Connect with us

ದಿನದ ಸುದ್ದಿ

ಹಿ.ಚಿ ಸಂಭ್ರಮದಲ್ಲಿ ನೆಲಮೂಲ ಸಂಸ್ಕೃತಿಯ ಪ್ರತಿಬಿಂಬದ ಪ್ರತಿನಿಧಿಗಳಿಗೆ ಜನಪದ ರಾಜ್ಯೋತ್ಸವ ಪ್ರಶಸ್ತಿ : ಜನಪದ ಸಿರಿಯ ಜರಗನಹಳ್ಳಿ ಕಾಂತರಾಜು

Published

on

ಸುದ್ದಿದಿನ,ಬೆಂಗಳೂರು: ಕರ್ನಾಟಕದ ಬುಡಕಟ್ಟು ಜಾನಪದ ಅಧ್ಯಯನ, ಸಂಶೋಧನೆ, ಉಳಿವುಗಾಗಿ ಬದುಕನ್ನೇ ಮುಡಿಪಿಟ್ಟ ನಾಡಿನ ಖ್ಯಾತ ವಿದ್ವಾಂಸ ಪ್ರೊ. ಹಿ.ಚಿ ಬೋರಲಿಂಗಯ್ಯ ಅವರ ಹುಟ್ಟುಹಬ್ಬದ ಅಭಿನಂದನಾ ಸಮಾರಂಭ ಮತ್ತು ಬುಡಕಟ್ಟು ಕಲೆಗಳನ್ನು ಆ ವೇದಿಕೆಗೆ ಕರೆತಂದು ಪ್ರಚಾರ ಮತ್ತು ನಾಡಿನ ಮುಖ್ಯವಾಹಿನಿಗೆ ಅವರೆಲ್ಲರನ್ನೂ ಪರಿಚಯ ಮಾಡಬೇಕೆಂಬ ಉದ್ದೇಶವಿಟ್ಟುಕೊಂಡು ವಿಶೇಷವಾದ ಹಿ.ಚಿ ಹಬ್ಬ ಅಥವಾ ಹಿ.ಚಿ ಸಂಭ್ರಮ ಬುಡಕಟ್ಟು ಜಾನಪದ ಸಂಪತ್ತಿಗೆ 70 ವರ್ಷ ಎಂಬ ಧ್ಯೇಯವಿಟ್ಟುಕೊಂಡು ಮಡಿಕೇರಿ ತಾಲೂಕು ಕುಶಾಲನಗರದ ವೀರಭೂಮಿ ಜಾನಪದ ಗ್ರಾಮದಲ್ಲಿ ನವೆಂಬರ್ 09 ರಂದು ಕನ್ನಡದ ಪ್ರಖ್ಯಾತ ದೇಸಿ ವಾಹಿನಿ ಜನಪದ ಸಿರಿ ಕಾರ್ಯಕ್ರಮವನ್ನು ಆಯೋಜಿಸಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕೊಡಮಾಡತಕ್ಕಂತಹ ರಾಜ್ಯೋತ್ಸವ ಪ್ರಶಸ್ತಿ ಅದರ ಅಂಗಸಂಸ್ಥೆಯಾದಂತಹ ಕರ್ನಾಟಕ ಜಾನಪದ ಅಕಾಡೆಮಿಗೆ ಸಂಬಂಧಪಟ್ಟಂತಹ ನೈಜ ಕಲಾವಿದರಿಗೆ ಹೆಚ್ಚು ಸೇರದೇ ಇರುತ್ತಿರುವುದು ದುರಾದೃಷ್ಟಕರ ಸಂಗತಿ. ರಾಜ್ಯದಲ್ಲಿ ಇದುವರೆಗೂ ಯಾರು ಕೂಡ ಜಾನಪದ ಕಲಾವಿದರಿಗೆ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಕೊಡತಕ್ಕಂತಹ ಮನಸ್ಥಿತಿ, ಧೈರ್ಯ, ಸಾಹಸ ಮಾಡಿರಲಿಲ್ಲ.

ಜನಪದ ಸಿರಿ ಕಾಂತರಾಜು ಜನಪದ ಕಲಾವಿದರು ಅನ್ಯಾಯ, ನಿರ್ಲಕ್ಷ್ಯಕ್ಕೆ ಒಳಗಾಗುತ್ತಿರುವುದನ್ನು ಮನಗಂಡು ಈ ರೀತಿ ಮುಂಚೂಣಿಯಾಗಿ ಕಲಾವಿದರನ್ನು ಮುನ್ನೆಲೆಗೆ ತರಬೇಕೆಂದು ಸಿಕ್ಕ ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಕಲಾವಿದರಿಗೆ ಅನುಕೂಲವಾಗುವ ಕೆಲಸವನ್ನು ಮಾಡುತ್ತಿದ್ದಾರೆ. ಅದರಲ್ಲೂ ಮೂಲ ಜನಪದ ಕಲಾವಿದರಿಗೆ ಗೌರವ ಸಲ್ಲಬೇಕೆಂಬ ಆಶಯವನ್ನಿಟ್ಟುಕೊಂಡು ಈ ವರ್ಷದಿಂದ ಕೊಡಮಾಡಲ್ಪಡುತ್ತಿರುವ ಜಾನಪದ ರಾಜ್ಯೋತ್ಸವ ಪ್ರಶಸ್ತಿಯನ್ನು ಕೊಡಲು ಮುಂದಾಗಿದ್ದಾರೆ. ಅದರಲ್ಲೂ ವಿಶೇಷವಾಗಿ ಹತ್ತು ಬುಡಕಟ್ಟು ಜನಾಂಗದ ಜನಪದ ಕಲಾತಂಡಗಳಿಗೆ ಕೊಡುತ್ತಿರುವುದು ಶ್ಲಾಘನೀಯ ಕಾರ್ಯ ಹಾಗೂ ಇನ್ನೂ ಹತ್ತು ಆಯ್ದ ಕಲಾವಿದರಿಗೆ ಪ್ರಶಸ್ತಿ ಕೊಡುತ್ತಿರುವುದು ಮಾದರಿಯ ಕೆಲಸ ಎನ್ನಬಹುದು.

“ಮೂಲ ಜಾನಪದವನ್ನು ಉಳಿಸುತ್ತಾ, ಬೆಳೆಸುತ್ತಾ ಬರುತ್ತಿರುವಂತಹ ಬುಡಕಟ್ಟು, ಅಲೆಮಾರಿ ಸಮುದಾಯಗಳ ಜಾನಪದ ಕಲಾವಿದರಿಗೆ, ತಂಡಗಳಿಗೆ ಅತಿ ಹೆಚ್ಚಿನ ಪ್ರಶಸ್ತಿಗಳು ಈ ಬಾರಿ ಲಭಿಸುತ್ತಿರುವುದು ಖುಷಿಯ ಸಂಗತಿ. “ಒಬ್ಬ ಜನಪದ ಕಲಾವಿದ, ಬರೀ ಜಾನಪದ ಕಲಾವಿದ ಅಲ್ಲ; ನಮ್ಮ ಸಂಸ್ಕೃತಿಯ ಮೂಲ ಆಶಯಗಳ ಪ್ರತಿಬಿಂಬ” ಹಾಗಾಗಿ ಈ ತರಹದ ವಿಷಯಗಳನ್ನು ಜನರಿಗೆ ಮುಟ್ಟಿಸುವ ಅವಶ್ಯಕತೆ ಹೆಚ್ಚು ಇದೆ ಎಂದು ಜ‌ನಪದರ ಗಟ್ಟಿಧ್ವನಿ ಜರಗನಹಳ್ಳಿ ಕಾಂತರಾಜು ತಿಳಿಸಿದರು.

ಪ್ರಶಸ್ತಿ ಪುರಸ್ಕೃತರು

ಜನಪದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು-2024

1. ಶ್ರೀ ಪುರುಷೋತ್ತಮ ಗೌಡ (ಹಾಲಕ್ಕಿ ಒಕ್ಕಲಿಗ ಸಮುದಾಯ)

2. ಶ್ರೀ ದೊಂಡು ಪಾಟೀಲ್ ಧನಗರ್ ಗೌಳಿ (ಗೌಳಿ ಸಮುದಾಯ)

3. ಶ್ರೀ ನಾಗರಾಜ ದುರ್ಗಯ್ಯ ಗೊಂಡ (ಗೊಂಡ ಸಮುದಾಯ

4. ಶ್ರೀಮತಿ ಶಾರದ ಕುಡಿಯ (ಕುಡಿಯ ಸಮುದಾಯ)

5. ಶ್ರೀಮತಿ ಲಿಲ್ಲಿ ಜಾಕಿ ಸಿದ್ಧಿ (ಸಿದ್ಧಿ ಸಮುದಾಯ)

6. ಶ್ರೀ ಬಸವರಾಜ್ ಸೋಲಿಗ (ಸೋಲಿಗ ಸಮುದಾಯ)

7. ಶ್ರೀ ಜೆ. ಕೆ ರಾಮು (ಜೇನು ಕುರುಬ ಸಮುದಾಯ)

8. ಶ್ರೀ ಚಂದ್ರ ನಾಯಕ್ ಕುಡುಬಿ (ಕುಡುಬಿ ಸಮುದಾಯ)

9. ಶ್ರೀ ಮಂಜುನಾಥ್ ಸಿ. ಕೆಂಗಲ್ ಹಟ್ಟಿ (ಕಾಡುಗೊಲ್ಲ ಸಮುದಾಯ)

10. ಶ್ರೀಮತಿ ಜ್ಯೋತಿ. ಎನ್ (ಬಂಜಾರ ಸಮುದಾಯ)

11. ಶ್ರೀ ಆರ್. ಮಹೇಂದ್ರ (ಜಾನಪದ ಗಾಯಕರು)

12. ಶ್ರೀ ಆರ್. ರವಿಕುಮಾರ್ (ಜಾನಪದ ಶೈಲಿಯ ಗೀತ ರಚನೆಕಾರರು)

13. ಡಾ. ಪ್ರದೀಪ್ ಕುಮಾರ್ ಎಂ (ಜಾನಪದ ಸಾಹಿತ್ಯ:ಮಹಾಕಾವ್ಯಗಳ ಅಧ್ಯಯನ)

14. ಶ್ರೀ ಏಕದಾರಿ ಕೆ.ಎಂ ರಾಮಯ್ಯ (ಕಂಚಿನ ಕಂಠದ ಜಾನಪದ ಗಾಯಕರು)

15. ಶ್ರೀ ರಾಚಯ್ಯ (ತತ್ವಪದ ಗಾಯಕರು)

16. ಶ್ರೀ ಶಂಕರ್ ದಾಸ್ ಚಂಡ್ಕಳ (ಜಾನಪದ ಕಲಾವಿದರು)

17. ಶ್ರೀ ಕೃಷ್ಣೇಗೌಡ (ಸೋಬಾನೆ ಕಲಾವಿದರು)

18. ಶ್ರೀಮತಿ ಶಾಂತಾ ಹೆಗ್ಗೋಡು (ಡೊಳ್ಳು ಕಲಾವಿದರು)

19. ಶ್ರೀಮತಿ ಬುರ್ರಕಥಾ ಕಮಲಮ್ಮ (ಬುರ್ರಕಥೆ ಕಲಾವಿದರು)

20. ಶ್ರೀ ಮಹೇಶ್ (ಕಂಸಾಳೆ ಕಲಾವಿದರು)

21. ಶ್ರೀ ಪಿ. ಸೋಮು (ಖ್ಯಾತ ಜಾನಪದ ಸಮರ ಕಲೆ ಕಲಾವಿದರು, ಮೈಸೂರು)

22. ಡಾ. ಕೆ.ಪಿ ದೇವರಾಜ್ (ಪೂಜಾ ಕುಣಿತ ಕಲಾವಿದರು)

23. ಶ್ರೀ ಕೆ. ಬಿ ಸ್ವಾಮಿ (ಪೂಜಾ ಕುಣಿತ ಕಲಾವಿದರು)

24. ಚೇತನ್ ರಾಜ್ ಓ (ರಂಗಭೂಮಿ ಮತ್ತು ಜಾನಪದ ಕಲಾವಿದ)

25. ಶ್ರೀ ಅಖಿಲೇಶ್ ಎಚ್.ಕೆ (ಪಟ ಕುಣಿತ ಕಲಾವಿದರು)

26. ಶ್ರೀ ರುದ್ರೇಶ್ವರಯ್ಯ ಎಚ್. ಬಿ (ವೀರಭದ್ರ ಕುಣಿತ ಕಲಾವಿದರು)

27. ಶ್ರೀ ಕಿರಣ್ ಗಿರ್ಗಿ (ಖ್ಯಾತ ರಂಗನಿರ್ದೇಶಕರು, ರಂಗ ನಟರು)

28. ಶ್ರೀ ಹೆಚ್. ಆರ್ ನಾಗೇಂದ್ರ (ಜಾನಪದ ಕಲೆಗಳ ಪರಿಚಾರಕರು)

29. ಶ್ರೀಮತಿ ನಾಗರತ್ನ ಎಸ್. ಹಿರೇಮಠ (ಯೋಗ ಸಾಧಕಿ, ಬೆಂಗಳೂರು)

ಮುಖ್ಯ ಅತಿಥಿಗಳಾಗಿ ಡಾ. ಎಸ್.ವಿ ಸುರೇಶ್ ಕುಲಪತಿಗಳು ಕೃಷಿ ವಿಶ್ವವಿದ್ಯಾಲಯ ಬೆಂಗಳೂರು, ಪ್ರೊ. ಟಿ.ಎಂ ಭಾಸ್ಕರ ಕುಲಪತಿಗಳು ಜಾನಪದ ವಿಶ್ವವಿದ್ಯಾಲಯ ಹಾವೇರಿ, ಪ್ರೊ. ನಾಗೇಶ್ ವಿ ಬೆಟ್ಟಕೋಟೆ ಕುಲಪತಿಗಳು ಡಾ. ಗಂಗುಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯ ಮೈಸೂರು, ಶ್ರೀ ಗೊಲ್ಲಹಳ್ಳಿ ಪ್ರಸಾದ್ ಅಧ್ಯಕ್ಷರು ಜಾನಪದ ಅಕಾಡೆಮಿ, ಡಾ. ಎ.ಆರ್ ಗೋವಿಂದಸ್ವಾಮಿ ಅಧ್ಯಕ್ಷರು ಬಂಜಾರ ಅಕಾಡೆಮಿ, ಡಾ. ಕಾಳೇಗೌಡ ನಾಗವಾರ, ಜನಾರ್ಧನ ಜನ್ನಿ, ಡಾ. ಕುರುವ ಬಸವರಾಜ್, ಪದ್ಮಶ್ರೀ ಡಾ. ರಾಣಿ ಮಾಚಯ್ಯ, ಶ್ರೀ ಎಂ. ಪ್ರಕಾಶಮೂರ್ತಿ ಕಸಾಪ ಅಧ್ಯಕ್ಷರು ಬೆಂಗಳೂರು ನಗರ, ಶ್ರೀ ಜಗದೀಶ್ ಮಲ್ನಾಡ್ ಸೇರಿದಂತೆ ಮತ್ತೀತರ ಗಣ್ಯರು ಉಪಸ್ಥಿತರು ಇರಲಿದ್ದಾರೆ ಎಂದು ಜರಗನಹಳ್ಳಿ ಕಾಂತರಾಜು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ

Published

on

ಸುದ್ದಿದಿನ,ದಾವಣಗೆರೆ:ಬಿಜೆಪಿ ಮಹಿಳಾ ಮತದಾರರನ್ನು ಒಂದು ಪ್ರಬಲ ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವಲ್ಲಿ ಪ್ರಯತ್ನಿಸಿತ್ತು. ‘ನಾರಿ ಶಕ್ತಿ’ ಎಂಬ ಬ್ರಾಂಡ್ ಅಡಿಯಲ್ಲಿ ಮಹಿಳೆಯರನ್ನು ನೇರವಾಗಿ ತಲುಪುವ ತಂತ್ರವನ್ನು ಬಿಜೆಪಿ ರೂಪಿಸಿತ್ತು. ಮಹಿಳಾ ಮೀಸಲಾತಿ ಮಸೂದೆಯನ್ನು ಈ ಬ್ರಾಂಡ್‌ನ ಸರ್ವೋಚ್ಚ ಸಾಧನೆಯಾಗಿ ಪ್ರಸ್ತುತಪಡಿಸಲಾಯಿತು. ಆದರೆ ಬಿಜೆಪಿ ಒಂದು ಅತ್ಯಂತ ವ್ಯವಸ್ಥಿತ ಮತ್ತು ಚಾಣಾಕ್ಷ ‘ಪಾಲಿಟಿಕಲ್ ಮಾರ್ಕೆಟಿಂಗ್’ ತಂತ್ರವಾಗಿ ಬಳಸಿಕೊಳ್ಳುವುದಕ್ಕೆಯತ್ನಿಸಿ ವಿಫಲವಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದರು.

ಗೃಹ ಕಚೇರಿಯಲ್ಲಿ ಇಂದು ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿಯನ್ನು ಕ್ಷೇತ್ರ ಪುನರ್‌ವಿಂಗಡಣೆಗೆ “ಬಲಿಪಶು” ಮಾಡುವುದು ಸರಿಯಲ್ಲ. ೨೦೨೩ರ ಕಾಯಿದೆಯಲ್ಲಿ ಜನಗಣತಿ ನಂತರ ಅನುಷ್ಠಾನ ಎಂದು ತಿಳಿಸಲಾಗಿದೆ. ಆದರೆ ಈಗ ೨೦೧೧ರ ಜನಗಣತಿ ಆಧಾರದಲ್ಲಿ ವೇಗಗೊಳಿಸುವುದು ಏಕೆ? ಜಾತಿ ಜನಗಣತಿಯನ್ನು ಸೇರಿಸದಿದ್ದರೆ ಪುನರ್‌ವಿಂಗಡಣೆಯು ಸಾಮಾಜಿಕ ನ್ಯಾಯಕ್ಕೆ ಹೊಂದುವುದಿಲ್ಲ. ದಕ್ಷಿಣ ರಾಜ್ಯಗಳಲ್ಲಿ ಕುಟುಂಬ ನಿಯಂತ್ರಣದ ಯಶಸ್ಸಿಗೆ ಶಿಕ್ಷೆ ನೀಡುವಂತಾಗಬಾರದು. ಜನಸಂಖ್ಯೆ ನಿಯಂತ್ರಣ ಮಾಡಿದ್ದು ದಕ್ಷಣ ಭಾರತ. ಇದರ ಆಧಾರದ ಮೇರೆಗೆ ಮಸೂದೆ ಜಾರಿಗಿದ್ದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗುತ್ತಿತ್ತು. ಬಿಜೆಪಿ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡಿತು. ಆದರೆ ಮೂರನೇ ಎರಡರಷ್ಟು ಬಹುಮತ ಸಿಗಲಿಲ್ಲ ಎಂದರು.

ಮಸೂದೆಯನ್ನು ವೋಟ್ ಬ್ಯಾಂಕ್ ಆಗಿ ಬಳಕೆ ಮಾಡಿಕೊಂಡು ಮಹಿಳೆಯರ ಭಾವನೆಗಳೊಂದಿಗೆ ಆಟವಾಡಲು ಹೋಯಿತು. ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡಿತು. ಆದರೆ ಅದು ನಡೆಯಲಿಲ್ಲ. ನಮ್ಮ ವಿರೋಧವೇನಿದ್ದರು ಪುನರ್ ವಿಂಗಡಣೆ ಮಸೂದೆ ತಿರಸ್ಕರಿಸಿದೆ ಹೊರತು ಮಹಿಳಾ ಮೀಸಲು ಮಸೂದೆ ಅಲ್ಲ ಎಂದರು.

ಪಂಚ ರಾಜ್ಯಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಿದ್ದರೂ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಿದ್ದು ಚುನಾವಣಾ ಆಯೋಗ ನಿರ್ಧಾರ ತೆಗೆದುಕೊಳ್ಳಬೇಕು. ಅವರು ಚುನಾವಣೆಯ ಸಂದರ್ಭದಲ್ಲಿ ದೇಶ ಉದ್ದೇಶಿಸಿ ಮಾಡಿದ ಭಾಷಣದಲ್ಲಿ ವಿರೋಧ ಪಕ್ಷಗಳನ್ನು ತೆಗಳಿಕೆ ಮಾಡಿದ್ದು ಸರಿಯಲ್ಲ. ಇದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿಮಾಡಿದರು.

ಮಸೂದೆ ಕುರಿತು ಸರ್ವ ಪಕ್ಷಗಳ ಸಭೆ ಕರೆಯುವಂತೆ ಮಾಡಿಕೊಂಡ ಮನವಿ ಉಪೇಕ್ಷೆ ಮಾಡಿತು ಕೇಂದ್ರ ಸರ್ಕಾರ. ಮಹಿಳಾ ಮೀಸಲಾತಿ ಮಸೂದೆ ಈಗಾಗಲೇ ಲೋಕಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಕ್ಷೇತ್ರ ಪುನರ್ ವಿಂಗಡಣೆ ಬಗ್ಗೆ ಆತಂಕ ಇದೆ. ಎಲ್ಲರ ಒಪ್ಪಿಗೆ ಪಡೆದು ಮುಂದುವರೆದಿದ್ದರೆ ಅನುಕೂಲ ಆಗುತ್ತಿತ್ತು. ೨೦೨೪ರಲ್ಲಿ ಮಹಿಳಾ ಮೀಸಲು ಜಾರಿಗೆ ತರುವ ಅವಕಾಶ ಇತ್ರು. ಇದನ್ನು ಮಾಡಲು ಮುಂದಾಗಲಿಲ್ಲ. ಕ್ಷೇತ್ರ ಪುನರ್ ವಿಂಗಡಣೆ ಜಮ್ಮು ಮತ್ತು ಕಾಶ್ಮೀರ ಹಾಗೂ ಅಸ್ಸಾಂ ದಲ್ಲಿ ತಮ್ಮ ಅನುಕೂಲ, ರಾಜಕೀಯ ಲಾಭಕ್ಕೆ ಅನುಗುಣವಾಗಿ ಮಾಡಿ ತೋರಿಸಿದ್ದಾರೆ. ಈ ಬಗ್ಗೆ ಹೆಚ್ಚು ಆತಂಕ ಇದೆ. ಆಡಳಿತ ಪಕ್ಷಕ್ಕೆ ಈ ಮಸೂದೆ ಜಾರಿಗೆ ತರುವ ಬದ್ದತೆ ಇದ್ದಿದ್ದರೆ ಸರ್ವ ಪಕ್ಷಗಳನ್ನು ವಿಶ್ವಾಸಕ್ಕೆ ಪಡೆಯುವ ಪ್ರಯತ್ನ ಮಾಡುತ್ತಿದ್ದರು. ರಾಜೀವ್ ಗಾಂಧಿ ಅವರು ಸ್ಥಳೀಯ ಸಂಸ್ಥೆಯಲ್ಲಿ ಶೇ ೫೦ ಜಾರಿಗೆ ತಂದಿದ್ದೇವೆ ಎಂದರು.

ಜನಸಂಖ್ಯೆ ನಿಯಂತ್ರಣ ಮಾಡಿದ್ದು ದಕ್ಷಣ ಭಾರತ. ಇದರ ಆಧಾರದ ಮೇರೆಗೆ ಜಾರಿಗೆ ತಂದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗಲಿದೆ. ಜನಗಣತಿಯಲ್ಲಿ ಜಾತಿ ಗಣತಿ ನಡೆಯುತ್ತಿದೆಯೇ ಎಂಹುದು ಇನ್ನೂ ಸ್ಪಷ್ಟವಾಗಿ ಹೇಳಿಲ್ಲ. ಉತ್ತರ ಪ್ರದೇಶ ಹಾಗೂ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ನಡುವೆ ಇರುವ ವ್ಯತ್ಯಾಸ ದೊಡ್ಡದು. ಉತ್ತರ ಭಾರತೀಯ ರಾಜ್ಯಗಳು ಹೆಚ್ಚು ಪ್ರಾಬಲ್ಯ ಸಾಧಿಸಿದರೆ ದಕ್ಷಿಣ ಭಾರತಕ್ಕೆ ತೊಂದರೆ ಆಗುತ್ತದೆ. ಮಸೂದೆ ಮಂಡನೆಗೆ ಇನ್ನೂ ಎರಡು ವರ್ಷಗಳ ಕಾಲಾವಕಾಶ ಇದೆಯಾವುದು ಒಳಿತು ಎಂಬುದು ಮಹಿಳೆಯರು ಆಲೋಚನೆ ಮಾಡಲಿ ಎಂದರು.

ಸುದ್ದಿಗೋಷ್ಟಿಯಲ್ಲಿ ‘ಧೂಡಾ’ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಕಾಂಗ್ರೆಸ್ ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ಅನಿತಾಬಾಯಿ, ಮುಖಂಡರಾದ ಶಿವಕುಮಾರ್, ಅಯೂಬ್ ಪೈಲ್ವಾನ್, ಎ.ನಾಗರಾಜ್ ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ

Published

on

ಸುದ್ದಿದಿನ,ದಾವಣಗೆರೆ:ಕೆ. ಬೇವಿನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರದಲ್ಲಿ 21 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಇದೇ ವೇಳೆ ಸಾಲಕಟ್ಟೆ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹರಿಹರ ಇವರ ಸಂಯುಕ್ತ ಆಶ್ರಯದಲ್ಲಿ 11 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

ಶಿಬಿರದಲ್ಲಿ ಸತ್ಯನಾರಾಯಣ ಕ್ಯಾಂಪ್‌ನ ಡಾ. ರಾಮಾಂಜನೇಯ ಸ್ವಾಮಿ ಅವರು ಇದುವರೆಗೆ 110 ಬಾರಿ ರಕ್ತದಾನ ಮಾಡಿರುವುದು ವಿಶೇಷವಾಗಿದ್ದು, ಈ ಬಾರಿ ತಮ್ಮ ಮಗನೊಂದಿಗೆ ರಕ್ತದಾನ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಅಲ್ಲದೆ ವಿರೂಪಾಕ್ಷಪ್ಪ ಬಿ.ಕೆ. (ವಿ.ಆರ್.ಡಬ್ಲ್ಯೂ) ಎಂಬ ವಿಶೇಷ ಚೇತನರು 5ನೇ ಬಾರಿ ರಕ್ತದಾನ ಮಾಡಿ ಗಮನಾರ್ಹರಾಗಿದ್ದಾರೆ.

ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ (ಟಿ.ಎಚ್.ಒ) ಉಮಣ್ಣ ಅವರು ಮಾತನಾಡಿ, ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲವಾದುದರಿಂದ ರಕ್ತದಾನದ ಮಹತ್ವ ಅತ್ಯಂತ ಮಹತ್ತರವಾಗಿದೆ ಎಂದು ತಿಳಿಸಿದರು.

ವೈದ್ಯಾಧಿಕಾರಿಗಳಾದ ಡಾ. ರೇವತಿ ಎಚ್ ಬುಟ್ಟೆ ಅವರು ಮಾತನಾಡಿ, ಗ್ರಾಮದ ಜನರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿರುವುದು ಸಂತೋಷದ ಸಂಗತಿ. ಅತಿ ತುರ್ತು ಪರಿಸ್ಥಿತಿಗಳಲ್ಲಿ ರಕ್ತದಾನವು ಅನೇಕ ರೋಗಿಗಳ ಜೀವ ಉಳಿಸಲು ಸಹಾಯಕವಾಗುತ್ತದೆ ಎಂದು ಹೇಳಿದರು. ದಾವಣಗೆರೆ ಕೇಂದ್ರ ರಕ್ತ ನಿಧಿಯ ಡಾ. ಗೀತಾ ಡಿ.ಎಚ್. ಹಾಗೂ ಸಿಬ್ಬಂದಿಗಳು ರಕ್ತವನ್ನು ಸಂಗ್ರಹಿಸಿದರು.

ಈ ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಕರಾದ ಉಮೇಶ್ ಎಂ.ಆರ್.ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಹಾಗೂ ಗ್ರಾಮಸ್ಥರಾದ ವಿಶ್ವನಾಥ್ ಡಿ.ಆರ್. (ಉಪನ್ಯಾಸಕರು), ವಿಶ್ವನಾಥ್ ಎ.ಎಸ್., ಬನ್ನಿಕೋಡು ಸುರೇಶ್, ರೇವಣಸಿದ್ದಪ್ಪ, ಕೆ.ಜಿ. ಸಂತೋಷ್, ಜಿ.ಎಂ. ಮುರುಗೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಕೆ. ಬೇವಿನಹಳ್ಳಿ ಮತ್ತು ಸಾಲಕಟ್ಟೆ ಗ್ರಾಮಸ್ಥರ ಸಹಕಾರದಿಂದ ರಕ್ತದಾನ ಶಿಬಿರ ಯಶಸ್ವಿಯಾಗಿ ನೆರವೇರಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ

Published

on

ಸುದ್ದಿದಿನ,ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಮುಸ್ಲಿಂ ಸಮಾಜದ ನಾಯಕರಾಗಿದ್ದ ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸೈಫುಲ್ಲಾ ಸಾಬ್ (79ವರ್ಷ) ಅವರು ಇಂದು ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ದಾವಣಗೆರೆಯ ನಂಜಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದರು . ಮೃತರ ನಿಧನಕ್ಕೆ ಮುಸ್ಲಿಂ ಸಮುದಾಯದ ಮುಖಂಡರು, ವಿವಿಧ ಪಕ್ಷಗಳ ನಾಯಕರು ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

ಕರೆಕಟ್ಟೆಜನಾಬ್ ಸೈಯದ್ ಸೈಫುಲ್ಲ ಸಾಬ್ಮಿ ಲ್ಲತ್ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರೂ ಆಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದ ಸೈಯದ್ ಸೈಫುಲ್ಲಾ ಸಾಬ್ ಅವರು ಸಿಎಂ ಸಿದ್ದರಾಮಯ್ಯ, ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರ ಆಪ್ತರಾಗಿದ್ದರು.

ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರನ್ನು ಸೇರಿದಂತೆ ಕುಟುಂಬಸ್ಥರು, ಅಪಾರ ಬಂಧುಬಳಗದವರನ್ನು ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸಾಬ್ ಅವರು ಅಗಲಿದ್ದಾರೆ.

2013ರಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಜೆಡಿಎಸ್ ಸೇರಿ ಈ ಪಕ್ಷದಿಂದ ಸ್ಪರ್ಧಿಸಿ 26 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಶಾಮನೂರು ಶಿವಶಂಕರಪ್ಪರ ವಿರುದ್ಧ ಸೋತರೂ ಎರಡನೇ ಸ್ಥಾನ ಪಡೆದಿದ್ದರು. ಆಗ ಬಿಜೆಪಿ ಮೂರನೇ ಸ್ಥಾನಕ್ಕೆ ಹೋಗಿತ್ತು. ಮತ್ತೆ ಕಾಂಗ್ರೆಸ್ ಪಕ್ಷ ಸೇರಿದ್ದ ಅವರು, ಸಿದ್ದರಾಮಯ್ಯರ ಜೊತೆ ಉತ್ತಮ ಒಡನಾಟ ಹೊಂದಿದ್ದರು. ಅವರು ಸ್ನಾತಕೋತ್ತರ ವೃತ್ತಿಪರ ಬಿಎಸ್ಸಿ ಅನ್ನು ಮೈಸೂರು ವಿಶ್ವವಿದ್ಯಾಲಯದಿಂದ ಪಡೆದಿದ್ದರು. ದಾವಣಗೆರೆಯ ಡಿಆರ್ ಎಂ ಕಾಲೇಜಿನಲ್ಲಿ ಬಿ. ಎಡ್ ವ್ಯಾಸಂಗ ಮಾಡಿದ್ದರು. ಎಂ. ಎಂ. ಬಸಪ್ಪ ಶಿಕ್ಷಣ ಸಂಘದ ಕಾಲೇಜಿನಲ್ಲಿ ಪದವಿ ಪೂರೈಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending