Connect with us

ದಿನದ ಸುದ್ದಿ

ಪರಿಶಿಷ್ಟ ಜಾತಿ ಯುವಜನರಿಗೆ ‘ನಿರೂಪಣಾ ಮತ್ತು ವಾರ್ತಾ ವಾಚಕರ ತರಬೇತಿ ಶಿಬಿರ’ : ಅರ್ಜಿ ಆಹ್ವಾನ

Published

on

ಸುದ್ದಿದಿನ, ಬೆಂಗಳೂರು : 2023-24ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಯುವಜನರಿಗೆ ಅನುಷ್ಠಾನಗೊಳಿಸಲಿರುವ ತರಬೇತಿ ಶಿಬಿರಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಯುವಜನರಿಗೆ ಪೂರಕವಾದ ಉದ್ಯೋಗಗಳ ವಿಫುಲ ಅವಕಾಶಗಳಿದ್ದು, ಅದರಂತೆ ಪರಿಶಿಷ್ಟ ಜಾತಿ ಯುವಜನರಿಗೆ ಕೆಳಕಂಡ ತರಬೇತಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಬಗ್ಗೆ 2023-24ನೇ ಸಾಲಿನ ಕ್ರಿಯಾಯೋಜನೆಯಲ್ಲಿ ಅಳವಡಿಸಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಈ ಕೆಳಕಂಡ ತರಬೇತಿ ಶಿಬಿರವನ್ನು ಇಲಾಖೆ ವತಿಯಿಂದ ನೀಡಲಾಗುವುದು.


ತರಬೇತಿ ಶಿಬಿರ : ನಿರೂಪಣಾ ಮತ್ತು ವಾರ್ತಾ ವಾಚಕರ ತರಬೇತಿ ಶಿಬಿರ (8 ದಿನಗಳು)

ದಿನಾಂಕ : 31-01-2024 ರಿಂದ 07-02-2024 ರವರೆಗೆ

ವಿದ್ಯಾರ್ಹತೆ : ಪದವಿ ಹಾಗೂ ಜರ್ನಲಿಸಂಗೆ ಪ್ರಾಮುಖ್ಯತೆ

ವಯೋಮಿತಿ : 15 ರಿಂದ 29 ವರ್ಷ


ಯುವಜನರನ್ನು ಸ್ವಾವಲಂಭಿಯಾಗಲು ಉತ್ತೇಜಿಸುವ ದೃಷ್ಟಿಯಿಂದ (ಹೊರ ಜಿಲ್ಲೆಗಳ ಆಸಕ್ತ ಯುವಜನರಿಗೆ ವಸತಿ ಸಹಿತ) ಮೇಲ್ಕಂಡ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು ಈ ತರಬೇತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ.

ಅದರಂತೆ ಸಂಬಂಧಪಟ್ಟ ಜಿಲ್ಲೆಯ ಉಪ/ಸಹಾಯಕ ನಿರ್ದೇಶಕರು ತಮ್ಮ ಜಿಲ್ಲೆಯಲ್ಲಿ ಸ್ಥಳೀಯವಾಗಿ ಪ್ರಚಲಿತವಿರುವ ದಿನಪತ್ರಿಕೆಗಳಲ್ಲಿ ವ್ಯಾಪಕ ಪ್ರಚಾರವನ್ನು ನೀಡಿ ಅಸಕ್ತ ಯುವಜನರಿಂದ ಅರ್ಜಿಗಳನ್ನು ಪಡೆದು ಕೇಂದ್ರ ಕಚೇರಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ.


ಮುಂದುವರೆದು ಮೊದಲನೇ ತರಬೇತಿ ಶಿಬಿರದಲ್ಲಿ 50 ಶಿಬಿರಾರ್ಥಿಗಳಿಗೆ ಸೀಮಿತಗೊಳಿಸಬೇಕಾಗಿರುವುದರಿಂದ ಸಂಬಂಧಪಟ್ಟ ಉಪ/ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಸ್ವೀಕರಿಸಿದ ಅರ್ಜಿಗಳನ್ನು 27-01-2024 ರೊಳಗೆ ಕೇಂದ್ರ ಕಚೇರಿಯ ಮೂಲಕ ಈ ಮೇಲ್ (tspscp@gmail.com) ಹಾಗೂ ಅಂಚೆ ಮೂಲಕ ಕಳುಹಿಸಲು ಸೂಚಿಸಿದೆ. ತದನಂತರ ಬಂದಿರುವ ಅರ್ಜಿಗಳನ್ನು ಶಿಬಿರದಲ್ಲಿ ಪರಿಗಣಿಸಲು ಅವಕಾಶವಿರುವುದಿಲ್ಲ. ತರಬೇತಿ ಶಿಬಿರದಲ್ಲಿ ಭಾಗವಹಿಸುವ
ಶಿಬಿರಾರ್ಥಿಗಳ ದೂರವಾಣಿ/ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸ ಬೇಕು.


ಶಿಬಿರದಲ್ಲಿ ಹಾಜರಾಗುವ ಯುವಜನರಿಗೆ ಊಟೋಪಹಾರ, ಪ್ರಮಾಣ ಪತ್ರ ಹಾಗೂ ಹೊರ ಜಿಲ್ಲೆಗಳಿಂದ ಭಾಗವಹಿಸುವ ಯುವಜನರಿಗೆ ಸಾಮಾನ್ಯ ವಸತಿ ವ್ಯವಸ್ಥೆಯನ್ನು ನೀಡಲಾಗುವುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ “ಕುಕಿಂಗ್ ವಿಥೌಟ್ ಫೈರ್” ಎಂಬ ಬೆಂಕಿ ರಹಿತ ಆಹಾರ ತಯಾರಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಹಲವಾರು ತಂಡಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ಅಂಗವಾಗಿ ಆಹಾರ ಮೇಳವೂ ಏರ್ಪಡಿಸಲಾಯಿತು. ವಿದ್ಯಾರ್ಥಿನಿಯರು ಕಾರಟ್ ಹಲ್ವಾ, ಫ್ರೂಟ್ ಸಲಾಡ್, ಚುರಿ ಮುರಿ, ಮೊಸರು ಅವಲಕ್ಕಿ, ವಿವಿಧ ರುಚಿಯ ಜ್ಯೂಸ್‌ಗಳು, ಕೊಕೊನೆಟ್ ಬರ್ಫಿ, ಕುಕುಂಬರ್ ಬೋಟ್, ಟೊಮೇಟೊ ಚಾಟ್, ಆಪಲ್ ಪೇಡ ಮತ್ತು ಅವಲಕ್ಕಿ ಚಿತ್ರಾನ್ನ ಸೇರಿದಂತೆ ಹಲವಾರು ಪೌಷ್ಟಿಕ ಹಾಗೂ ರುಚಿಕರ ಆಹಾರಗಳನ್ನು ತಯಾರಿಸಿ ಪ್ರದರ್ಶನೆ ಮತ್ತು ಮಾರಾಟ ಮಾಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಪಾಲ್ಗೊಂಡು ಯಶಸ್ವಿ ಕಾರ್ಯಕ್ರಮವನ್ನಾಗಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ

Published

on

ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್‌ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.

ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.

ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಹಿರಿಯ ಕ್ರಿಕೆಟ್ ಪಟು ಎನ್ಆರ್‌ಎಚ್ ರಮೇಶ್ ನಿಧನ

Published

on

ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್‌ಎಚ್‌ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್‌ನ ನಾಯಕನಾಗಿದ್ದ ಎನ್.ಆರ್‌.ಎಚ್‌.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್‌, 2ನೇ ಮೇನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.

90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್‌ ಬಾಲ್‌ ಕ್ರಿಕೆಟ್‌ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್‌ಎಚ್‌ ರಮೇಶ ನಿಧನಕ್ಕೆ ಎಫ್‌ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್‌ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್‌ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending