Connect with us

ದಿನದ ಸುದ್ದಿ

ಆಂಧ್ರಪದೇಶದ ಸಿಎಂ ಆಗಿ ಎನ್.ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ

Published

on

ಸುದ್ದಿದಿನಡೆಸ್ಕ್: ಆಂಧ್ರಪದೇಶದ ಮುಖ್ಯಮಂತ್ರಿಯಾಗಿದ ಎನ್.ಚಂದ್ರಬಾಬು ನಾಯ್ಡು ಇಂದು ಪ್ರಮಾಣ ವಚನ ಸ್ವೀಕರಿಸಿದರು.

ವಿಜಯವಾಡದಲ್ಲಿ ನಡೆದ ಟಿಡಿಪಿ, ಜನಸೇನಾ ಮತ್ತು ಬಿಜೆಪಿ ಶಾಸಕರಿದ್ದ ಸಭೆಯಲ್ಲಿ ಚಂದ್ರಬಾಬು ನಾಯ್ಡು ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರು, ಆಂಧ್ರಪ್ರದೇಶ ವಿಧಾನಸಭೆಗೆ ಎನ್‌ಡಿಎ ನಾಯಕರಾಗಿ ಚಂದ್ರಬಾಬು ಅವರ ಹೆಸರನ್ನು ಸೂಚಿಸಿದರು. ಇದಕ್ಕೆ ಎಲ್ಲ ಎನ್‌ಡಿಎ ಶಾಸಕರು ಬೆಂಬಲ ಸೂಚಿಸಿದರು.

175 ಸದಸ್ಯಬಲದ ಆಂಧ್ರಪ್ರದೇಶ ವಿಧಾನಸಭೆಯಲ್ಲಿ ಎನ್‌ಡಿಎ ಮೈತ್ರಿಕೂಟವು 164 ಸ್ಥಾನಗಳನ್ನು ಗೆಲ್ಲುವ ಮೂಲಕ ಐತಿಹಾಸಿಕ ವಿಜಯ ದಾಖಲಿಸಿತು. ಈ ಪೈಕಿ ಟಿಡಿಪಿ 135, ಜನಸೇನಾ 21 ಮತ್ತು ಬಿಜೆಪಿ 8 ಸ್ಥಾನಗಳಲ್ಲಿ ಜಯಗಳಿಸಿದೆ.

ಇದೇ ವೇಳೆ ನಿನ್ನೆ ನಡೆದ ಜನಸೇನಾ ಪಕ್ಷದ ಶಾಸಕಾಂಗ ಸಭೆಯಲ್ಲಿ ಪಕ್ಷದ ಪವನ್ ಕಲ್ಯಾಣ್ ಅವರನ್ನು ಆಂಧ್ರಪ್ರದೇಶ ವಿಧಾನಸಭೆಯ ಸಭಾನಾಯಕರನ್ನಾಗಿ ಆಯ್ಕೆ ಮಾಡಲಾಯಿತು.

ಶಾಸಕ ಎನ್.ಮನೋಹರ್, ಸಭಾ ನಾಯಕನ ಸ್ಥಾನಕ್ಕೆ ಪವನ್ ಕಲ್ಯಾಣ್ ಅವರ ಹೆಸರನ್ನು ಸೂಚಿಸಿದರು. ಇದಕ್ಕೆ ಎಲ್ಲ ಶಾಸಕರು ಅವಿರೋಧವಾಗಿ ಬೆಂಬಲ ಸೂಚಿಸಿದರು. ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಚಂದ್ರಬಾಬು ನಾಯ್ಡು, ಆಂಧ್ರಪ್ರದೇಶದಲ್ಲಿ ಮೂರು ರಾಜಧಾನಿ ಎಂಬುದು ಇಲ್ಲ. ಅಮರಾವತಿ ಏಕೈಕ ರಾಜಧಾನಿಯಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಏಪ್ರಿಲ್-ಮೇ ನಲ್ಲಿ 26 ಬಾಲ್ಯ ವಿವಾಹ ಪ್ರಕರಣಗಳು ದಾಖಲು : ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ವರ್ಷದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ 26 ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿದ್ದು ಇದರಲ್ಲಿ 25 ನ್ನು ತಡೆಗಟ್ಟಿ 2 ಪ್ರಕರಣಗಳಲ್ಲಿ ನ್ಯಾಯಾಲಯದಿಂದ ತಡೆಯಾಜ್ಞೆ ತರಲಾಗಿದೆ. ಎಲ್ಲಾದರೂ ಬಾಲ್ಯ ವಿವಾಹ ಕಂಡು ಬಂದಲ್ಲಿ, ಅಂತಹ ಪೋಷಕರ ಮೇಲೆ ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿ ಪರಿಶೀಲನಾ ಸಭೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಾಲ್ಯವಿವಾಹ ಒಂದು ಸಾಮಾಜಿಕ ಪಿಡೂಗಾಗಿದ್ದು, ಇದನ್ನು ತಡೆಗಟ್ಟಲು ವ್ಯಾಪಕವಾಗಿ ಜನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಇನ್ನಿತರೆ ಇಲಾಖೆಗಳಿಂದ ಬರುವ ಜುಲೈ ತಿಂಗಳಲ್ಲಿ ಎಲ್ಲಾ ಶಾಲಾ, ಕಾಲೇಜುಗಳಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಅಭಿಯಾನದ ರೀತಿ ಆಯೋಜಿಸಲು ಸೂಚಿಸಿದರು.

ಕಾರ್ಮಿಕರ ಮಕ್ಕಳು, ತಾಂಡಾಗಳಲ್ಲಿ ಮತ್ತು ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡಗಳ ಕುಟುಂಬಗಳಲ್ಲಿ ಹೆಚ್ಚಾಗಿ ಬಾಲ್ಯ ವಿವಾಹಗಳು ವರದಿಯಾಗುತ್ತಿರುವುದರಿಂದ ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳಿಂದ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಭಿವೃದ್ಧಿ ಅಧಿಕಾರಿಗಳು ನರೇಗಾ ಕೂಲಿ ಕಾರ್ಮಿಕರಿಗೆ ಮತ್ತು ಸಾರ್ವಜನಿಕರಿಗೆ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ತಿಳಿಸಿ, ಬಾಲ್ಯವಿವಾಹ ನಡೆಯದೆ ಇರುವ ಮತ್ತು ಹದಿಹರೆಯದ ಬಾಲಕಿಯರು, ಗರ್ಭಿಣಿ ಆಗದೆ ಇರುವಂತಹ ಪ್ರಕರಣಗಳನ್ನು ಗಮನದಲ್ಲಿ ಇಟ್ಟುಕೊಂಡು ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿರುವ ಗ್ರಾಮ ಪಂಚಾಯಿತಿಗಳಿಗೆ ಪ್ರಶಂಸನಾ ಪತ್ರ ನೀಡಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮಾ. ಕರೆಣ್ಣವರ್ ಮಾತನಾಡಿ ಮಕ್ಕಳ ಬಾಲ್ಯ ವಿವಾಹದಿಂದಾಗುವ ಪರಿಣಾಮಗಳ ಬಗ್ಗೆ ತಿಳಿಸಬೇಕು. ಬಾಲ್ಯ ವಿವಾಹ ಮಾಡುವುದರಿಂದ ಉಂಟಾಗುವ ಕಾನೂನಾತ್ಮಕ ತೊಡಕುಗಳ ಬಗ್ಗೆ ಪೋಷಕರಲ್ಲಿ ಮನವರಿಕೆ ಮಾಡಿಕೊಡಬೇಕೆಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ವಾಸಂತಿ ಉಪ್ಪಾರ್ ಮಾತನಾಡಿ ಪ್ರಸಕ್ತ ಸಾಲಿನಲ್ಲಿ 2024 ರ ಏಪ್ರಿಲ್, ಮೇ ತಿಂಗಳಲ್ಲಿ ಒಟ್ಟು 26 ದೂರುಗಳು ಬಂದಿದ್ದು, ಅವುಗಳಲ್ಲಿ 25 ಬಾಲ್ಯವಿವಾಹಗಳನ್ನು ತಡೆದು 2 ಪ್ರಕರಣಗಳಲ್ಲಿ ಕೋರ್ಟ್‍ನಿಂದ ತಡೆಯಾಜ್ಞೆ ಪಡೆಯಲಾಗಿದೆ. 1 ಪ್ರಕರಣದಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಬಾಲ ನ್ಯಾಯ ಮಂಡಳಿಯಲ್ಲಿ ಹಿಂದಿನ 54, ಹೊಸದಾಗಿ 20 ಸೇರಿ 74, ಇದರಲ್ಲಿ 11 ಖುಲಾಸೆಯಾಗಿವೆ. ಪೋಕ್ಸೊದಡಿ 10 ಪ್ರಕರಣಗಳಿದ್ದು 2 ಖುಲಾಸೆಯಾಗಿ 8 ಬಾಕಿ ಇವೆ. ಸರ್ಕಾರಿ ಬಾಲಕಿಯರ ಬಾಲ ಮಂದಿರದಲ್ಲಿ 61 ಹಾಗೂ ಬಾಲಕರ ಬಾಲ ಮಂದಿರದಲ್ಲಿ 32 ಮಕ್ಕಳಿದ್ದಾರೆ. ಇದರಲ್ಲಿ ಅನಾಥ ಮಕ್ಕಳು, ಏಕಪೋಷಕ ಮಕ್ಕಳು, ಇಬ್ಬರು ಪೋಷಕರಿರುವ ಮಕ್ಕಳು ಇದ್ದಾರೆ ಎಂದು ತಿಳಿಸಿದರು.

ಜಿ.ಪಂ. ಉಪಕಾರ್ಯದರ್ಶಿ ಕೃಷ್ಣನಾಯ್ಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9989346243

Continue Reading

ದಿನದ ಸುದ್ದಿ

ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಜಿಲ್ಲಾ ವ್ಯಾಪ್ತಿಯಲ್ಲಿ 206 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಿದ್ದು, ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಪ್ರಸ್ತುತ ಖಾಲಿ ಇರುವ 16 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆ ನೇಮಕ ಮಾಡಿಕೊಳ್ಳಲು ಜೂ.29 ರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಖಾಲಿ ಇರುವ ಹುದ್ದೆಗಳು : ರಾಜಗೊಂಡನಹಳ್ಳಿ , ಬೇತೂರು, ಕೊಂಡಜ್ಜಿ, ಹೆಬ್ಬಾಳು , ಕಬ್ಬಳ, ಉಕ್ಕಡಗಾತ್ರಿ, ಹಳೆಬಾತಿ, ಪಾಂಡೋಮಟ್ಟಿ, ಕಂದನಕೋವಿ, ಕಕ್ಕರಗೊಳ್ಳ, ಬನ್ನಿಕೋಡು, ವಡೆಯರಹತ್ತೂರು, ಓಬನ್ನನಹಳ್ಳಿ(ನರಗನಹಳ್ಳಿ), ದೊಡ್ಡಬ್ಬಿಹೆರೆ, ಅಣಜಿ, ಗುಡಾಳು ಇಲ್ಲಿ ಖಾಲಿ ಇರುತ್ತವೆ.

ಆಸಕ್ತ ಆಭ್ಯರ್ಥಿಗಳು ದಾಖಲೆಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ವೆಬ್‍ಸೈಟ್ davanagere.nic.in ಮೂಲಕ ಅರ್ಜಿ ಸಲ್ಲಿಸಿ ನಂತರ ಸ್ವೀಕೃತಿ ಪತ್ರದ ಪ್ರತಿಯೊಂದಿಗೆ ದಾಖಲೆಗಳನ್ನು ಲಗತ್ತಿಸಿ ಜಿಲ್ಲಾ ಪಂಚಾಯತ್ ಕಚೇರಿ ಆಡಳಿತ ವಿಭಾಗದ ಕೊಠಡಿ ಸಂ.25 ಗೆ ಜುಲೈ 20 ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸಂಖ್ಯೆ 08192-226655 ಗೆ ಕರೆ ಮಾಡುವುದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪುಸ್ತಕ ಬಹುಮಾನ ; ಜಾನಪದ ಕೃತಿಗಳ ಆಹ್ವಾನ

Published

on

ಸುದ್ದಿದಿನಡೆಸ್ಕ್ : ಕರ್ನಾಟಕ ಜಾನಪದ ಅಕಾಡೆಮಿಯು 2022ನೇ ಸಾಲಿನ ಜನವರಿ 01 ರಿಂದ ಡಿಸೆಂಬರ್31ರವರೆಗೆ ಹಾಗೂ 2023ನೇ ಸಾಲಿನ ಜನವರಿ 01 ರಿಂದ ಡಿಸೆಂಬರ್31ರವರೆಗೆ ಪ್ರಥಮ ಆವೃತ್ತಿಯಲ್ಲ ಮುದ್ರಣಗೊಂಡಿರುವ ಕನಿಷ್ಠ 150 ಪುಟಗಳಿಗೂ ಮೇಲ್ಪಟ್ಟಿರುವ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ-ಸಂಶೋಧನೆ ಹಾಗೂ ಜನಪದ ಸಂಕೀರ್ಣ ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುತ್ತಿದ್ದು, ಕೃತಿಗಳನ್ನು ಆಹ್ವಾನಿಸಿದೆ.

ಆಸಕ್ತ ಲೇಖಕರು/ಪ್ರಕಾಶಕರು/ಸಂಪಾದಕರು 4 ಕೃತಿಗಳನ್ನು ದ್ವಿಪ್ರತಿ ಬಿಲ್ಲಿನೊಂದಿಗೆ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ಜುಲೈ 20 ರೊಳಗಾಗಿ ತಲುಪುವಂತೆ ಖುದ್ದಾಗಿ ಅಥವಾ ಅಂಚೆ/ಕೊರಿಯರ್ ಮೂಲಕ ಕಳುಹಿಸಿಕೊಡುವಂತೆ ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿ ಕಚೇರಿಯನ್ನು ಖುದ್ದಾಗಿ ಅಥವಾ ಅಥವಾ ದೂ.ಸಂ.: 080-22215509 ನ್ನು ಸಂಪರ್ಕಿಸುವುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending