ದಿನದ ಸುದ್ದಿ
ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ಜಗಳೂರು ಕಾಟಮ್ಮ ; ಸಾಧನೆಯ ಹೆಗ್ಗುರುತುಗಳು
- ಡಾ.ಮಲ್ಲಿಕಾರ್ಜುನ ಕಲಮರಹಳ್ಳಿ, ಸದಸ್ಯರು, ಕರ್ನಾಟಕ ಜಾನಪದ ಅಕಾಡೆಮಿ, ಬೆಂಗಳೂರು
ದಾವಣಗೆರೆ ಜಿಲ್ಲೆಯ ಜಗಳೂರು ಸೀಮೆ ಬುಡಕಟ್ಟು ಸಮುದಾಯಗಳ ನೆಲೆವೀಡು, ತಾಜಾ ಜಾನಪದ ಸಂಸ್ಕೃತಿಯು ಹಾಸು ಹೊಕ್ಕಾದ ಸಮೃದ್ಧ ಹೊನ್ನ ಕಣಜ.
ಜಗಳೂರು ತಾಲೂಕಿನ ಹೆಗ್ಗುರುತಿನ ಊರಾದ ತೋರಣಗಟ್ಟೆಯ ಗೌಡ್ರ ಚಿಕ್ಕಪ್ಪ ಮತ್ತು ಗೌರಮ್ಮ ಇವರ ಪುತ್ರಿಯಾದ ಕಾಟಮ್ಮ ತನ್ನ ಬಾಲ್ಯದಲ್ಲೇ ಊರಿನ ಪರಿಸರಕ್ಕನುಗುಣವಾಗಿ ಹೊಲಗದ್ದೆಗಳಲ್ಲಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ, ಊರ ದೇವರುಗಳ ಪರುವು ಉತ್ಸವಗಳನ್ನು ಕಣ್ಣುತುಂಬಿಸಿಕೊಳ್ಳುವಾಗ ವಾರಗಟ್ಟಲೆ ಜರುಗುತಿದ್ದ ಮದುವೆ ಕಾರ್ಯಗಳಲ್ಲಿ ಪಾಲ್ಗೊಳ್ಳುತ್ತಿರುವಾಗ ಊರಿನ ಹಿರಿಯರು ಹಾಡುತಿದ್ದ ಸೋಬಾನೆ ಪದಗಳು ದೇವರ ಪದಗಳು ಕುಣಿತ ಮಣಿತಗಳ ಪದಗಳನ್ನು ಚಿತ್ತವಿಟ್ಟು ಆಲಿಸುತ್ತಲೇ ತಾನೂ ಅವುಗಳನ್ನು ಅಸ್ವಾದಿಸಿಕೊಂಡು ಸಹವರ್ತಿಯಾಗಿ ದನಿ ಸೇರಿಸಲು ಆರಂಭಿಸಿದರು.
ಹುಟ್ಟಿದ ಊರಿನಲ್ಲಿಯೇ ಬಾಲಪ್ಪನವರನ್ನು ವಿವಾಹವಾದ ಕಾಟಮ್ಮ ನಾಲ್ಕು ಮಕ್ಕಳ ತಾಯಿಯಾಗಿ ತುಂಬು ಸಂಸಾರವನ್ನು ನಿರ್ವಹಿಸುತ್ತಲೇ ತನ್ನ ಎದೆಯೊಳಗಿನ ಪದಗಳಿಗೆ ದನಿಯಾಗುತ್ತಾ ಬಂದರು. ತನ್ನ ಸೋದರಿ ಶಾಂತ ವೀರಮ್ಮ ಹಾಗೂ ಸಮೀಪದ ಬಂದುಗಳಾದ ಬಾಲಮ್ಮ, ಬಡಮ್ಮ ಮುಂತಾದವರ ತಂಡ ಕಟ್ಟಿಕೊಂಡು ಮದ್ಯ ಕರ್ನಾಟಕದ ಪ್ರಸಿದ್ಧ ಜಾನಪದ ಸಾಂಸ್ಕೃತಿಕ ವೀರರಾದ ಕಾಟಣ್ಣ, ದೊಡ್ಡಣ್ಣ, ಬಡಣ್ಣ, ಚಿಕ್ಕಣ್ಣ ಇವರ ಬಗ್ಗೆ ಸುದೀರ್ಘ ಕಥನ ಕಾವ್ಯಗಳನ್ನು ಕಟ್ಟಿ ನಿರರ್ಗಳವಾಗಿ ಹಾಡಬಲ್ಲವರಾಗಿದ್ದಾರೆ. ವಿಶೇಷವಾಗಿ ದಾವಣಗೆರೆ ಸೀಮೆಯಲ್ಲಿ ‘ಮಳೆ ಮಲ್ಲಪ್ಪ’ ನೆಂದೇ ಖ್ಯಾತನಾಮರಾಗಿ ಆರಾಧನೆಗೆ ಒಳಗಾಗಿರುವ ಅವಧೂತ ಪರಂಪರೆಯ ‘ಮೆಲ್ಲಜ್ಜಿ’ ನ ಬಗ್ಗೆ ಈ ತಾಯಿ ಕಟ್ಟಿಕೊಡುವ ಪದಗಳು ಬಹು ಪ್ರಸಿದ್ದಿ ಪಡೆದಿವೆ.
ಮೆಲ್ಲಜ್ಜ ಸುಮಾರು ನೂರಾ ಐವತ್ತು ವರ್ಷಗಳ ಹಿಂದೆ ತೋರಣಗಟ್ಟೆಯಲ್ಲಿ ಎಲ್ಲರಂತೆ ಬದುಕಿ ಬಾಳಿದ ವ್ಯಕ್ತಿ. ಆದರೆ ತನ್ನ ವಿಶಿಷ್ಟ ಆಧ್ಯಾತ್ಮಿಕ ಮನೋಪ್ರವೃತ್ತಿಯ ಅವಧೂತನಾಗಿ, ಹವಮಾನ ತಜ್ಞನಾಗಿ ‘ ಮಳೆ ಮೆಲ್ಲಜ್ಜ ‘ ಎಂದು ಪ್ರಸಿದ್ದಿ ಪಡೆದು ಮರಣೋತ್ತರದಲ್ಲಿ ಜನ ಸಮುದಾಯದಿಂದ ಸಂಗತಿಯಾಗಿದೆ.ಗಾಗುತ್ತಾನೆ. ಇಂತಹ ಅಸಾಮಾನ್ಯ ವ್ಯಕ್ತಿತ್ವದ ಮೆಲ್ಲಜ್ಜನ ಕುರಿತಂತೆ ಪದಗಾತಿ ಕಾಟಮ್ಮ ಸುಧೀರ್ಘವಾಗಿ ಕಥನ ಕಟ್ಟಿ ಹಾಡುವ ಸೋಪಜ್ಞ ಕಲೆಗಾರಿಕೆಯನ್ನು ಹೊಂದಿದವರಾಗಿದ್ದಾರೆ. ಜಗಳೂರು ಸೀಮೆಯಲ್ಲಿ ಈ ಕಥನ ಮನೆಮಾತಾಗಿದೆ.
ಜಗಳೂರು ಸೀಮೆಯಲ್ಲಿ ಯಾರದೇ ಮದುವೆ ಸಂಬಂದಿತ ಕಾರ್ಯಗಳಲ್ಲಿ ಶ್ರೀಮತಿ ಕಾಟಮ್ಮ ನವರ ಉಪಸ್ಥಿತಿ, ಸೋಬಾನೆ ಪದಗಾರಿಕೆ ಇರಲೇಬೇಕು. ಅಷ್ಟರಮಟ್ಟಿಗೆ ಇವರು ಸುಪ್ರಸಿದ್ಧರಾಗಿದ್ದಾರೆ.
ಮದುವೆಯ ಹಸೆ ಚಿತ್ತಾರ ಬಿಡಿಸುವಲ್ಲಿ ಸಿದ್ಧ ಹಸ್ತರು. ಬುಡಕಟ್ಟು ಸಮುದಾಯಗಳ ಮದುವೆಗಳಲ್ಲಿ ಹಾಕಲಾಗುವ ಹಾಲಸ್ತ್ರ ಹಸೆ, ಒಳ್ಳಕ್ಕಿ ಹಸೆ, ದೇವರ ಹಸೆ, ಬೂವದ ಹಸೆ . ಅರಿಣಿ ಹಸೆ . ಅಂದ್ರದ ಹಸೆ ಮುಂತಾದ ಹಸೆಗಳನ್ನು ಕರಿಕಂಬಳಿಹಾಸು ಮೇಲೆ ತಾನೇ ಬಿಡಿಸಿ ಆಯಾ ಸಂದರ್ಭಗಳನ್ನು ಮಧುರವಾಗಿ ಹಾಡುವ ನಿಪುಣೆಯಾಗಿದ್ದಾರೆ.
ಸಾಮಾನ್ಯವಾಗಿ ಹಸೆ ಬಿಡಿಸುವವರಿಗೆ ಹಾಡಲು ಬರುವುದಿಲ್ಲ. ಹಾಡುವವರು ಹಸೆ ಬಿಡಿಸುವುದಿಲ್ಲ. ಆದರೆ ಕಾಟಮ್ಮ ಇದಕ್ಕೆ ಭಿನ್ನ. ಎರಡನ್ನೂ ಅಚ್ಚುಕಟ್ಟಾಗಿ ನಿರ್ವಹಿಸುವ ಕಲಾಚತುರೆ. ಸುದೀರ್ಘ ನಲವತ್ತು ವರ್ಷಗಳಿಂದ ನಿರಂತರವಾಗಿ ಪದಗಂಗೆಯನ್ನು ಹರಿಸುತ್ತಿರುವ ಎಲೆಮರೆಯ ಪ್ರತಿಭೆ ಕಾಟಮ್ಮನವರನ್ನು ಯಾವ ಸಂಘ ಸಂಸ್ಥೆಗಳು ಗುರುತಿಸದೆಹೋದ ಈ ಹೊತ್ತಿನಲ್ಲಿ ಮೊದಲ ಬಾರಿಗೆ ಕರ್ನಾಟಕ ಜಾನಪದ ಅಕಾಡೆಮಿ ಗುರುತಿಸಿ ಗೌರವಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ(ಬರಹ: ಡಾ.ಮಲ್ಲಿಕಾರ್ಜುನ ಕಲಮರಹಳ್ಳಿ, ಸದಸ್ಯರು, ಕರ್ನಾಟಕ ಜಾನಪದ ಅಕಾಡೆಮಿ, ಬೆಂಗಳೂರು)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


