Connect with us

ದಿನದ ಸುದ್ದಿ

ಆತ್ಮಕತೆ | ವಿಶ್ವವಿದ್ಯಾಲಯದ ವಿರುದ್ಧ ನಡೆಸಿದ ಎರಡು ಧರಣಿಗಳು

Published

on

  • ರುದ್ರಪ್ಪ ಹನಗವಾಡಿ

ಮೈಸೂರು ವಿಶ್ವವಿದ್ಯಾಲಯದ ಉಪ ಕುಲಪತಿಗಳಾಗಿ, ಕುವೆಂಪು ಅವರ ಮಾನಸಪುತ್ರರೆಂದೇ ಖ್ಯಾತರಾಗಿದ್ದ ಕನ್ನಡದ ಗದ್ಯ ಬರಹಗಾರ ಪ್ರೊ. ದೇ.ಜ.ಗೌ. ಅವರು ಎರಡು ಅವಧಿಗೆ ಉಪಕುಲಪತಿಗಳಾಗಿದ್ದರು. ಅವರ ಆಡಳಿತಾವಧಿಯಲ್ಲಿಯೇ ಹಲವು ಹೊಸ ಇಲಾಖೆ ಮತ್ತು ಗಂಗೋತ್ರಿಯಲ್ಲಿನ ಅನೇಕ ಹೊಸ ಕಟ್ಟಡಗಳು ಮತ್ತು ಇತರೆ ಮೂಲಭೂತ ಸೌಲಭ್ಯಗಳನ್ನು ಮಾಡಿಸಿದ್ದರು. ಹೀಗಿರುವಾಗ ನಾವು ಫೈನಲ್ ಎಂ.ಎ.ನಲ್ಲಿರುವಾಗ ಪ್ರಥಮ ಎಂ.ಎ., ಎಂ.ಎಸ್ಸಿ., ಎಂ.ಕಾಂ., ಗಳಲ್ಲಿ ಸೇರಿಸಿಕೊಳ್ಳುವಾಗ ಅರ್ಹ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂಬ ಕೂಗು ಬಂದ ಕಾರಣ ಸಮಾಜವಾದಿ ಯುವಜನ ಸಭಾ ವತಿಯಿಂದ ಪ್ರತಿಭಟಿಸಲು ತೀರ್ಮಾನಿಸಲಾಯಿತು.

ಮೊದಲನೆಯದಾಗಿ ವಿಶ್ವವಿದ್ಯಾಲಯದ ಪಿ.ಜಿ. ಗಳಲ್ಲಿ ಪ್ರವೇಶಾವಕಾಶಗಳು, ವಿದ್ಯಾರ್ಥಿಗಳು ಆಯಾ ವಿಷಯಗಳಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅವಕಾಶವನ್ನು ಪಡೆಯುತ್ತಿದ್ದರು. ನಾನು 1972-73ನೇ ಸಾಲಿನಲ್ಲಿ ಸೇರಿದಾಗಲೂ ಹಲವು ವಿಷಯಗಳಲ್ಲಿ ಪ್ರವೇಶಾವಕಾಶದ ಕೊನೆಯ ಹಂತದಲ್ಲಿ ಮಂತ್ರಿ ಮಹೋದಯರೋ ಇಲ್ಲ ವಿಶ್ವವಿದ್ಯಾಲಯದಲ್ಲಿನ ಪ್ರೊಫೆಸರ್‌ಗಳ ಶಿಫಾರಸ್ಸಿನಿಂದ ಒಂದೋ ಎರಡೋ ಕಡಿಮೆ ಅಂಕ ಪಡೆದವರಿಗೂ ಸೀಟು ಕೊಡುತ್ತಿದ್ದರು. ಇವೆಲ್ಲ ಬಹಳ ದಿನಗಳ ನಂತರ ತಿಳಿಯುತ್ತಿದ್ದವು. ಆದರೆ 1973-74 ಆರಂಭಿಕ ಪ್ರವೇಶದಲ್ಲಿ ಅನೇಕ ವಿದ್ಯಾರ್ಥಿಗಳು ಕಡಿಮೆ ಅಂಕ ಪಡೆದಿದ್ದರೂ ಹಲವಾರು ವ್ಯಕ್ತಿಗಳ ಶಿಫಾರಸ್ಸಿನ ಹಿನ್ನೆಲೆಯಲ್ಲಿ 8-10 ವಿದ್ಯಾರ್ಥಿಗಳು ಹಲವಾರು ಸ್ನಾತಕೋತ್ತರ ಶಾಖೆಗಳಲ್ಲಿ ಸೇರ್ಪಡೆಯಾಗಿದ್ದರು.

ಅವುಗಳ ವಿರುದ್ಧ ಸಮಾಜವಾದಿ ಯುವಜನ ಸಭಾದ ವಿದ್ಯಾರ್ಥಿಗಳು ದೇವನೂರು ಮಹಾದೇವನ ನೇತೃತ್ವದಲ್ಲಿ ಕ್ರಾರ‍್ಡ್ ಹಾಲ್ ಎದುರು ಧರಣಿ ಕೂತಿದ್ದೆವು. ಸಣ್ಣದೊಂದು ಪೆಂಡಾಲ್ ಹಾಕಿಕೊಂಡು ವಿಶ್ವವಿದ್ಯಾಲಯದ ಅತ್ಯುನ್ನತ ಕಲಿಕಾ ಕೇಂದ್ರಗಳಲ್ಲಿ ಕ್ರಮಬದ್ಧವಲ್ಲದ ಪ್ರವೇಶಗಳನ್ನು ರದ್ದುಪಡಿಸಲು ಆಗ್ರಹಿಸಿ ಧರಣಿ ನಡೆಯುತ್ತಿತ್ತು. ಈ ಧರಣಿ ಪ್ರಾರಂಭವಾಗುತ್ತಿದ್ದಂತೆ ಎಲ್ಲೆಲ್ಲಿ ಎಷ್ಟೆಷ್ಟು ವಿದ್ಯಾರ್ಥಿಗಳನ್ನು ಶಿಫಾರಸ್ಸಿನ ಮೇರೆಗೆ ಪ್ರವೇಶ ಪಡೆದಿದ್ದಾರೆ ಎನ್ನುವ ಚರ್ಚೆ ಬಂದು ರಾಜ್ಯಶಾಸ್ತç ವಿಭಾಗದಲ್ಲಿ ಅತ್ಯಂತ ಹೆಚ್ಚು ಅನಧಿಕೃತ ಪ್ರವೇಶ ಆಗಿದ್ದವೆಂದು ತಿಳಿದು ಬಂದಿತ್ತು.

ಉಳಿದ ವಿಭಾಗಗಳಲ್ಲಿ ಒಂದು ಎರಡು ಹೀಗೆ ಇದ್ದರೆ, ಕೆ.ಬಿ.ವೈ. ತೋಟಪ್ಪನವರು ಮುಖ್ಯಸ್ಥರಾಗಿದ್ದ ರಾಜ್ಯಶಾಸ್ತç ವಿಭಾಗದಲ್ಲಿ ಅದು ಹೆಚ್ಚಾಗಿತ್ತು. ಹೀಗೆ ಧರಣಿ ಮಾಡುತ್ತಿದ್ದ ನಮ್ಮಲ್ಲಿಗೆ ಮಹೇಶ ರಾಜ್ಯಶಾಸ್ತç ವಿಭಾಗಕ್ಕೆ ಶಿಫಾರಸ್ಸಿನಲ್ಲೇ ಪ್ರವೇಶ ಪಡೆದವನು, ನಮಗೆಲ್ಲ ಇಡ್ಲಿ ಚಟ್ನಿ ಕಟ್ಟಿಸಿಕೊಂಡು ಬಂದು ಕೊಟ್ಟನು. ಅವನ ವಿರುದ್ಧವೇ ನಾವು ಧರಣಿ ಕೂತಿದ್ದರೂ, ಯಾವ ಭಾವಾವೇಶವೂ ಇಲ್ಲದೆ, ಅವನನ್ನು ನೋಡಿ ನಮಗೆ ಅತ್ಯಾಶ್ಚರ್ಯವಾಗಿತ್ತು. ಎಲ್ಲ ಅನಧಿಕೃತ ಪ್ರವೇಶಾರ್ಥಿಗಳನ್ನು ತೆಗೆದು ಹಾಕಿದರೆ ನನಗೇನು ಬೇಸರವಿಲ್ಲ. ನಮ್ಮಪ್ಪನಿಗೆ ಸ್ವಲ್ಪ ಬೇಜಾರಾಗಬಹುದೆಂದು ಹೇಳಿದ್ದು ಈಗ ನೆನಪಾಗುತ್ತಿದೆ. ನಮ್ಮ ಧರಣಿಯಿಂದಾಗಿ ಈಗಾಗಲೇ ಆಗಿರುವ ಪ್ರವೇಶಾರ್ಥಿಗಳನ್ನು ತೆಗೆದು ಹಾಕಲಿಲ್ಲ. ಮುಂದಿನ ವರ್ಷಗಳಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿಯಾಗಿ ಪ್ರೊಫೆಸರ್‌ಗಳು ಪ್ರವೇಶಗಳಿಗೆ ಅರ್ಹವಾದ ವಿದ್ಯಾರ್ಥಿಗಳ ಅರ್ಜಿಗಳನ್ನು ಕುಲಪತಿಗಳ ಅನುಮೋದನೆ ಪಡೆದು, ನಂತರ ಪ್ರವೇಶಾರ್ಥಿಗಳಿಗೆ ಪ್ರವೇಶ ನೀಡುವ ಪರಿಪಾಲನೆ ಜಾರಿಗೆ ಬಂದಿದ್ದೊಂದು ಎಸ್.ವೈ.ಎಸ್. ಸಂಘಟನೆಯ ಸಾಧನೆ.

ಜೊತೆಗೆ ನಾನೂ ಕೂಡ, ಕಳೆದ ವರ್ಷವಷ್ಟೇ ಪಾರ್ವತಕ್ಕನವರ ಶಿಫಾರಸ್ಸಿನಿಂದ ಮೂರನೇ ಲಿಸ್ಟ್ನಲ್ಲಿ ಸೀಟು ಪಡೆದುಕೊಂಡಿದ್ದು, ಆ ಬಗ್ಗೆ ನನ್ನೊಳಗೆ ಅಪರಾಧಿ ಭಾವ ಇದ್ದೇ ಇತ್ತು. ಆಗ ಇದೊಂದು ದೊಡ್ಡ ಮಟ್ಟದ ಅನ್ಯಾಯವೆಂದು ಯಾರೂ ಪರಿಗಣಿಸದೆ ಮುಚ್ಚಿ ಹೋಯಿತು. ಈಗ ಅಂತಹ ಶಿಫಾರಸ್ಸಿನವರ ಸಂಖ್ಯೆಯೇ ಜಾಸ್ತಿಯಾಗಿ, ಅದರ ವಿರುದ್ಧ ಹೋರಾಟ ರೂಪಿಸುವಂತೆ ಆಗಿದ್ದು, ನಾನೂ ಕೂಡ ಭಾಗವಹಿಸಿದ್ದು ಆ ಕಾಲಘಟ್ಟದ ಎಚ್ಚರಿಕೆಯಲ್ಲಿದ್ದ ಸಂಘಟನೆಯ ಶಕ್ತಿಯಾಗಿತ್ತು.

ನಮ್ಮ ಧರಣಿಯ ವಿವರ ಮತ್ತು ಅನಧಿಕೃತ ಪ್ರವೇಶಾರ್ಥಿಗಳು ಅರ್ಥಶಾಸ್ತ್ರ ವಿಭಾಗದಲ್ಲೂ ಆಗಿರುವ ಬಗ್ಗೆ ಬಂಡಾಯ ಪತ್ರಿಕೆಯಲ್ಲಿ ಅಚ್ಚಾಗಿತ್ತು. ಅವುಗಳ ಪ್ರತಿಗಳನ್ನು ನಾನು ಸ್ವತಃ ಕ್ಲಾಸಿನಲ್ಲಿ ಹಂಚಿದ್ದೆ. ಆದರೆ ನಮ್ಮ ವಿಭಾಗದ ಮುಖ್ಯಸ್ಥರಾದ ಜಿ.ಟಿ. ಹುಚ್ಚಪ್ಪನವರು ಯಾವುದೇ ವಿಚಾರಣೆ ನಡೆಸದೆ ಸುಮ್ಮನಾಗಿದ್ದರು. ಅವರು, ಆಗ ತೋರಿದ ದೊಡ್ಡತನ ಮರೆಯಲಾಗಿಲ್ಲ. ಅವರು ಮನಸ್ಸು ಮಾಡಿದ್ದರೆ ನನಗೆ ಶೈಕ್ಷಣಿಕವಾಗಿ ತೊಂದರೆ ಕೊಡಬಹುದಾಗಿತ್ತು. ಆದರೆ ಹಿರಿಯರಾಗಿದ್ದ ಪ್ರೊ. ಜಿ.ಟಿ. ಹುಚ್ಚಪ್ಪ ಅವರು ದೊಡ್ಡತನದಿಂದಲೇ ನಡೆದುಕೊಂಡಿದ್ದರು. ಗಂಗೋತ್ರಿ ತುಂಬಾ ಎಲ್ಲ ವಿಭಾಗಗಳ ಹೊರಗೆ ಅನಧಿಕೃತ ಪ್ರವೇಶಾರ್ಥಿಗಳ ಕುರಿತು ಘೋಷವಾಕ್ಯಗಳನ್ನು ಬರೆದಿದ್ದೆವು. ವಿಜ್ಞಾನ ಮತ್ತು ರಾಜ್ಯಶಾಸ್ತç ವಿಭಾಗದಲ್ಲಿ ಆಗಿದ್ದ ಪ್ರವೇಶಾರ್ಥಿಗಳ ವಿವರಗಳನ್ನು ಬಾಟನಿ ವಿಭಾಗದಲ್ಲಿ ರೀಡರ್ ಆಗಿದ್ದ ಪ್ರೊ. ರಾಮಲಿಂಗಮ್ ಅವರೊಡನೆ ಇತರೆ ಅಧ್ಯಾಪಕರುಗಳು ಕೂಡ ನಮಗೆ ವಿವರ ನೀಡುತ್ತಿದ್ದರು. ಎಲ್ಲಾ ವಿಭಾಗಗಳ ಮತ್ತು ಕನ್ನಡ ಅಧ್ಯಯನ ಸಂಸ್ಥೆಯ ಗೋಡೆಯ ಮೇಲೂ ಕೂಡ ಬರೆದಿದ್ದೆವು. ಮಾರನೆ ದಿನ ಕನ್ನಡ ವಿಭಾಗದ ಮುಖ್ಯಸ್ಥರಾಗಿದ್ದ ಪ್ರೊ. ಹಾ.ಮಾ. ನಾಯಕ್ ಅವರು ಬಂದು ನೋಡಿ ಇದೆಲ್ಲಾ `ತಮ್ಮ ವಿದ್ಯಾರ್ಥಿ ಮಹಾದೇವನದೇ ಕೈವಾಡವೆಂದು ರೇಗಾಡಿದರೆಂತಲೂ, ಆತನಿಗೆ ತಕ್ಕ ಶಾಸ್ತಿ ಮಾಡುವುದಾಗಿ ಹೇಳಿದರೆಂದು’ ಆಲನಹಳ್ಳಿ ಕೃಷ್ಣ ಬಂದು ನನ್ನ ಬಳಿ ಹೇಳಿದರು.

ನಾನು ಮಹಾದೇವ ಬಂದಾಕ್ಷಣ ಅವನ ಕನ್ನಡ ವಿಭಾಗದಲ್ಲಿ ಆದ ಬೆಳವಣಿಗೆಯನ್ನು ತಿಳಿಸಿದೆ ಅದಕ್ಕವನು `ನಾವೆಲ್ಲ ಮಾಡುತ್ತಿರುವ ಹೋರಾಟದಲ್ಲಿ ನಿಮ್ಮಂತವರ ಬೆಂಬಲ ತಾತ್ವಿಕವಾಗಿ ಇರುವುದೆಂದು ಭಾವಿಸಿದ್ದೆವು, ಆದರೆ ನೀವು ಆಲನಹಳ್ಳಿ ಕೃಷ್ಣ ಅವರ ಬಳಿ ಆಡಿದ ಮಾತು ಕೇಳಿ ನನಗೆ ಜಿಗುಪ್ಸೆ ಮೂಡಿ ನಿಮ್ಮಂತಹವರ ಕೆಳಗೆ ವಿದ್ಯಾಭ್ಯಾಸ ಮುಂದುವರಿಸಲು ನಾಚಿಕೆಯಾಗುತ್ತದೆ’ ಎಂದು ಪತ್ರ ಬರೆದು ಹಾ.ಮಾ. ನಾಯಕ್ ಮತ್ತು ಪ್ರಜಾವಾಣಿ ಪತ್ರಿಕೆಗೂ ಕಳಿಸಿಕೊಟ್ಟುಬಿಟ್ಟ. ಇದಕ್ಕೆಲ್ಲ ಕಾರಣರಾದ ಆಲನಹಳ್ಳಿ ಅವರಿಗೆ ಪೀಕಲಾಟವಾಯಿತು. ಪೋಸ್ಟ್ ಹಾಕಿದ ಪತ್ರ ಹಾ.ಮಾ.ನಾ.ಗೆ ಮತ್ತು ಪ್ರಜಾವಾಣಿಗೆ ತಲುಪಿದರೂ ಪ್ರಕಟಿಸದಂತೆ ಪ್ರಜಾವಾಣಿಗೆ ಫೋನ್ ಮಾಡಲು ಪ್ರಯತ್ನಿಸಿದರು. ಆದರೆ ಹಾ.ಮಾ.ನಾ.ಗೆ ಬರೆದ ಪತ್ರ ತಲುಪಿ ಮಾದೇವನನ್ನು ಕರೆದು ಮಾತಾಡಿಸಿ, ಹಾ.ಮಾ.ನಾ. ನಾವುಗಳು ಮಾಡುತ್ತಿರುವ ಹೋರಾಟದ ಬಗ್ಗೆ ತಮ್ಮದೇನೂ ಅಭ್ಯಂತರವಿಲ್ಲವೆAದು ಹೇಳಿ ಕಳಿಸಿದರೆಂದು ನಂತರ ತಿಳಿಯಿತು. ಹಾಗಾಗಿ ಮಾದೇವ ಎಂ.ಎ. ಪೂರ್ತಿ ಮುಗಿಸುವ ತನಕ ಮತ್ತೇನು ತೊಂದರೆಯಾಗಲಿಲ್ಲ.

ನಮ್ಮ ಸೀನಿಯರ್ ಆಗಿದ್ದ ಬಸವಣ್ಯಪ್ಪ ಆಗಲೇ ಎಂ.ಎ. ಮುಗಿಸಿ ಪರ‍್ವತಕ್ಕನ ಸೋಷಿಯಾಲಜಿ ವಿಭಾಗದಲ್ಲಿ ಸಹಾಯಕ ನಿರ್ದೇಶಕನ ಕೆಲಸ ಮಾಡುತ್ತಿದ್ದ. ನಾನು ನನ್ನ ಎಸ್‌ವೈಎಸ್ ಚಟುವಟಿಕೆಗಳ ಬಗ್ಗೆ ಪತ್ರಿಕೆಗಳಲ್ಲಿ ವಿಶ್ವವಿದ್ಯಾಲಯದ ವಿಷಯ ಮುದ್ರಿಸಿ ತರಗತಿಯಲ್ಲಿ ಹಂಚಿದ ಬಗ್ಗೆ ತಿಳಿದು, ನನಗೆ ಎಚ್ಚರಿಕೆ ನೀಡಿ ನಿನಗೆ ಎಂ.ಎ.ನಲ್ಲಿ ಥರ್ಡ್ ಕ್ಲಾಸ್ ನೀಡಿ ಎಲ್ಲೂ ನಿನಗೆ ಕೆಲಸವಿದಲ್ಲದಂತೆ ಮಾಡುತ್ತಾರೆಂದು ತಿಳಿಸಿ ಆತಂಕ ವ್ಯಕ್ತಪಡಿಸಿದ್ದ. ಆದರೆ ಅಂತಹದ್ದೇನೂ ನಡೆಯದೆ ಫಲಿತಾಂಶ ಬಂದಾಗ ನಾನು ಎಂ.ಎ. ಸೆಕೆಂಡ್ ಕ್ಲಾಸ್‌ನಲ್ಲಿ ಪಾಸಾಗಿ ಹೊರಬಂದಿದ್ದೆ. ಅದಕ್ಕೆಲ್ಲ ಅಂದಿನ ಮುಖ್ಯಸ್ಥರಾಗಿದ್ದ ಪ್ರೊ. ಜಿ.ಟಿ. ಹುಚ್ಚಪ್ಪನವರ ವಿಶಾಲ ಹೃದಯದ ನಡವಳಿಕೆಯೇ ಕಾರಣವಾಗಿತ್ತು.

ಇನ್ನೊಂದು ಪ್ರಕರಣ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಸೋದರ ಸಂಬಂಧಿಯಾದ ಡಿ. ವಿಜಯರಾಜೇ ಅರಸ್ (ಡಿ.ವಿ. ಅರಸ್) ಅವರು ನೂತನ ರಿಜಿಸ್ಟಾçರ್ ಆಗಿ ಇದ್ದರು. ಅವರು ಬಿ.ಎ. (ಆರ‍್ಸ್) ಮಾಡಿ ಹಲವು ದೇಶಗಳನ್ನು ಸುತ್ತಿ ಬಂದ ಅನುಭವೀ ಆಡಳಿತಗಾರರಾಗಿದ್ದರು. ಅವರ ಆಡಳಿತ ಮತ್ತು ವೈಯಕ್ತಿಕ ಆಸಕ್ತಿಗೆ ತಕ್ಕಂತೆ ತಮ್ಮ ಛೇಂಬರ್‌ಗೆ ರೆಡ್ ಕಾರ್ಪೆಟ್ ಹಾಕಿಸಿಕೊಂಡದ್ದೊಂದು ದೊಡ್ಡ ಸುದ್ದಿಯಾಗಿತ್ತು. ಅದರ ವಿರುದ್ಧ ಎಸ್.ವೈ.ಎಸ್. ಧರಣಿ ಮಾಡಿ ಎಲ್ಲ ವಿದ್ಯಾರ್ಥಿಗಳಲ್ಲೂ ಚರ್ಚಿಸುವಂತೆ ಮತ್ತೆ ಪತ್ರಿಕೆಗಳಲ್ಲಿ ಬಂದು, ರಿಜಿಸ್ಟಾçರ್ ಅವರ ದುಂದು ವೆಚ್ಚಕ್ಕೆ ಕಡಿವಾಣ ಹಾಕಬೇಕೆಂದು ಧರಣಿ ಮಾಡಿದ್ದೆವು. ಈಗ ಯೋಚಿಸಿದರೆ ಆಗ ನಾವು ಮಾಡುತ್ತಿದ್ದ ಸಣ್ಣ ಸಣ್ಣ ಭ್ರಷ್ಟಾಚಾರ ಸ್ವಜನ ಪಕ್ಷಪಾತಗಳಿಗೆ ಪ್ರತಿಕ್ರಿಯಿಸುತ್ತಿದ್ದ ವಿದ್ಯಾರ್ಥಿ ಸಮೂಹ ಈಗ ಇಂತಹ ಯಾವುದೇ ಸ್ಪಂದನವನ್ನು ಕಾಣದೆ ಎಲ್ಲರೂ ತಮ್ಮ ತಮ್ಮ ಜಾತಿ ಸಂಘಟನೆಗಳಲ್ಲಿ ಕ್ರಿಯಾಶೀಲರಾಗಿ ಸಮಾಜದ ಸಮಷ್ಟಿ ಬೆಳವಣಿಗೆಯ ಬಗ್ಗೆ ನಿರುತ್ಸಾಹ ಎದ್ದು ಕಾಣುತ್ತದೆ. ವಿಶ್ವವಿದ್ಯಾಲಯಗಳಲ್ಲಿ ವರ್ಷಗಟ್ಟಲೆ ಅಧ್ಯಾಪಕರಿಲ್ಲದೆ ಇದ್ದರೂ,ಆ ಬಗ್ಗೆ ದಿವ್ಯ ನಿರ್ಲಕ್ಷ್ಯ ದಿಂದ ಇರುವ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿಗಳಲ್ಲಿ ಸಂಘಟಿತ ಹೋರಾಟಗಳು ಇಲ್ಲವಾಗಿವೆ.

ಈ ಮೇಲಿನ ಎರಡು ಧರಣಿಗಳು ಎಲ್ಲಾ ವಿದ್ಯಾರ್ಥಿ ದೆಸೆಯ ಸಮಾಜವಾದಿ ಯುವಜನ ಸಭಾದ ಸಂಘಟನೆಯ ಮುಖಾಂತರ ನಡೆದವುಗಳು. ವಿದ್ಯಾರ್ಥಿಗಳಾಗಿ ನಾವು ವಿಶ್ವವಿದ್ಯಾಲಯದಲ್ಲಿನ ಸಮಸ್ಯೆಗಳಿಗೆ ಏನೂ ಮಾಡಲಾರೆವು ಎಂದು ಕೈಚೆಲ್ಲಿ ಕೂರದೆ ಸಂಘಟಿತ ಪ್ರತಿಭಟನೆ ಮಾಡಿದಾಗ ಆಗುವ ಬದಲಾವಣೆಯನ್ನು ಕೂಡ ಕಣ್ಣೆದುರಿಗೆ ತೋರಿಸುವಂತಾಗಿದ್ದವು. ಮುಂದಿನ ದಿನಗಳಲ್ಲಿ ಅಧಿಕಾರಸ್ಥರಿಗೆ ಸರಿಯಾದ ಮಾರ್ಗದಲ್ಲಿ ನಡೆಯಲು ದಿಕ್ಸೂಚಿಯಾಗಿ ನಿಂತವು ಎಂಬುದರಲ್ಲಿ ಎರಡು ಮಾತಿಲ್ಲ.

ಓ ನನ್ನ ಮೈಸೂರೆ !

ನಮ್ಮೂರ ಹಾಲಿವಾಣದ ಮುಳ್ಳುಗಳು
ಓಡಾಡೋ ದಾರಿಯ ಕೊರಕಲುಗಳು
ಒಪ್ಪಾರೆ ನೆರಕೆಯ ಹೋಟೆಲುಗಳ ಕಿಲುಬು ಕಪ್ಪುಗಳು
ಒಟ್ಟಾರೆ ಒಂದೆರಡಲ್ಲ ಹೀಗೆ ನೂರಾರು ಸಿಕ್ಕುಗಳ
ಮಡಿ ಮೈಲಿಗೆ ದಾಟಿ…

ನೇರ ಹರಿಯೋ ರೈಲುಹತ್ತಿ ಮೈಸೂರು ತಲುಪಿದ್ದು
ಮಹಾರಾಜರೇ ಕಟ್ಟಿದ ಕಾಲೇಜು ಮೆಟ್ಟಿದ್ದು
ಅರಮನೆ, ಚಾಮುಂಡಿ ಬೆಟ್ಟ
ಎತ್ತೆತ್ತಲೋ ಕೊಂಡೊಯ್ಯುವ ರಸ್ತೆಗಳು
ಹೌಹಾರುವ ನೋಟಗಳು
ಎಲ್ಲ ಹೊತ್ತೊಗೆದಿತ್ತು ನನ್ನ
ಜನ್ಮ ಜನ್ಮಾಂತರದ ಹೊರೆಯ
ಕಣ್ಣಿಗಂಟಿದಾ ಪೊರೆಯ…

ದಿವ್ಯ ದೇಗುಲದಾ ಒಳಗೆ
ಬೆಳಕ ತೋರೋ ಪಂಡಿತರು
ಕಾಸಿ ಕಾಸಿ ಹಣಿಯೋ ಕುಲುಮೆಗಳು
ಬೆಳ್ಳಿ ಬಂಗಾರದ ಭಂಡಾರಗಳು
ಉAಡು ಉಡಲು ಇತ್ತ
ರಾಜನ ಹೆಸರಿನ ತಂಗುದಾಣ
ಅದುವೇ ಪಂಚಾಮೃತ…

ಇದ್ದವರೆಲ್ಲ, ಇಲ್ಲಿ ನನ್ನಂತವರಲ್ಲ
ಆಗಲೇ ಸಿಗರೇಟು ಹಚ್ಚಿ
ಕಥೆ ಬರೆಯೋ ಮಾದೇವ
ಟರ್ಲಿನ್ ಷರ್ಟನಲ್ಲಿ ಬಂಗಾರದ ಚೈನು ಹಾಕಿ
ವಿಶಾಲ ಹೃದಯ ತೋರೋ ರೆಡ್ಡಿ
ತಾಯಿಗಡುಸಿನ ತಾವು ತೋರೋ ಮಹೇಶ
ಅವಸರದಲ್ಲೂ ಉಡದಂತೆ ಹಿಡಿದು ಒಪ್ಪಿಸೋ ಅರ್ಕೇಶ
ಅಕ್ಷರಗಳನಾಡಿಸಿ ಮಣಿಸೋ ಭಕ್ತ
ಸಮತಟ್ಟಲಿ ಹರಿಯೋ ಹೊಳೆಯಂತೆ ಗೊಟ್ಟಿಗೆರೆ ಶಿವರಾಜ
ವಾರವೆಲ್ಲ ಉಣದಿದ್ದರೂ ಬಣ್ಣಗೆಡದ ರಾಕೆ…

ಇಂತವರೆಲ್ಲರ ಕೂಡಿ ಹಾಕಿ ಮಾತಾಡೋ
ನಂಜುAಡಸ್ವಾಮಿ, ವಕೀಲ ಟಿ.ಎನ್.ಎನ್., ದಾನಿ ಪಿ. ಮಲ್ಲೇಶ್
ಅನಂತರಂಗಾಚಾರ್, ರಾಮದಾಸ್
ನೆಲಮೂಲದ ನೆರವು ತೋರೋ
ನೆಲಮನೆಯ ದೇವೇಗೌಡ
ಆಂದೋಲನದಾಳಕ್ಕೂ ಮುಳುಗಿನಿಂತ
ರಾಜಶೇಖರ ಕೋಟಿ
ಅರೆಜೀವಗೊಂಡವರ
ಹೊರೆಹೊತ್ತು ಬರುವಾ ಕೃಷ್ಣಪ್ಪ
ರಿಪೇರಿಯಲ್ಲೇ ಓಡೋ ಜೀಪಲ್ಲಿ ತೇಜಸ್ವಿ
ಕ್ರಾಂತಿಕವನಗಳ ಕಟ್ಟು ಹೊತ್ತ
ಸಂಕ್ರಮಣದ ಚಂಪಾ
ಸ್ಫೋಟಕ ಸುದ್ಧಿಯ ಪ್ರೊ. ರಾಮಲಿಂಗ
ಯುವಕರ ಕಣ್ಣಲ್ಲಿ ಮಿಂಚು ಹರಿಸೋ
ಅನಂತಮೂರ್ತಿ, ಲಂಕೇಶ, ರಾಮಮೂರ್ತಿ
ವಿಚಾರವಾದಿಗಳ ರಥಕತೆಯ
ರ‍್ಮಲಿಂಗಂ, ಕೊವೂರ್, ಪೆರಿಯಾರ್
ಹೆಚ್. ನರಸಿಂಹಯ್ಯ, ಕುವೆಂಪು, ಬಸವಲಿಂಗಪ್ಪ…

ಬದುಕು ಬರಹಗಳೇ
ರಸವಾಗಿ ಕೊಸರಾಗಿ ಮೈವೆತ್ತ
ಎಲ್. ಬಸವರಾಜು, ಸುಜನಾ
ಹೀಗೆ ಹರಿಯುತ್ತದೆ
ನನ್ನರಿವಿನಾ ಹರವು…
ಬೆರಗಾಗಿ – ಬೆಳಕಾಗಿ
ಕೆನೆಮೊಸರ ಕಡೆದಂತೆ
ಸೊಗಸಾಗಿ ಬೆಳೆದಿದೆ
ಇಂದಿಗೂ ತಲೆದಿಂಬಾಗಿ
ತಲೆ ಎತ್ತಿ ತಿರುಗಾಡುವ
ಅಂಬಾಗಿ…

ಮುಂದುವರಿಯುವುದು

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸರ್ಕಾರಿ ಪ್ರಥಮ‌ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂಗ್ಲೀಶ್ ಪಠ್ಯಕ್ರಮ ಕಾರ್ಯಗಾರ

Published

on

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್ ಪಠ್ಯಕ್ರಮ” ಕುರಿತ ಒಂದು ದಿನದ ಕಾರ್ಯಗಾರವನ್ನು ದಿನಾಂಕ 02-03-2026 ರಂದು ಉದ್ಘಾಟಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕರಿಬಸಪ್ಪ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ದಾವಣಗೆರೆ ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ ಡಾ. ಲೋಕೇಶ್ ಎಂ.ಯು. ಭಾಗವಹಿಸಿ, ಎಸ್.ಇ.ಪಿ ಪಠ್ಯಕ್ರಮದ ಉದ್ದೇಶ, ವಿನ್ಯಾಸ ಮತ್ತು ಪರಿಣಾಮಕಾರಿತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಗ್ಲೀಷ್ ವಿಭಾಗದ ಸಂಯೋಜಕರಾದ ಡಾ. ಫಕ್ಕೀರೇಶ ಹಳ್ಳಳ್ಳಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.

ಈ ಕಾರ್ಯಗಾರದಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಪದವಿ ಕಾಲೇಜುಗಳಲ್ಲಿ ಇಂಗ್ಲೀಷ್ ಭಾಷೆ ಮತ್ತು ಸಾಹಿತ್ಯ ಬೋಧಿಸುವ ಪ್ರಾಧ್ಯಾಪಕರು ಭಾಗವಹಿಸಿ, ಪಠ್ಯಕ್ರಮದ ಅನುಷ್ಠಾನ, ಬೋಧನಾ ವಿಧಾನಗಳು ಹಾಗೂ ಮೌಲ್ಯಮಾಪನ ಕ್ರಮಗಳ ಕುರಿತು ವಿಚಾರ ವಿನಿಮಯ ನಡೆಸಿದರು.ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಇಂಗ್ಲೀಷ್ ಪಠ್ಯಕ್ರಮ ಕುರಿತ ಮಹತ್ವದ ಕಾರ್ಯಗಾರ ಯಶಸ್ವಿ.

ವೇದಿಕೆಯಲ್ಲಿ ಪ್ರಾಧ್ಯಾಪಕರಾದ ಡಾ. ಜಯಪ್ಪ, ಡಾ. ಭೀಮಪ್ಪ, ಡಾ. ಮಹೇಶ್ ನಾಯ್ಕ್, ಡಾ.ಮಧುಸೂದನ್, ಡಾ. ವಿಜಯಕುಮಾರ್, ಡಾ. ನಾಗನಗೌಡ ಹಾಗೂ ಡಾ. ಶಿವರಾಜ್, ಡಾ. ತ್ರಿವೇಣಿ, ಡಾ. ಶಶಿಕಲಾ ಉಪಸ್ಥಿತರಿದ್ದರು.

ಐ ಕ್ಯೂ ಏ ಸಿ ಸಂಯೋಜಕರು ಮತ್ತು ಆಂಗ್ಲ ವಿಭಾಗದ ಮುಖ್ಯಸ್ಥರಾದ ಡಾ. ಭೀಮಪ್ಪ ಎಂ ಪಿ ಕಾರ್ಯಕ್ರಮದ ಕುರಿತು ಪ್ರಸ್ತಾಪಿಸಿ ಮತ್ತು ಸ್ವಾಗತಿಸಿದರು, ಇತಿಹಾಸ ವಿಭಾಗದ ಮುಖ್ಯಸ್ಥರು ವಂದಿಸಿದರು ಮತ್ತು ಪ್ರೂ. ಮಂಜುನಾಥ ಜಿ ಕಾರ್ಯಕ್ರಮವನ್ನು ನಿರೂಪಿಸಿದರು.

ಇಂಗ್ಲೀಷ್ ಮೇಜರ್ ನಲ್ಲಿ ರ‌್ಯಾಂಕ್ ಪಡೆದವಿದ್ಯಾರ್ಥಿನಿಯರನ್ನು ಇಂಗ್ಲಿಷ್ ವಿಭಾಗದಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮೆಗಾ ಉದ್ಯೋಗ ಮೇಳ ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

Published

on

ಸುದ್ದಿದಿನ,ದಾವಣಗೆರೆ:ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ಸೋಮವಾರ(ಫೆ.23) ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ, ಮಹಾನಗರಪಾಲಿಕೆ, ಜಿಲ್ಲಾ ಕೌಶಲ್ಯಾ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು

ಯುವನಿಧಿ ಯೋಜನೆಯಡಿ ರಾಜ್ಯದಲ್ಲಿ 3,62,000 ಅಭ್ಯರ್ಥಿಗಳು ನೋಂದಾಯಿಸಿಕೊAಡಿದ್ದು, ಜಿಲ್ಲೆಯಲ್ಲಿ 10,404 ಪದವಿಧರರು, 226 ಡಿಪ್ಲೋಮ ಆದವರು ಯುವನಿಧಿಯ ಸೌಲಭ್ಯ ಪಡೆಯುತ್ತಿದ್ದಾರೆ. ಇದರಲ್ಲಿ 2326 ಯುವಕ, ಯುವತಿಯರಿಗೆ ಬೇರೆ ಬೇರೆ ಉದ್ಯೋಗ ಮೇಳದಲ್ಲಿ ಉದ್ಯೋಗ ದೊರತಿದೆ. 2024-25ನೇ ಸಾಲಿನಲ್ಲಿ ಸುಮಾರು 33 ಕೋಟಿ, 22 ಲಕ್ಷ ಹಣ ಸಂದಾಯವಾಗಿದೆ. ರಾಜ್ಯದಲ್ಲಿ ಕೌಶಲ್ಯಾಭಿವೃದ್ದಿ ಯೋಜನೆಯಡಿ 17,715 ಅಭ್ಯರ್ಥಿಗಳಿಗೆ ತರಬೇತಿ ನೀಡಿದ್ದು, 2376 ಅಭ್ಯರ್ಥಿಗಳಿಗೆ ಉದ್ಯೋಗ ದೊರತಿದೆ.

ಜೊತೆಗೆ ಪದವಿ ಉತ್ತೀರ್ಣ ವಿದ್ಯಾರ್ಥಿಗಳು ಸಿವಿಲ್ ಸರ್ವಿಸಸ್ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ನೀಡಲಾಗುತ್ತಿದೆ. ಒಟ್ಟಾರೆ ಯುವಜನತೆಗೆ ಐಎಎಸ್, ಕೆಎಎಸ್ ಈ ರೀತಿಯ ಉದ್ಯೋಗಾವಕಾಶಗಳು ಸಿಗುವಂತಾಗಲು ಎಸ್‌ಎಸ್ ಕೇರ್ ಟ್ರಸ್ಟ್ ನಿಂದ ತರಬೇತಿ ನೀಡಲಾಗುತ್ತಿದೆ.

ಯುವಕರು ಸ್ಕೂಲ್, ಕಾಲೇಜ್‌ಗೆ ಬಂದಾಗ ಅಲ್ಲಿರುವಂತಹ ವಿದ್ಯಾರ್ಥಿಗಳು ಸ್ಪೋರ್ಟ್ಸ್, ಕಲ್ಚರಲ್ ಆಕ್ಟಿವಿಟೀಸ್, ಜೊತೆಗೆ ಆನ್‌ಲೈನ್ ಕೋರ್ಸ್ಗಳಲ್ಲಿ ಭಾಗವಹಿಸಬೇಕು.
ಯಾವುದೇ ಕಂಪನಿಯ ಲಿಖಿತ ಪರೀಕ್ಷೆಗೆ ಹಾಜರಾದಾಗ ನಿಮ್ಮಲ್ಲಿ ಏನು ಲೋಪದೋಷ ಹೇಳಿದ್ರು, ಯಾವ ರೀತಿ ನೀವು ಮತ್ತೊಮ್ಮೆ ನಿಮ್ಮ ತಪ್ಪನ್ನು ಸರಿ ಮಾಡಿಕೊಳ್ಳಬಹುದು ಎನ್ನುವುದನ್ನು ಅರಿತು ಸಂದರ್ಶನ ಎದುರಿಸಬೇಕೆಂದರು.
ಉದ್ಯೋಗ ಮೇಳದಲ್ಲಿ ನೀಡಿದ ಪ್ರಮಾಣ ಪತ್ರ ಪಡೆದು ಆಯ್ಕೆಯಾದ ಕಂಪನಿಗೆ ವರದಿ ಮಾಡಿಕೊಳ್ಳಲು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಮಾತನಾಡಿ ಎಲ್ಲರಿಗೂ ಸರ್ಕಾರವೇ ಉದ್ಯೋಗ ನೀಡಲು ಆಗುವುದಿಲ್ಲ. ಜನರು ಸ್ವಯಂ ಬದುಕು ಕಟ್ಟಿಕೊಂಡು, ಉದ್ಯೋಗದಾತರಾಗಿ ಹೊರಹೊಮ್ಮಬೇಕು. ಶಿಕ್ಷಣ, ಜ್ಞಾನದ ಜೊತೆ ಕೌಶಲ್ಯತೆ ರೂಢಿಸಿಕೊಳ್ಳಬೇಕು. ಒಂದು ದೇಶದ ಪ್ರಗತಿ ಹಾಗೂ ಅಭಿವದ್ಧಿಗೆ ಯುವ ಶಕ್ತಿ ಪ್ರಮುಖವಾಗಿದ್ದು, ಉದ್ಯೋಗ ಮೇಳದಿಂದ ಯುವಕರಿಗೆ ಹೆಚ್ಚು ಲಾಭ ದೊರೆಯಲಿದೆ. ಇದರಿಂದ ಬದುಕು ಕಟ್ಟಿಕೊಂಡು ಯಶಸ್ಸು ಗಳಿಸಲು ಶ್ರಮಿಸಬೇಕು ಎಂದರು. ಯುವಕರು ದೇಶದ ಸಂಪತ್ತು. ಪ್ರತಿಯೊಬ್ಬರೂ ಯಾವುದಾದರೂ ಒಂದು ವೃತ್ತಿ ಮಾಡಬೇಕು. ಇದರಿಂದ ನಿಮ್ಮ ಭವಿಷ್ಯ ಉತ್ತಮವಾಗುತ್ತದೆ ಎಂದರು.

ಉದ್ಯೋಗದಾತ ಕಂಪನಿಗಳು ಕಾಲೇಜು ಆವರಣದಲ್ಲೇ ಮೇಳ ಆಯೋಜಿಸಿ, ಅಭ್ಯರ್ಥಿಗಳ ಸಂದರ್ಶನ ನಡೆಸಿ, ಅರ್ಹರಿಗೆ ಉದ್ಯೋಗ ನೀಡುತ್ತಿವೆ. ಇದು ವಿದ್ಯಾವಂತ ಬಡ ನಿರುದ್ಯೋಗಿಗಳಿಗೆ ಅನುಕೂಲವಾಗಿದೆ ಎಂದರು.

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಕರು ಕೇವಲ ಪದವಿ ಪಡೆದರೆ ಸಾಲದು, ತಾಂತ್ರಿಕ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಬದ್ಧತೆ, ಸಮಯಪ್ರಜ್ಞೆ ಮತ್ತು ಆತ್ಮವಿಶ್ವಾಸವಿದ್ದರೆ ಯಾವುದೇ ಉದ್ಯೋಗವನ್ನು ಪಡೆಯಬಹುದು ಎಂದು ಯುವಜನತೆಗೆ ಕರೆ ನೀಡಿದರು. ತರಬೇತಿಯು ಹೆಚ್ಚು ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡುವಲ್ಲಿ ಯಶಸ್ವಿಯಾಗಿವೆ ಎಂದು ಅವರು ತಿಳಿಸಿದರು.

ಮೋನಿಕಾ, ಚಂದನಾ, ಸಿಂಚನಾ, ಸುಶೀಲಾ, ವಿನೂತ, ಸಾನಿಯಾ, ಶರತ್, ಅಶ್ವಿನಿ ಇನ್ನೂ ಕೆಲವು ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಆದೇಶ ಪ್ರತಿಯನ್ನು ನೀಡಿದರು.

ಮೇಳದ ಪ್ರಮುಖ ಅಂಕಿ-ಅAಶಗಳು: ಭಾಗವಹಿಸಿದ ಕಂಪನಿಗಳು: 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು, 61 ವಿಶೇಷ ಚೇತನ ಅಭ್ಯರ್ಥಿಗಳು ಒಳಗೊಂಡು 1944 ಉದ್ಯೋಗಾಕಾಂಕ್ಷಿಗಳು, ಆಯ್ಕೆ ಹಂತ ತಲುಪಿದವರು: 421 ಅಭ್ಯರ್ಥಿಗಳು, ಸ್ಥಳದಲ್ಲೇ ನೇಮಕಾತಿ: 421 ಅಭ್ಯರ್ಥಿಗಳಿಗೆ ಅಂತಿಮ ನೇಮಕಾತಿ ಆದೇಶ ಪಡೆದಿರುತ್ತಾರೆ. ಹಾಗೂ 555 ಅಭ್ಯರ್ಥಿಗಳು ಶಾರ್ಟ್ ಲಿಸ್ಟ್ ಆಗಿ 2ನೇ ಹಂತದ ಸಂದರ್ಶನ ಅರ್ಹತೆ ಪಡೆದಿರುತ್ತಾರೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್‌ರಾವ್ ಪ್ರಾಸ್ತವಿಕ ನುಡಿಗಳಾನ್ನಾಡಿದರು.

ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕೌಸರ್ ರೇಷ್ಮಾ, ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಬಸವರಾಜ.ಟಿ.ಶಾಮನೂರು, ಉಪಾಧ್ಯಕ್ಷರಾದ ಮಂಜಣ್ಣ, ಪ್ರಾಂಶುಪಾಲರಾದ ಬಸವರಾಜ ತಹಶೀಲ್ದಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ, ಜಿ.ಪಂ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಫೆಬ್ರವರಿ ಮಾಹೆಗೆ ಪಡಿತರ ಹಂಚಿಕೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ-26ರ ಮಾಹೆಗೆ ಅನ್ವಯವಾಗುವಂತೆ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆ ಮಾಡಲಾಗಿದೆ.

ಅಂತ್ಯೋದಯ ಕಾರ್ಡದಾರರಿಗೆ 1 ರಿಂದ 3 ಸದಸ್ಯರಿರುವ ಕಾರ್ಡಿಗೆ 35 ಕೆ.ಜಿ ಅಕ್ಕಿ, 4 ಸದಸ್ಯರಿರುವ ಪ್ರತಿ ಕಾರ್ಡಿಗೆ 40 ಕೆ.ಜಿ ಅಕ್ಕಿ, 5 ಸದಸ್ಯರಿರುವ ಪ್ರತಿ ಕಾರ್ಡಿಗೆ 50 ಕೆ.ಜಿ ಅಕ್ಕಿ, 6 ಸದಸ್ಯರಿರುವ ಪ್ರತಿ ಕಾರ್ಡಿಗೆ 60 ಕೆ.ಜಿ ಅಕ್ಕಿ, 7 ಸದಸ್ಯರಿರುವ ಪ್ರತಿ ಕಾರ್ಡಿಗೆ 70 ಕೆ.ಜಿ ಅಕ್ಕಿ, 8 ಸದಸ್ಯರಿರುವ ಪ್ರತಿ ಕಾರ್ಡಿಗೆ 80 ಕೆ.ಜಿ ಅಕ್ಕಿ, 9 ಸದಸ್ಯರಿರುವ ಪ್ರತಿ ಕಾರ್ಡಿಗೆ 90 ಕೆ.ಜಿ, 10 ಸದಸ್ಯರಿರುವ ಪ್ರತಿ ಕಾರ್ಡಿಗೆ 100 ಕೆ.ಜಿ ಅಕ್ಕಿಯನ್ನು ನೀಡಲಾಗುವುದು.

ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ಅಂತರ್ ರಾಜ್ಯ ಅಥವಾ ಜಿಲ್ಲೆಯ ಪಡಿತರ ಚೀಟಿಗಳಿಗೆ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಪಡೆಯಲು ಅವಕಾಶವಿರುತ್ತದೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending