Connect with us

ದಿನದ ಸುದ್ದಿ

ಮಾದಕ ವಸ್ತುಗಳಿಗೆ ಕಡಿವಾಣ ; ಸ್ವಾಸ್ಥ್ಯ ಬದುಕಿಗೆ ಸೋಪಾನ

Published

on

  • ಡಾ.ಗೀತಾ ಬಸವರಾಜು, ಉಪನ್ಯಾಸಕರು, ಎ.ವಿ.ಕೆ ಮಹಿಳಾ ಕಾಲೇಜು, ದಾವಣಗೆರೆ

ಗತ್ತಿನಲ್ಲಿರುವ 84 ಕೋಟಿ ಜೀವರಾಶಿಗಳಲ್ಲಿ ಮಾನವ ಶ್ರೇಷ್ಟ ಪ್ರಾಣಿ. ಏಕೆಂದರೆ ಮಾತನಾಡುವ, ಆಲೋಚಿಸುವ, ಭಾವನೆಗಳನ್ನು ಅಭಿವ್ಯಕ್ತಿಸುವ ವಿಶೇಷವಾದ ಸಾಮರ್ಥ್ಯ ಅವನಿಗಿದೆ.

ಈ ಶಕ್ತಿಯ ಮೂಲಕ ತುಂಬಾ ಶ್ರೇಷ್ಟನಾಗಬೇಕಾದ ಮಾನವ ನಗರೀಕರಣ, ಕೈಗಾರಿಕೀಕರಣ, ಪಾಶ್ಚಾತ್ಯೀಕರಣದ ಪ್ರಭಾವದಿಂದ ಪ್ರೇರಿತನಾಗಿ ಮೂಲ ಸಂಸ್ಕೃತಿಯನ್ನು ಮರೆತು ಮೃಗೀಯ ವರ್ತನೆಗೆ ದಾಸನಾಗಿದ್ದಾನೆ. ಪ್ರಸ್ತುತ ವೈಜ್ಞಾನಿಕವಾಗಿ, ತಾಂತ್ರಿಕವಾಗಿ ಎಷ್ಟೇ ಮುಂದುವರೆದಿದ್ದರೂ, 20ನೇ ಶತಮಾನದಿಂದೀಚೆಗೆ ಜಗತ್ತನ್ನೇ ತಲ್ಲಣಗೊಳಿಸುವ ಸಾಮಾಜಿಕ ಪಿಡುಗುಗಳಾದ ಬಡತನ, ಭಿಕ್ಷಾಟನೆ, ನಿರುದ್ಯೋಗ, ವರದಕ್ಷಿಣೆ, ಅಪರಾಧ ಮಾದಕ ವಸ್ತು ವ್ಯಸನವು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿವೆ.

ಈ ಸಮಸ್ಯೆಗಳನ್ನು ಪರಿಹರಿಸಬೇಕಾಧ ಯುವಜನತೆ ಇಂತಹ ದುಶ್ಚಟಗಳ ಸೆಲೆಯಲ್ಲಿ ಸಿಕ್ಕು ತಮ್ಮ ಅಮೂಲ್ಯ ಬದುಕನ್ನು ಹಾಳು ಮಾಡಿಕೊಳ್ಳುತ್ತಿರುವುದು ಆತಂಕಕಾರಿ.
ಯುವಶಕ್ತಿಯೇ ದೇಶದ ಶಕ್ತಿಯಾಗಿದ್ದು ಭವ್ಯಭಾರತ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಬೇಕಾದ ಯುವಜನತೆ ಮಾದಕ ವಸ್ತುಗಳ ದುಶ್ಚಟಕ್ಕೆ ಒಳಗಾಗಿ ಮಾನವೀಯ ಮೌಲ್ಯಗಳನ್ನು ಕಳೆದುಕೊಂಡು ಅಂಧಕಾರದಲ್ಲಿ ಜೀವನ ನಡೆಸುತ್ತ ಚಿಕ್ಕ ವಯಸ್ಸಿನಲ್ಲಿಯೇ ಮರಣ ಹೊಂದುತ್ತಿರುವುದು ಆಘಾತದ ವಿಷಯ.

ಜೋಸೆಫ್ ಜ್ಯೂಲಿಯನ್ ರವರ ಪ್ರಕಾರ ಮಾದಕ ವಸ್ತುಗಳೆಂದರೆ ಯಾವುದೇ ರಾಸಾಯನಿಕ ವಸ್ತುವಾಗಿದ್ದು ಅದರ ಸೇವನೆಯಿಂದ ದೈಹಿಕ ಕಾರ್ಯ, ಮನಸ್ಥಿತಿ, ಗ್ರಹಣ ಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ. ಇದನ್ನು ಪದೇ ಪದೇ ಬಳಸುವುದರಿಂದ ವ್ಯಕ್ತಿ ಮಾದಕ ವಸ್ತು ವ್ಯಸನಿಯಾಗುತ್ತಾನೆ. ಮಾದಕ ವಸ್ತುವು ಮನಸ್ಸಿಗೆ ಗೊಂದಲವನ್ನು ತರುವ ಪದಾರ್ಥವಾಗಿದ್ದು ಅಮಲು ರೋಗವಾಗಿದೆ. ಭಾರತದ ನಗರ ಪ್ರದೇಶಗಳಲ್ಲಷ್ಟೇ ಅಲ್ಲದೆ ಹಳ್ಳಿ ಹಳ್ಳಿಗಳಲ್ಲಿಯೂ ಇದರ ಬಳಕೆ ಕಂಡುಬರುತ್ತದೆ. ಶ್ರೀಮಂತರು, ಮಧ್ಯಮ ವರ್ಗದವರು, ವಿದ್ಯಾವಂತರು, ಯುವಕರು, ಮಹಿಳೆಯರು ಎಂಬ ಭೇದವಿಲ್ಲದೆ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಆರೋಗ್ಯವನ್ನು ಕಳೆದುಕೊಳ್ಳುತ್ತಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯವರು ನಡೆಸಿದ ಸಮೀಕ್ಷೆಯ ಪ್ರಕಾರ ಭಾರತದ ವಿದ್ಯಾರ್ಥಿಗಳಲ್ಲಿ ಶೇ 10 ರಷ್ಟು ಒಂದಿಲ್ಲೊAದು ದುಶ್ಚಟಕ್ಕೆ ಒಳಗಾಗಿದ್ದು ಅದರಲ್ಲಿ 14 ರಿಂದ 22 ರ ವಯೋಮಾನದವರು ಹೆಚ್ಚಿದ್ದಾರೆ. ಸ್ವಾತಂತ್ಯç ಪೂರ್ವದಲ್ಲಿ ಶೇ 2 ರಷ್ಟಿದ್ದ ವ್ಯಸನಿಗಳು ಪ್ರಸ್ತುತ ಶೇ 30 ಕ್ಕಿಂತ ಹೆಚ್ಚಿದ್ದಾರೆ. ಜಗತ್ತಿನ ಸುಮಾರು 20 ಕೋಟಿಯಷ್ಟು ಇರುವ ಮಾದಕ ವ್ಯಸನಿಗಳಲ್ಲಿ ಭಾರತದಲ್ಲಿ ಶೇ 7.5 ಕೋಟಿ ವ್ಯಸನಿಗಳಿದ್ದಾರೆಂದು ಅಂದಾಜಿಸಲಾಗಿದೆ.

ನಶೆಯ ಅಲೆ ಸಾವಿನ ಬಲೆಯಾಗುತ್ತಿದ್ದರೂ ಕೂಡ ಈ ದೇಶದಲ್ಲಿ ಊಟವಿಲ್ಲದೆ ಸಾಯುವವರ ಸಂಖ್ಯೆಗಿAತಲೂ ಚಟವನ್ನು ಬೆಳೆಸಿಕೊಂಡು ಸಾಯುವವರು ಹೆಚ್ಚಾಗಿದ್ದಾರೆ.
ಮಾದಕ ವಸ್ತು ಬಳಸುವ ಆತಂಕದ ರಾಷ್ಟçಗಳಲ್ಲಿ ಭಾರತ ಪ್ರಥಮ ಸ್ಥಾನದಲ್ಲಿದೆ. ಅಮಲು ಪದಾರ್ಥಗಳಿಗೆ ಬಲಿಯಾಗುತ್ತಿರುವವರಲ್ಲಿ ವಿದ್ಯಾರ್ಥಿಗಳನ್ನೂ ಒಳಗೊಂಡAತೆ ಯುವಜನತೆ ಹೆಚ್ಚಾಗಿದ್ದು ಇದು ದೇಶದ ಭವಿಷ್ಯಕ್ಕೆ ಮಾರಕವಾಗಿದೆ.

ಡಾ.ಗೀತಾ ಬಸವರಾಜು, ಉಪನ್ಯಾಸಕರು,
ಎ.ವಿ.ಕೆ ಮಹಿಳಾ ಕಾಲೇಜು, ದಾವಣಗೆರೆ

ದುಶ್ಚಟಗಳ ಆರಂಭಕ್ಕೆ ಕಾರಣಗಳು

• ಕ್ಷಣಕಾಲ ಸುಖ ಅನಂತಕಾಲ ದು:ಖಕ್ಕೆ ಕಾರಣ ಎನ್ನುವುದು ಗೊತ್ತಿದ್ದೂ ಅಫೀಮು, ಹೆರಾಯಿನ್, ಬೀಡಿ, ಸಿಗರೇಟು, ಮದ್ಯಪಾನ ಮುಂತಾದ ದುಶ್ಚಟಗಳಿಗೆ ವಿದ್ಯಾವಂತ ಯುವಕರೇ ಬಲಿಯಾಗುತ್ತಿದ್ದಾರೆ.
• ಉಲ್ಲಾಸಕ್ಕಾಗಿ, ಫ್ಯಾಷನ್‌ಗಾಗಿ, ದುರ್ಬಲ ಮನಸ್ಸು, ಏಕಾಂಗಿತನ, ಒತ್ತಡ ನಿವಾರಣೆ ಮಾಡಿಕೊಳ್ಳಲು
• ನೋವು, ದು:ಖಕ್ಕೆ ಪರಿಹಾರವೆಂಬ ಭ್ರಮೆಗೆ ಒಳಗಾಗಿ ತನಗೆ ಅರಿವಿಲ್ಲದಂತೆ ದೊಡ್ಡ ಕಂದಕಕ್ಕೆ ಬಿದ್ದು ನರಳಾಡುವಂತ ಸಂದರ್ಭ ತಂದುಕೊಂಡು ಮಾದಕ ವಸ್ತುಗಳ ಮಾಯಾಜಾಲಕ್ಕೆ ಒಳಗಾಗುತ್ತಿದ್ದಾರೆ. ತೆರಣಿಯ ಹುಳು ತಾನು ಸುತ್ತಿದ ಬಲೆಯಲ್ಲಿ ತಾನೇ ಬಿದ್ದು ಹೊರಳಾಡುವಂತೆ ಅವರ ಪರಿಸ್ಥಿತಿಯಾಗಿದೆ.

ದುಶ್ಚಟಗಳಿಂದಾಗುವ ಪರಿಣಾಮಗಳು

• ದೇಹ ಮತ್ತು ಮನಸ್ಸಿನ ಸಮತೋಲನ ಕಳೆದುಕೊಳ್ಳುವುದು.
• ವ್ಯಕ್ತಿ ತನ್ನನ್ನು ದಹಿಸಿಕೊಳ್ಳುವುದರ ಜೊತೆಗೆ ಕುಟುಂಬದ ನೆಮ್ಮದಿಗಿ ಭಂಗ ತರುತ್ತಾನೆ.
• ಕುಟುಂಬ, ಸಮಾಜದಿಂದ ನಿಂದನೆಗೆ ಒಳಗಾಗುವನು.
• ಜ್ಞಾನೇಂದ್ರಿಯಗಳ ಮೇಲೆ ಹತೋಟಿ ಕಳೆದುಕೊಳ್ಳುವನು
• ಸಮಾಜಬಾಹಿರ ಚಟುವಟಿಕೆಗಳಾದ ಕಳ್ಳತನ, ಅತ್ಯಾಚಾರ, ಕೊಲೆ ಇಂತಹ ದುಷ್ಕೃತ್ಯಗಳನ್ನು ಮಾಡುವನು.
• ದಾಂಪತ್ಯದಲ್ಲಿ ವಿರಸವುಂಟಾಗಿ ವಿಚ್ಚೇದನಗಳಾಗುವ ಸಾಧ್ಯತೆ.
• ರಸ್ತೆ ಅಪಘಾತಗಳಲ್ಲಿ ಶೇ 1/3 ರಷ್ಟು ಮದ್ಯಪಾನ ಮತ್ತು ಮಾದಕ ವಸ್ತು ಸೇವನೆಯಿಂದಾಗುತ್ತದೆ. ಈ ಹಿನ್ನೆಲೆಯಲ್ಲಿ ಮಹಾತ್ಮ ಗಾಂಧೀಜಿಯವರು ಬೆಂಕಿ ದೇಹವನ್ನು ನಾಶ ಮಾಡಿದರೆ ಕುಡಿತ ದೇಹ ಮತ್ತು ಆತ್ಮಗಳೆರಡನ್ನೂ ನಾಶ ಮಾಡುತ್ತದೆ ಎಂದಿದ್ದಾರೆ.

ಪರಿಹಾರ ಕ್ರಮಗಳು

• ಮಾದಕ ವಸ್ತುಗಳ ಹಿಡಿತಕ್ಕೆ ಸಿಲುಕದೆ ಅದರಿಂದ ದೂರವಿರುವುದು.
• ಮಾದಕ ವಸ್ತು ಸೇವಿಸುವುದಿಲ್ಲವೆಂದು ಪ್ರತಿಜ್ಞೆ ಮಾಡುವುದು.
• ಸಹೋದ್ಯೋಗಿ, ಸ್ನೇಹಿತರಿಗೆ ತಿಳುವಳಿಕೆ ನೀಡುವುದು.
• 18 ವರ್ಷ ವಯಸ್ಸಿನವರೆಗೂ ಪೋಷಕರು ಮಕ್ಕಳ ಬಗ್ಗೆ ಗಮನ ನೀಡಿ ಮಾರ್ಗದರ್ಶನ ಮಾಡುವುದು.
• ಶಾಲೆ ಕಾಲೇಜುಗಳಲ್ಲಿ ಶಿಕ್ಷಕರು ಮಕ್ಳಳಲ್ಲಿ ಜೀವನ ಕೌಶಲಗಳನ್ನು ಬೆಳೆಸುವ ರಾಯಭಾರಿಗಳಾಗಿ ಕಾರ್ಯನಿರ್ವಹಿಸುವುದು.
• ವಿದ್ಯಾರ್ಥಿಗಳನ್ನು ಸಹಪಠ್ಯ ಚಟುವಟಿಕೆಗಳಲ್ಲಿ ತೊಡಗಿಸಿ ಆರೋಗ್ಯಕರವಾದ ಹವ್ಯಾಸಗಳನ್ನು ಬೆಳೆಸುವುದು.

ಭಾರತ ಸರ್ಕಾರವು 1951ರಲ್ಲಿ ಅಪಾಯಕಾರಿ ವಸ್ತುಗಳ ಕಾಯ್ದೆಯನ್ನು ಜಾರಿಗೆ ತಂದಿತು. ಈ ಕಾಯ್ದೆ ಮಾದಕ ವಸ್ತು ತಯಾರಿಕೆ, ಸಾಗಾಣಿಕೆ, ಮಾರಾಟ ಮತ್ತು ಬಳಕೆಯ ಮೇಲೆ ನಿರ್ಬಂಧ ಹೇರಿದೆ. 1985 ರಲ್ಲಿ ಡ್ರಗ್ಸ್ ಆಕ್ಟ್ ಜಾರಿಗೊಳಿಸಿದೆ. ಈ ಕಾಯ್ದೆ ಮಾದಕ ವಸ್ತುಗಳ ಕಳ್ಳ ವ್ಯಾಪಾರದಲ್ಲಿ ತೊಡಗಿದ ಅಪರಾಧಿಗಳಿಗೆ ಕನಿಷ್ಠ 10 ರಿಂದ 20 ವರ್ಷ ಕಠಿಣ ಶಿಕ್ಷೆ, 1 ರಿಂದ 2 ಲಕ್ಷದವರೆಗೆ ದಂಡ ಘೋಷಿಸಿದೆ.

ಡಿಸೆಂಬರ್-7 1987 ರ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾದಕ ವಸ್ತುಗಳ ದುರ್ಬಳಕೆಯನ್ನು ತಡೆಗಟ್ಟುವ ನಿಯಮಾವಳಿಗಳ ಅಂಗೀಕಾರವನ್ನು ಹಲವಾರು ರಾಷ್ಟçಗಳು ಒಪ್ಪಿಕೊಂಡು ವಿಶ್ವದಾದ್ಯಂತ ಮಾದಕ ವಸ್ತುಗಳ ದುರ್ಬಳಕೆ ನಿಯಂತ್ರಿಸುವ ತೀರ್ಮಾನವನ್ನು ಮಾಡಿದವು.

ಜೂನ್-26 ವಿಶ್ವಸಂಸ್ಥೆಯು ಮಾದಕ ವಸ್ತು ದುರ್ಬಳಕೆ ಮತ್ತು ಕಳ್ಳಸಾಗಣೆ ವಿರುದ್ಧದ ಅಂತರರಾಷ್ಟ್ರೀಯ ದಿನವನ್ನು ಆಚರಿಸಿ ಈ ಸಮಸ್ಯೆಯ ನಿಯಂತ್ರಣ ಮತ್ತು ಪರಿಹಾರದ ಕುರಿತು ನಿವಾರಣೆಯಲ್ಲಿ ಸಮುದಾಯ, ಸಮವಯಸ್ಕರು, ಕುಟುಂಬ, ಸಂಘ ಸಂಸ್ಥೆಗಳವರು ಪ್ರಮುಖ ಪಾತ್ರ ವಹಿಸಬೇಕಾಗಿದೆಎಂದು ಮನವರಿಕೆ ಮಾಡಿತು. ಮಾದಕ ವಸ್ತು ದುರ್ಬಳಕೆ ಒಂದು ಮಾನಸಿಕ, ಸಾಮಾಜಿಕ ಸಮಸ್ಯೆಯಾಗಿದ್ದು ಇಡೀ ಸಮುದಾಯವೇ ಇದರ ನಿವಾರಣೋಪಾಯದಲ್ಲಿ ಪಾಲ್ಗೊಳ್ಳಬೇಕೆಂದು ಸೂಚಿಸಿತು.

ವ್ಯಕ್ತಿ ಒಮ್ಮೆ ಈ ಚಕ್ರವ್ಯೂಹದಲ್ಲಿ ಸಿಲುಕಿಕೊಂಡರೆ ಹೊರಬರುವುದು ಕಷ್ಟಸಾಧ್ಯ. ಆರೋಗ್ಯ ಜೀವನ ನಡೆಸಲು ಮಾದಕ ವಸ್ತುಗಳನ್ನು ತ್ಯಜಿಸಿ ಸುಂದರ ಜೀವನ ನಡೆಸಿ ಎಂಬ ಸಂದೇಶ ಸಾರುತ್ತ ನಾವೆಲ್ಲರೂ ಸಂಘಟಿತರಾಗಿ ಸಮಾಜದಲ್ಲಿ ಜಾಗೃತಿ ಮೂಡಿಸಿದಾಗ ದುಶ್ಚಟಮುಕ್ತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. (ಜೂನ್-26 ರಂದು ಅಂತರರಾಷ್ಟೀಯ ಮಾದಕ ವಸ್ತುಗಳ ದುರ್ಬಳಕೆ ವಿರೋಧಿ ದಿನ ತನ್ನಿಮಿತ್ತ ಈ ಲೇಖನ – ಡಾ. ಗೀತಾ ಬಸವರಾಜು,ಉಪನ್ಯಾಸಕರು,ಎ.ವಿ.ಕೆ ಮಹಿಳಾ ಕಾಲೇಜು,ದಾವಣಗೆರೆ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಹೆಮ್ಮೆಯ ಶಿಕ್ಷಣ ತಜ್ಞೆ, ಉದ್ಯಮಿ ಹಾಗೂ Parvatha Global Ventures LLP ಸಂಸ್ಥೆಯ ಸಂಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Founder & CEO) ಡಾ. ಪ್ರೀತಿ ಅವರು ರಾಷ್ಟ್ರ ಮಟ್ಟದ ಪ್ರತಿಷ್ಠಿತ “Param Bhushan National Excellence Award – 2026” ಪ್ರಶಸ್ತಿಯನ್ನು ಪಡೆದಿದ್ದಾರೆ.

ಶಿಕ್ಷಣ, ಆಡಳಿತ, ಮಾನವ ಸಂಪನ್ಮೂಲ ಅಭಿವೃದ್ಧಿ, ಉದ್ಯಮಶೀಲತೆ ಹಾಗೂ ಸಮಾಜಸೇವೆಯಲ್ಲಿ ನೀಡಿದ ಅತ್ಯುತ್ತಮ ಕೊಡುಗೆಗಳನ್ನು ಪರಿಗಣಿಸಿ Jivran Foundation ವತಿಯಿಂದ ಈ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

ಡಾ. ಪ್ರೀತಿ ಅವರು ವಿದೇಶಿ ವೈದ್ಯಕೀಯ ಶಿಕ್ಷಣ (MBBS Abroad), ಉದ್ಯೋಗ ಮಾರ್ಗದರ್ಶನ, ಶಿಕ್ಷಣ ಸಲಹಾ ಸೇವೆಗಳು, ಕೌಶಲ್ಯಾಭಿವೃದ್ಧಿ ಹಾಗೂ ಯುವಜನರ ಸಬಲೀಕರಣ ಕ್ಷೇತ್ರಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಈ ಪ್ರಶಸ್ತಿ ಅವರ ಸಾಧನೆಗೆ ಮಾತ್ರವಲ್ಲದೆ, ಕರ್ನಾಟಕದ ಶಿಕ್ಷಣ ಮತ್ತು ಉದ್ಯಮ ಕ್ಷೇತ್ರಕ್ಕೂ ರಾಷ್ಟ್ರೀಯ ಮಟ್ಟದಲ್ಲಿ ದೊರೆತ ಗೌರವವಾಗಿದೆ.

ಈ ಸಂದರ್ಭದಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಸಮಾಜದ ಗಣ್ಯರು, ಉದ್ಯಮಿಗಳು ಹಾಗೂ ವಿದ್ಯಾರ್ಥಿಗಳು ಡಾ. ಪ್ರೀತಿ ಅವರಿಗೆ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಲೆಂದು ಶುಭ ಹಾರೈಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ

Published

on

ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು ರಾಯ್ ಅವರು ‘ಟೇಕ್ ಕೇರ್ ಭಾಲೋಬಾಸ’ ಚಿತ್ರದ ಮೂಲಕ ಬಂಗಾಳಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರು ‘ಜಾಯ್’ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ, ಇದು ಸ್ನೇಹ, ಸಂಬಂಧಗಳು ಮತ್ತು ಕಾಲಾನುಕ್ರಮದಲ್ಲಿ ವಿಕಸನಗೊಳ್ಳುವ ಭಾವನೆಗಳ ಸುತ್ತ ಕೇಂದ್ರೀಕೃತವಾಗಿರುವ ಕಥೆಯಲ್ಲಿನ ಒಬ್ಬ ಸ್ನೇಹಿತ.

ನಿರ್ದೇಶಕ ಪಿಜೂಷ್ ಸಾಹಾ ಅವರ ಮಾರ್ಗದರ್ಶನದಲ್ಲಿ ಸುಶೋಭನ್ ಅವರ ಅಭಿನಯ ಪ್ರಯಾಣವು ಪ್ರಾರಂಭವಾಯಿತು, ಅಲ್ಲಿ ಅವರು ಸುಮಾರು ಎರಡು ವರ್ಷಗಳ ಕಾಲ ಅಭಿನಯ ಕಾರ್ಯಾಗಾರಗಳಲ್ಲಿ ಭಾಗವಹಿಸಿದರು. ನಿಯಮಿತ ಆಡಿಷನ್ಗಳ ನಂತರ, 2019 ರಲ್ಲಿ ಅವರು ಆಕಾಶ್ ಆಠ್ ಚಾನೆಲ್ನ ‘ಆನಂದಮಯೀ ಮಾ’ ಧಾರಾವಾಹಿಯ ಮೂಲಕ ತಮ್ಮ ಟೆಲಿವಿಷನ್ ಚೊಚ್ಚಲ ಪ್ರವೇಶವನ್ನು ಮಾಡಿದರು, ಇದನ್ನು ಮರಣೋತ್ತರ ನಿರ್ದೇಶಕ ದೇವಿದಾಸ್ ಭಟ್ಟಾಚಾರ್ಯ ನಿರ್ದೇಶಿಸಿದ್ದರು, ಅದರಲ್ಲಿ ಅವರು ವೈಷ್ಣವ ಭಕ್ತನ ಪಾತ್ರವನ್ನು ನಿರ್ವಹಿಸಿದರು. ನಂತರ ಅವರು ಸ್ಟಾರ್ ಜಲ್ಸಾದ ‘ಮೋಹರ್’, ‘ಕೋರಾಪಾಖಿ’, ‘ತಿತ್ಲಿ’ ಮತ್ತು ‘ಖೇಲಾಘರ್’, ಜೊತೆಗೆ ಜೀ ಬಂಗ್ಲಾದ ‘ಜಮುನಾ ಢಾಕಿ’ ಧಾರಾವಾಹಿಗಳಲ್ಲಿ ಕಾಣಿಸಿಕೊಂಡರು, ಹೀಗೆ ಬಂಗಾಳಿ ಟೆಲಿವಿಷನ್ನಲ್ಲಿ ತಮ್ಮ ಕೆಲಸವನ್ನು ಮುಂದುವರೆಸಿದರು.

COVID-19 ಸಾಂಕ್ರಾಮಿಕ ಸಮಯದಲ್ಲಿ, ಅಭಿನಯದ ಕೆಲಸಗಳು ಸೀಮಿತವಾದಾಗ, ಸುಶೋಭನ್ ಮಾಡೆಲಿಂಗ್ಗೆ ತಿರುಗಿದರು. 2023 ರಿಂದ ಪ್ರಾರಂಭಿಸಿ, ಅವರು ಹಾಲಿಡೇ ಇನ್ ಹೋಟೆಲ್, ಡಾಬರ್, ಟೈಟಾನ್ ಐ+, ವೆಲಾಸಿಟಿ ಐವೇರ್, ಅಮೆಜಾನ್, ಸ್ಪೆನ್ಸರ್ಸ್, ಕ್ಯಾಂಪಸ್ ಶೂಸ್, ಬಿಗ್ ಬಜಾರ್, ಬಯೋಟಿಕ್ ಮತ್ತು ಫಿಯಾಮಾ ಡಿ ವಿಲ್ಸ್ ಸೇರಿದಂತೆ ಹಲವಾರು ಬ್ರಾಂಡ್ಗಳೊಂದಿಗೆ ಕೆಲಸ ಮಾಡಿದರು. 2025 ರಲ್ಲಿ, ಕೋಲ್ಕತ್ತಾದಲ್ಲಿ ನಡೆದ ‘ಎತ್ನಿಕ್ ಎಲಿಗನ್ಸ್ 2025’ ಸೌಂದರ್ಯ ಸ್ಪರ್ಧೆಯಲ್ಲಿ ಅವರು ಪ್ರಥಮ ರನ್ನರ್-ಅಪ್ ಆಗಿ ಆಯ್ಕೆಯಾದರು.

ಹೌರಾದಲ್ಲಿ ಜನಿಸಿ ಕೋಲ್ಕತ್ತಾದಲ್ಲಿ ಬೆಳೆದ ಸುಶೋಭನ್, ಸುಮಾರು ಮೂರೂವರೆ ವರ್ಷದ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡ ನಂತರ ತಾಯಿಯಿಂದ ಬೆಳೆಸಲ್ಪಟ್ಟರು. ಅವರು ಕೋಲ್ಕತ್ತಾದಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು 2016 ರಲ್ಲಿ ದಮ್ ದಮ್ ಮೋತಿಜೀಲ್ ರವೀಂದ್ರ ಮಹಾವಿದ್ಯಾಲಯದಿಂದ ವಾಣಿಜ್ಯದಲ್ಲಿ ಬಿ.ಕಾಮ್ ಪದವಿಯನ್ನು ಪಡೆದರು. ಅಭಿನಯವನ್ನು ಮುಂದುವರಿಸುವ ಮೊದಲು, ಅವರು ಸುಮಾರು ಎರಡು ವರ್ಷಗಳ ಕಾಲ ಪಾಶ್ಚಾತ್ಯ ನೃತ್ಯದಲ್ಲಿ ತರಬೇತಿ ಪಡೆದರು ಮತ್ತು ರಂಗ ಪ್ರದರ್ಶನಗಳಲ್ಲಿ ಭಾಗವಹಿಸಿದರು.

‘ಟೇಕ್ ಕೇರ್ ಭಾಲೋಬಾಸ’ ಸುಶೋಭನ್ ಅವರ ಮೊದಲ ಬಂಗಾಳಿ ಫೀಚರ್ ಫಿಲ್ಮ್ನಲ್ಲಿ ಕಾಣಿಸಿಕೊಳ್ಳುವುದನ್ನು ಸೂಚಿಸುತ್ತದೆ. ಈ ಚಿತ್ರದಲ್ಲಿ, ಜಾಯ್ ಅವರು ಕೆಲವೊಮ್ಮೆ ಸಂಯಮದಿಂದಿರುವ, ಆದರೆ ಉಷ್ಣತೆ, ಸ್ನೇಹಪರತೆ ಮತ್ತು ಸಹಜತೆಯನ್ನು ಪ್ರದರ್ಶಿಸುವ ಪಾತ್ರವಾಗಿ ಚಿತ್ರಿಸಲಾಗಿದೆ, ಇದು ಸಂಬಂಧಗಳು ಮತ್ತು ದೈನಂದಿನ ಭಾವನೆಗಳ ಅನ್ವೇಷಣೆಗೆ ಕೊಡುಗೆ ನೀಡುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ‌.ಕೆ.ಎ.ಓಬಳಪ್ಪ ಲೋಕಾಗೆ ದೂರು

Published

on

ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7 ಕೋಟಿ ಅನುದಾನದಲ್ಲಿನ ಅವ್ಯವಹಾರವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ ದೂರು ನೀಡಲಾಗಿದೆ ಎಂದು ವಕೀಲ ಕೆ.ಎ.ಓಬಳಪ್ಪ ಅವರು ತಿಳಿಸಿದರು.

ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಒಟ್ಟು 4 ಹಂತದಲ್ಲಿ 7 ಕೋಟಿ ರೂಪಾಯಿಗಳನ್ನು ಚಿತ್ರದುರ್ಗ ಜಿಲ್ಲೆಯ 06 ತಾಲ್ಲೂಕುಗಳಿಗೆ ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಮಾಹಿತಿ ತಿಳಿದಿದೆ ಎಂದರು.

ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 06 ತಾಲ್ಲೂಕುಗಳ ಉಪವಿಭಾಗಗಳಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೋರಿದಾಗ, ಯಾವುದೇ ಉಪವಿಭಾಗಗಳ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದ ಕಾರಣ ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ ಅರ್ಜಿ ಸಲ್ಲಿಸಿ, ‘2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಳ್ಳಕೆರೆ, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಮೊಳಕಾಲ್ಮೂರು ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ’ ದೂರು ನೀಡಲಾಗಿತ್ತು ಎಂದರು.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ನಮ್ಮ ದೂರು ಅರ್ಜಿಯನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿ, ಸೂಕ್ತ ಕ್ರಮವಹಿಸಿ ಕಛೇರಿಗೆ ವರದಿ ಸಲ್ಲಿಸಲು ಸೂಚಿಸಿರುತ್ತಾರೆ. ಅದರಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರು ವಿಚಾರಣೆ ನಡೆಸಿ, ಅರ್ಜಿದಾರರಿಗೆ ಕಡತ ವೀಕ್ಷಣೆ ಮಾಡಲು ಅವಕಾಶ ನೀಡಿ, ದಾಖಲೆ ನೀಡುವಂತೆ ಆದೇಶ ಹೊರಡಿಸಿರುತ್ತಾರೆ ಎಂದು ತಿಳಿಸಿದರು.

ಕಾರ್ಯಪಾಲಕ ಅಭಿಯಂತರರ ಆದೇಶದಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ಇವರುಗಳು ವಿವಿಧ ದಿನಾಂಕಗಳAದು ಉಪವಿಭಾಗಗಳಿಗೆ ಆಹ್ವಾನಿಸಿ, ಕಡತ ಪರಿಶೀಲನೆ ಮಾಡಿಕೊಳ್ಳುವಂತೆ ತಿಳಿಸಿದ ಕಾರಣ ಉಪವಿಭಾಗಗಳ ಕಾರ್ಯಪಾಲಕ ಅಭಿಯಂತರರುಗಳು ನಿಗಧಿಪಡಿಸಿದ ದಿನಾಂಕದಂದು ಉಪವಿಭಾಗಗಳ ಕಛೇರಿಗೆ ಭೇಟಿ ನೀಡಿದಾಗ ಕಂಡುಬಂದ ಅಂಶಗಳೆಂದರೆ;

1. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಿತ್ರದುರ್ಗ ಇಲ್ಲಿ ಒಟ್ಟು 80 ಕಾಮಗಾರಿಗಳು ನಡೆದಿದ್ದು, ಇದರಲ್ಲಿ ಕೇವಲ 23 ಕಾಮಗಾರಿಗಳ (ಅಂದಾಜು ಮೊತ್ತ ರೂ. 37.88 ಲಕ್ಷ) ಕಡತಗಳನ್ನು ತೋರಿಸಿದ್ದು, ಉಳಿದ ಕಾಮಗಾರಿಯ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಕಡತ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.

2. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಳ್ಳಕೆರೆ ಇಲ್ಲಿ ಒಟ್ಟು 80 ಕಾಮಗಾರಿಗಳ ಕಡತಗಳಲ್ಲಿ 28 ಕಾಮಗಾರಿಗಳ ಕಡತಗಳನ್ನು ತೋರಿಸಿದ್ದು, ಉಳಿದ 52 ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.

3. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಇಲ್ಲಿಗೆ ಭೇಟಿ ನೀಡಿದ ಸಮಯದಲ್ಲಿ ಈ ಕಛೇರಿಗಳಲ್ಲಿ ಯಾವುದೇ ಕಡತಗಳು ಲಭ್ಯವಿರುವುದಿಲ್ಲ. ಕಛೇರಿಯ ಸಿಬ್ಬಂದಿಗಳು ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬುದಾಗಿ ದೃಢೀಕರಣ ನೀಡಿರುತ್ತಾರೆ ಎಂದು ತಿಳಿಸಿದರು.

ಕಡತ ಪರಿಶೀಲನೆಯ ತರುವಾಯ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ದೂರು ನೀಡಿ, ನಾವು ಕೋರಿದ ಅಗತ್ಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಲಾಗಿತ್ತು. ಆದರೆ ಕಾರ್ಯಪಾಲಕ ಅಭಿಯಂತರರು ಇವರು ಮಾಹಿತಿ ಕೊಡಿಸುವಲ್ಲಿ ಮತ್ತು ತನಿಖಾ ವರದಿ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಹಾಲಿ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ಅವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿರುತ್ತದೆ ಎಂದರು.

ಈ ಎಲ್ಲಾ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 6 ಉಪವಿಭಾಗಗಳಲ್ಲಿ ಕಾರ್ಯನಿರ್ವಹಿಸಿರುವ 23 ಸಹಾಯಕ ಕಾರ್ಯಪಾಲಕ ಅಭಿಯಂತರರು, 13 ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಅಂದಿನ ಕಾರ್ಯಪಾಲಕ ಅಭಿಯಂತರರಾದ ಬಸವನಗೌಡ ಪಾಟೀಲ್ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಟಿಯಲ್ಲಿ ಹಿರಿಯ ವಕೀಲರಾದ ನಾಗರಾಜ ಪೂಜಾರ್, ಪತ್ರಕರ್ತ ಅಶೋಕ್, ಹನುಮಂತಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending