ದಿನದ ಸುದ್ದಿ
ದಾವಣಗೆರೆ ತಾಲೂಕು ಪಂಚಾಯಿತಿಯಲ್ಲಿ ಕುಡಿಯುವ ನೀರಿನ ಕಾಮಗಾರಿಯಲ್ಲಿ ಅವ್ಯವಹಾರ ; ಲೋಕಾಯುಕ್ತಕ್ಕೆ ದೂರು : ಡಾ. ಕೆ.ಎ. ಓಬಳೇಶ್
![](https://suddidina.com/wp-content/uploads/2025/01/obalesh_suddidina.jpg)
ಸುದ್ದಿದಿನ,ದಾವಣಗೆರೆ : 2023-24ನೇ ಸಾಲಿನಲ್ಲಿ ದಾವಣಗೆರೆ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಸುಮಾರು 87.45 ಲಕ್ಷ ಮೊತ್ತದ ಅವ್ಯವಹಾರವನ್ನು ತನಿಖೆಗೆ ಒಳಪಡಿಸಬೇಕೆಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಕೆ.ಎ. ಓಬಳೇಶ್ ಹೇಳಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇದರೊಂದಿಗೆ ದಾವಣಗೆರೆ ತಾಲ್ಲೂಕು ಪಂಚಾಯಿತಿಯ 2022-23ನೇ ಸಾಲಿನ ಅನಿರ್ಭಂದಿತ ಅನುದಾನಕ್ಕೆ ಸಂಬಂಧಿಸಿದಂತೆ ನಡೆಸಿದ ಖರೀದಿ ವ್ಯವಹಾರದಲ್ಲಿ ತಾಲ್ಲೂಕು ಪಂಚಾಯಿತಿಯ ಕಾರ್ಯಾದೇಶಕ್ಕೂ ಮುನ್ನವೇ ಜಿ.ಎಸ್.ಟಿ ಬಿಲ್ಲುಗಳನ್ನು ಪಡೆದಿರುವ ಪ್ರಕರಣ ನಡೆದಿದೆ ಈ ಬಗ್ಗೆಯೂ ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ ದೂರು ನೀಡಲಾಗಿದೆ ಎಂದರು.
2023-24ನೇ ಸಾಲಿನಲ್ಲಿ ಜಿಲ್ಲಾ ವ್ಯಾಪ್ತಿಯ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ 4 ಹಂತದಲ್ಲಿ ರೂ. 5 ಕೋಟಿ ರೂಪಾಯಿಗೂ ಹೆಚ್ಚು ಅನುದಾನ ಬಿಡುಗಡೆ ಮಾಡಲಾಗಿತ್ತು ಇದರಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಉಪ ವಿಭಾಗ ದಾವಣಗೆರೆ ಇವರಿಗೆ ಒಟ್ಟು 71 ಕಾಮಗಾರಿಗಳ ಕ್ರಿಯಾಯೋಜನೆಗೆ ರೂ.87.45 ಲಕ್ಷ ರೂಪಾಯಿಗಳ ಕಾರ್ಯಾದೇಶ ನೀಡಿದ್ದಾರೆ.
ಈ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳ ಕಡತವನ್ನು ಮಾಹಿತಿ ಹಕ್ಕು ಅಧಿನಿಯಮದ ಅಡಿಯಲ್ಲಿ ಪಡೆದು, ಪರಿಶೀಲನೆ ಮಾಡಿ ನೋಡಿದಾಗ ಬರ ನಿವಾರಣೆಗೆ ತುರ್ತು ಕುಡಿಯುವ ನೀರು ಯೋಜನೆ ಅಡಿಯಲ್ಲಿ
ಬಿಡುಗಡೆಯಾದ ರೂ.87.45 ಲಕ್ಷ ಅನುದಾನವನ್ನು ಸಂಪೂರ್ಣವಾಗಿ ದುರ್ಬಳಕೆ ಮಾಡಿಕೊಂಡು ಅಕ್ರಮ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿರುತ್ತದೆ. 17-12-2024 ರಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸದರಿ ಪ್ರಕರಣವನ್ನು ತನಿಖೆ ಮಾಡಿ, ಒಂದು ತಿಂಗಳ ಒಳಗಾಗಿ ತನಿಖಾ ವರದಿ ನೀಡುವಂತೆ ಮಾಹಿತಿ ಕೋರಲಾಗಿತ್ತು.
ಆದರೆ ಒಂದು ತಿಂಗಳು ಮುಕ್ತಾಯವಾದರೂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ತನಿಖೆ ಕೈಗೊಂಡ ಬಗ್ಗೆಯಾಗಲೀ
ಯಾವುದೇ ಮಾಹಿತಿಯನ್ನು ನೀಡಿರುವುದಿಲ್ಲ. ಆದ್ದರಿಂದ ಲೋಕಾಯುಕ್ತ ನ್ಯಾಯಾಧೀಕರಣಕ್ಕೆ ದಾವಣಗೆರೆ ತಾಲ್ಲೂಕಿಗೆ ಬಿಡುಗಡೆಯಾದ ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿನ ಲೋಪದೋಷಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ವಂಚನೆ ಎಸಗಿದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ, ದುರ್ಬಳಕೆ ಮಾಡಿಕೊಂಡ ಅನುದಾನ ಸಂಬಂಧಿಸಿದ ಅಧಿಕಾರಿಗಳಿಂದ ಹಿಂಪಡೆಯುವಂತೆ ದೂರು ನೀಡಲಾಗಿದೆ ಎಂದು ದಾಖಲೆ ಸಹಿತ ವಿವರ ನೀಡಿದರು.
ಹಾಗೆಯೇ ದಾವಣಗೆರೆ ತಾಲ್ಲೂಕು ಪಂಚಾಯಿತಿಯ 2022-
23ನೇ ಸಾಲಿನ ಅನಿರ್ಭಂದಿತ ಅನುದಾನಕ್ಕೆ ಸಂಬಂಧಿಸಿದಂತೆ ನಡೆಸಿದ ಖರೀದಿ ವ್ಯವಹಾರದಲ್ಲಿ ತಾಲ್ಲೂಕು ಪಂಚಾಯಿತಿಯ ಕಾರ್ಯಾದೇಶಕ್ಕೂ ಮುನ್ನವೇ ಜಿ.ಎಸ್.ಟಿ ಬಿಲ್ಲುಗಳನ್ನು ಪಡೆದಿರುವ ಪ್ರಕರಣವನ್ನು ತನಿಖೆಗೆ ಒಳಪಡಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತಗೆ ದೂರು ನೀಡಲಾಗಿದೆ ಎಂದರು.
ದಾವಣಗೆರೆಯ ಜಿಲ್ಲಾ ಪಂಚಾಯಿತಿ ಕಛೇರಿಯು ಜಿಲ್ಲಾ ವ್ಯಾಪ್ತಿಯ ಎಲ್ಲಾ ಅಧೀನ ಕಛೇರಿಗಳಿಗೆ ಮಾದರಿಯಾಗಿರಬೇಕು. ಆದರೆ
ಜಿಲ್ಲಾ ಪಂಚಾಯಿತಿ ಕಛೇರಿಯಲ್ಲಿಯೇ ಸಾಕಷ್ಟು ವೈಫಲ್ಯಗಳು ಎದ್ದು ಕಾಣುತ್ತಿದ್ದು, ಇದರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಛೇರಿಗಳ ಸ್ಥಿತಿಗತಿ ಹೇಗೆ ಎಂಬ ಪ್ರಶ್ನೆ ಎದುರಾಗಿದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ದಾವಣಗೆರೆ ಜಿಲ್ಲಾ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಹಕಾರ ಸಂಘ ನಿಗಮ ಸ್ಥಾಪನೆ ಹೊರಗುತ್ತಿಗೆ ನೌಕರರಿಂದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/06/application_invitation_job_hostel_suddidina.jpg)
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ನಗರ ಗ್ರಂಥಾಲಯ ಪ್ರಾಧಿಕಾರಕ್ಕೆ ರೂ.1.99 ಕೋಟಿ
![](https://suddidina.com/wp-content/uploads/2024/10/Davangere_logo_suddidina.jpg)
ಸುದ್ದಿದಿನ,ದಾವಣಗೆರೆ:ಬರುವ ಆರ್ಥಿಕ ವರ್ಷಕ್ಕೆ ನಗರ ಗ್ರಂಥಾಲಯ ಪ್ರಾಧಿಕಾರಕ್ಕೆ ರೂ.1,99,80000 ಗಳ ಬಜೆಟ್ ನೀಡಿ ಮಹಾಪೌರರು ಹಾಗೂ ನಗರ ಗ್ರಂಥಾಲಯ ಪ್ರಾಧಿಕಾರದ ಅಧ್ಯಕ್ಷರಾದ ಕೆ. ಚಮನ್ಸಾಬ್ ಅನುಮೋದನೆ ನೀಡಿದ್ದಾರೆ ಎಂದು ನಗರ ಮುಖ್ಯ ಗ್ರಂಥಾಲಯಾಧಿಕಾರಿ ಪಿ.ಆರ್.ತಿಪ್ಪೇಸ್ವಾಮಿ ತಿಳಿಸಿದ್ದಾರೆ.
ಮಂಗಳವಾರ (ಫೆ.18) ರಂದು ನಗರ ಕೇಂದ್ರ ಗ್ರಂಥಾಲಯ ಉಪನಿರ್ದೇಶಕರ ಕಚೇರಿಯಲ್ಲಿ ಆಯೋಜಿಸಲಾಗಿದ್ದ 2025-26 ನೇ ಸಾಲಿನ ಆಯವ್ಯಯ ಸಭೆಯಲ್ಲಿ ಬಜೆಟ್ಗೆ ಅನುಮೋದನೆ ನೀಡಲಾಯಿತು. ದೇವರಾಜ ಅರಸ್ ಬಡಾವಣೆ ಗ್ರಂಥಾಲಯದ ವಿಸ್ತರಣೆ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಯ ಮೂಲಕ ನಿರ್ವಹಿಸಲು ಅನುಮೋದನೆ ನೀಡಿದರು. ಬಡಾವಣೆ ಪೊಲೀಸ್ ಠಾಣೆ ಎದುರಿಗಿರುವ ಸಿಲ್ವರ್ ಜ್ಯುಬಿಲಿ ಶಾಖಾ ಗ್ರಂಥಾಲಯಕ್ಕೆ ಓದುಗರ ಅನುಕೂಲಕ್ಕೆ ಬೋರ್ ವೆಲ್ ಕೊರೆಸಲು ಅನುಮೋದನೆ ನೀಡಿದ್ದಲ್ಲದೇ ಸ್ಥಳದಲ್ಲಿಯೇ ಆಯುಕ್ತರಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಸಭೆಯಲ್ಲಿ ಪರಿಷತ್ ಕಾರ್ಯದರ್ಶಿ ಶ್ರೀನಿವಾಸ ಎಸ್., ದ.ರಾ.ಮ ವಿಜ್ಞಾನ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ರೂಪಶ್ರೀ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಗೋವಿಂದರಾಜು ಎಲ್, ರಾಜನಹಳ್ಳಿ ಸೀತಮ್ಮ ಬಾಲಕೀಯರ ಪ್ರೌಡಶಾಲೆಯ ಮುಖ್ಯೋಪಾದ್ಯಾಯರಾದ ಮಂಜಪ್ಪ ಎ.ಆರ್ ಹಾಗೂ ಗ್ರಂಥಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ಗ್ರಾಮೀಣ ಅಂಚೆ ಸೇವಕರ ನೇಮಕಾತಿಗಾಗಿ ಅರ್ಜಿ ಆಹ್ವಾನ
![](https://suddidina.com/wp-content/uploads/2024/07/application_suddidina_new.jpg)
ಸುದ್ದಿದಿನ,ದಾವಣಗೆರೆ:ಅಂಚೆ ಇಲಾಖೆಯಲ್ಲಿ ಗ್ರಾಮೀಣ ಅಂಚೆ ಸೇವಕರ ನೇಮಕಾತಿ ಸಂಬಂಧ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವೆಬ್ಸೈಟ್ www.indiapostgdsonline.gov.in ನಲ್ಲಿ ಮಾರ್ಚ್ 3 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಎಲ್ಲಾ ಹುದ್ದೆಗಳಿಗೆ 10ನೇ ತರಗತಿ ತೇರ್ಗಡೆ ಕಡ್ಡಾಯ, ಇಂಗ್ಲೀಷ್ ಮತ್ತು ಗಣಿತದಲ್ಲಿ ಉತ್ತೀರ್ಣ ಅಂಕಗಳೊಂದಿಗೆ 10ನೇ ತರಗತಿಯಲ್ಲಿ, ಕನ್ನಡವನ್ನು ಒಂದು ಭಾಷೆಯಾಗಿ ಅಧ್ಯಯನ ಮಾಡಿರಬೇಕು. 18 ರಿಂದ 40 ವರ್ಷ ವಯೋಮಾನದವರಾಗಿರಬೇಕು.
ಹೆಚ್ಚಿನ ಮಾಹಿಗಾಗಿ ಸಮೀಪದ ಯಾವುದೇ ಅಂಚೆ ಕಚೇರಿಯನ್ನು ಅಥವಾ ಮೇಲೆ ತಿಳಿಸಿದ ವೆಬ್ಸೈಟ್ ಲಿಂಕ್ನ್ನು ಸಂಪರ್ಕಿಸಲು ಅಂಚೆ ಅಧೀಕ್ಷರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ3 days ago
ಕವಿತೆ | ನಾನೊಲಿದೆನಯ್ಯಾ
-
ದಿನದ ಸುದ್ದಿ6 days ago
ಜಿಎಂ ಡಿಪ್ಲೋಮೋ ಕಾಲೇಜಿನ 44 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆ
-
ದಿನದ ಸುದ್ದಿ5 days ago
ತುಂಬಿದ ಕೊಡ ತುಳುಕಿತಲೇ ಪರಾಕ್..!
-
ದಿನದ ಸುದ್ದಿ4 days ago
ಜನಸಿರಿ ಫೌಂಡೇಶನ್ ವತಿಯಿಂದ ಕವಿಗಳ ಕಲರವ
-
ದಿನದ ಸುದ್ದಿ2 days ago
ಮಾರ್ಚ್ 3 ರಂದು ವಿಧಾನಮಂಡಲ ಅಧಿವೇಶನ; 7 ರಂದು ಬಜೆಟ್ ಮಂಡನೆಗೆ ಸರ್ಕಾರ ನಿರ್ಧಾರ
-
ದಿನದ ಸುದ್ದಿ2 days ago
ಉತ್ಸವಗಳ ಹೆಸರಲ್ಲಿ ಮೌಢ್ಯ ತೊರೆಯಬೇಕು : ಈಶ್ವರಾನಂದಪುರಿ ಸ್ವಾಮೀಜಿ
-
ದಿನದ ಸುದ್ದಿ2 days ago
ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
-
ದಿನದ ಸುದ್ದಿ15 hours ago
ಗ್ರಾಮೀಣ ಅಂಚೆ ಸೇವಕರ ನೇಮಕಾತಿಗಾಗಿ ಅರ್ಜಿ ಆಹ್ವಾನ