ದಿನದ ಸುದ್ದಿ
ಹಿ.ಚಿ ಸಂಭ್ರಮದಲ್ಲಿ ನೆಲಮೂಲ ಸಂಸ್ಕೃತಿಯ ಪ್ರತಿಬಿಂಬದ ಪ್ರತಿನಿಧಿಗಳಿಗೆ ಜನಪದ ರಾಜ್ಯೋತ್ಸವ ಪ್ರಶಸ್ತಿ : ಜನಪದ ಸಿರಿಯ ಜರಗನಹಳ್ಳಿ ಕಾಂತರಾಜು
ಸುದ್ದಿದಿನ,ಬೆಂಗಳೂರು: ಕರ್ನಾಟಕದ ಬುಡಕಟ್ಟು ಜಾನಪದ ಅಧ್ಯಯನ, ಸಂಶೋಧನೆ, ಉಳಿವುಗಾಗಿ ಬದುಕನ್ನೇ ಮುಡಿಪಿಟ್ಟ ನಾಡಿನ ಖ್ಯಾತ ವಿದ್ವಾಂಸ ಪ್ರೊ. ಹಿ.ಚಿ ಬೋರಲಿಂಗಯ್ಯ ಅವರ ಹುಟ್ಟುಹಬ್ಬದ ಅಭಿನಂದನಾ ಸಮಾರಂಭ ಮತ್ತು ಬುಡಕಟ್ಟು ಕಲೆಗಳನ್ನು ಆ ವೇದಿಕೆಗೆ ಕರೆತಂದು ಪ್ರಚಾರ ಮತ್ತು ನಾಡಿನ ಮುಖ್ಯವಾಹಿನಿಗೆ ಅವರೆಲ್ಲರನ್ನೂ ಪರಿಚಯ ಮಾಡಬೇಕೆಂಬ ಉದ್ದೇಶವಿಟ್ಟುಕೊಂಡು ವಿಶೇಷವಾದ ಹಿ.ಚಿ ಹಬ್ಬ ಅಥವಾ ಹಿ.ಚಿ ಸಂಭ್ರಮ ಬುಡಕಟ್ಟು ಜಾನಪದ ಸಂಪತ್ತಿಗೆ 70 ವರ್ಷ ಎಂಬ ಧ್ಯೇಯವಿಟ್ಟುಕೊಂಡು ಮಡಿಕೇರಿ ತಾಲೂಕು ಕುಶಾಲನಗರದ ವೀರಭೂಮಿ ಜಾನಪದ ಗ್ರಾಮದಲ್ಲಿ ನವೆಂಬರ್ 09 ರಂದು ಕನ್ನಡದ ಪ್ರಖ್ಯಾತ ದೇಸಿ ವಾಹಿನಿ ಜನಪದ ಸಿರಿ ಕಾರ್ಯಕ್ರಮವನ್ನು ಆಯೋಜಿಸಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕೊಡಮಾಡತಕ್ಕಂತಹ ರಾಜ್ಯೋತ್ಸವ ಪ್ರಶಸ್ತಿ ಅದರ ಅಂಗಸಂಸ್ಥೆಯಾದಂತಹ ಕರ್ನಾಟಕ ಜಾನಪದ ಅಕಾಡೆಮಿಗೆ ಸಂಬಂಧಪಟ್ಟಂತಹ ನೈಜ ಕಲಾವಿದರಿಗೆ ಹೆಚ್ಚು ಸೇರದೇ ಇರುತ್ತಿರುವುದು ದುರಾದೃಷ್ಟಕರ ಸಂಗತಿ. ರಾಜ್ಯದಲ್ಲಿ ಇದುವರೆಗೂ ಯಾರು ಕೂಡ ಜಾನಪದ ಕಲಾವಿದರಿಗೆ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಕೊಡತಕ್ಕಂತಹ ಮನಸ್ಥಿತಿ, ಧೈರ್ಯ, ಸಾಹಸ ಮಾಡಿರಲಿಲ್ಲ.
ಜನಪದ ಸಿರಿ ಕಾಂತರಾಜು ಜನಪದ ಕಲಾವಿದರು ಅನ್ಯಾಯ, ನಿರ್ಲಕ್ಷ್ಯಕ್ಕೆ ಒಳಗಾಗುತ್ತಿರುವುದನ್ನು ಮನಗಂಡು ಈ ರೀತಿ ಮುಂಚೂಣಿಯಾಗಿ ಕಲಾವಿದರನ್ನು ಮುನ್ನೆಲೆಗೆ ತರಬೇಕೆಂದು ಸಿಕ್ಕ ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಕಲಾವಿದರಿಗೆ ಅನುಕೂಲವಾಗುವ ಕೆಲಸವನ್ನು ಮಾಡುತ್ತಿದ್ದಾರೆ. ಅದರಲ್ಲೂ ಮೂಲ ಜನಪದ ಕಲಾವಿದರಿಗೆ ಗೌರವ ಸಲ್ಲಬೇಕೆಂಬ ಆಶಯವನ್ನಿಟ್ಟುಕೊಂಡು ಈ ವರ್ಷದಿಂದ ಕೊಡಮಾಡಲ್ಪಡುತ್ತಿರುವ ಜಾನಪದ ರಾಜ್ಯೋತ್ಸವ ಪ್ರಶಸ್ತಿಯನ್ನು ಕೊಡಲು ಮುಂದಾಗಿದ್ದಾರೆ. ಅದರಲ್ಲೂ ವಿಶೇಷವಾಗಿ ಹತ್ತು ಬುಡಕಟ್ಟು ಜನಾಂಗದ ಜನಪದ ಕಲಾತಂಡಗಳಿಗೆ ಕೊಡುತ್ತಿರುವುದು ಶ್ಲಾಘನೀಯ ಕಾರ್ಯ ಹಾಗೂ ಇನ್ನೂ ಹತ್ತು ಆಯ್ದ ಕಲಾವಿದರಿಗೆ ಪ್ರಶಸ್ತಿ ಕೊಡುತ್ತಿರುವುದು ಮಾದರಿಯ ಕೆಲಸ ಎನ್ನಬಹುದು.
“ಮೂಲ ಜಾನಪದವನ್ನು ಉಳಿಸುತ್ತಾ, ಬೆಳೆಸುತ್ತಾ ಬರುತ್ತಿರುವಂತಹ ಬುಡಕಟ್ಟು, ಅಲೆಮಾರಿ ಸಮುದಾಯಗಳ ಜಾನಪದ ಕಲಾವಿದರಿಗೆ, ತಂಡಗಳಿಗೆ ಅತಿ ಹೆಚ್ಚಿನ ಪ್ರಶಸ್ತಿಗಳು ಈ ಬಾರಿ ಲಭಿಸುತ್ತಿರುವುದು ಖುಷಿಯ ಸಂಗತಿ. “ಒಬ್ಬ ಜನಪದ ಕಲಾವಿದ, ಬರೀ ಜಾನಪದ ಕಲಾವಿದ ಅಲ್ಲ; ನಮ್ಮ ಸಂಸ್ಕೃತಿಯ ಮೂಲ ಆಶಯಗಳ ಪ್ರತಿಬಿಂಬ” ಹಾಗಾಗಿ ಈ ತರಹದ ವಿಷಯಗಳನ್ನು ಜನರಿಗೆ ಮುಟ್ಟಿಸುವ ಅವಶ್ಯಕತೆ ಹೆಚ್ಚು ಇದೆ ಎಂದು ಜನಪದರ ಗಟ್ಟಿಧ್ವನಿ ಜರಗನಹಳ್ಳಿ ಕಾಂತರಾಜು ತಿಳಿಸಿದರು.
ಜನಪದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು-2024
1. ಶ್ರೀ ಪುರುಷೋತ್ತಮ ಗೌಡ (ಹಾಲಕ್ಕಿ ಒಕ್ಕಲಿಗ ಸಮುದಾಯ)
2. ಶ್ರೀ ದೊಂಡು ಪಾಟೀಲ್ ಧನಗರ್ ಗೌಳಿ (ಗೌಳಿ ಸಮುದಾಯ)
3. ಶ್ರೀ ನಾಗರಾಜ ದುರ್ಗಯ್ಯ ಗೊಂಡ (ಗೊಂಡ ಸಮುದಾಯ
4. ಶ್ರೀಮತಿ ಶಾರದ ಕುಡಿಯ (ಕುಡಿಯ ಸಮುದಾಯ)
5. ಶ್ರೀಮತಿ ಲಿಲ್ಲಿ ಜಾಕಿ ಸಿದ್ಧಿ (ಸಿದ್ಧಿ ಸಮುದಾಯ)
6. ಶ್ರೀ ಬಸವರಾಜ್ ಸೋಲಿಗ (ಸೋಲಿಗ ಸಮುದಾಯ)
7. ಶ್ರೀ ಜೆ. ಕೆ ರಾಮು (ಜೇನು ಕುರುಬ ಸಮುದಾಯ)
8. ಶ್ರೀ ಚಂದ್ರ ನಾಯಕ್ ಕುಡುಬಿ (ಕುಡುಬಿ ಸಮುದಾಯ)
9. ಶ್ರೀ ಮಂಜುನಾಥ್ ಸಿ. ಕೆಂಗಲ್ ಹಟ್ಟಿ (ಕಾಡುಗೊಲ್ಲ ಸಮುದಾಯ)
10. ಶ್ರೀಮತಿ ಜ್ಯೋತಿ. ಎನ್ (ಬಂಜಾರ ಸಮುದಾಯ)
11. ಶ್ರೀ ಆರ್. ಮಹೇಂದ್ರ (ಜಾನಪದ ಗಾಯಕರು)
12. ಶ್ರೀ ಆರ್. ರವಿಕುಮಾರ್ (ಜಾನಪದ ಶೈಲಿಯ ಗೀತ ರಚನೆಕಾರರು)
13. ಡಾ. ಪ್ರದೀಪ್ ಕುಮಾರ್ ಎಂ (ಜಾನಪದ ಸಾಹಿತ್ಯ:ಮಹಾಕಾವ್ಯಗಳ ಅಧ್ಯಯನ)
14. ಶ್ರೀ ಏಕದಾರಿ ಕೆ.ಎಂ ರಾಮಯ್ಯ (ಕಂಚಿನ ಕಂಠದ ಜಾನಪದ ಗಾಯಕರು)
15. ಶ್ರೀ ರಾಚಯ್ಯ (ತತ್ವಪದ ಗಾಯಕರು)
16. ಶ್ರೀ ಶಂಕರ್ ದಾಸ್ ಚಂಡ್ಕಳ (ಜಾನಪದ ಕಲಾವಿದರು)
17. ಶ್ರೀ ಕೃಷ್ಣೇಗೌಡ (ಸೋಬಾನೆ ಕಲಾವಿದರು)
18. ಶ್ರೀಮತಿ ಶಾಂತಾ ಹೆಗ್ಗೋಡು (ಡೊಳ್ಳು ಕಲಾವಿದರು)
19. ಶ್ರೀಮತಿ ಬುರ್ರಕಥಾ ಕಮಲಮ್ಮ (ಬುರ್ರಕಥೆ ಕಲಾವಿದರು)
20. ಶ್ರೀ ಮಹೇಶ್ (ಕಂಸಾಳೆ ಕಲಾವಿದರು)
21. ಶ್ರೀ ಪಿ. ಸೋಮು (ಖ್ಯಾತ ಜಾನಪದ ಸಮರ ಕಲೆ ಕಲಾವಿದರು, ಮೈಸೂರು)
22. ಡಾ. ಕೆ.ಪಿ ದೇವರಾಜ್ (ಪೂಜಾ ಕುಣಿತ ಕಲಾವಿದರು)
23. ಶ್ರೀ ಕೆ. ಬಿ ಸ್ವಾಮಿ (ಪೂಜಾ ಕುಣಿತ ಕಲಾವಿದರು)
24. ಚೇತನ್ ರಾಜ್ ಓ (ರಂಗಭೂಮಿ ಮತ್ತು ಜಾನಪದ ಕಲಾವಿದ)
25. ಶ್ರೀ ಅಖಿಲೇಶ್ ಎಚ್.ಕೆ (ಪಟ ಕುಣಿತ ಕಲಾವಿದರು)
26. ಶ್ರೀ ರುದ್ರೇಶ್ವರಯ್ಯ ಎಚ್. ಬಿ (ವೀರಭದ್ರ ಕುಣಿತ ಕಲಾವಿದರು)
27. ಶ್ರೀ ಕಿರಣ್ ಗಿರ್ಗಿ (ಖ್ಯಾತ ರಂಗನಿರ್ದೇಶಕರು, ರಂಗ ನಟರು)
28. ಶ್ರೀ ಹೆಚ್. ಆರ್ ನಾಗೇಂದ್ರ (ಜಾನಪದ ಕಲೆಗಳ ಪರಿಚಾರಕರು)
29. ಶ್ರೀಮತಿ ನಾಗರತ್ನ ಎಸ್. ಹಿರೇಮಠ (ಯೋಗ ಸಾಧಕಿ, ಬೆಂಗಳೂರು)
ಮುಖ್ಯ ಅತಿಥಿಗಳಾಗಿ ಡಾ. ಎಸ್.ವಿ ಸುರೇಶ್ ಕುಲಪತಿಗಳು ಕೃಷಿ ವಿಶ್ವವಿದ್ಯಾಲಯ ಬೆಂಗಳೂರು, ಪ್ರೊ. ಟಿ.ಎಂ ಭಾಸ್ಕರ ಕುಲಪತಿಗಳು ಜಾನಪದ ವಿಶ್ವವಿದ್ಯಾಲಯ ಹಾವೇರಿ, ಪ್ರೊ. ನಾಗೇಶ್ ವಿ ಬೆಟ್ಟಕೋಟೆ ಕುಲಪತಿಗಳು ಡಾ. ಗಂಗುಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯ ಮೈಸೂರು, ಶ್ರೀ ಗೊಲ್ಲಹಳ್ಳಿ ಪ್ರಸಾದ್ ಅಧ್ಯಕ್ಷರು ಜಾನಪದ ಅಕಾಡೆಮಿ, ಡಾ. ಎ.ಆರ್ ಗೋವಿಂದಸ್ವಾಮಿ ಅಧ್ಯಕ್ಷರು ಬಂಜಾರ ಅಕಾಡೆಮಿ, ಡಾ. ಕಾಳೇಗೌಡ ನಾಗವಾರ, ಜನಾರ್ಧನ ಜನ್ನಿ, ಡಾ. ಕುರುವ ಬಸವರಾಜ್, ಪದ್ಮಶ್ರೀ ಡಾ. ರಾಣಿ ಮಾಚಯ್ಯ, ಶ್ರೀ ಎಂ. ಪ್ರಕಾಶಮೂರ್ತಿ ಕಸಾಪ ಅಧ್ಯಕ್ಷರು ಬೆಂಗಳೂರು ನಗರ, ಶ್ರೀ ಜಗದೀಶ್ ಮಲ್ನಾಡ್ ಸೇರಿದಂತೆ ಮತ್ತೀತರ ಗಣ್ಯರು ಉಪಸ್ಥಿತರು ಇರಲಿದ್ದಾರೆ ಎಂದು ಜರಗನಹಳ್ಳಿ ಕಾಂತರಾಜು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ7 days agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ6 days agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ


