Connect with us

ದಿನದ ಸುದ್ದಿ

ನೀರಿನ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ : ಶಾಸಕ ಬಿ.ದೇವೇಂದ್ರಪ್ಪ

Published

on

  • ವರದಿ : ಮಹಾಲಿಂಗಪ್ಪ ಜೆ ಎಚ್ ಎಮ್ ಹೊಳೆ

ಸುದ್ದಿದಿನ, ಜಗಳೂರು : ನೀರಿನ‌ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ ಎಂದು ಶಾಸಕ ಬಿ.ದೇವೇಂದ್ರಪ್ಪ ಕರೆ ನೀಡಿದರು.

ಪಟ್ಟಣದ ಹಳೇ‌ಬಸ್ ನಿಲ್ದಾಣದ ಬಳಿ ಅಟಲ್ ಭೂಜಲ‌ಯೋಜನೆ ಕಲಾ ತಂಡದ ಜನಜಾಗೃತಿ ಜಾಥಕ್ಕೆ‌ ಚಾಲನೆ‌ ನೀಡಿ ಅವರು ಮಾತನಾಡಿದರು.

ಅಂತರ್ಜಲ‌ ಹೆಚ್ಚಳಕ್ಕೆ ಅಟಲ್ ಭೂಜಲ ಯೋಜನೆ ಸಹಕಾರಿಯಾಗಲಿದೆ.ಮಳೆ‌ನೀರನ್ನು ಸಂಗ್ರಹಣೆಮಾಡಿ ಮಿತವಾಗಿ ಬಳಕೆಮಾಡಬೇಕು. ತಾಲೂಕು ಕಳೆದ ವರ್ಷ ಅತಿವೃಷ್ಠಿಗೆ ತುತ್ತಾಗಿ ಹಳ್ಳಕೊಳ್ಳಗಳು ಭರ್ತಿಯಾಗಿ ಬೆಳೆನಾಶವಾಗಿದ್ದವು. ಪ್ರಸಕ್ತಸಾಲಿನಲ್ಲಿ ಸರಿಯಾಗಿ ಮಳೆಬೀಳದೆ ಮುಂಗಾರು ಬೆಳೆಗಳು ಬಾಡುತ್ತಿವೆ.ರೈತರು ಸಂಕಷ್ಟದಲ್ಲಿದ್ದಾರೆ.ಜನಜಾನುವಾರುಗಳು ಕುಡಿಯುವ ನೀರಿಗೂ ಆಹಾಕಾರ ಉಂಟಾಗುವ ಭೀತಿ ಎದುರಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಪ್ರಕೃತಿಯಲ್ಲಿ ನೀರು,ಗಾಳಿ,ಬೆಳಕು,ದೇವರು ಕೊಟ್ಟ ಬಿಕ್ಷೆಯಾಗಿದೆ. ಕೋವಿಡ್ ಸಂದರ್ಭದಲ್ಲಿ ಆಮ್ಲಜನಕಕ್ಕೂ ಪರದಾಡುವಾಗ ಪರಿಸರದ ಮಹತ್ವ ಅರಿವಾಗಿದೆ.ಪ್ರಕೃತಿ ವಿನಾಶ ಜೀವಸಂಕುಲಕ್ಕೆ ಆಪತ್ತು.ಪ್ರಕೃತಿ ಉಳಿವಿಗಾಗಿ ಸಂಕಲ್ಪಮಾಡಬೇಕು ಎಂದರು.

ಕಲಾ‌ತಂಡದಿಂದ ನೀರಿನ‌ ಮಿತಬಳಕೆ ಕುರಿತು ಜನ ಜಾಗೃತಿ ಮೂಡಿಸಲಾಗುತ್ತಿದೆ.ಸದುಪಯೋಗಪಡೆದುಕೊಳ್ಳಬೇಕು.ಸರಕಾರದ ಯೋಜನೆಗಳು ಸಮಾಜಕ್ಕೆ ಪೂರಕವಾಗಬೇಕು ಎಂದರು.

ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ,ಡಿಪಿಎಂ ನೋಡೆಲ್ ಅಧಿಕಾರಿ ಆರ್.ಬಸವರಾಜ್,ಕೆಪಿಸಿಸಿ ಸದಸ್ಯ ಕಲ್ಲೇಶ್ ರಾಜ್ ಪಟೇಲ್,ಪ.ಪಂ‌ ಸದಸ್ಯರಾದ ರಮೇಶ್ ರೆಡ್ಡಿ,ಶಕೀಲ್ ಅಹಮ್ಮದ್,ಮುಖಂಡರಾದ ಅಹಮ್ಮದ್ ಅಲಿ,ಓಮಣ್ಣ, ಶಂಭುಲಿಂಗಪ್ಪ, ಮಾಳಮ್ಮನಹಳ್ಳಿ ವೆಂಕಟೇಶ,ಸಮಾಜಕಲ್ಯಾಣ ಇಲಾಖೆ ನಿವೃತ್ತ ಅಧಿಕಾರಿ ಬಿ.ಮಹೇಶ್ವರಪ್ಪ,ಕೃಷಿ ಇಲಾಖೆ‌ ಎಡಿ ಮಿಥುನ್ ಕಿಮಾವತ್,ನೀರಾವರಿ ಇಲಾಖೆಯ ಚಂದ್ರಗೌಡ,ಶ್ವೇತಾ ಕೆ.ಎಸ್.,ಅರ್ಪಿತ ಎಸ್ ಆರ್,ಯಶ್ವಂತ್,ಮಂಜುನಾಥ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾನುವಾರವೂ ಕ್ಯಾಶ್ ಕೌಟರ್ ಓಪನ್ ; ವಿದ್ಯುತ್ ಬಿಲ್ ಬಾಕಿ ಪಾವತಿಸಿ : ಬೆಸ್ಕಾಂ

Published

on

ಸುದ್ದಿದಿನಡೆಸ್ಕ್:ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕದ ಕಡಿತದಿಂದ ತೊಂದರೆಗೊಳಗಾಗದಂತೆ ನಾಳೆ ಮತ್ತು ಇದೇ 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್ ಕೌಂಟರ್‌ಗಳು ತೆರೆದಿರಲಿವೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕ ಕಡಿತದಿಂದ ತೊಂದರೆಗೆ ಒಳಗಾಗಬಾರದು ಹಾಗೂ ಆನ್‌ಲೈನ್ ಪೇಮೆಂಟ್ ಬಳಸದವರ ಅನಕೂಲಕ್ಕಾಗಿ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಿದ್ದು, ಸೆಪ್ಟೆಂಬರ್ 1ರಿಂದಲೇ ಈ ನಿಯಮ ಜಾರಿಯಾಗಿದೆ ಎಂದು ಹೇಳಿದೆ.

ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂಪಾಯಿ ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ಗೃಹ ಜ್ಯೋತಿಯೋಜನೆ ಅಡಿ ಶೂನ್ಯ ಬಿಲ್ ಪಡೆಯುತ್ತಿರುವ ಗ್ರಾಹಕರ ಹಿಂಬಾಕಿ ಶೂನ್ಯವಿದ್ದಲ್ಲಿ ಈ ಬಗ್ಗೆ ಚಿಂತಿಸಬೇಕಿಲ್ಲ ಎಂದು ಪ್ರಕಟಣೆ ಸ್ಪಷ್ಟಪಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ

Published

on

ಸುದ್ದಿದಿನಡೆಸ್ಕ್:ಹತ್ತು ವರ್ಷಗಳ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ನಿರ್ಣಯ ತೆಗೆದುಕೊಳ್ಳಲು ಸೆಪ್ಟೆಂಬರ್ 17ಕ್ಕೆ ಸಂಪುಟ ಸಭೆ ನಡೆಯಲಿದೆ.

ಜಿಲ್ಲೆಯ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಬಗ್ಗೆ ವಿಶೇಷ ಆದ್ಯತೆ ನೀಡಲು ನಿರ್ಧರಿಸಲಾಗಿದೆ. ಈ ಹಿಂದೆ 2014ರ ನವೆಂಬರ್ 28ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ

Published

on

ಸುದ್ದಿದಿನಡೆಸ್ಕ್:ಇಂದು ಗಣೇಶ ಚತುರ್ಥಿ, ದೇಶ ಸೇರಿ ನಾಡಿನದ್ಯಂತ ಹಿಂದೂ ಸಂಪ್ರದಾಯದಲ್ಲಿ ನಾಡಿನ ಜನತೆ ತಮ್ಮ ಒಳಿತಿಗಾಗಿ, ಜ್ಞಾನ ಸಮೃದ್ಧಿಗಾಗಿ ಶಿವನ ಪುತ್ರ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ ಅತ್ಯಂತ ಶ್ರದ್ದಾ ಭಕ್ತಿಯಿಂದ ಈ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ ಅದರಂತೆ ಬೆಂಗಳೂರು ಜನತೆ ಮನೆ ಮನೆಗಳಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶನ ಮೂರ್ತಿಗಳನ್ನು ಜಲ ಮೂಲಗಳಲ್ಲಿ ವಿಸರ್ಜಿಸಲು ಬೆಂಗಳೂರು ಮಹಾ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಇನ್ನೂ ಗಣೇಶ ಚತುರ್ಥಿ ವಿಶೇಷವಾಗಿ ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತ್ತೆ ಅನೇಕ ಸಚಿವರು ಹಾಗೂ ಗಣ್ಯರು ಶುಭ ಹಾರೈಸಿದ್ದಾರೆ.

ಗಣೇಶ ಹಬ್ಬದ ಆಚರಣೆಯ ಸಂದರ್ಭದಲ್ಲಿ ಮದ್ಯಪಾನಾಸಕ್ತರು ಗಲಭೆಮಾಡುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ ನಿಯಮಗಳಡಿ ಇಂದಿನಿಂದ ಉಡುಪಿ ಜಿಲ್ಲೆಯಾದ್ಯಂತ ಹಾಗೂ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಇದೇ 9 ಮತ್ತು ಸೆಪ್ಟೆಂಬರ್ 11 ರಂದು ಮಧ್ಯಾಹ್ನ 2 ರಿಂದ ಮದ್ಯರಾತ್ರಿ 12.00 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ನೈಸರ್ಗಿಕವಾಗಿ ತಯಾರಿಸಿದ ಮಣ್ಣಿನ ಗಣೇಶನ ವಿಗ್ರಹಗಳನ್ನು ಮಾತ್ರ ಬಳಸುವ ಮೂಲಕ ಕೆರೆ, ನದಿ ಮೂಲಗಳು ಕಲುಷಿತಗೊಳಿಸದಂತೆ ಕಾಪಾಡುವುದು ನಮ್ಮ ಕರ್ತವ್ಯ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending