Connect with us

ದಿನದ ಸುದ್ದಿ

ದಾವಣಗೆರೆ | ನಾಳೆ ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲ

Published

on

ಸುದ್ದಿದಿನ,ದಾವಣಗೆರೆ:ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜೂನ್ 27 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯಾನಗರ ಎಫ್.14 ಫೀಡರ್ ವ್ಯಾಪ್ತಿಯ ಶಿವಕುಮಾರಸ್ವಾಮಿ ಬಡಾವಣೆ 1 ಮತ್ತು 2ನೇ ಹಂತ, ಹದಡಿ ರಸ್ತೆ, ಸೇಂಟ್‍ಜಾನ್ ಸ್ಕೂಲ್, ಐ.ಟಿ.ಐ. ಕಾಲೇಜು, ರಿಂಗ್‍ರಸ್ತೆ, ಶ್ರೀನಿವಾಸ ನಗರ, ತರಳಬಾಳು ಬಡಾವಣೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ (ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸ್ ನ ವಿದ್ಯಾರ್ಥಿಗಳಿಗೆ ಪ್ರವೇಶಕ್ಕಾಗಿ ಅರ್ಜಿಗಳನ್ನು ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ https://shp.karnataka.gov.in ನ ಮೂಲಕ ಆಹ್ವಾನಿಸಲಾಗಿದೆ.

ಆಗಸ್ಟ್ 8 ರೊಳಗಾಗಿ ರಾಜ್ಯ ವಿದ್ಯಾರ್ಥಿನಿಲಯದ ತಂತ್ರಾಂಶದ ಆನ್‍ಲೈನ್‍ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳ ವಿವರ: ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ, ಕುಂದುವಾಡ ರಸ್ತೆ, 1 & 2, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯ, ಶಿವಕುಮಾರ್ ಸ್ವಾಮಿ ಬಡಾವಣೆ, ದಾವಣಗೆರೆ 1 & 2, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕ ವಿದ್ಯಾರ್ಥಿನಿಲಯ, ಗುತ್ತೂರು ಕಾಲೋನಿ,ಹರಿಹರ, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ, ಕೆರೆಬಿಳಚಿ, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯ, ಜಗಳೂರು ಟೌನ್.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ ದೂ.ಸಂ:08192-250022 ಹಾಗೂ ತಾಲ್ಲೂಕು ವಿಸ್ತರಣಾಧಿಕಾರಿಗಳ ಕಚೇರಿ ದೂ.ಸಂ : 08192-250066 ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮಲ್ಲಿಕಾರ್ಜುನ್ ಮಠದ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಂತೆಕಲ್ಲೂರು | ಶ್ರೀ ಪೂಜ್ಯ ಮಹಾಂತ ಶಿವಾಚಾರ್ಯ 33ನೇ ಪುಣ್ಯ ಸ್ಮರಣೆ ; ಮಹಾ ರುದ್ರಭಿಷೇಕ ಅಯ್ಯಾಚಾರ ಕಾರ್ಯಕ್ರಮ

Published

on

ಸುದ್ದಿದಿನ,ಮಸ್ಕಿ:ಇಂದು ತಾಲೂಕಿನ ಸುಕ್ಷೇತ್ರ ಸಂತೆಕಲ್ಲೂರಿನಲ್ಲಿ ಪೂಜ್ಯ ಶ್ರೀ ಮಹಾಂತ ಶಿವಾಚಾರ್ಯರು ಮಹಾ ಸ್ವಾಮಿಗಳ 33ನೆಯ ಪುಣ್ಯ ಸ್ಮರಣೆ ಹಾಗೂ ಜಂಗಮ ಸಮಾಜದ ಓಟುಗಳಿಗೆ ಅಯ್ಯಾಚಾರ ಕಾರ್ಯಕ್ರಮ.

ಶ್ರೀಗಳ ಕತೃ ಗದ್ದಿಗೆ ಮಹಾ ರುದ್ರಭಿಷೇಕ ವಿಶೇಷ ಪೂಜೆ ಹಾಗೂ ವಿಶೇಷ ಕಾರ್ಯಕ್ರಮಗಳು ಹಿರೇಮಠದಲ್ಲಿ ಜರುಗುವವು ಈ ಕಾರ್ಯಕ್ರಮಕ್ಕೆ ಜಂಗಮ ಸಮಾಜದ ಬಂಧುಗಳು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಶಿಷ್ಯಂದರು ಶ್ರೀಗಳ ಪೂಜ್ಯಶ್ರೀ ಮಹಾಂತ ಶಿವಾಚಾರ್ಯರು ದೇವರು ಮಹಾಂತನ ಮಠ ಸಂತೆಕಲ್ಲೂರಿನಲ್ಲಿ ಬೆಳಗ್ಗೆ ವಿಶೇಷ ಪೂಜಾ ಕಾರ್ಯಕ್ರಮಗಳೊಂದಿಗೆ ವಿವಿಧ ಮಠಾಧೀಶರು ಪೂಜ್ಯರು ಹಾಗೂ ಜನಪ್ರತಿನಿಧಿಗಳು ಹಾಗೂ ರಾಜಕೀಯ ಮುಖಂಡರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವರೆಂದು ಶ್ರೀ ಶರಣ ಬಸವರಾಜ್ ಸ್ವಾಮಿ ಹಿರೇಮಠ ಕಾರಲ್ಕುಂಟೆ ಲಿಂಗಸೂರ್ ಅವರು ಶರಣರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನೀವು ಬನ್ನಿ ಬರುವರನ್ನು ಕರೆತನ್ನಿ ಶ್ರೀಗಳ ಕೃಪೆಗೆ ಪಾತ್ರರಾಗಬೇಕೆಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ ಜಿಲ್ಲೆಯಲ್ಲಿ 173 ಡೆಂಘಿ ಪ್ರಕರಣಗಳು

Published

on

ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ 173 ಡೆಂಘಿ ಪ್ರಕರಣಗಳು ದೃಢಪಟ್ಟಿದ್ದು, ಹತೋಟಿಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಷಣ್ಮುಖಪ್ಪ ತಿಳಿಸಿದ್ದಾರೆ.

ಕಳೆದ ತಿಂಗಳ ಅಂತ್ಯಕ್ಕೆ 74 ಇದ್ದ ಡೆಂಘಿ ಪ್ರಕರಣಗಳ ಸಂಖ್ಯೆ ಜುಲೈ ಮೊದಲ ವಾರದಲ್ಲಿ 173ಕ್ಕೆ ಏರಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಲಾರ್ವಾ ಸಮೀಕ್ಷೆಯನ್ನು ಚುರುಕುಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಆಶಾ, ಅಂಗನವಾಡಿ ಮತ್ತು ಸ್ವ ಸಹಾಯ ಗುಂಪುಗಳ ಮಹಿಳಾ ಸದಸ್ಯೆಯರನ್ನು ಲಾರ್ವಾ ಸಮೀಕ್ಷೆಗೆ ಬಳಕೆ ಮಾಡಿಕೊಳ್ಳಲಾಗಿದ್ದು, ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending