ದಿನದ ಸುದ್ದಿ
ಪುಸ್ತಕ ಬಹುಮಾನ | ಲೇಖಕ ; ಪ್ರಕಾಶಕರಿಂದ ಅರ್ಜಿ ಆಹ್ವಾನ
![](https://suddidina.com/wp-content/uploads/2024/07/application_invitation_book_suddidina.jpg)
ಸುದ್ದಿದಿನ,ದಾವಣಗೆರೆ:ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷಗಾನ ಕಲಾಪ್ರಕಾರಗಳಾದ (ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ, ಇತ್ಯಾದಿ ಕಲಾಪ್ರಕಾರಗಳಿಗೆ ಸಂಬಂಧಿಸಿದಂತೆ 2022 ಹಾಗೂ 2023ನೇ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ ಪ್ರಕಟಿಸಿರುವ ಪ್ರಥಮ ಆವೃತ್ತಿ ಪುಸ್ತಕ ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರಿಂದ , ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಯ್ಕೆಯಾದ ಪುಸ್ತಕಕ್ಕೆ ರೂ.25,000/-ಗಳ ಬಹುಮಾನವನ್ನು ನೀಡಲಾಗುವುದು. ಯಕ್ಷಗಾನದ ವಿವಿಧ ಆಯಾಮಗಳಾದ ಸಂಗೀತ, ಅಭಿನಯ, ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಪ್ರಸಂಗ ಪುಸ್ತಕ ಇತ್ಯಾದಿ ಪ್ರಕಾರಗಳನ್ನು ಒಳಗೊಂಡ ಪುಸ್ತಕಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ.
ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ.ರಸ್ತೆ, ಬೆಂಗಳೂರು 560 002, ಇವರಿಗೆ ಪುಸ್ತಕದ ನಾಲ್ಕು ಪ್ರತಿಗಳೊಂದಿಗೆ ಕಳುಹಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ 080-22113146 ದೂರವಾಣಿಗೆ ಸಂಪರ್ಕಿಸಲು ರಿಜಿಸ್ಟ್ರಾರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ಸಂತೆಕಲ್ಲೂರು | ಶ್ರೀ ಪೂಜ್ಯ ಮಹಾಂತ ಶಿವಾಚಾರ್ಯ 33ನೇ ಪುಣ್ಯ ಸ್ಮರಣೆ ; ಮಹಾ ರುದ್ರಭಿಷೇಕ ಅಯ್ಯಾಚಾರ ಕಾರ್ಯಕ್ರಮ
![](https://suddidina.com/wp-content/uploads/2024/07/Mahant_Rudrabhisheka_suddidina.jpg)
ಸುದ್ದಿದಿನ,ಮಸ್ಕಿ:ಇಂದು ತಾಲೂಕಿನ ಸುಕ್ಷೇತ್ರ ಸಂತೆಕಲ್ಲೂರಿನಲ್ಲಿ ಪೂಜ್ಯ ಶ್ರೀ ಮಹಾಂತ ಶಿವಾಚಾರ್ಯರು ಮಹಾ ಸ್ವಾಮಿಗಳ 33ನೆಯ ಪುಣ್ಯ ಸ್ಮರಣೆ ಹಾಗೂ ಜಂಗಮ ಸಮಾಜದ ಓಟುಗಳಿಗೆ ಅಯ್ಯಾಚಾರ ಕಾರ್ಯಕ್ರಮ.
ಶ್ರೀಗಳ ಕತೃ ಗದ್ದಿಗೆ ಮಹಾ ರುದ್ರಭಿಷೇಕ ವಿಶೇಷ ಪೂಜೆ ಹಾಗೂ ವಿಶೇಷ ಕಾರ್ಯಕ್ರಮಗಳು ಹಿರೇಮಠದಲ್ಲಿ ಜರುಗುವವು ಈ ಕಾರ್ಯಕ್ರಮಕ್ಕೆ ಜಂಗಮ ಸಮಾಜದ ಬಂಧುಗಳು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಶಿಷ್ಯಂದರು ಶ್ರೀಗಳ ಪೂಜ್ಯಶ್ರೀ ಮಹಾಂತ ಶಿವಾಚಾರ್ಯರು ದೇವರು ಮಹಾಂತನ ಮಠ ಸಂತೆಕಲ್ಲೂರಿನಲ್ಲಿ ಬೆಳಗ್ಗೆ ವಿಶೇಷ ಪೂಜಾ ಕಾರ್ಯಕ್ರಮಗಳೊಂದಿಗೆ ವಿವಿಧ ಮಠಾಧೀಶರು ಪೂಜ್ಯರು ಹಾಗೂ ಜನಪ್ರತಿನಿಧಿಗಳು ಹಾಗೂ ರಾಜಕೀಯ ಮುಖಂಡರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವರೆಂದು ಶ್ರೀ ಶರಣ ಬಸವರಾಜ್ ಸ್ವಾಮಿ ಹಿರೇಮಠ ಕಾರಲ್ಕುಂಟೆ ಲಿಂಗಸೂರ್ ಅವರು ಶರಣರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನೀವು ಬನ್ನಿ ಬರುವರನ್ನು ಕರೆತನ್ನಿ ಶ್ರೀಗಳ ಕೃಪೆಗೆ ಪಾತ್ರರಾಗಬೇಕೆಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ದಾವಣಗೆರೆ ಜಿಲ್ಲೆಯಲ್ಲಿ 173 ಡೆಂಘಿ ಪ್ರಕರಣಗಳು
![](https://suddidina.com/wp-content/uploads/2024/07/Dengue_suddidina_Davangere.jpg)
ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ 173 ಡೆಂಘಿ ಪ್ರಕರಣಗಳು ದೃಢಪಟ್ಟಿದ್ದು, ಹತೋಟಿಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಷಣ್ಮುಖಪ್ಪ ತಿಳಿಸಿದ್ದಾರೆ.
ಕಳೆದ ತಿಂಗಳ ಅಂತ್ಯಕ್ಕೆ 74 ಇದ್ದ ಡೆಂಘಿ ಪ್ರಕರಣಗಳ ಸಂಖ್ಯೆ ಜುಲೈ ಮೊದಲ ವಾರದಲ್ಲಿ 173ಕ್ಕೆ ಏರಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಲಾರ್ವಾ ಸಮೀಕ್ಷೆಯನ್ನು ಚುರುಕುಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ಆಶಾ, ಅಂಗನವಾಡಿ ಮತ್ತು ಸ್ವ ಸಹಾಯ ಗುಂಪುಗಳ ಮಹಿಳಾ ಸದಸ್ಯೆಯರನ್ನು ಲಾರ್ವಾ ಸಮೀಕ್ಷೆಗೆ ಬಳಕೆ ಮಾಡಿಕೊಳ್ಳಲಾಗಿದ್ದು, ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ಡೆಂಘಿ ನಿಯಂತ್ರಣ ; ಗ್ರಾಮ ಪಂಚಾಯತಿಗಳಿಗೆ ಜವಾಬ್ದಾರಿ ಸಚಿವ ಪ್ರಿಯಾಂಕ್ ಖರ್ಗೆ
![](https://suddidina.com/wp-content/uploads/2022/05/priyanka-kharge_suddidina.jpg)
ಸುದ್ದಿದಿನಡೆಸ್ಕ್:ರಾಜ್ಯದಲ್ಲಿ ಡೆಂಘಿ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶನ ನೀಡಿದ್ದಾರೆ.
ಕುಡಿಯುವ ನೀರಿನ ಸರಬರಾಜು ಟ್ಯಾಂಕ್ ಗಳು, ತೆರೆದ ತೊಟ್ಟಿಗಳು ಮತ್ತು ಸಾರ್ವಜನಿಕ ಶೌಚಾಲಯಗಳಲ್ಲಿ ನೀರು ಶೇಖರಣೆ ಮಾಡುವ ತೊಟ್ಟಿಗಳನ್ನು ವಾರಕ್ಕೊಮ್ಮೆ ಶುಚಿಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದ್ದಾರೆ.
ಅಂಗನವಾಡಿ, ಶಾಲಾ-ಕಾಲೇಜುಗಳು, ವಸತಿ ಶಾಲೆಗಳ ಮೇಲ್ಪಾವಣಿಗಳು ಮತ್ತು ಆವರಣಗಳಲ್ಲಿ ಮಳೆನೀರು ಸಂಗ್ರಹವಾಗದಂತೆ ಹಾಗೂ ಈಡಿಸ್ ಸೊಳ್ಳೆಗಳು ಉತ್ಪತ್ತಿಯಾಗದಂತೆ ಕ್ರಮವಹಿಸಬೇಕು.
ಸಾರ್ವಜನಿಕ ಸ್ಥಳಗಳು, ರಸ್ತೆಗಳಲ್ಲಿ ಮಳೆಯ ನೀರು ನಿಲ್ಲದಂತೆ ಗುಂಡಿ ಹಾಗೂ ತಗ್ಗುಗಳನ್ನು ಮುಚ್ಚಬೇಕು. ಎಳನೀರು ಮಾರಾಟಗಾರರು ಚಿಪ್ಪುಗಳಲ್ಲಿ ಮಳೆ ನೀರು ಶೇಖರಣೆಯಾಗುವುದನ್ನು ತಡೆಗಟ್ಟಬೇಕು ಎಂದು ಸೂಚಿಸಿದ್ದಾರೆ.
ಆರೋಗ್ಯ ಸಿಬ್ಬಂದಿ ಜೊತೆಗೆ ಗ್ರಾಮ ಪಂಚಾಯತಿಗಳ ಸದಸ್ಯರು, ಮಹಿಳಾ ಸ್ವ-ಸಹಾಯ ಗುಂಪುಗಳ ಸದಸ್ಯರು, ಅಂಗನವಾಡಿ, ಶಾಲೆ ಹಾಗೂ ಇತರ ಸ್ವಯಂ ಸೇವಾ ಸಂಸ್ಥೆಗಳನ್ನು ತೊಡಗಿಸಿಕೊಂಡು ಡೆಂಘಿ ನಿಯಂತ್ರಣಕ್ಕೆ ಆರೋಗ್ಯ ಶಿಕ್ಷಣದ ಮೂಲಕ ಅರಿವು ಮೂಡಿಸುವಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಬ್ಯಾಕ್ ಲಾಗ್ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡದಿದ್ದರೆ ಕಠಿಣ ಕ್ರಮ : ಸಚಿವ ಡಾ.ಹೆಚ್.ಸಿ.ಮಹದೇವಪ್ಪ
-
ದಿನದ ಸುದ್ದಿ7 days ago
ಪಿಹೆಚ್ಡಿ ಫಿಲೋಶಿಪ್ಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಹಿರಿಯೂರಿನಲ್ಲಿ 1 ಸಾವಿರದ 200 ಎಕರೆಯಲ್ಲಿ ಇಂಡಸ್ಟ್ರಿಯಲ್ ಕಾರಿಡಾರ್ ನಿರ್ಮಾಣ : ಸಚಿವ ಡಿ.ಸುಧಾಕರ್
-
ದಿನದ ಸುದ್ದಿ6 days ago
ಬೆಳಗಾವಿ – ಕಿತ್ತೂರು – ಧಾರವಾಡ ನಡುವೆ ಹೊಸ ರೈಲು ಮಾರ್ಗ ಆರಂಭಕ್ಕೆ ಮನವಿ
-
ದಿನದ ಸುದ್ದಿ6 days ago
ಸ್ತ್ರೀಬಂಜೆತನಕ್ಕೆ ಕಾರಣಗಳು ಮತ್ತು ಲಕ್ಷಣಗಳು
-
ದಿನದ ಸುದ್ದಿ6 days ago
ಮಧುಗಿರಿಯಲ್ಲೂ ಪಾವಗಡ ಮಾದರಿ ಸೋಲಾರ್ ಪಾರ್ಕ್
-
ದಿನದ ಸುದ್ದಿ7 days ago
ಅಂಗನವಾಡಿ ಶಿಕ್ಷಕಿಯರಿಗೆ ಪಿಯುಸಿ ಮತ್ತು ಬಿಎ ಪರೀಕ್ಷೆ ಕಟ್ಟಲು ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ