ದಿನದ ಸುದ್ದಿ
ಗ್ರಾಮಗಳಲ್ಲಿ ಕಲುಷಿತ ನೀರು ಪೂರೈಕೆಯಾಗದಂತೆ ನೋಡಿಕೋಳ್ಳಲು ಕಟ್ಟುನಿಟ್ಟಿನ ಸೂಚನೆ : ಸಿ.ಇ.ಓ ಸುರೇಶ್ ಬಿ.ಇಟ್ನಾಳ್
![](https://suddidina.com/wp-content/uploads/2024/07/Davangere_water_suddidina.jpg)
ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ಗ್ರಾಮಗಳ ವ್ಯಾಪ್ತಿಯಲ್ಲಿ ಪೂರೈಕೆಯಾಗುವ ನೀರಿನಲ್ಲಿ ಕಲುಷಿತ ನೀರು ಪೂರೈಕೆಯಾಗದಂತೆ ನೋಡಿಕೊಳ್ಳಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ನೀಡಿದರು.
ಅವರು ಸೋಮವಾರ ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಇವರ ಸಹಯೋಗದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಫೀಲ್ಡ್ ಟೆಸ್ಟ್ ಕಿಟ್ ಎಚ್2ಎಸ್ ವೈಲ್ಸ್ ಉಪಯೋಗಿಸಿ ನೀರಿನ ಪರೀಕ್ಷೆಗಳನ್ನು ಕೈಗೊಳ್ಳುವ ಬಗ್ಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾದ ತರಬೇತಿ ಕಾರ್ಯಗಾರದಲ್ಲಿ ಅಧ್ಯಕ್ಷತೆ ವಹಿಸಿ ಮತನಾಡಿದರು.
ಗ್ರಾಮೀಣ ಭಾಗದಲ್ಲಿ ಕಲುಷಿತ ನೀರಿನ ಸೇವನೆಯಿಂದ ಸಾರ್ವಜನಿಕರ ಅನಾರೋಗ್ಯಕ್ಕೆ ಕಾರಣವಾಗುತ್ತಿರುವ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿರುವುದರಿಂದ ಕುಡಿಯುವ ನೀರಿನ ಪರೀಕ್ಷೆ, ಕುಡಿಯುವ ನೀರು ಕಲುಷಿತಕ್ಕೆ ಕಾರಣಗಳು, ಇದರ ದುಷ್ಪರಿಣಾಮಗಳು ಹಾಗೂ ನೀರು ಕಲುಷಿತವಾಗದಂತೆ ನಿರ್ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ವಿವರವಾಗಿ ಪರಿಶೀಲನೆ ನಡೆಸಬೇಕಾಗಿ ಸೂಚಿಸಿದರು.
ಪೈಪ್ಲೈನ್ ನೆಟ್ವರ್ಕ್ನಲ್ಲಿ ಎಲ್ಲಿಯಾದರು ಸೋರಿಕೆಯಾಗಿದೆ ಎಂದು ಕಂಡು ಬಂದರೆ ಅದನ್ನು ಪ್ಲಗ್ ಮಾಡಿ ಸೋರಿಕೆಯಾಗದಂತೆ ಕ್ರಮವಹಿಸಬೇಕು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಜಲ ಜೀವನ್ ಮಿಷನ್ ಯೋಜನೆಯಡಿ ಪ್ರತಿ ಗ್ರಾಮದ ನೀರಿನ ಮೂಲಗಳ ಶುದ್ಧತೆಯ ಕುರಿತು ವರ್ಷದಲ್ಲಿ ಕನಿಷ್ಠ ನಾಲ್ಕು ಬಾರಿ ಕಡ್ಡಾಯವಾಗಿ ಪರೀಕ್ಷೆ ನಡೆಸಬೇಕು. ಈ ರೀತಿ ಪರೀಕ್ಷೆ ನಡೆಸಲು ಪ್ರತಿ ಗ್ರಾಮ ಪಂಚಾಯಿತಿಗೆ ಎಫ್.ಟಿ.ಕೆ ಫೀಲ್ಡ್ ಟೆಸ್ಟ್ ಕಿಟ್ ನೀಡಲಾಗಿದ್ದು ಎಲ್ಲಾ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಲ್ಯಾಬ್ಗಳಲ್ಲಿ ನೀರು ಸಂಗ್ರಹಗಾರರಿಂದ ನೀರು ಸಂಗ್ರಹಿಸಿ ನೀರಿನ ಮೂಲಗಳನ್ನು ಪರೀಕ್ಷೆ ನಡೆಸಿ ವರದಿಯನ್ನು ಗ್ರಾಮ ಪಂಚಾಯಿತಿಗಳಿಗೆ ನೀಡಲು ತಿಳಿಸಿದರು.
ಮಳೆಗಾಲ ಆರಂಭವಾಗಿರುವುದರಿಂದ ಸಾಂಕ್ರಾಮಿಕ ರೋಗ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮವಾಗಿ ಈ ಸಮೀಕ್ಷೆ ನಡೆಸಲಾಗುತ್ತಿದೆ. ಆಶಾ ಕಾರ್ಯಕರ್ತೆಯರ ಜೊತೆ ಮನೆಗೆ ತೆರಳಿ ಸಮೀಕ್ಷೆ ಸಮಯದಲ್ಲಿ ನಿಂತ ನೀರಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ತಾಣಗಳಾದ ಹೂವಿನ ಕುಂಡ, ಹಳೆ ಟೈರ್, ಹಳೆ ಎಣ್ಣೆಯ ಡ್ರಮ್ಗಳಲ್ಲಿ ಕಂಡು ಬಂದ ಲಾರ್ವ ತಾಣಗಳನ್ನು ತಕ್ಷಣ ನಾಶಕ ಟೇಮಿಪಾಸ್ ದ್ರಾವಣವನ್ನು ಹಾಕಿ ಸೊಳ್ಳೆಗಳಿಂದ ಹರಡುವ ರೋಗ ತಡೆಯಬೇಕು ಎಂದು ತಿಳಿಸಿದರು.
ಅನೇಕ ಜಿಲ್ಲೆಗಳ ಗ್ರಾಮಗಳಲ್ಲಿ ಕಲುಷಿತ ನೀರು ಸೇವನೆಯಿಂದ ಸಾರ್ವಜನಿಕರು ಅನಾರೋಗ್ಯಕ್ಕೆ ತುತ್ತಾಗುತ್ತಿರುವ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದೆ. ಈ ಹಿನ್ನಲೆಯಲ್ಲಿ ನೀರಿನ ಪರೀಕ್ಷೆ ಮಾಡಿದ ನಂತರ ನೀರು ಕಲುಷಿತವಾಗಿದ್ದಲ್ಲಿ ಮತ್ತು ಕುಡಿಯಲು, ಬಳಸಲು ಯೋಗ್ಯವಲ್ಲದ ನೀರು ಬಳಸದಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ರಮ ವಹಿಸಬೇಕಾಗಿರುತ್ತದೆ. ಒಂದು ವೇಳೆ ಕಲುಷಿತ ನೀರಿನಿಂದ ಸಮಸ್ಯೆ ಬಂದರೆ ಪಿಡಿಓ ಮತ್ತು ಸಹಾಯಕ ಇಂಜಿನಿಯರ್ ಮೇಲೆ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ನೀರಿನ ಬಾವಿ, ಕೆರೆ, ನದಿ, ನಳ ನೀರು, ಟ್ಯಾಂಕ್ಗಳ ನೀರಿನ ಗುಣಮಟ್ಟದ ಬಗ್ಗೆ ಗ್ರಾಮ ಪಂಚಾಯತಿಗಳಲ್ಲಿ ಎಫ್.ಟಿ.ಕೆ ಟೆಸ್ಟ್ ಮೂಲಕ ಪರೀಕ್ಷಿಸಿ ನಂತರವೇ ಬಳಸಲು `ಶುದ್ಧ ನೀರಿನ ಬಳಕೆ ನಿಮ್ಮ ಆದ್ಯತೆಯಾಗಲಿ` ಎಂಬ ಶೀರ್ಷಿಕೆಯ ಪೋಸ್ಟರ್ ಬಿಡುಗಡೆ ಮಾಡಲಾಯಿತು.
ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೃಷ್ಣನಾಯ್ಕ, ಜಿಲ್ಲಾ ಪಂಚಾಯತ್ ಮುಖ್ಯಯೋಜನಾಧಿಕಾರಿ ಮಲ್ಲನಾಯ್ಕ, ಕಾರ್ಯನಿರ್ವಹಣಾಧಿಕಾರಿ ಉತ್ತಮ್, ರಾಘವೇಂದ್ರ ಹೊನ್ನಳ್ಳಿ, ಗ್ರಾಮೀಣ ನೀರು ಸರಬರಾಜು ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಸೋಮ್ಲನಾಯಕ್, ಜಿಲ್ಲಾ ಯೋಜನಾ ವ್ಯವಸ್ಥಾಪಕ ಜಗದೀಶ್ ಬಿ.ಟಿ, ಪ್ರಯೋಗಾಲಯ ಸಿಬ್ಬಂದಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕಾರ್ಯಗಾರದಲ್ಲಿ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ಸಂತೆಕಲ್ಲೂರು | ಶ್ರೀ ಪೂಜ್ಯ ಮಹಾಂತ ಶಿವಾಚಾರ್ಯ 33ನೇ ಪುಣ್ಯ ಸ್ಮರಣೆ ; ಮಹಾ ರುದ್ರಭಿಷೇಕ ಅಯ್ಯಾಚಾರ ಕಾರ್ಯಕ್ರಮ
![](https://suddidina.com/wp-content/uploads/2024/07/Mahant_Rudrabhisheka_suddidina.jpg)
ಸುದ್ದಿದಿನ,ಮಸ್ಕಿ:ಇಂದು ತಾಲೂಕಿನ ಸುಕ್ಷೇತ್ರ ಸಂತೆಕಲ್ಲೂರಿನಲ್ಲಿ ಪೂಜ್ಯ ಶ್ರೀ ಮಹಾಂತ ಶಿವಾಚಾರ್ಯರು ಮಹಾ ಸ್ವಾಮಿಗಳ 33ನೆಯ ಪುಣ್ಯ ಸ್ಮರಣೆ ಹಾಗೂ ಜಂಗಮ ಸಮಾಜದ ಓಟುಗಳಿಗೆ ಅಯ್ಯಾಚಾರ ಕಾರ್ಯಕ್ರಮ.
ಶ್ರೀಗಳ ಕತೃ ಗದ್ದಿಗೆ ಮಹಾ ರುದ್ರಭಿಷೇಕ ವಿಶೇಷ ಪೂಜೆ ಹಾಗೂ ವಿಶೇಷ ಕಾರ್ಯಕ್ರಮಗಳು ಹಿರೇಮಠದಲ್ಲಿ ಜರುಗುವವು ಈ ಕಾರ್ಯಕ್ರಮಕ್ಕೆ ಜಂಗಮ ಸಮಾಜದ ಬಂಧುಗಳು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಶಿಷ್ಯಂದರು ಶ್ರೀಗಳ ಪೂಜ್ಯಶ್ರೀ ಮಹಾಂತ ಶಿವಾಚಾರ್ಯರು ದೇವರು ಮಹಾಂತನ ಮಠ ಸಂತೆಕಲ್ಲೂರಿನಲ್ಲಿ ಬೆಳಗ್ಗೆ ವಿಶೇಷ ಪೂಜಾ ಕಾರ್ಯಕ್ರಮಗಳೊಂದಿಗೆ ವಿವಿಧ ಮಠಾಧೀಶರು ಪೂಜ್ಯರು ಹಾಗೂ ಜನಪ್ರತಿನಿಧಿಗಳು ಹಾಗೂ ರಾಜಕೀಯ ಮುಖಂಡರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವರೆಂದು ಶ್ರೀ ಶರಣ ಬಸವರಾಜ್ ಸ್ವಾಮಿ ಹಿರೇಮಠ ಕಾರಲ್ಕುಂಟೆ ಲಿಂಗಸೂರ್ ಅವರು ಶರಣರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನೀವು ಬನ್ನಿ ಬರುವರನ್ನು ಕರೆತನ್ನಿ ಶ್ರೀಗಳ ಕೃಪೆಗೆ ಪಾತ್ರರಾಗಬೇಕೆಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ದಾವಣಗೆರೆ ಜಿಲ್ಲೆಯಲ್ಲಿ 173 ಡೆಂಘಿ ಪ್ರಕರಣಗಳು
![](https://suddidina.com/wp-content/uploads/2024/07/Dengue_suddidina_Davangere.jpg)
ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ 173 ಡೆಂಘಿ ಪ್ರಕರಣಗಳು ದೃಢಪಟ್ಟಿದ್ದು, ಹತೋಟಿಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಷಣ್ಮುಖಪ್ಪ ತಿಳಿಸಿದ್ದಾರೆ.
ಕಳೆದ ತಿಂಗಳ ಅಂತ್ಯಕ್ಕೆ 74 ಇದ್ದ ಡೆಂಘಿ ಪ್ರಕರಣಗಳ ಸಂಖ್ಯೆ ಜುಲೈ ಮೊದಲ ವಾರದಲ್ಲಿ 173ಕ್ಕೆ ಏರಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಲಾರ್ವಾ ಸಮೀಕ್ಷೆಯನ್ನು ಚುರುಕುಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ಆಶಾ, ಅಂಗನವಾಡಿ ಮತ್ತು ಸ್ವ ಸಹಾಯ ಗುಂಪುಗಳ ಮಹಿಳಾ ಸದಸ್ಯೆಯರನ್ನು ಲಾರ್ವಾ ಸಮೀಕ್ಷೆಗೆ ಬಳಕೆ ಮಾಡಿಕೊಳ್ಳಲಾಗಿದ್ದು, ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ಡೆಂಘಿ ನಿಯಂತ್ರಣ ; ಗ್ರಾಮ ಪಂಚಾಯತಿಗಳಿಗೆ ಜವಾಬ್ದಾರಿ ಸಚಿವ ಪ್ರಿಯಾಂಕ್ ಖರ್ಗೆ
![](https://suddidina.com/wp-content/uploads/2022/05/priyanka-kharge_suddidina.jpg)
ಸುದ್ದಿದಿನಡೆಸ್ಕ್:ರಾಜ್ಯದಲ್ಲಿ ಡೆಂಘಿ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶನ ನೀಡಿದ್ದಾರೆ.
ಕುಡಿಯುವ ನೀರಿನ ಸರಬರಾಜು ಟ್ಯಾಂಕ್ ಗಳು, ತೆರೆದ ತೊಟ್ಟಿಗಳು ಮತ್ತು ಸಾರ್ವಜನಿಕ ಶೌಚಾಲಯಗಳಲ್ಲಿ ನೀರು ಶೇಖರಣೆ ಮಾಡುವ ತೊಟ್ಟಿಗಳನ್ನು ವಾರಕ್ಕೊಮ್ಮೆ ಶುಚಿಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದ್ದಾರೆ.
ಅಂಗನವಾಡಿ, ಶಾಲಾ-ಕಾಲೇಜುಗಳು, ವಸತಿ ಶಾಲೆಗಳ ಮೇಲ್ಪಾವಣಿಗಳು ಮತ್ತು ಆವರಣಗಳಲ್ಲಿ ಮಳೆನೀರು ಸಂಗ್ರಹವಾಗದಂತೆ ಹಾಗೂ ಈಡಿಸ್ ಸೊಳ್ಳೆಗಳು ಉತ್ಪತ್ತಿಯಾಗದಂತೆ ಕ್ರಮವಹಿಸಬೇಕು.
ಸಾರ್ವಜನಿಕ ಸ್ಥಳಗಳು, ರಸ್ತೆಗಳಲ್ಲಿ ಮಳೆಯ ನೀರು ನಿಲ್ಲದಂತೆ ಗುಂಡಿ ಹಾಗೂ ತಗ್ಗುಗಳನ್ನು ಮುಚ್ಚಬೇಕು. ಎಳನೀರು ಮಾರಾಟಗಾರರು ಚಿಪ್ಪುಗಳಲ್ಲಿ ಮಳೆ ನೀರು ಶೇಖರಣೆಯಾಗುವುದನ್ನು ತಡೆಗಟ್ಟಬೇಕು ಎಂದು ಸೂಚಿಸಿದ್ದಾರೆ.
ಆರೋಗ್ಯ ಸಿಬ್ಬಂದಿ ಜೊತೆಗೆ ಗ್ರಾಮ ಪಂಚಾಯತಿಗಳ ಸದಸ್ಯರು, ಮಹಿಳಾ ಸ್ವ-ಸಹಾಯ ಗುಂಪುಗಳ ಸದಸ್ಯರು, ಅಂಗನವಾಡಿ, ಶಾಲೆ ಹಾಗೂ ಇತರ ಸ್ವಯಂ ಸೇವಾ ಸಂಸ್ಥೆಗಳನ್ನು ತೊಡಗಿಸಿಕೊಂಡು ಡೆಂಘಿ ನಿಯಂತ್ರಣಕ್ಕೆ ಆರೋಗ್ಯ ಶಿಕ್ಷಣದ ಮೂಲಕ ಅರಿವು ಮೂಡಿಸುವಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಬ್ಯಾಕ್ ಲಾಗ್ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡದಿದ್ದರೆ ಕಠಿಣ ಕ್ರಮ : ಸಚಿವ ಡಾ.ಹೆಚ್.ಸಿ.ಮಹದೇವಪ್ಪ
-
ದಿನದ ಸುದ್ದಿ7 days ago
ಪಿಹೆಚ್ಡಿ ಫಿಲೋಶಿಪ್ಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಹಿರಿಯೂರಿನಲ್ಲಿ 1 ಸಾವಿರದ 200 ಎಕರೆಯಲ್ಲಿ ಇಂಡಸ್ಟ್ರಿಯಲ್ ಕಾರಿಡಾರ್ ನಿರ್ಮಾಣ : ಸಚಿವ ಡಿ.ಸುಧಾಕರ್
-
ದಿನದ ಸುದ್ದಿ6 days ago
ಸ್ತ್ರೀಬಂಜೆತನಕ್ಕೆ ಕಾರಣಗಳು ಮತ್ತು ಲಕ್ಷಣಗಳು
-
ದಿನದ ಸುದ್ದಿ6 days ago
ಬೆಳಗಾವಿ – ಕಿತ್ತೂರು – ಧಾರವಾಡ ನಡುವೆ ಹೊಸ ರೈಲು ಮಾರ್ಗ ಆರಂಭಕ್ಕೆ ಮನವಿ
-
ದಿನದ ಸುದ್ದಿ6 days ago
ಮಧುಗಿರಿಯಲ್ಲೂ ಪಾವಗಡ ಮಾದರಿ ಸೋಲಾರ್ ಪಾರ್ಕ್
-
ದಿನದ ಸುದ್ದಿ7 days ago
ಅಂಗನವಾಡಿ ಶಿಕ್ಷಕಿಯರಿಗೆ ಪಿಯುಸಿ ಮತ್ತು ಬಿಎ ಪರೀಕ್ಷೆ ಕಟ್ಟಲು ಅರ್ಜಿ ಆಹ್ವಾನ
-
ದಿನದ ಸುದ್ದಿ7 days ago
ಚುನಾವಣೆಯ ಕರಡು ಮತದಾರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ