ದಿನದ ಸುದ್ದಿ
ಲೋಕಸಭಾ ಚುನಾವಣೆ | ದಾವಣಗೆರೆ ಜಿಲ್ಲೆಯಲ್ಲಿ 63 ವಿಶೇಷ ಮತಗಟ್ಟೆಗಳ ಸ್ಥಾಪನೆ, ವಿಭಿನ್ನವಾಗಿ ಸಿದ್ದವಾಗಿರುವ ಮತಗಟ್ಟೆಗಳು
ಸುದ್ದಿದಿನ ಡೆಸ್ಕ್ : ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ಚುನಾವಣೆ ನಡೆಯುತ್ತಿದ್ದು ಜಿಲ್ಲೆಯಲ್ಲಿನ ಎಲ್ಲಾ ಮತಗಟ್ಟೆಗಳಲ್ಲಿ ಮತದಾರರಿಗೆ ಅಗತ್ಯವಿರುವ ಎಲ್ಲಾ ಮೂಲಭೂತ ಸೌಲಭ್ಯಗಳನ್ನ ಕಲ್ಪಿಸಿ 7 ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ 5 ರಂತೆ 35 ಸಖಿ ಮತಗಟ್ಟೆಗಳು, ತಲಾ 1 ರಂತೆ 7 ಯುವ ನಿರ್ವಾಹಣೆ ಮತಗಟ್ಟೆಗಳು, ತಲಾ 1 ರಂತೆ 7 ಸಾಂಪ್ರದಾಯಿಕ ಮತಗಟ್ಟೆಗಳು, ತಲಾ 1 ರಂತೆ 7 ಧೈಯ ಆಧಾರಿತ ಮತಗಟ್ಟೆಗಳು ಹಾಗೂ ತಲಾ 1 ರಂತೆ 7 ವಿಶೇಷ ಚೇತನ ಮತಗಟ್ಟೆಗಳು ಸೇರಿ 63 ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಿ ವಿಶೇಷವಾಗಿ ಅಲಂಕರಿಸಿ ಮತದಾರರನ್ನು ಕೈಬೀಸಿ ಕರೆಯುವಂತೆ ಸಿಂಗರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ: ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.
ಸಖಿ ಮತಗಟ್ಟೆ
103- ಜಗಳೂರು ತಾ; ಮತಗಟ್ಟೆ 8 ಸರ್ಕಾರಿ ಉನ್ನತೀಕರಿಸಿದ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಕೊಠಡಿ 1 ಅರಸೀಕೆರೆ. ಇಲ್ಲಿ ಪುರುಷ 334, ಮಹಿಳೆ 345 ಸೇರಿ 679, ಸೊಕ್ಕೆ ಮತಗಟ್ಟೆ 20 ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಪುರುಷ 388, ಮಹಿಳೆ 395 ಒಟ್ಟು-783. ಪಲ್ಲಾಗಟ್ಟೆ ಮತಗಟ್ಟೆ 90 ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಪುರುಷ 390, ಮಹಿಳೆ 389 ಸೇರಿ 779, ಜಗಳೂರು ಪಟ್ಟಣ ಮತಗಟ್ಟೆ 190 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (ಸಂತೆ ಪೇಟೆ) ಕೊಠಡಿ ಸಂಖ್ಯೆ 2 ಇಲ್ಲಿ ಪುರುಷ 635, ಮಹಿಳೆ 688 ಸೇರಿ 1323, ಬಿದರಿಕೆರೆ ಮತಗಟ್ಟೆ 250 ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, (ಹಳೆಯ ಕಟ್ಟಡ) (ಪಶ್ಚಿಮ ಭಾಗ) ಪುರುಷ 575, ಮಹಿಳೆ 614 ಸೇರಿ 1189.
ಹರಿಹರ ವಿಧಾನಸಭಾ ಕ್ಷೇತ್ರ
ಹರಿಹರ ಮತಗಟ್ಟೆ 59, ಮೈಸೂರು ಕಿರ್ಲೋಸ್ಕರ್ ಹೈಸ್ಕೂಲ್ ಕೊಠಡಿ ಸಂಖ್ಯೆ-2 ರಲ್ಲಿ ಪುರುಷ 505, ಮಹಿಳೆ 487 ಸೇರಿ 992, ಬೆಳ್ಳೂಡಿ ಮತಗಟ್ಟೆ 111 ಶ್ರೀ ಪಟೇಲ್ ಗುರು ಬಸಪ್ಪ ಪ್ರೌಢಶಾಲೆ ಪುರುಷ 420, ಮಹಿಳೆ 388 ಸೇರಿದಂತೆ 808, ಹರಿಹರ ಮತಗಟ್ಟೆ 46, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕಚೇರಿ ಇಲ್ಲಿ ಪುರುಷ 650, ಮಹಿಳೆ 623 ಸೇರಿ 1273, ಮಲೆಬೆನ್ನೂರು ಮತಗಟ್ಟೆ 192 ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕೊಠಡಿ ಸಂಖ್ಯೆ 2 ಇಲ್ಲಿ ಪುರುಷ 520, ಮಹಿಳೆ 573 ಸೇರಿ 1093. ಕುಂಬಳೂರು ಮತಗಟ್ಟೆ 167 ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕೊಠಡಿ ಸಂಖ್ಯೆ-1 ಇಲ್ಲಿ ಪುರುಷ 513, ಮಹಿಳೆ 526 ಒಟ್ಟು-1039.
ವಿಧಾನಸಭಾ ಕ್ಷೇತ್ರ ದಾವಣಗೆರೆ ಉತ್ತರ
ಕ್ಕಕರಗೊಳ್ಳ ಮತಗಟ್ಟೆ 4 ಸರ್ಕಾರಿ ಸಂಯುಕ್ತ ಪಿಯು ಕಾಲೇಜು ಕೊಠಡಿ ಸಂಖ್ಯೆ 1 ಪುರುಷ 582, ಮಹಿಳೆ 615 ಸೇರಿ 1197, ಬೇತೂರು 23 ಗ್ರಾಮ ಪಂಚಾಯಿತಿ ಕಚೆÉೀರಿ ಇಲ್ಲಿ ಪುರುಷ 564, ಮಹಿಳೆ 593 ಒಟ್ಟು-1157, ದಾವಣಗೆರೆ 208 ಅಥಣಿ ಹೈಸ್ಕೂಲ್ ಎಂಸಿಸಿ ಬಿ.ಬ್ಲಾಕ್ ಪುರುಷ 656, ಮಹಿಳೆ 671 ಒಟ್ಟು-1327. ದಾವಣಗೆರೆ 98 ಈಶ್ವರಮ್ಮ ಹೈಯರ್ ಪ್ರೈಮರಿ ಸ್ಕೂಲ್, ಪಿ.ಜೆ.ಬಡಾವಣೆ ಇಲ್ಲಿ ಪುರುಷ 606, ಮಹಿಳೆ 594 ಒಟ್ಟು-1200, ನಿಟ್ಟುವಳ್ಳಿ 137 ಸರ್ಕಾರಿ ಪ್ರೌಢಶಾಲೆ ಶಾಲಾ ಕೊಠಡಿ ಸಂಖ್ಯೆ 2 ರಲ್ಲಿ ಪುರುಷ 477, ಮಹಿಳೆ 539 ಒಟ್ಟು-1016.
ದಾವಣಗೆರೆ ದಕ್ಷಿಣ ಕ್ಷೇತ್ರ
ದಾವಣಗೆರೆ 142 ಮುದೇಗೌಡ್ರು ಮಲ್ಲಮ್ಮ ಮುರಿಗೆಪ್ಪ ಬಾಲಕಿಯರ ಪ್ರೌಢಶಾಲೆ, ಕೆ.ಆರ್.ರಸ್ತೆ ಇಲ್ಲಿ ಪುರುಷ 731, ಮಹಿಳೆ 737 ಒಟ್ಟು-1468. ಶಿರಮಗೊಂಡನಹಳ್ಳಿ 178 ಸರ್ಕಾರಿ ಪ್ರೌಢಶಾಲೆ ಪುರುಷ 497, ಮಹಿಳೆ 519 ಒಟ್ಟು-1016. ಹದಡಿ 202 ಗ್ರಾಮ ಪಂಚಾಯಿತಿ ಕಚೇರಿ ಪುರುಷ 554, ಮಹಿಳೆ 582 ಒಟ್ಟು-1136. ಜಾಲಿನಗರ 36 ಶ್ರೀ ದುಗಾರ್ಂಬಿಕಾ ಸಂಯುಕ್ತ ಪ್ರೌಢಶಾಲೆ ಪ್ರಯೋಗಾಲಯ ಪುರುಷ 336, ಮಹಿಳೆ 378 ಒಟ್ಟು-714, ದಾವಣಗೆರೆ ದೇವರಾಜ ಅರಸ್ ಬಡಾವಣೆ 41 ಶ್ರೀಮತಿ ಚಿರಡೋಣಿ ಕಮಲಮ್ಮ ವೈ ತಿಮ್ಮಪ್ಪ ಶೆಟ್ಟಿ ಸರ್ಕಾರಿ ಮಾಡರ್ನ್ ಹೈಯರ್ ಪ್ರೈಮರಿ ಸ್ಕೂಲ್ ಪುರುಷ 456, ಮಹಿಳೆ 449 ಒಟ್ಟು-905.
ಮಾಯಕೊಂಡ ಕ್ಷೇತ್ರ
ಆನಗೋಡು 61 ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪುರುಷ 630, ಮಹಿಳೆ 640 ಒಟ್ಟು-1231, ತೋಳಹುಣಸೆ ಯಲ್ಲಮ್ಮನಗರ 36 ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಕೊಠಡಿ ಸಂಖ್ಯೆ 1 ಪುರುಷ 364, ಮಹಿಳೆ 357 ಒಟ್ಟು-706. ಮಾಯಕೊಂಡ 160 ಕರ್ನಾಟಕ ಪಬ್ಲಿಕ್ ಸ್ಕೂಲ್ ಪುರುಷ 264, ಮಹಿಳೆ 275 ಒಟ್ಟು-539, ಅತ್ತಿಗೆರೆ 112 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪುರುಷ 493, ಮಹಿಳೆ 499 ಒಟ್ಟು-990, ತ್ಯಾವಣಿಗಿ 177, ಕರ್ನಾಟಕ ಪಬ್ಲಿಕ್ ಸ್ಕೂಲ್ ಹೈಸ್ಕೂಲ್ ವಿಭಾಗ ಪುರುಷ 492, ಮಹಿಳೆ 507 ಒಟ್ಟು 999 ಮತದಾರರು.
ವಿಧಾನಸಭಾ ಕ್ಷೇತ್ರ ಚನ್ನಗಿರಿ
ನಲ್ಲೂರು 105 ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಪುರುಷ 640, ಮಹಿಳೆ 635 ಸೇರಿ 1275, ಮಸಣಿಕೆರೆ 248 ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಪುರುಷ 329, ಮಹಿಳೆ 299 ಸೇರಿ 628. ಕೆರೆಬಿಳಚಿ 62 ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಬಾಲಕಿಯರ ಶಾಲೆ (ಪಶ್ಚಿಮ ಭಾಗ) ಪುರುಷ 401, ಮಹಿಳೆ 465 ಒಟ್ಟು-866, ಹಿರೇಕೂಗಲೂರು 17 ಶ್ರೀ ತರಳಬಾಳು ಜಗದ್ಗುರ ಸರ್ಕಾರಿ ಜೂನಿಯರ್ ಕಾಲೇಜು ಹೈಸ್ಕೂಲ್ ವಿಭಾಗ ಪುರುಷ 608, ಮಹಿಳೆ 636 ಒಟ್ಟು-1244, ಚನ್ನಗಿರಿ ಬಿ.ಇ.ಓ ಕಚೇರಿ ಹಿಂಭಾಗ 169 ಸರ್ಕಾರಿ ಸಂಯುಕ್ತ ಬಾಲಕಿಯರ ಪ್ರೌಢಶಾಲೆ ಪುರುಷ 608, ಮಹಿಳೆ 636 ಒಟ್ಟು-1244.
ಹೊನ್ನಾಳಿ ಕ್ಷೇತ್ರ
ಸುರಹೊನ್ನೆ 169 ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಪುರುಷ 432 ಮಹಿಳೆ 489 ಒಟ್ಟು-921, ಗೋವಿನಕೋವಿ 149 ಸರ್ಕಾರಿ ಪ್ರೌಢಶಾಲೆ ಪುರುಷ 563, ಮಹಿಳೆ 616 ಒಟ್ಟು-1179, ನ್ಯಾಮತಿ 178 ಸರ್ಕಾರಿ ಪಿಯು ಕಾಲೇಜು ಕರ್ನಾಟಕ ಪಬ್ಲಿಕ್ ಸ್ಕೂಲ್ ಪುರುಷ 495, ಮಹಿಳೆ 520 ಒಟ್ಟು-1015, ಹಿರೇಬಾಸೂರು 129 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪುರುಷ 340, ಮಹಿಳೆ 314 ಒಟ್ಟು-654, ಹೊನ್ನಾಳಿ ತಾಲ್ಲೂಕು ಪಂಚಾಯತ್ ಕಚೇರಿ 84 ಪುರುಷ 294, ಮಹಿಳೆ 303 ಸೇರಿ 597 ಮತದಾರರು.
ಯುವ ಮತದಾರರ ಮತಗಟ್ಟೆಗಳು
ಜಗಳೂರು ತಾ; 183 ಜಗಳೂರು ಪಟ್ಟಣದ ಹೊರಕೆರೆ ಅಂಗನವಾಡಿ ಕೇಂದ್ರ ಇಲ್ಲಿ ಪುರುಷ 353, ಮಹಿಳೆ 377 ಒಟ್ಟು-730, ಹರಿಹರ ತಾ; 61 ಮೈಸೂರು ಕಿರ್ಲೋಸ್ಕರ್ ಪ್ರೌಢಶಾಲೆ ಕೊಠಡಿ ಸಂಖ್ಯೆ-5 ಇಲ್ಲಿ ಪುರುಷ 708, ಮಹಿಳೆ 731 ಸೇರಿ 1439, ದಾವಣಗೆರೆ ಉತ್ತರ; ಕುಂದುವಾಡ ರಸ್ತೆ ಚಿಗಟೇರಿ ಬಡಾವಣೆ 49 ಸಪ್ತಗಿರಿ ವಿದ್ಯಾಲಯ ಇಲ್ಲಿ ಪುರುಷ 415, ಮಹಿಳೆ 403 ಸೇರಿ 818, ದಾವಣಗೆರೆ- ದಕ್ಷಿಣ; 2 ಯರಗುಂಟೆ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ಪುರುಷ 725, ಮಹಿಳೆ 747, ಒಟ್ಟು-1472. ಮಾಯಕೊಂಡ ಕ್ಷೇತ್ರ; 159 ಮಾಯಕೊಂಡ ಕರ್ನಾಟಕ ಪಬ್ಲಿಕ್ ಶಾಲೆ (ಪ್ರಾಥಮಿಕ ವಿಭಾಗ) ಪುರುಷ 453, ಮಹಿಳೆ 488 ಸೇರಿ ಒಟ್ಟು-941. ಚನ್ನಗಿರಿ ಕ್ಷೇತ್ರ; 138 ಮುದಿಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ಪುರುಷ 499, ಮಹಿಳೆ 508 ಒಟ್ಟು-1007. ಹೊನ್ನಾಳಿ ಕ್ಷೇತ್ರ; 193 ಕುಳಗಟ್ಟೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ಪುರುಷ 382, ಮಹಿಳೆ 369 ಸೇರಿ 751 ಮತದಾರರಿದ್ದಾರೆ.
ಸಾಂಪ್ರದಾಯಿಕ ಮತಗಟ್ಟೆಗಳು
ಜಗಳೂರು ತಾ; 76 ಅಣಬೂರು ಗೊಲ್ಲರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ಪುರುಷ 638, ಮಹಿಳೆ 616 ಒಟ್ಟು-1254. ಹರಿಹರ ಕ್ಷೇತ್ರ; 153 ಯಲವಟ್ಟಿ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ಪುರುಷ 457, ಮಹಿಳೆ 434 ಒಟ್ಟು-891. ದಾವಣಗೆರೆ ಉತ್ತರ; 200 ದಾವಣಗೆರೆ ಭದ್ರಾ ಕಾಲೋನಿಯ ಕಾರ್ಯಪಾಲಕ ಅಭಿಯಂತರ ಕಚೇರಿ ಇಲ್ಲಿ ಪುರುಷ 667, ಮಹಿಳೆ 654 ಒಟ್ಟು-1321, ದಾವಣಗೆರೆ- ದಕ್ಷಿಣ; 169 ಜಾಲಿನಗರ ಜನತಾ ವಿದ್ಯಾಲಯ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆ ಇಲ್ಲಿ ಪುರುಷ 476, ಮಹಿಳೆ 476 ಒಟ್ಟು-952. ಮಾಯಕೊಂಡ ಕ್ಷೇತ್ರ; 5 ಶ್ರೀರಾಮನಗರ ಲಂಬಾಣಿಹಟ್ಟಿ ಮಜರೆ ಗ್ರಾಮ ಆಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪೂರ್ವ ಭಾಗ, ಇಲ್ಲಿ ಪುರುಷ 325, ಮಹಿಳೆ 345 ಒಟ್ಟು-670. ಚನ್ನಗಿರಿ ವಿಧಾನಸಭಾ ಕ್ಷೇತ್ರ; 100 ಅಸ್ತಾಪನಹಳ್ಳಿ ಸರ್ಕಾರಿ ಎಸ್ಟಿ ಆಶ್ರಮ ಶಾಲೆ ಇಲ್ಲಿ ಪುರುಷ 474, ಮಹಿಳೆ 505, ಒಟ್ಟು-979. ಹೊನ್ನಾಳಿ ಕ್ಷೇತ್ರ; 92 ಆಂಜಿನೇಯಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಇಲ್ಲಿ ಪುರುಷ 296, ಮಹಿಳೆ 276 ಸೇರಿ ಒಟ್ಟು-572.
ಧ್ಯೇಯ ಆಧಾರಿತ ಮತಗಟ್ಟೆಗಳು
ಜಗಳೂರು ಕ್ಷೇತ್ರ; 238 ಮುಸ್ಟೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ಪುರುಷ 501, ಮಹಿಳೆ 546 ಒಟ್ಟು-1047. ಹರಿಹರ ಕ್ಷೇತ್ರ; 98 ಹನಗವಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ಪುರುಷ 325, ಮಹಿಳೆ 330 ಒಟ್ಟು-655, ದಾವಣಗೆರೆ- ಉತ್ತರ; 201 ದಾವಣಗೆರೆ ಭದ್ರಾ ಕಾಲೋನಿಯ ಕಾರ್ಯಪಾಲಕ ಇಂಜಿನಿಯರ್ ಕಚೇರಿ ಇಲ್ಲಿ ಪುರುಷ 678, ಮಹಿಳೆ 680 ಒಟ್ಟು-1358, ದಾವಣಗೆರೆ- ದಕ್ಷಿಣ; 139 ಜಯದೇವ ಹಾಸ್ಟೆಲ್, ಹದಡಿ ರಸ್ತೆಯ ಶ್ರೀಮತಿ ಗೌರಮ್ಮ ಡಿ.ಎಂ. ಹನಗೋಡಿ ಮಠದ ನರ್ಸರಿ ಮತ್ತು ಹಿರಿಯ ಪ್ರಾಥಮಿಕ ಶಾಲೆ, ಇಲ್ಲಿ ಪುರುಷ 158, ಮಹಿಳೆ 173 ಒಟ್ಟು-331. ಮಾಯಕೊಂಡ ಕ್ಷೇತ್ರ; 41 ಹೊನ್ನೂರು ಸರ್ಕಾರಿ ಹಿರಿಯ ಪ್ರಾಥಮಿಕ ಇಲ್ಲಿ ಪುರುಷ 449, ಮಹಿಳೆ 461, ಒಟ್ಟು-910, ಚನ್ನಗಿರಿ ಕ್ಷೇತ್ರ; 160 ಚನ್ನಗಿರಿ ಪಟ್ಟಣ ಸರ್ಕಾರಿ ಸಂಯುಕ್ತ ಬಾಲಕಿಯರ ಪ್ರೌಢಶಾಲೆ ಇಲ್ಲಿ ಪುರುಷ 573, ಮಹಿಳೆ 607, ಒಟ್ಟು-1180. ಹೊನ್ನಾಳಿ ಕ್ಷೇತ್ರ; 232 ಚೀಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ಪುರುಷ 462, ಮಹಿಳೆ 510, ಒಟ್ಟು-972 ಮತದಾರರು.
ವಿಶೇಷ ಚೇತನರಿಂದ ನಿರ್ವಹಿಸುವ ಮತಗಟ್ಟೆಗಳು
ಜಗಳೂರು ಕ್ಷೇತ್ರ; 181 ಜಗಳೂರು ಪಟ್ಟಣದ ಹೊರಕೆರೆ ಸರ್ಕಾರಿ ಕನ್ನಡ ಮಾದರಿ ಹೈಯರ್ ಪ್ರೈಮರಿ ಸ್ಕೂಲ್, ಇಲ್ಲಿ ಪುರುಷ 257, ಮಹಿಳೆ 244, ಒಟ್ಟು-501. ಹರಿಹರ ಕ್ಷೇತ್ರ; 113 ಬೆಳ್ಳೂಡಿ ಶ್ರೀ ಪಟೇಲ್ ಗುರುಬಸಪ್ಪ ಪ್ರೌಢಶಾಲೆ ಇಲ್ಲಿ ಪುರುಷ 601, ಮಹಿಳೆ 613 ಸೇರಿ 1214. ದಾವಣಗೆರೆ- ಉತ್ತರ; 178 ನಿಟ್ಟುವಳ್ಳಿ ಸರ್ಕಾರಿ ಪ್ರೌಢಶಾಲೆ ಕೊಠಡಿ 4 ರಲ್ಲಿ ಪುರುಷ 620, ಮಹಿಳೆ 664 ಒಟ್ಟು-1284. ದಾವಣಗೆರೆ- ದಕ್ಷಿಣ; 39 ಶಿವಾಲಿ ಟಾಕೀಸ್ ರಸ್ತೆ, ಕೌಶಲಾಭಿವೃದ್ಧಿಗಾಗಿ ಸಂಯೋಜಿತ ಪ್ರಾದೇಶಿಕ ಕೇಂದ್ರ ಇಲ್ಲಿ ಪುರುಷ 614, ಮಹಿಳೆ 620 ಸೇರಿ 1234. ಮಾಯಕೊಂಡ ಕ್ಷೇತ್ರ; 61 ಆನಗೋಡು ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ಪುರುಷ 598, ಮಹಿಳೆ 634 ಸೇರಿ 1232. ಚನ್ನಗಿರಿ ಕ್ಷೇತ್ರ; 36 ಸಂತೆಬೆನ್ನೂರು ಶ್ರೀಶೈಲ ಜಗದ್ಗುರು ವಾಗೀಶ ಪಾಂಡಿತರಾಧ್ಯ ಸರ್ಕಾರಿ ಜೂನಿಯರ್ ಕಾಲೇಜು, ಇಲ್ಲಿ ಪುರುಷ 420, ಮಹಿಳೆ 423, ಒಟ್ಟು-843. ಹಾಗೂ ಹೊನ್ನಾಳಿ ವಿಧಾನಸಭಾ ಕ್ಷೇತ್ರ ಮತಗಟ್ಟೆ 74 ಹೊನ್ನಾಳಿಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಇಲ್ಲಿ ಪುರುಷ 270, ಮಹಿಳೆ 314 ಸೇರಿದಂತೆ ಒಟ್ಟು 584 ಮತದಾರರಿದ್ದಾರೆ.
ವಿಶೇಷಚೇತನರಿಗೆ ವಿಶೇಷವಾಗಿ ಎಲ್ಲಾ ಮತಗಟ್ಟೆ ಸಿಬ್ಬಂದಿಗಳಿಗೆ ಇನ್ನೋವಾ ವಾಹನ ನೀಡಿದ್ದು ಮಸ್ಟರಿಂಗ್, ಡಿ.ಮಸ್ಟರಿಂಗ್ನಲ್ಲಿ ಮೊದಲ ಆದ್ಯತೆ ನೀಡಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.
ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ 2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಆಶ್ರಯ ಯೋಜನೆ – ಆವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್ ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗರಿಕೆ ಹುಲ್ಲಿನ ಜ್ಯೂಸ್ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ
ಗಿರೀಶ್ ಮುತ್ತು
ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು
ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.
ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.
ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.
ಗರಿಕೆ ರಸದ ಪ್ರಯೋಜನಗಳು
1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.
2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ
4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.
5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.
6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.
ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?
*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.
* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.
* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.
* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.
* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ವಕೀಲ ಎಲ್.ಎಚ್.ಅರುಣಕುಮಾರ್ ಮನವಿ
-
ದಿನದ ಸುದ್ದಿ4 days agoಮೊದಲ ಸಂಪುಟ ಸಭೆಯಲ್ಲೇ ಮಹತ್ವದ 5 ಘೋಷಣೆ ಮಾಡಿದ ಸಿಎಂ ಡಿಕೆಶಿ
-
ದಿನದ ಸುದ್ದಿ6 days agoದಾವಣಗೆರೆ ವಿಶ್ವವಿದ್ಯಾಲಯ | ಜೂನ್ 2 ರಿಂದ 4 ರವರೆಗೆ ‘ಭಾಷಾಂತರ ಕೌಶಲ್ಯ ತರಬೇತಿ ಶಿಬಿರ’
-
ಅಂಕಣ3 days agoಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
-
ದಿನದ ಸುದ್ದಿ3 days agoಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ
-
ದಿನದ ಸುದ್ದಿ3 days agoಬಿ.ಕೆ. ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
-
ದಿನದ ಸುದ್ದಿ4 days agoಧನ್ಯವಾದಗಳು ಕರ್ನಾಟಕ : ಸಿಎಂ ಡಿಕೆ ಶಿವಕುಮಾರ್
-
ದಿನದ ಸುದ್ದಿ5 days agoಕುಂಬಳಕಾಯಿ ಬೀಜದಲ್ಲಿ ‘ ಜೀವ ಸಂಜೀವಿನಿ’ : ಮಿಸ್ ಮಾಡ್ದೆ ಓದಿ ; ಆರೋಗ್ಯದ ಗುಟ್ಟು ತಿಳಿಯಿರಿ

