ದಿನದ ಸುದ್ದಿ
ಡಾಕ್ಟರ್ ಓದಿದವರು ಕೂಡ ಮೌಡ್ಯಾಚರಣೆ ಬಿಟ್ಟಿಲ್ಲ : ಸಿಎಂ ಸಿದ್ದರಾಮಯ್ಯ ಅಸಮಾಧಾನ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2024/06/cm_suddidina_today.jpg&description=ಡಾಕ್ಟರ್ ಓದಿದವರು ಕೂಡ ಮೌಡ್ಯಾಚರಣೆ ಬಿಟ್ಟಿಲ್ಲ : ಸಿಎಂ ಸಿದ್ದರಾಮಯ್ಯ ಅಸಮಾಧಾನ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2024/06/cm_suddidina_today.jpg&description=ಡಾಕ್ಟರ್ ಓದಿದವರು ಕೂಡ ಮೌಡ್ಯಾಚರಣೆ ಬಿಟ್ಟಿಲ್ಲ : ಸಿಎಂ ಸಿದ್ದರಾಮಯ್ಯ ಅಸಮಾಧಾನ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ,ಬೆಂಗಳೂರು:ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ. ಡಾಕ್ಟರ್ ಓದಿದವರು ಇನ್ನೂ ಮೌಡ್ಯ ಬಿಟ್ಟಿಲ್ಲ. ಓದಿದವರೇ ಇನ್ನೂ ಹಣೆಬರಹದಲ್ಲಿ, ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಬಾಲ್ಯದಿಂದಲೇ ಇಂಥಾ ಮೌಡ್ಯದಲ್ಲಿ ನಂಬಿಕೆ ಇಡಬಾರದು ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಂಯುಕ್ತಾಶ್ರಯದಲ್ಲಿ ಇಂದು ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು
ಸರ್ಕಾರಿ ವಸತಿ ಶಾಲೆಗಳ ಮಕ್ಕಳು ಈ ಬಾರಿ ಶೇ96 ರಷ್ಟು ಫಲಿತಾಂಶ ಪಡೆದಿದ್ದಾರೆ. ಮುಂದಿನ ಬಾರಿ ಶೇ100 ರಷ್ಟು ಅಂಕ ಪಡೆಯಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಪ್ರಯತ್ನಗಳು ಸಾಗಲಿ ಎಂದರು.
ದಲಿತ ಸಂಘರ್ಷ ಸಮಿತಿ ರಾಜ್ಯದಲ್ಲಿ ನಡೆಸಿದ, “ನಮಗೆ ಸರಾಯಿ ಅಂಗಡಿ ಬೇಡ, ವಸತಿ ಶಾಲೆ ಬೇಕು” ಎನ್ನುವ ಹೋರಾಟದಿಂದ ಪ್ರೇರಿತನಾಗಿ ಮೊದಲ ಬಜೆಟ್ ಮಂಡಿಸುವ ವೇಳೆ ಗ್ರಾಮೀಣ ಭಾಗದಲ್ಲಿ ಮೊರಾರ್ಜಿ ಶಾಲೆಗಳನ್ನು ಆರಂಭಿಸಿದೆ. ಅವತ್ತಿನಿಂದ ನಿರಂತರವಾಗಿ ಮೊರಾರ್ಜಿ ವಸತಿ ಶಾಲೆಗಳನ್ನು ತೆರೆಯುತ್ತಲೇ ಇದ್ದೇನೆ. ಸದ್ಯ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ 833 ವಸತಿ ಶಾಲೆಗಳಿವೆ. ಅಲ್ಪ ಸಂಖ್ಯಾತ ಇಲಾಖೆಯಡಿಯಲ್ಲಿರುವುದೂ ಸೇರಿ ಒಟ್ಟು 946 ವಸತಿ ಶಾಲೆಗಳಿವೆ.
ಕೆಲವು ಹೋಬಳಿಯಲ್ಲಿ ಒಂದಕ್ಕಿಂತ ಹೆಚ್ಚು ವಸತಿ ಶಾಲೆಗಳಿವೆ. ಆದ್ದರಿಂದ ಕೆಲವು ಹೋಬಳಿಗಳಲ್ಲಿ ಇಲ್ಲವಾಗಿತ್ತು. ಹೀಗಾಗಿ ಈ ವರ್ಷ 20 ವಸತಿ ಶಾಲೆಗಳನ್ನು ಆರಂಭಿಸಲು ಅನುಮತಿ ನೀಡಿದ್ದೇನೆ. ಹೋಬಳಿಗೊಂದು ವಸತಿ ಶಾಲೆ ನನ್ನ ಗುರಿ ಮತ್ತು ಉದ್ದೇಶವಾಗಿದೆ.
ಗ್ರಾಮೀಣ ಭಾಗದಲ್ಲಿ ಸರ್ವರಿಗೂ ಗುಣಮಟ್ಟದ ವೈಚಾರಿಕತೆ, ವೈಜ್ಞಾನಿಕತೆಯಿಂದ ಕೂಡಿದ ಶಿಕ್ಷಣ ದೊರೆಯಬೇಕು. ಎಲ್ಲಾ ಜಾತಿ, ವರ್ಗದ ಮಕ್ಕಳಿಗೆ ಓದುವ ಅವಕಾಶ ಕಲ್ಪಿಸಿದ್ದು ನಮ್ಮ ಸಂವಿಧಾನ.
ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗಿದೆ. ಇದನ್ನು ಹೋಗಲಾಡಿಸಬೇಕಾಗಿದೆ. ನನಗೆ ಶಿಕ್ಷಣ ಸಿಕ್ಕಿದ್ದರಿಂದಲೇ ಮುಖ್ಯಮಂತ್ರಿ ಆಗುವ ಅವಕಾಶ ದೊರೆಯಿತು. ಇಲ್ಲದಿದ್ದರೆ ನಾನೂ ಎಮ್ಮೆ, ಹಸು ಮೇಯಿಸುತ್ತಾ ಅಷ್ಟಕ್ಕೇ ಸೀಮಿತ ಆಗಬೇಕಾಗಿತ್ತು.
ಬುದ್ದ, ಬಸವಣ್ಣ ಎಂಟು ಶತಮಾನಗಳ ಹಿಂದೆ ಜಾತಿ ವ್ಯವಸ್ಥೆ ಅಳಿಸಲು ಶ್ರಮಿಸಿದರು. ಆದರೆ ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ ಎಂಬುದು ವಿಪರ್ಯಾಸ. ಮಕ್ಕಳಿಗೆ ಜಾತಿ, ಧರ್ಮದ ತಾರತಮ್ಯ ಕಲಿಸುವವರೇ ನಾವು. ಆದ್ದರಿಂದ ಪೋಷಕರು, ಶಿಕ್ಷಕರು ಮೊದಲು ಕಂದಾಚಾರ, ಮೌಡ್ಯದಿಂದ ಹೊರಗೆ ಬರಬೇಕು. ಆಗ ಮಕ್ಕಳೂ ವೈಜ್ಞಾನಿಕವಾಗಿ ಬೆಳೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳುತ್ತಾರೆ.
ಹುಟ್ಟುವಾಗ ಎಲ್ಲಾ ಮಕ್ಕಳೂ ವಿಶ್ವ ಮಾನವರಾಗಿ ಹುಟ್ಟಿ ಬೆಳೆಯುತ್ತಾ ಅಲ್ಪ ಮಾನವರಾಗುತ್ತಾರೆ ಎನ್ನುವ ಕುವೆಂಪು ಅವರ ಮಾತು ಇಂದಿಗೂ ಸತ್ಯವಾಗಿದೆ. ಮಕ್ಕಳು ಅಲ್ಪ ಮಾನವರಾಗದಂತೆ ಕಾಪಾಡುವ ಜವಾಬ್ದಾರಿ ಶಿಕ್ಷಕರು, ಪೋಷಕರ ಮೇಲಿದೆ.
ಬಸವಣ್ಣನವರು 12ನೇ ಶತಮಾನದಲ್ಲೇ ದಲಿತರು ಮತ್ತು ಬ್ರಾಹ್ಮಣರ ನಡುವೆ ಅಂತರ್ಜಾತಿ ವಿವಾಹ ಮಾಡಿಸಿ ಗೆದ್ದರು. ಜಾತಿ ವ್ಯವಸ್ಥೆ ಶಿಥಿಲವಾಗಬೇಕಾದರೆ ದಲಿತರು, ಹಿಂದುಳಿದವರಿಗೆ ಆರ್ಥಿಕ ಶಕ್ತಿ ಬರಬೇಕು, ಸಾಮಾಜಿಕವಾಗಿಯೂ ಶಕ್ತಿ ಬರಬೇಕು. ಈ ಬಗ್ಗೆ ಅಂಬೇಡ್ಕರ್ ಅವರು ಸಂವಿಧಾನ ಸಭೆಯಲ್ಲಿ ಆಡಿದ ಮಾತುಗಳು ಇವತ್ತಿಗೂ ಬಹಳ ಪ್ರಸ್ತುತವಾಗಿದೆ.
ಹಿಂದೆ ಮುಂದುವರೆದ ಜಾತಿಯ ಹೆಣ್ಣು ಮಕ್ಕಳಿಗೂ ಶಿಕ್ಷಣ ಕಲಿಯುವ ಅವಕಾಶ ಇರಲಿಲ್ಲ. ಎಲ್ಲಾ ಜಾತಿಯ ಹೆಣ್ಣುಮಕ್ಕಳೂ ಶಿಕ್ಷಣದ ವಿಚಾರದಲ್ಲಿ ಶೋಷಿತರಾಗಿದ್ದವರೇ. ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಮುಂದಿರುವುದು ನೋಡಿದರೆ ಖುಷಿ ಆಗುತ್ತದೆ. ಇದಕ್ಕೆ ಕಾರಣವಾದ ನಮ್ಮ ಸಂವಿಧಾನಕ್ಕೆ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಕೋಟಿ ಪ್ರಣಾಮಗಳು ಎಂದು ಭಾವುಕರಾದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅಂಧ ಮಕ್ಕಳ ವಸತಿ ಶಾಲೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆ 1 ನೇ ತರಗತಿ (6ವರ್ಷ) ಯಿಂದ 10ನೇ ತರಗತಿ (16ವರ್ಷ) ವರೆಗೆ ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ ದಾಖಲಾತಿಯು ಪ್ರಾರಂಭವಾಗಿದೆ.
ಈ ಶಾಲೆಯಲ್ಲಿ ಅಂಧ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣದ ಜೊತೆಗೆ ವಸತಿಯುತ ಶಾಲೆಯಾಗಿರುತ್ತದೆ. ಸಾರ್ವಜನಿಕ ಶಿಕ್ಷಣ ಇಲಾಖೆಯವರು ನಿಗದಿಪಡಿಸಿರುವ ಸಾಮಾನ್ಯ ಮಕ್ಕಳಿಗೆ ನೀಡುತ್ತಿರುವ ಶಿಕ್ಷಣವನ್ನೇ ಇಲ್ಲಿಯೂ ಭೋದಿಸುವುದರ ಜೊತೆಗೆ ಬೈಲ್ ಲಿಪಿಯನ್ನು ಅಳವಡಿಸಿಲಾಗಿದೆ.
ಶೈಕ್ಷಣಿಕ ಅವಧಿಯಲ್ಲಿ ಅಂಧ ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳಾದ Daily Living Skills(DLS), ಯೋಗ, ದೈಹಿಕ ಶಿಕ್ಷಣ, ಸಂಗೀತ, ಡ್ಯಾನ್ಸ್ ಚಲನ-ವಲನ ತರಬೇತಿ, ಕಂಪ್ಯೂಟರ್ ತರಬೇತಿ, ಒಳಾಂಗಣ ಹಾಗೂ ಹೊರಾಂಗಣ ಆಟಗಳು, ಬ್ರೈಲ್ ಪುಸ್ತಕಗಳು, ಶಾಲಾ ಸಮವಸ್ತ್ರ, ಕಲಿಕಾ ಉಪಕರಣಗಳು, ವೈದ್ಯಕೀಯ ತಪಾಸಣೆಗಳು, ಕರಕುಶಲ ಕಾರ್ಯ ಚಟುವಟಿಕೆಗಳನ್ನು ಕಳಿಸಲಾಗುವುದು.
ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿರುವ ದೃಷ್ಟಿ ವಿಕಲಚೇತನ ಮಕ್ಕಳು ಕಂಡು ಬಂದಲ್ಲಿ ಅವರ ಪೋಷಕರಿಗೆ ನಮ್ಮ ಶಾಲೆಯ ಬಗ್ಗೆ ಮಾಹಿತಿ ನೀಡಿ ಶೇ.40 ಕ್ಕಿಂತ ಹೆಚ್ಚಿನ ದೃಷ್ಟಿದೋಷ ಹೊಂದಿರುವ ಮಕ್ಕಳು ನಮ್ಮ ಸರ್ಕಾರಿ ಶಾಲೆಗೆ ದಾಖಲಾಗುವಂತೆ ಮಾಡಿ ವಿಕಲಚೇತನ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕರಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಾಲೆಯ ಮುಖ್ಯೋಪಾಧ್ಯಾಯರು, ಅಧೀಕ್ಷರಾದ ಗಂಗಾಧರಪ್ಪ.ಹೆಚ್.ಎನ್ ಮೊ.ಸಂ: 9984534883, 08182-250442 ಸಂಪರ್ಕಿಸಬಹುದೆAದು ಇಲಾಖೆಯ ಅಧೀಕ್ಷಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಈ ವರ್ಷದ ಡಾ|| ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ಅತ್ಯಂತ ಸರಳವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಎಪ್ರಿಲ್ 14 ರಂದು ಮಂಗಳವಾರ ಬೆಳಿಗ್ಗೆ 9:00 ಗಂಟೆಗೆ ಡಾ|| ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ನಂತರ ಬೆಳಿಗ್ಗೆ 11:00 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ “ತುಂಗಭದ್ರಾ” ಸಭಾಂಗಣದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮೆರವಣಿಗೆ ಮಾರ್ಗ
ಬೆಳಿಗ್ಗೆ 9:00 ಗಂಟೆಗೆ ಅಂಬೇಡ್ಕರ್ ವೃತ್ತದಿಂದ ಭಾವಚಿತ್ರದ ಮೆರವಣಿಗೆ ಆರಂಭವಾಗಲಿದ್ದು, ಹೈಸ್ಕೂಲ್ ಮೈದಾನ ಮಾರ್ಗವಾಗಿ ಮಹಾನಗರ ಪಾಲಿಕೆ, ಗಾಂಧಿ ವೃತ್ತ ಹಾಗೂ ಜಯದೇವ ವೃತ್ತದ ಮೂಲಕ ಸಾಗಿ ಪುನಃ ಅಂಬೇಡ್ಕರ್ ವೃತ್ತಕ್ಕೆ ತಲುಪಲಿದೆ.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ದಾವಣಗೆರೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ದಲಿತಪರ ಸಂಘಟನೆಯ ಮುಖಂಡರು, ಪ್ರಗತಿಪರ ಚಿಂತಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ
ಸುದ್ದಿದಿನ,ಚಿಕ್ಕಮಗಳೂರು:ಜಿಲ್ಲೆಯ ಎನ್ಆರ್ ಪುರದಲ್ಲಿ ಇಂದುಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ನೂತನ ಭದ್ರಾ ಸೇತುವೆಯನ್ನು ಲೋಕಾರ್ಪಣೆಗೊಳಿಸಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಿದೆ.
ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಶೃಂಗೇರಿ ಶಾಸಕರಾದ ಟಿ.ಡಿ.ರಾಜೇಗೌಡ, ಕಡೂರು ಶಾಸಕರಾದ ಆನಂದ್, ತರೀಕೆರೆ ಶಾಸಕರಾದ ಶ್ರೀನಿವಾಸ್, ಮಾಗಡಿ ಶಾಸಕ ಬಾಲಕೃಷ್ಣ ಸೇರಿ ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು, ಮುಖಂಡರು ಹಾಗೂ ಸಂಪಾದಕರಾದ ವಿಶ್ವೇಶ್ವರ ಭಟ್, ಕೆಎಸ್ಟಿಡಿಸಿ ಅಧ್ಯಕ್ಷರಾದ ಸರೋವರ್ ಶ್ರೀನಿವಾಸ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ6 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ4 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ6 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ3 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
-
ದಿನದ ಸುದ್ದಿ3 days agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
-
ದಿನದ ಸುದ್ದಿ5 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

