ಲೈಫ್ ಸ್ಟೈಲ್
ಸೌಂದರ್ಯವತಿಯರ ಗೆಲುವಿನ ದಾರಿದೀಪ ಜ್ಯೊತ್ಸ್ನಾ ವೆಂಕಟೇಶ್ !
ನೀವು ಬ್ಯೂಟಿ ಪೆಜೆಂಟ್ಗಳಲ್ಲಿ ಭಾಗವಿಸಬೇಕಾ? ಹಾಗಾದರೆ ಈ ಸ್ಟೋರಿ ಓದಲೇ ಬೇಕು…
ಸೌಂದರ್ಯಕ್ಕೆ ಮತ್ತೊಂದು ಹೆಸರೇ ಹೆಣ್ಣು. ಸೌಂದರ್ಯ ಲೋಕಕ್ಕೆ ಹೆಣ್ಣುಮಕ್ಕಳಿಗೂ ಒಂದು ಅವಿನಾಭಾವ ಸಂಬಂಧ ಬೇರು ಬಿಟ್ಟಿದೆ. ಸೌಂದರ್ಯ ಪ್ರಪಂಚದ ರಣೆಯಾಗಿ ಮೆರಿಯಬೇಕು ಅನ್ನೋ ಕನಸು ಪ್ರತಿ ಮಹಿಳೆಯದು. ಈಗಂತೂ ಬ್ಯೂಟಿ, ಫಿಟ್ ನೆಸ್, ಫ್ಯಾಷನ್ ಟ್ರೆಂಡ್ ಆಗಿ ಹೋಗಿದೆ. ಪ್ರತಿ ಹೆಣ್ಣಲ್ಲೂ ತಾನು ವಿಶ್ವದ ಅತಿ ಸೌಂದರ್ಯವತಿಯಾಗಿ ಮಿಂಚುವ ಹಂಬಲ ಮನೆ ಮಡಿದೆ. ಮಹಿಳೆಯರ ಈ ಆಸೆ ಅರಿತ ಖಾಸಗಿ ಕಂಪನಿಗಳು, ಹಲವಾರು ಸೌಂದರ್ಯ ಸ್ಪರ್ಧೆಗಳನ್ನ ಹಮ್ಮಿಕೊಳ್ಳಲಾಗುತ್ತಿದೆ. ಇದಕ್ಕೆ ತಕ್ಕಂತೆ ಮಹಿಳೆಯರೂ ತಮ್ಮ ಕನಸಿನ ಕುದುರೆಯ ಬೆನ್ನೇರಿ ಈ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿದ್ದಾರೆ. ಇಂತಹ ಬ್ಯೂಟಿ ಕಾಂಟೆಸ್ಟ್ಗಳು ಎಲ್ಲಾ ವಯೋಮಾನದವರಿಗೂ ಎಲ್ಲಾ ರೀತಿಯ ಮಹಿಳೆಯರನ್ನು ಕೈ ಬೀಸಿ ಕರೆಯುತ್ತಿದೆ. ಇದರ ಬೆನ್ನಲ್ಲೇ ಫಿಟ್ ನೆಸ್ ಮತ್ತು ಗ್ರೋಮಿಂಗ್ ತರಬೇತಿ ನೀಡುವ ಸಂಸ್ಥೆ ಗಳ ಸಂಖ್ಯೆ ಯೂ ಹೆಚ್ಚಿದೆ.
ಇವತ್ತಿನ ಯಶಸ್ವಿ ಮಹಿಳೆಯರ ಸಾಲಿಗೆ ಜ್ಯೊತ್ಸನಾ ವೆಂಕಟೇಶ್ ಕೂಡ ಸೇರ್ಪಡೆ ಆಗಿದ್ದಾರೆ. ನಲವತ್ತರ ಹರೆಯದಲ್ಲೂ ಕಾಲೇಜು ಕನ್ಯಾಮನಿಯರ ಸಡ್ಡು ಹೊಡೆಯುವ ಸೌಂದರ್ಯ ಗಣಿ ಈಕೆ. ಕಣ್ಣಲ್ಲೇ ಕೊಲ್ಲುವ ಆಕರ್ಷಕ ಮೈಮಾಟ ಹೊಂದಿರುವ ಚೆಲುವೆ ಜ್ಯೊತ್ಸನಾ.2014 ನೇ ಸಾಲಿನ “Mrs.ಸೌತ್ ಇಂಡಿಯಾ” ಟೈಟಲ್ ವಿಜೇತೆ ಈ ಬೆಡಗಿ. ಅದೇ ವರ್ಷ ಪ್ರತಿಷ್ಠಿತ MIBQ ನಡೆಸಿದ ಸೌಂದರ್ಯ ಸ್ಪರ್ಧೆಯಲ್ಲಿ” Mrs. ಬೆಂಗಳೂರು ” ಆಗಿಯೂ ಮಿಂಚಿದ್ದಾರೆ. 2003 ರಲ್ಲಿ ಶುರುವಾದ ಫ್ಯಾಷನ್ ಪಯಣ ಇಂದಿಗೂ ಮುಂದುವರೆದಿದೆ.. ಅಂದಹಾಗೆ,ಸಾಂಪ್ರದಾಯಿಕ ಕುಟುಂಬ ದಲ್ಲಿ ಜನಿಸಿದ ಜ್ಯೊತ್ಸನಾ ಗೆ ಬಾಲ್ಯ ದಿಂದಲೂ ಫ್ಯಾಷನ್ ಲೋಕದಲ್ಲಿ ಮಿಂಚುವ ಮಹತ್ವಾಕಾಂಕ್ಷೆ ಇತ್ತು. NiFT ನಲ್ಲಿ ಫ್ಯಾಷನ್ ಡಿಸೈನಿಂಗ್ ತರಬೇತಿ ಮುಗಿಸಿಕೊಂಡಿದ್ದಾರೆ. ಜ್ಯೊತ್ಸನಾ 2003ರಲ್ಲಿ ಮದುವೆಯಾಗಿ ಗೃಹಸ್ಥಾಶ್ರಮಕ್ಕೆ ಕಾಲಿಟ್ಟರು. ಅದೇ ವರ್ಷ ಪತಿಯ ಪ್ರೇರಣೆ ಯಿಂದಾಗಿ ಫ್ಯಾಷನ್ ಲೋಕಕ್ಕೆ ಪಾದಾರ್ಪಣೆ ಮಾಡಿ..” Mrs.ಚೆನ್ನೈ ” ಸ್ಪರ್ಧೆ ಯಲ್ಲಿ ಟಾಪ್ 5 ಗೆ ಆಯ್ಕೆಯಾದರು.
https://www.instagram.com/jv_naidu/
“Mrs.ಚೆನ್ನೈ ” ನ ಹಲವಾರು ಸಬ್ ಟೈಟಲ್ ಗಳನ್ನು ಗೆದ್ದರೂ.. ನಂತರ..ತಾಯಿ ಯಾದ ಜ್ಯೊತ್ಸನಾ ತಮ್ಮ ಫ್ಯಾಷನ್ ಕೂಸಿಗೆ ವಿದಾಯ ಹೇಳಿ ಮಗಳ ಪೋಷಣೆ ಯಲ್ಲಿ ಬುಜಿ ಆದರು. ಆ ವೇಳೆಗೆ ಆಗಲೇ 80 k.g ಅಷ್ಟು ತೂಕ ಹೆಚ್ಚಿಸಿಕೊಂಡಿದ್ದ ಜ್ಯೊತ್ಸನಾ ಸಾಮಾನ್ಯ ಗೃಹಸ್ತೆಯಂತೆ ಬದುಕುತ್ತಿದ್ದರು. 2013 ರಲ್ಲಿ ತನ್ನ ಕನಸುಗಳನ್ನು ನೆನೆದ ಜ್ಯೊತ್ಸನಾ ಮತ್ತೆ ಫ್ಯಾಷನ್ ದುನಿಯಾದಲ್ಲಿ ಮಿಂಚುವ ಹೊಸ ಹುರುಪು ಕಂಡರು.ಸುಮಾರು ಒಂದು ವರ್ಷದ ಕಠಿಣ ಶ್ರಮದಿಂದ 58 k.Gಗೆ ತೂಕ ಇಳಿಸಿಕೊಂಡು ಬ್ಯೂಟಿ ಕ್ವೀನ್ ಆಗಿ ಮೆರೆದರು. ದೆಹಲಿಯಲ್ಲಿ ನೆಡೆದ ಸ್ಪರ್ಧೆ ಯಲ್ಲಿ Mrs.ಬೆಂಗಳೂರು ಆಗಿ ಗೆದ್ದರೂ ಕೊಡ.
2013 ರಿಂದ ಇವತ್ತಿಗೂ ಈಕೆ ಹಿಂತಿರುಗಿ ನೋಡಲೇ ಇಲ್ಲ. ಫ್ಯಾಷನ್ ದುನಿಯಾದಲ್ಲಿ ತನ್ನದೇ ವಿಶಿಷ್ಟ ಚಾಪು ಮೂಡಿಸಿರುವ ಜ್ಯೊತ್ಸನಾ ಫಿಟ್ ನೆಸ್ ಮತ್ತು ಗ್ರೂಮಿಂಗ್ ಎಕ್ಸ್ಪ್ರೆಟ್ ಆಗಿ ಮಿಂಚುತ್ತಿದ್ದಾರೆ.
2014ರಲ್ಲಿ ತನ್ನಂತೆಯೇ ಬ್ಯೂಟಿ ಪೆಜೆಂಟ್ ಗಳಲ್ಲಿ ಭಾಗವಹಿಸಲು ಇಚ್ಚಿಸುವ ಮಹಿಳೆಯರಿಗಾಗಿ “ಜ್ಯೊತ್ಸನಾ ವೆಂಕಟೇಶ್ ಫಿಟ್ ನೆಸ್ ಮತ್ತು ಗ್ರೂಮಿಂಗ್ ಸಂಸ್ಥೆಯನ್ನ ಪ್ರಾರಂಭಿಸಿದರು. ಹಲವಾರ ಸಾಧಕರಿಗೆ ಗುರುವಾಗಿ..ಮಾರ್ಗದರ್ಶಕಿಯಾಗಿ ಗೆಲುವಿನ ಹಾದಿ ಹಿಡಿಯಲು ಪ್ರೇರಣೆ ಯಾದರು.
ಇವರಿಂದ ಗ್ರೂಮಿಂಗ್ ಪಡೆದು ಗೆಲುವಿನ ಶಿಖರವೇರಿದವರ ಪಟ್ಟಿ
• ಅಮೇರಿಕದ ಲಾಸ್ ವೇಗಸ್ ನಲ್ಲಿ ನಡೆದ ಬ್ಯೂಟಿ ಪೆಜೆಂಟ್ ಗೆ ಬೆಂಗಳೂರಿನ ಗಾಯತ್ರಿ ಸಂದೀಪ್ ರನ್ನು ಗ್ರೂಮ್ ಮಾಡಿ.. Mrs. INDIA GLOBE ಗೆಲ್ಲಲು ತಯಾರು ಮಾಡಿದರು.
• 2016ರಲ್ಲಿ ನಡೆದ Mrs.India Beauty Queen ಸ್ಪರ್ಧೆ ಗೆ Mrs.ಇಲೈಚಿ ಅವರನ್ನು ಗ್ರೂಮ್ ಮಾಡಿ ಗೆಲ್ಲಿಸಿದರು.
• ದೆಹಲಿಯಲ್ಲಿ ನಡೆದ 2015ನೇ ಸಾಲಿನ Miss.Fitness ಪೆಜೆಂಟ್ ಗೆ ಗ್ರೂಮಿಂಗ್ ಎಕ್ಸ್ಪರ್ಟ ಆಗಿದ್ದರು.
• 2017ರ Mr.India Man Hunt ಸ್ಪರ್ಧೆ ಗೆ ಗ್ರೂಮಿಂಗ್ ಎಕ್ಸ್ಪರ್ಟ ಆಗಿದ್ದರು.
• 2016ನೇ ಸಾಲಿನ Mrs.INDIA GLOBE ವಿಜೇತೆ ವೀಣಾ ಜೈನ್ ಅವರನ್ನು ಗ್ರೂಮ್ ಮಾಡಿದ ಹೆಗ್ಗಳಿಕೆ ಇವರದು.
• ಬಾಲಿವುಡ್ ಮತ್ತು ಸ್ಯಾಂಡಲ್ ವುಡ್ ನ ಸಿನಿತಾರೆ ನೇಹಾ ಸಕ್ಸೇನಾ ಅವರಿಗೂ ಸ್ಟೈಲಿಂಗ್ ಮಾಡಿದ ಕೀರ್ತಿ ಇವರದು.
• 2015ರಲ್ಲಿ ಮೊದಲ ಬಾರಿಗೆ KIDS FASHION WEEK ಅನ್ನು ಆಯೋಜಿಸಿ ಮಕ್ಕಳ ಸ್ಟೈಲಿಂಗ್ ಮತ್ತು ಗ್ರೂಮಿಂಗ್ ನಲ್ಲೂ ಯಶಸ್ವಿಯಾದರು
• 2018ರಲ್ಲಿ ಬೆಂಗಳೂರು ಸೆಂಟ್ರಲ್ ನೊಂದಿಗೆ ಸೇರಿ ತಮ್ಮ KIDS FASHIIN WEEK ನ ಎರಡನೇ ಅವತರಣಿಕೆ ಯಲ್ಲೂ ಸಾಕಷ್ಟು ಹೆಸರು ಮಾಡಿದ್ದಾರೆ.
https://www.facebook.com/JV-FitnessGrooming-Experts-389313421540851/
ನೀವೂ ಕೂಡಾ ಭಾಗವಹಿಸಬಹುದು
ಸದ್ಯ ತಮ್ಮ ಮಹತ್ವಾಕಾಂಕ್ಷೆ ಯ “Mr & Mrs PROFESSIONALS” ಸ್ಪರ್ಧೆ ಯಲ್ಲಿ ಬುಜಿ ಆಗಿದ್ದಾರೆ. ಜುಲೈ ತಿಂಗಳ ಕಡೆಯ ವಾರ ನಡೆಯುವ ಈ ಸ್ಪರ್ಧೆಯಲ್ಲಿ ಭಾಗವಹಿಸಲು ಹಲವಾರು ರಂಗದ ಉದ್ಯೋಗಪತಿಗಳು ಸಾಲುಕಟ್ಟಿ ನಿಂತಿದ್ದಾರರೆ.. ನಿಮಗೂ ಬ್ಯೂಟಿ ಕ್ವೀನ್ ಆಗ ಬೇಕೆಂಬ ಕನಸು ಇದ್ದಲ್ಲಿ..ನೀವೂ ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು.
ವಯೋಮಾನದ ಅಥವಾ ಬಣ್ಣ-ಗಾತ್ರದ ಕಡಿವಾಣ ಇಲ್ಲ. ನೀವು ಹೇಗೇ ಇದ್ದರೂ ನಿಮ್ಮನ್ನು ಗ್ರೂಮ್ ಮಾಡಿ ರಾಂಪ್ ಮೇಲೆ ನೆಡೆಯುವ ಆತ್ಮವಿಶ್ವಾಸ ತಂದುಕೊಡುತ್ತಾರೆ ಗ್ರೂಮಿಂಗ್ ಎಕ್ಸ್ಪರ್ಟ ಜ್ಯೊತ್ಸನಾ ವೆಂಕಟೇಶ್.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣ | ಭದ್ರಾ ನಾಲೆ ನೀರು ನಿರ್ವಹಣೆ
ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.
ಗುರುವಾರ(ಫೆ.19) ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ನಾಲೆಯ ಕೊನೆಯ ಭಾಗದ ರೈತರಿಗೆ ನೀರು ತಲುಪಿಸಲು ನಾಲೆಯುದ್ದಕ್ಕೂ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಅನಧಿಕೃತವಾಗಿ ನೀರು ಎತ್ತುವವರ ಮೋಟಾರ್ಗಳನ್ನು ವಶಪಡಿಸಿಕೊಳ್ಳಲಾಗುವುದು.
ಪ್ರಿಪೇಯ್ಡ್ ಆಟೋಗಳನ್ನು ಚಾಲ್ತಿಗೊಳಿಸಿದ್ದು, ಇದಕ್ಕೆ ರೂ.38/-ಶುಲ್ಕ ನಿಗದಿಪಡಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಶೇಖರ್ ಹೆಚ್.ಟಿ, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಅಂಕಣ
Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?
‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.
ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.
ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:
ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.
ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ
‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?
ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.
‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?
ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.
ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.
ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.






