Connect with us

ದಿನದ ಸುದ್ದಿ

ಬಳ್ಳಾರಿ | ಶಕ್ತಿ ಯೋಜನೆಯಡಿ 4.52 ಕೋಟಿ ಮಹಿಳೆಯರ ಪ್ರಯಾಣ

Published

on

ಸುದ್ದಿದಿನ,ಬಳ್ಳಾರಿ:ರಾಜ್ಯದ ಮಹಿಳೆಯರ ಸಬಲೀಕರಣದ ಉದ್ದೇಶದಿಂದ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಶಕ್ತಿ ಯೋಜನೆಯಡಿ ಮಹಿಳಾ ವಯಸ್ಕರು ಮತ್ತು ಹೆಣ್ಣು ಮಕ್ಕಳು ಒಳಗೊಂಡು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ನಗರ ಸಾರಿಗೆ ಮತ್ತು ಸಾಮಾನ್ಯ ಬಸ್‌ಗಳಲ್ಲಿ ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸುತ್ತಿದ್ದು, ಈ ಯೋಜನೆಯಡಿ ಬಳ್ಳಾರಿ ಜಿಲ್ಲೆಯಲ್ಲಿ ಇದುವರೆಗೆ (ಮಾರ್ಚ್ ವರೆಗೆ) 4,52,37,755 ಮಹಿಳೆಯರು ಉಚಿತ ಪ್ರಯಾಣದ ಪ್ರಯೋಜನ ಪಡೆದಿದ್ದಾರೆ.

ಶಕ್ತಿ ಯೋಜನೆಯ ಜಾರಿಯಾದ ನಂತರ ಜಿಲ್ಲೆಯಲ್ಲಿ ಮಹಿಳಾ ವಯಸ್ಕರು ಮತ್ತು ಹೆಣ್ಣು ಮಕ್ಕಳಿಗೆ ಉಚಿತ ಪ್ರಯಾಣದ ಒಟ್ಟು ರೂ.167,99,61,992 ಮೊತ್ತದ ಉಚಿತ ಟಿಕೆಟ್‌ಗಳನ್ನು ವಿತರಣೆ ಮಾಡಲಾಗಿದ್ದು, ಈ ಮೊತ್ತವು ಬಳ್ಳಾರಿ ವಿಭಾಗಕ್ಕೆ ಪ್ರಮುಖ ಆದಾಯವಾಗಿದೆ.

ಜಿಲ್ಲೆಯಲ್ಲಿ ಬಳ್ಳಾರಿ-1, ಬಳ್ಳಾರಿ-2, ಬಳ್ಳಾರಿ-3, ಸಿರುಗುಪ್ಪ, ಕುರುಗೋಡು ಮತ್ತು ಸಂಡೂರು ವಿಭಾಗಗಳಿವೆ. ಶಕ್ತಿ ಯೋಜನೆಯಡಿ ಇದುವರೆಗೆ (ಮಾರ್ಚ್ ಅಂತ್ಯದವರೆಗೆ) ಬಳ್ಳಾರಿ-1 ವಿಭಾಗದಲ್ಲಿ 73,55,413 ಮಹಿಳಾ ಪ್ರಯಾಣಿಕರು ಸಂಚಾರ ಮಾಡಿದ್ದು, ಒಟ್ಟು 30,92,36,224 ರೂ. ಮೊತ್ತದ ಟಿಕೇಟ್ ವಿತರಣೆ ಮಾಡಲಾಗಿದೆ. ಬಳ್ಳಾರಿ-2 ವಿಭಾಗದಲ್ಲಿ 71,14,913 ಮಹಿಳಾ ಪ್ರಯಾಣಿಕರು ಸಂಚರಿಸಿದ್ದು, 37,89,38,056 ರೂ. ಮೊತ್ತದ ಟಿಕೇಟ್ ವಿತರಣೆ ಮಾಡಲಾಗಿದೆ.

ಅದೇರೀತಿಯಾಗಿ ಬಳ್ಳಾರಿ-3 ವಿಭಾಗದಲ್ಲಿ 1,05,56,205 ಮಹಿಳಾ ಪ್ರಯಾಣಿಕರು ಸಂಚರಿಸಿದರೆ ಒಟ್ಟು 18,39,41,365 ರೂ. ಮೊತ್ತದ ಟಿಕೇಟ್ ನೀಡಲಾಗಿದೆ. ಸಿರುಗುಪ್ಪ ವಿಭಾಗದ ವ್ಯಾಪ್ತಿಯಲ್ಲಿ 74,18,672 ಮಂದಿ ಮಹಿಳೆಯರು ಸಂಚರಿಸಿದರೆ 31,05,36,366 ರೂ. ಮೊತ್ತದ ಟಿಕೇಟ್ ನೀಡಲಾಗಿದೆ. ಉಳಿದಂತೆ ಕುರುಗೋಡು ವಿಭಾಗದಲ್ಲಿ 43,73,244 ಮಹಿಳಾ ಪ್ರಯಾಣಿಕರು ಸಂಚರಿಸಿದರೆ ರೂ.18,56,36,676 ಮೊತ್ತದ ಟಿಕೇಟ್ ಮತ್ತು ಸಂಡೂರು ವಿಭಾಗದಲ್ಲಿ ಸಂಚರಿಸಿದ 84,19,308 ಮಹಿಳಾ ಪ್ರಯಾಣಿಕರಿಗೆ ರೂ.31,16,73,305 ಮೊತ್ತದ ಟಿಕೇಟ್ ವಿತರಿಸಲಾಗಿದೆ ಎಂದು ನಿಗಮದ ಅಧಿಕಾರಿಗಳು ಹೇಳುತ್ತಾರೆ.

ಶಕ್ತಿ ಯೋಜನೆಯ ಮೂಲಕ ಮಹಿಳೆಯರು ದೂರದ ಪಟ್ಟಣಗಳಿಗೆ ತೆರಳಿ ಹೆಚ್ಚಿನ ಆದಾಯದ ಉದ್ಯೋಗ ಹೊಂದಲು ಸಹಕಾರಿಯಾಗಿರುವುದು ಮಾತ್ರವಲ್ಲದೇ ಹೆಚ್ಚಿನ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿನಿಯರಿಗೆ ತಮ್ಮ ಭವಿಷ್ಯದ ಕನಸುಗಳನ್ನು ನನಸು ಮಾಡಿಕೊಳ್ಳುವ ಅವಕಾಶವೂ ಆಗಿದೆ.

ಅಲ್ಲದೇ ಮಹಿಳೆಯರು ಉದ್ಯೋಗ, ಪ್ರವಾಸ ಮತ್ತಿತರ ಚಟುವಟಿಕೆಗಳನ್ನು ಕೈಗೊಳ್ಳುವುದಕ್ಕೆ ಅನುಕೂಲವಾಗಿರುವುದರ ಜೊತೆಗೆ ಈ ಪ್ರಯಾಣ ವೆಚ್ಚದ ಉಳಿತಾಯದ ಮೊತ್ತವು ದೈನಂದಿನ ಬದುಕಿನಲ್ಲಿನ ಹಲವು ಅವಶ್ಯಕತೆಗಳನ್ನು ಪೂರೈಸಲು ನೆರವಾಗಿದೆ.

ಉಚಿತ ಪ್ರಯಾಣದ ಮೊದಲು ಸಾರಿಗೆಗಾಗಿ ಮಾಡುತ್ತಿದ್ದ ವೆಚ್ಚದ ಮೊತ್ತವು ವಿದ್ಯಾರ್ಥಿನಿಯರಿಗೆ ಕಾಲೇಜಿನ ಶುಲ್ಕ ಭರಿಸಲು, ಪಠ್ಯ ಪುಸ್ತಕ ಖರೀದಿಸಲು ನೆರವಾಗಿದ್ದರೆ, ರಾಜ್ಯದ ಬೇರೆ ಜಿಲ್ಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮತ್ತು ಖಾಸಗಿ ಉದ್ಯೋಗದಲ್ಲಿರುವ ಮಹಿಳೆಯರು ತಮ್ಮ ಕುಟುಂಬಗಳನ್ನು ಮತ್ತು ಪೋಷಕರು ತಮ್ಮ ಮಕ್ಕಳನ್ನು ನಿರಂತರವಾಗಿ ಭೇಟಿ ಮಾಡಿ ನೆಮ್ಮದಿಯ ಜೀವನ ಸಾಗಿಸಲು ನೆರವಾಗಿದೆ.

ದುಡಿಮೆಗಾಗಿ ನಿತ್ಯ ಬಸ್‌ಗಳಲ್ಲಿ ಸಂಚರಿಸುವ ಕಾರ್ಮಿಕ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯದಿಂದ ಅನುಕೂಲವಾಗಿದೆ. ಮಹಿಳಾ ಸಬಲೀಕರಣಕ್ಕೆ ಈ ಯೋಜನೆ ‘ಶಕ್ತಿ’ ತುಂಬಿದೆ.

| ಕಾವೇರಿ, ಕರ್ಚೇಡು ಗ್ರಾಮ, ಬಳ್ಳಾರಿ ತಾಲ್ಲೂಕು

ಶಕ್ತಿ ಯೋಜನೆಯ ಉಚಿತ ಪ್ರಯಾಣದಿಂದಾಗಿ ನನಗೆ ಸಾಕಷ್ಟು ಅನುಕೂಲವಾಗಿದೆ. ನಾನು ಸಂಚರಿಸುವ ನನ್ನ ಪ್ರಯಾಣದ ವೆಚ್ಚ ಉಳಿತಾಯವಾಗಿದೆ. ಅದೇ ಹಣವನ್ನು ಪುಸ್ತಕಗಳನ್ನು ಖರೀದಿಸಲು ಬಳಸಿಕೊಳ್ಳುತ್ತಿದ್ದೇನೆ.”

| ಮಣಿ, ಪ್ರಥಮ ಪಿಯುಸಿ ವಿದ್ಯಾರ್ಥಿನಿ, ತೆಗ್ಗಿನ ಬೂದಿಹಾಳ್ ಗ್ರಾಮ, ಬಳ್ಳಾರಿ ತಾಲ್ಲೂಕು

ಶಕ್ತಿ ಯೋಜನೆಯಿಂದಾಗಿ ಸಾರಿಗೆ ನಿಗಮದ ಬಸ್‌ಗಳಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆ ಅಧಿಕವಾಗಿದ್ದು, ಈ ಹಿಂದೆ ಓಡಾಟ ನಡೆಸುತ್ತಿದ್ದ ಮಾರ್ಗದ ಬಸ್‌ಗಳಲ್ಲಿ ಮೊದಲಿಗಿಂತ ಹೆಚ್ಚಿನ ಆದಾಯ ಬರುತ್ತಿದೆ, ಇದು ನಿಗಮಕ್ಕೆ ಲಾಭದಾಯಕವಾಗಿದೆ. ಶಕ್ತಿ ಯೋಜನೆಯಿಂದಾಗಿ ನಿಗಮದ ಮೂಲಕ ಮಹಿಳಾ ಪ್ರಯಾಣಿಕರಿಗೆ, ಜಿಲ್ಲೆಯ ಸಾರ್ವಜನಿಕರಿಗೆ ಇನ್ನೂ ಹೆಚ್ಚಿನ ಉತ್ತಮ ಸೇವೆ ನೀಡಲು ಸಾಧ್ಯವಾಗಿದೆ ಎಂದು ವಿಭಾಗೀಯ ಅಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.

Continue Reading

Trending