Connect with us

ದಿನದ ಸುದ್ದಿ

ಯೋಗ ದಿನಕ್ಕೆ ಸಾರ್ವತ್ರಿಕ ರಜೆ ಘೋಷಣೆ ಪ್ರಸ್ತಾವ

Published

on

ವಿಶ್ವ ಯೋಗ ದಿನಕ್ಕೆ ಸಾಂಸ್ಕೃತಿಕ ನಗರ ಮೈಸೂರು ಸಿದ್ಧವಾಗಿದೆ. ಕಳೆದ ಬಾರಿ 56 ಸಾವಿರ ಮಂದಿಯನ್ನು ಒಂದೆಡೆ ಕಲೆಹಾಕಿ ಗಿನ್ನಿಸ್ ದಾಖಲೆ ಮಾಡಿದ್ದ ಯೋಗ ಸಂಸ್ಥೆಗಳು ಹಾಗೂ ಜಿಲ್ಲಾಡಳಿತವು ಈ ಬಾರಿ ಗರಿಷ್ಠ ಒಂದು ಲಕ್ಷ ಜನರನ್ನು ಸೇರಿಸುವ ಗುರಿ ಹೊಂದಿದೆ. ಇಷ್ಟು ದೊಡ್ಡ ಮಟ್ಟದ ಕಾರ್ಯಕ್ರಮಕ್ಕೆ ನಡೆಸಿರುವ ತಯಾರಿಗಳು, ಮೈಸೂರಿನಲ್ಲೇ ಏಕೆ ಇಷ್ಟು ದೊಡ್ಡ ಕಾರ್ಯಕ್ರಮ ನಡೆಸಬೇಕೆಂಬುದನ್ನು ಜಿಎಸ್‍ಎಸ್ ಯೋಗಿಕ್ ಫೌಂಡೇಶನ್‍ನ ಮುಖ್ಯಸ್ಥ ಶ್ರೀ ಹರಿ( ಮೊ. 98862 08000)  ಅವರು ವಿವರಿಸಿದ್ದಾರೆ.
  • ಮೈಸೂರು ಯೋಗದ ವಿಶೇಷತೆಗಳೇನು?
ಮೈಸೂರು ಯೋಗವನ್ನು ಒಂದು ದೊಡ್ಡ ಬ್ರಾಂಡ್ ಮಾಡುವ ಉದ್ದೇಶದಿಂದ ಈ ಹೆಸರಿಡಲಾಗಿದೆ. ಯಾರೇ ಯೋಗ ಮಾಡಿದರೂ ಒಂದೆ. ನಮ್ಮಲ್ಲಿ ಐದು ದೊಡ್ಡ ಯೋಗ ಸಂಸ್ಥೆಗಳಿವೆ. ಎಲ್ಲರೂ ಯೋಗ ಮಾಡುತ್ತಾರೆ. ಯಾರು ದೊಡ್ಡವರು ಯಾರ ಚಿಕ್ಕವರು ಎಂಬ ಮನೋಭಾವನೆ ಬರಬಾರದು ಎಂಬ ಕಾರಣಕ್ಕೆ ಮೈಸೂರು ಯೋಗವನ್ನು ನಮ್ಮೆಲ್ಲರ ಬ್ರಾಂಡ್ ಮಾಡಿಕೊಳ್ಳಲಾಗಿದೆ. ಮೈಸೂರು ಮೊದಲೇ ಯೋಗಕ್ಕೆ ಪ್ರಸಿದ್ಧಿಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಈ ಬ್ರಾಂಡ್ ಇನ್ನಷ್ಟು ಹೆಸರು ತಂದಕೊಡುತ್ತದೆ ಎಂಬುದು ಇದರ ಹಿಂದಿನ ಉದ್ದೇಶ. ಹೀಗೆ ನಾವೆಲ್ಲರೂ ಒಂದಾದ ಕಾರಣ ಕಳೆದ ವರ್ಷ ವಿಶ್ವ ಯೋಗ ದಿನದಂದು ದೊಡ್ಡ ಸಾಧನೆ ಮಾಡಲು ಸಾಧ್ಯವಾಯಿತು.
  • ಯೋಗ ಮಾಡಲು ಮೈಸೂರುನಗರ ಏಕೆ ಶ್ರೇಷ್ಠ ಸ್ಥಳ ?
ಒಂದು ರೀತಿಯಲ್ಲಿ ಹೇಳುವುದಾದರೆ ಮೈಸೂರು ಒಂದು ವಿಶಾಲವಾದ ಸ್ಥಳ. ಇಲ್ಲಿನ ಹವಾಗುಣ ಎಲ್ಲರನ್ನು ಸೆಳೆಯಬಲ್ಲದು. ಅರಣ್ಯ ಸಂಪತ್ತು ಯತೇಚ್ಛವಾಗಿರುವುದರಿಂದ ನಗರದಲ್ಲಿ ಆಮ್ಲಜನಕ ಪ್ರಮಾಣ ಹೆಚ್ಚಾಗಿದೆ. ಯಾವಾಗ ಹೆಚ್ಚು ಆಮ್ಲಜನಕವು ದೇಹವನ್ನು ಸೇರುತ್ತದೆಯೋ ಆಗ ದೇಹ ತಾನಾಗಿಯೇ ಸ್ವಚ್ಛಗೊಳ್ಳುತ್ತದೆ. ಆಯುರ್ವೇದ, ಸಂಸ್ಕøತಿ, ಪರಂಪರೆ, ಯೋಗ ಮೊದಲಾದವುಗಳು ಮೈಸೂರಿನಲ್ಲಿ ಸಾಂಪ್ರದಾಯಿಕವಾಗಿ ಬೆಳೆದುಬಂದಂತ ವಿಷಯಗಳಾಗಿವೆ. ಇವು ಯಾವ ಕಾಲಕ್ಕೂ ತಾಜಾ ಆಗಿರುವ ವಿಷಯಗಳೇ. ವಿದೇಶಿಗರು ಇಲ್ಲಿವರೆಗೂ ಹುಡುಕಿಕೊಂಡು ಬಂದು ಯೋಗ ಕಲಿಯಲು ಅದೇ ಕಾರಣ.
ದೊಡ್ಡ ದೊಡ್ಡ ಊರುಗಳಲ್ಲಿ ಪ್ರತಿಷ್ಠೆಗಳೇ ಹೆಚ್ಚಾಗುತ್ತದೆ. ಬೆಂಗಳೂರಿನಂತ ಊರಿನಲ್ಲಿ ಒಂದು ಕಡೆಯಿಂದ ಇನ್ನೊಂದು ಕಡೆ ಹೊಗಲು ಹೆಚ್ಚು ಸಮಯ ಬೇಕು. ಆದರೆ, ಮೈಸೂರು ಹಾಗಲ್ಲ ಎಲ್ಲವೂ ಸುಲಭವಾಗಿ ಕೈಗೆ ಸಿಗುತ್ತದೆ ಎಂಬ ಕಾರಣಕ್ಕೆ ಮೈಸೂರು ಯೋಗ ಮಾಡಲು ಸೂಕ್ತ ಸ್ಥಳ.
  • ಯೋಗ ದಿನಕ್ಕೆ ಸಾರ್ವತ್ರಿಕ ರಜೆ ಘೋಷಣೆ ಸಾಧ್ಯವಿದೆಯೇ?
ಹೌದು ಇದೊಂದು ಒಳ್ಳೆಯ ಆಲೋಚನೆ. ಸರಕಾರಿ ಮತ್ತು ಖಾಸಗಿ ಶಾಲೆಗಳಿಗೆ ಅರ್ಧದಿನ ರಜೆ ಕೊಡಿ ಎಂದು ಮನವಿ ಮಾಡಿಕೊಂಡಿದ್ದೆವು ಅದಕ್ಕೆ ಅವರು ಒಪ್ಪಿದ್ದಾರೆ. ಸಾರ್ವತ್ರಿಕ ರಜೆ ಘೋಷಣೆಯಾದರೆ ಯೋಗ ದಿನಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತದೆ. ಸದ್ಯದಲ್ಲೇ ಈ ಪ್ರಸ್ತಾವನೆಯನ್ನು ಜಿಲ್ಲಾಧಿಕಾರಿಗಳ ಮೂಲಕ ಸಂಬಂಧಪಟ್ಟವರಿಗೆ ತಲುಪಿಸುವ ಪ್ರಯತ್ನ ಮಾಡುತ್ತೇವೆ.
  • ಯೋಗ ಹೆಸರಿನಲ್ಲಿ ರಾಜ್ಯದ ಜನತೆಯನ್ನು ಒಂದೆಡೆ ಸೇರಿಸಲು ಸಾಧ್ಯವಿದೆಯೇ?
ಸಾಧ್ಯ ಇದೆ ಆದರೆ, ಬಹಳ ಕಷ್ಟ ಒಬ್ಬರು, ಇಬ್ಬರು ಅಥವಾ ಒಂದೇ ಸಂಸ್ಥೆಯಿಂದ ಇದು ಸಾಧ್ಯವಾಗುವ ಕೆಲಸವಲ್ಲ. ದಸರೆಯಲ್ಲಿ ಎಲ್ಲ ರಾಜ್ಯದ ಕಲೆಗಳು ಒಂದೆಡೆ ಸೇರುವಂತೆ ಯೋಗದಿನಕ್ಕೆ ರಾಜ್ಯದ ಯೋಗಾಸಕ್ತರನ್ನು ಒಂದೆಡೆ ಸೇರಿಸಬೇಕಾದರೆ ಬಹಳಷ್ಟು ಹಣ ಖರ್ಚಾಗುತ್ತದೆ. ಸರಕಾರ ಅವರಿಗೆ ಉಳಿಯಲು ಜಾಗ, ಊಟ ತಿಂಡಿ ವ್ಯವಸ್ಥೆ ಮಾಡಿದರೆ ಖಂಡಿತವಾಗಿಯೂ ಮೈಸೂರಿನಲ್ಲಿ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಬಹುದು. ಮೈಸುರು ಜಿಲ್ಲಾಡಳಿತ ಯೋಗ ಎಂದ ಕೂಡಲೇ ಅದರ ಬಗ್ಗೆ ವಿಶೇಷ ಆಸಕ್ತಿ ವಹಿಸಿ ಕೇಳಿದ ಎಲ್ಲ ಸೌಲಭ್ಯಗಳನ್ನೂ ಕೊಡುತ್ತದೆ ಅದೇ ರೀತಿ ಎಲ್ಲ ಕಡೆಯೂ ಇಂಥ ಸೌಲಭ್ಯಗಳು ಸಿಕ್ಕರೆ ಮೈಸೂರಿನಲ್ಲಿ ಇಂಥ ದೊಡ್ಡ ಕಾರ್ಯಕ್ರಮವನ್ನು ಆಯೋಜಿಸಬಹುದಾಗಿದೆ.
  • ಮೈಸೂರಿನ ಶುದ್ಧ ಯೋಗವನ್ನು ನ್ಯೂಯಾರ್ಕ್ ಟೈಮ್ಸ್ ಹಾಡಿ ಹೊಗಳಿದೆ. ಈ ಶುದ್ಧ ಯೋಗ ಎಂದರೇನು?
ಶುದ್ಧ ಯೋಗ ಎಂದರೆ ಎಲ್ಲ ಕಾಲಕ್ಕೂ ಅಪ್‍ಡೇಟ್ ಆಗುವ ಯೋಗ. ಇಲ್ಲಿಂದ ಕಲಿತು ಬೇರೆಡೆ ಯೋಗ ಹೇಳಿಕೊಡುವವರು ಇಲ್ಲಿಗಿಂತ ಸ್ವಲ್ಪ ಕಡಿಮೆ ಪಟ್ಟುಗಳನ್ನು ಹೇಳಿಕೊಡುತ್ತಾರೆ. ಆದರೆ, ಮೈಸೂರಿನಲ್ಲಿಹಾಗಲ್ಲ ಯೋಗ ಕುರಿತು ಅಧ್ಯಯನ, ಸಂಶೋಧನೆ ಮಾಡಿ ಅದನ್ನು ಅಪ್‍ಗ್ರೇಡ್ ಮಾಡುವ ಸಾಧ್ಯತೆ ಇದೆ. ಮೊನ್ನೆ ಯಾವುದೋ ಒಂದು ಯೋಗಕ್ಕೆ ಈ ಹೆಸರು ಇಡಬಹುದೇ ಎಂದು ಕೆಲವರು ಸೂಚಿಸಿದರು ಅದನ್ನು ನಾವು ಒಪ್ಪಿಕೊಂಡೆವು ಆ ರೀತಿಯ ಸ್ವೀಕೃತ ಮನೋಭಾವನೆ ಇಲ್ಲಿನ ಯೋಗಕ್ಕಿದೆ. ಇದೊಂದು ವೈಜ್ಞಾನಿಕ ಚಿಂತನೆಯಾಗಿದೆ ಅದೇ ಶುದ್ಧಯೋಗ. ಈಗ ಆರ್ಟ್ ಯೋಗ, ಮ್ಯೂಸಿಕ್ ಯೋಗ, ಮಾರ್ಷಲ್ ಆರ್ಟ್ ಯೋಗ ಸ್ಪೋಟ್ಸ್ ಯೋಗ ಮಾಡಲು ಹೊರಟಿದ್ದೇವೆ ಇವೆಲ್ಲದರ ಜತೆ ಯೋಗವನ್ನು ಮಿಶ್ರಣ ಮಾಡುತ್ತೇವೆ. ಯೋಗವನ್ನು ಒಂದು ವೈಜ್ಞಾನಿಕ ವ್ಯಾಯಾಮವನ್ನಾಗಿ ಮಾಡುತ್ತೇವೆ.
  • ಯೋಗ ಒಂದು ಚೌಕಟ್ಟಿನಿಂದ ಹೊರಬರುತ್ತಲ್ಲ ಇನ್ನು ಅಪ್‍ಗ್ರೇಡ್ ಆಗುವ ಸಾಧ್ಯತೆ ಎಲ್ಲಿ?
ಹಾಗೆ ಅಂದುಕೊಳ್ಳುವುದೇ ತಪ್ಪು, ಯಾರು ಪೂರ್ಣ ಪ್ರಮಾಣದಲ್ಲಿ ಯೋಗ ಕಲಿತಿರುತ್ತಾರೋ ಅದವರು ಒಂದು ಸ್ವೀಕೃತ ಮನೋಭಾವನೆ ಹೊಂದಿರುತ್ತಾರೆ. ಒಂದೇ ಚೌಕಟ್ಟಿನೊಳಗೆ ಯೋಗ ಮಾಡುವುದು ಒಳ್ಳೆಯದಲ್ಲ.
  • ಮೈಸೂರಿನಲ್ಲಿ ಯೋಗ ಎಂಬುದು ಬಹಳ ದುಬಾರಿಯಾಗಿದೆ ಹೌದೆ?
ಖಂಡಿತವಾಗಿಯೂ ಹೌದು. ಆದರೆ, ಅಗತ್ಯಕ್ಕಿಂತ ಹೆಚ್ಚು ಶುಲ್ಕ ವಿಧಿಸುವುದು ಸರಿಯಲ್ಲ. ಎಲ್ಲದಕ್ಕೂ ಒಂದೊಂದು ಸ್ಟಾಂಡರ್ಡ್ ಇರುತ್ತದೆ. ವಿದೇಶಿಗರಿಗೆ ಯೋಗ ಹೇಳಿಕೊಡಬೇಕಾದರೆ ಅವರ ದೇಹಕ್ಕೆ ಒಗ್ಗುವಂತಹ ಅಡಿಗೆ ಮಾಡಿಸಬೇಕು. ಅದಕ್ಕಾಗಿ ವಿಶೇಷ ಬಾಣಸಿಗರು ಬೇಕು. ಅವರು ಉಳಿಯಲು ಒಳ್ಳೆಯ ಜಾಗಗಳೇ ಬೇಕು. ಅದಕ್ಕಾಗಿ ಹೆಚ್ಚು ಹಣ ಖರ್ಚಾಗುತ್ತದೆ. ಹಾಗಾಗಿ ಯೋಗ ಕಲಿಯಲು ಹೆಚ್ಚುಹಣವೂ ಖರ್ಚಾಗುತ್ತದೆ. ಒಂದು ರೀತಿ ಹೇಳುವುದಾದರೆ ಯಾರ್ಯಾರ ಬಂಡವಾಳ ಎಷ್ಟಿರುತ್ತದೆಯೋ ಅದಕ್ಕೆ ತಕ್ಕಂತೆ ಹಣ ವ್ಯಯ ಮಾಡಬೇಕಾಗುತ್ತದೆ.
  • ಶಾಲೆಗಳಲ್ಲಿ ಯೋಗವನ್ನು ಕಡ್ಡಾಯ ಮಾಡಬೇಕೆಂಬ ಪ್ರಸ್ತಾವನೆ ಇತ್ತು. ಅದು ಏಕೆ ಸಾಧ್ಯವಾಗಲಿಲ್ಲ?
ಮಾಡಿದರೆ ತುಂಬ ಒಳ್ಳೆಯದು. ಯೋಗವನ್ನು ಒಂದು ಧರ್ಮ, ಒಂದು ಪಕ್ಷವಾಗಿ ಗುರುತಿಸಿದ್ದರಿಂದ ಅದು ಸಾಧ್ಯವಾಗಲಿಲ್ಲ. ಯೋಗವು ಅದನ್ನೆಲ್ಲ ಮೀರಿದ ಒಂದು ಕಲೆ. ಅದಕ್ಕೆ ರಾಜಕೀಯ ಸೋಂಕು ಅಂಟಿಸುವುದು ಸರಿಯಲ್ಲ. ಇದರಿಂದಾಗಿಯೇ ಯೋಗವು ಶಾಲೆಗಳ ಪಠ್ಯ ಕ್ರಮ ಸೇರುವ ಒಂದು ಅಮೂಲ್ಯ ಅವಕಾಶ ಇಲ್ಲದಂತಾಗಿದೆ. ಯೋಗವನ್ನು ಒಂದು ಧರ್ಮ, ಒಬ್ಬ ವ್ಯಕ್ತಿಯಾಗಿ ಗುರಿತಿಸುವುದು ದೊಡ್ಡ ತಪ್ಪು.
  • ಯೋಗ ಮತ್ತು ಆಯುರ್ವೇದ ನಡುವಿನ ನಂಟಿನಿಂದ ಮೈಸೂರಿನ ಪ್ರವಾಸೋದ್ಯಮ ಅಭಿವೃದ್ಧಿಯಾಗುತ್ತದೆಯೇ?

ಎರಡಕ್ಕೂ ಶೇ. 30ರಷ್ಟು ನಂಟಿರುವುದು ನಿಜ. ಇವೆರಡೂ ವಿಷಯಗಳು ವೈಜ್ಞಾನಿಕವಾಗಿ ದೃಢಪಟ್ಟಿರುವ ಹಳೇ ವಿಷಯಗಳು. ಎರಡೂ ಕೂಡ ಒಂದನ್ನೊಂದು ಅವಲಂಬಿಸಿದೆ. ಆಲೋಪತಿಕ್ ವೈದ್ಯರ ಬಳಿ ಹೋಗಿ ಬೆನ್ನು ನೋವು ಎಂದರೆ ಒಂದು ಚಿಕಿತ್ಸೆ ಪಡೆಯಬೇಕು ಅಥವಾ ಯೋಗ ಮಾಡಬೇಕು ಎಂ ಸಲಹೆ ನೀಡುತ್ತಾರೆ. ಮೈಸೂರು ಯೋಗದ ಜತೆ ಆಯುರ್ವೇದಕ್ಕೂ ಹೆಚ್ಚು ಪ್ರಸಿದ್ಧಿಪಡೆದಿದೆ. ಹಾಗಾಗಿ ಎರಡೂ ವಿಷಯಗಳನ್ನು ಮುನ್ನೆಲೆಯಾಗಿಸಿಕೊಂಡು ಪ್ರವಾಸೋದ್ಯಮವನ್ನು ಇನ್ನೊಂದು ಹಂತಕ್ಕೆ ಕೊಂಡೊಯ್ಯಬಹುದು.

  • ಯಾವ್ಯವಾವ ವರ್ಗಕ್ಕೆ ಯೋಗ ಅಗತ್ಯವಾಗಿದೆ?
ಐಟಿ ಬಿಟಿ ಕ್ಷೇತ್ರದಲ್ಲಿರುವವರು ಸಾಮಾನ್ಯವಾಗಿ ಮಹಾ ನಗರಗಳಲ್ಲಿರುತ್ತಾರೆ ಅಲ್ಲಿನ ವಾತಾವರಣ ಕಲುಷಿ ತವಾಗಿರುತ್ತದೆ. ಜತೆಗೆ ಅವರು ಒತ್ತಡದಲ್ಲಿ ಬದುಕುತ್ತಿರುತ್ತಾರೆ ಅವರಿಗೆ ಯೋಗ ಅತಿ ಮುಖ್ಯ. ವಾಹನಗಳ ಹೊಗೆಯ ಮಧ್ಯೆಯೇ ಕೆಲಸ ಮಾಡುವ ಟ್ರಾಫಿಕ್ ಪೊಲೀಸರು, ಕಸ ವಿಲೇವಾರಿ ಮಾಡುವ ಪಾಲಿಕೆ ಸಿಬ್ಬಂದಿ ಇವರೆಲ್ಲರ ಮೇಲಧಿಕಾರಿಗಳು ಯೋಗವನ್ನು ಈ ವರ್ಗದವರಿಗೆ  ಒಳ್ಳೆಯದು.
  • ಈ ವರ್ಷ ಹಮ್ಮಿಕೊಂಡಿರುವ ಯೋಗ ಕಾರ್ಯಕ್ರಮಗಳು ಯಾವುವು?
ಮೂರು ವರ್ಷಗಳ ಹಿಂದೆ ಫಿಟ್ ಇಂಡಿಯಾ ಮೂವ್‍ಮೆಂಟ್ ಎಂಬ ಅಭಿಯಾನದ ಹೆಸರಿಟ್ಟಿದ್ದೆವು. ಅದನ್ನೇ ಪ್ರಧಾನಿ ನರೇಂದ್ರ ಮೋದಿ ಅವರು ಒಪ್ಪಿ ಆಂದೋಲನ ಆರಂಭಿಸಿದ್ದಾರೆ. ಈ ವರ್ಷ ಮನೆ ಮನೆ ಯೋಗ, ಮನ ಮನ ಯೋಗ ಎಂಬ ಯೋಗವನ್ನು ಆರಂಭಿಸಲಿದ್ದೇವೆ. ಈ ಮೂಲಕ ಯೋಗವ್ನು ಪ್ರತಿ ಮನೆಗೆ ತಲುಪಿಸುವ ಉದ್ದೇಶವಿದೆ.

ದಿನದ ಸುದ್ದಿ

ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು

Published

on

ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.

ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.

ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್‌ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.

ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್

Published

on

ಜಿಲ್ಲೆಯಲ್ಲಿ 1.37 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ: ಡಿಎಚ್ಒ ಡಾ. ಷಣ್ಮುಖಪ್ಪ

ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೋ ವಿಶೇಷ ಅಭಿಯಾನದಲ್ಲಿ ಯಾವುದೇ ಒಂದು ಮಗುವೂ ಸಹ ಲಸಿಕೆಯಿಂದ ವಂಚಿತವಾಗದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಅವರು ಸೂಚಿಸಿದರು.

ಅವರು ಭಾನುವಾರ ಪಾಷನಗರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಬ್ದುಲ್ ರೆಹಮಾನ್ ಎಂಬ 4 ತಿಂಗಳ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೋ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶ ಸೇರಿದಂತೆ ಎಲ್ಲಾ ಭಾಗಗಳ ಅರ್ಹ ಮಕ್ಕಳಿಗೂ ಲಸಿಕೆ ತಲುಪಬೇಕು. ಆರೋಗ್ಯ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಷಣ್ಮುಖಪ್ಪ ಎಸ್. ಅವರು ಮಾತನಾಡಿ, ಜಿಲ್ಲೆಯನ್ನು ಸಂಪೂರ್ಣ ಪೋಲಿಯೋ ಮುಕ್ತವಾಗಿಸಲು ಆರೋಗ್ಯ ಇಲಾಖೆ ಪಣತೊಟ್ಟಿದೆ. ಜಿಲ್ಲೆಯಲ್ಲಿ ಒಟ್ಟು 18,28,153 ಜನಸಂಖ್ಯೆಯಿದ್ದು, 3,79,338 ಮನೆಗಳಿವೆ. ಇವುಗಳಲ್ಲಿ ಗುರುತಿಸಲಾಗಿರುವ 5 ವರ್ಷದ ಒಳಗಿನ 1,37,339 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ವಿವರ ನೀಡಿದರು.

ಇದಕ್ಕಾಗಿ ಜಿಲ್ಲಾದ್ಯಂತ 1,090 ಲಸಿಕಾ ಬೂತ್ಗಳನ್ನು ಸ್ಥಾಪಿಸಲಾಗಿದೆ. ಬೂತ್ಗಳಲ್ಲಿ ಲಸಿಕೆ ಹಾಕುವುದರ ಜೊತೆಗೆ, ಜೂನ್ 29 ರಿಂದ ಜುಲೈ 1 ರವರೆಗೆ ಒಟ್ಟು 3 ದಿನಗಳ ಕಾಲ ಜಿಲ್ಲೆಯ ಎಲ್ಲಾ ಮನೆ-ಮನೆಗೆ ತೆರಳಿ 5 ವರ್ಷದ ಒಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗುವುದು. ಈ ಕಾರ್ಯಕ್ರಮವನ್ನು 2 ಹಂತಗಳಲ್ಲಿ 3 ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಲಸಿಕಾ ಅಭಿಯಾನದ ಯಶಸ್ಸಿಗಾಗಿ ಮನೆ-ಮನೆ ಭೇಟಿ ತಂಡ, ಟ್ರಾನ್ಸಿಸ್ಟ್ (ಸಾರಿಗೆ ನಿಲ್ದಾಣಗಳ ತಂಡ) ಮತ್ತು ಸಂಚಾರಿ (ಮೊಬೈಲ್) ತಂಡ ಹೀಗೆ ಮೂರು ಪ್ರಮುಖ ವಿಭಾಗಗಳ ತಂಡಗಳನ್ನು ರಚಿಸಲಾಗಿದೆ. ನಿಯೋಜಿತ ಸಿಬ್ಬಂದಿ ಹಾಗೂ ಮೇಲ್ವಿಚಾರಕರು ಸಕ್ರಿಯವಾಗಿ ಕಾರ್ಯನಿರ್ವಹಿಸಲಿದ್ದು, ವಲಸೆ ಕಾರ್ಮಿಕರ ಮಕ್ಕಳು, ಹರವಿಗಿ ಹೋಗುವ ಕುಟುಂಬಗಳ ಮಕ್ಕಳು ಸೇರಿದಂತೆ ಒಂದೂ ಮಗುವು ಲಸಿಕೆಯಿಂದ ವಂಚಿತವಾಗದಂತೆ ಕಟ್ಟುನಿಟ್ಟಿನ ನಿಗಾ ಇಡಲಾಗುವುದು ಎಂದು ತಿಳಿಸಿದರು.

ಡಾ. ರೇಣುಕಾರಾಧ್ಯ ಆರ್.ಸಿ.ಹೆಚ್.ಒ ಅವರು ಮಾತನಾಡಿ, ಭಾರತವನ್ನು ಪೋಲಿಯೋ ಮುಕ್ತ ದೇಶವನ್ನಾಗಿಸಲಾಗಿದೆ ಆದರೆ ಪ್ರಸ್ತುತ ಪಾಕಿಸ್ತಾನ ಮತ್ತು ಬಾಂಗ್ಲಾದೇಶಗಳಲ್ಲಿ 5 ಪೋಲಿಯೋ ಪ್ರಕರಣಗಳು ಪತ್ತೆಯಾಗಿವೆ. ಅಲ್ಲಿನ ನಾಗರಿಕರು ಭಾರತಕ್ಕೆ ಬಂದು ಹೋಗುವ ಸಾಧ್ಯತೆ ಇರುವುದರಿಂದ, ವೈರಸ್ ಮತ್ತೆ ಇಲ್ಲಿ ಹರಡಬಾರದು ಎಂಬ ಮುಂದಾಲೋಚನೆಯಿಂದ ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ ದೇಶಾದ್ಯಂತ ಈ ಪಲ್ಸ್ ಪೋಲಿಯೋ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಪಲ್ಸ್ ಪೋಲಿಯೋ ನೊಡೆಲ್ ಅಧಿಕಾರಿ ಡಾ.ಚಂದ್ರಶೇಖರ್ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

Published

on

ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆÉ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ.ಬಿ : ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು.

ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಬೆಲ್ಲೌಡಿಹಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಬಿ.ಟಿ.: ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಮೌನೇಶ್ವರ : ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ.

ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳ, ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಕೆಟಿಜೆ: ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು, ಪಿಜೆ: ಪೋಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸಿಜಿಹೆಚ್: ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು.

ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮ್ಯಾಸರಹಳ್ಳಿ, ಗುಮ್ಮನೂರು, ಹುಣಸೆಕಟ್ಟೆ, ಮುಡೇನಹಳ್ಳಿ, ಕೆಂಚಮ್ಮನಹಳ್ಳಿ, ಹೊಸಹಳ್ಳಿ, ಕಾಟಿಹಳ್ಳಿ.

ಮಂಡಲೂರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ, ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ.

ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ4 hours ago

ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು

ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ....

ದಿನದ ಸುದ್ದಿ5 hours ago

ಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್

ಜಿಲ್ಲೆಯಲ್ಲಿ 1.37 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ: ಡಿಎಚ್ಒ ಡಾ. ಷಣ್ಮುಖಪ್ಪ ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೋ ವಿಶೇಷ ಅಭಿಯಾನದಲ್ಲಿ ಯಾವುದೇ ಒಂದು ಮಗುವೂ...

ದಿನದ ಸುದ್ದಿ6 days ago

ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ...

ದಿನದ ಸುದ್ದಿ1 week ago

ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್

ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ...

ದಿನದ ಸುದ್ದಿ1 week ago

ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ

ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್...

ದಿನದ ಸುದ್ದಿ2 weeks ago

ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ದಾವಣಗೆರೆಯ ಪಾಪು ಗುರು ಆಯ್ಕೆ

ಸುದ್ದಿದಿನ,ದಾವಣಗೆರೆ: ಕವಿ ಗವಿಸಿದ್ಧ ಎನ್. ಬಳ್ಳಾರಿ ವೇದಿಕೆ ಹಾಗೂ ಗವಿಸಿದ್ಧ ಎನ್. ಬಳ್ಳಾರಿ ಸಾಂಸ್ಕೃತಿಕ, ಕಲಾ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ, ಕೊಪ್ಪಳ ವತಿಯಿಂದ ನೀಡಲಾಗುವ...

ದಿನದ ಸುದ್ದಿ2 weeks ago

ಆಯುರ್ವೇದ ಆರೋಗ್ಯಕರ ಜೀವನ ಶೈಲಿ

ಸುದ್ದಿದಿನ,ದಾವಣಗೆರೆ:ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ ಎಂದು ಘನವೆತ್ತ ರಾಜ್ಯಪಾಲರಾದ...

ದಿನದ ಸುದ್ದಿ2 weeks ago

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ. ಆಸಕ್ತ...

ದಿನದ ಸುದ್ದಿ3 weeks ago

ವಸತಿ ಯೋಜನೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ. ಈ...

ದಿನದ ಸುದ್ದಿ3 weeks ago

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ...

Trending