Connect with us

ದಿನದ ಸುದ್ದಿ

ದಾವಣಗೆರೆ | ಸತತ 11 ಗಂಟೆಗಳ ಶಸ್ತ್ರಚಿಕಿತ್ಸೆ ; ಯುವಕನ ಬಾಳಿಗೆ ಬೆಳಕಾದ ಎಸ್‌ಎಸ್‌ ನಾರಾಯಣ ಆಸ್ಪತ್ರೆ ವೈದ್ಯರು

Published

on

ಫೋಟೋ | ಡಾ. ಹನುಮಂತ ನಾಯ್ಕ ಹಾಗೂ ಅವರ ತಂಡ ಗುಣಮುಖವಾದ ರೋಗಿಯೊಂದಿಗೆ

ಸುದ್ದಿದಿನ,ದಾವಣಗೆರೆ: ನಾಲ್ಕು ವರ್ಷಗಳ ಕಾಲ ಪದೇ ಪದೇ ತೀವ್ರವಾದ ಹೊಟ್ಟೆನೋವು, ಜ್ವರ, ಬಳಲಿಕೆಯಿಂದ ನರಳಿದ 26 ವರ್ಷದ ಯುವಕನಿಗೆ ಎಸ್‌ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್‌ನ ವೈದ್ಯರು ಅಕ್ಷರಶಃ ಜೀವದಾನ ಮಾಡಿದ್ದಾರೆ!

ಅಪರೂಪವಾದ, ಅತ್ಯಂತ ಸಂಕೀರ್ಣವಾದ ಲೀವರ್‌ (ಯಕೃತ್ತ)ನ ರಕ್ತದ ಹರಿವಿನ ಸಮಸ್ಯೆಯಾದ ಎಕ್ಸ್‌ಟ್ರಾಹೆಪಾಟಿಕ್ ಪೋರ್ಟಲ್ ವೀನಸ್ ಅಬ್ಸ್ಟ್ರಕ್ಷನ್ (EHPVO) ನಿಂದ ಬಳಲುತ್ತಿದ್ದ ಈ ರೋಗಿಯ ಪ್ರಾಣ ಉಳಿಸಲು, ವೈದ್ಯರು ಬರೋಬ್ಬರಿ 11 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.

ಕಳೆದ ನಾಲ್ಕು ವರ್ಷಗಳಿಂದ ಈ ಯುವಕನಿಗೆ ಹೊಟ್ಟೆ ನೋವು, ಪದೇ ಪದೇ ಬರುವ ಜ್ವರ, ದೇಹದ ನಿಶ್ಶಕ್ತಿ, ಮತ್ತು ಏನನ್ನೂ ತಿನ್ನಲು ಆಗದಿರುವ ಸಮಸ್ಯೆಗಳು ದಿನನಿತ್ಯದ ಸಂಗತಿಯಾಗಿದ್ದವು. ತನ್ನ ರೋಗಕ್ಕೆ ಚಿಕಿತ್ಸೆ ಹುಡುಕಿಕೊಂಡು ಅದೆಷ್ಟೋ ಆಸ್ಪತ್ರೆಗಳಿಗೆ ಅಲೆದರೂ ಪ್ರಯೋಜನವಾಗಿರಲಿಲ್ಲ. ಇತ್ತೀಚೆಗೆ, ಅವನಿಗೆ ಜಾಂಡೀಸ್ ಕಾಣಿಸಿಕೊಂಡು, ಕಣ್ಣುಗಳು ಹಳದಿ ಬಣ್ಣಕ್ಕೆ ತಿರುಗಿ, ಮೈ ನಡುಗುವಿಕೆ ಶುರುವಾಗಿತ್ತು. ಬದುಕಿನ ಆಸೆಯೇ ದೂರವಾಗಿ, ನಿರಂತರ ಆಸ್ಪತ್ರೆ ಭೇಟಿಗಳಿಂದ ಹತಾಶನಾಗಿದ್ದ ಆ ಯುವಕ, ಕೊನೆಗೆ ಎಸ್‌ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್‌ನಲ್ಲಿ ತನ್ನ ಭರವಸೆಯನ್ನು ಕಂಡುಕೊಂಡ.

ಅವರು ಎಸ್‌ಎಸ್ ನಾರಾಯಣ ಹೆಲ್ತ್‌ ಸೂಪರ್ ಸ್ಪೆಷಾಲಿಟಿ ಸೆಂಟರ್‌ಗೆ ಭೇಟಿ ನೀಡಿದಾಗ, ಸರ್ಜಿಕಲ್‌ ಗ್ಯಾಸ್ಟ್ರೋಎಂಟರೋಲಾಜಿಸ್ಟ್‌ ಡಾ. ಆರ್.ಕೆ. ಹನುಮಂತ್ ನಾಯ್ಕ್‌ ನೇತೃತ್ವದ ವೈದ್ಯರ ತಂಡವು ರೋಗಿಯ ಪೋರ್ಟಲ್ ವೇನ್ (ಕರುಳಿನಿಂದ ಯಕೃತ್ತಿಗೆ ರಕ್ತವನ್ನು ಕೊಂಡೊಯ್ಯುವ ಮುಖ್ಯ ರಕ್ತನಾಳ) ಹಳೆಯ ರಕ್ತ ಹೆಪ್ಪುಗಟ್ಟುವಿಕೆಯಿಂದ ರಕ್ತ ಸಂಚಾರ ನಿರ್ಬಂಧವಾಗಿರುವದನ್ನು ಪತ್ತೆಹಚ್ಚಿತು. ಇದರಿಂದಾಗಿ, ರಕ್ತದ ಹರಿವನ್ನು ಮುಂದುವರೆಸಲು ದೇಹವು ಸಣ್ಣ ಬೈಪಾಸ್ ರಕ್ತನಾಳಗಳನ್ನು (ಕಾವರ್ನಸ್ ಟ್ರಾನ್ಸ್‌ಫಾರ್ಮೇಶನ್ ಎಂದು ಕರೆಯಲ್ಪಡುವ ಸ್ಥಿತಿ) ಸೃಷ್ಟಿಸಿತ್ತು. ಆದಾಗ್ಯೂ, ಇದು ಗುಲ್ಮ(Spleen)ದ ಊತ (ಸ್ಪ್ಲೆನೋಮೆಗಾಲಿ), ಪಿತ್ತನಾಳಗಳ ಹಿಗ್ಗುವಿಕೆ ಮತ್ತು ಯಕೃತ್ತಿನ ರಕ್ತನಾಳಗಳಲ್ಲಿ ಅಧಿಕ ಒತ್ತಡಕ್ಕೆ (ಪೋರ್ಟಲ್ ಹೈಪರ್ಟೆನ್ಷನ್) ಕಾರಣವಾಗಿತ್ತು. ಇದು ಹೊಟ್ಟೆ ಮತ್ತು ಪಿತ್ತ ವ್ಯವಸ್ಥೆಯ ಮೇಲೆ ಪರಿಣಾಮ ಬೀರಿ, ರಕ್ತಸ್ರಾವದ ಅಪಾಯಗಳು ಮತ್ತು ಜೀರ್ಣಕ್ರಿಯೆಯ ಸಮಸ್ಯೆಗಳಿಗೆ ಕಾರಣವಾಗಿತ್ತು.

ಇದಕ್ಕೆ ಚಿಕಿತ್ಸೆ ನೀಡಲು, ವೈದ್ಯಕೀಯ ತಂಡವು “ಪ್ರಾಕ್ಸಿಮಲ್ ಸ್ಪ್ಲೆನೋರೆನಲ್ ಶಂಟ್” ಎಂಬ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ನಡೆಸಿತು. ಸರಳವಾಗಿ ಹೇಳುವುದಾದರೆ, ಶಸ್ತ್ರಚಿಕಿತ್ಸಕರು ಸ್ಪ್ಲೆನಿಕ್ ವೇನ್ (ಗುಲ್ಮದಿಂದ) ಅನ್ನು ಎಡ ಮೂತ್ರಪಿಂಡದಿಂದ ಸಂಪರ್ಕಿಸಿ, ನಿರ್ಬಂಧಿತ ಪೋರ್ಟಲ್ ವೇನ್ ಅನ್ನು ಬೈಪಾಸ್ ಮಾಡಲು ರಕ್ತಕ್ಕೆ ಹೊಸ ಮಾರ್ಗವನ್ನು ಸೃಷ್ಟಿಸಿದರು. ಇದು ಯಕೃತ್ತಿನ ರಕ್ತನಾಳಗಳಲ್ಲಿನ ಒತ್ತಡವನ್ನು ಕಡಿಮೆ ಮಾಡಿ ಮತ್ತು ಮುಂದಿನ ತೊಡಕುಗಳನ್ನು ನಿವಾರಿಸುತ್ತದೆ.

ರೋಗಿಯ ಬಗ್ಗೆ ಮಾತನಾಡಿದ ಡಾ. ನಾಯ್ಕ, ರೋಗಿಯನ್ನು ದಾಖಲಿಸಿದಾಗ ಅವರ ಹಿಮೋಗ್ಲೋಬಿನ್ ಮಟ್ಟ, ಡಬ್ಲ್ಯೂಬಿಸಿ, ಪ್ಲೇಟ್‌ಲೆಟ್ ಸಂಖ್ಯೆಗಳು ತುಂಬಾ ಕಡಿಮೆ ಇದ್ದವು ಇದರಿಂದಾಗಿ ಅವರಿಗೆ ಆಗಾಗ್ಗೆ ಸೋಂಕು ತಗುಲುತ್ತಿತ್ತು, ಅವರ ರಕ್ತನಾಳಗಳು, ಪಿತ್ತನಾಳಗಳು ಹಿಗ್ಗಿದ್ದವು. ಶಸ್ತ್ರಚಿಕಿತ್ಸೆ ಮಾಡದಿದ್ದರೆ ರಕ್ತನಾಳಗಳು ಛಿದ್ರಗೊಂಡು ಮಾರಣಾಂತಿಕವಾಗುವ ಸಾಧ್ಯತೆ ಇತ್ತು ಎಂದರು.

ಶಸ್ತ್ರಚಿಕಿತ್ಸೆಯ ನಂತರ, ರೋಗಿಯು ಚೇತರಿಸಿಕೊಳ್ಳುತ್ತಿದ್ದು, ಶೀಘ್ರದಲ್ಲೇ ಶಕ್ತಿ ಮತ್ತು ಸಾಮಾನ್ಯ ಹಸಿವನ್ನು ಮರಳಿ ಪಡೆಯುವ ನಿರೀಕ್ಷೆಯಿದೆ. ರೋಗಿಯು ಆಸ್ಪತ್ರೆಯಿಂದ ಗುಣಮುಖರಾಗಿ ಇತ್ತೀಚೆಗೆ ಮನೆಗೆ ಹಿಂತಿರುಗಿದ್ದಾರೆ ಎಂದರು..

ಡಾ. ನಾಯ್ಕ್ ಅವರು, ಆರಂಭಿಕ ರೋಗನಿರ್ಣಯ ಮತ್ತು ವಿಶೇಷ ಚಿಕಿತ್ಸೆಯು ರೋಗಿಯ ಜೀವವನ್ನು ಉಳಿಸಿದೆ ಮತ್ತು ಅವರ ಜೀವನದ ಗುಣಮಟ್ಟವನ್ನು ಗಮನಾರ್ಹವಾಗಿ ಸುಧಾರಿಸಿದೆ ಎಂದು ಹೇಳಿದರು.

ಈ ಪ್ರಕರಣವು ದೀರ್ಘಕಾಲದ ಜೀರ್ಣಕ್ರಿಯೆಯ ಸಮಸ್ಯೆಗಳಿಗೆ ಗಮನ ಕೊಡುವುದು ಮತ್ತು ತಜ್ಞ ವೈದ್ಯರ ಸಹಾಯ ಪಡೆಯುವ ಪ್ರಾಮುಖ್ಯತೆಯನ್ನು ಎತ್ತಿ ತೋರಿಸುತ್ತದೆ. ಶಸ್ತ್ರಚಿಕಿತ್ಸಾ ತಂತ್ರಗಳು ಮತ್ತು ಇಮೇಜಿಂಗ್‌ನಲ್ಲಿನ ಪ್ರಗತಿಯೊಂದಿಗೆ, EHPVO ನಂತಹ ಅಪರೂಪದ ಯಕೃತ್ತಿನ ಅಸ್ವಸ್ಥತೆಗಳಿಗೂ ಈಗ ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡಬಹುದು ಎಂದು ಅವರು ಹೇಳಿದರು.

ಎಸ್‌ ಎಸ್‌ ನಾರಾಯಣ ಹೆಲ್ತ್‌ ಸೂಪರ್‌ ಸ್ಪೇಷಾಲಿಟಿ ಸೆಂಟರ್ ನ ವ್ಯವಸ್ಥಾಪಕ ನಿರ್ದೇಶಕ ಶ್ರೀ ಸುನೀಲ್‌ ಭಂಡಾರಿಗಲ್‌ ಅವರು ಅತಿ ಕ್ಲೀಷ್ಟಕರವಾದ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಿದ ವೈದ್ಯಕೀಯ ತಂಡವನ್ನು ಅಭಿನಂದಿಸಿದ್ದು. ಇದು ನಾರಾಯಣ ಹೆಲ್ತ್‌ನಲ್ಲಿ ಅತಿ ಕ್ಲೀಷ್ಟಕರವಾದ ಆರೋಗ್ಯ ಸಮಸ್ಯೆಗಳಿಗೆ ಆಧುನಿಕ ಚಿಕಿತ್ಸೆ ಲಭ್ಯವಿದೆ ಎಂಬುದನ್ನು ಸಾರುತ್ತದೆ ಎಂದರು.

ಶಸ್ತ್ರಚಿಕಿತ್ಸೆಯಲ್ಲಿ ಭಾಗವಹಿಸಿದ್ದ ವೈದ್ಯರ ತಂಡದಲ್ಲಿ ಅರಿವಳಿಕೆ ತಜ್ಞರಾದ ಡಾ. ಸಾಗರ್ ಎಸ್‌ ಎಂ ಮತ್ತು ಡಾ. ಜಯಶ್ರೀ ಪಾಟೀಲ, ಇಂಟೆನ್ಸಿವಿಸ್ಟ್ ಡಾ. ವಿಶ್ವಾಸ್ ಜಿಕೆ ಮತ್ತು ಡಾ. ಕಿರಣ್ ಬಿಆರ್‌ ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

Published

on

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.

ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ  2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆಶ್ರಯ ಯೋಜನೆ – ಆವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್‌ ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ

Published

on

ಗಿರೀಶ್ ಮುತ್ತು

ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು

ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.

ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.

ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್‌ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.

ಗರಿಕೆ ರಸದ ಪ್ರಯೋಜನಗಳು

1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.

2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ

4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.

5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್‌ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.

6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.

ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?

*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.

* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.

* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.

* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.

* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending