ದಿನದ ಸುದ್ದಿ
ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮೂಲ ಸೌಲಭ್ಯಗಳ ಕೊರತೆ : ಕರವೇ ಮನವಿ
ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಗಳನ್ನು ಸರಿಪಡಿಸಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಗಿತ್ತೆ ಮಾಧವ್ ವಿಠ್ಠಲ್ ರಾವ್ ರವರಿಗೆ ಕರವೇ(ಪ್ರವೀಣ ಶಟ್ಟಿ ಬಣ) ಮನವಿ ಸಲ್ಲಿಸಿತು.
ಜಲ್ಲಾಧ್ಯಕ್ಷ ಜಮ್ನಳ್ಳಿ ನಾಗರಾಜ್ ಮಾತನಾಡಿ, ದಾವಣಗೆರೆ ಜಿಲ್ಲೆಯ ಮೊರಾರ್ಜಿ ವಸತಿ ಶಾಲೆಗಳಲ್ಲಿ ಬಡ ಕುಟುಂಬಗಳ ಮಕ್ಕಳೇ ಹೆಚ್ಚಾಗಿ ವಿದ್ಯಾಭ್ಯಾಸ ಮಾಡುತ್ತಿದ್ದು, ಸದರಿ ಮಕ್ಕಳಿಗೆ ವಸತಿ ಶಾಲೆಯಲ್ಲಿ ಸರಿಯಾದ ಮೂಲಭೂತ ಸೌಲಭ್ಯ ಕಲ್ಪಿಸದೇ ಇರುವುದರಿಂದ ಮಕ್ಕಳು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ.
ಮಕ್ಕಳಿಗೆ ಸ್ನಾನಕ್ಕೆ ಬಿಸಿ ನೀರು ಇರುವುದಿಲ್ಲ. ಅಲ್ಲದೇ ಮಕ್ಕಳಿಗೆ ಸರಿಯಾಗಿ ಊಟದ ವ್ಯವಸ್ಥೆ ಸಮರ್ಪಕವಾಗಿರುವುದಿಲ್ಲ, ಶೌಚಾಲಯ ಸೌಕರ್ಯಗಳಿರುವುದಿಲ್ಲ, ಮಕ್ಕಳ ಮೇಲ್ವಿಚಾರಣೆಗೆ ವಾರ್ಡನ್ಗಳು ರಾತ್ರಿ ಸಮಯದಲ್ಲಿ ಸ್ಥಳದಲ್ಲಿರುವುದಿಲ್ಲ, ಅಲ್ಲದೇ ವಿದ್ಯುತ್ ತೊಂದರೆಯಾದರೆ ಮಕ್ಕಳಿಗೆ ಯು.ಪಿ.ಎಸ್. ಸೌಲಭ್ಯವಿಲ್ಲದೇ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ ಎಂದು ಹೇಳಿದರು.
ಮನವಿ ಸ್ವೀಕರಿಸಿದ ಸಿ.ಇ.ಒ ಮಾತನಾಡಿ, ಸಧ್ಯದಲ್ಲೇ ಅಧಿಕಾರಿಗಳ ಸಭೆ ಕರೆಯಲಾಗಿದ್ದು ಈ ವಿಷಯದ ಬಗ್ಗೆ ಚರ್ಚೆ ನಡಿಸಿ ಸೂಕ್ತ ತೀರ್ಮಾನ ಕೈಗೂಳ್ಳಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಜಮ್ನಳ್ಳಿ ನಾಗರಾಜ್, ಜಿಲ್ಲಾ ಕಾರ್ಯಧ್ಯಕ್ಷ ಸೈಯದ್ ನಜೀರ್, ನಾಗರಾಜ್ ಆದಾಪುರ್, ಸಂಘಟನಾ ಕಾರ್ಯದರ್ಶಿ ಸಂತೋಷ್ ಕುಮಾರ್, ಮಹಿಳಾ ಜಿಲ್ಲಾಧ್ಯಕ್ಷೆ ಗೀತಾ ಎಂ, ನಗರ ಘಟಕ ಅಧ್ಯಕ್ಷ ಅನೂಪ್ ಇಜಾರಿ, ಮಹಿಳಾ ಗೌರವಾಧ್ಯಕ್ಷೆ ವನಜ ಕರಿಯಪ್ಪ, ಉತ್ತರ ವಲಯದ ಯುವ ಘಟಕದ ಅಧ್ಯಕ್ಷ ಶಿವಕುಮಾರ ಬಿ ಬಿ, ನಾಗರಾಜ ಆಥಪುರ್, ಶಬ್ರಿನ್ ತಾಜ್, ಬಸವರಾಜ ಎಸ್, ಬಸವರಾಜ್ ಪಿ, ಮಂಜುಳಾ ಆರ್, ನಾಗರಾಜ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್ಲೈನ್ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.
ಆದರೆ ರಾಜೀವ್ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್ ಸಂಜೀವ್ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.
ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.
ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್, ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಜೊತೆಗೆ ಒಂದು ಮೊಬೈಲ್ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.
ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.
ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.
ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ15 hours agoನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
-
ದಿನದ ಸುದ್ದಿ1 day agoಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್
-
ದಿನದ ಸುದ್ದಿ12 hours agoಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
-
ದಿನದ ಸುದ್ದಿ1 day agoದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು

