ದಿನದ ಸುದ್ದಿ
ಪದವೀಧರರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿ ಪ್ರಕಟ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮತದಾರರು ಹೆಸರುಗಳನ್ನು ತಮ್ಮ ವ್ಯಾಪ್ತಿಗೆ ಸಂಬಂಧಪಟ್ಟ ಕಚೇರಿಗಳಲ್ಲಿ ಪರಿಶೀಲಿಸಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷದ ಮುಖಂಡರುಗಳೊಂದಿಗೆ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸುವ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯಲ್ಲಿ, ಜಗಳೂರು ಕ್ಷೇತ್ರದಲ್ಲಿ 2215 ಪುರುಷ, 1138 ಮಹಿಳಾ ಮತದಾರರು ಒಟ್ಟು 3353, ಹರಿಹರ ಕ್ಷೇತ್ರದಲ್ಲಿ 3193 ಪುರುಷ, 2501 ಮಹಿಳೆಯರು ಒಟ್ಟು 5694, ದಾವಣಗೆರೆ ಉತ್ತರ ಕ್ಷೇತ್ರದಲ್ಲಿ 6683 ಪುರುಷ, 5780 ಒಟ್ಟು 12463, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ 2250 ಪುರುಷ , 2201 ಮಹಿಳೆಯವರು ಒಟ್ಟು 4451 ಹಾಗೂ ಮಾಯಕೊಂಡ ಕ್ಷೇತ್ರದಲ್ಲಿ 2253 ಪುರುಷ, 1525 ಮಹಿಳಾ ಮತದಾರರು ಒಟ್ಟು 3778 ಮತದಾರರಿದ್ದು ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ಒಟ್ಟಾರೆಯಾಗಿ ದಾವಣಗೆರೆ ಜಿಲ್ಲೆಯಲ್ಲಿ 16594 ಪುರುಷ, 13145 ಮಹಿಳಾ ಮತದಾರರು ಸೇರಿದಂತೆ 29739 ಒಟ್ಟು ಅಂತಿಮ ಮತದಾರಿದ್ದಾರೆ ಎಂದು ತಿಳಿಸಿದರು.
ಅಂತಿಮ ಪಟ್ಟಿಯಲ್ಲಿ ಸೇರ್ಪಡೆಯಾದ ಮತದಾರರು, ತಮ್ಮ ವ್ಯಾಪ್ತಿಗೆ ಸಂಬಂಧಪಟ್ಟ ದಾವಣಗೆರೆ, ಹರಿಹರ ಮತ್ತು ಜಗಳೂರು ತಾಲ್ಲೂಕು ಕಛೇರಿಗಳಲ್ಲಿ ಹೆಸರುಗಳನ್ನು ಪರಿಶೀಲಿಸಿಕೊಳ್ಳುವುದು. ಹಾಗೂ ದಾವಣಗೆರೆ ನಗರ ಮತ್ತು ಕಸಬಾ ಹೊಬಳಿ ವ್ಯಾಪ್ತಿಯಲ್ಲಿರುವವರು ಆಯುಕ್ತರು, ಮಹಾನಗರಪಾಲಿಕೆ, ದಾವಣಗೆರೆ ಕಚೇರಿಯಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ, ವಿವಿಧ ರಾಜಕೀಯ ಪಕ್ಷದ ಮುಖಂಡರುಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗರಿಕೆ ಹುಲ್ಲಿನ ಜ್ಯೂಸ್ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ
ಗಿರೀಶ್ ಮುತ್ತು
ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು
ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.
ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.
ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.
ಗರಿಕೆ ರಸದ ಪ್ರಯೋಜನಗಳು
1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.
2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ
4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.
5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.
6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.
ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?
*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.
* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.
* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.
* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.
* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ
ಸುದ್ದಿದಿನ,ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಜನಪರ ಆಡಳಿತಕ್ಕೆ ಆದ್ಯತೆ ನೀಡುವುದಾಗಿ ಘೋಷಿಸಿದ್ದು, ಯುವಕರು, ವಿದ್ಯಾರ್ಥಿಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.
ಮೊದಲ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳ ತ್ವರಿತ ಪರಿಹಾರವೇ ತಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು.
ರಾಜ್ಯದಾದ್ಯಂತ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಜೊತೆಗೆ ಯುವಜನರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ “ಭಾರತ್ ಜೋಡೋ ಯುವ ಸಂಘ”ಗಳ ರಚನೆಗೆ ಸರ್ಕಾರ ಮುಂದಾಗಲಿದೆ ಎಂದು ಹೇಳಿದರು. ಈ ಸಂಘಟನೆಗಳು ಸಾಮಾಜಿಕ ಸೌಹಾರ್ದತೆ ಮತ್ತು ಯುವಜನರ ಸಬಲೀಕರಣಕ್ಕೆ ನೆರವಾಗಲಿವೆ ಎಂದು ಅಭಿಪ್ರಾಯಪಟ್ಟರು.
ನಗರ ಹಾಗೂ ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದ ಮುಖ್ಯಮಂತ್ರಿ, ವಿಶೇಷವಾಗಿ ಬೆಂಗಳೂರಿನ ಹದಗೆಟ್ಟ ರಸ್ತೆಗಳ ದುರಸ್ತಿ ಮತ್ತು ಡಾಂಬರೀಕರಣ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಜನರು ಎದುರಿಸುತ್ತಿರುವ ನಾಗರಿಕ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.
ಮನೆ ನಿರ್ಮಾಣ ಹಾಗೂ ಆಸ್ತಿ ದಾಖಲೆಗಳಿಗೆ ಸಂಬಂಧಿಸಿದ ಎ-ಖಾತಾ ಮತ್ತು ಬಿ-ಖಾತಾ ಸಮಸ್ಯೆಗಳ ಪರಿಹಾರಕ್ಕೂ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ಜನಸಾಮಾನ್ಯರ ಬದುಕಿಗೆ ನೇರವಾಗಿ ಸಂಬಂಧಿಸಿದ ವಿಷಯಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದು ತಮ್ಮ ಜೀವನದ ಮಹತ್ವದ ಜವಾಬ್ದಾರಿಯಾಗಿದೆ ಎಂದು ಹೇಳಿದ ಅವರು, ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಂಡು ಎಲ್ಲ ವರ್ಗಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು. ರಾಜ್ಯದ ಅಭಿವೃದ್ಧಿಗೆ ಜನರ ಸಹಕಾರ ಅಗತ್ಯವಾಗಿದ್ದು, ಪಾರದರ್ಶಕ ಮತ್ತು ಉತ್ತರದಾಯಿ ಆಡಳಿತ ನೀಡುವುದು ತಮ್ಮ ಸಂಕಲ್ಪವಾಗಿದೆ ಎಂದು ಹೇಳಿದರು.
“ಜನರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡುವ ಸರ್ಕಾರವನ್ನು ನೀಡುತ್ತೇವೆ. ಯುವಕರು, ರೈತರು, ಮಹಿಳೆಯರು ಮತ್ತು ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದುವಾಗಿರುತ್ತದೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಿ.ಕೆ. ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
ಸುದ್ದಿದಿನ,ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಯ ನೂತನ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ (B. K. Hariprasad) ಅವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ನೇಮಕ ಮಾಡಿದೆ. ಈ ಕುರಿತು ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅಧಿಕೃತ ಆದೇಶ ಹೊರಡಿಸಿದ್ದು, ನೇಮಕಾತಿ ತಕ್ಷಣದಿಂದಲೇ ಜಾರಿಗೆ ಬಂದಿದೆ.
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ. ಶಿಬಕುಮಾರ್ (D. K. Shivakumar) ಅವರು ‘ಒಬ್ಬ ವ್ಯಕ್ತಿಗೆ ಒಂದೇ ಹುದ್ದೆ’ ಎಂಬ ಪಕ್ಷದ ನೀತಿಯ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಈ ಮಹತ್ವದ ಬದಲಾವಣೆ ನಡೆದಿದೆ. ಪಕ್ಷ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಅನುಭವಿ ನಾಯಕ ಹರಿಪ್ರಸಾದ್ ಅವರಿಗೆ ಹೈಕಮಾಂಡ್ ಹೊಣೆಗಾರಿಕೆ ನೀಡಿದೆ.
ದೀರ್ಘಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿರುವ ಹರಿಪ್ರಸಾದ್ ಅವರು ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಮಾಜಿ ರಾಜ್ಯಸಭಾ ಸದಸ್ಯರಾಗಿರುವ ಅವರು ಹಲವು ರಾಜ್ಯಗಳ ಪಕ್ಷದ ಉಸ್ತುವಾರಿ ಜವಾಬ್ದಾರಿಗಳನ್ನೂ ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಪಕ್ಷದ ಸಂಘಟನಾ ಅನುಭವ ಮತ್ತು ಹೈಕಮಾಂಡ್ನೊಂದಿಗೆ ಹೊಂದಿರುವ ಉತ್ತಮ ಬಾಂಧವ್ಯ ಅವರ ನೇಮಕಾತಿಗೆ ಪ್ರಮುಖ ಕಾರಣವೆಂದು ಕಾಂಗ್ರೆಸ್ ವಲಯಗಳಲ್ಲಿ ವಿಶ್ಲೇಷಿಸಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಈಶ್ವರ ಖಂಡ್ರೆ ಸೇರಿದಂತೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ, ಅಂತಿಮವಾಗಿ ಹೈಕಮಾಂಡ್ ಹರಿಪ್ರಸಾದ್ ಅವರ ಮೇಲೆ ವಿಶ್ವಾಸ ವ್ಯಕ್ತಪಡಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವ ಸಂದರ್ಭದಲ್ಲಿ ಸಂಘಟನೆ ಮತ್ತು ಸರ್ಕಾರದ ನಡುವೆ ಸಮನ್ವಯ ಸಾಧಿಸುವ ಮಹತ್ವದ ಜವಾಬ್ದಾರಿ ಇದೀಗ ಅವರ ಹೆಗಲಿಗೆ ಬಂದಿದೆ.
ಹರಿಪ್ರಸಾದ್ ಅವರ ನೇಮಕಾತಿಯಿಂದ ರಾಜ್ಯ ಕಾಂಗ್ರೆಸ್ ಸಂಘಟನೆಯಲ್ಲಿ ಹೊಸ ಚೈತನ್ಯ ಮೂಡಲಿದ್ದು, ಮುಂದಿನ ಸ್ಥಳೀಯ ಸಂಸ್ಥೆ ಹಾಗೂ ವಿಧಾನ ಪರಿಷತ್ ಚುನಾವಣೆಗಳ ಸಿದ್ಧತೆಯಲ್ಲಿ ಪಕ್ಷಕ್ಕೆ ಹೊಸ ದಿಕ್ಕು ದೊರೆಯುವ ನಿರೀಕ್ಷೆ ವ್ಯಕ್ತವಾಗಿದೆ.

-
ದಿನದ ಸುದ್ದಿ4 days agoದಾವಣಗೆರೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ವಕೀಲ ಎಲ್.ಎಚ್.ಅರುಣಕುಮಾರ್ ಮನವಿ
-
ದಿನದ ಸುದ್ದಿ2 days agoಮೊದಲ ಸಂಪುಟ ಸಭೆಯಲ್ಲೇ ಮಹತ್ವದ 5 ಘೋಷಣೆ ಮಾಡಿದ ಸಿಎಂ ಡಿಕೆಶಿ
-
ದಿನದ ಸುದ್ದಿ4 days agoದಾವಣಗೆರೆ ವಿಶ್ವವಿದ್ಯಾಲಯ | ಜೂನ್ 2 ರಿಂದ 4 ರವರೆಗೆ ‘ಭಾಷಾಂತರ ಕೌಶಲ್ಯ ತರಬೇತಿ ಶಿಬಿರ’
-
ಅಂಕಣ2 days agoಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
-
ದಿನದ ಸುದ್ದಿ4 days agoಕುಂಬಳಕಾಯಿ ಬೀಜದಲ್ಲಿ ‘ ಜೀವ ಸಂಜೀವಿನಿ’ : ಮಿಸ್ ಮಾಡ್ದೆ ಓದಿ ; ಆರೋಗ್ಯದ ಗುಟ್ಟು ತಿಳಿಯಿರಿ
-
ದಿನದ ಸುದ್ದಿ2 days agoಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ
-
ದಿನದ ಸುದ್ದಿ2 days agoಧನ್ಯವಾದಗಳು ಕರ್ನಾಟಕ : ಸಿಎಂ ಡಿಕೆ ಶಿವಕುಮಾರ್
-
ದಿನದ ಸುದ್ದಿ2 days agoಬಿ.ಕೆ. ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ

