ದಿನದ ಸುದ್ದಿ
ಯಮ ಸ್ವರೂಪಿ ಗ್ಯಾಸ್ ಗೀಸರ್ ಬಳಸೋ ಮುನ್ನ ಎಚ್ಚರ ; ಇವಿಷ್ಟನ್ನು ಪಾಲಿಸಿ ಅಪಾಯ ತಡೆಗಟ್ಟಿ
~ಅನಿರೀಕ್ಷಿತ್ ನಾರಾಯಣ
ಕೆಲ ಮುನ್ನೆಚ್ಚರಿಕೆಯ ಅಂಶಗಳನ್ನು ಪಾಲಿಸುವುದರಿಂದ ಗ್ಯಾಸ್ ಗೀಸರ್ ನಿಂದ ಆಗುವ ಅಪಾಯವನ್ನು ತಡೆಗಟ್ಟಬಹುದು.
1. ಮೊದಲಿಗೆ ಇದು ಎಲ್ಲರಿಗೂ ಗೊತ್ತಿರುವ ವಿಷಯ. ಗ್ಯಾಸ್ ಗೀಸರ್ ಅನ್ನು ಬಳಸದಿದ್ದಾಗ ರೆಗ್ಯುಲೇಟರಿನಲ್ಲೇ ಆಫ್ ಮಾಡಿ ಗ್ಯಾಸ್ ಸರಬರಾಜನ್ನು ನಿಲ್ಲಿಸಬೇಕು. ಬೇಕೆಂದಾಗ ಮಾತ್ರ ಆನ್ ಮಾಡಿಕೊಳ್ಳಬೇಕು.
2. ನಿಮ್ಮ ಸ್ನಾನದ ಮನೆಯಲ್ಲಿ ಗ್ಯಾಸ್ ಗೀಸರ್ ಅನ್ನು ಅಳವಡಿಸಬೇಕೆಂದಿದ್ದರೆ ಅಲ್ಲಿ ಚೆನ್ನಾಗಿ ಗಾಳಿಯಾಡಲು ಅಗತ್ಯವಿದ್ದಷ್ಟು ಕಿಟಕಿ ಇರಲೇಬೇಕು. ಕೆಲ ಸ್ನಾನದ ಮನೆಗಳಲ್ಲಿ ಬರೀ ಬೆಳಕು ಬರಲಷ್ಟೇ ಗಾಜಿರುವ ಕಿಟಕಿ ಮಾಡಿರುತ್ತಾರೆ. ಅಂತಹ ಕಡೆಗಳಲ್ಲಿ ಗ್ಯಾಸ್ ಗೀಸರ್ ಅನ್ನು ಅಳವಡಿಸದಿರುವುದೇ ಉತ್ತಮ. ಸ್ನಾನದ ಮನೆ ಬಿಟ್ಟು ಹೊರಗೆ ಎಲ್ಲಾದರೂ ಗಾಳಿಯಾಡುವ ಕಡೆ ಗ್ಯಾಸ್ ಗೀಸರ್ ಅನ್ನು ಅಳವಡಿಸಿ ಅಲ್ಲಿಂದ ಬಿಸಿ ನೀರನ್ನು ಒಳಗೆ ತೆಗೆದುಕೊಳ್ಳುತ್ತೇನೆ ಎಂದರೆ ಕೊಂಚ inconvenience ಅನ್ನಿಸಿದರೂ ಹೆಚ್ಚು ಸುರಕ್ಷಿತ.
3. ಗ್ಯಾಸ್ ಗೀಜರ್ ಅನ್ನು ಸ್ನಾನದ ಮನೆಯೊಳಗೆ ಅಳವಡಿಸಿದರೆ, ಮೊದಲು ಬಾಗಿಲು ತೆರೆದಿಟ್ಟುಕೊಂಡೇ, ಬಿಸಿ ನೀರನ್ನು ಬಕೆಟ್ಟಿಗೆ ಬಿಟ್ಟುಕೊಂಡು ನಂತರ ಸ್ಥಾನಕ್ಕೆ ಹೋಗುವುದು ಒಳ್ಳೆಯದು. ಆಗ ಈ ಆತಂಕ ಇರುವುದಿಲ್ಲ.
4. ಈಗ ಮನೆ ಬಳಕೆಯ ಉಪಕರಣಗಳನ್ನು ಮಾರುವ ಅಂಗಡಿಗಳಲ್ಲಿ exhaust fan (ಗಾಳಿಯನ್ನು ಹೊರಹಾಕುವ fan) ದೊರಕುತ್ತದೆ. ಅದರ ಬೆಲೆ ಹೆಚ್ಚೆಂದರೆ ಒಂದು ಸಾವಿರ ರೂಪಾಯಿ ಅಷ್ಟೇ. ಬರೀ ಎರಡು ರೂಪಾಯಿಯ ಟ್ಯಾಗ್ ಬಳಸಿ ಅದನ್ನು ಎಲ್ಲಿ ಬೇಕೆಂದರಲ್ಲಿ (ಕಿಟಕಿಯ ಸರಳುಗಳಿಗೇ) ಎರಡೇ ನಿಮಿಷದಲ್ಲಿ ನಾವೇ install ಮಾಡಿಕೊಳ್ಳಬಹುದು. ಗ್ಯಾಸ್ ಗೀಸರ್ ON ಮಾಡಿದಾಗೆಲ್ಲ, Exhaust Fanಅನ್ನೂ ಆನ್ ಮಾಡಿಕೊಂಡರೆ ಗ್ಯಾಸ್ ಗೀಸರ್ ಹೊರ ಸೂಸಬಹುದಾದ ಕಾರ್ಬನ್ ಮಾನಾಕ್ಸೈಡ್ ಬಗ್ಗೆ ಚಿಂತಿಸುವ ಅಗತ್ಯವೇ ಇಲ್ಲ. ಏಕೆಂದರೆ exhaust fan ಸ್ನಾನದ ಕೊಠಡಿ ಒಳಗಿನ ಗಾಳಿಯನ್ನೆಲ್ಲ ಹೊರಹಾಕುತ್ತಲೇ ಇರುತ್ತದೆ. ಅದರ ಮೂಲಕ ಕಾರ್ಬನ್ ಮಾನಾಕ್ಸೈಡ್ ಕೂಡ ಹೊರಹೋಗುತ್ತದೆ. ಜೊತೆಗೆ ಕೊಠಡಿಯ ವಾಯುಭಾರ ಕುಸಿತವಾದಂತೆಲ್ಲ ಸ್ವಚ್ಛ ಗಾಳಿ ತನ್ನಂತಾನೇ ಒಳಬರುತ್ತದೆ.
5. Carbon monoxide detector: ಮೇಲೆ ಹೇಳಿದಂತೆ ಕಾರ್ಬನ್ ಮಾನಾಕ್ಸೈಡ್ ಸೋರಿಕೆಯಾಗುತ್ತಿದೆ ಅಂತ ಮನುಷ್ಯನ ಇಂದ್ರಿಯಗಳಿಗೆ ಗ್ರಹಿಸಲು ಸಾಧ್ಯವಿಲ್ಲ. ಆದರೆ ಇವುಗಳನ್ನು ಪತ್ತೆಹಚ್ಚಲೆಂದೆ ಕಾರ್ಬನ್ ಮಾನಾಕ್ಸೈಡ್ ಡಿಟೆಕ್ಟರ್ ಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಸಾಧ್ಯವಾದಲ್ಲಿ ಇವುಗಳನ್ನು ಅಳವಡಿಸಿಕೊಂಡರೆ ಗಾಳಿಯಲ್ಲಿ ಕಾರ್ಬನ್ ಮಾನಾಕ್ಸೈಡ್ ಪತ್ತೆಯಾದ ತಕ್ಷಣ ಇವುಗಳು alarm ಕೂಗಿ ಎಚ್ಚರಿಸುತ್ತವೆ. ಆಗ ತಕ್ಷಣ ನಾವು ಕ್ರಮ ಕೈಗೊಳ್ಳಬಹುದು.
6. ಈ ವಿಷಯಗಳನ್ನು ಮುಖ್ಯವಾಗಿ ಮನೆಯ ದೊಡ್ಡವರು ತಿಳಿದುಕೊಂಡಿರಬೇಕು. ಚಿಕ್ಕ ಮಕ್ಕಳು ಸ್ನಾನಕ್ಕೆ ಹೋಗುವಾಗ ಅವರ ಪಾಡಿಗೆ ಅವರನ್ನು ಬಿಡುವ ಬದಲಿಗೆ, ತಾವೇ ನೀರು ಬಿಟ್ಟುಕೊಟ್ಟು ನಂತರ ಅವರನ್ನು ಸ್ನಾನಕ್ಕೆ ಕಳಿಸಬೇಕು.
7. ಒಂದು ಮನೆಯಿಂದ ಇನ್ನೊಂದು ಮನೆಗೆ ಶಿಫ್ಟ್ ಆಗುವಾಗ ನೀವಾಗಿಯೇ ಗ್ಯಾಸ್ ಗೀಜರ್ ಅನ್ನು ಅಳವಡಿಸುವುದರ ಬದಲಾಗಿ ಯಾರಾದರೂ professional ವ್ಯಕ್ತಿಗಳನ್ನೇ ನೆಚ್ಚಿಕೊಂಡರೆ ಒಳ್ಳೆಯದು. ಆಗ ಅವರು ಗೀಸರನ್ನು ಅಳವಡಿಸಬಹುದಾದ ಜಾಗದ ವೆಂಟಿಲೇಶನ್ ಅನ್ನು ಗಮನಿಸಿ ಅವರೇ ಸೂಕ್ತ ಸಲಹೆ ನೀಡುತ್ತಾರೆ.
8. Regular maintenance: ಗ್ಯಾಸ್ ಸಿಲೆಂಡರ್, ರೆಗ್ಯುಲೇಟರ್, ಗ್ಯಾಸ್ ಪೈಪ್ ಮತ್ತು ಗೀಸರನ್ನು ಆಗಾಗ ಗಮನಿಸುತ್ತ ಅಗತ್ಯ ಬಂದಲ್ಲಿ ಅವುಗಳನ್ನು ಬದಲಾಯಿಸಬೇಕು.
9. ಗ್ಯಾಸ್ ಗೀಸರ್ ಬಳಸುವಾಗ ಯಾವುದೇ ಅನುಮಾನ ಬಂದರೂ ಕೂಡಲೆ ಅದನ್ನು ಸರಿಪಡಿಸಿಕೊಳ್ಳುವುದು ಅಗತ್ಯ. ಆಗಲು ನಾವೇ ಏನಾದರೂ ಒಂದು ಮಾಡುವ ಬದಲು, ಅದನ್ನು ರಿಪೇರಿ ಮಾಡುವರಿಂದಲೇ ಸರಿಮಾಡಿಸುವುದು ಒಳ್ಳೆಯದು.
ಬರಹ ಕೃಪೆ : ಫೇಸ್ ಬುಕ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.
ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.
ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
ಸುದ್ದಿದಿನಡೆಸ್ಕ್:ಜಪಾನ್ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.
ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!
ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾಲಿಯ ಕನಸು ಒಂದೇ ಹೀರೋ ಆಗೋದು
ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!
ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!
ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.
ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!
ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ4 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ5 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ದಿನದ ಸುದ್ದಿ2 days agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ2 days agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ19 hours agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ2 days agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!
-
ದಿನದ ಸುದ್ದಿ2 days agoಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ

