ದಿನದ ಸುದ್ದಿ
ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಆರಂಭಿಸಿ : ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯ
ಸುದ್ದಿದಿನ,ದಾವಣಗೆರೆ: ಕ್ಷೇತ್ರದ ವ್ಯಾಪ್ತಿಯ ಕಲ್ಪನಹಳ್ಳಿ ಬಳಿ ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಸ್ಥಾಪಿಸಲು ಭೂಮಿ ಖರೀದಿಸಿದ್ದು, ಈ ಬಗ್ಗೆ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೂಡಲೇ ಅನುದಾನ ಬಿಡುಗಡೆ ಮಾಡಬೇಕೆಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯಿಸಿದರು.
ವಿಧಾನಸಭೆಯಲ್ಲಿ ಬುಧವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಿವಮೊಗ್ಗ ಹಾಲು ಒಕ್ಕೂಟದಿಂದ ಬೇರ್ಪಡಿಸಿ ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಒಳಗೊಂಡ ಮೆಗಾ ಡೈರಿ ಆರಂಭಿಸಲು ನನ್ನ ಕ್ಷೇತ್ರದ ವ್ಯಾಪ್ತಿಯ ಕಲ್ಪನಹಳ್ಳಿಯಲ್ಲಿ ಭೂಮಿ ಖರೀದಿಸಿದ್ದೇವೆ. ಸರ್ಕಾರ ಕೂಡಲೇ ಅನುದಾನ ಬಿಡುಗಡೆ ಮಾಡಿ ಡೈರಿ ಆರಂಭಿಸಿದರೆ ಈ ಭಾಗದ ರೈತರು ಆರ್ಥಿಕವಾಗಿ ಸಬಲರಾಗಲಿದ್ದಾರೆ ಎಂದು ಸದನದ ಗಮನ ಸೆಳೆದರು.
ಹೈನುಗಾರಿಕೆಯಲ್ಲಿ ಮಹಿಳೆಯರಿಗೆ ಶೇ.50ರಷ್ಟು ಸಬ್ಸಿಡಿ ಕೊಡುವುದನ್ನು ಶೇ.75ರಷ್ಟು ಹೆಚ್ಚಳ ಮಾಡಿದರೆ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಿ ಉತ್ತಮ ಬದುಕು ಕಟ್ಟಿಕೊಳ್ಳುತ್ತಾರೆ. ಈ ಬಗ್ಗೆ ಸರ್ಕಾರ ಗಮನ ಹರಿಸಬೇಕೆಂದರು.
ಮಧ್ಯ ಕರ್ನಾಟಕದ ಕೇಂದ್ರ ಬಿಂದು, ಹಿಂದುಳಿದ ಜಿಲ್ಲೆ ದಾವಣಗೆರೆ. ಅದರಲ್ಲೂ ಅತೀ ಹಿಂದುಳಿದ ಮೀಸಲು ಕ್ಷೇತ್ರ ಮಾಯಕೊಂಡ. ಸಿರಿಗೆರೆ ತರಳಬಾಳು ಜಗದ್ಗುರುಗಳ ಹೋರಾಟದ ಫಲವಾಗಿ ನನ್ನ ಕ್ಷೇತ್ರದಲ್ಲಿ 22 ಕೆರೆಗಳ ಯೋಜನೆ ಜಾರಿಗೊಂಡು ಎಲ್ ಅಂಡ್ ಟಿ ಕಂಪನಿ ಕಾಮಗಾರಿ ನಡೆಸಿತ್ತು. ಕಳಪೆ ಕಾಮಗಾರಿಯಿಂದ 100 ಹಳ್ಳಿಗಳಿಗೆ ಕುಡಿಯುವ ನೀರು, ನೀರಾವರಿ ಕಲ್ಪಿಸಬೇಕೆಂಬ ಉದ್ದೇಶ ಈಡೇರಿಲ್ಲ. ಪುನಃ ಹೊಸ ಪೈಪ್ಲೈನ್ ಕಾಮಗಾರಿಗೆ ಹಣ ನೀಡಿ ಕಾಮಗಾರಿ ಆರಂಭಿಸುವAತೆ ಈಗಾಗಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಕೂಡಲೇ ಸರ್ಕಾರ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.
ನನ್ನ ಕ್ಷೇತ್ರದಲ್ಲಿ ಹೆಚ್ಚು ಗುಡ್ಡಗಾಡು ಪ್ರದೇಶ ಹೊಂದಿದ್ದು, ಈ ಪ್ರದೇಶಗಳಲ್ಲಿ ಅತೀ ಹೆಚ್ಚು ಕೆರೆಗಳನ್ನು ನಿರ್ಮಾಣ ಮಾಡಿದರೆ ಜನಜಾನುವಾರುಗಳಿಗೆ ಕುಡಿಯುವ ನೀರು, ಅಂತರ್ಜಲ ಮಟ್ಟ ವೃದ್ಧಿಗೆ ಅನುಕೂಲವಾಗುತ್ತದೆ. ಅಲ್ಲದೇ ಬ್ರಿಟಿಷರು ನಿರ್ಮಿಸಿದ ಕೆರೆ ಇದೆ. ಅದನ್ನು ಜೀರ್ಣೋದ್ಧಾರ ಮಾಡಿದರೆ ಇಡೀ ಪಕ್ಷಿ ಸಂಕುಲ, ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸಬಹುದು ಎಂದು ಸದನ ಗಮನ ಸೆಳೆದರು.
ಎಸ್ಸಿ-ಎಸ್ಟಿ ಅಭಿವೃದ್ಧಿ ನಿಗಮಗಳಿಗೆ ಅನೇಕ ಸೌಲಭ್ಯ ಒದಗಿಸಲು ಅನುದಾನದ ಕೊರತೆ ಇದೆ. ಹೆಚ್ಚಿನ ಅನುದಾನ ನೀಡಬೇಕು. ಎಸ್ಸಿ-ಎಸ್ಟಿ ಸಮುದಾಯ ಆರ್ಥಿಕವಾಗಿ ಸಬಲರಾಗಲು ಭೂಒಡೆತನ ಯೋಜನೆ ಜಾರಿಗೊಳಿಸಿದ್ದು, ಕ್ಷೇತ್ರಕ್ಕೆ ಕೇವಲ ಒಂದೇ ಕೊಟ್ಟರೆ ಸಾಧ್ಯವಾಗುವುದಿಲ್ಲ. ಇದಕ್ಕೆ ಹೆಚ್ಚು ಒತ್ತು ಕೊಡಬೇಕು. ಖಾಸಗಿ ಕಾಲೇಜುಗಳಲ್ಲಿ ಡಿಪ್ಲೊಮಾ, ನರ್ಸಿಂಗ್, ಪ್ಯಾರಾ ಮೆಡಿಕಲ್ ಸೇರಿದಂತೆ ವೃತ್ತಿಪರ ಕೋರ್ಸ್ನಲ್ಲಿ ಅಭ್ಯಾಸ ಮಾಡುವ ಎಸ್ಸಿ-ಎಸ್ಟಿ ಮಕ್ಕಳಿಗೆ 2013-18ರಲ್ಲಿ ಹಾಸ್ಟೆಲ್ ಸೌಲಭ್ಯ ಇತ್ತು, ಈಗ ಇಲ್ಲ. ಕೂಡಲೇ ಈ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿದರು.
ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಪೌರ ಕಾರ್ಮಿಕರಿಗೆ ಹಗಲು ದರೋಡೆ ಮಾಡಲಾಗುತ್ತಿದೆ. ಹೊರ ಗುತ್ತಿಗೆ ತೆಗೆದು ನೇರವಾಗಿ ನೇಮಕಾತಿ ಮಾಡಿಕೊಂಡರೆ ಅವರ ಬದುಕು ಉಜ್ವಲವಾಗುತ್ತದೆ. ಶೋಷಿತ ಸಮುದಾಯಗಳಿಗೆ ತ್ವರಿತ ನ್ಯಾಯ ಒದಗಿಸಲು ಎಸ್ಸಿ-ಎಸ್ಟಿ ದೌರ್ಜನ್ಯ ಕಾಯ್ದೆಯಡಿ ರಾಜ್ಯದಲ್ಲಿ 33 ವಿಶೇಷ ಪೊಲೀಸ್ ಠಾಣೆ ತೆರೆಯಲು ಕ್ರಮ, ಅಲ್ಲದೇ ಎಸ್ಸಿ-ಎಸ್ಟಿ ಗುತ್ತಿಗೆದಾರರಿಗೆ 2 ಕೋಟಿ ಮೀಸಲು, ಅದರಂತೆ ಒಬಿಸಿ, ಅಲ್ಪಸಂಖ್ಯಾತರಿಗೂ 2 ಕೋಟಿ ಮೀಸಲಿಡುವ ಮೂಲಕ ರೈತರು, ಕಾಯಕ ಜೀವಿಗಳು, ವಿಶೇಷವಾಗಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಎಸ್ಸಿಪಿ-ಎಸ್ಟಿಪಿ ಯೋಜನೆಯಡಿ 48,018 ಕೋಟಿ ರೂ. ಬಜೆಟ್ನಲ್ಲಿ ಮೀಸಲಿಟ್ಟಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದರು.
- ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಿ
ಮಳೆಗಾಲದಲ್ಲಿ ತುಂಗಾ ಜಲಾಯಶದಿಂದ ಭದ್ರಾ ಜಲಾಶಯಕ್ಕೆ ನೀರು ತುಂಬಿಸಿ ಅಪರ್ ಭದ್ರಾ ಯೋಜನೆ ನೀರು ನೀಡುವ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಿದರೆ ಭದ್ರಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ರೈತರಿಗೆ ಅನುಕೂಲವಾಗಲಿದೆ. ಇಲ್ಲದಿದ್ದರೆ, ನಮ್ಮ ಭಾಗದ ರೈತರಿಗೆ ಅನಾನುಕೂಲವಾಗಲಿದೆ. ಕೂಡಲೇ ಸರ್ಕಾರ ಈ ಯೋಜನೆಯ ಕಾಮಗಾರಿ ಪೂರ್ಣಗೊಳಿಸಬೇಕು. ರಾಗಿ, ಭತ್ತ, ತೊಗರಿ ಬೆಂಬಲ ಬೆಲೆಯಡಿ ಖರೀದಿಸಿದಂತೆ ಮೆಕ್ಕೆಜೋಳವನ್ನು ಬೆಂಬಲ ಬೆಲೆಯಡಿ ಖರೀದಿಸಬೇಕೆಂದು ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


