Connect with us

ದಿನದ ಸುದ್ದಿ

ಮೌಲ್ಯ ಕಳೆದು ಕೊಳ್ತಿದ್ಯ ದಾವಣಗೆರೆ ವಿಶ್ವವಿದ್ಯಾಲಯ? ರಿಪೀಟರ್ಸ್ ಗೋಳು ಕೇಳೋರಿಲ್ಲ..

Published

on

~ಹನುಮಂತ ನಾಯ್ಕ್ .ಡಿ ಎಲ್. ಎಲ್. ಬಿ, ಆರ್. ಎಲ್. ಕಾನೂನು ಕಾಲೇಜು ದಾವಣಗೆರೆ

ದಾವಣಗೆರೆ ವಿಶ್ವವಿದ್ಯಾಲಯವು ಈ ಹಿಂದೆ ಮೌಲ್ಯಮಾಪನ ಮುಗಿದು 24 ಗಂಟೆಗಳ ಒಳಗೆ ಹಾಗೂ 2 ದಿನದ ಒಳಗೆ ಫಲಿತಾಂಶವನ್ನು ಪ್ರಕಟಿಸಿ ನೂತನ ದಾಖಲೆಯನ್ನು ನಿರ್ಮಿಸಿರುವ ಅನೇಕ ಪ್ರಸಂಗಗಳು ಉಂಟು. ಆದ್ಯಾಗ್ಯ್ಯು ಇದರಲ್ಲಿ ಅಷ್ಟೇ ಲೋಪದೋಷಗಳಿವೆ. ಇದರಿಂದಾಗಿ ಪ್ರಾಮಾಣಿಕವಾಗಿ ಓದುವ ವಿದ್ಯಾರ್ಥಿಗಳಿಗೆ ಮೋಸ ಹಾಗೂ ನಷ್ಟ ಉಂಟಾಗಿದೆ ಎಂದರೆ ತಪ್ಪಾಗಲಾರದು.

ವಿಶ್ವವಿದ್ಯಾಲಯದಲ್ಲಿದ್ದಾರಾ ಕಳಪೆ ಮೌಲ್ಯಮಾಪಕರು?

ವಿಶ್ವವಿದ್ಯಾಲಯ ನಡೆಸುವ ಪ್ರತಿ ಸೆಮಿಸ್ಟರ್ ಪರೀಕ್ಷೆಗಳಲ್ಲಿ ಹೀಗೊಂದು ಪವಾಡ ಆಗುವುದುoಟು ಏನು ಓದದೇ ಇರುವ ವಿದ್ಯಾರ್ಥಿ 35-40 ಅಂಕ ಗಳಿಸುವ ಪರಿಯನ್ನು ನೋಡಿದ್ದೇವೆ. ಚೆನ್ನಾಗಿ ಓದಿಕೊಂಡು ತರಗತಿಗೆ ಚಾಚು ತಪ್ಪದೆ ಬಂದು ಚೆನ್ನಾಗಿ ಬರೆದರು ವಿದ್ಯಾರ್ಥಿಗಳು ಫೇಲ್ ಆಗುತ್ತಿರುವುದು ನಿಜಕ್ಕೂ ದುರಾದುಷ್ಟಕರ .ಇಲ್ಲಿ ಮೌಲ್ಯ ಮಾಪನದಲ್ಲಿ ಇರುವ ಕಳಪೆಯನ್ನು ಮತ್ತು ಗುಣ ಮಟ್ಟವನ್ನು ಕಾಣಬಹುದು.

ರೀಪಿಟರ್ಸ್ ಗೋಳೇನು?

ರಿಪೀಟರ್ಸ್ ವಿದ್ಯಾರ್ಥಿಗಳು ಬ್ಯಾಕ್ ಲಾಗ್ ಗಳನ್ನು ಮಾಡಿ ಕೊಂಡಿರುವುದೇ ಅವರ ಪಾಲಿನ ದುರದೃಷ್ಟ ಎನ್ನಬಹುದು. ಏಕೆಂದರೆ ಒಂದು ಬಾರಿ ಫೇಲ್ ಆದರೆ ಅದನ್ನು ಮತ್ತೆ – ಮತ್ತೆ ಬರೆದರೂ ಸಹ ಅದನ್ನು ಪಾಸ್ ಆಗಲು ಸೆಣ ಸಾಡಬೇಕಾಗುತ್ತದೆ. ಇದರಿಂದಾಗಿ ತಮ್ಮ ಡಿಗ್ರಿ ಯನ್ನು ಅರ್ಧಕ್ಕೆ ನಿಲ್ಲಿಸಿ ಕೆಲಸದ ಮೊರೆ ಹೋಗುವಂತಾಗಿದೆ. ಒಬ್ಬ ವಿದ್ಯಾರ್ಥಿ ಎಷ್ಟು ಬಾರಿ ಫೇಲ್ ಆಗಲು ಸಾಧ್ಯ, ಮತ್ತೊಮ್ಮೆ ಆತ ಪರೀಕ್ಷೆ ಎದುರಿಸುವಾಗ ತನ್ನ ತಪ್ಪನ್ನೆಲ್ಲ ತಿದ್ದಿಕೊಂಡು ಪ್ರಯತ್ನಿಸುತ್ತಾನೆ. ಆದರೆ ಹತ್ತು ಬಾರಿ ಹೇಗೆ ಫೇಲ್ ಆಗಲು ಸಾಧ್ಯ.

ಸಕಾಲಕ್ಕೆ ಸಿಗದ ಮೂಲ ಅಂಕಪಟ್ಟಿಗಳು

ವಿಶ್ವವಿದ್ಯಾಲಯವು ಈ ಹಿಂದೆ ನಡೆಸಿದ ಒಂದು ಮತ್ತು ನಾಲ್ಕನೇ ಸೆಮಿಸ್ಟರ್ ನವರೆಗೂ ಮಾತ್ರ ಮೂಲ ಅಂಕಪಟ್ಟಿಗಳನ್ನು ವಿತರಿಸಿದೆ. ಐದು ಮತ್ತು ಆರನೇ ಸೆಮಿಸ್ಟರ್ ನ ಅಂಕಪಟ್ಟಿಗಳಿಲ್ಲದೆ ವಿದ್ಯಾರ್ಥಿಗಳು ( ಕಾನೂನು ಕಾಲೇಜು ಮತ್ತು BED ಅಭ್ಯರ್ಥಿಗಳು) ತಮ್ಮ ಪ್ರವೇಶವನ್ನು ರದ್ದು ಮಾಡುವ ಭೀತಿಯನ್ನು ಎದುರಿಸುವಂತಹ ಪರಿಸ್ಥಿತಿ ಉಂಟಾಗಿತ್ತು. ಇದಕ್ಕೆ ಮುಲಾಮು ಎಂಬಂತೆ ರಿಜಿಸ್ಟರ್ ರವರ ಸಹಿಯನ್ನು 5 ಮತ್ತು 6 ನೇ ಸೆಮಿಸ್ಟರ್ ಅಂಕಪಟ್ಟಿಗಳಿಗೆ ಹಾಕಲಾಯಿತು. ಇದಕ್ಕೆ ವಿಶ್ವವಿದ್ಯಾಲಯು ವೇಗವಾಗಿ ಮರುಮೌಲ್ಯ ಮಾಪನದ ನಂತರ ವೇಗವಾಗಿ ಈ ಪ್ರಕ್ರಿಯೆಯನ್ನು ಮುಗಿಸಬಹುದಿತ್ತು. ಸುಪ್ರೀಂಕೋರ್ಟ್ ನ ಆದೇಶದಂತೆ ಒಂದು ವಿಶ್ವವಿದ್ಯಾನಿಲಯವು ನಿಗದಿತ ಅವಧಿಯೊಳಗೆ ಮೂಲ ಅಂಕಪಟ್ಟಿ ಯನ್ನು ವಿದ್ಯಾರ್ಥಿಗಳಿಗೆ ವಿತರಿಸಬೇಕು ಎಂಬ ನಿರ್ದೇಶನವನ್ನು UGC ಗೆ ನೀಡಿದೆ.

ರಿಪೀಟರ್ಸ್ ಬಂಡೆಲ್ ಗಳನ್ನು ಬೇಕಾ ಬಿಟ್ಟಿ ಮೌಲ್ಯಮಾಪನ ಮಾಡಲಾಗುತ್ತಿದೆಯೇ?

ಮೌಲ್ಯಮಾಪಕರು ಪುನರಾ ವರ್ತಿತ ವಿದ್ಯಾರ್ಥಿಗಳ ಬುಕ್ಲೆಟ್ ಗಳನ್ನು ಸೂಕ್ತ ಉತ್ತರವಿದ್ದರೂ ಸಹ ಸುಮ್ಮನೆ ಗೀಟ್ ಎಳೆದು ಅವರನ್ನು ಫೇಲ್ ಮಾಡುತ್ತಿದ್ದಾರೆ. ಇಂತಹ ಕಳಪೆ ಮೌಲ್ಯಮಾಪಕರಿಂದ ಮೌಲ್ಯಮಾಪನಕ್ಕೆ ಇರುವ ಘನತೆ ಮತ್ತು ಗುಣಮಟ್ಟ ವನ್ನು ಕಳೆದುಕೊಳ್ಳುವoತಾಗಿದೆ. ಆದ್ದರಿಂದ ಸಂಬಂಧ ಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಅಂತಹ ಕಳಪೆ ಮೌಲ್ಯಮಾಪಕರನ್ನು ಗುರುತಿಸಿ ಅವರನ್ನು ಈ ಪ್ರಕ್ರಿಯೆಯಿಂದ ಕೈಬಿಡಬೇಕು.

ಗುಣಮುಟ್ಟದ ಪರೀಕ್ಷೆಗಳು ಈಗಿಲ್ಲ…

ಇತ್ತೀಚಿನ ದಿನಗಳಲ್ಲಿ ಪರೀಕ್ಷೆಗೆ ಇದ್ದಂತಹ ಮೌಲ್ಯ, ಗುಣಮಟ್ಟವು ಮರೆಯಾಗಿವೆ. ನ್ಯಾಯಯುತವಾಗಿ ಪರೀಕ್ಷೆಗಳನ್ನು ನಡೆಸುತ್ತಿಲ್ಲ, ಕೆಲವು ಖಾಸಗಿ ಕಾಲೇಜುಗಳು ತಮ್ಮ ಫಲಿತಾಂಶವನ್ನು ಸುಧಾರಿಸುದಕ್ಕೆ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುತ್ತಿವೆ.. ಇದರಿಂದಾಗಿ ವಿದ್ಯಾರ್ಥಿಗಳು ನಕಲು ಮಾಡಲು ಅವಕಾಶ ಇರುವ ಕಾಲೇಜುಗಳಿಗೆ ಪ್ರವೇಶವನ್ನು ತೆಗೆದುಕೊಳ್ಳುತ್ತಿದ್ದಾರೆ.

ಇವುಗಳನ್ನೆಲ್ಲ ನೋಡಿದರೆ ಪರೀಕ್ಷೆಗಳನ್ನು ನಡೆಸಿದರು ಪ್ರಯೋಜನವಿಲ್ಲ, ಕಾಲೇಜಿಗೆ ರೆಗ್ಯುಲರ್ ಆಗಿ ಹೋಗುವ ಅವಶ್ಯಕತೆ ಇಲ್ಲ, ಕೇವಲ ಜೆರಾಕ್ಸ್ ಅಂಗಡಿಗಳಲ್ಲಿ ಮೈಕ್ರೋ ಜೆರಾಕ್ಸ್ ಮಾಡಿಸಿಕೊಂಡರೆ ಸಾಕು ಪಾಸಾಗಬಹುದು ಎಂಬಂತಹ ಅಲಕ್ಷ್ಯ ವಿದ್ಯಾರ್ಥಿಗಳಿಗೆ ಅವರಿಸಿಕೊಂಡಿದೆ. ಈ ಮಾರ್ಗದ ಮೂಲಕ ಕಲಿತು ಪದವಿ ಪಡೆದ ವಿದ್ಯಾರ್ಥಿಗಳು ಸಮಾಜಕ್ಕೆ ಹಾಗೂ ಪೋಷಕರಿಗೆ ಏನು ಒಳಿತು ಮಾಡಿಯಾರು?. ನಾವು ಸುಮ್ಮನೆ ಗಣ್ಯರ ಕಾರ್ಯಕ್ರಮಗಳಲ್ಲಿ ನೀತಿ ಭೋದನೆ ಮಾಡುತ್ತೇವೆ ವಿನಃ ಅದನ್ನು ಕಾರ್ಯಗತ ಗೊಳಿಸುವಲ್ಲಿ ಹಾಗೂ ತಪ್ಪು ನಡೆದರು ಸಹ ಪ್ರಶ್ನಿಸದ ಬುದ್ದಿ ಜೀವಿ ಯಂತಿರುವ ಮೌನಿಗಳಾಗಿದ್ದೇವೆ. ಇದಕ್ಕೆ ಸಂಬಂಧ ಪಟ್ಟ ಅಧಿಕಾರಿಗಳು ಸೂಕ್ತ ಕ್ರಮವಹಿಸಿ ಇವುಗಳಿಗೆ ನಾಂದಿ ಹಾಡಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತೇವೆ…

ಮರುಮೌಲ್ಯಮಾಪನ ಹೆಸರಿಗಷ್ಟೇ

ಪದವಿ ಪರೀಕ್ಷೆ ಗಳಲ್ಲಿ ಕಡಿಮೆ ಅಂಕ ದೊರೆತ ವಿದ್ಯಾರ್ಥಿಗಳು ಮರು ಮೌಲ್ಯಮಾಪನದ ಮೊರೆ ಹೋಗುವುದುoಟು. ಅಲ್ಲಿಯೂ ಸಹ ವಿದ್ಯಾರ್ಥಿಗಳಿಗೆ ಅನ್ಯಾಯ ವಾಗುತ್ತಿದೆ, ಸುಮ್ಮನ್ನೆ ಬಡ ವಿದ್ಯಾರ್ಥಿಗಳು 350 ರೂಪಾಯಿ ಗಳನ್ನು ವ್ಯರ್ಥಮಾಡಿಕೊಳ್ಳುವಂತಹ ಸ್ಥಿತಿ ಏರ್ಪಟ್ಟಿದೆ. ಮೊದಲಿದ್ದ ಅಂಕಗಳನ್ನೇ ಪುನಃ ನಮೂದಿಸುರುತ್ತಾರೆ ಹೊರತು ಅದನ್ನು ನ್ಯಾಯಯು ತವಾಗಿ ಅಂಕಗಳನ್ನು ನೀಡುತ್ತಿಲ್ಲ ಇದರಿಂದ ಎಷ್ಟೋ ವಿದ್ಯಾರ್ಥಿಗಳು ಕಾಲೇಜು ಬಿಡುವಂತಹ ಸ್ಥಿತಿ ಏರ್ಪಟ್ಟಿದೆ. ಸರ್ಕಾರಿ ಕಾಲೇಜುಗಳಲ್ಲಿ ಓದುವ ಬಡ ವಿದ್ಯಾರ್ಥಿಗಳು ಪದವಿ ತ್ಯಜಿಸುತ್ತಿದ್ದಾರೆ. ಇದರಿಂದಾಗಿ ಸರ್ಕಾರಿ ಕಾಲೇಜುಗಳಿಗೆ ಸೇರುವವರ ಸಂಖ್ಯೆ ಕಡಿಮೆಯಾಗಿ ದಾಖಲಾತಿ ಅಂಕಿ ಅಂಶ ಗಳು ಬದಲಾಗಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

ದಿನದ ಸುದ್ದಿ

ಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ

Published

on

ಸುದ್ದಿದಿನ,ದಾವಣಗೆರೆ:ಕೆ. ಬೇವಿನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರದಲ್ಲಿ 21 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಇದೇ ವೇಳೆ ಸಾಲಕಟ್ಟೆ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹರಿಹರ ಇವರ ಸಂಯುಕ್ತ ಆಶ್ರಯದಲ್ಲಿ 11 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

ಶಿಬಿರದಲ್ಲಿ ಸತ್ಯನಾರಾಯಣ ಕ್ಯಾಂಪ್‌ನ ಡಾ. ರಾಮಾಂಜನೇಯ ಸ್ವಾಮಿ ಅವರು ಇದುವರೆಗೆ 110 ಬಾರಿ ರಕ್ತದಾನ ಮಾಡಿರುವುದು ವಿಶೇಷವಾಗಿದ್ದು, ಈ ಬಾರಿ ತಮ್ಮ ಮಗನೊಂದಿಗೆ ರಕ್ತದಾನ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಅಲ್ಲದೆ ವಿರೂಪಾಕ್ಷಪ್ಪ ಬಿ.ಕೆ. (ವಿ.ಆರ್.ಡಬ್ಲ್ಯೂ) ಎಂಬ ವಿಶೇಷ ಚೇತನರು 5ನೇ ಬಾರಿ ರಕ್ತದಾನ ಮಾಡಿ ಗಮನಾರ್ಹರಾಗಿದ್ದಾರೆ.

ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ (ಟಿ.ಎಚ್.ಒ) ಉಮಣ್ಣ ಅವರು ಮಾತನಾಡಿ, ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲವಾದುದರಿಂದ ರಕ್ತದಾನದ ಮಹತ್ವ ಅತ್ಯಂತ ಮಹತ್ತರವಾಗಿದೆ ಎಂದು ತಿಳಿಸಿದರು.

ವೈದ್ಯಾಧಿಕಾರಿಗಳಾದ ಡಾ. ರೇವತಿ ಎಚ್ ಬುಟ್ಟೆ ಅವರು ಮಾತನಾಡಿ, ಗ್ರಾಮದ ಜನರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿರುವುದು ಸಂತೋಷದ ಸಂಗತಿ. ಅತಿ ತುರ್ತು ಪರಿಸ್ಥಿತಿಗಳಲ್ಲಿ ರಕ್ತದಾನವು ಅನೇಕ ರೋಗಿಗಳ ಜೀವ ಉಳಿಸಲು ಸಹಾಯಕವಾಗುತ್ತದೆ ಎಂದು ಹೇಳಿದರು. ದಾವಣಗೆರೆ ಕೇಂದ್ರ ರಕ್ತ ನಿಧಿಯ ಡಾ. ಗೀತಾ ಡಿ.ಎಚ್. ಹಾಗೂ ಸಿಬ್ಬಂದಿಗಳು ರಕ್ತವನ್ನು ಸಂಗ್ರಹಿಸಿದರು.

ಈ ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಕರಾದ ಉಮೇಶ್ ಎಂ.ಆರ್.ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಹಾಗೂ ಗ್ರಾಮಸ್ಥರಾದ ವಿಶ್ವನಾಥ್ ಡಿ.ಆರ್. (ಉಪನ್ಯಾಸಕರು), ವಿಶ್ವನಾಥ್ ಎ.ಎಸ್., ಬನ್ನಿಕೋಡು ಸುರೇಶ್, ರೇವಣಸಿದ್ದಪ್ಪ, ಕೆ.ಜಿ. ಸಂತೋಷ್, ಜಿ.ಎಂ. ಮುರುಗೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಕೆ. ಬೇವಿನಹಳ್ಳಿ ಮತ್ತು ಸಾಲಕಟ್ಟೆ ಗ್ರಾಮಸ್ಥರ ಸಹಕಾರದಿಂದ ರಕ್ತದಾನ ಶಿಬಿರ ಯಶಸ್ವಿಯಾಗಿ ನೆರವೇರಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ

Published

on

ಸುದ್ದಿದಿನ,ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಮುಸ್ಲಿಂ ಸಮಾಜದ ನಾಯಕರಾಗಿದ್ದ ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸೈಫುಲ್ಲಾ ಸಾಬ್ (79ವರ್ಷ) ಅವರು ಇಂದು ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ದಾವಣಗೆರೆಯ ನಂಜಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದರು . ಮೃತರ ನಿಧನಕ್ಕೆ ಮುಸ್ಲಿಂ ಸಮುದಾಯದ ಮುಖಂಡರು, ವಿವಿಧ ಪಕ್ಷಗಳ ನಾಯಕರು ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

ಕರೆಕಟ್ಟೆಜನಾಬ್ ಸೈಯದ್ ಸೈಫುಲ್ಲ ಸಾಬ್ಮಿ ಲ್ಲತ್ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರೂ ಆಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದ ಸೈಯದ್ ಸೈಫುಲ್ಲಾ ಸಾಬ್ ಅವರು ಸಿಎಂ ಸಿದ್ದರಾಮಯ್ಯ, ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರ ಆಪ್ತರಾಗಿದ್ದರು.

ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರನ್ನು ಸೇರಿದಂತೆ ಕುಟುಂಬಸ್ಥರು, ಅಪಾರ ಬಂಧುಬಳಗದವರನ್ನು ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸಾಬ್ ಅವರು ಅಗಲಿದ್ದಾರೆ.

2013ರಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಜೆಡಿಎಸ್ ಸೇರಿ ಈ ಪಕ್ಷದಿಂದ ಸ್ಪರ್ಧಿಸಿ 26 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಶಾಮನೂರು ಶಿವಶಂಕರಪ್ಪರ ವಿರುದ್ಧ ಸೋತರೂ ಎರಡನೇ ಸ್ಥಾನ ಪಡೆದಿದ್ದರು. ಆಗ ಬಿಜೆಪಿ ಮೂರನೇ ಸ್ಥಾನಕ್ಕೆ ಹೋಗಿತ್ತು. ಮತ್ತೆ ಕಾಂಗ್ರೆಸ್ ಪಕ್ಷ ಸೇರಿದ್ದ ಅವರು, ಸಿದ್ದರಾಮಯ್ಯರ ಜೊತೆ ಉತ್ತಮ ಒಡನಾಟ ಹೊಂದಿದ್ದರು. ಅವರು ಸ್ನಾತಕೋತ್ತರ ವೃತ್ತಿಪರ ಬಿಎಸ್ಸಿ ಅನ್ನು ಮೈಸೂರು ವಿಶ್ವವಿದ್ಯಾಲಯದಿಂದ ಪಡೆದಿದ್ದರು. ದಾವಣಗೆರೆಯ ಡಿಆರ್ ಎಂ ಕಾಲೇಜಿನಲ್ಲಿ ಬಿ. ಎಡ್ ವ್ಯಾಸಂಗ ಮಾಡಿದ್ದರು. ಎಂ. ಎಂ. ಬಸಪ್ಪ ಶಿಕ್ಷಣ ಸಂಘದ ಕಾಲೇಜಿನಲ್ಲಿ ಪದವಿ ಪೂರೈಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ

Published

on

ಸುದ್ದಿದಿನ,ದಾವಣಗೆರೆ:ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ ನಡೆಸಿ ವರದಿ ನೀಡುವಂತೆ , ಜಿಲ್ಲೆಯ ಕೆರೆಗಳ ಸಂರಕ್ಷಣೆ ಹಾಗೂ ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರುಗಳಿಗೆ ಜಿಲ್ಲಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ ಅವರು ಸೂಚನೆ ನೀಡಿದರು.

ಅವರು (ಏ.15) ಕೆರೆಗಳ ಸಂರಕ್ಷಣೆ, ಒತ್ತುವರಿ ತೆರವು ಹಾಗೂ ಮುಂಬರುವ ಬೇಸಿಗೆಯ ಕುಡಿಯುವ ನೀರಿನ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಒಟ್ಟು 533 ಕೆರೆಗಳ ಪೈಕಿ ಇನ್ನೂ 20 ಕೆರೆಗಳ ಒತ್ತುವರಿ ತೆರವು ಕಾರ್ಯ ಬಾಕಿ ಇದೆ. ಚನ್ನಗಿರಿ ತಾಲ್ಲೂಕಿನ 5 ಕೆರೆಗಳಾದ ಹರೇಗಂಗೂರು, ಸಾಗರಪೇಟೆ, ದಾಗಿನಕಟ್ಟೆ, ತ್ಯಾವಣಿಗ ಮತ್ತು ಸೂಳೆಕೆರೆ; ಹರಿಹರ ತಾಲ್ಲೂಕಿನ 7 ಕೆರೆಗಳಾದ ಹಿಂಡಸಗಟ್ಟ, ಜಿಗಳಿ, ಹಾಲಿವಾಣ, ಕಮಲಾಪುರ, ಗುಡ್ಡದತುಮ್ಮಿನಕಟ್ಟೆ, ಕುಂಬಳೂರು, ಯಲವಟ್ಟಿ; ದಾವಣಗೆರೆ ತಾಲ್ಲೂಕಿನ ಹೊನ್ನೂರು, ಹದಡಿ, ಮಾಳಗೊಂಡನಹಳ್ಳಿಯ 3 ಕೆರೆಗಳು ಹಾಗೂ ಹೊನ್ನಾಳಿ ತಾಲ್ಲೂಕಿನ ನೆಲಹೊನ್ನೆ, ಬನ್ನಿಕೊಡು, ಕುಂಬಳೂರು, ಸಾಸ್ವೆಹಳ್ಳಿ ಮತ್ತು ಬಲಮುರಿ ಕೆರೆಗಳನ್ನು ಶೀಘ್ರವಾಗಿ ಗುರುತಿಸಿ ತೆರವುಗೊಳಿಸಲು ಕ್ರಮವಹಿಸಬೇಕು. ತೆರವು ಕಾರ್ಯಾಚರಣೆಯನ್ನು ಛಾಯಾಚಿತ್ರ ಮತ್ತು ವಿಡಿಯೋ ಚಿತ್ರೀಕರಣದೊಂದಿಗೆ ಪಾರದರ್ಶಕವಾಗಿ ನಡೆಸಿ ಗ್ರಾಮ ಪಂಚಾಯತಿಗಳಿಗೆ ಅಧಿಕೃತವಾಗಿ ಹಸ್ತಾಂತರಿಸಬೇಕು ಎಂದು ತಿಳಿಸಿದರು.

ಚನ್ನಗಿರಿ ಹಾಗೂ ದಾವಣಗೆರೆ ತಾಲ್ಲೂಕಿನ ಹಲವು ಕೆರೆಗಳಿಗೆ ಕೊಳಚೆ ನೀರು ಸೇರುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಉದ್ದೇಶಕ್ಕೆ ಬಳಸುವ ಕೆರೆಗಳ ನೀರಿನ ಮಾದರಿಯನ್ನು ಪ್ರತಿ ತಿಂಗಳು ಪ್ರಯೋಗಾಲಯದಲ್ಲಿ ಪರೀಕ್ಷಿಸಿ ವರದಿ ಸಲ್ಲಿಸಬೇಕು. ಯೋಗ್ಯವಾಗಿದ್ದರೆ ಮಾತ್ರ ಕುಡಿಯಲು ಬಳಸಬೇಕು ಎಂದರು.

ಕೆರೆಗಳಲ್ಲಿ ಹೂಳೆತ್ತುವ ಕಾರ್ಯವನ್ನು ಕೇವಲ ರೈತರಿಗೆ ಮಾತ್ರ ಸೀಮಿತಗೊಳಿಸಬೇಕು. ಅಕ್ರಮ ಮಣ್ಣು ಸಾಗಾಟಕ್ಕೆ ಆಸ್ಪದ ನೀಡದಂತೆ ಭೂ-ವಿಜ್ಞಾನ ಇಲಾಖೆ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಹಾಗೂ ಮಣ್ಣಿನ ಮೂಲ ಪದರ ಹಾನಿಯಾಗದಂತೆ ಕ್ರಮವಹಿಸಬೇಕೆಂದು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೆರೆಗಳನ್ನು ಒತ್ತುವರಿಯಿಂದ ಶಾಶ್ವತವಾಗಿ ಮುಕ್ತಗೊಳಿಸಲು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಕೆರೆಗಳ ಬಫರ್ ವಲಯದಲ್ಲಿ ಸಸಿಗಳನ್ನು ನೆಟ್ಟು ಜೈವಿಕ ಬೇಲಿ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಮುಂಬರುವ ಮಳೆಗಾಲದ ವೇಳೆಗೆ ಸಸಿಗಳನ್ನು ನೆಡಲು ಸಿದ್ಧತೆ ಮಾಡಿಕೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ವ್ಯಾಪ್ತಿಯಲ್ಲಿ ಕೆರೆಗಳ ನೀರಿನ ಸಂಗ್ರಹಣಾ ಮಟ್ಟದ ಕುರಿತು ವಿವರ (ಮಾರ್ಚ್ 31 ಅಂತ್ಯಕ್ಕೆ)

ಪೂರ್ಣ ತುಂಬಿದ ಕೆರೆಗಳು: ಜಿಲ್ಲೆಯ ಒಟ್ಟು 08 ಕೆರೆಗಳು ಶೇ. 100 ರಷ್ಟು ಭರ್ತಿಯಾಗಿವೆ.

ಶೇ. 51 ರಿಂದ ಶೇ. 99 ರಷ್ಟು: ಒಟ್ಟು 47 ಕೆರೆಗಳಲ್ಲಿ ಉತ್ತಮ ನೀರಿನ ಸಂಗ್ರಹವಿದೆ.

ಶೇ. 31 ರಿಂದ ಶೇ. 50 ರಷ್ಟು: ಸುಮಾರು 164 ಕೆರೆಗಳು ಅರ್ಧದಷ್ಟು ನೀರಿನ ಮಟ್ಟವನ್ನು ಹೊಂದಿವೆ.

ಶೇ. 1 ರಿಂದ ಶೇ. 30 ರಷ್ಟು: ಜಿಲ್ಲೆಯ ಗರಿಷ್ಠ ಅಂದರೆ 250 ಕೆರೆಗಳಲ್ಲಿ ಕನಿಷ್ಠ ಪ್ರಮಾಣದ ನೀರು ಸಂಗ್ರಹವಾಗಿದೆ.

ಶೂನ್ಯ ಮಟ್ಟ (ತುಂಬಿರದ ಕೆರೆಗಳು): ಪ್ರಸ್ತುತ ಜಿಲ್ಲೆಯ 64 ಕೆರೆಗಳಲ್ಲಿ ನೀರಿನ ಸಂಗ್ರಹವಿಲ್ಲದೆ ಖಾಲಿಯಾಗಿವೆ.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರಣ್ಣನವರ್‌, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್‌, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರುಗಳು, ಬೃಹತ್‌ ಮತ್ತು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು , ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending