Connect with us

ದಿನದ ಸುದ್ದಿ

ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಎಲ್.ಪಿ.ಜಿಗಾಗಿ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆ(3ನೇ ಹಂತ)ಯಡಿ ಬಡ ಕುಟುಂಬಗಳ ಮಹಿಳಾ ಸಬಲೀಕರಣದ ಉದ್ದೇಶದಿಂದ ಉಚಿತ ಎಲ್.ಪಿ.ಜಿ ವಿತರಣೆ ಮಾಡಲಾಗುತ್ತದೆ.

ಉಜ್ವಲ್ ಯೋಜನೆಯಡಿ ಮೂರನೇ ಹಂತದ ಎಲ್.ಪಿ.ಜಿ ಸಂಪರ್ಕ ಪಡೆಯುವ ಗ್ರಾಹಕರಿಗೆ ಎರಡು ಬರ್ನರ್ ಸ್ಟೌವ್, 14.2 ಕೆ.ಜಿ ಸಿಲಿಂಡರ್ ಮತ್ತು ಎರಡು 5 ಕೆ.ಜಿ ಸಿಲಿಂಡರ್, ಒಂದು ರೆಗ್ಯುಲೇಟರ್, ಒಂದು ಸುರಕ್ಷಾ ಹೋಸ್, ಡಿ.ಜಿ.ಸಿ.ಸಿ ಬುಕ್‍ಗಳನ್ನು ಸಂಪೂರ್ಣ ಉಚಿತವಾಗಿ ನೀಡಲಾಗುವುದು.

ಇದುವರೆಗೂ ಎಲ್.ಪಿ.ಜಿ ಅನಿಲ ಸಂಪರ್ಕಗಳನ್ನು ಹೊಂದಿರದ ಕುಟುಂಬದ ಮಹಿಳೆಯರು ಅಗತ್ಯ ದಾಖಲೆಗಳೊಂದಿಗೆ ಹತ್ತಿರದ ಎಲ್.ಪಿ.ಜಿ ವಿತರಕ ಕಂಪನಿಗೆ ಭೇಟಿ ನೀಡಿ ಸೌಲಭ್ಯವನ್ನು ಪಡೆಯಬಹುದು ಮತ್ತು ಕ್ಯೂ.ಆರ್.ಕೋಡ್ ಮೂಲಕ ಯೋಜನೆ ಮಾಹಿತಿ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ. ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಜೈವಿಕ ಗೊಬ್ಬರಗಳ ಮಾರಾಟ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ಜೈವಿಕ ಕೇಂದ್ರದಲ್ಲಿ, ಉತ್ತಮ ಗುಣಮಟ್ಟದ ಜೈವಿಕ ನಿಯಂತ್ರಕಗಳಾದ ಟ್ರೈಕೋಡರ್ಮ, ಸೂಡೊಮೋನಾಸ್ ಹಾಗೂ ಜೈವಿಕ ಗೊಬ್ಬರಗಳಾದ ದ್ರವರೂಪದ ಜೈವಿಕ ಗೊಬ್ಬರ ಘನರೂಪದ ಜೈವಿಕ ಗೊಬ್ಬರ ಅಜಟೋಬ್ಯಾಕ್ಟರ್ ಜೈವಿಕ ಗೊಬ್ಬರ ಗಳನ್ನು ತಯಾರು ಮಾಡಿ ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತದೆ.

ಇವುಗಳು ಮಣ್ಣಿನ ಜೈವಿಕ ಮತ್ತು ಭೌತಿಕ ಗುಣಗಳನ್ನು ಕಾಪಾಡಿ ಭೂಮಿಯ ಫಲವತ್ತತೆ ಹೆಚ್ಚಿಸುವಲ್ಲಿ, ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಆಸಕ್ತ ರೈತರು ಉತ್ತಮ ಗುಣಮಟ್ಟದ ಜೈವಿಕ ನಿಯಂತ್ರಕ ಹಾಗೂ ಜೈವಿಕ ಗೊಬ್ಬರಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು ಹೆಚ್ಚಿನ ಮಾಹಿತಿಗಾಗಿ ಮೊ.ಸಂ:9611556835 ಸಂಪರ್ಕಿಸಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬೆಂಗಳೂರು : ಐಷಾರಾಮಿ ಹೋಟೆಲ್‌ಗಳಿಗೆ ಬಾಂಬ್ ಬ್ಲಾಸ್ಟ್ ಬೆದರಿಕೆ

Published

on

ಸುದ್ದಿದಿನ ಡೆಸ್ಕ್ : ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಮೂರು ಐಷಾರಾಮಿ ಹೊಟೇಲ್‌ಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿದೆ.

ಇಂದು ಬೆಳಗ್ಗೆ ಹೊಟೇಲ್ ಸಿಬ್ಬಂದಿ ಇ-ಮೇಲ್ ಪರಿಶೀಲಿಸಿದಾಗ ಬೆದರಿಕೆ ಸಂದೇಶ ಬೆಳಕಿಗೆ ಬಂದಿದೆ. ಮಧ್ಯರಾತ್ರಿ 2 ಗಂಟೆಗೆ ಬಾಂಬ್ ಸ್ಫೋಟಿಸುವುದಾಗಿ ಉಲ್ಲೇಖಿಸಲಾಗಿದೆ. ತಕ್ಷಣವೇ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೊಟೇಲ್‌ಗೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ತೆರಳಿ, ಪರಿಶೀಲನೆ ನಡೆಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

HELPLINE | ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣ ; ಸಂತ್ರಸ್ತರು ಎಸ್‌ಐಟಿ ಸಂಪರ್ಕಿಸಿ

Published

on

ಸುದ್ದಿದಿನ ಡೆಸ್ಕ್ : ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ರಚಿಸಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಸಹಾಯವಾಣಿಗೆ ಈವರೆಗೆ 30ಕ್ಕೂ ಹೆಚ್ಚು ಕರೆಗಳು ಬಂದಿವೆ.

ದೌರ್ಜನ್ಯಕ್ಕೆ ಒಳಗಾಗಿರುವ ಸಂತ್ರಸ್ತರು ಎಸ್‌ಐಟಿ ಸಂಪರ್ಕಿಸಿ ದೂರು ನೀಡಬಹುದು. ಅವರು ಹೇಳಿದ ಸ್ಥಳಕ್ಕೆ ಬಂದು ಮಾಹಿತಿ ಸಂಗ್ರಹಿಸಲು ತಂಡ ಸಿದ್ಧವಿದೆ. ಗುರುತು ಹಾಗೂ ಮಾಹಿತಿ ವಿಷಯದಲ್ಲಿ ಗೌಪ್ಯತೆ ಕಾಪಾಡಲಾಗುತ್ತದೆ. ನೇರವಾಗಿ ಅಧಿಕಾರಿಗಳನ್ನೂ ಸಂಪರ್ಕಿಸಬಹುದು ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

ಸಹಾಯವಾಣಿ: 6360938947

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending