Connect with us

ದಿನದ ಸುದ್ದಿ

ಗ್ರಾಮ ಪಂಚಾಯಿತಿ ಸೇವೆಗಳು ಇನ್ನು ವಾಟ್ಸಪ್‍ನಲ್ಲಿ

Published

on

ಸುದ್ದಿದಿನ,ದಾವಣಗೆರೆ : ಗ್ರಾಮ ಪಂಚಾಯಿತಿ ಸೇವೆಗಳನ್ನು ಪಡೆಯಲು ಡಿಜಿಟಲೀಕರಣಕ್ಕೆ ಹೆಚ್ಚಿನ ಒತ್ತು ನೀಡಿದ್ದು ಪಂಚಮಿತ್ರ ಸೇವೆಗಳನ್ನು ವಾಟ್ಸಪ್ ಚಾಟ್‍ನಲ್ಲಿ ಪಡೆಯಲು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಚಾಲನೆ ನೀಡಿದರು.

ಅವರು ಭಾನುವಾರ ದಾವಣಗೆರೆ ತಾ; ದೊಡ್ಡಬಾತಿ ಗ್ರಾಮದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಗ್ರಾಮ ಪಂಚಾಯಿತಿ ದೊಡ್ಡಬಾತಿ, ಹಳೆಬಾತಿಯ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಪಂಚಮಿತ್ರ ವಾಟ್ಸಪ್ ಸೇವೆಗೆ ಸಚಿವರು ಚಾಲನೆ ನೀಡಿದರು.

ಗ್ರಾಮೀಣ ಜನರಿಗೆ 89 ಸೇವೆಗಳನ್ನು ನೀಡುವ ಪಂಚಮಿತ್ರ ಪೋರ್ಟಲ್ ಮತ್ತು ವಾಟ್ಸಾಪ್ ಚಾಟ್ ಡಿಜಿಟಲ್ ವೇದಿಕೆಯ ಮೂಲಕ ಪಡೆಯಲು ಅವಕಾಶ ಕಲ್ಪಿಸಿದೆ. ಇದರ ಮೂಲಕ ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ ವಿವಿಧ 17 ಸೇವೆಗಳು, ಇತರೆ ಇಲಾಖೆಗಳಿಗೆ ಸಂಬಂಧಿಸಿದ 72 ಸೇವೆಗಳು ಈ ವೇದಿಕೆಯಲ್ಲಿ ಸಿಗಲಿವೆ. ಕಟ್ಟಡ ಪರನಾನಗಿ, ಹೊಸ ನೀರು ನಲ್ಲಿ ಸಂಪರ್ಕ, ಬೀದಿ ದೀಪ ನಿರ್ವಹಣೆ, ಸ್ವಾಧೀನ ಪ್ರಮಾಣ ಪತ್ರ, ವ್ಯಾಪಾರ ಪರವಾನಗಿ, ನಿರಾಕ್ಷೇಪಣಾ ಪತ್ರ, ಜಾಬ್ ಕಾರ್ಡ್ ವಿತರಣೆ ಸೇರಿದಂತೆ ಗ್ರಾಮ ಪಂಚಾಯಿತಿ ಸೇವೆಗಳನ್ನು ಇದರಲ್ಲಿ ಪಡೆಯಬಹುದಾಗಿದೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್ ಪಂಚಮಿತ್ರ ವಾಟ್ಸಪ್ ಸೇವೆಗಳ ಬಗ್ಗೆ ವಿವರಿಸಿದರು.

ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ, ದೊಡ್ಡಬಾತಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಂಜುಳಾ.ಡಿ ಇವರು ಅಧ್ಯಕ್ಷತೆ ವಹಿಸಿದ್ದರು. ಹಳೆಬಾತಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸೀತಾ ಆರ್, ದೊಡ್ಡಬಾತಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಭಾನುವಳ್ಳಿ ಸಿದ್ದಪ್ಪ, ಹಳೇಬಾತಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪುಷ್ಪ ಎ, ಅಪರ ಜಿಲ್ಲಾಧಿಕಾರಿ ಸೈಯ್ಯದಾ ಅಫ್ರೀನ್ ಭಾನು ಎಸ್.ಬಳ್ಳಾರಿ, ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕರಾದ ಕರಿಬಸಪ್ಪ, ಗಿರೀಶ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು. ಉಪವಿಭಾಗಾಧಿಕಾರಿ ದುರ್ಗಾಶ್ರೀ ಸ್ವಾಗತಿಸಿದರು.

ವೆಬ್ಸೈಟ್ ಲಿಂಕ್

https://prcrdpr.karnataka.gov.in/gallery/Panchamitra%20Portal/en

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.

ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿಭಾಗವಾರು ಫಲಿತಾಂಶದ ವಿಶ್ಲೇಷಣೆ

ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.

ವಾಣಿಜ್ಯ ವಿಭಾಗ (Commerce)

ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.

ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.

ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.

ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.

ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ

Published

on

ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.

ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending