ಲೈಫ್ ಸ್ಟೈಲ್
ವಿದ್ಯಾಬಾಲನ್ ಸ್ಕಿನ್ ಟೋನ್…!
ವಿದ್ಯಾ ಬಾಲನ್ ಸ್ಪ್ಲಾಶಿ ಸ್ಕಿನ್ ಟೋನ್ ಅಂದ್ರೆ ಸ್ಪೆಷಲ್ ಅಟ್ರ್ಯಾಕ್ಷನ್. ಗ್ಲೋಯಿಂಗ್ ತ್ವಚೆಯಿಂದಲೇ ಎಲ್ಲರನ್ನೂ ಸೆಳೆಯುವ ಕೇರಳ ಸುಂದರಿ ತಮ್ಮ ಸೌಂದರ್ಯ ಇಮ್ಮಡಿಗೊಳಿಸಲು ಮೂಲಿಕೆಯೊಂದನು ಬಳಸುತ್ತಾರಂತೆ. ಇಷ್ಟಕ್ಕೂ ಆ ಮೂಲಿಕೆ ಬರುವುದು ಪಾಕಿಸ್ಥಾನದಿಂದ ಅನ್ನೋದು ಅಚ್ಚರಿಗೊಳಿಸುತ್ತೆ. ಇಷ್ಟಕ್ಕೂ ವಿದ್ಯಾ ಗ್ಲೋಯಿಂಗ್ ಸ್ಕಿನ್ ಸೀಕ್ರೆಟ್ ಏನು ಅನ್ನೋದನ್ನ ನೋಡೋಣ ಬನ್ನಿ.
ವಿದ್ಯಾ ಬಾಲನ್ ತಮ್ಮ 16 ನೇ ವಯಸ್ಸಿಗೆ ಫಿಲ್ಮ್ ಇಂಡಸ್ಟ್ರಿಗೆ ಬಂದವರು. ಅಂದಿನಿಂದ ಇಂದಿನ ತನಕ ತಮ್ಮ ಸ್ಕಿನ್ ಟೋನ್ ಹಾಗೇ ಉಳಿಸಿಕೊಂಡು ಬಂದವರು. ನ್ಯಾಷನಲ್, ಫಿಲ್ಮ್ ಫೇರ್ ಅವಾರ್ಡ್ಗಳನ್ನು ಪಡೆದ ಅಪರೂಪದ ವ್ಯಕ್ತಿತ್ವ ವಿದ್ಯಾರದು.
ಸೌಂದರ್ಯದಲ್ಲೇ ಆಳುವ ಗ್ಲಾಮರ್ ಪ್ರಪಂಚದಲ್ಲಿ ವಿದ್ಯಾ ತಮ್ಮ ಬ್ಯುಟಿ ಮೆಂಟೆನ್ಸ್ ಹೇಗೇ ಮಾಡ್ತಾರೆ? ಅನ್ನೋದು ಇಂಟರೆಸ್ಟಿಂಗ್ ಸಂಗತಿ. ಇದಕ್ಕಾಗಿ ತಪ್ಪದೇ ತಮ್ಮ ಸ್ಕಿನ್ ಅನ್ನು ಕ್ಲೆನ್ಸಿನ್ ಮಾಡೇ ಮಾಡ್ತಾಎರ. ಅಂತರಾಷ್ಟರೀಯ ಬ್ರ್ಯಾಂಡ್ ಕ್ರೀಮ್ಗಳನ್ನು ಇದಕ್ಕಾಗಿ ಬಳಸುತ್ತಾರೆ. ಇನ್ನೂ ಮೇಕಪ್ ತೆಗೆಯಲು ಮೇಕಪ್ ವೈಪ್ಸ್ಗಳನ್ನು ಬಳಸುತ್ತಾರೆ. ಇದಂತೂ ಇತ್ತೀಚೆಗೆ ಹೆಣ್ಮಕ್ಕಳ ಫೇವರೀಟ್ಗಳಲ್ಲಿ ಒಂದು. ಇದರಲ್ಲಿ ಮಾಯಿಸ್ಚರೈಸರ್ ಮತ್ತು ಅಲೋವೆರಾಗಳು ಇರುವ ಕಾರಣ ಇದು ತ್ವಚೆಯ ಆರೋಗ್ಯವನ್ನು ಕಾಪಾಡುತ್ತದೆ.
ಇನ್ನು ವಿದ್ಯಾ ತಮ್ಮ ಫೇಶಿಯಲ್ ಕ್ರೀಂಗಳಲ್ಲಿ ಆದಷ್ಟು ಆಯುರ್ವೇದದ ಪ್ರಾಡಕ್ಟ್ಗಳನ್ನು ಹೆಚ್ಚು ಬಳಕೆ ಮಾಡ್ತಾರೆ. ಬಾಡಿ ವಾಶ್, ರೋಸ್, ಲೆಮನ್ ಪ್ರಾಡಕ್ಟ್ಗಳನ್ನು ಹೆಚ್ಚೆಚ್ಚು ಬಳಸ್ತಾರೆ ಡಿಂಪಲ್ ಸುಂದರಿ. ಆಯಿಲ್ ಫ್ರೀ ಮಾಯಿಸ್ಚರೈಸರ್ ತಪ್ಪದೇ ಹಚ್ಚಿಕೊಳ್ತಾರಂತೆ.
ಇನ್ನೂ ವಿದ್ಯಾ ಬ್ಯೂಟಿಯಲ್ಲೇ ಹೆಚ್ಚು ಗಮನ ಸೆಳೆಯುವುದು ವಿದ್ಯಾಬಾಲನ್ ಕಣ್ಣುಗಳು. ಅಭಿನಯವೇ ಇರಲಿ, ಯಾವುದೇ ಫಂಕ್ಷನ್ಗಳೇ ಇರಲಿ ವಿದ್ಯಾ ಕಣ್ಣುಗಳು ಹೆಚ್ಚು ಆಕರ್ಷಕವಾಗಿ ಕಾಣುತ್ತವೆ. ನಿಮಗೆ ಗೊತ್ತೆ ವಿದ್ಯಾ ತಮ್ಮ ಕಣ್ಣಿನ ಸೌಂದರ್ಯಕ್ಕೆ ವಿಶೇಷ ಕಾಳಜಿ ವಹಿಸ್ತಾರೆ. ಎಸ್ ವಿದ್ಯಾ ಕಣ್ಣಿನ ಅಂದ ಹೆಚ್ಚಿಸಲು ಒಂದು ವಿಶಿಷ್ಟ ಕಾಡಿಗೆ ಬಳಸುತ್ತಾರೆ. ಅದರಲ್ಲೂ ಈ ಕಾಡಿಗೆಯಲ್ಲಿ ಹರ್ಬಲ್ ಪ್ರಾಡಕ್ಟ್ಗಳಿವೆ. ಇಷ್ಟಕ್ಕೂ ಅದು ಭಾರತದಲ್ಲಿ ಸಿಗುವ ಕಾಡಿಗೆ ಅಲ್ಲವೇ ಅಲ್ಲ. ಎಸ್ ಪಾಕಿಸ್ತಾನದಿಂದ ಬರುವ ಅಪರೂಪದ ಕಾಡಿಗೆಯನ್ನು ವಿದ್ಯಾ ಐ ಐ ಮೇಕಪ್ನಲ್ಲಿ ಬಳಸುತ್ತಾರಂತೆ. ಈಗ ಆ ಕಾಡಿಗೆ ದೆಹಲಿಯಲ್ಲಿ ಸಖತ್ ಫೇಮಸ್ ಆಗಿದ್ಯಾಂತೆ. ಇದು ಕಣ್ಣಿಗೆ ಸೂಥಿಂಗ್ ಫೀಲ್ ನೀಡುವುದಲ್ಲದೇ ಹೆಲ್ದಿಯಾಗಿಯೂ ಇಡುತ್ತದಂತೆ. ಇದು ಬಾದಾಮಿ ಎಣ್ಣೆಯುಕ್ತವಾಗಿದ್ದು, ಕಣ್ನೀನ ರೆಪ್ಪೆ ಬೆಳೆಯಲು ಸಹ ಎಫೆಕ್ಟೀವ್ ಆಗಿ ಕೆಲಸ ನಿರ್ವಹಿಸುತ್ತದಂತೆ.
ಇನ್ನೂ ವಿದ್ಯಾ ತಮ್ಮ ಹೇರ್ ಕೇರ್ಗಾಗಿ ನಿಯಮಿತವಾಗಿ ಆಯಿಲ್ ಮಸಾಜ್ ಮಾಡ್ತಾರಂತೆ. ಇದು ವಿದ್ಯಾಗೆ ಗ್ಲಾಸಿ ಲುಕ್ ನೀಡೋದ್ರಲ್ಲಿ ನೆರವಿಗೆ ಬರುತ್ತದಂತೆ. ಅದಕ್ಕೆ ತಕ್ಕಂತೆ, ಶಾಂಫೂ ಮತ್ತು ಕಂಡೀಷನರ್ ಬಳಕೆ ಮಾಡ್ತಾರೆ ವಿದ್ಯಾ. ತಲೆ ಹೊಟ್ಟಿನ ಸಮಸ್ಯೆ ಬಾರದಂತೆ ತಮ್ಮ ಕೇಶವಿನ್ಯಾಸದಲ್ಲಿ ಮಾಯಿಸ್ಚರ್ ಕಾಪಾಡಿಕೊಳ್ಳುತ್ತಾರಂತೆ. ಇನ್ನೂ ತ್ವಚೆಯ ವಿಷಯದಲ್ಲಿ ಯಾವ ಕಾಂಪ್ರಮೈಸ್ ಕೂಡ ಬೇಡ ಅಂತಾರೆ. ತ್ವಚೆಗೆ ಕಡಿಮೆ ಕ್ವಾಲಿಟಿಯ ಪ್ರಾಡಕ್ಟ್ಗಳನ್ನು ಬಳಸಲೇಬಾರದು ಅಂತಾರೆ. ಆದಷ್ಟು ಕೆಮಿಕಲ್ಗಳಿಂದ ದೂರವಿದ್ದು, ಆಯುರ್ವೇದಿಕ್ ಪ್ರಾಡಕ್ಟ್ಗಳನ್ನೇ ಹೆಚ್ಚು ಬಳಸಿ ಅಂತಾರೆ ವಿದ್ಯಾ.
ಸೋ ನೋಡಿದ್ರಲ್ಲ, ಇವತ್ತು ಗ್ಲೋಬಲ್ ಬ್ಯೂಟಿ ಅಂತಲೇ ಫೇಮಸ್ ಆಗಿರುವ ವಿದ್ಯಾ ತಮ್ಮ ಕರಿಯರ್ ಮತ್ತು ಪರ್ಸನಲ್ ಲೈಫ್ ನಿಭಾಯಿಸಲು ಇಷ್ಟೆಲ್ಲಾ ಕಾಳಜಿ ವಹಿಸುತ್ತಾರೆ. ಈ ಕಾರಣದಿಂದಲೇ ವಿದ್ಯಾ ವಿಭೀನ್ನವಾಗಿ ನಿಲ್ತಾರೆ. ಎಲ್ಲರಿಗೂ ಸ್ಫೂರ್ತಿಯಾಗ್ತಾರೆ. ಎಸ್ ಯೂ ಆರ್ ಗ್ರೇಟ್ ಲೇಡಿ ವಿದ್ಯಾ..! ವಿ ಲವ್ ಯೂ ಸುಲು…!
ಯಾವುದೇ ಕ್ಷೇತ್ರವಿರಲಿ, ಹೆಣ್ಣುಮಕ್ಕಳು ತಮ್ಮ ಸೌಂದರ್ಯಕ್ಕೆ ಸಂಬಂಧಿಸಿದ ಕೀಳರಿಮೆಗಳಿಗೆ ಒಳಾಗಾಗುವಂಥ ಪ್ರಸಂಗಗಳು ಎದುರಾದ್ರೆ, ಖಂಡಿತಾ ವಿದ್ಯಾ ಬಾಲನ್ ಹೊಸ ವೈಬ್ಸ್ ಸೃಷ್ಟಿ ಮಾಡೋದ್ರಲ್ಲಿ ಅನುಮಾನವೇ ಇಲ್ಲ. ಅದೇನೇ ಇರಲಿ ಫ್ಯಾಟ್ ಇಸ್ ಬ್ಯೂಟಿ ಅನ್ನೋ ಫ್ಯಾಕ್ಟ್ ಜೊತೆಗೆ ಹೆಲ್ದಿ ಲೈಫ್ ಬಗ್ಗೆಯೂ ಕಾಳಜಿ ಇರಲಿ ಅನ್ನೋ ವಿದ್ಯಾ ಮಾತು ನೆನಪಿರಲಿ. ಸೋ ಇದಾಗಿತ್ತು ಇವತ್ತಿನ ಲೇಡೀಸ್ ಫಸ್ಟ್. ನಾಳೆ ಮತ್ತೆ ಭೇಟಿಯಾಗೋಣ ನಮಸ್ಕಾರ. ಸುದ್ದಿಯಲ್ಲಿ ಸದಾ
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣ | ಭದ್ರಾ ನಾಲೆ ನೀರು ನಿರ್ವಹಣೆ
ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.
ಗುರುವಾರ(ಫೆ.19) ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ನಾಲೆಯ ಕೊನೆಯ ಭಾಗದ ರೈತರಿಗೆ ನೀರು ತಲುಪಿಸಲು ನಾಲೆಯುದ್ದಕ್ಕೂ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಅನಧಿಕೃತವಾಗಿ ನೀರು ಎತ್ತುವವರ ಮೋಟಾರ್ಗಳನ್ನು ವಶಪಡಿಸಿಕೊಳ್ಳಲಾಗುವುದು.
ಪ್ರಿಪೇಯ್ಡ್ ಆಟೋಗಳನ್ನು ಚಾಲ್ತಿಗೊಳಿಸಿದ್ದು, ಇದಕ್ಕೆ ರೂ.38/-ಶುಲ್ಕ ನಿಗದಿಪಡಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಶೇಖರ್ ಹೆಚ್.ಟಿ, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಅಂಕಣ
Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?
‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.
ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.
ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:
ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.
ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ
‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?
ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.
‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?
ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.
ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.
ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.

-
ದಿನದ ಸುದ್ದಿ5 days agoಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್ನಾಥ್ ಜೈನ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ





