Connect with us

ದಿನದ ಸುದ್ದಿ

ಮೈಕ್ರೋ ಫೈನಾನ್ಸ್ ಕಿರುಕುಳ ನೀಡಿದಲ್ಲಿ ಎಫ್.ಐ.ಆರ್ ದಾಖಲಿಸಿ : ಡಿಸಿ ಗಂಗಾಧರಸ್ವಾಮಿ.ಜಿ.ಎಂ ಸೂಚನೆ

Published

on

ಸುದ್ದಿದಿನ,ದಾವಣಗೆರೆ:ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್‌ಐಆರ್ ದಾಖಲಿಸುವಂತೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸೂಚಿಸಿದರು.

ಗುರುವಾರ (ಜ.30) ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಕಿರುಹಣಕಾಸು ಸಂಸ್ಥೆಗಳು, ಬ್ಯಾಂಕೇತರ ಹಣಕಾಸು ಸಂಸ್ಥೆಗಳು, ಸಾಲ ವಿತರಣೆ ಮತ್ತು ಮರುಪಾವತಿ ಪ್ರಕ್ರಿಯೆಗಳಲ್ಲಿ ಕೈಗೊಳ್ಳುವ ಕ್ರಮಗಳ ಕುರಿತು ಸಲಹೆ ಮತ್ತು ಸೂಚನೆಗಳ ಕುರಿತು ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡಿದರು. ಮೈಕ್ರೋ ಫೈನಾನ್ಸ್ ಕಂಪನಿಗಳು ನ್ಯಾಯಬದ್ಧವಾಗಿ ವ್ಯವಹರಿಸಲಿ, ಆದರೆ ಕಿರುಕುಳ ಮರುಕಳಿಸಿದರೆ ಸ್ವಯಂ ಹಿತಾಸಕ್ತಿಯಿಂದ ಎಫ್‌ಐಆರ್ ದಾಖಲಿಸುವಂತೆ ತಿಳಿಸಿದರು.

ಸಾಲವನ್ನು ನೀಡುವಾಗ ಸಾಲ ಪಡೆಯುವ ವ್ಯಕ್ತಿಯ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯವನ್ನು ಪರಿಗಣಿಸಬೇಕು. ಮಾಸಿಕ ಒಟ್ಟು ಆದಾಯದ ಶೇ 50 ರಷ್ಟು ಮೊತ್ತವನ್ನು ಮಾತ್ರ ಸಾಲ ಮರುಪಾವತಿ ಸಾಮರ್ಥ್ಯ ಎಂದು ಪರಿಗಣಿಸಬೇಕು. ವ್ಯಕ್ತಿಯು ಬೇರೆಯ ಮೂಲಗಳಿಂದ ಈಗಾಗಲೇ ಪಡೆದಿರುವ ಸಾಲದ ಮರುಪಾವತಿ ಕಂತಿನ ಮೊತ್ತವು. ಆದಾಯದ ಮೂಲಕ್ಕಿಂತ ಶೇ. 50 ರಷ್ಟು ಮೀರುತ್ತಿದ್ದರೆ, ಅಂತಹ ವ್ಯಕ್ತಿಗೆ ಸಾಲ ನೀಡುವಂತಿಲ್ಲ. ಒಂದೊಮ್ಮೆ ನೀಡದರೆ, ಅದು ಮೈಕ್ರೋ ಪೈನಾನ್ಸ್ ಕಂಪನಿ ಕಡೆಯಿಂದ ಆದ ಲೋಪ ಎಂದು ಹೇಳಲಾಗುವುದು. ಜನರಿಗೆ ಅವರ ಅಗತ್ಯಕ್ಕಿಂತ ಹೆಚ್ಚಾಗಿ ಸಾಲವನ್ನು ನೀಡುತ್ತಿದ್ದಾರೆ. ಸಾಲ ಮರುಪಾವತಿಲು ನಿಮ್ಮ ಚೌಕಟ್ಟುನ್ನು ಮೀರಿ ಅವರಿಗೆ ತೊಂದರೆ ನೀಡುತ್ತಿದ್ದಿರಿ. ಇದರ ಬಗ್ಗೆ ಪ್ರಕರಣ ದಾಖಲು ಮಾಡಲಾಗುವುದು. ಗ್ರಾಮೀಣ ಭಾಗದ ಜನರಿಗೆ ಸಾಲದ ಅವಶ್ಯಕತೆ ತುಂಬಾ ಇರುವುದರಿಂದ ಆರ್.ಬಿ.ಐ ನಿಯಮಾನುಸಾರ ಸಾಲ ನೀಡಿ, ಅವರ ಅಗತ್ಯಕ್ಕೆ ತಕ್ಕಂತೆ ಸಾಲ ನೀಡಬೇಕು ಎಂದರು.

ಸಾರ್ವಜನಿಕರಿಗೆ ನಿಮ್ಮ ಪೈನಾನ್ಸ್ ಕಂಪನಿಯ ಬಡ್ಡಿ ಎಷ್ಟು ಅಂತ ತಿಳಿಸಿ, ಮೈಕ್ರೋ ಫೈನಾನ್ಸ್ 2 ಲಕ್ಷ ರೂ ವರೆಗೆ ಮಾತ್ರ ಸಾಲ ನೀಡಲು ಅವಕಾಶವಿದೆ. ಸಾಲ ನೀಡುವ ಸಂಧರ್ಭದಲ್ಲಿ ಅರ್ಜಿ ಹಾಗೂ ಷರತ್ತುಗಳು ಕನ್ನಡದಲ್ಲಿರಬೇಕು. ಸಾಲ ಮತ್ತು ಬಾಕಿ ವಸೂಲಾತಿ ಸಂದರ್ಭದಲ್ಲಿ ಸಾಲ ಪಡೆದ ವ್ಯಕ್ತಿಯ ಕುಟುಂಬದ ಯಾವ ವ್ಯಕ್ತಿಗಳನ್ನು ಕೆವೈಸಿ ಕೇಳುವಂತಿಲ್ಲ. ಬಾಕಿ ಪಾವತಿ ಮಾಡಿ ಎಂದು ಒತ್ತಾಯಿಸುವಂತಿಲ್ಲ. ಅತ್ಯಂತ ಕಡಿಮೆ ಮೊತ್ತದ ಸಾಲವಾದರೂ ವಿಮೆ ಮಾಡಿಸಬೇಕು. ಸಾಲ ಪಡೆದ ವ್ಯಕ್ತಿಯು ಮೃತಪಟ್ಟಲ್ಲಿ ವಿಮೆಯ ಮೂಲಕ ಸಾಲದ ಮೊತ್ತವನ್ನು ಪಡೆಯಬೇಕು. ಬಡ್ಡಿ ದರ ಗರಿಷ್ಠ ಶೇ.18 ರಷ್ಟು ಮಾತ್ರ, ಇದಕ್ಕಿಂತ ಹೆಚ್ಚಿನ ಬಡ್ಡಿದರ ವಸೂಲಿ ಮಾಡುವಂತಿಲ್ಲ.

ವಸೂಲಿ ಸಿಬ್ಬಂದಿ ಬೆದರಿಕೆ ಹಾಕಬಾರದು, ಬೈಗುಳ-ಅವಾಚ್ಯ ಶಬ್ದಗಳ ಬಳಕೆ ಮಾಡಬಾರದು. ಸಾಲ ಪಡೆದವರಿಗೆ ಪದೇ ಪದೇ ಕರೆ ಮಾಡಬಾರದು. ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯ ಒಳಗೆ ಮಾತ್ರ ಕರೆ ಮಾಡಬೇಕು. ಸಾಲ ಪಡೆದ ವ್ಯಕ್ತಿಯ ಕುಟುಂಬದವರು, ಸಂಬಂಧಿಕರು, ಸ್ನೇಹಿತರು ಮತ್ತು ಸಹದ್ಯೋಗಿಗಳಿಗೆ ಕರೆ ಮಾಡುವಂತಿಲ್ಲ. ಸಾಲ ಪಡೆದವರ ಹೆಸರು ಮತ್ತು ವಿವರಗಳನ್ನು ಯಾವುದೇ ಕಾರಣಕ್ಕೂ ಸಾರ್ವಜನಿಕವಾಗಿ ಪ್ರದರ್ಶಿಸುವಂತಿಲ್ಲ. ಸಾಲ ಪಡೆದ ಕುಟುಂಬದವರ ಮೇಲೆ ಹಲ್ಲೆ ನಡೆಸುವಂತಿಲ್ಲ. ಯಾವುದೇ ರೀತಿಯ ಕಿರುಕುಳ ನೀಡುವಂತಿಲ್ಲ. ಗೌರವಕ್ಕೆ ಧಕ್ಕೆ ತರುವಂತಹ ಯಾವುದೇ ಕೃತ್ಯವನ್ನು ಎಸಗುವಂತಿಲ್ಲ. ಸಾಲ ಪಡೆದವರ ಆಸ್ತಿ-ಸ್ವತ್ತುಗಳಿಗೆ ಹಾನಿ ಮಾಡುವಂತಿಲ್ಲ. ಬಾಕಿ ಪಾವತಿ ಮಾಡದೇ ಇದ್ದಾಗ ಎದುರಾಗಬಹುದಾದ ಪರಿಸ್ಥಿತಿಯ ಬಗ್ಗೆ ಸುಳ್ಳು ಮಾಹಿತಿ ನೀಡಬಾರದು. ತಡವಾಗಿ ಕಂತು ಪಾವತಿಸಿದ್ದಾರೆ ಎಂಬ ಕಾರಣಕ್ಕೆ ಅವರಿಗೆ ಬಡ್ಡಿ ಹಾಕುವಂತಿಲ್ಲ. ಸಾಲ ವಸೂಲಿಗೆ ರೌಡಿಗಳನ್ನು ಬಿಟ್ಟು ದಬ್ಬಾಳಿಕೆ ಮಾಡುವಂತಿಲ್ಲ. ಆರ್.ಬಿ.ಐ ನಿಯಾಮಾನುಸಾರ ಕ್ರಮ ಕೈಗೊಳ್ಳಬೇಕು ಎಂದರು. ಫೆನಾನ್ಸ್ ಕಂಪನಿಯವರು ಯಾವುದೇ ಕಾರಣಕ್ಕೂ ಆಧಾರ್ ಕಾರ್ಡ್ ತೆಗೆದುಕೊಳ್ಳಬಾರದು. ಪಾನ್ ಬ್ರೋಕರ‍್ಸ್ ತಮ್ಮ ಅಂಗಡಿಗಳ ಮುಂದೆ ಸಿಸಿಟಿವಿ ಹಾಕಿಸಿ ನಿಮ್ಮಿಂದಲೂ ಜನರಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಜಗಳೂರು, ಮಾಯಕೊಂಡ, ಹೊನ್ನಾಳಿಯಿಂದ ಸಾಕಷ್ಟು ದೂರುಗಳು ಬಂದಿರುತ್ತವೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿಯನ್ನು ಸ್ಥಾಪಿಸಲಾಗಿರುತ್ತದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ಮಾತಾನಾಡಿ, ರಾಜ್ಯದೆಲ್ಲೆಡೆ ಮೈಕ್ರೋ ಫೈನಾನ್ಸ್ ಕಿರುಕುಳ ಮಿತಿಮೀರಿದೆ. ಸಾಕಷ್ಟು ಜನ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ರೈತರು, ಕಾರ್ಮಿಕರು ಚಿಕ್ಕ ಅತಿ ಚಿಕ್ಕ ವ್ಯಾಪಾರಿಗಳು, ಬೀದಿ ಬದಿ ವ್ಯಾಪಾರಿಗಳು ಸಾಲ ತೆಗೆದುಕೊಂಡಿದ್ದಾರೆ. ಕಿರುಹಣಕಾಸು ಸಂಸ್ಥೆಗಳು ಮತ್ತು ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಸಾಲ ವಿತರಣೆ ಮತ್ತು ಮರಪಾವತಿಯಲ್ಲಿ ಗ್ರಾಹಕರನ್ನು ಹಾಗೂ ಸಿಬ್ಬಂದಿಗಳನ್ನು ಗೌರವದಿಂದ ನೋಡಿಕೊಳ್ಳಬೇಕು ಎಂದರು.

ಕಂತು ಕಟ್ಟಲು ತಪ್ಪಿದ ಗ್ರಾಹಕರೊಂದಿಗೆ ವ್ಯವಹರಿಸಲು ಆರ್.ಬಿ.ಐ ನಿರ್ದೇಶಗಳನ್ನು ಪಾಲಿಸುವುದು, ಗ್ರಾಹಕ ಸ್ನೇಹಿ ಮತ್ತು ನ್ಯಾಯಸಮ್ಮತವಾಗಿರಬೇಕು. ನೀವು ಸೂಕ್ತವಲ್ಲದ ಸಮಯದಲ್ಲಿ ಗ್ರಾಹಕರನ್ನು ಸಂಪರ್ಕ ಮಾಡುವುದಾಗಲಿ ಅಥವಾ ಸಾಲ ವಸೂಲಾತಿ ಮಾಡಬಾರದು. ಅವರ ಮನೆಯಲ್ಲಿ ಮೃತ್ಯು ಸಂಭವಿಸಿದಾಗ, ಅನಾರೋಗ್ಯದ ಸಂದರ್ಭದಲ್ಲಿ ಸಾಲ ಮಸೂಲಾತಿ ಮಾಡಬಾರದು. ಪ್ರತಿಯೊಂದು ಕಿರುಹಣಕಾಸು ಸಂಸ್ಥೆಯೂ ಸಾಲಗಾರರೊಂದಿಗೆ ಸಂವಹನ ಮಾರ್ಗದರ್ಶನ ನೀಡಬೇಕೆಂದರು.

ಲೀಡ್ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಸಿದ್ದಾರ್ಥ ಆಚಾರ್ಯ, ಡಿವೈಎಸ್‌ಪಿ ಬಸವರಾಜ, ಚನ್ನಗಿರಿ ಉಪವಿಭಾಗದ ಎಎಸ್ಪಿ ಶ್ಯಾಮ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending