ದಿನದ ಸುದ್ದಿ
ತುಂಗಭದ್ರಾ ಬೋರ್ಡ್ ಅಧಿಕಾರಿಗಳ ಕಳ್ಳಾಟ : ಕಬ್ಬಿಣ ಕಳ್ಳತನ ಆರೋಪದಲ್ಲಿ ಕಣ್ಣಮುಚ್ಚಾಲೆ ಆಟ ; ಶಾಸಕರ ಹೆಸರು ಪ್ರಸ್ತಾಪ
- ಗಿರೀಶ್ ಕುಮಾರ್ ಗೌಡ, ಬಳ್ಳಾರಿ
ಸುದ್ದಿದಿನ,ಬಳ್ಳಾರಿ:ಲಕ್ಷಾಂತರ ರೂಪಾಯಿ ಬೆಳೆ ಬಾಳುವ ಬ್ರಿಡ್ಜ್ ನ ಕಬ್ಬಿಣ ಕಳವು ಠಾಣೆಗೆ ದೂರು ನೀಡಲು ಬಂದ ತುಂಗಭದ್ರಾ ಬೋರ್ಡ್ ಅಧಿಕಾರಿಗಳು, ಪೊಲೀಸರ ಮೇಲೆ ಗೂಬೆ ಕೂಡಿಸಿ ಪರಾರಿಯಾಗಿರುವ ದುರ್ಘಟನೆ ಗಣಿನಾಡು ಬಳ್ಳಾರಿ ನಗರದಲ್ಲಿ ನಡೆದಿದೆ.
ಬಳ್ಳಾರಿ ನಗರದ ಬೆಳಗಲ್ ರಸ್ತೆಯ ಡಿಸಿ ನಗರ ಪಕ್ಕದಲ್ಲಿರುವ ಒಂದು ಸಾರ್ವಜನಿಕರ ಬ್ರಿಡ್ಜ್ ಅನ್ನು ಈ ಹಿಂದೆ ಪಾಲಿಕೆಯಿಂದ ಅಗಲಿಕಾರಣ ಮಾಡಲಾಗಿದೆ ಎಂದು ತಿಳಿದಬಂದಿತ್ತು. ಈ ಬ್ರಿಡ್ಜ್ ತುಂಗಭದ್ರಾ ನಾಲೆಯ ಮೇಲೆ ಹಾರಿಹೋಗುವ ಬ್ರಿಡ್ಜ್ ಕಿಲೋಮೀಟರ್ 86ನಲ್ಲಿ ಬರುತ್ತದೆ ಈ ಬ್ರಿಡ್ಜ್ ಇರುವ ಕಬ್ಬಿಣವನ್ನು ಕಾಮಗಾರಿ ಮಾಡುವ ಸಂದರ್ಭದಲ್ಲಿ ಅಂದಾಜು 25 ರಿಂದ 30 ಟನ್ ಹೊಂದಿದೆ.
ಗಡಾರಿಗಳನ್ನು ತೆಗೆದು ಸೈಡಿಗೆ ಇಡಲಾಯಿತು. ಕೆಲವು ವರ್ಷಗಳದಿಂದ ಅಲ್ಲೇ ಇದ್ದ ಕಾರಣ ಅವುಗಳನ್ನು ತುಂಗಭದ್ರ ಬೋರ್ಡ್ ನ ಅಧಿಕಾರಿಗಳಾಗಲಿ , ಗೋದಾಮಿಗೆ ಹಾಕಿಕೊಳ್ಳದೆ ಸ್ಥಳದಲ್ಲೇ ಬಿಡಲಾಗಿತ್ತು, ಬಾರಿ ದೊಡ್ಡ ಮಟ್ಟದ ಕಬ್ಬಿಣ ಆಗಿರುವ ಹಿನ್ನೆಲೆ ಅದನ್ನು ಕ್ರೇನ್ ಮತ್ತು ಲಾರಿಗಳ ಮೂಲಕ ಮಾತ್ರವೇ ತೆಗೆದುಹಾಕಲು ಸಾಧ್ಯವಾಗುತ್ತದೆ. ಏಪ್ರಿಲ್ ಹನ್ನೊಂದು ಈ ಕಬ್ಬಿಣವನ್ನು ಎರಡು ಕ್ರೆನ್ ಮೂಲಕ ಲಾರಿನಲ್ಲಿ ರಾತ್ರಿ 12 ಗಂಟೆ ಸುಮಾರಿಗೆ ಕಳವು ಮಾಡಿದ್ದಾರೆ ಎಂದು ಎಚ್.ಎಲ್.ಸಿ ತುಂಗಭದ್ರಾ ಬೋರ್ಡ್ ನ ಅಧಿಕಾರಿಗಳಾಗಿರುವ ಕೆಂಚಪ್ಪ, ಚೇತನ್ ಮುಂತಾದವರು ಭಾನುವಾರ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದರು.
ಹಲವಾರು ಗಂಟೆಗಳಿಂದ ಠಾಣೆಯಲ್ಲಿ ಕಾಯುತ್ತಿದ್ದೇವೆ ಪೊಲೀಸ ಅಧಿಕಾರಿಗಳು ಯಾರು ? ನಮ್ಮ ದೂರನ್ನು ತೆಗೆದುಕೊಳ್ಳುತ್ತಿಲ್ಲವೆಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದನ್ನು ಚುಚ್ಚಿಕೊಂಡ ಪೊಲೀಸ್ ಅಧಿಕಾರಿಗಳು ದೂರು ದಾಖಲಿಸಿಕೊಳ್ಳಲು ಠಾಣೆಯಿಂದ ಹೋಗಿದ್ದ ಅಧಿಕಾರಿಗಳಿಗೆ ಅನೇಕ ಬಾರಿ ಪೋನ್ ಕಾಲ್ ಗಳನ್ನು ಮಾಡಿದ್ದಾರೆ. ದೂರ ನೀಡಲು ಬರಲೇ ಇಲ್ಲದೇ ಇರೋದ್ ದುರಂತ.
ರಾಜಕೀಯ ವ್ಯಕ್ತಿ ಮಧ್ಯ ಪ್ರವೇಶ
ಒಬ್ಬ ಪ್ರಭಾವಿ ರಾಜಕಾರಣಿ ಆಪ್ತ ಎನ್ನುವ ಶಶಿ ಈ ಕಬ್ಬಿಣ ಕಳುವು ಮಾಡಿಕೊಂಡು ಹೋಗಿದ್ದಾರೆ ಎಂದು ತುಂಗಭದ್ರಾ ಬೋರ್ಡ್ ಅಧಿಕಾರಿಗಳು ಪೊಲೀಸ್ ಠಾಣೆಗೆ ದೂರ ನೀಡಲು ಬರೆದುಕೊಂಡು ಬಂದಿರುವ ಪತ್ರದಲ್ಲಿದೆ. ಈ ಕಬ್ಬಿಣವನ್ನು ಕಟ್ ಮಾಡಲು ಬಂದಿರುವ ಗ್ಯಾಸ್ ವೆಲ್ಡರ್ ಬಷೀರ್ ಅವರ ಮೇಲೆ ದೂರ ನೀಡಿದ್ದಾರೆ ಪತ್ರದಲ್ಲಿ, ಬಷೀರ್ ಅವರನ್ನು ತಂದು ಭಾನುವಾರ ಗ್ರಾಮೀಣ ಠಾಣೆಯಲ್ಲಿ ಕುಡಿಸಲಾಗಿತ್ತು. ಆದರೆ ಪೊಲೀಸರು ಏನ್ ? ಮಾಡಿದ್ದಾರೆ ಎನ್ನುವುದು. ಅಂದಾಜು ಈ ಕಬ್ಬಿಣ 8 ರಿಂದ 10 ಲಕ್ಷ ಮೌಲ್ಯವಾಗಿರುತ್ತದೆ ಎಂದು ಬೋರ್ಡ್ ಅಧಿಕಾರಿಗಳು ತಿಳಿಸಿದ್ದಾರೆ.
ಅಧಿಕಾರಗಳು ದೂರ ನೀಡಲು ಠಾಣೆಗೆ ಬಂದಿದ್ದು ಯಾಕೆ ?
ಪೊಲೀಸರು ದೂರು ತೆಗೆದುಕೊಂಡಿಲ್ಲ ಎಂದು ಸುಳ್ಳು ಹೇಳಿಕೆ ನೀಡಿ ಪರಾರಿ ಆಗಿದ್ದು ಏಕೆ ? ಎನ್ನುವುದು ಬೋರ್ಡ್ ಅಧಿಕಾರಿಗಳ ನಡೆ ಅನುಮಾನ ಉಂಟು ಮಾಡಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬಿಣ ಕಳುವು ಆಗಿದ್ದ ವಿಷಯ ಬೋರ್ಡ್ ನ ಕೆಂಚಪ್ಪ,ಚೇತನ್ ಇವರು ಮೇಲಿನ ಎಸ್,ಇ ಅವರಿಗೆ ಯಾವುದೇ ಮಾಹಿತಿ ನೀಡಲಿಲ್ಲ ಅನ್ನೋದು ಬೋಡ್ ಎಸ್.ಇ ಆಗಿರುವ ನಾಯಕ ಅವರು ದೂರವಾಣಿ ಮೂಲಕ ತಿಳಿಸಿದ್ದಾರೆ , ಇದರ ಪೂರ್ತಿ ಇವರುಗಳನ್ನು ಪಡೆದುಕೊಳ್ಳುತ್ತೇನೆ ಎಂದರು.
ಲಕ್ಷಾಂತರ ರೂಪಾಯಿ ಕಬ್ಬಿಣ ಕಳವು ಆಗಿದೆ ಎಂದು ಠಾಣೆ ಗೆ ಬಂದು ಡ್ರಾಮಾ ಮಾಡಿರುವ ತುಂಗಭದ್ರಾ ಬೋರ್ಡಿನ ಎಚ್,ಎಲ್, ಸಿ.ವಿಭಾಗದ ಅಧಿಕಾರಿಗಳ ಮೇಲೆ ಅನುಮಾನ ಮೂಡಿಸಿದೆ. ಇಲ್ಲವೇ ಪ್ರಭಾವಿ ರಾಜಕೀಯ ವ್ಯಕ್ತಿ ಭಯ ಬಿದ್ದು ಠಾಣೆಗೆ ದೂರು ನೀಡದೆ ಪಾರಾರಿಯಾದರೇ ಎನ್ನುವ ಅನುಮಾನ ಸಾರ್ವಜನಿಕರನ್ನು ಕಾಡುತ್ತದೆ. ಇಷ್ಟು ದೊಡ್ಡ ಮಟ್ಟದ ಕಬ್ಬಿಣ ಕಳವು ಹಿಂದೆ ಅಧಿಕಾರಿಗಳ ಪಾತ್ರ ಇರಬಹುದು ಅನ್ನುವು ಇಲ್ಲಿನ ಸ್ಥಳೀಯರ ಗುಸು, ಗುಸು ಮಾಹಿತಿ ಆಗಿದೆ.
ಕಳ್ಳರ ಜೊತೆಗೆ ಕಳ್ಳರಾದ ತುಂಗಭದ್ರಾ ಬೋರ್ಡ್ ಸರ್ಕಾರಿ ಅಧಿಕಾರಿಗಳು
ಈ ಸ್ಟೋರಿಯಲ್ಲಿ ಬೋರ್ಡ್ ಅಧಿಕಾರಿಗಳು ಮತ್ತೊಂದು ಡ್ರಾಮಾ ಸೃಷ್ಟಿಸಿ ಕಳುವಾಗಿರುವ ಕಬ್ಬಿಣ 30 ರಿಂ 40 ಟನ್ ಸೋಮವಾರ 11 ಗಂಟೆಗೆಲ್ಲ ತುಂಗಭದ್ರಾ ಬೋರ್ಡ್ ಗೋದಾಮಿಗೆ ತಂದು ಹಾಕುತ್ತಾರೆ ಎಂದು ಕಳುವು ಮಾಡಿರುವರ ಮೂಲಕ ತಿಳಿದಿದೆ ಎಂದರು.
ಹಿಂದೆ ರಾಜಕಾರಣಿಗಳ ಹಸ್ತಕ್ಷೇಪವಿದೆ ಎಂದು ಕೆಲವರ ಮುಂದೆ ದೂರವಾಣಿಗಳಲ್ಲಿ ಮಾತನಾಡಿದ್ದಾರೆ ಅಧಿಕಾರಿಗಳು ಎನ್ನುವದು ಕೂಡ ಕೇಳಿಬಂದಿದೆ. ಇದೇ ತಿಂಗಳು 11ರಂದು ಕಬ್ಬಿಣ ಕಳೆವಾಗುತ್ತದೆ 13 ರಂದು ಠಾಣೆಗೆ ದೂರು ನೀಡಲು ಬರುತ್ತಾರೆ ಅಷ್ಟರಲ್ಲಿ ಕಬ್ಬಿಣ ವಾಪಸ್ ಬರುತ್ತದೆ ಎಂದು ಅಧಿಕಾರಿಗಳು ಆಡಿರುವ ಡ್ರಾಮಾ ಮೇಲು ನೋಟಕ್ಕೆ ಕಂಡು ಬರುತ್ತದೆ, ಈ ಕಬ್ಬಿಣದಲ್ಲಿ ಅಧಿಕಾರಿಗಳಿಗೆ ಏನಾದ್ರೂ ಕೈವಾಡ ವಿತ್ತಾ ಇವರಿಗೆ ತಲುಪ ಬೇಕಾಗಿರುವ ಹಣ ತಲುಪಿಲ್ಲವೇ ಇದರಿಂದ ಠಾಣೆಗೆ ದೂರು ನೀಡಲು ಬಂದಂತೆ ಡ್ರಾಮ ಮಾಡಿ ಪೊಲೀಸ್ ರ ಇಲಾಖೆ ಮೇಲೆ ಗೂಬೆ ಕೂಡಿಸಿರುವುದು ಅಪಹಾಸ್ಯಕ್ಕೆ ಗುರಿಯಾದರು. ಇದರ ಅಸಲಿ ಕಥೆ ಏನು ಅನ್ನವುದು ಬಹಿರಂಗ ಆಗಬೇಕಾಗಿದೆ.
ಇಲ್ಲಿ ತುಂಗಭದ್ರಾ ಬೋರ್ಡ್ ಅಧಿಕಾರಿಗಳೆ ಕಳ್ಳರ ಆಟವಾಡಿದ್ದಾರೆ ಎನ್ನುವ ಅನುಮಾನ ಮೂಡಿದೆ ಎನ್ನುವುದು ಸಾರ್ವಜನಿಕರ ಪ್ರಶ್ನೆ ಆಗಿಯಾಗಿ ಉಳಿದಿದೆ.
- ಜನರು ಕಳ್ಳತನ ಮಾಡಿದ್ರೇ, ಮತ್ತೆ ವಾಪಾಸ್ಸು ತಂದು ಕೊಡುತ್ತೇವೆ ಎಂದರೆ ಪೊಲೀಸರು ಕೇಸ್ ಮಾಡದೇ ಇರುತ್ತಿರಾ ಎನ್ನುವ ಪ್ರಶ್ನೆ ಜನ ಸಾಮಾನ್ಯರಿಗೆ ಕಾಡುತ್ತದೆ. ಇಲ್ಲಿ ಶಾಸಕರು ಅವರ ಮುಖಂಡರು ಮಧ್ಯ ಪ್ರವೇಶ ಮಾಡಿದಕ್ಕೆ ಕೇಸ್ ಮಾಡಲಿಲ್ಲವೇ ಎನ್ನುವ ಪ್ರಶ್ನೆ ಮೂಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


