ದಿನದ ಸುದ್ದಿ
ಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ
~ಗೋವರ್ಧನ ನವಿಲೇಹಾಳು
ಭಾರತದ ಪ್ರಜಾಪ್ರಭುತ್ವವು ವಿಶ್ವದ ಅತಿದೊಡ್ಡ ಚುನಾವಣಾ ಪ್ರಯೋಗಶಾಲೆಯಾಗಿದೆ. ಪ್ರತಿ ಐದು ವರ್ಷಕ್ಕೊಮ್ಮೆ ಕೋಟಿಗಟ್ಟಲೆ ಮತದಾರರು ತಮಗೆ ಅರ್ಹವೆನಿಸಿದ ಪ್ರತಿನಿಧಿಯನ್ನು ಆಯ್ಕೆಯನ್ನು ಮಾಡುತ್ತಾರೆ. ಹಾಗೆಯೇ ಪ್ರಜಾ ಪ್ರಭುತ್ವದ ಪ್ರಯೋಗಶಾಲೆಯಾದ ಭಾರತದ ಚುನಾವಣೆಗಳನ್ನು ಹಣ ಮತ್ತು ಜಾತಿಗಳು ನಿಯಂತ್ರಿಸುತ್ತಿವೆ ಎಂಬುದು ಕರಾಳ ಸತ್ಯ.
ಪಕ್ಷಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತವೆ ಮತ್ತು ಖರೀದಿಸುತ್ತಿವೆ. ಇದು ಕೇವಲ ಒಂದು ತಾತ್ಕಾಲಿಕ ಸಮಸ್ಯೆಯಲ್ಲ; ಇದು ಪ್ರಜಾಪ್ರಭುತ್ವದ ಮೂಲ ತತ್ತ್ವಗಳನ್ನೇ ಕೊಲ್ಲುತ್ತಿರುವ ದೀರ್ಘಕಾಲಿಕ ಕ್ಯಾನ್ಸರ್. ಒಂದು ದಿನಪತ್ರಿಕೆಯ ಸಂಪಾದಕನಾದ ನಾನು ಈ ಸಂಪಾದಕೀಯದ ಮೂಲಕ ಹಣ ಮತ್ತು ಜಾತಿ ಎಂಬ ಎರಡು ಶಕ್ತಿಗಳು ಹಾಗೂ ದೌರ್ಬಲ್ಯಗಳನ್ನು ವಿಮರ್ಶಾತ್ಮಕವಾಗಿ ಪರೀಕ್ಷಿಸಲು ಬಯಸುತ್ತೇನೆ. ಇದು ಕೇವಲ ಟೀಕೆಯಲ್ಲ; ಎಚ್ಚರಿಕೆಯೂ ಹೌದು.
ಭಾರತದ ಚುನಾವಣೆಗಳ ವೆಚ್ಚವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. 2019ರ ಲೋಕಸಭಾ ಚುನಾವಣೆಗೆ ಸರ್ಕಾರಿ ಲೆಕ್ಕದ ಪ್ರಕಾರ 60,000 ಕೋಟಿ ರುಪಾಯಿ ವೆಚ್ಚವಾಗಿದ್ದರೆ, 2024ರ ಚುನಾವಣೆಯಲ್ಲಿ ಇದು ಒಂದು ಲಕ್ಷ ಕೋಟಿ ರುಪಾಯಿಗಳನ್ನು ಮೀರಿದೆ ಎಂದು ಅಂಕಿಅಂಶಗಳು ಹೇಳುತ್ತವೆ. ಆದರೆ ನಿಜವಾದ ವೆಚ್ಚ ಇನ್ನೂ ಹೆಚ್ಚು. ಪ್ರತಿ ಅಭ್ಯರ್ಥಿಯು ಒಂದು ಕ್ಷೇತ್ರದಲ್ಲಿ ಕನಿಷ್ಠ 10-20 ಕೋಟಿ ರುಪಾಯಿ ಖರ್ಚು ಮಾಡುತ್ತಾನೆ. ಇದಕ್ಕೆ ಕಾರಣ ಸರಳವಾಗಿದೆ, ಮತದಾರರನ್ನು ‘ಕೊಳ್ಳುವುದು’. ಚುನಾವಣಾ ಆಯೋಗದ ನಿಯಮಗಳು ಎಷ್ಟೇ ಕಟ್ಟುನಿಟ್ಟಾಗಿದ್ದರೂ, ಕಪ್ಪು ಹಣದ ಪ್ರವಾಹವನ್ನು ತಡೆಯಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ.
ಎಲೆಕ್ಟ್ರಾಲ್ ಬಾಂಡ್ಗಳು ತಾತ್ಕಾಲಿಕವಾಗಿ ಪಾರದರ್ಶಕತೆಯ ಮುಸುಕು ಹಾಕಿದ್ದಾವೆ. ಆದರೆ ಸುಪ್ರೀಂ ಕೋರ್ಟ್ ಅವುಗಳನ್ನು ಅಸಂವಿಧಾನಿಕ ಎಂದು ತೀರ್ಪು ನೀಡಿದ ನಂತರವೂ, ಕಾರ್ಪೊರೇಟ್ಗಳು ಮತ್ತು ಉದ್ಯಮಪತಿಗಳು ಬೇರೆ ಬೇರೆ ಮಾರ್ಗಗಳ ಮೂಲಕ ಹಣ ಸುರಿಸುತ್ತಲೇ ಇದ್ದಾರೆ. ಫಲಿತಾಂಶ? ಶ್ರೀಮಂತ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಮಾತ್ರ ಸ್ಪರ್ಧಿಸುತ್ತಾರೆ. 2024ರ ಲೋಕಸಭೆಯಲ್ಲಿ ಸರಾಸರಿ ಅಭ್ಯರ್ಥಿಯ ಆಸ್ತಿ 5 ಕೋಟಿ ರುಪಾಯಿಗಳಿಗಿಂತ ಹೆಚ್ಚಿತ್ತು.
ಜನಪ್ರತಿನಿಧಿಯಾಗುವುದು ಇಂದು ಉದ್ಯೋಗವಾಗಿದೆ, ಸೇವೆಯಲ್ಲ. ಹಣವು ಕೇವಲ ವೆಚ್ಚವಲ್ಲ; ಅದು ಅಧಿಕಾರದ ಹಂಚಿಕೆಯನ್ನೂ ನಿರ್ಧರಿಸುತ್ತದೆ. ಪಕ್ಷಗಳು ‘ಕ್ಯಾಷ್ ಫಾರ್ ವೋಟ್’ ಯೋಜನೆಗಳನ್ನು ಅನುಸರಿಸುತ್ತವೆ. ಗ್ರಾಮೀಣ ಪ್ರದೇಶಗಳಲ್ಲಿ ಒಂದು ಮನೆಗೆ 500 ರಿಂದ 2000 ರುಪಾಯಿ, ನಗರಗಳಲ್ಲಿ ಮೊಬೈಲ್ ರೀಚಾರ್ಜ್, ಸೈಕಲ್, ಟಿವಿ – ಇವೆಲ್ಲವೂ ಹಣದ ರೂಪದಲ್ಲಿ ಹಂಚಿಕೆಯಾಗುತ್ತವೆ. ಚುನಾವಣಾ ಆಯೋಗವು ರೇಡ್ ನಡೆಸುತ್ತದೆ, ಆದರೆ ಹಣದ ಹರಿವು ನಿಲ್ಲುವುದಿಲ್ಲ. ಇದರ ಫಲಿತಾಂಶವಾಗಿ ಜನರ ಸಮಸ್ಯೆಗಳು – ಬಡತನ, ಉದ್ಯೋಗ, ಶಿಕ್ಷಣ – ಮರೆಯುತ್ತವೆ. ಅಭ್ಯರ್ಥಿಯು ‘ನಾನು ಏನು ಮಾಡುತ್ತೇನೆ’ ಎಂದು ಹೇಳುವ ಬದಲು ‘ನಾನು ಎಷ್ಟು ಕೊಡುತ್ತೇನೆ’ ಎಂದು ಪ್ರಚಾರ ಮಾಡುತ್ತಾನೆ. ಇದು ಜನತಂತ್ರವಲ್ಲ; ಇದು ಹಣತಂತ್ರ.
ಇನ್ನು ಜಾತಿಯ ಸುಳಿಯನ್ನು ಚರ್ಚಿಸುವುದಾದರೆ, ಭಾರತದಲ್ಲಿ ಜಾತಿ ಎಂದರೆ ಕೇವಲ ಸಾಮಾಜಿಕ ವ್ಯವಸ್ಥೆಯಲ್ಲ; ಅದು ರಾಜಕೀಯ ಗಣಿತದ ಮೂಲಭೂತ ಸೂತ್ರ. ಕರ್ನಾಟಕದಲ್ಲಿ ಮಾತ್ರವಲ್ಲ, ಉತ್ತರ ಪ್ರದೇಶ, ಬಿಹಾರ, ತಮಿಳುನಾಡು – ಎಲ್ಲೆಡೆ ಜಾತಿ ಸಮೀಕ್ಷೆಗಳು, ಜಾತಿ ಆಧಾರಿತ ಟಿಕೆಟ್ ಹಂಚಿಕೆ ಮತ್ತು ಜಾತಿ ಬ್ಯಾಂಕ್ಗಳು ಚುನಾವಣೆಗಳನ್ನು ನಿರ್ಧರಿಸುತ್ತವೆ.
ಕರ್ನಾಟಕದಲ್ಲಿ ಲಿಂಗಾಯತ, ಒಕ್ಕಲಿಗ, ದಲಿತ, ಮುಸ್ಲಿಂ – ಈ ಜಾತಿ ಬ್ಲಾಕ್ಗಳನ್ನು ಲೆಕ್ಕ ಹಾಕದೆ ಯಾವುದೇ ಪಕ್ಷ ಗೆಲ್ಲಲಾರದು. ಪಕ್ಷಗಳು ಜಾತಿ ನಾಯಕರನ್ನು ‘ಖರೀದಿಸುತ್ತವೆ’. ಒಂದು ಜಾತಿಯ ನಾಯಕನಿಗೆ ಟಿಕೆಟ್ ಕೊಟ್ಟರೆ ಆ ಜಾತಿಯ 70-80% ಮತಗಳು ಬರುತ್ತವೆ ಎಂಬ ಲೆಕ್ಕ. ಇದು ಜನರನ್ನು ವ್ಯಕ್ತಿಗಳಾಗಿ ನೋಡುವುದಿಲ್ಲ; ಅವರನ್ನು ಜಾತಿ ಬ್ಯಾಂಕ್ಗಳಾಗಿ ಪರಿವರ್ತಿಸುತ್ತದೆ.
ಜಾತಿ ರಾಜಕಾರಣವು ಮೀಸಲಾತಿಯನ್ನು ದುರುಪಯೋಗಪಡಿಸಿಕೊಂಡಿದೆ. ಸಂವಿಧಾನದಲ್ಲಿ ಮೀಸಲಾತಿ ಸಾಮಾಜಿಕ ನ್ಯಾಯಕ್ಕಾಗಿ ಇದೆ. ಆದರೆ ಇಂದು ಅದು ಅಧಿಕಾರದ ಲಾಭಕ್ಕಾಗಿ ಬಳಸಲಾಗುತ್ತಿದೆ. ಜಾತಿ ಸಮೀಕ್ಷೆಯ ಬೇಡಿಕೆಗಳು ಹೆಚ್ಚುತ್ತಿವೆ. ಕರ್ನಾಟಕದಲ್ಲಿ ಕೂಡ ಜಾತಿ ಸಮೀಕ್ಷೆಯ ವಿವಾದ ಎಲ್ಲರಿಗೂ ತಿಳಿದಿದೆ. ಇದು ನಿಜವಾಗಿಯೂ ಸಾಮಾಜಿಕ ನ್ಯಾಯವೇ? ಅಥವಾ ಹೆಚ್ಚು ಮೀಸಲಾತಿ ಬೇಡುವ ಮೂಲಕ ಅಧಿಕಾರ ಹಂಚಿಕೊಳ್ಳುವ ರಾಜಕೀಯ ತಂತ್ರವೇ? ಜಾತಿ ಆಧಾರಿತ ರಾಜಕಾರಣವು ಮೆರಿಟ್ ಅನ್ನು ಕೊಲ್ಲುತ್ತದೆ. ಯೋಗ್ಯರಾದ ಯುವಕರು ಅಥವಾ ಮಹಿಳೆಯರು ಜಾತಿ ಲೆಕ್ಕವಿಲ್ಲದೆ ಅವಕಾಶ ಪಡೆಯುವುದಿಲ್ಲ. ಇದು ದೇಶದ ಅಭಿವೃದ್ಧಿಯನ್ನು ಹಿಂದಕ್ಕೆ ಎಳೆಯುತ್ತದೆ.
ಹಣ ಮತ್ತು ಜಾತಿ ಒಂದರೊಂದು ಪೂರಕವಾಗಿ ಕೆಲಸ ಮಾಡುತ್ತವೆ. ಹಣವು ಜಾತಿ ನಾಯಕರನ್ನು ಖರೀದಿಸುತ್ತದೆ. ಜಾತಿ ನಾಯಕರು ಹಣದಿಂದ ಮತಗಳನ್ನು ಖರೀದಿಸುತ್ತಾರೆ. ಒಂದು ಸಣ್ಣ ಗುಂಪು ಅಧಿಕಾರವನ್ನು ತನ್ನ ಕೈಯಲ್ಲಿ ಇಟ್ಟುಕೊಳ್ಳುತ್ತದೆ. ಸಾಮಾನ್ಯ ಜನರು ಕೇವಲ ಮತದಾರರಾಗಿ ಉಳಿಯುತ್ತಾರೆ, ನಿರ್ಣಾಯಕರಾಗುವುದಿಲ್ಲ. ಇದರಿಂದಾಗಿ ಭ್ರಷ್ಟಾಚಾರ ಹೆಚ್ಚುತ್ತದೆ. ಅಧಿಕಾರಕ್ಕೆ ಬಂದವರು ತಮ್ಮ ಹೂಡಿಕೆಯನ್ನು ತಿರುಗಿಸಿಕೊಳ್ಳುತ್ತಾರೆ. ರಸ್ತೆಗಳು, ಆಸ್ಪತ್ರೆಗಳು, ಶಾಲೆಗಳು – ಇವುಗಳ ಬದಲು ಅಭಿವೃದ್ಧಿ ಕೇವಲ ಫೋಟೋ ,ವಿಡಿಯೋಗಳಲ್ಲಿ ಉಳಿಯುತ್ತವೆ
ಈ ಸಮಸ್ಯೆಯನ್ನು ತೊಡೆದುಹಾಕಲು ಏನು ಮಾಡಬಹುದು? ಮೊದಲು ಚುನಾವಣಾ ಆಯೋಗವು ಹೆಚ್ಚು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು. ಎಲ್ಲಾ ಅಭ್ಯರ್ಥಿಗಳ ಆಸ್ತಿ ಮತ್ತು ವೆಚ್ಚದ ಪಾರದರ್ಶಕ ಲೆಕ್ಕಪತ್ರವನ್ನು ಆನ್ಲೈನ್ನಲ್ಲಿ ಪ್ರಕಟಿಸಬೇಕು. ರಾಜ್ಯ ಆರ್ಥಿಕ ನೆರವು (ಸ್ಟೇಟ್ ಫಂಡಿಂಗ್ ಆಫ್ ಎಲೆಕ್ಷನ್ಸ್) ಅನ್ನು ಜಾರಿಗೊಳಿಸಬೇಕು. ಕಾರ್ಪೊರೇಟ್ ದಾನಗಳಿಗೆ ಕಟ್ಟುಪಾಡು ಬೇಕು. ಜಾತಿ ರಾಜಕಾರಣಕ್ಕೆ ಎದುರಾಗಿ ‘ಜಾತಿ-ಮುಕ್ತ’ ಅಭ್ಯರ್ಥಿ ಆಯ್ಕೆಯನ್ನು ಪ್ರೋತ್ಸಾಹಿಸಬೇಕು. ಜಾತಿ ಸಮೀಕ್ಷೆಗಳು ನಡೆಯಬೇಕು, ಆದರೆ ಅದನ್ನು ಅಧಿಕಾರದ ಲಾಭಕ್ಕಾಗಿ ಬಳಸಬಾರದು. ಶಿಕ್ಷಣ ಮತ್ತು ಆರ್ಥಿಕ ಸಬಲೀಕರಣದ ಮೂಲಕ ಜಾತಿ ಆಧಾರಿತ ರಾಜಕಾರಣವನ್ನು ಕ್ರಮೇಣ ಕಡಿಮೆ ಮಾಡಬೇಕು.
ಜನರು ಈಗ ಎಚ್ಚರಗೊಳ್ಳಬೇಕು. ಮತವನ್ನು ಹಣಕ್ಕಾಗಿ ಅಥವಾ ಜಾತಿಗಾಗಿ ಮಾರಾಟ ಮಾಡುವುದು ಸ್ವಯಂ ವಿನಾಶಕ್ಕೆ ದಾರಿ. ಪ್ರಜಾಪ್ರಭುತ್ವವು ಜನರ ಕೈಯಲ್ಲಿದೆ. ಅದನ್ನು ಹಣ ಮತ್ತು ಜಾತಿಯ ಕೈಗೆ ಬಿಟ್ಟರೆ ನಾವು ನಮ್ಮ ಭವಿಷ್ಯವನ್ನೇ ಮಾರಿಕೊಳ್ಳುತ್ತೇವೆ. ಪತ್ರಿಕೆಗಳು, ಸಾಮಾಜಿಕ ಮಾಧ್ಯಮಗಳು ಮತ್ತು ನಾಗರಿಕ ಸಂಘಟನೆಗಳು ಈ ವಿಷಯವನ್ನು ಸತತವಾಗಿ ಚರ್ಚಿಸಬೇಕು. ಚುನಾವಣೆಗಳು ಕೇವಲ ಅಧಿಕಾರದ ಬದಲಾವಣೆಯಲ್ಲ; ಅವು ನಮ್ಮ ಸಮಾಜದ ದರ್ಶನವನ್ನು ನಿರ್ಧರಿಸುತ್ತವೆ.
ಇಂದು ನಾವು ಎದುರಿಸುತ್ತಿರುವುದು ಕೇವಲ ಒಂದು ಚುನಾವಣಾ ಸಮಸ್ಯೆಯಲ್ಲ; ಇದು ಭಾರತದ ಆತ್ಮದ ಸಮಸ್ಯೆ. ಹಣ ಮತ್ತು ಜಾತಿಯನ್ನು ಮೀರಿ ನಿಲ್ಲುವ ನಾಯಕರು ಬರಬೇಕು. ಅವರು ಜನರ ಸಮಸ್ಯೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಅಲ್ಲಿಯವರೆಗೂ ನಮ್ಮ ಪ್ರಜಾಪ್ರಭುತ್ವವು ಕೇವಲ ಹೆಸರಿನಲ್ಲಿ ಮಾತ್ರ ಉಳಿಯುತ್ತದೆ. ಜನತೆ ಎಚ್ಚರದಿಂದಿರಲಿ. ಇದು ನಮ್ಮ ದೇಶ, ನಮ್ಮ ಭವಿಷ್ಯ.
ಸುದ್ದಿದಿನ | ವಾಟ್ಸಾಪ್ | 9980346243

ದಿನದ ಸುದ್ದಿ
ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.
ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.
ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
ಸುದ್ದಿದಿನಡೆಸ್ಕ್:ಜಪಾನ್ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.
ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!
ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾಲಿಯ ಕನಸು ಒಂದೇ ಹೀರೋ ಆಗೋದು
ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!
ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!
ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.
ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!
ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ
-
ದಿನದ ಸುದ್ದಿ5 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ಅಂತರಂಗ3 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ19 hours agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ22 hours agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ
-
ದಿನದ ಸುದ್ದಿ23 hours agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ19 hours agoಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ
-
ದಿನದ ಸುದ್ದಿ19 hours agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ

