Connect with us

ದಿನದ ಸುದ್ದಿ

ಅಂತಾರಾಷ್ಟ್ರೀಯ, ನವೋದಯ ಮಟ್ಟದ ಉತ್ಕೃಷ್ಟ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿಯೂ ಸಿಗಬೇಕು: ಜಿ. ಬಿ. ವಿನಯ್ ಕುಮಾರ್

Published

on

ಸುದ್ದಿದಿನ,ದಾವಣಗೆರೆ:ಅಂತಾರಾಷ್ಟ್ರೀಯ, ನವೋದಯ ಶಾಲೆಗಳಲ್ಲಿ ಸಿಗುವಂಥ ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿಯೂ ಸಿಗುವಂತಾಗಬೇಕು ಎಂಬ ದೊಡ್ಡ ಕನಸು ಹೊಂದಿದ್ದೇನೆ. ಇದಕ್ಕಾಗಿ ಸಾಕಷ್ಟು ಪ್ರಯತ್ನಪಡುತ್ತಿದ್ದೇನೆ. ನಿಮ್ಮೆಲ್ಲರ ಸಹಕಾರ ಬೇಕು ಎಂದು ಇನ್ ಸೈಟ್ಸ್ ಸಂಸ್ಥೆ ಸಂಸ್ಥಾಪಕ ಜಿ. ಬಿ. ವಿನಯ್ ಕುಮಾರ್ ಆಶಯ ವ್ಯಕ್ತಪಡಿಸಿದರು.

ದಾವಣಗೆರೆ ತಾಲೂಕಿನ ಕಕ್ಕರಗೊಳ್ಳದಲ್ಲಿ ಏರ್ಪಡಿಸಿದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದ ಪ್ರತಿಯೊಂದು ಸರ್ಕಾರಿ ಶಾಲೆಗಳು ಮೇಲ್ದರ್ಜೆಗೇರಬೇಕು. ಸರ್ಕಾರವು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಪ್ರದೇಶದ ಮಕ್ಕಳಿಗೂ ಉತ್ಕೃಷ್ಟದ ಶಿಕ್ಷಣ ಸಿಗಬೇಕು ಎಂದು ಹೇಳಿದರು.

ಉನ್ನತ ಸ್ಥಾನಕ್ಕೆ ಹೋಗಬೇಕೆಂಬುದು ಪ್ರತಿಷ್ಠೆಯ ವಿಚಾರ ಅಲ್ಲ. ದೊಡ್ಡಮಟ್ಟದಲ್ಲಿ ಜನರಿಗೆ ಸೇವೆ ಮಾಡಲು. ಕರ್ನಾಟಕದಲ್ಲಿ ಇನ್ ಸೈಟ್ಸ್ ಸಂಸ್ಥೆಯ ಆರು ವಿದ್ಯಾರ್ಥಿಗಳು ಡಿಸಿ, ಸಿಇಒ ಆಗಿದ್ದಾರೆ. ಎಸ್ಪಿ, ಎಎಎಸ್ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಮ್ಮ ಸಂಸ್ಥೆಗೆ ಐಎಎಸ್, ಐಪಿಎಸ್ ತಯಾರಿಸುವ ಶಕ್ತಿ ಇದೆ. ಜೀವನ ಸಾರ್ಥಕಗೊಳಿಸಬೇಕಾದರೆ ಉನ್ನತ ಸ್ಥಾನಕ್ಕೆ ಹೋಗಬೇಕು. ಇದಕ್ಕೆ ಸತತ ಪರಿಶ್ರಮ, ಅಧ್ಯಯನ, ಪುಸ್ತಕ ಓದುವ ಹವ್ಯಾಸ, ಸಂಸ್ಕಾರ ಬೇಕು ಎಂದು ಕಿವಿಮಾತು ಹೇಳಿದರು.

ಪೋಷಕರು ಯಾವುದೇ ಕಾರಣಕ್ಕೂ ಮನೆಯಲ್ಲಿನ ಸಮಸ್ಯೆಗಳ ಬಗ್ಗೆ ಮಕ್ಕಳ ಹೇಳಬೇಡಿ. ಬಡತನವಿದೆ, ಹಣವಿಲ್ಲ ಎನ್ನಬೇಡಿ. ಸಾಧ್ಯವಾದಷ್ಟು ಒಳ್ಳೆಯ ಶಿಕ್ಷಣ ನೀಡುವ ಕಡೆಗೆ ಗಮನ ಕೊಡಿ. ಪಠ್ಯ ಶಿಕ್ಷಣ ಮಾತ್ರವಲ್ಲ, ಪಠ್ಯೇತರ ಶಿಕ್ಷಣದತ್ತಲೂ ಕಾಳಜಿ ವಹಿಸಿ. ಪುಸ್ತಕ ಓದುವ ಹವ್ಯಾಸ ನೀವೂ ಬೆಳೆಸಿಕೊಳ್ಳಿ. ಮಕ್ಕಳಲ್ಲಿಯೂ ರೂಢಿಸಿ. ಆಗ ಭಾರೀ ಬದಲಾವಣೆ ಕಾಣಲು ಸಾಧ್ಯವಾಗುತ್ತದೆ. ನಾನು ಹತ್ತನೇ ತರಗತಿಯವರೆಗೆ ಸಾಮಾನ್ಯ ವಿದ್ಯಾರ್ಥಿ. ಐಎಎಸ್ ಎರಡು ಅಂಕಗಳಲ್ಲಿ ತಪ್ಪಿ ಹೋಯಿತು. ಪಿಡಿಒ ಆಗಿದ್ದೆ, ಕೆಎಎಸ್ ಪಾಸಾಗಿದ್ದೆ. ಸೋತಾಗ ಸುಮ್ಮನೆ ಕೂರುತ್ತಿರಲಿಲ್ಲ. ದೊಡ್ಡ ಪ್ರಯತ್ನ ಮಾಡುತ್ತಿದೆ. ಸೋತಾಗ ಕೆಲವರು ಸುಮ್ಮನಾಗಿಬಿಡುತ್ತಾರೆ. ಆದ್ರೆ, ಸುಮ್ಮನಾಗದೇ ದೊಡ್ಡ ಕನಸು ಕಾಣಬೇಕು. ಆಗ ಜೀವನದಲ್ಲಿ ಅಂದುಕೊಂಡಿದ್ದನ್ನು
ಸಾಧಿಸಲು ಸಾಧ್ಯವಾಗುತ್ತದೆ ಎಂದು ಪ್ರತಿಪಾದಿಸಿದರು.

ಮಕ್ಕಳಿಗೆ ಬೈಯ್ಯಬೇಡಿ. ಜೀವನದಲ್ಲಿ ಸವಾಲು ಎದುರಿಸುವ ಗುಣ ಬೆಳೆಸಿ. ಭವಿಷ್ಯದಲ್ಲಿ ದಿಟ್ಟ ನಿರ್ಧಾರ ತೆಗೆದುಕೊಳ್ಳುವ ಧೈರ್ಯ ಅವರಲ್ಲಿ ಬರುತ್ತದೆ. ಪ್ರತಿಯೊಬ್ಬರೂ ಮೊದಲ ಪ್ರಯತ್ನದಲ್ಲಿ ಯಶಸ್ವಿ ಆಗುವುದು ಕಡಿಮೆ. ಸೋತಾಗ ಧೈರ್ಯ ತುಂಬಿ. ಮರಳಿ ಪ್ರಯತ್ನವ ಮಾಡು ಎಂಬ ಧೈರ್ಯ ಹೇಳಿ. ಡಾಕ್ಟರ್, ಎಂಜಿನಿಯರ್ ಆಗಿ ಎಂಬ ಒತ್ತಡ ಹೇರಬೇಡಿ. ಒಳ್ಳೆಯ ವ್ಯಕ್ತಿಯಾಗು, ಒಳ್ಳೆಯ ಮಾನವನಾಗು ಎಂಬ ಸಂದೇಶ ಹೇಳಿಕೊಡಿ. ಮಾನಸಿಕ ಸ್ಥೈರ್ಯ, ಆತ್ಮವಿಶ್ವಾಸ ಮೂಡಿಸಿದರೆ ಭವಿಷ್ಯದಲ್ಲಿ ಅತ್ಯುತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳುತ್ತಾರೆ ಎಂದು ತಿಳಿಸಿದರು.

ಶಾಲೆಯ ಮುಖ್ಯೋಪಾಧ್ಯಾಯರು ಹಲವು ಸಮಸ್ಯೆಗಳಿದ್ದು, ಮನವಿ ನೀಡಿದ್ದಾರೆ. ಶಾಲೆಗೆ ಸುಣ್ಣಬಣ್ಣ ಬಳಿಸುವುದು, ಸ್ಮಾರ್ಟ್ ಕ್ಲಾಸ್, ಧ್ವನಿವರ್ಧಕ ಬದಲಾವಣೆ, ಆಟದ ಮೈದಾನ ಸೇರಿದಂತೆ ಇತರೆ ಬೇಡಿಕೆ ನೀಡಿದ್ದಾರೆ. ನಾನು ಎರಡು ಪ್ರಮುಖ ವಿಚಾರಗಳನ್ನು ಆಯ್ಕೆ ಮಾಡಿಕೊಂಡು ಆದಷ್ಟು ಬೇಗ ಈಡೇರಿಸುತ್ತೇನೆ. ಮಕ್ಕಳಿಗೆ ಕೈಯಲ್ಲಾದಷ್ಟು ಸಹಾಯ ಮಾಡುತ್ತೇನೆ. ಮಕ್ಕಳು ದೊಡ್ಡ ಕನಸು ಕಾಣುವುದನ್ನು ರೂಢಿಸಿಕೊಳ್ಳಬೇಕು. ಕಕ್ಕರಗೊಳ್ಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಯಾವುದೇ ಶಾಲೆಗೂ ಕಡಿಮೆ ಇಲ್ಲ ಎಂಬಂತೆ ವಾರ್ಷಿಕೋತ್ಸವ ಆಚರಣೆ ಮಾಡುತ್ತಿರುವುದು ಸಂತಸದ ವಿಚಾರ ಎಂದು ಹೇಳಿದರು.

ಮಕ್ಕಳೂ ಚಿಕ್ಕ ವಯಸ್ಸಿನಿಂದಲೇ ಐಎಎಸ್, ಐಪಿಎಸ್, ದೊಡ್ಡ ಉದ್ಯಮಿಗಳಾಗುತ್ತೇವೆ ಎಂಬ ಕನಸು ಕಂಡರೆ ಮುಂದೊಂದು ದಿನ ನನಸಾಗುವ ಸಮಯ ಬರುತ್ತದೆ. ಇಂದಿನಿಂದಲೇ ದೃಢ ನಿಶ್ಚಯ ಮಾಡಿಕೊಳ್ಳಿ. ಸತತವಾಗಿ ಪ್ರಯತ್ನ ಮಾಡಿ. ಕಠಿಣ ಅಭ್ಯಾಸದಲ್ಲಿ ತೊಡಗಿಸಿಕೊಂಡು ಹೆಚ್ಚಾಗಿ ಪುಸ್ತಕ ಅಧ್ಯಯನ ಮಾಡಿದರೆ ಕಷ್ಟವಾಗದು ಎಂದು ಜಿ. ಬಿ. ವಿನಯ್ ಕುಮಾರ್ ಅಭಿಪ್ರಾಯಪಟ್ಟರು.

ಆವರಗೊಳ್ಳದ ಪುರವರ್ಗ ಹಿರೇಮಠ ಶ್ರೀಕ್ಷೇತ್ರದ ಶ್ರೀ ಓಂಕಾರೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಸನಗೌಡ್ರು ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ಲೋಕೇಶ್ ಒಡೆಯರ್, ಕೆ. ಜಿ. ಶಾಂತರಾಜ್, ಪುಷ್ಪ ಕೆ. ಎನ್. ಸದಾಶಿವಪ್ಪ, ಆಶಾ ಸಿದ್ದೇಶ್, ಗುತ್ಯಪ್ಪ, ಆರ್. ಡಿ. ಕುಲಕರ್ಣಿ, ಹದಡಿ ಯಲ್ಲಪ್ಪ, ಹಂಪನೂರು ಪಾಲಾಕ್ಷಪ್ಪ, ಅಂಗಡಿ ಚಮನ್ ಸಾಬ್, ಮುಸ್ತು ಎಸ್. ಮತ್ತಿತರರು ಹಾಜರಿದ್ದರು.

ಸೋತಿದ್ದೇನೆ, ಧೃತಿಗೆಟ್ಟಿಲ್ಲ

ಲೋಕಸಭೆ ಚುನಾವಣೆಯಲ್ಲಿ ಸೋತಿರಬಹುದು. ಹಾಗೆಂದ ಮಾತ್ರಕ್ಕೆ ಧೃತಿಗೆಟ್ಟಿಲ್ಲ. ಮುಂದೊಂದು ದಿನ ಎಂಎಲ್ ಆ ಆಗಬಹುದು. ಸಚಿವರಾಗಬಹುದು. ಆಗುತ್ತೋ ಇಲ್ಲವೋ ಗೊತ್ತಿಲ್ಲ. ಇದು ಸಾಧ್ಯವಾಗುತ್ತದೆ ಎಂಬ ಆತ್ಮವಿಶ್ವಾಸ ಇದೆ. ಶಿಕ್ಷಣ ಸಚಿವರಾಗಬೇಕೆಂಬ ಆಸೆ ಇದೆ. ಎಲ್ಲವನ್ನೂ ಕಾಲವೇ ನಿರ್ಧರಿಸಲಿದೆ ಎಂದು ಜಿ. ಬಿ. ವಿನಯ್ ಕುಮಾರ್ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

Published

on

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.

ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ  2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆಶ್ರಯ ಯೋಜನೆ – ಆವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್‌ ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ

Published

on

ಗಿರೀಶ್ ಮುತ್ತು

ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು

ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.

ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.

ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್‌ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.

ಗರಿಕೆ ರಸದ ಪ್ರಯೋಜನಗಳು

1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.

2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ

4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.

5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್‌ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.

6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.

ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?

*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.

* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.

* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.

* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.

* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending