ದಿನದ ಸುದ್ದಿ
ದಾವಣಗೆರೆ | ತರಳಬಾಳು ಶಿವಸೈನ್ಯ ಸಂಘ ರಾಜ್ಯ ಘಟಕದ ಪದಾಧಿಕಾರಿಗಳ ಪದಗ್ರಹಣ
ಸುದ್ದಿದಿನ,ದಾವಣಗೆರೆ:900 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಸಾಧು ಸದ್ಧರ್ಮ ವೀರಶೈವ ಸಮಾಜಕ್ಕೆ ಕಷ್ಟ ಅಪರೇಷಗಳನ್ನು ನೀಡಿದಂತವರು ಹಾಗೂ ಭದ್ರವಾದ ನೆಲೆಯನ್ನು, ಸಂಸ್ಕಾರವನ್ನು,ಗಟ್ಟಿತನವನ್ನು ತಂದುಕೊಟ್ಟಂತವರು ಲಿಂ.ತರಳಬಾಳು ಜಗದ್ಗುರು ಶ್ರೀ ಗುರುಶಾಂತರಾಜ ಮಹಾಸ್ವಾಮಿಗಳವರು.
ಸಾಧು ಸದ್ಧರ್ಮ ಸಮಾಜ ಅಸಂಘಟಿತವಾದ ಸಂದರ್ಭದಲ್ಲಿ ಈ ಸಮಾಜವನ್ನು ಒಗ್ಗೂಡಿಸುವ, ಸಮಾಜಕ್ಕೆ ಪ್ರಜ್ಞೆ, ಪಸ್ಟ ರೂಪ ನೀಡಬೇಕು ಎನ್ನುವ ವಿಚಾರಧಾರೆಯಲ್ಲಿ ಸುಸಂಘಟಿತವಾದ ಸಮಾಜ ನಿರ್ಮಾಣ ಮಾಡಬೇಕು ಎಂಬ ನಿಟ್ಟಿನಲ್ಲಿ ಗುರುಶಾಂತರಾಜ ಮಹಾಸ್ವಾಮಿಗಳು ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ತೆರೆದು ಸಮಾಜದ ಭಕ್ತರನ್ನು ಸುಶಿಕ್ಷತರನ್ನಾಗಿ ಮಾಡುವುದಲ್ಲದೆ ಸಮಾಜವನ್ನು ಭದ್ರಗೊಳಿಸಿದರು.
ಅದೇ ರೀತಿ ಲಿಂ.ಹಿರಿಯ ತರಳಬಾಳು ಜಗದ್ಗುರು ಶ್ರೀ ಶಿವಕುಮಾರ ಮಹಾಸ್ವಾಮಿಗಳವರು ಸಾಧು ಸಮಾಜವನ್ನು ಶೈಕ್ಷಣಿಕವಾಗಿ ಆರ್ಥಿಕವಾಗಿ ಸಾಮಾಜಿಕವಾಗಿ ರಾಜಕೀಯವಾಗಿ ಸದೃಢಗೊಳಿಸಿ ಸಮಾಜ ಬಾಂಧವರು ತಲೆಯೆತ್ತಿ ನಡೆಯುವಂತೆ ಮಾಡಿದ್ದಾರೆ. ಮುಂದುವರೆದು ಇಂದಿನ 21ನೇ ಜಗದ್ಗುರುಗಳವರು ಸಮಾಜವನ್ನು ಸಮರ್ಥವಾಗಿ ಮುನ್ನಡೆಸಿಕೊಂಡು ಬರುತ್ತಿದ್ದಾರೆ.
ಹಿಂದೆ ದುಗ್ಗಾಣೆ ಮಠವಾಗಿದ್ದ ನಮ್ಮ ಮಠ ಇಂದು 2000 ಕೋಟಿಯಷ್ಟು ಆಸ್ತಿ ಹೊಂದಿದೆ ಎಂಬುದು ನಮ್ಮ ಸಮಾಜದ ಸದ್ಭಕ್ತರ ಹೃದಯ ಶ್ರೀಮಂತಿಕೆಯನ್ನು ಸಂಸ್ಕಾರವನ್ನು ಉದಾರತೆಯನ್ನು ತೋರಿಸುತ್ತದೆ.
ಇಂತಹ ಶ್ರೀಮಂತ ಸಂಸ್ಕಾರಯುತ ಉದಾರವಾದ ದೊಡ್ಡ ಸಮಾಜಕ್ಕೆ ಪೂರಕವಾದ ಅಂತಹ ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ಇಂದು ತರಳಬಾಳು ಶಿವಸೈನ್ಯ ಸಂಘ ರಾಜ್ಯ ಘಟಕ ಅಸ್ತಿತ್ವಕ್ಕೆ ಬಂದಿದ್ದು ಅದರ ದೇವ ದೇಶಗಳು ತುಂಬಾ ಉತ್ತಮವಾಗಿವೆ. ಇದು ಸಮಾಜಮುಖಿಯಾಗಿ ಕೆಲಸ ಮಾಡಬೇಕು. ಅದರಲ್ಲಿ ನಾನು ಗೌರವಾಧ್ಯಕ್ಷನಾಗಿರುವುದಕ್ಕೆ ಹೆಮ್ಮೆ ಪಡುತ್ತೇನೆ ಎಂದು ವಿಜಯನಗರ ಜಿಲ್ಲೆಯ ಮಹಾಬಲೇಶ್ವರ ಗೌಡರು ತಿಳಿಸಿದರು.
ರೈತ ಮುಖಂಡರಾದ ಹೊನ್ನೂರು ಮುನಿಯಪ್ಪನವರು ಮಾತನಾಡುತ್ತಾ ತರಳಬಾಳು ಶಿವಸೇನೆ ಸಂಘವು ಸಮಾಜದಲ್ಲಿ ತಪ್ಪು ದಾರಿಯಲ್ಲಿ ಹೋಗುವವರನ್ನು ತಿದ್ದುವಂತಹ ಸರಿದಾರಿಗೆ ತರುಹಂತಹ ಕೆಲಸ ಮಾಡಬೇಕೆಂದು ತಿಳಿಸಿದರು.
ಸಮಾರಂಭದಲ್ಲಿ ಭಾಗವಹಿಸಿದ್ದ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಿ ವಾಮದೇವಪ್ಪನವರು ಮಾತನಾಡುತ್ತಾ ತರಳಬಾಳು ಶಿವಸೈನ್ಯ ಸಂಘವು ಯಾವುದೇ ಸಮಾಜದ ಪ್ರತಿಸ್ಪರ್ಧಿಯಾಗಿ ರೂಪಗೊಂಡಿಲ್ಲ. ಬದಲಾಗಿ ಇದು ನಮ್ಮ ಸಮಾಜವನ್ನು ಮತ್ತಷ್ಟು ಸದೃಢಗೊಳಿಸುವ, ಸಮಾಜಮುಖಿಯಾಗಿ ಕೆಲಸ ಮಾಡುವ, ಉತ್ತಮೋತ್ತಮ ಕೆಲಸ ಮಾಡುವ ನಿಟ್ಟಿನಲ್ಲಿ ರೂಪಗೊಂಡಿದೆ. ನಮ್ಮ ಸಮಾಜದಲ್ಲಿ ಯಾವುದೇ ವ್ಯತ್ಯಾಸಗಳು, ನಿಲುವುಗಳು, ಭಿನ್ನಾಭಿಪ್ರಾಯಗಳು ಇದ್ದರೂ ನಮ್ಮ ಸಮಾಜಕ್ಕೆ ಪಿತಾಮಹಾರೆಂದರೆ ತರಳಬಾಳು ಜಗದ್ಗುರುಗಳೇ ಹೊರತು ಬೇರೆಯವರಲ್ಲ ಎಂಬುದನ್ನು ನಾವೆಲ್ಲ ಮನಗಾಣ ಬೇಕಾಗಿದೆ ಎಂದು ತಿಳಿಸಿದರು.
ನಮ್ಮ ಸಮಾಜ ಹಾಗೂ ಸಂಘವು ತರಳಬಾಳು ಪರಂಪರೆಯ ಗುರುಪೀಠದ ಆದೇಶದಂತೆ ಅದನ್ನು ಚಾಚು ತಪ್ಪದೇ ಪಾಲಿಸಿ ಕೊಂಡು ಬರುವ ಸಂಪ್ರದಾಯವನ್ನು ಹೊಂದಿದೆ. ಅದೇ ರೀತಿ ತರಳಬಾಳು ಶಿವಸೇನೆ ಸಂಘವು ನಡೆದುಕೊಂಡು ಹೋಗಬೇಕೆಂಬುದು ನಮ್ಮ ಆಶಯವಾಗಿದೆ. ಈ ಸಂಘವು ಹೋಬಳಿ ಮಟ್ಟದಿಂದ ಹಿಡಿದು ತಾಲೂಕು,ಜಿಲ್ಲೆ ಗಳಲ್ಲಿ ತನ್ನ ಕಾರ್ಯಕ್ಷೇತ್ರ ಮತ್ತು ವ್ಯಾಪ್ತಿಯನ್ನು ವಿಸ್ತರಿಸಿಕೊಂಡು ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ದಾವಣಗೆರೆ ಮಹಾನಗರ ಪಾಲಿಕೆಯ ಸದಸ್ಯರಾದ ಗಡಿಗುಡಾಳ್ ಮಂಜುನಾಥ್ ರವರು ಮಾತನಾಡುತ್ತ ತರಳಬಾಳು ಶಿವಸೈನ್ಯ ಸಂಘ ರಾಜ್ಯ ಘಟಕ ಇಂದು ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ. ಇದರಿಂದ ಇದರ ಜವಾಬ್ದಾರಿಯು ಕೂಡ ಹೆಚ್ಚಾಗಿದೆ.ಈ ಸಂಘಕ್ಕೆ ಯಾವುದೇ ರೀತಿಯ ಸಹಕಾರ ಬೇಕಾದರೂ ನಾನು ಮಾಡಲು ಸಿದ್ಧ. ಸಂಘವು ನಮ್ಮ ಸಮಾಜದ ಯಾರೇ ಬಂದವರು ಉತ್ತಮ ಉತ್ತಮ ಸಾಧನೆಗಳನ್ನು ಕೆಲಸಗಳನ್ನು ಮಾಡಿದಾಗ ಅವರನ್ನು ಗುರುತಿಸಿ ಬೆಂಬಲಿಸುವ ಬೆನ್ನುತಟ್ಟುವ ಕೆಲಸ ಮಾಡಬೇಕು ಎಂಬ ಅಭಿಪ್ರಾಯ ಹಂಚಿಕೊಂಡರು.
ಸಮಾರಂಭದ ಆರಂಭದಲ್ಲಿ ಶಿವಸೈನ್ಯ ಸಂಘದಲ್ಲಿ ಇದುವರೆಗೂ ಕೆಲಸ ನಿರ್ವಹಿಸಿದಂತ ಪದಾಧಿಕಾರಿಗಳಿಗೆ ಗೌರವಿಸಿ ಸನ್ಮಾನಿಸಿದರು.
ನೂತನವಾಗಿ ಅಸ್ತಿತ್ವಕ್ಕೆ ಬಂದ ತರಳಬಾಳು ಶಿವಸೈನ್ಯ ಸಂಘ ರಾಜ್ಯ ಘಟಕದ ಅಧ್ಯಕ್ಷರಾಗಿ ಶಶಿಧರ ಹೆಮ್ಮನಬೇತೂರು ಗೌರವಾಧ್ಯಕ್ಷರಾಗಿ, ವಿಜಯನಗರ ಜಿಲ್ಲೆಯ ಮಹಾಬಲೇಶ್ವರ ಗೌಡರು ಹಾಗೂ ದಾವಣಗೆರೆಯ ಶ್ರೀನಿವಾಸ್ ಶಿವಗಂಗಾ, ಉಪಾಧ್ಯಕ್ಷರಾಗಿ ಕೆ ಬಿ ಮೋಹನ್ ಸಿರಿಗೆರೆ, ಅಶ್ವಿನ್ ಕೆ ಪಿ ನಿಂಬೆಗುಂದಿ ಶಿಕಾರಿಪುರ ವೀರಣ್ಣ ಮಾಕನೂರು, ಕೆಬಿ ಶ್ರೀಧರ್ ಪಾಟೀಲ್ ಭದ್ರಾವತಿ, ಲಿಂಗರಾಜ್ ಆಗಸನಕಟ್ಟೆ ಹಾಗೂ ಕಾರ್ಯದರ್ಶಿಯಾಗಿ ಬಸವನಗೌಡರು ವಕೀಲರು ವಿಜಯನಗರ, ಕೋಶಾಧ್ಯಕ್ಷರಾಗಿ ಶಿವಕುಮಾರ್ ಡಿಎಂ ಕೋರಟಿಕೆರೆ, ಹೀಗೆ ಒಟ್ಟು 39 ಪದಾಧಿಕಾರಿಗಳು ಪದಗ್ರಹಣವನ್ನು ಸ್ವೀಕರಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಕಕ್ಕರಗೊಳ್ಳದ ಕೆ ಜಿ ಬಸವನಗೌಡರು ವಹಿಸಿದ್ದರು. ಪಿ.ಮಹಾಬಲೇಶ್ವರ ಗೌಡ್ರು, ಬಿ.ವಾಮದೇವಪ್ಪ, ಹೊನ್ನೂರು ಮುನಿಯಪ್ಪ, ರಾಮಗೊಂಡನಹಳ್ಳಿ ಜಯಣ್ಣ, ಬೇತೂರು ಸಂಗನಗೌಡ್ರು, ಮಾಗನೂರು ಉಮೇಶಗೌಡ್ರು, ಯಶವಂತಗೌಡ್ರು, ಶ್ರೀನಿವಾಸ ಶಿವಗಂಗಾ, ಕೆ.ನಾಗಪ್ಪ ಮೇಷ್ಟ್ರು, ಕಂಸಾಗರ ಪಂಚಣ್ಣ, ಬೇತೂರು ರೇವಣಸಿದ್ದಪ್ಪ ಮರಡಿ, ಶಶಿಧರ ಹೆಮ್ಮನಬೇತೂರು, ಶಿವರಾಜ್ ಕಬ್ಬೂರು, ಕಾವಲಹಳ್ಳಿ ಪ್ರಭು, ಶಿವಕುಮಾರ್ ಗಡಿಗುಡಾಳ್ ಮಂಜುನಾಥ್ ಮತ್ತಿತರರು.ಕಾರ್ಯಕ್ರಮದಲ್ಲಿ ಪ್ರಭು ಕಾವಲಹಳ್ಳಿ,ಆರ್ ಜಿ ರುದ್ರೇಶ್, ಬಿಎಸ್ ಪ್ರಕಾಶ್, ಪ್ರಕಾಶ್ ಕಬ್ಬೂರು, ಕುಮಾರ್ ಮಳ್ಳಿಕಟ್ಟೆ, ಬಸವರಾಜ್ ಮುಡೇನಹಳ್ಳಿ, ನರೇಂದ್ರ ರಾಂಪುರ, ಸತೀಶ್ ಸಿರಿಗೆರೆ ಸೇರಿದಂತೆ ಸುಮಾರು 10 ಜಿಲ್ಲೆಗಳಿಂದ 250 ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು.
ಆರಂಭದಲ್ಲಿ ಸಿ ಜಿ ಜಗದೀಶ್ ಕೂಲಂಬಿ ಸ್ವಾಗತಿಸಿದರು. ಶಿವರಾಜ್ ಕಬ್ಬೂರ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಸುದ್ದಿದಿನ. ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.
ನಡೆದಿದ್ದೇನು?
ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.
ಡೆತ್ ನೋಟ್ನಲ್ಲಿತ್ತು ಕೊನೆಯ ಆಸೆ
ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.
ತಮಿಳುನಾಡಿನಲ್ಲಿ ಅಂತ್ಯಕ್ರಿಯೆ
ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.
ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್; ಪ್ರವೇಶಾತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್ಗೆ ನೇರ ಪ್ರವೇಶಕ್ಕೆ https://khtigadag.ac.in/
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿನದ ಸುದ್ದಿ
ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.
ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.
ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ. ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ6 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ2 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ದಿನದ ಸುದ್ದಿ6 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ಕ್ರೀಡೆ6 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ಅಂಕಣ1 day agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ1 day agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

