Connect with us

ದಿನದ ಸುದ್ದಿ

ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ತರಬೇತಿಗಾಗಿ ಅರ್ಜಿ ಆಹ್ವಾನ

Published

on

ಸುದ್ದಿದಿನ,ಶಿವಮೊಗ್ಗ : ಕರ್ನಾಟಕ ಇನ್‍ಸ್ವಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ಇವರು ಶಿವಮೊಗ್ಗ ತರಬೇತಿ ಸಂಸ್ಥೆಯಲ್ಲಿ ದಿನಾಂಕ 1-07-2024 ರಿಂದ ಆರು ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಆಫ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ತರಬೇತಿಯನ್ನು ಆಯೋಜಿಸಿದ್ದು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಆಭ್ಯರ್ಥಿಗಳಿಂದ ಮತ್ತು ಸಹಕಾರ ಸಂಘ ಹಾಗೂ ಬ್ಯಾಂಕ್‍ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ ಪಡೆಯಲು ಕನಿಷ್ಠ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರಬೇಕು, ಖಾಸಗಿ ಅಭ್ಯರ್ಥಿಗಳಿಗೂ ಪ್ರವೇಶಕ್ಕೆ ಅವಕಾಶವಿರುತ್ತದೆ. ತರಬೇತಿ ಪಡೆಯುವ ಆಭ್ಯರ್ಥಿಗಳಿಗೆ ಮಾಸಿಕ ರೂ.500 ಶಿಷ್ಯವೇತನ ನೀಡಲಾಗುವುದು ಹಾಗೂ ವಿಶೇಷ ತರಬೇತಿ ಅನ್ವಯ 30 ವರ್ಷದೊಳಗಿನ ಪ.ಜಾತಿ/ಪ.ಪಂಗಡದ ಆಭ್ಯರ್ಥಿಗಳಿಗೆ ಮಾಸಿಕ ರೂ.600 ಶಿಷ್ಯವೇತನ ನೀಡಲಾಗುವುದು.

ಆಸಕ್ತ ಆಭ್ಯರ್ಥಿಗಳು ನಿಗದಿತ ನಮೂನೆ ಅರ್ಜಿಗಳನ್ನು ಕರ್ನಾಟಕ ಇನ್‍ಸ್ವಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ಶಿವಮೊಗ್ಗ ವಿನೋಬನಗರ 2ನೇ ಹಂತ ಇಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಜೂನ್ 15 ರೊಳಗಾಗಿ ಸಲ್ಲಿಸುವಂತೆ ಇನ್‍ಸ್ಟಿಟ್ಯೂಟ್‍ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-248873 ಮತ್ತು 7022429440 ಸಂಪರ್ಕಿಸುವುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಿದ್ಯಾರ್ಥಿನಿಲಯಗಳಿಗೆ ಬಾಡಿಗೆ ಕಟ್ಟಡಗಳು ಬೇಕಾಗಿದೆ ; ಸಂಪರ್ಕಿಸಿ

Published

on

ಸುದ್ದಿದಿನ,ದಾವಣಗೆರೆ:ನಗರ ವ್ಯಾಪ್ತಿಯಲ್ಲಿ ಹೊಸದಾಗಿ ಮಂಜೂರಾಗಿರುವ 8 ಮೆಟ್ರಿಕ್ ನಂತರ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ನಗರದಲ್ಲಿ ವಿದ್ಯಾರ್ಥಿನಿಲಯಗಳನ್ನು ನಡೆಸಲು ಕನಿಷ್ಠ 900 ಚದರ ಮೀಟರ್ ವಿಸ್ತಿರ್ಣವುಳ್ಳ ಸುಸಜ್ಜಿತವಾದ ಬಾಡಿಗೆ ಕಟ್ಟಡಗಳು ಅವಶ್ಯಕತೆ ಇರುತ್ತದೆ.

ಕಟ್ಟಡಗಳು ಅಗತ್ಯ ಮೂಲಭೂತ ಸೌಲಭ್ಯವಿರುವ ಕಟ್ಟಡದ ಮಾಲೀಕರು ಅಗತ್ಯ ದಾಖಲೆಗಳೊಂದಿಗೆ ಜುಲೈ 1 ರೊಳಗಾಗಿ ಅಂಚೆ ಮೂಲಕ, ಖುದ್ದಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಕಲ್ಯಾಣಾಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿ.ಮಲ್ಲಿಕಾರ್ಜುನ ದ್ವಿಪಥ ರಸ್ತೆ(ಹೊಸ ರಿಂಗ್ ರಸ್ತೆ) ಶ್ರೀಮತಿ ರತ್ನಮ್ಮ ತೆಲಗಿ ಸಿದ್ದೇಶಿ ರೆಸಿಡೆನ್ಸಿಯಲ್ ಲೇ ಔಟ್, ಶ್ರೀದೇವರಾಜು ಅರಸು ಭವನ ದಾವಣಗೆರೆ ಇವರನ್ನು ಸಂಪರ್ಕಿಸಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಕಲ್ಯಾಣಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಅಕ್ರಮ ಶಿಕ್ಷಣ ಕ್ಷೇತ್ರಕ್ಕೆ ಬಹುದೊಡ್ಡ ಕಳಂಕ : ಸಾಬೀರ್ ಜಯಸಿಂಹ

Published

on

ಸುದ್ದಿದಿನ,ದಾವಣಗೆರೆ:ದೇಶದ ಅತ್ಯಂತ ಕಠಿಣಾತಿ ಕಠಿಣ ಪರೀಕ್ಷೆ ನೀಟ್​​​ನಲ್ಲೂ ಗೋಲ್​​ಮಾಲ್ ನಡೆದಿದೆ. ಬಳಿಕ ನೆಟ್​​​ಪರೀಕ್ಷೆಗೂ ಅಕ್ರಮದ ವಾಸನೆ ಬಡಿದಿದ್ದರಿಂದ ಪರೀಕ್ಷೆ ರದ್ದಾಗಿದೆ. ಪರೀಕ್ಷೆಗಳ ಅಕ್ರಮದ ವಿರುದ್ಧ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಅಕ್ರಮಗಳ ಗದ್ದಲದಲ್ಲಿರುವ ಕೇಂದ್ರ ಸರ್ಕಾರ (26/06/2024) ನಡೆಯಬೇಕಿದ್ದ ನೀಟ್-ಪಿಜಿ ಪರೀಕ್ಷೆಯನ್ನು ಕೂಡ ಕೊನೆಯ ಕ್ಷಣದಲ್ಲಿ ಮುಂದೂಡಿಕೆ ಮಾಡಿ ಆದೇಶಿಸಿದೆ.

ಸರ್ಕಾರಿ ನೇಮಕಾತಿಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆಗ್ತಿದ್ದು ಇತಿಹಾಸ. ಇದನ್ನೂ ಮೀರಿ ಈಗ ಕಠಿಣ ಪರೀಕ್ಷೆಗಳಾದ ನೀಟ್-ನೆಟ್​ ಕೂಡ ಅಕ್ರಮದ ಗೂಡುಗಳಾಗಿ ಮಾರ್ಪಟ್ಟಿವೆ. ಲಕ್ಷ ಲಕ್ಷ ಹಣಕ್ಕೆ ಪ್ರಶ್ನೆ ಪತ್ರಿಕೆಗಳು ಬಿಕರಿಯಾಗಿರುವ ಆರೋಪ ಕೇಳಿಬಂದಿದೆ. ಪರೀಕ್ಷೆಗಳ ಪಾವಿತ್ರ್ಯತೆಗೆ ಭಂಗ ತಂದಿದ್ದು ಅಭ್ಯರ್ಥಿಗಳನ್ನು ಕಂಗೆಡಿಸಿವೆ. ಈ ಕೂಡಲೇ ಕೇಂದ್ರ ಶಿಕ್ಷಣ ಸಚಿವರನ್ನು ವಜಾ ಮಾಡಿ ಪಾರದರ್ಶಕತೆಯಿಂದ ಪರೀಕ್ಷೆ ನಡೆಸಬೇಕು ಎಂದು ದಾವಣಗೆರೆ ಜಿಲ್ಲಾಧಿಕಾರಿಗಳ ರವರ ಮುಖಾಂತರ ದಲಿತ ವಿದ್ಯಾರ್ಥಿ ಪರಿಷತ್ತು ಜಿಲ್ಲಾ ಘಟಕದ ವತಿಯಿಂದ ರಾಷ್ಟ್ರಪತಿಗಳಿಗೆ ಇಂದು ಮನವಿ ಸಲ್ಲಿಸಿದರು.

ನೀಟ್‌-ಯುಜಿ ಹಾಗೂ ಯಜಿಸಿ-ನೆಟ್‌ ಪರೀಕ್ಷೆಯಲ್ಲಿ ನಡೆದ ಅಕ್ರಮಗಳ ಗದ್ದಲದಲ್ಲಿ ಮುಳುಗೇಳುತ್ತಿರುವ ಕೇಂದ್ರ ಸರಕಾರ ಇದೀಗ ನೀಟ್-ಪಿಜಿ ಪರೀಕ್ಷೆಯನ್ನು ಕೊನೇ ಕ್ಷಣದಲ್ಲಿ ಮುಂದೂಡಿಕೆ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಜೂನ್ 26 ರಂದು ನಡೆಯಬೇಕಿದ್ದ ನೀಟ್-ಪಿಜಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ ಆದೇಶ ನೀಡಿದೆ. ವಿದ್ಯಾರ್ಥಿಗಳಿಗೆ ಉಂಟಾದ ಅನನುಕೂಲತೆಗೆ ಪ್ರಾಮಾಣಿಕವಾಗಿ ವಿಷಾದಿಸುತ್ತೇವೆ ಎಂದು ತಿಳಿಸಿದೆ. ಕೊನೆ ಗಳಿಗೆಯಲ್ಲಿ ಏಕಾಏಕಿ ಪರೀಕ್ಷೆ ರದ್ದುಪಡಿಸಿದ್ದರಿಂದ ಎಲ್ಲೂ ಮತ್ತೊಂದು ಕಡೆ ಅಕ್ರಮದ ನಡೆಯುತ್ತಿರುವುದು ಶಂಕೆ ವ್ಯಕ್ತವಾಗುತ್ತಿದೆ. ಆದರೆ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಬೇಕಾಗಿದ ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯ ಸಚಿವರು ಮತ್ತು ಇಲಾಖೆಯ ಅಧಿಕಾರಿಗಳು ತಮ್ಮ ಕರ್ತವ್ಯದಲ್ಲಿ ವಿಫಲಗೊಂಡಿದ್ದಾರೆ ಎಂಬದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.

ಜೂನ್ 26 ರ ಭಾನುವಾರದಂದು ದೇಶದ 270 ಕೇಂದ್ರಗಳಲ್ಲಿ ಪರೀಕ್ಷೆ ನಿಗದಿಯಾಗಿತ್ತು. 2.2 ಲಕ್ಷ ಅಭ್ಯರ್ಥಿಗಳು ನೀಟ್ – ಪಿಜಿ ಪರೀಕ್ಷೆ ಬರೆಯಬೇಕಿತ್ತು.
ನೀಟ್, ನೆಟ್ ಪರೀಕ್ಷೆಗಳಲ್ಲಿ ಅಕ್ರಮ ಹಿನ್ನೆಲೆ ಪರೀಕ್ಷೆ ರದ್ದು ಮಾಡಲಾಗಿದೆ ಎಂದು ತಿಳಿದು ಬರುತ್ತಿದೆ. ನೀಟ್ – ಪಿಜಿ
ಹೊಸ ಪರೀಕ್ಷೆಯ ದಿನಾಂಕಗಳನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ಹೇಳಿ ಕೇಂದ್ರ ಸರ್ಕಾರ ಕೊನೆ ಕ್ಷಣದಲ್ಲಿ ಪರೀಕ್ಷೆ ರದ್ದುಪಡಿಸಿದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿ ಕಾಪಾಡುವಲ್ಲಿ ಎಲ್ಲ ವಿಫಲತೆ ಎಂದು ಕಾಣುತ್ತದೆ.

ಇದೇ ವೇಳೆ ಕೇಂದ್ರವು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಮಹಾನಿರ್ದೇಶಕ ಸುಬೋಧ್ ಸಿಂಗ್ ಅವರನ್ನು ವಜಾಗೊಳಿಸಿದೆ. ಏಜೆನ್ಸಿಯ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಲು ಮತ್ತು ಪರೀಕ್ಷಾ ಸುಧಾರಣೆಗಳನ್ನು ಶಿಫಾರಸು ಮಾಡಲು ಇಸ್ರೊ ಮಾಜಿ ಮುಖ್ಯಸ್ಥ ಕೆ. ರಾಧಾಕೃಷ್ಣನ್ ನೇತೃತ್ವದಲ್ಲಿ ಏಳು ಸದಸ್ಯರ ಸಮಿತಿಯನ್ನು ರಚಿಸಿದ್ದು ಸ್ವಾಗತ ಆದರೆ ಪದೇ ಪದೇ ಪರೀಕ್ಷೆಯಲ್ಲಿನ ಅಕ್ರಮಗಳಿಂದ ಲಕ್ಷಾಂತರ ಪರೀಕ್ಷಾರ್ಥಿಗಳಿಗೆ ತೊಂದರೆ ಅನುಭವಿಸುವಂತಾಗಿದೆ. ಈ ಅಕ್ರಮಗಳಿಂದ ಪ್ರತಿಭಾವಂತ ವಿದ್ಯಾರ್ಥಿಗಳು ಅವಕಾಶ ವಂಚಿತರಾಗುವ ಸಾಧ್ಯತೆ ದಟ್ಟವಾಗಿವೆ. ಹಗಲು ರಾತ್ರಿ ಎನ್ನದೆ ಕಷ್ಟ ಪಟ್ಟು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪದೇ ಪದೇ ಪರೀಕ್ಷೆಯಲ್ಲಿ ನಡೆಯುವ ಅಕ್ರಮಗಳಿಂದ ಆತ್ಮಸ್ಥೈರ್ಯ ಮತ್ತು ನೆಮ್ಮದಿ ಹಾಳಾಗಿದೆ ಮತ್ತು ಲಕ್ಷಾಂತರ ವಿದ್ಯಾರ್ಥಿಗಳ ಹಾಗೂ ಅವರ ಪಾಲಕರ ಕನಸುಗಳಿಗೆ ಪೆಟ್ಟು ಬಿದ್ದಿದೆ.

ಎರಡು ಪರೀಕ್ಷೆಯಲ್ಲಿ ನಡೆದ ಅಕ್ರಮದ ಸಂಪೂರ್ಣ ತನಿಖೆ ಆಗಬೇಕು, ತಪ್ಪಿತಸ್ಥರಿಗೆ ಕಠಿಣ ಕ್ರಮ ಕೈಗೊಳ್ಳಬೇಕು. ಪರೀಕ್ಷೆ ನಡೆಸಲು ವಿಫಲಗೊಂಡಿರುವ ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆ ಸಚಿವರಿಗೆ ಮತ್ತು ಇಲಾಖೆಗಳ ಅಧಿಕಾರಿಗಳಿಗೆ ವಜಾಗೊಳಿಸಬೇಕು ಇದರ ಜೊತೆಗೆ ಶೈಕ್ಷಣಿಕ ಸೀಟ್ ಹಂಚಿಕೆ ಮಾಡಲು ನೀಟ್ – ನೆಟ್ ಪರೀಕ್ಷೆ ನಡೆಸುವ ಅಧಿಕಾರವನ್ನು ಆಯಾ ರಾಜ್ಯಗಳ ಸರ್ಕಾರಕ್ಕೆ ನೀಡಬೇಕೆಂದು ಈ ಮೂಲಕ ದಲಿತ ವಿದ್ಯಾರ್ಥಿ ಪರಿಷತ್ ಪರಿಷತ್ ಸಂಘಟನೆ ಆಗ್ರಹಿಸಿದೆ.

ಈ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ತು ಜಿಲ್ಲಾ ಸಂಚಾಲಕಹಾಗೂ ಪುರಸಭಾ ಸದಸ್ಯ ಸಾಬೀರ್ ಜಯಸಿಂಹ. ಹರಿಹರ ತಾಲೂಕು ಗೌರವ ಸಂಚಾಲಕ ಭೋವಿ ಶಿವಣ್ಣ, ಪುರಸಭಾ ಸದಸ್ಯರಾದ ನಯಾಜ್ ಅಹಮದ್, ಶಬ್ಬೀರ್ ಖಾನ್,ಗೌಡ್ರ ಮಂಜಪ್ಪ ಹಾಗೂ ಅನ್ವರ್ ಸಾಬ್,ಕೆ ಪಿ ಗಂಗಾಧರ್, ಭಾನುವಳ್ಳಿ ಸುರೇಶ್, ಮತ್ತಿತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಹಿರಿಯ ನಾಗರಿಕರಿಗಿರುವ ಸರ್ಕಾರಿ ಸೌಲಭ್ಯಗಳೇನು..? ; ಮಾಹಿತಿಗೆ ಸಂಪರ್ಕಿಸಿ

Published

on

ಸುದ್ದಿದಿನ,ದಾವಣಗೆರೆ:ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆಯ ವತಿಯಿಂದ ಹಾಗೂ ಇತರೆ ಇಲಾಖೆಗಳಿಂದ ಹಿರಿಯ ನಾಗರಿಕರಿಗೆ ದೊರೆಯುತ್ತಿರುವ ಸೌಲಭ್ಯಗಳ ಅರಿವು ಮೂಡಿಸುವ ಮತ್ತು ಸೌಲಭ್ಯಗಳನ್ನು ಪಡೆಯಲು ಸಹಾಯ ಮಾಡುವ ಉದ್ದೇಶದಿಂದ ತಾಲ್ಲೂಕು ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಿಂದ ಹಿರಿಯ ನಾಗರಿಕರಿಗೆ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆಯಬಹುದು.

ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರ ವಿವರ:ಹೊನ್ನಾಳಿ ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಶೈಲಜಾ ಕೆ.ಎಂ. ಮೊ.ಸಂ: 9482158005, ಚನ್ನಗಿರಿ ತಾಲ್ಲೂಕು ಪಂಚಾಯಿತಿ ಕಾರ್ಯಾಲಯ ಕೆ ಸುಬ್ರಮಣ್ಯಂ ಮೊ.ಸಂ: 9945738141, ಜಗಳೂರು ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಎಂ ಕೆ ಶಿವನಗೌಡ ಮೊ.ಸಂ: 9902105734 ಹರಿಹರ ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಶಶಿಕಲಾ ಟಿ. ಮೊ.ಸಂ: 9945458058, ದಾವಣಗೆರೆ ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಚನ್ನಪ್ಪ. ಬಿ ಮೊ.ಸಂ: 9590829024 ಸಂಪರ್ಕಿಸಬೇಕೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ|| ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending