Connect with us

ದಿನದ ಸುದ್ದಿ

ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ

Published

on

ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ ಅವರು ಅಭಿಪ್ರಾಯಪಟ್ಟರು.

ಬೆಂಗಳೂರಿನ ಕೆ.ನಾರಾಯಣಪುರದ ಕ್ರಿಸ್ತು ಜಯಂತಿ ಡೀಮ್ಡ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಹಾಗೂ ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ: ಸಾಂಸ್ಕೃತಿಕ ಅನುಸಂಧಾನ’ ವಿಷಯ ಕುರಿತಾದ ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ತತ್ವಪದ ಸಾಹಿತ್ಯ ರೂಪುಗೊಂಡಿದ್ದ ಕಾಲವನ್ನು ಕತ್ತಲಯುಗ ಎಂದು ಕರೆದು ವಿಸ್ಮೃತಿಗೆ ತಳ್ಳಲಾಗಿತ್ತು. ಆದರೆ ಆ ಕತ್ತಲೆಯುಗದಲ್ಲಿಯೇ ಜಗತ್ತಿಗೆ ಮಹೋನ್ನತ ಬೆಳಕು ನೀಡುವ ನುಡಿರತ್ನಗಳು ರಚನೆಗೊಂಡಿದ್ದವು. ತತ್ವಪದಕಾರರು ಪರಂಪರೆಯೊಂದಿಗೆ ಸಂವಾದ ನಡೆಸುತ್ತಾ ವರ್ತಮಾನಕ್ಕೆ ಸೂಕ್ತವಾಗಿ ಅನ್ವಯವಾಗುವ ಹಾಗೂ ಭವಿಷ್ಯಕ್ಕೆ ಬೇಕಾದ ಜಾಗೃತಿಯನ್ನು ನೀಡುವ ಮೂಲಕ ಕನ್ನಡ ಸಂಸ್ಕೃತಿಯಲ್ಲಿ ತಮ್ಮದೇ ಆದ ಮೌಲ್ಯಯುತ ಸ್ಥಾನವನ್ನು ಪಡೆದುಕೊಂಡಿವೆ. ಸಮಾಜದಲ್ಲಿರುವ ಜಾತಿಭೇದ, ಲಿಂಗಭೇದ, ವರ್ಣಭೇದ ಮೊದಲಾದ ವಿಷಕಾರಿ ಮನಸ್ಥಿತಿಗೆ ತತ್ವಪದಕಾರರು ತಮ್ಮ ನುಡಿ-ನಡೆಗಳ ಮೂಲಕ ಚಿಕಿತ್ಸೆ ನೀಡುವ ಮೂಲಕ ಬದುಕಿನ ಸತ್ಯ ಮತ್ತು ಸಾರ್ಥಕತೆಯನ್ನು ಸಾಧಿಸಿತೋರಿದ್ದಾರೆ ಎಂದು ತಿಳಿಸಿದರು.

ವಿಶ್ವಾತ್ಮಕವಾದ ಸಂವೇದನೆಯ ತತ್ವಪದ ಸಾಹಿತ್ಯ

ವಿಚಾರಸಂಕಿರಣವನ್ನು ಉದ್ಘಾಟನೆ ಮಾಡಿದ ಕ್ರಿಸ್ತು ಜಯಂತಿ ವಿವಿಯ ಸಂಸೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಫಾ.ಡಾ.ಮರಿಯಾಲಾಲ್ ಜೋಸೆಫ್ ಅವರು, ಕನ್ನಡದ ತತ್ವಪದಗಳು ಜನಸಾಮಾನ್ಯರ ವೇದಗಳಾಗಿವೆ. ಕನ್ನಡ ಸಾಹಿತ್ಯಕ್ಕೆ ಸಂಗೀತಾತ್ಮಕ ಶಾಸ್ತ್ರೀಯ ಸಂರಚನೆಯ ಜೊತೆಗೆ ವಿಶ್ವಾತ್ಮಕವಾದ ಸಂವೇದನೆಯ ಮೂಲಕ ಮಹತ್ತರವಾದ ಕೊಡುಗೆ ನೀಡಿದ್ದು ತತ್ವಪದ ಸಾಹಿತ್ಯ.

ಮಧ್ಯಯುಗೀನ ಕಾಲದ ಭಕ್ತಿಚಳವಳಿಯ ಭಾಗವಾಗಿ ಮೂಡಿಬಂದ ವಚನ ಸಾಹಿತ್ಯ ಹಾಗೂ ಕೀರ್ತನ ಸಾಹಿತ್ಯಗಳು ಕರ್ನಾಟಕದಲ್ಲಿ ಮೂಡಿಸಿದ ಸಾಂಸ್ಕೃತಿಕ ಚೈತನ್ಯಶೀಲತೆಯನ್ನು ನಂತರದಲ್ಲಿ ಮುಂದುವರೆಸುವ ಮೂಲಕ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದದ್ದು ತತ್ವಪದ ಸಾಹಿತ್ಯವಾಗಿದೆ. ಇಂದಿನ ಆವೇಗದ ಆಧುನಿಕ ಜಗತ್ತಿಗೆ ತತ್ವಪದಕಾರರು ನೀಡಿದ ಅರಿವಿನ ಬೆಳಕು ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ನಿಜತ್ವ ಬೆಳಗುವ ದಾರಿದೀಪ ತತ್ವಪದಗಳು-ಪದ್ಮಾಲಯ ನಾಗರಾಜ್: ಪ್ರಧಾನಗೋಷ್ಠಿಯ ಅಧ್ಯಕ್ಷತೆ ವಹಿಸಿ ತತ್ವಪದಗಳ ಸಾಂಸ್ಕೃತಿಕ ಮಹತ್ವ ಕುರಿತು ಮಾತನಾಡಿದ ಅಚಲ ಸಾಧಕರಾದ ಪದ್ಮಾಲಯ ನಾಗರಾಜ್ ಅವರು, ಜಗತ್ತಿನಾದ್ಯಂತ ಇಂದು ನಡೆಯುತ್ತಿರುವ ಅಧಿಕಾರ ಹಾಗೂ ವ್ಯಾಪಾರದಾಹೀ ರಾಜಕೀಯ ಲಂಪಟ, ಆರ್ಥಿಕ ಲಂಪಟ ಹಾಗೂ ಸಾಮಾಜಿಕ ಅಸಮಾನ ಸೃಷ್ಟಿಗಳು ಮಾನವಲೋಕವನ್ನು ಭ್ರಮೆ ಮತ್ತು ಅಸತ್ಯದತ್ತ ಕೊಂಡೊಯ್ಯುತ್ತಿವೆ. ಅವೈಜ್ಞಾನಿಕ ಕಲ್ಪನೆಗಳನ್ನು ಹುಟ್ಟುಹಾಕುತ್ತಾ ವಾಸ್ತವಿಕತೆಯಿಂದ ದೂರಮಾಡುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಿರಂತರ ಆಗುವಿಕೆಯ ಅನಂತವಿಶ್ವದಲ್ಲಿ ನಾವೊಂದು ಬಿಂದುವೆಂಬ ಸತ್ಯದರ್ಶನ ಮಾಡಿಸುವ ಮೂಲಕ ನಿಜತ್ವವನ್ನು ಬೆಳಗುವ ದಾರದೀಪವಾಗಿವೆ ತತ್ವಪದಗಳು ಎಂದು ತಿಳಿಸಿದರು.

‘ತತ್ವಪದಕಾರ್ತಿಯರ ಲೋಕದೃಷ್ಠಿ’ಯನ್ನು ಕುರಿತು ವಿಚಾರಮಂಡನೆ ಮಾಡಿದ ಡಾ.ಶೋಭಾರಾಣಿ ಎನ್. ಅವರು, ‘ತತ್ವಪದಕಾರ್ತಿಯರು ಸಂಸಾರದ ಸಹಯಾನದೊಂದಿಗೇ ಅಧ್ಯಾತ್ಮಿಕ ಸಾಧನೆಯನ್ನು ಮಾಡಬಹುದೆಂದು ಸಾಧಿಸಿತೋರಿದ್ದಾರೆ. ನಿರ್ಭೀತ ನುಡಿಕಾರರು ತತ್ವಪದಕಾರ್ತಿಯರು. ಮಹಿಳಾ ತತ್ವಪದಕಾರರ ಇನ್ನೂ ಎಷ್ಟೋ ತತ್ವಪದಗಳು ಸಂಗ್ರಹವಾಗಬೇಕಿದೆ’ ಎಂದು ಅಭಿಪ್ರಯಪಟ್ಟರು.

‘ಕನ್ನಡ ತತ್ವಪದಗಳು ಮತ್ತು ಬಹುತ್ವ ಭಾರತ’ ಕುರಿತು ಮಾತನಾಡಿದ ರವಿ ಕಂಬಳಿ ಅವರು, ಬಹುಸಂಸ್ಕೃತಿಗಳಿರುವ ಭಾರತದಲ್ಲಿ ಏಕರೂಪೀತನದ ಯಾಜಮಾನ್ಯ ಹೇರುವ ದೌರ್ಜನ್ಯ ಹಾಗೂ ಸಮಸ್ಯೆಗಳಿಗೆ ಪ್ರತಿಕ್ರಿಯೆಯಾಗಿ ಕನ್ನಡ ತತ್ವಪದಕಾರರು ಬಹುತ್ವವನ್ನು ತಮ್ಮ ಸಾಹಿತ್ಯದ ಆಶಯ ಹಾಗೂ ಬದುಕಿನ ಆಚರಣೆಯನ್ನಾಗಿ ಮಾಡಿಕೊಂಡರು. ಮೌಢ್ಯರಹಿತವಾದ ಸಮಸಮಾಜ ಕಲ್ಪನೆ ಅವರದಾಗಿತ್ತು. ತಮಗಿಂತಲೂ ಹಿಂದೆ ಹಲವು ಬಗೆಯ ಬಹುತ್ವದ ಮಾದರಿಗಳನ್ನು ಪ್ರತಿಪಾದಿಸಿದ್ದ ವಚನಕಾರರು ಇವರಿಗೆ ಆದರ್ಶವಾಗಿದ್ದರು ಎಂದು ತಿಳಿಸಿದರು.

ವಿಚಾರಸಂಕಿರಣದ ಭಾಗವಾಗಿ ಹೊರತರಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ

ಸಾಂಸ್ಕೃತಿಕ ಅನುಸಂಧಾನ-ಸಂಪುಟ 1 ಮತ್ತು 2’ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಪ್ರಸಿದ್ಧ ಗಾಯಕರಾದ ಶ್ರೀ ಖಾಸೀಂ ಮಲ್ಲಿಗೆ ಮಡುವು ತತ್ವಪದ ಗಾಯನವನ್ನು ಪ್ರಸ್ತುತಪಡಿಸಿದರು. ಪರ್ಯಾಯಗೋಷ್ಠಿಗಳಲ್ಲಿ 6೦ಕ್ಕೂ ಹೆಚ್ಚು ಸಂಶೋಧಕರು ಪ್ರಬಂಧ ಮಂಡನೆ ಮಾಡಿದರು.

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಮಾನವಿಕ ವಿಭಾಗದ ಡೀನರಾದ ಡಾ.ಗೋಪಕುಮಾರ್ ಎ.ವಿ. ಅವರು ಮುಖ್ಯ ಅತಿಥಿಯಾಗಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕ್ಯಾಪ್ಟನ್ ಡಾ.ಸರ್ವೇಶ್ ಬಿ.ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಚಾರಸಂಕಿರಣದ ಸಂಯೋಜಕರಾದ ಡಾ.ಕಿರಣಕುಮಾರ್ ಹೆಚ್.ಜಿ ಅವರು ವಂದಿಸಿದರು.

ಕನ್ನಡ ಪ್ರಾಧ್ಯಾಪಕರಾದ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅವರು ನಿರೂಪಿಸಿದರು. ಕನ್ನಡ ಪ್ರಾಧ್ಯಾಪಕರಾದ ಪ್ರೊ.ಚಂದ್ರಶೇಖರ್ ಎನ್., ಡಾ.ಸೈಯದ್ ಮುಯಿನ್, ಡಾ.ರವಿಶಂಕರ್ ಎ.ಕೆ., ತತ್ವಪದಕಾರರ ಅಧ್ಯಯನ ಕೇಂದ್ರದ ಸಿಬ್ಬಂದಿವರ್ಗದವರಾದ ರಜತಾ ಶೆಟ್ಟಿ ಹಾಗೂ ಸುಪ್ರಿಯಾ ಅವರು ಉಪಸ್ಥಿತರಿದ್ದರು. 200ಕ್ಕೂ ಹೆಚ್ಚು ಅಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending