ ಆಹಾರ, ಔಷಧ ಪತ್ತೆ
-
ದಿನದ ಸುದ್ದಿ7 hours agoಮಧ್ಯಪ್ರಾಚ್ಯದಲ್ಲಿ ಏಳು ತಿಂಗಳಿನಿಂದ ಯುದ್ಧದ ಕಾರ್ಮೋಡ – ಇರಾನ್–ಅಮೆರಿಕ ಸಂಘರ್ಷ ತೀವ್ರ
-
ದಿನದ ಸುದ್ದಿ7 hours agoGold Rate Fall: 24 ಕ್ಯಾರೆಟ್ ಚಿನ್ನದ ದರ ₹104 ಇಳಿಕೆ, ಬೆಳ್ಳಿ ಗ್ರಾಂಗೆ ₹250 ಸ್ಥಿರ
-
ದಿನದ ಸುದ್ದಿ7 hours agoದಾವಣಗೆರೆ ನಗರಕ್ಕೆ ರಾಜ್ಯಮಟ್ಟದ “ಸ್ವಚ್ಛ ವಾರ್ಡ್ ವಾಯು ಸರ್ವೇಕ್ಷಣೆ 2025” ಪ್ರಶಸ್ತಿಯ ಗರಿ: ರೂ 25.00 ಲಕ್ಷ ನಗದು ಬಹುಮಾನ
-
ದಿನದ ಸುದ್ದಿ6 hours agoಸ್ಕ್ರೀನ್ ಬೆಳಕು, ಸಾಮಾಜಿಕ ಜಾಲತಾಣ – ನಿದ್ರೆಗೆ ಅಡ್ಡಿ, ಆರೋಗ್ಯಕ್ಕೆ ಹಾನಿ
-
ದಿನದ ಸುದ್ದಿ6 hours agoKPSCExam: ಬೆಂಗಳೂರು ಸೇರಿದಂತೆ ಜಿಲ್ಲೆಗಳಲ್ಲಿ ವೈದ್ಯರ ಕೊರತೆ – ತಕ್ಷಣ ನೇಮಕಾತಿ ಅಗತ್ಯ
-
ದಿನದ ಸುದ್ದಿ6 hours agoಬೆಂಗಳೂರು ಸೆಪ್ಟೆಂಬರ್ನಲ್ಲಿ 31.9 ಡಿ.ಸೆ. ದಾಖಲೆ – ಹವಾಮಾನ ಇಲಾಖೆ ಎಚ್ಚರಿಕೆ
-
ದಿನದ ಸುದ್ದಿ4 hours agoEV ನೋಂದಣಿಯಲ್ಲಿ ಕರ್ನಾಟಕದ ಸಾಧನೆ – ಶುದ್ಧ ಚಲನೆಗೆ ಬೆಸ್ಕಾಂ ಮುನ್ನಡೆ



