Connect with us

ದಿನದ ಸುದ್ದಿ

ಮಕ್ಕಳ ಹಕ್ಕುಗಳಿಗೆ ಶ್ರೀರಕ್ಷೆಯಾಗಿದೆ ಮಕ್ಕಳ ರಕ್ಷಣಾ ಆಯೋಗ : ಅಪರ್ಣಾ ಎಂ ಕೊಳ್ಳ

Published

on

ಸುದ್ದಿದಿನ,ದಾವಣಗೆರೆ:ಯಾವುದೇ ಒಂದು ಮಗುವು ತನ್ನ ತಾಯಿಯ ಗರ್ಭದಲ್ಲಿರುವಾಗಲೇ ಮಗುವಿನ ಹಕ್ಕುಗಳು ಆರಂಭವಾಗುತ್ತವೆ. ಅವರ ಹಕ್ಕುಗಳ ರಕ್ಷಣೆಗಾಗಿಯೇ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ರಚಿಸಲಾಗಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಅಪರ್ಣಾ ಎಂ ಕೊಳ್ಳ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವತಿಯಿಂದ ಶುಕ್ರವಾರ ನಗರದ ಎ. ವಿ.ಕೆ ಕಾಲೇಜ್ ರಸ್ತೆಯಲ್ಲಿನ ಗುರುಭವನದಲ್ಲಿ ಆಯೋಜಿಸಲಾಗಿದ್ದ ನಿಮ್ಮ ಹಕ್ಕು ನಿಮ್ಮ ಧ್ವನಿ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರಿಗೂ ಬದುಕುವ ಹಕ್ಕು, ರಕ್ಷಣೆಯ ಹಕ್ಕು, ಉಚಿತ ಮತ್ತು ಕಡ್ಡಾಯ ಶಿಕ್ಷಣ, ಸಮಾನತೆಯ ಹಕ್ಕು ಹೀಗೆ ತಮ್ಮ ಹಕ್ಕುಗಳು ನಾವು ತಾಯಿಯ ಗರ್ಭದಲ್ಲಿರುವಾಗಲೇ ಮಕ್ಕಳ ಹಕ್ಕುಗಳು ಆರಂಭವಾಗುತ್ತದೆ. ಅವುಗಳನ್ನು ರಕ್ಷಿಸುವ ಸಲುವಾಗಿಯೇ ಸರ್ಕಾರ ವಿವಿಧ ಯೋಜನೆ ರೂಪಿಸಿದೆ. ಮಕ್ಕಳ ರಕ್ಷಣಾ ಘಟಕ, ಕಲ್ಯಾಣ ಸಮಿತಿ ರಚಿಸಿದೆ. ನಿಮ್ಮ ಹಕ್ಕುಗಳಿಗೆ ಚ್ಯುತಿ ಉಂಟಾದಾಗ, ಉಲ್ಲಂಘನೆಯಾದಾಗ ಯಾವುದೇ ರೀತಿಯ ಸಮಸ್ಯೆಗಳು ಎದುರಾದಾಗ ಮಕ್ಕಳ ಸಹಾವಾಣಿ ಸಂಖ್ಯೆ 1098 ಅಥವಾ ಪೊಲೀಸ್ ಸಹಾಯವಾಣಿ ಸಂಖ್ಯೆ 112ಗೆ ಸಂಪರ್ಕಿಸಬೇಕು.

ಎಂತಹದೇ ಸಮಸ್ಯೆಗಳಿದ್ದರೂ ಮುಕ್ತವಾಗಿ ಹೇಳಿಕೊಂಡು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಇದಕ್ಕಾಗಿ ಆಯೋಗವು ಸದಾ ನಿಮ್ಮೊಂದಿಗಿರಲಿದೆ ಎಂದರು.
ಶಿಕ್ಷಣ ಒಂದು ಹರಿತವಾದ ಆಯುಧವಿದ್ದಂತೆ, ಅದನ್ನು ಪ್ರತಿಯೊಬ್ಬರು ಸದ್ವಿನಿಯೋಗ ಪಡೆದು ಉತ್ತಮ ವ್ಯಕ್ತಿಯಾಗಬೇಕು.

ಜಿಲ್ಲೆಯಲ್ಲಿ ಇಂದಿಗೂ ಸಹ ಬಾಲ್ಯ ವಿವಾಹ ಪ್ರಕರಣ ದಾಖಲಾಗುತ್ತಿವೆ. ಇನ್ನು ಮುಂದೆಯೂ ಮಾರ್ಚ್ ಮತ್ತು ಏಪ್ರಿಲ್ ಮಾಹೆಯಲ್ಲಿ ಮದುವೆ ನಡೆಯುತ್ತವೆ. ಈ ಸಂದರ್ಭದಲ್ಲಿ ಬಾಲ್ಯ ವಿವಾಹ ನಡೆಯುವುದು ಕಂಡು ಬಂದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅಥವಾ ಪೊಲೀಸ್ ಇಲಾಖೆ ಸಹಾಯವಾಣಿ ಸಂಖ್ಯೆ 112ಗೆ ಸಂಪರ್ಕಿಸಲು ತಿಳಿಸಿದರು.

ವಿದ್ಯಾರ್ಥಿಯೊಬ್ಬರು ಮಾತನಾಡಿ, ಡ್ರಾಪ್ ಔಟ್ ಮಕ್ಕಳ ಸಂಖ್ಯೆ ಹೆಚ್ಚಳಕ್ಕೆ ಕಾರಣವೇನು. ಅದಕ್ಕೆ ಪರಿಹಾರೋಪಾಯ ಕ್ರಮಗಳನ್ನು ಕೈಗೊಂಡಿದ್ದೀರಿ ಎಂಬ ಪ್ರಶ್ನೆಗೆ ಡಿಡಿಪಿಐ ಮಾತನಾಡಿ, ವೈಯಕ್ತಿಕ ಹಾಗೂ ಮನೆಯ ಆರ್ಥಿಕ ಪರಿಸ್ಥಿತಿ ಬಡತನ, ಬಾಲಕಾರ್ಮಿಕತೆ ಹೀಗೆ ಮುಂತಾದ ಕಾರಣಗಳಿಂದ ಶಾಲೆಗಳಿಂದ ಹೊರಗುಳಿಯುತ್ತಿದ್ದಾರೆ ಎಂದರು.

ಇದಕ್ಕೆ ದನಿಗೂಡಿಸಿದ ಎಸ್ಪಿ ಉಮಾಪ್ರಶಾಂತ್, ಜಿಲ್ಲೆಯಲ್ಲಿ ಇಲಾಖೆಯ ಮಾಹಿತಿ ಪ್ರಕಾರ ಪ್ರಸ್ತುತ 820 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಮನೆ ಮನೆಗೆ ಪೊಲೀಸ್ ಭೇಟಿ ನೀಡಿದಾಗ ವಿದ್ಯಾಭ್ಯಾಸದ ಕಡೆ ಒಲವಿಲ್ಲದಿರವುದು. ಬಾಲಕಾರ್ಮಿಕ ಪದ್ಧತಿ, ಬಡತನ ಹಾಗೂ ಪೋಷಕರಿಗೆ ಶಿಕ್ಷಣದ ಮಹತ್ವ ತಿಳಿಯದಿರುವುದು, ಈ ಎಲ್ಲಾ ಕಾರಣಗಳಿಂದ ಹೊರಗುಳಿದಿದ್ದಾರೆ. ಆದರೂ ಮನೆ ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಪೋಷಕರ ಮನವೊಲಿಸಿ ಕರೆತರುವ ಪ್ರಯತ್ನ ಮಾಡಲಾಗುತ್ತಿದೆ. ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬೇಕು. ಗುಣಮಟ್ಟದ ಶಿಕ್ಷಣ ಪಡೆದು ನಮ್ಮಂತೆಯೇ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂದು ಹುರಿದುಂಬಿಸಿದರು.

ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯೊಬ್ಬರು ಮಾತನಾಡಿ, ಇತ್ತೀಚೆಗೆ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚಲಾಗುತ್ತಿದೆ. ಅದಕ್ಕೆ ಪ್ರಮುಖ ಕಾರಣವೇನು ?. ಹೀಗೆ ಮುಂದುವರೆದರೆ ಬಡತನ ಮತ್ತು ಗ್ರಾಮೀಣ ಭಾಗದ ಮಕ್ಕಳು ಪಾಡೇನು ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಡಿಡಿಪಿಐ ಪ್ರಸ್ತುತ ಹೆಚ್ಚಿನ ಮಕ್ಕಳು ನಗರ ಮತ್ತು ಆಂಗ್ಲ ಮಾಧ್ಯಮದ ಮೇಲಿನ ವ್ಯಾಮೋಹದಿಂದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ದಾಖಲಾತಿ ಸಂಖ್ಯೆ ಕುಸಿಯುತ್ತಿದೆ. ಆದ್ದರಿಂದ ಜಿಲ್ಲೆಯಲ್ಲಿ 10 ಶಾಲೆಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ . ಅವುಗಳಲ್ಲಿ ಹೆಚ್ಚು ಸಂಖ್ಯೆಯಲ್ಲಿ ದಾಖಲಾತಿ ಆರಂಭವಾದ ನಂತರ ಪುನಃ ತೆರೆಯಲು ಅವಕಾಶ ನೀಡಲಾಗುವುದು ಎಂದು ತಿಳಿಸಿದರು.

ನಗರದ ಎಸ್‌ಪಿಎಸ್ ಶಾಲೆಯಲ್ಲಿ ಸುಸಜ್ಜಿತ ಕಟ್ಟಡ ಗುಣಮಟ್ಟದ ಶಿಕ್ಷಣವಿದೆ. ಆದರೆ ಆಟದ ಮೈದಾನವಿಲ್ಲ ಎಂದು ಬೇಸರಿಸಿದರು. ಸಂಬAಧಪಟ್ಟ ಅಧಿಕಾರಿಗಳು ಪ್ರತಿಕ್ರಿಯಿಸಿ ನಗರದಲ್ಲಿ ಲಭ್ಯವಿರುವ ಸರ್ಕಾರಿ ನಿವೇಶನ ಪಡೆದು ನೀಡಲಾಗುವುದು ಭರವಸೆ ನೀಡಿದರು.

ಜಿಲ್ಲೆಯ ಸಂತೇಬೆನ್ನೂರಿನ ಎಸ್.ಎಸ್.ಜೆ.ವಿ.ಪಿ ಶಾಲೆಯ ಸುತ್ತಮುತ್ತಲೂ 200 ಮೀಟರ್ ತಂಬಾಕು, ದೂಮಪಾನ ನಿಷೇಧಿತ ಪ್ರದೇಶವೆಂದು ಗುರುತಿಸಲಾಗಿದೆ. ಆದರೂ ಶಾಲೆಯ ತಡೆಗೋಡೆಯ ಸುತ್ತಮುತ್ತ ಎಗ್ಗಿಲ್ಲದೇ ತಂಬಾಕು ಉತ್ಪನ್ನ ಮಾರಾಟ, ಬಳಕೆ ಮಾಡಲಾಗುತ್ತಿದೆ. ಇದರಿಂದ ಶಾಲೆಯ ಮಕ್ಕಳು ಸಹ ದಾರಿ ತಪ್ಪುತ್ತಿದ್ದಾರೆ. ಹಾಗೆಯೇ ಸಂಜೆಯಾದರೆ ಶಾಲಾ ಆವರಣ ಕುಡುಕರ ಹಾಗೂ ಪುಂಡರ ಅಡ್ಡೆಯಾಗಿ ಮಾರ್ಪಾಡಾಗುತ್ತಿದೆ. ಶಾಲೆಯ ಕೂಗಳತೆಯ ದೂರದಲ್ಲಿಯೇ ಪೊಲೀಸ್ ಠಾಣೆ ಇದೆ. ಆದರೂ ಯಾವುದೇ ರೀತಿಯ ಕ್ರಮವಹಿಸುತ್ತಿಲ್ಲ ಎಂದು ವಿದ್ಯಾರ್ಥಿನಿಯೊಬ್ಬರು ಗಂಭೀರವಾಗಿ ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸ್ ವರಿಷ್ಠಾಧಿಕಾರಿ ಪರಿಶೀಲಿಸಿ ಸಂಬAಧಪಟ್ಟವರ ವಿರುದ್ಧ ಕ್ರಮವಹಿಸಲಾಗುವುದು ಎಂದರು.

ಇAದಿನ ಮಕ್ಕಳು ಹೆಚ್ಚು ಟಿವಿ, ಮೊಬೈಲ್ ಬಳಕೆ, ಆನ್ ಲೈನ್ ಗೇಮಿಂಗ್ ಗೀಳಿಗೆ ಬಲಿಯಾಗುತ್ತಿದ್ದಾರೆ. ಇದರಿಂದ ಓದುವ ಆಸಕ್ತಿ, ಏಕಾಗ್ರತೆ ಪಠ್ಯಗಳ ಜೊತೆಗಿನ ಒಡನಾಟವನ್ನೇ ಮರೆಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಆದ್ದರಿಂದ ಮಕ್ಕಳು ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಪಠ್ಯದ ಜೊತೆಗೆ ವಿವಿಧ ರೀತಿಯ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ವಿದ್ಯೆಗೆ ವಿನಯವೇ ಭೂಷಣ ಎಂಬAತೆ ಉತ್ತಮ ಸಂಸ್ಕಾರ, ಸಂಯಮ ತಾಳ್ಮೆ, ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡಲ್ಲಿ ಜೀವನದಲ್ಲಿ ಖಂಡಿತಾ ಯಶಸ್ವಿಯಾಗಬಹುದು ಎಂದು ಎಸ್ಪಿ ಉಮಾಪ್ರಶಾಂತ್ ಸಲಹೆ ನೀಡಿದರು.

ಪೋಕ್ಸೋ ಕಾಯ್ದೆಗೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಎಸ್ಪಿ ಅವರು ಪ್ರತೀ ವರ್ಷ ಸರಿ ಸುಮಾರು 90 ರಿಂದ 100 ಪ್ರಕರಣಗಳು ದಾಖಲಾಗುತ್ತಿವೆ. ಇಂತಹ ಪ್ರಕರಣ ಇತ್ಯರ್ಥಪಡಿಸುವ ಸಲುವಾಗಿ ವಿಶೇಷ ನ್ಯಾಯಾಲಯಗಳು ಸಹ ಸ್ಥಾಪಿಸಲಾಗಿದೆ ಎಂದ ಅವರು, ಪ್ರಸಕ್ತ ವರ್ಷದಲ್ಲಿ ಶೇ.94 ರಷ್ಟು ಪೋಕ್ಸೊ ಪ್ರಕರಣ ದಾಖಲಾಗಿವೆ ಎಂದು ಮಾಹಿತಿ ನೀಡಿದರು.

ಈ ಪ್ರಕರಣಗಳು ಹೆಚ್ಚಿನದಾಗಿ ಹದಿಹರೆಯದ ವಯಸ್ಸಿನಲ್ಲಿ ಅಥವಾ ಓದುವ ವಯಸ್ಸಿನಲ್ಲಿ ಪ್ರೀತಿ – ಪ್ರೇಮದ ಪಾಶಕ್ಕೆ ಬಲಯಾಗಿ ಅತೀ ಹೆಚ್ಚು ಪ್ರಕರಣ ದಾಖಲಾಗುತ್ತವೆ. ಆದ್ದರಿಂದ ಮಕ್ಕಳು ಓದುವ ವಯಸ್ಸಿನಲ್ಲಿ ಶ್ರದ್ಧೆಯಿಂದ ತಮ್ಮ ಕಾರ್ಯವನ್ನು ನಿರ್ವಹಿಸಬೇಕು. ಈ ಪ್ರೀತಿ ಪ್ರೇಮ ಅಮಲಿಗೆ ಬಿದ್ದು ತಮ್ಮ ಭವಿಷ್ಯದ ಜೀವನ ಆಳು ಮಾಡಿಕೊಳ್ಳಬೇಡಿ ಎಂದು ಸಲಹೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತಾ ಸ್ವಾಗತಿಸಿದರು. ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೊಟ್ರೇಶ್ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜಾನಾಯ್ಕ, ಬಡಾವಣೆ ಪೊಲೀಸ್ ಇನ್ಸ್ಪೆಕ್ಟರ್ ಗಾಯತ್ರಿ ಸೇರಿದಂತೆ ಮತ್ತಿತರರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ

Published

on

ಸುದ್ದಿದಿನ,ದಾವಣಗೆರೆ:ಬಿಜೆಪಿ ಮಹಿಳಾ ಮತದಾರರನ್ನು ಒಂದು ಪ್ರಬಲ ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವಲ್ಲಿ ಪ್ರಯತ್ನಿಸಿತ್ತು. ‘ನಾರಿ ಶಕ್ತಿ’ ಎಂಬ ಬ್ರಾಂಡ್ ಅಡಿಯಲ್ಲಿ ಮಹಿಳೆಯರನ್ನು ನೇರವಾಗಿ ತಲುಪುವ ತಂತ್ರವನ್ನು ಬಿಜೆಪಿ ರೂಪಿಸಿತ್ತು. ಮಹಿಳಾ ಮೀಸಲಾತಿ ಮಸೂದೆಯನ್ನು ಈ ಬ್ರಾಂಡ್‌ನ ಸರ್ವೋಚ್ಚ ಸಾಧನೆಯಾಗಿ ಪ್ರಸ್ತುತಪಡಿಸಲಾಯಿತು. ಆದರೆ ಬಿಜೆಪಿ ಒಂದು ಅತ್ಯಂತ ವ್ಯವಸ್ಥಿತ ಮತ್ತು ಚಾಣಾಕ್ಷ ‘ಪಾಲಿಟಿಕಲ್ ಮಾರ್ಕೆಟಿಂಗ್’ ತಂತ್ರವಾಗಿ ಬಳಸಿಕೊಳ್ಳುವುದಕ್ಕೆಯತ್ನಿಸಿ ವಿಫಲವಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದರು.

ಗೃಹ ಕಚೇರಿಯಲ್ಲಿ ಇಂದು ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿಯನ್ನು ಕ್ಷೇತ್ರ ಪುನರ್‌ವಿಂಗಡಣೆಗೆ “ಬಲಿಪಶು” ಮಾಡುವುದು ಸರಿಯಲ್ಲ. ೨೦೨೩ರ ಕಾಯಿದೆಯಲ್ಲಿ ಜನಗಣತಿ ನಂತರ ಅನುಷ್ಠಾನ ಎಂದು ತಿಳಿಸಲಾಗಿದೆ. ಆದರೆ ಈಗ ೨೦೧೧ರ ಜನಗಣತಿ ಆಧಾರದಲ್ಲಿ ವೇಗಗೊಳಿಸುವುದು ಏಕೆ? ಜಾತಿ ಜನಗಣತಿಯನ್ನು ಸೇರಿಸದಿದ್ದರೆ ಪುನರ್‌ವಿಂಗಡಣೆಯು ಸಾಮಾಜಿಕ ನ್ಯಾಯಕ್ಕೆ ಹೊಂದುವುದಿಲ್ಲ. ದಕ್ಷಿಣ ರಾಜ್ಯಗಳಲ್ಲಿ ಕುಟುಂಬ ನಿಯಂತ್ರಣದ ಯಶಸ್ಸಿಗೆ ಶಿಕ್ಷೆ ನೀಡುವಂತಾಗಬಾರದು. ಜನಸಂಖ್ಯೆ ನಿಯಂತ್ರಣ ಮಾಡಿದ್ದು ದಕ್ಷಣ ಭಾರತ. ಇದರ ಆಧಾರದ ಮೇರೆಗೆ ಮಸೂದೆ ಜಾರಿಗಿದ್ದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗುತ್ತಿತ್ತು. ಬಿಜೆಪಿ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡಿತು. ಆದರೆ ಮೂರನೇ ಎರಡರಷ್ಟು ಬಹುಮತ ಸಿಗಲಿಲ್ಲ ಎಂದರು.

ಮಸೂದೆಯನ್ನು ವೋಟ್ ಬ್ಯಾಂಕ್ ಆಗಿ ಬಳಕೆ ಮಾಡಿಕೊಂಡು ಮಹಿಳೆಯರ ಭಾವನೆಗಳೊಂದಿಗೆ ಆಟವಾಡಲು ಹೋಯಿತು. ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡಿತು. ಆದರೆ ಅದು ನಡೆಯಲಿಲ್ಲ. ನಮ್ಮ ವಿರೋಧವೇನಿದ್ದರು ಪುನರ್ ವಿಂಗಡಣೆ ಮಸೂದೆ ತಿರಸ್ಕರಿಸಿದೆ ಹೊರತು ಮಹಿಳಾ ಮೀಸಲು ಮಸೂದೆ ಅಲ್ಲ ಎಂದರು.

ಪಂಚ ರಾಜ್ಯಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಿದ್ದರೂ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಿದ್ದು ಚುನಾವಣಾ ಆಯೋಗ ನಿರ್ಧಾರ ತೆಗೆದುಕೊಳ್ಳಬೇಕು. ಅವರು ಚುನಾವಣೆಯ ಸಂದರ್ಭದಲ್ಲಿ ದೇಶ ಉದ್ದೇಶಿಸಿ ಮಾಡಿದ ಭಾಷಣದಲ್ಲಿ ವಿರೋಧ ಪಕ್ಷಗಳನ್ನು ತೆಗಳಿಕೆ ಮಾಡಿದ್ದು ಸರಿಯಲ್ಲ. ಇದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿಮಾಡಿದರು.

ಮಸೂದೆ ಕುರಿತು ಸರ್ವ ಪಕ್ಷಗಳ ಸಭೆ ಕರೆಯುವಂತೆ ಮಾಡಿಕೊಂಡ ಮನವಿ ಉಪೇಕ್ಷೆ ಮಾಡಿತು ಕೇಂದ್ರ ಸರ್ಕಾರ. ಮಹಿಳಾ ಮೀಸಲಾತಿ ಮಸೂದೆ ಈಗಾಗಲೇ ಲೋಕಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಕ್ಷೇತ್ರ ಪುನರ್ ವಿಂಗಡಣೆ ಬಗ್ಗೆ ಆತಂಕ ಇದೆ. ಎಲ್ಲರ ಒಪ್ಪಿಗೆ ಪಡೆದು ಮುಂದುವರೆದಿದ್ದರೆ ಅನುಕೂಲ ಆಗುತ್ತಿತ್ತು. ೨೦೨೪ರಲ್ಲಿ ಮಹಿಳಾ ಮೀಸಲು ಜಾರಿಗೆ ತರುವ ಅವಕಾಶ ಇತ್ರು. ಇದನ್ನು ಮಾಡಲು ಮುಂದಾಗಲಿಲ್ಲ. ಕ್ಷೇತ್ರ ಪುನರ್ ವಿಂಗಡಣೆ ಜಮ್ಮು ಮತ್ತು ಕಾಶ್ಮೀರ ಹಾಗೂ ಅಸ್ಸಾಂ ದಲ್ಲಿ ತಮ್ಮ ಅನುಕೂಲ, ರಾಜಕೀಯ ಲಾಭಕ್ಕೆ ಅನುಗುಣವಾಗಿ ಮಾಡಿ ತೋರಿಸಿದ್ದಾರೆ. ಈ ಬಗ್ಗೆ ಹೆಚ್ಚು ಆತಂಕ ಇದೆ. ಆಡಳಿತ ಪಕ್ಷಕ್ಕೆ ಈ ಮಸೂದೆ ಜಾರಿಗೆ ತರುವ ಬದ್ದತೆ ಇದ್ದಿದ್ದರೆ ಸರ್ವ ಪಕ್ಷಗಳನ್ನು ವಿಶ್ವಾಸಕ್ಕೆ ಪಡೆಯುವ ಪ್ರಯತ್ನ ಮಾಡುತ್ತಿದ್ದರು. ರಾಜೀವ್ ಗಾಂಧಿ ಅವರು ಸ್ಥಳೀಯ ಸಂಸ್ಥೆಯಲ್ಲಿ ಶೇ ೫೦ ಜಾರಿಗೆ ತಂದಿದ್ದೇವೆ ಎಂದರು.

ಜನಸಂಖ್ಯೆ ನಿಯಂತ್ರಣ ಮಾಡಿದ್ದು ದಕ್ಷಣ ಭಾರತ. ಇದರ ಆಧಾರದ ಮೇರೆಗೆ ಜಾರಿಗೆ ತಂದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗಲಿದೆ. ಜನಗಣತಿಯಲ್ಲಿ ಜಾತಿ ಗಣತಿ ನಡೆಯುತ್ತಿದೆಯೇ ಎಂಹುದು ಇನ್ನೂ ಸ್ಪಷ್ಟವಾಗಿ ಹೇಳಿಲ್ಲ. ಉತ್ತರ ಪ್ರದೇಶ ಹಾಗೂ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ನಡುವೆ ಇರುವ ವ್ಯತ್ಯಾಸ ದೊಡ್ಡದು. ಉತ್ತರ ಭಾರತೀಯ ರಾಜ್ಯಗಳು ಹೆಚ್ಚು ಪ್ರಾಬಲ್ಯ ಸಾಧಿಸಿದರೆ ದಕ್ಷಿಣ ಭಾರತಕ್ಕೆ ತೊಂದರೆ ಆಗುತ್ತದೆ. ಮಸೂದೆ ಮಂಡನೆಗೆ ಇನ್ನೂ ಎರಡು ವರ್ಷಗಳ ಕಾಲಾವಕಾಶ ಇದೆಯಾವುದು ಒಳಿತು ಎಂಬುದು ಮಹಿಳೆಯರು ಆಲೋಚನೆ ಮಾಡಲಿ ಎಂದರು.

ಸುದ್ದಿಗೋಷ್ಟಿಯಲ್ಲಿ ‘ಧೂಡಾ’ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಕಾಂಗ್ರೆಸ್ ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ಅನಿತಾಬಾಯಿ, ಮುಖಂಡರಾದ ಶಿವಕುಮಾರ್, ಅಯೂಬ್ ಪೈಲ್ವಾನ್, ಎ.ನಾಗರಾಜ್ ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ

Published

on

ಸುದ್ದಿದಿನ,ದಾವಣಗೆರೆ:ಕೆ. ಬೇವಿನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರದಲ್ಲಿ 21 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಇದೇ ವೇಳೆ ಸಾಲಕಟ್ಟೆ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹರಿಹರ ಇವರ ಸಂಯುಕ್ತ ಆಶ್ರಯದಲ್ಲಿ 11 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

ಶಿಬಿರದಲ್ಲಿ ಸತ್ಯನಾರಾಯಣ ಕ್ಯಾಂಪ್‌ನ ಡಾ. ರಾಮಾಂಜನೇಯ ಸ್ವಾಮಿ ಅವರು ಇದುವರೆಗೆ 110 ಬಾರಿ ರಕ್ತದಾನ ಮಾಡಿರುವುದು ವಿಶೇಷವಾಗಿದ್ದು, ಈ ಬಾರಿ ತಮ್ಮ ಮಗನೊಂದಿಗೆ ರಕ್ತದಾನ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಅಲ್ಲದೆ ವಿರೂಪಾಕ್ಷಪ್ಪ ಬಿ.ಕೆ. (ವಿ.ಆರ್.ಡಬ್ಲ್ಯೂ) ಎಂಬ ವಿಶೇಷ ಚೇತನರು 5ನೇ ಬಾರಿ ರಕ್ತದಾನ ಮಾಡಿ ಗಮನಾರ್ಹರಾಗಿದ್ದಾರೆ.

ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ (ಟಿ.ಎಚ್.ಒ) ಉಮಣ್ಣ ಅವರು ಮಾತನಾಡಿ, ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲವಾದುದರಿಂದ ರಕ್ತದಾನದ ಮಹತ್ವ ಅತ್ಯಂತ ಮಹತ್ತರವಾಗಿದೆ ಎಂದು ತಿಳಿಸಿದರು.

ವೈದ್ಯಾಧಿಕಾರಿಗಳಾದ ಡಾ. ರೇವತಿ ಎಚ್ ಬುಟ್ಟೆ ಅವರು ಮಾತನಾಡಿ, ಗ್ರಾಮದ ಜನರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿರುವುದು ಸಂತೋಷದ ಸಂಗತಿ. ಅತಿ ತುರ್ತು ಪರಿಸ್ಥಿತಿಗಳಲ್ಲಿ ರಕ್ತದಾನವು ಅನೇಕ ರೋಗಿಗಳ ಜೀವ ಉಳಿಸಲು ಸಹಾಯಕವಾಗುತ್ತದೆ ಎಂದು ಹೇಳಿದರು. ದಾವಣಗೆರೆ ಕೇಂದ್ರ ರಕ್ತ ನಿಧಿಯ ಡಾ. ಗೀತಾ ಡಿ.ಎಚ್. ಹಾಗೂ ಸಿಬ್ಬಂದಿಗಳು ರಕ್ತವನ್ನು ಸಂಗ್ರಹಿಸಿದರು.

ಈ ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಕರಾದ ಉಮೇಶ್ ಎಂ.ಆರ್.ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಹಾಗೂ ಗ್ರಾಮಸ್ಥರಾದ ವಿಶ್ವನಾಥ್ ಡಿ.ಆರ್. (ಉಪನ್ಯಾಸಕರು), ವಿಶ್ವನಾಥ್ ಎ.ಎಸ್., ಬನ್ನಿಕೋಡು ಸುರೇಶ್, ರೇವಣಸಿದ್ದಪ್ಪ, ಕೆ.ಜಿ. ಸಂತೋಷ್, ಜಿ.ಎಂ. ಮುರುಗೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಕೆ. ಬೇವಿನಹಳ್ಳಿ ಮತ್ತು ಸಾಲಕಟ್ಟೆ ಗ್ರಾಮಸ್ಥರ ಸಹಕಾರದಿಂದ ರಕ್ತದಾನ ಶಿಬಿರ ಯಶಸ್ವಿಯಾಗಿ ನೆರವೇರಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ

Published

on

ಸುದ್ದಿದಿನ,ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಮುಸ್ಲಿಂ ಸಮಾಜದ ನಾಯಕರಾಗಿದ್ದ ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸೈಫುಲ್ಲಾ ಸಾಬ್ (79ವರ್ಷ) ಅವರು ಇಂದು ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ದಾವಣಗೆರೆಯ ನಂಜಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದರು . ಮೃತರ ನಿಧನಕ್ಕೆ ಮುಸ್ಲಿಂ ಸಮುದಾಯದ ಮುಖಂಡರು, ವಿವಿಧ ಪಕ್ಷಗಳ ನಾಯಕರು ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

ಕರೆಕಟ್ಟೆಜನಾಬ್ ಸೈಯದ್ ಸೈಫುಲ್ಲ ಸಾಬ್ಮಿ ಲ್ಲತ್ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರೂ ಆಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದ ಸೈಯದ್ ಸೈಫುಲ್ಲಾ ಸಾಬ್ ಅವರು ಸಿಎಂ ಸಿದ್ದರಾಮಯ್ಯ, ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರ ಆಪ್ತರಾಗಿದ್ದರು.

ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರನ್ನು ಸೇರಿದಂತೆ ಕುಟುಂಬಸ್ಥರು, ಅಪಾರ ಬಂಧುಬಳಗದವರನ್ನು ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸಾಬ್ ಅವರು ಅಗಲಿದ್ದಾರೆ.

2013ರಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಜೆಡಿಎಸ್ ಸೇರಿ ಈ ಪಕ್ಷದಿಂದ ಸ್ಪರ್ಧಿಸಿ 26 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಶಾಮನೂರು ಶಿವಶಂಕರಪ್ಪರ ವಿರುದ್ಧ ಸೋತರೂ ಎರಡನೇ ಸ್ಥಾನ ಪಡೆದಿದ್ದರು. ಆಗ ಬಿಜೆಪಿ ಮೂರನೇ ಸ್ಥಾನಕ್ಕೆ ಹೋಗಿತ್ತು. ಮತ್ತೆ ಕಾಂಗ್ರೆಸ್ ಪಕ್ಷ ಸೇರಿದ್ದ ಅವರು, ಸಿದ್ದರಾಮಯ್ಯರ ಜೊತೆ ಉತ್ತಮ ಒಡನಾಟ ಹೊಂದಿದ್ದರು. ಅವರು ಸ್ನಾತಕೋತ್ತರ ವೃತ್ತಿಪರ ಬಿಎಸ್ಸಿ ಅನ್ನು ಮೈಸೂರು ವಿಶ್ವವಿದ್ಯಾಲಯದಿಂದ ಪಡೆದಿದ್ದರು. ದಾವಣಗೆರೆಯ ಡಿಆರ್ ಎಂ ಕಾಲೇಜಿನಲ್ಲಿ ಬಿ. ಎಡ್ ವ್ಯಾಸಂಗ ಮಾಡಿದ್ದರು. ಎಂ. ಎಂ. ಬಸಪ್ಪ ಶಿಕ್ಷಣ ಸಂಘದ ಕಾಲೇಜಿನಲ್ಲಿ ಪದವಿ ಪೂರೈಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending