Connect with us

ದಿನದ ಸುದ್ದಿ

19 ವರ್ಷಗಳ ನಂತರ ಹಳೇ ಕುಂದುವಾಡದಲ್ಲಿ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ : ಜಗಮಗಿಸುತ್ತಿದೆ ಗ್ರಾಮ

Published

on

ಸುದ್ದಿದಿನ,ದಾವಣಗೆರೆ: ಬೇಸಿಗೆ ಬಂತೆಂದರೆ ಸಾಕು ಜಾತ್ರಾ ಮಹೋತ್ಸವಗಳ ಸಂಭ್ರಮ ಪ್ರಾರಂಭವಾಗುತ್ತದೆ. ಆಯಾ ಗ್ರಾಮದ, ಗ್ರಾಮದೇವತೆಗಳ ಆರಾಧನೆಯನ್ನು ಜಾತ್ರಾ ಮೂಲಕ ವೈಭವದಿಂದ ಆಚರಿಸುವ ಪರಿ ಎಲ್ಲೆಡೆ ನಡೆಯುತ್ತದೆ.

ಅದೇ ರೀತಿ ದಾವಣಗೆರೆಯ ಹಳೇಕುಂದುವಾಡದಲ್ಲಿ ಗ್ರಾಮದೇವತೆ ಆದಿಪರಾಶಕ್ತಿಯಾದ ಶ್ರೀ ಮಾರಿಕಾಂಬಾ ಜಾತ್ರೆಯು ಏಪ್ರಿಲ್ 1 ರಂದು ಘಟಸ್ಥಾಪನೆ ಮಾಡುವುದರೊಂದಿಗೆ ಆರಂಭವಾಗಿದೆ. ಕಳೆದ 2007 ರಲ್ಲಿ ನಡೆದ ದೇವಿಯ ಜಾತ್ರೆ, 19 ವರ್ಷಗಳ ನಂತರ ಈ ಬಾರಿ ನಡೆಸುತ್ತಿರುವುದು ವಿಶೇಷವಾಗಿದೆ. ಪ್ರತಿ ದಿನ ದೇವಿಗೆ ವಿಶೇಷ ಪೂಜೆ, ಅಲಂಕಾರ ಮಾಡಲಾಗುತ್ತಿದ್ದು, ಭಕ್ತರು ದೇವಿಯನ್ನು ಭಕ್ತಿಯಿಂದ ಕಣ್ತುಂಬಿಕೊಳ್ಳುತ್ತಿದ್ದಾರೆ. ಜಾತ್ರೆಯ ಎಲ್ಲ ಧಾರ್ಮಿಕ ಕಾರ್ಯಕ್ರಮಗಳು ಏಪ್ರಿಲ್ 12 ರವರೆಗೂ ಜರುಗಲಿದೆ ಎಂದು ಮಾರಿಕಾಂಬ ಜಾತ್ರಾ ಸಮಿತಿ ತಿಳಿಸಿದೆ.

19 ವರ್ಷಗಳ ನಂತರ ನಡೆಯುತ್ತಿರುವ ಮಾರಿಕಾಂಬಾ ಜಾತ್ರೆಗೆ ಹಳೇ ಕುಂದುವಾಡ ಗ್ರಾಮವು ಮದುವಣಗಿತ್ತಿಯಂತೆ ಸಿಂಗಾರಗೊಂಡಿದ್ದು, ಗ್ರಾಮಸ್ಥರಲ್ಲಿ ಹುರುಪು ದುಪ್ಪಟ್ಟಾಗಿದೆ. ಊರಿನ ರಸ್ತೆಗಳು, ಮನೆ ಮನೆಗಳು ತಳಿರು ತೋರಣಗಳಿಂದ ಸಿಂಗಾರಗೊಂಡಿದ್ದು, ಮಾರಿಕಾಂಬಾ ದೇವಸ್ಥಾನದ ದ್ವಾರ ಬಾಗಿಲ ಅಲಂಕಾರಗೊಂಡು, ಎಲ್ಲರನ್ನು ಆಕರ್ಷಿಸುತ್ತಿದೆ. ಐದು ಮಂಟಪಗಳು ವೈಭವಯುತವಾಗಿ ಸಿಂಗಾರಗೊಂಡಿದೆ. ಪ್ರಮುಖ ರಸ್ತೆಗಳು ಬಣ್ಣ ಬಣ್ಣದ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಊರಿನ ಮುಖ್ಯ ರಸ್ತೆಗಳು ಜಗಮಗಿಸುತ್ತಿವೆ, ರಸ್ತೆಯ ತುಂಬೆಲ್ಲಾ ಹಬ್ಬಕ್ಕೆ ಶುಭ ಕೋರುವ ಫ್ಲೆಕ್ಸ್, ಬ್ಯಾನರ್ ಗಳು ರಾರಾಜಿಸುತ್ತಿವೆ.

ಜಾತ್ರೆಯ ಹಿನ್ನಲೆ ಕುರಿ ಕಾಳಗ ಆಯೋಜಿಸಲಾಗಿತ್ತು. ಊರ ತುಂಬೆಲ್ಲಾ ನೆಂಟರು-ಇಷ್ಟರು ಬಂದಿಳಿದಿದ್ದು, ಸಸ್ಯಹಾರಿಗಳಿಗೆ ಮೃಷ್ಟಾನ್ನ ಭೋಜನಕ್ಕೆ ತಯಾರಿ ನಡೆದಿದ್ದರೆ, ಬಾಡೂಟಕ್ಕೆ ಸಾವಿರಾರು ಕುರಿಗಳನ್ನು ಖರೀದಿ ಮಾಡಲಾಗಿದೆ. ಊರಿಗೆ ಊರೇ ಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿದೆ.

ಏ.8 ಮಂಗಳವಾರ ರಾತ್ರಿ ಚೌತಮನೆಯಿಂದ ಅಮ್ಮನ ದೇವಸ್ಥಾಕ್ಕೆ “ದೊಡ್ಡ ಎಡೆ” ಒಯ್ಯುವುದು ವಿಶೇಷ. ನಂತರ ಶ್ರೀ ಮಾರಿಕಂಬ “ರಥೋತ್ಸವವು” ಬಹು ವೈಭವದಿಂದ ಸಾಗಿ ಆಮ್ಮನ ಕಟ್ಟೆಯಲ್ಲಿ ಶ್ರೀ ದೇವಿಯ ಪ್ರತಿಷ್ಠಾಪನೆ, ಬೆಳಗಿನಜಾವ ಶ್ರೀ ದೇವಿಯ ಘಟ ಪೂಜೆ, ಮಹಾ ಪೂಜೆ ಹಾಗೂ ಗ್ರಾಮ ಪ್ರದಕ್ಷಿಣೆ, ಕಾರ್ಯಕ್ರಮಗಳು ಮಹಾಮಂಗಳಾರತಿಯೊಂದಿಗೆ ನಡೆಯುವುದು ವಾಡಿಕೆಯಾಗಿದೆ.

ಜಾತ್ರಾ ಪ್ರಯುಕ್ತ ಬುಧವಾರ ಶ್ರೀ ದೇವಿಗೆ ಗ್ರಾಮದ ಭಕ್ತರಿಂದ ಉಡಿ ತುಂಬಿಸುವುದು ಹಾಗೂ ಭಕ್ತರ ವಿವಿಧ ಸೇವಾ ಕಾರ್ಯಕ್ರಮ ನಡೆಯಲಿದ್ದು, ಮಧ್ಯಾಹ್ನ 1 ರಿಂದ 6 ಘಂಟೆಯವರೆಗೆ ಪರಂಪರಾಗತ “ಹಾಸ್ಯಗಾರರಿಂದ” ಮನೋರಂಜನೆ ಕಾರ್ಯಕ್ರಮ ನಡೆಯಲಿದೆ.

ಏ. 10 ಗುರುವಾರ ಶ್ರೀದೇವಿಗೆ ಪೂಜೆ, ಮಹಾಮಂಗಳಾರತಿ, ಭಕ್ತರ ಸೇವಾ ಕಾರ್ಯಗಳು, ಮನೋರಂಜನೆ ಕಾರ್ಯಕ್ರಮ, ನಂತರ ಮಧ್ಯಾಹ್ನ 3 ರಿಂದ 6 ಘಂಟೆಯವರೆಗೆ “ಪೋತರಾಜ” ನಿಂದ ವಿವಿಧ ಕಾರ್ಯಕ್ರಮ ನಡೆಯಲಿದೆ. ನಂತರ “ರಸಮಂಜರಿ” ಕಾರ್ಯಕ್ರಮಗಳು ಜರುಗಲಿದೆ.

ಏ.11 ರಂದು ಶ್ರೀ ದೇವಿಗೆ ಪೂಜೆ, ಮಹಾಮಂಗಳಾರತಿ, ಮನೋರಂಜನೆ ಕಾರ್ಯಕ್ರಮ ನಡೆದು, ಸಾಯಂಕಾಲ `ಹುಲುಸು’ ಹೊಡೆಯಲಾಗುವುದು. ಏ.12 ರಂದು ಶ್ರೀ ದೇವಿಯ ‘ಮೋಚು” ವ ಕಾರ್ಯಕ್ರಮದೊಂದಿಗೆ (ಬಳೆ ತೆಗೆಯುವುದು) ಶ್ರೀ ಮಾರಿಕಾಂಬದೇವಿ ಜಾತ್ರೆಯ ಕಾರ್ಯಕ್ರಮ ಮುಕ್ತಾಯಗೊಳ್ಳುವುದು ಎಂದು ಶ್ರೀ ಮಾರಿಕಾಂಬದೇವಿ ಜಾತ್ರಾ ಉತ್ಸವ ಸಮಿತಿಯ ಸದಸ್ಯರು ಹಾಗೂ ಹಳೇಕುಂದುವಾಡ ಗ್ರಾಮಸ್ಥರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

Published

on

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.

ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ  2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆಶ್ರಯ ಯೋಜನೆ – ಆವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್‌ ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ

Published

on

ಗಿರೀಶ್ ಮುತ್ತು

ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು

ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.

ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.

ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್‌ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.

ಗರಿಕೆ ರಸದ ಪ್ರಯೋಜನಗಳು

1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.

2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ

4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.

5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್‌ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.

6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.

ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?

*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.

* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.

* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.

* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.

* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending