ದಿನದ ಸುದ್ದಿ
ಉಪಚುನಾವಣೆ | ಕಾಂಗ್ರೆಸ್ ಗೆ ನಿರೀಕ್ಷೆಗೂ ಮೀರಿ ಜನಬೆಂಬಲ : ಸಿಎಂ ಸಿದ್ದರಾಮಯ್ಯ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2026/04/siddaramaiah_byelection_davanagere_suddidina-1000x600.webp&description=ಉಪಚುನಾವಣೆ | ಕಾಂಗ್ರೆಸ್ ಗೆ ನಿರೀಕ್ಷೆಗೂ ಮೀರಿ ಜನಬೆಂಬಲ : ಸಿಎಂ ಸಿದ್ದರಾಮಯ್ಯ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2026/04/siddaramaiah_byelection_davanagere_suddidina-1000x600.webp&description=ಉಪಚುನಾವಣೆ | ಕಾಂಗ್ರೆಸ್ ಗೆ ನಿರೀಕ್ಷೆಗೂ ಮೀರಿ ಜನಬೆಂಬಲ : ಸಿಎಂ ಸಿದ್ದರಾಮಯ್ಯ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ,ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ದಾವಣಗೆರೆಯ ಎಂ.ಬಿ.ಎ ಕಾಲೇಜು ಆವರಣ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದೆ. ಬಿಜೆಪಿಯವರು ನಾಲ್ಕು ವರ್ಷದಲ್ಲಿ ಯಾವ ಅಭಿವೃದ್ಧಿಯನ್ನು ಮಾಡದೇ, ರಾಜ್ಯವನ್ನು ಲೂಟಿ ಮಾಡಿದ್ದಾರೆ ಎಂಬ ಸತ್ಯವನ್ನು ಜನರು ಅರಿತಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಜಾರಿಯಾಗುತ್ತಿದ್ದು, ಬಿಜೆಪಿಯವರ ಸುಳ್ಳುಗಳ ನಡುವೆಯೂ ಜನ ನಮ್ಮನ್ನು ನಂಬಿದ್ದಾರೆ. ರಾಜ್ಯದಲ್ಲಿ ಯಾವುದೇ ಚುನಾವಣೆಯ ನಂತರ ಗ್ಯಾರಂಟಿಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಬಿಜೆಪಿಯವರು ಅಪಪ್ರಚಾರ ಮಾಡಿದರೂ, ನಮ್ಮ ಗ್ಯಾರಂಟಿಗಳು ನಿರಂತರವಾಗಿ ಮುಂದುವರಿದಿದೆ. ಇದಕ್ಕಾಗಿ 52000 ಕೋಟಿ ಮೀಸಲಿಟ್ಟಿದ್ದು, ಇದುವರೆಗೆ 1,31,000 ಕೋಟಿ ರೂಗಳನ್ನು ವೆಚ್ಚ ಮಾಡಲಾಗಿದೆ ಎಂದರು.
ಕೇಂದ್ರದಿಂದ ರಾಜ್ಯಕ್ಕೆ ನ್ಯಾಯಬದ್ಧ ಅನುದಾನ ದೊರೆತಿಲ್ಲ
ಸಾಲದ ರಾಮಯ್ಯ ಎಂದು ತನ್ನನ್ನು ಟೀಕೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯ ಸರ್ಕಾರ ಮಿತಿಯೊಳಗೆ ಸಾಲ ಮಾಡಬೇಕು. ಆರ್ಥಿಕ ಹೊಣೆಗಾರಿಕೆ ಕಾಯ್ದೆಯ ಮಾನದಂಡದಂತೆ, ರಾಜ್ಯದ ಜಿಡಿಪಿಯ ಶೇ. 25 ರ ಮಿತಿಯೊಳಗೆ ಸಾಲದ ಮೊತ್ತವಿದೆ. ನಮ್ಮ ವಿತ್ತೀಯ ಕೊರತೆ 2.95 ರಷ್ಟಿದೆ. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ನ್ಯಾಯಬದ್ಧ ಅನುದಾನಗಳು ಬರದ ಕಾರಣ, ರೆವಿನ್ಯೂ ಸರ್ಪ್ಲಸ್ ಸಾಧಿಸಲು ಸಾಧ್ಯವಾಗಲಿಲ್ಲ. ಬಿಹಾರ ಚುನಾವಣೆಯ ಸಂಬಂಧ ಜಿಎಸ್ ಟಿ ದರವನ್ನು ಕಡಿತಗೊಳಿಸಿದರು. ಇದರಿಂದಾಗಿ ರಾಜ್ಯದ ಬೊಕ್ಕಸಕ್ಕೆ 10,000 ಕೋಟಿ ನಷ್ಟವಾಗಿದೆ. ಜಿಎಸ್ ಟಿ ಕಡಿತದ ಮುಂಚೆ 10% ಇದ್ದ ಜಿಎಸ್ ಟಿ ಬೆಳವಣಿಗೆ ಈಗ ಶೇ. 4 ಕ್ಕೆ ಕುಸಿದಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾದ ಜಿಎಸ್ ಟಿ ಪರಿಹಾರವನ್ನು ಮತ್ತು ವಿಶೇಷ ಅನುದಾನಗಳನ್ನು ನೀಡದ ಕಾರಣ ಬಜೆಟ್ ರೆವಿನ್ಯೂ ಸರ್ಪ್ಲಸ್ ಆಗಲು ಸಾಧ್ಯವಾಗಿಲ್ಲ. ಆರ್ಥಿಕತೆಗೆ ಶ್ವೇತಪತ್ರ ಮಂಡಿಸಬೇಕು ಎಂದು ಹೇಳುವ ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ ರವರು ಈ ಎಲ್ಲ ಅಂಶಗಳನ್ನು ಪರಿಶೀಲಿಸದೇ, ಕೇವಲ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.
ಗ್ಯಾರಂಟಿಗಳಲ್ಲಿ ಭ್ರಷ್ಠಾಚಾರಕ್ಕೆ ಆಸ್ಪದವಿಲ್ಲ
ಮಾಜಿ ಸಿಎಂ ಬೊಮ್ಮಾಯಿಯವರು ರಾಜ್ಯದ ಸಾಲದ ದಾಖಲೆಗಳನ್ನು ಸರ್ಕಾರ ನೀಡಲೆಂದು ಹೇಳಿರುವ ಬಗ್ಗೆ ಉತ್ತರಿಸಿ, ಆರ್ಥಿಕತೆಯ ಸ್ಥಿತಿಗತಿಗಳ ಎಲ್ಲ ಅಂಶಗಳ ದಾಖಲೆಗಳನ್ನು ಬಜೆಟ್ ನಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಬಿಜೆಪಿಯವರ ಅವಧಿಯಲ್ಲಿ 530000 ಕೋಟಿ ಸಾಲ ಮಾಡಲಾಗಿದೆ. ಗ್ಯಾರಂಟಿ ಯೋಜನೆಯು ನೇರವಾಗಿ ಫಲಾನುಭವಿಗಳ ಖಾತೆಗೆ ತಲುಪಿ , ಇದರಲ್ಲಿ ಭ್ರಷ್ಠಾಚಾರಕ್ಕೆ ಆಸ್ಪದವಿಲ್ಲ ಎಂದರು.
ಬಾಕಿ ಬಿಲ್ಲು ಪಾವತಿಸಲಾಗುತ್ತಿದೆಗುತ್ತಿಗೆದಾರರ
ಗುತ್ತಿಗೆದಾರರಿಗೆ ಬಾಕಿ ಪಾವತಿ ಆಗದಿರುವ ಬಗ್ಗೆ ಪ್ರತಿಕ್ರಿಯೆಗಳು ಎದ್ದಿರುವ ಬಗ್ಗೆ ಉತ್ತರಿಸಿ, ಬಿಜೆಪಿಯವರ ಅವಧಿಯಲ್ಲಿ ಗುತ್ತಿಗೆದಾರರ 29ಸಾವಿರ ಕೋಟಿಯಷ್ಟು ಬಾಕಿ ಉಳಿಸಲಾಗಿತ್ತು. ಅದರಲ್ಲಿ 24 ಸಾವಿರ ಕೋಟಿ ಬಾಕಿ ಬಿಲ್ಲು ಪಾವತಿಸಲಾಗಿದೆ. ಈ ಬಗ್ಗೆ ದಾಖಲಾತಿಯ ಆಧಾರದಲ್ಲಿ ಸ್ಪಷ್ಟ ಉತ್ತರವನ್ನು ಅಧಿವೇಶನದಲ್ಲಿ ನೀಡಲಾಗಿದೆ ಎಂದರು.
ಬೆಲೆಏರಿಕೆ ನಿಯಂತ್ರಿಸುವುದು ಕೇಂದ್ರದ ಹೊಣೆಗಾರಿಕೆ
ಇರಾನ್ ಯುದ್ಧ ಪರಿಣಾಮ ಬೆಲೆಏರಿಕೆಗೆ ರಾಜ್ಯಸರ್ಕಾರದ ಸಿದ್ದತೆಗಳ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಬೆಲೆ ಏರಿಕೆಯನ್ನು ನಿಯಂತ್ರಿಸುವ ಹೊಣೆಗಾರಿಕೆ ಕೇಂದ್ರ ಸರ್ಕಾರಕ್ಕೆ ಸೇರಿದ್ದು. ಕೇಂದ್ರ ಪೂರೈಸುವ ಗ್ಯಾಸ್ ಪೆಟ್ರೋಲ್ ಡೀಸೆಲ್ಗಳನ್ನು ವಿತರಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿರುತ್ತದೆ. ನೆರೆರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಬೆಲೆಗಳು ಕಡಿಮೆಯಿದೆ ಎಂದರು.
ಒಳಮೀಸಲಾತಿ ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ
ಒಳಮೀಸಲಾತಿ ಬಗ್ಗೆ ಸರ್ಕಾರದ ಕ್ರಮಗಳ ಬಗ್ಗೆ ಉತ್ತರಿಸಿ, ರಾಜ್ಯದಲ್ಲಿ ಒಳಮೀಸಲಾತಿಯನ್ನು ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ. ಅಹಿಂದ ಮತಗಳು ಬಿಜೆಪಿಗೆ ಬರಲಿವೆ ಎಂಬ ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಯಿಸಿ, ಬಿಜೆಪಿಯವರಿಗೆ ಅಹಿಂದ ವರ್ಗಗಳ ಮೇಲೆ ಕಾಳಜಿಯಿಲ್ಲ.ಬಿಜೆಪಿಯವರು ಎಂದಿಗೂ ಶ್ರೀಮಂತರ ಪರ. ನಮ್ಮ ಸರ್ಕಾರ ಯೂನಿವರ್ಸಲ್ ಬೇಸಿಕ್ ಇನ್ಕಂ ತತ್ವದಂತೆ ನಡೆದು, ತಳಸಮುದಾಯದವರಿಗೆ ಅನುಕೂಲ ಕಲ್ಪಿಸುತ್ತಿದೆ. ನಮ್ಮ ಸರ್ಕಾರ ಬಿಜೆಪಿ ಬೆಂಬಲಿಗ ಮತದಾರರನ್ನು ಸೇರಿಸಿ, ಸರ್ವರಿಗೂ ಗ್ಯಾರಂಟಿ ಯೋಜನೆಗಳನ್ನು ನೀಡಲಾಗುತ್ತಿದೆ. ಬಡತನ ರೇಖೆಗಿಂತ ಕೆಳಗಿನ ಜನರನ್ನು ಸಬಲೀಕರಣಗೊಳಿಸಲು ಇವುಗಳು ನೆರವಾಗುತ್ತವೆ ಎಂದರು.
ಹಂತಹಂತವಾಗಿ ಖಾಲಿ ಹುದ್ದೆಗಳ ಭರ್ತಿ
ಖಾಲಿ ಹುದ್ದೆಗಳ ನೇಮಕಾತಿ ಬಗ್ಗೆ ಸರ್ಕಾರದ ಕ್ರಮಗಳ ಬಗ್ಗೆ ಉತ್ತರಿಸಿ, ಈ ವರ್ಷ 56432 ಹುದ್ದೆಗಳ ನೇಮಕಾತಿ ಮಾಡಲಿದ್ದು, ಹೀಗೆ ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದೆ. ಬಿಜೆಪಿಯವರು ನಾಲ್ಕು ವರ್ಷದಲ್ಲಿ ಯಾವ ಅಭಿವೃದ್ಧಿಯನ್ನು ಮಾಡದೇ, ರಾಜ್ಯವನ್ನು ಲೂಟಿ ಮಾಡಿದ್ದಾರೆ ಎಂಬ ಸತ್ಯವನ್ನು ಜನರು ಅರಿತಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಜಾರಿಯಾಗುತ್ತಿದ್ದು, ಬಿಜೆಪಿಯವರ ಸುಳ್ಳುಗಳ ನಡುವೆಯೂ ಜನ ನಮ್ಮನ್ನು ನಂಬಿದ್ದಾರೆ.
ರಾಜ್ಯದಲ್ಲಿ ಪ್ರತಿ ಚುನಾವಣೆಯ ನಂತರ ಗ್ಯಾರಂಟಿಗಳನ್ನು ಸ್ಥಗಿತಗೊಳಿಸಲಾಗುತ್ತದೆ ಎಂದು ಬಿಜೆಪಿಯವರು ಅಪಪ್ರಚಾರ ಮಾಡಿದರೂ, ನಮ್ಮ ಗ್ಯಾರಂಟಿಗಳು ನಿರಂತರವಾಗಿ ಮುಂದುವರಿದಿದೆ. ಇದಕ್ಕಾಗಿ ₹52,000 ಕೋಟಿ ಮೀಸಲಿಟ್ಟಿದ್ದು, ಇದುವರೆಗೆ ₹1,31,000 ಕೋಟಿ ವೆಚ್ಚ ಮಾಡಲಾಗಿದೆ.
ರಾಜ್ಯ ಸರ್ಕಾರ ಮಿತಿಯೊಳಗೆ ಸಾಲ ಮಾಡಬೇಕು. ಆರ್ಥಿಕ ಹೊಣೆಗಾರಿಕೆ ಕಾಯ್ದೆಯ ಮಾನದಂಡದಂತೆ, ರಾಜ್ಯದ ಜಿಡಿಪಿಯ ಶೇ. 25 ರ ಮಿತಿಯೊಳಗೆ ಸಾಲದ ಮೊತ್ತವಿದೆ. ನಮ್ಮ ವಿತ್ತೀಯ ಕೊರತೆ 2.95 ರಷ್ಟಿದೆ. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ನ್ಯಾಯಬದ್ಧ ಅನುದಾನಗಳು ಬರದ ಕಾರಣ, ರೆವಿನ್ಯೂ ಸರ್ಪ್ಲಸ್ ಸಾಧಿಸಲು ಸಾಧ್ಯವಾಗಲಿಲ್ಲ. ಬಿಹಾರ ಚುನಾವಣೆಯ ಸಂಬಂಧ ಜಿಎಸ್ಟಿ ದರವನ್ನು ಕಡಿತಗೊಳಿಸಿದರು. ಇದರಿಂದಾಗಿ ರಾಜ್ಯದ ಬೊಕ್ಕಸಕ್ಕೆ ₹10,000 ಕೋಟಿ ನಷ್ಟವಾಗಿದೆ. ಜಿಎಸ್ಟಿ ಕಡಿತದ ಮುಂಚೆ 10% ಇದ್ದ ಜಿಎಸ್ಟಿ ಬೆಳವಣಿಗೆ ಈಗ ಶೇ. 4 ಕ್ಕೆ ಕುಸಿದಿದೆ.
ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾದ ಜಿಎಸ್ಟಿ ಪರಿಹಾರವನ್ನು ಮತ್ತು ವಿಶೇಷ ಅನುದಾನಗಳನ್ನು ನೀಡದ ಕಾರಣ ಬಜೆಟ್ ರೆವಿನ್ಯೂ ಸರ್ಪ್ಲಸ್ ಆಗಲು ಸಾಧ್ಯವಾಗಿಲ್ಲ. ಆರ್ಥಿಕತೆಗೆ ಶ್ವೇತಪತ್ರ ಮಂಡಿಸಬೇಕು ಎಂದು ಹೇಳುವ ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರರವರು ಈ ಎಲ್ಲ ಅಂಶಗಳನ್ನು ಪರಿಶೀಲಿಸದೇ, ಕೇವಲ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ಎಸ್ಎಲ್ಸಿ ಫಲಿತಾಂಶ| ಗುರುಕುಲ ಶಾಲೆಯ ವಿದ್ಯಾರ್ಥಿಗಳ ಭರ್ಜರಿ ಸಾಧನೆ; ಶೇ. 98 ಅಂಕಗಳೊಂದಿಗೆ ಮದಿಹಾ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: 2025–26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ನಗರದ ಪ್ರತಿಷ್ಠಿತ ಶಾಲೆಗಲ್ಲಿ ಒಂದಾದ ಗುರುಕುಲ ಶಾಲೆ (Gurukul School) ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತೊಮ್ಮೆ ತನ್ನ ವರ್ಚಸ್ಸನ್ನು ಸಾಬೀತುಪಡಿಸಿದೆ. ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿನಿ ಮದಿಹಾ ಸಾಧನೆಯ ಶಿಖರದಲ್ಲಿ
ಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿ ಮದಿಹಾ ಅವರು ಒಟ್ಟು ಶೇ. 98 ಅಂಕಗಳನ್ನು ಗಳಿಸುವ ಮೂಲಕ ಶಾಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಸಾಧನೆಗೈದಿದ್ದಾರೆ. ಈಕೆಯ ಸಾಧನೆಯು ಸಹಪಾಠಿಗಳಿಗೆ ಮತ್ತು ಕಿರಿಯ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಿದೆ. ಅಲ್ಲದೇ ಕುಶಾಲ್ ಶೇ. 97 ದ್ವಿತೀಯ ಹಾಗೂ ಸಮರ್ಥ್ 95.5 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.
ಗಮನ ಸೆಳೆದ ಫಲಿತಾಂಶ: ಈ ಬಾರಿಯ ಫಲಿತಾಂಶದಲ್ಲಿ ವಿದ್ಯಾರ್ಥಿಗಳ ಸಾಧನೆ ಮೆಚ್ಚುವಂತಿದೆ.
ಡಿಸ್ಟಿಂಕ್ಷನ್ ಸಾಧಕರು: 15 ವಿದ್ಯಾರ್ಥಿಗಳು ಶೇ. 90ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿ ಡಿಸ್ಟಿಂಕ್ಷನ್ನಲ್ಲಿ ಉತ್ತೀರ್ಣರಾಗಿದ್ದಾರೆ.
ಪ್ರಥಮ ಶ್ರೇಣಿ: ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಉತ್ತಮ ಫಲಿತಾಂಶ: ಉಳಿದ ಎಲ್ಲಾ ವಿದ್ಯಾರ್ಥಿಗಳು ಸಹ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗುವ ಮೂಲಕ ಶಾಲೆಯು ನೂರಕ್ಕೆ ನೂರರಷ್ಟು ಫಲಿತಾಂಶದತ್ತ ದಾಪುಗಾಲು ಹಾಕಿದೆ.
ಯಶಸ್ಸಿನ ಹಿಂದಿನ ಶಕ್ತಿ:
ವಿದ್ಯಾರ್ಥಿಗಳ ಈ ಭವ್ಯ ಸಾಧನೆಗೆ ಶಾಲೆಯ ವ್ಯವಸ್ಥಿತ ಮಾರ್ಗದರ್ಶನವೇ ಕಾರಣ ಎಂದು ಆಡಳಿತ ಮಂಡಳಿ ತಿಳಿಸಿದೆ. ಶಾಲಾ ಕಾರ್ಯದರ್ಶಿ ಅಬ್ದುಲ್ ಸರ್ ಅವರ ನಿರಂತರ ಮಾರ್ಗದರ್ಶನ, ಆಡಳಿತ ಮಂಡಳಿಯ ಬೆಂಬಲ, ಮುಖ್ಯೋಪಾಧ್ಯಾಯರ ಸಮರ್ಥ ನಾಯಕತ್ವ ಹಾಗೂ ಶಿಕ್ಷಕ ವೃಂದದವರ ಅವಿರತ ಪರಿಶ್ರಮ ಈ ಯಶಸ್ಸಿಗೆ ಬುನಾದಿಯಾಗಿದೆ.
ಈ ಕುರಿತು ಸಂತಸ ವ್ಯಕ್ತಪಡಿಸಿರುವ ಶಾಲಾ ಕಾರ್ಯದರ್ಶಿ ಅಬ್ದುಲ್, “ವಿದ್ಯಾರ್ಥಿಗಳ ಏಕಾಗ್ರತೆ, ಪೋಷಕರ ಸಹಕಾರ ಮತ್ತು ಶಿಕ್ಷಕರ ಬೋಧನಾ ಶೈಲಿಯಿಂದ ಈ ಮೈಲಿಗಲ್ಲು ಸಾಧ್ಯವಾಗಿದೆ. ಈ ಯಶಸ್ಸು ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಇನ್ನಷ್ಟು ಉನ್ನತ ಗುರಿಗಳನ್ನು ತಲುಪಲು ಪ್ರೇರಣೆಯಾಗಲಿ,” ಎಂದು ಹಾರೈಸಿದ್ದಾರೆ.
ಶಾಲೆಯ ಈ ಸಾಧನೆಗೆ ಪೋಷಕರು ಮತ್ತು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭಕೋರಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕ್ಷೇತ್ರ ಪುನರ್ವಿಂಗಡಣೆ ಮಸೂದೆ ; ಬಿಜೆಪಿ ಷಡ್ಯಂತ್ರ ಬಯಲು : ಕವಿತಾ ಚಂದ್ರಶೇಖರ್ ಕಿಡಿ
ಸುದ್ದಿದಿನ,ದಾವಣಗೆರೆ: ಬಿಜೆಪಿಯು ಪಂಚರಾಜ್ಯಗಳ ಚುನಾವಣೆಗಮನದಲ್ಲಿಟ್ಟುಕೊಂಡು ತರಾತುರಿಯಲ್ಲಿ ಮಹಿಳಾ ಮೀಸಲಾತಿಯ ಹೆಸರಿನಲ್ಲಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಮಂಡನೆ ಮಾಡಲು ಹೋಗಿ ಮುಖಭಂಗಕ್ಕೀಡಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಕವಿತಾ ಚಂದ್ರಶೇಖರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರದ ಹುನ್ನಾರ ದೇಶದ ಜನರ ಮುಂದೆ ಬಯಲಾಗಿದೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮಹಿಳಾ ಮೀಸಲಾತಿ ಮಸೂದೆಯನ್ನು ಕಾಂಗ್ರೆಸ್ ವಿರೋಧಿಸುತ್ತಿದೆ. ಮಹಿಳೆಯರ ವಿರೋಧಿ ಕಾಂಗ್ರೆಸ್ ಪಕ್ಷ ಎಂದು ಹೇಳುತ್ತಿರುವ ಬಿಜೆಪಿಯು ಮಹಿಳೆಯರ ಭಾವನೆ ಜೊತೆ ಚೆಲ್ಲಾಟ ಆಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಅವರು ಸುದ್ದಿಗೋಷ್ಟಿಯಲ್ಲಿ ಪ್ರಶ್ನಿಸಿದ್ದಾರೆ.
ಪ್ರತಿಪಕ್ಷಗಳು ಡಿಲಿಮಿಟೇಶನ್ ಮಸೂದೆಗೆ ವಿರೋಧ ವ್ಯಕ್ತಪಡಿಸಿವೆಯೇ ವಿನಾಃ ಮಹಿಳಾ ಮೀಸಲಾತಿ ಮಸೂದೆಗಲ್ಲ. ಕೇಂದ್ರ ಸರ್ಕಾರವು ಪ್ರಾಮಾಣಿಕವಾಗಿದ್ದರೆ 2023 ರ ಕಾನೂನನ್ನು ಜಾರಿಗೆ ತರಬೇಕು.
ನಾರಿ ಶಕ್ತಿ ವಂದನ ಚೌಕಟ್ಟು ಎಂದು ವ್ಯಾಪಕವಾಗಿ ಕರೆಯಲ್ಪಡುವ 2023ರ ಕಾನೂನು, ಶಾಸಕಾಂಗಗಳಲ್ಲಿ ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿಯ ಅನುಷ್ಠಾನವನ್ನು ಹೊಸ ಜನಗಣತಿಯನ್ನು ಪೂರ್ಣಗೊಳಿಸಿ ನಂತರ ಡಿಲಿಮಿಟೇಶನ್ ಬಗ್ಗೆ ಚರ್ಚಿಸಿ
ಅನುಷ್ಠಾನಗೊಳಿಸಲಿ. ಅದನ್ನು ಬಿಟ್ಟು ವಿನಾಕಾರಣ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕೇಂದ್ರ ಸರ್ಕಾರಕ್ಕೆ ಸೋಲಾಗಿರುವುದು “ಪ್ರಜಾಪ್ರಭುತ್ವದ ಗೆಲುವು. ಭಾರತದ ಒಕ್ಕೂಟ ರಚನೆ ಬದಲಾಯಿಸಲು ಮುಂದಾಗಿದ್ದಕ್ಕೆ ತಕ್ಕ ಶಾಸ್ತಿಯಾಗಿದೆ. ಪ್ರಜಾಪ್ರಭುತ್ವ ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ಪಿತೂರಿಗೆ ತಕ್ಕ ಉತ್ತರ ನೀಡಲಾಗಿದೆ. ಇದು ಸಂವಿಧಾನಕ್ಕೆ ಸಿಕ್ಕ ಗೆಲುವು, ದೇಶಕ್ಕೆ, ವಿರೋಧ ಪಕ್ಷದ ಒಗ್ಗಟ್ಟಿಗೆ ಸಿಕ್ಕ ಗೆಲುವು.
ಉತ್ತರ ಭಾರತದಲ್ಲಿ ಹೆಚ್ಚು ಸ್ಥಾನಗಳನ್ನು ಸೃಷ್ಟಿಸಿ ಹೇಗಾದರೂ ಅಧಿಕಾರದಲ್ಲಿ ಉಳಿಯಬೇಕೆಂಬ ಬಿಜೆಪಿಯ ಪಿತೂರಿ ಜನರಿಗೆ ಅರ್ಥವಾಗಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಕಡಿಮೆ ಸ್ಥಾನ ಆಗುವ ಆತಂಕ ಇದೆ. ಯಾವುದೇ ರೀತಿಯಲ್ಲಿಯೂ ಚರ್ಚಿಸದೇ ಏಕಾಏಕಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಜಾರಿಗೆ ಮುಂದಾಗಿದ್ದೇಕೆ ಎಂದು ಕವಿತಾ ಚಂದ್ರಶೇಖರ್
ಪ್ರಶ್ನಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಎಸ್ ಎಲ್ ಸಿ ಫಲಿತಾಂಶ | ಭರತ್ ಜಿ ರಾಜ್ಯಕ್ಕೆ ಪ್ರಥಮ ; ನನ್ನ ಕ್ಷೇತ್ರದ ವಿದ್ಯಾರ್ಥಿ ಸಾಧನೆಗೆ ಸಲ್ಯೂಟ್ ಶಾಸಕ ಕೆ.ಎಸ್.ಬಸವಂತಪ್ಪ ಹರ್ಷ
ಸುದ್ದಿದಿನ,ದಾವಣಗೆರೆ:ಇವತ್ತು ನನಗೆ ಬಹಳ ಸಂತೋಷದ ದಿನ. ನನ್ನ ಕ್ಷೇತ್ರದ ಕಬ್ಬಳ ಗ್ರಾಮದ ಒಬ್ಬ ರೈತ ಕುಟುಂಬದಿಂದ ಬಂದ ಜಿ.ಭರತ್ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ 625ಕ್ಕೆ 625 ಅಂಕ ಪಡೆದಿರುವುದು ನನಗೆ ಬಹಳ ಹೆಮ್ಮೆ ತಂದಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.
ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಶಾಲೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಜಿ.ಭರತ್ ಮತ್ತು ಪೋಷಕರನ್ನು ಅಭಿನಂದಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಕ್ಷೇತ್ರದ ವಿದ್ಯಾರ್ಥಿ ಇಷ್ಟು ದೊಡ್ಡ ಸಾಧನೆ ಮಾಡಿರುವುದು ಸಂತಸದ ವಿಷಯ. ವಿದ್ಯಾ ಲಕ್ಷ್ಮಿ ಶಾಲೆಯವರು ಬಹಳ ಪ್ರಾಮಾಣಿಕವಾಗಿ ಮಕ್ಕಳ ಶಿಕ್ಷಣದ ಬಗ್ಗೆ ಆಸಕ್ತಿ ತೋರಿಸಿ ಅವರನ್ನು ಉನ್ನತ ಮಟ್ಟಕ್ಕೆ ತರಲು ಶ್ರಮಿಸಿದ್ದಾರೆ ಎಂದು ಅಭಿನಂದನೆ ಸಲ್ಲಿಸಿದರು.
ನಮಗೆ ಮೊದಲ ಆದ್ಯತೆ ದೇಗುಲಗಳಿಗಿಂತ ಶಾಲೆಗಳಿಗೆ ಇರಬೇಕು. ಇಂತಹ ಶಾಲೆಯೆಂಬ ದೇಗುಲದಿಂದ ಹೊರ ಬರುವ ಭರತ್ನಂತಹ ಮಕ್ಕಳು ಮುಂದಿನ ದಿನಗಳಲ್ಲಿ ಈ ದೇಶದ ಉನ್ನತ ಅಧಿಕಾರಿಗಳಾಗಿ ಅಥವಾ ವಿಜ್ಞಾನಿಗಳಾಗಿ ಸೇವೆ ಸಲ್ಲಿಸುವಂತಾಗಲಿ ಎಂದು ಶುಭ ಹಾರೈಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


