Connect with us

ದಿನದ ಸುದ್ದಿ

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ

Published

on

ಸುದ್ದಿದಿನ,ದಾವಣಗೆರೆ:ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿರುವ ಮಹಾನ್ ಶಕ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ಅಭಿಪ್ರಾಯಪಟ್ಟರು.

ಅವರು ಇಂದು (ಎ.14) ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ದಾವಣಗೆರೆ ಮಹಾನಗರ ಪಾಲಿಕೆ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಪಾಟಿಸಿ ನಂತರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

3000 ವರ್ಷಗಳ ಇತಿಹಾಸವಿರುವ ನಮ್ಮ ಸಮಾಜದಲ್ಲಿ, ಬ್ರಿಟಿಷರ ಆಳ್ವಿಕೆಯ ನಂತರವೂ ದೇಶದ ಸಮಗ್ರ ಜನತೆಗೆ ಸಮಾನತೆಯನ್ನು ಕಲಿಸಿಕೊಟ್ಟವರು ಬಾಬಾಸಾಹೇಬ್ ಅಂಬೇಡ್ಕರ್. ಮನುಷ್ಯನಿಗೆ ಮೆದುಳು ಮತ್ತು ಆತ್ಮ ಎಷ್ಟು ಮುಖ್ಯವೋ, ದೇಶಕ್ಕೆ ಸಂವಿಧಾನವು ಅಷ್ಟೇ ಮುಖ್ಯ. ವಿಶೇಷವಾಗಿ 32ನೇ ವಿಧಿಯು ಸಂವಿಧಾನದ ಆತ್ಮವಿದ್ದಂತೆ ,ಅಂಬೇಡ್ಕರ್ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ಕೊಲಂಬಿಯಾ ವಿಶ್ವವಿದ್ಯಾಲಯದಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದಿದ್ದು, ಅವರ ಬೌದ್ಧಿಕ ಸಾಮರ್ಥ್ಯವೇ ಇಂದಿನ ಸಂವಿಧಾನಕ್ಕೆ ಬಲ ತುಂಬಿದೆ ಎಂದು ಅವರು ವಿವರಿಸಿದರು.

ವಿದ್ಯಾರ್ಥಿಗಳು ಕೇವಲ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವುದಕ್ಕಷ್ಟೇ ಶಿಕ್ಷಣ ಪಡೆಯಬಾರದು. ಬದಲಾಗಿ, ಸ್ವತಂತ್ರ ಆಲೋಚನೆ ಮತ್ತು ಸಮಾಜದ ಹಕ್ಕುಗಳನ್ನು ಕಾಪಾಡಿಕೊಳ್ಳುವ ಬದ್ಧತೆಯನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಅಂಬೇಡ್ಕರ್ ಮತ್ತು ಅಬ್ದುಲ್ ಕಲಾಂ ಅವರಂತಹ ಮಹನೀಯರು ನಮಗೆ ಪ್ರೇರಣೆಯಾಗಬೇಕು. ಬದ್ಧತೆ ಮತ್ತು ಪ್ರಯತ್ನವಿದ್ದರೆ ಯಾರೂ ಏನನ್ನು ಬೇಕಾದರೂ ಸಾಧಿಸಬಹುದು ಎಂದು ತಿಳಿಸಿದರು.

ನಾವೆಲ್ಲರು ಸಂವಿಧಾನವನ್ನು ಕಡ್ಡಾಯವಾಗಿ ಓದಿ ತಿಳಿದುಕೊಳ್ಳಬೇಕು, ಕನಿಷ್ಠ 12 ರಿಂದ 18 ರವರೆಗಿನ ಪರಿಚ್ಛೇದಗಳನ್ನು ಕಡ್ಡಾಯವಾಗಿ ತಿಳಿದುಕೊಂಡಿರಬೇಕು. ಹಿಂದೆ ವಚನಕಾರರು ರಚಿಸಿದ ವಚನೆಗಳೆ ಸಂವಿಧಾನದ ಆಶಯಗಳು ಆಗಿವೆ, ವಿದೇಶಗಳಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ಇಲ್ಲ, ಆದರೆ ಭಾರತದಲ್ಲಿ ಸ್ವಾತಂತ್ರ್ಯ ನಂತರ ಮಹಿಳೆಯರಿಗೆ ಸಮಾನತೆಯನ್ನು ಕಲ್ಪಿಸಲಾಗಿದೆ, ಜಿಲ್ಲೆಯ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ವೈಚಾರಿಕ ಜಾಗೃತಿ ಮೂಡಿಸಲು ಅಂಬೇಡ್ಕರ್, ಬಸವಣ್ಣ ಮತ್ತು ಗಾಂಧೀಜಿಯವರ ತತ್ವಗಳ ಬಗ್ಗೆ ಉಪನ್ಯಾಸಗಳನ್ನು ಹಮ್ಮಿಕೊಳ್ಳಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲ್ ರಾವ್ ಅವರು “ಶಿಕ್ಷಣವು ಸಮಾಜದ ಪ್ರಗತಿಗೆ ಪ್ರಮುಖ ಅಸ್ತ್ರ”. ಕಡು ಬಡತನ ಮತ್ತು ಸಾಮಾಜಿಕ ಅಸಮಾನತೆಯ ನಡುವೆಯೂ ಅಂಬೇಡ್ಕರ್ ಅವರು ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಬದಲಾವಣೆ ತಂದರು. ವಿಶ್ವದ ಅತ್ಯುತ್ತಮ ಸಂವಿಧಾನಗಳಲ್ಲಿ ಒಂದಾದ ಭಾರತದ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಅವರ ಶ್ರಮವನ್ನು ನಾವು ಮರೆಯುವಂತಿಲ್ಲ, ಸಂವಿಧಾನವು ಕೇವಲ ಕಾನೂನಿನ ದಾಖಲೆಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಬದುಕಿನ ಸ್ಫೂರ್ತಿ ಎಂದರು.

ಸಮಾಜದಲ್ಲಿನ ಜಾತಿ ಪದ್ಧತಿ ಮತ್ತು ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಲು ಬಾಬಾಸಾಹೇಬರು ಪಟ್ಟ ಶ್ರಮ ಹಾಗೂ ಅವರು ಬರೆದ ‘ಜಾತಿ ವಿನಾಶ’ ಕೃತಿಯ ಮಹತ್ವದ ಬಗ್ಗೆ ತಿಳಿಸಿದರು. ಹುಲಿ ಹಾಲಿನ್ನು ಕುಡಿದವನು ಎಷ್ಟು ಬಲಶಾಲಿಯಾಗಿರುತ್ತೇನೋ ಶಿಕ್ಷಣ ಪಡೆದವನು ಅಷ್ಟೇ ಬಲಶಾಲಿಯಾಗುತ್ತಾನೆ. ಪ್ರತಿಯೊಬ್ಬರೂ ಶಿಕ್ಷಣಕ್ಕೆ ಒತ್ತು ನೀಡಿ, ಬಡ ಮಕ್ಕಳ ಶಿಕ್ಷಣಕ್ಕೆ ನೆರವಾಗುವಂತೆ ಕರೆ ನೀಡಿದರು.

ಚುನಾವಣೆ ನೀತಿ ಸಂಹಿಗೆ ಜಾರಿಯಲ್ಲಿರುವ ಹಿನ್ನೆಲೆಯ್ಲಲಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು, ಇದೇ ಸಂದರ್ಭದಲ್ಲಿ ಸಂವಿಧಾನ ಪೀಠಿಕೆಯನ್ನು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅವರು ಬೋದಿಸಿದರು.

ಕಾರ್ಯಕ್ರಮಕ್ಕೂ ಮುನ್ನ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಬಾಬಾ ಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬೆಳ್ಳಿರಥಕ್ಕೆ ಚಾಲನೆ ನೀಡಿದರು. ಬೆಳ್ಳಿ ರಥವು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಗಾಂಧಿವೃತ್ತ ಜಯದೇವ ವೃತ್ತದ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೇಖರ್ ಹೆಚ್.ಟಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ಮತ್ತು ಉಪಕಾರ್ಯದರ್ಶಿ ಮಮತ ಗೌಡರ್, ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸೋಶಿಯಲ್ ಮೀಡಿಯಾ ಪೋಸ್ಟ್‌ಗೆ ಕೇಸ್‌, ಉಡುಪಿಯಿಂದ ವ್ಯಕ್ತಿಯನ್ನು ಠಾಣೆಗೆ ಕರೆತಂದ ಕ್ರಮಕ್ಕೆ ಹೈಕೋರ್ಟ್‌ ಗರಂ

Published

on

Kunal Kamra Show Row: ‘ವೈಟ್‌ಫೀಲ್ಡ್‌ ಅಲ್ಲ, ಡಾರ್ಕ್‌ಫೀಲ್ಡ್‌ ಮಾಡಿ’! ಪೊಲೀಸರಿಗೆ ಹೈಕೋರ್ಟ್‌ ಫುಲ್ ಕ್ಲಾಸ್

ಸುದ್ದಿದಿನ,ಬೆಂಗಳೂರು: ಹಾಸ್ಯ ಕಲಾವಿದ ಕುನಾಲ್‌ ಕಾಮ್ರಾ ಕಾರ್ಯಕ್ರಮ ರದ್ದಾದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ವ್ಯಕ್ತಿಯನ್ನು ವಿಚಾರಣೆ ಹೆಸರಿನಲ್ಲಿ ಠಾಣೆಗೆ ಕರೆತಂದ ವೈಟ್‌ಫೀಲ್ಡ್ ಪೊಲೀಸರ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಪ್ರಕರಣ ರದ್ದು ಕೋರಿ ಮೋಹನ್‌ಗೌಡ ಸಲ್ಲಿಸಿರುವ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಪೊಲೀಸ್ ಅಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದೆ.

http://Visit : www.suddidina.com

ನ್ಯಾಯಾಲಯದ ಮುಂದೆ ಡಿಸಿಪಿ ಸೈದುಲು ಅಡಾವತ್‌, ಎಸಿಪಿ ರೀನಾ ಸುವರ್ಣ ಹಾಗೂ ತನಿಖಾಧಿಕಾರಿ ಹಾಜರಾಗಿದ್ದರು. ಈ ವೇಳೆ ಪೊಲೀಸ್ ಠಾಣೆಯ ಕಾರ್ಯವೈಖರಿ, ಬಂಧನದ ಕ್ರಮ ಮತ್ತು ಸಾಮಾಜಿಕ ಜಾಲತಾಣದ ಪೋಸ್ಟ್‌ಗಳ ಆಧಾರದ ಮೇಲೆ ಪ್ರಕರಣ ದಾಖಲಿಸಿರುವ ಬಗ್ಗೆ ನ್ಯಾಯಪೀಠ ಹಲವು ಪ್ರಶ್ನೆಗಳನ್ನು ಕೇಳಿತು.

‘ವೈಟ್‌ಫೀಲ್ಡ್‌ ಠಾಣೆ ಡಾರ್ಕ್‌ಫೀಲ್ಡ್‌ ಆಗಲಿ’

ವೈಟ್‌ಫೀಲ್ಡ್‌ ಠಾಣೆಯಲ್ಲಿ ವಿದ್ಯುತ್ ಹಾಗೂ ಸಿಸಿಟಿವಿ ವ್ಯವಸ್ಥೆ ಕುರಿತ ವಿಚಾರವನ್ನೂ ನ್ಯಾಯಪೀಠ ಪ್ರಸ್ತಾಪಿಸಿತು. ಠಾಣೆಯ ಚಟುವಟಿಕೆಗಳೇ ಅಂಧಕಾರದಲ್ಲಿವೆ ಎಂದು ವ್ಯಂಗ್ಯವಾಡಿದ ನ್ಯಾಯಮೂರ್ತಿಗಳು, ‘ವೈಟ್‌ಫೀಲ್ಡ್‌ ಠಾಣೆಯನ್ನು ಡಾರ್ಕ್‌ಫೀಲ್ಡ್‌ ಠಾಣೆಯನ್ನಾಗಿ ಬದಲಾಯಿಸಿಕೊಳ್ಳಿ’ ಎಂದು ಕಿಡಿಕಾರಿದರು.

ಉಡುಪಿಗೆ ತೆರಳಿ ಮೋಹನ್‌ಗೌಡರನ್ನು ವಶಕ್ಕೆ ಪಡೆದಿದ್ದೇಕೆ, ಬೆಳಗಿನ ಜಾವ 2 ಗಂಟೆಗೆ ಎಫ್‌ಐಆರ್‌ ದಾಖಲಿಸಿ ಕ್ರಮ ಕೈಗೊಂಡಿದ್ದೇಕೆ ಎಂಬುದರ ಕುರಿತು ಅಧಿಕಾರಿಗಳಿಂದ ನ್ಯಾಯಪೀಠ ವಿವರಣೆ ಕೇಳಿತು.

ಡಿಸಿಪಿ ಪರವಾಗಿ, ಮೋಹನ್‌ಗೌಡ ಹಲವು ಟ್ವೀಟ್‌ಗಳನ್ನು ಮಾಡಿದ್ದರು. ಅವರನ್ನು ಬಂಧಿಸಿರಲಿಲ್ಲ, ಫೋನ್‌ ಮಾಡಿದರೂ ಪ್ರತಿಕ್ರಿಯಿಸದ ಹಿನ್ನೆಲೆಯಲ್ಲಿ ಅವರು ಕಾರಿನಲ್ಲಿ ಬಂದಿದ್ದರು. ಹೇಳಿಕೆ ಪಡೆದು ಕಳುಹಿಸಲಾಗಿದೆ ಎಂದು ಉತ್ತರಿಸಲಾಯಿತು.

‘ಯೂನಿಫಾರ್ಮ್ ಇದ್ದರೆ ಏನು ಬೇಕಾದರೂ ಮಾಡಬಹುದೇ?’

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಮಾತ್ರಕ್ಕೆ ಪೊಲೀಸರು ಮನಬಂದಂತೆ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿತು. ಯೂನಿಫಾರ್ಮ್‌ ಧರಿಸಿರುವ ಕಾರಣಕ್ಕೆ ನಾಗರಿಕರ ಸ್ವಾತಂತ್ರ್ಯ ಕಸಿಯಲು ಸಾಧ್ಯವಿಲ್ಲ ಎಂದು ಕೋರ್ಟ್‌ ಎಚ್ಚರಿಸಿತು.

ಸಾಮಾಜಿಕ ಜಾಲತಾಣದ ಪೋಸ್ಟ್‌ಗಳ ಕುರಿತು ಕ್ರಮ ಕೈಗೊಳ್ಳುವಾಗ ಸುಪ್ರೀಂಕೋರ್ಟ್‌ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪೊಲೀಸರು ತಮ್ಮನ್ನು ತಾವೇ ಕಾನೂನು ಎಂದು ಭಾವಿಸಬಾರದು. ಬಂಧನದ ಅಧಿಕಾರವನ್ನು ವಿವೇಚನೆಯಿಲ್ಲದೆ ಬಳಸಬಾರದು ಎಂದು ನ್ಯಾಯಪೀಠ ತಿಳಿಸಿತು.

ಪೊಲೀಸ್ ಠಾಣೆಗಳಲ್ಲಿ CCTV ಆಡಿಟ್‌ಗೆ ಸೂಚನೆ

ರಾಜ್ಯದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ವ್ಯವಸ್ಥೆ ಮತ್ತು ಯುಪಿಎಸ್‌ ಬ್ಯಾಕಪ್‌ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆಯೇ ಎಂಬುದನ್ನು ಪರಿಶೀಲಿಸಲು ರಾಜ್ಯಮಟ್ಟದ ಆಡಿಟ್‌ ನಡೆಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ನ್ಯಾಯಪೀಠ ನಿರ್ದೇಶನ ನೀಡಿದೆ.

ಅಧಿಕಾರ ದುರುಪಯೋಗ ಅಥವಾ ನ್ಯಾಯಾಲಯದ ಆದೇಶ ಉಲ್ಲಂಘನೆ ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಇಲಾಖಾ ತನಿಖೆ ನಡೆಸಬೇಕು. ಪೊಲೀಸ್ ಠಾಣೆಗಳಲ್ಲಿ ಸುಪ್ರೀಂಕೋರ್ಟ್‌ ತೀರ್ಪುಗಳ ಕುರಿತು ಅರಿವು ಮೂಡಿಸಬೇಕು ಎಂದು ಸೂಚಿಸಿರುವ ನ್ಯಾಯಾಲಯ, ವಿಚಾರಣೆಯನ್ನು ಸೆಪ್ಟೆಂಬರ್‌ 25ಕ್ಕೆ ಮುಂದೂಡಿದೆ.

ಪ್ರಕರಣದ ಹಿನ್ನೆಲೆ

ಕುನಾಲ್‌ ಕಾಮ್ರಾ ಶೋ ವಿರೋಧಿಸಿ ದೂರುಗಳು ಬಂದ ಹಿನ್ನೆಲೆಯಲ್ಲಿ ಕಾರ್ಯಕ್ರಮ ರದ್ದಾಗಿತ್ತು. ಈ ಬೆಳವಣಿಗೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಮೋಹನ್‌ಗೌಡ ವಿರುದ್ಧ ವೈಟ್‌ಫೀಲ್ಡ್ ಪೊಲೀಸರು ಪ್ರಕರಣ ದಾಖಲಿಸಿದ್ದರು. ಉಡುಪಿಯಿಂದ ಅವರನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದ ಕ್ರಮ ಪ್ರಶ್ನಿಸಿ ಅವರು ಹೈಕೋರ್ಟ್‌ ಮೊರೆ ಹೋಗಿದ್ದರು.

Continue Reading

ದಿನದ ಸುದ್ದಿ

ಗೃಹಲಕ್ಷ್ಮೀ ಯೋಜನೆಯಲ್ಲಿ ಮಹತ್ವದ ಬದಲಾವಣೆ: ಅರ್ಹ ಫಲಾನುಭವಿಗಳ ಖಚಿತತೆಗೆ ಮನೆ-ಮನೆ ಪರಿಶೀಲನೆ

Published

on

Gruha Lakshmi Scheme: ಗೃಹಲಕ್ಷ್ಮೀ ಫಲಾನುಭವಿಗಳಿಗೆ ಬಯೋಮೆಟ್ರಿಕ್‌, ಫೇಸ್‌ ವೆರಿಫಿಕೇಷನ್ ಕಡ್ಡಾಯ; ಮನೆ-ಮನೆ ಸಮೀಕ್ಷೆಗೆ ಸರ್ಕಾರದ ಆದೇಶ!

ಸುದ್ದಿದಿನ,ಬೆಂಗಳೂರು: ರಾಜ್ಯದ ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಗೃಹಲಕ್ಷ್ಮೀ ಯೋಜನೆಯಲ್ಲಿ ಸರ್ಕಾರ ಮಹತ್ವದ ಪರಿಶೀಲನಾ ಕ್ರಮಕ್ಕೆ ಮುಂದಾಗಿದೆ. ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಯ ಪ್ರಯೋಜನ ತಲುಪಬೇಕು ಎಂಬ ಉದ್ದೇಶದಿಂದ, ಎಲ್ಲಾ ಫಲಾನುಭವಿಗಳ ಬಯೋಮೆಟ್ರಿಕ್‌ ಮತ್ತು ಮುಖಚಹರೆ ದೃಢೀಕರಣವನ್ನು ಕಡ್ಡಾಯಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಪ್ರಕ್ರಿಯೆಯನ್ನು ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ (ಇಡಿಸಿಎಸ್‌) ನಿರ್ದೇಶನಾಲಯ ಅಭಿವೃದ್ಧಿಪಡಿಸಿರುವ ಮೊಬೈಲ್‌ ಆ್ಯಪ್‌ ಮೂಲಕ ಕೈಗೊಳ್ಳಲಾಗುತ್ತದೆ.

http://Visit : www.suddidina.com

ಮನೆ-ಮನೆ ಸಮೀಕ್ಷೆಯ ಜತೆಗೆ ಗ್ರಾಮ ಒನ್‌, ಕರ್ನಾಟಕ ಒನ್‌, ಬೆಂಗಳೂರು ಒನ್‌ ಮತ್ತು ಬಾಪೂಜಿ ಸೇವಾ ಕೇಂದ್ರಗಳ ಮೂಲಕವೂ ಪರಿಶೀಲನಾ ಪ್ರಕ್ರಿಯೆ ನಡೆಸಲು ವ್ಯವಸ್ಥೆ ಮಾಡಲಾಗಿದೆ. ಸರ್ಕಾರ ನಿಗದಿಪಡಿಸಿರುವ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನ (SOP) ಪ್ರಕಾರವೇ ಫಲಾನುಭವಿಗಳ ಮರುಪರಿಶೀಲನೆ ನಡೆಯಬೇಕು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಒಂದು ತಿಂಗಳಲ್ಲಿ ಕ್ಷೇತ್ರ ಪರಿಶೀಲನೆ ಪೂರ್ಣಗೊಳಿಸಲು ಸೂಚನೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಗತ್ಯ ಮಾದರಿ ನಮೂನೆಗಳನ್ನು ಸಿದ್ಧಪಡಿಸಲಿದೆ. ಮಾಸ್ಟರ್‌ ತರಬೇತುದಾರರ ಮೂಲಕ ಕ್ಷೇತ್ರ ಗಣತಿದಾರರಿಗೆ ತರಬೇತಿ ನೀಡಲಾಗುತ್ತದೆ. ಆಗಸ್ಟ್‌ 30ರಿಂದ ಒಂದು ತಿಂಗಳೊಳಗೆ ಕ್ಷೇತ್ರ ಪರಿಶೀಲನಾ ಕಾರ್ಯವನ್ನು ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.

ಜಿಲ್ಲಾ ಹಾಗೂ ತಾಲೂಕು ಗ್ಯಾರಂಟಿ ಸಮಿತಿಗಳು ಮತ್ತು ಸ್ಥಳೀಯ ಮಟ್ಟದ ಸಮಿತಿಗಳು ನಿಗದಿತ ಅವಧಿಯಲ್ಲಿ ಪರಿಶೀಲನೆ ಪೂರ್ಣಗೊಳಿಸಬೇಕು. ನಗರ ಪ್ರದೇಶಗಳಲ್ಲಿ ಕಂದಾಯ ನಿರೀಕ್ಷಕರು, ಬಿಲ್‌ ಕಲೆಕ್ಟರ್‌ಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರನ್ನು ಗಣತಿದಾರರನ್ನಾಗಿ ಬಳಸಲಾಗುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ಮತ್ತು ಸಿಬ್ಬಂದಿಯನ್ನು ಈ ಕಾರ್ಯಕ್ಕೆ ನಿಯೋಜಿಸಲಾಗುತ್ತದೆ.

ಮನೆ ಬಾಗಿಲಿಗೆ ಬರಲಿದೆ ಪರಿಶೀಲನಾ ತಂಡ

ಫಲಾನುಭವಿಗಳ ಮನೆಗಳಿಗೆ ಕಡ್ಡಾಯವಾಗಿ ಭೇಟಿ ನೀಡುವಂತೆ ಗ್ಯಾರಂಟಿ ಸಮಿತಿ ಸದಸ್ಯರು ಹಾಗೂ ಸಿಬ್ಬಂದಿಗೆ ಸೂಚಿಸಲಾಗಿದೆ. ಫಲಾನುಭವಿ ಅಥವಾ ಕುಟುಂಬದ ಸದಸ್ಯರು ಗಣತಿ ನಮೂನೆಯನ್ನು ಭರ್ತಿ ಮಾಡಿ ಹಿಂತಿರುಗಿಸಬೇಕು. ಯಾವುದೇ ಕಾರಣಕ್ಕೂ ಮನೆ ಭೇಟಿ ತಪ್ಪಿಸಬಾರದು ಎಂದು ಆದೇಶದಲ್ಲಿ ಕಟ್ಟುನಿಟ್ಟಾಗಿ ತಿಳಿಸಲಾಗಿದೆ.

ಗಣತಿದಾರರು ಮೊಬೈಲ್‌ ಆ್ಯಪ್‌ ಮೂಲಕ ಫಲಾನುಭವಿಯ ಭಾವಚಿತ್ರ ಅಥವಾ ಮನೆಯ ಫೋಟೊ, ಜಿಪಿಎಸ್‌ ಮ್ಯಾಪಿಂಗ್‌, ಮುಖಚಹರೆ ದೃಢೀಕರಣ ಮತ್ತು ಮತದಾರರ ಗುರುತಿನ ಚೀಟಿ ವಿವರಗಳನ್ನು ಸ್ಥಳದಲ್ಲಿಯೇ ದಾಖಲಿಸಬೇಕು. ಈ ಮೂಲಕ ಫಲಾನುಭವಿಯ ಗುರುತು ಹಾಗೂ ವಾಸ್ತವಿಕ ಸ್ಥಿತಿಯನ್ನು ಪರಿಶೀಲಿಸುವ ಉದ್ದೇಶ ಹೊಂದಲಾಗಿದೆ.

ಜಿಲ್ಲಾಧಿಕಾರಿಗಳು, ಸಿಇಒಗಳಿಗೆ ಹೊಣೆ

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ವಾರ್ಡ್‌ ಹಾಗೂ ಗ್ರಾಮವಾರು ಸ್ಪಷ್ಟ ನಿಯೋಜನೆಯೊಂದಿಗೆ ಗಣತಿದಾರರಿಗೆ ಲಿಖಿತ ಆದೇಶ ನೀಡಬೇಕು. ಪರಿಶೀಲನಾ ಪ್ರಕ್ರಿಯೆ ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳುವಂತೆ ಮೇಲ್ವಿಚಾರಣೆ ನಡೆಸಬೇಕಿದೆ.

ಒಟ್ಟಿನಲ್ಲಿ, ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಪಟ್ಟಿಯನ್ನು ಮತ್ತಷ್ಟು ನಿಖರಗೊಳಿಸಿ, ಅರ್ಹರಿಗೆ ಮಾತ್ರ ಸರ್ಕಾರದ ನೆರವು ತಲುಪಿಸುವುದು ಈ ಮರುಪರಿಶೀಲನೆಯ ಪ್ರಮುಖ ಉದ್ದೇಶವಾಗಿದೆ. ಮನೆ-ಮನೆ ಸಮೀಕ್ಷೆ ಮತ್ತು ಡಿಜಿಟಲ್‌ ದೃಢೀಕರಣದ ಬಳಿಕ ಫಲಾನುಭವಿಗಳ ಪಟ್ಟಿಯಲ್ಲಿ ಯಾವುದೇ ಬದಲಾವಣೆಗಳಾಗಲಿವೆಯೇ ಎಂಬುದು ಮುಂದಿನ ದಿನಗಳಲ್ಲಿ ಕುತೂಹಲ ಮೂಡಿಸಿದೆ.

Continue Reading

ದಿನದ ಸುದ್ದಿ

ಬೆಂಗಳೂರು ಮೆಟ್ರೋದಲ್ಲಿ ಸುರಕ್ಷತೆಗೆ ಹೊಸ ಕವಚ: PSD ಕಾಮಗಾರಿ ಯಾವಾಗ?

Published

on

Namma Metro PSD Delay: 3ನೇ ಹಂತದ ಕೇಂದ್ರ ಒಪ್ಪಿಗೆಗೆ ಕಾಯುವ ಬೆಂಗಳೂರು; 177 ನಿಲ್ದಾಣಗಳಲ್ಲಿ ₹1,274 ಕೋಟಿ ವೆಚ್ಚದ ಸುರಕ್ಷತಾ ಯೋಜನೆ!

ಸುದ್ದಿದಿನ,ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರ ಸುರಕ್ಷತೆ ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ರೂಪಿಸಿರುವ ಪ್ಲಾಟ್‌ಫಾರ್ಮ್ ಸ್ಕ್ರೀನ್‌ ಡೋರ್‌ (PSD) ಯೋಜನೆಗೆ ಕೇಂದ್ರದ ಅನುಮೋದನೆಯ ವಿಳಂಬವೇ ದೊಡ್ಡ ಅಡ್ಡಿಯಾಗಿದೆ. ಮೆಟ್ರೋ 3ನೇ ಹಂತದ ಕೆಂಪು ಮಾರ್ಗದ ಡಿಪಿಆರ್‌ಗೆ ಕೇಂದ್ರ ಸರಕಾರದಿಂದ ಒಪ್ಪಿಗೆ ದೊರೆಯುವವರೆಗೆ PSD ಅಳವಡಿಕೆ ಕಾಮಗಾರಿ ಆರಂಭಿಸುವುದು ಕಷ್ಟವಾಗಲಿದೆ ಎಂದು ರಾಜ್ಯ ಸರಕಾರ ಸ್ಪಷ್ಟಪಡಿಸಿದೆ.

ಪ್ರಸ್ತುತ ಮತ್ತು ಭವಿಷ್ಯದ ಮೆಟ್ರೋ ಯೋಜನೆಗಳನ್ನು ಪರಿಗಣಿಸಿದರೆ ಬೆಂಗಳೂರಿನಲ್ಲಿ ಒಟ್ಟು 191 ನಿಲ್ದಾಣಗಳು ನಿರ್ಮಾಣವಾಗುವ ನಿರೀಕ್ಷೆಯಿದೆ. ಈ ಪೈಕಿ 177 ನಿಲ್ದಾಣಗಳಲ್ಲಿ PSD ಅಳವಡಿಸಲು ಬಿಎಂಆರ್‌ಸಿಎಲ್‌ ಯೋಜನೆ ರೂಪಿಸಿದೆ. ಇದಕ್ಕಾಗಿ ಅಂದಾಜು ₹1,274 ಕೋಟಿ ವೆಚ್ಚವಾಗಲಿದೆ.

ಹೈಲೈಟ್ಸ್:

  • 177 ಮೆಟ್ರೋ ನಿಲ್ದಾಣಗಳಲ್ಲಿ PSD ಅಳವಡಿಕೆ ಗುರಿ
  • ಯೋಜನೆಗೆ ಅಂದಾಜು ₹1,274 ಕೋಟಿ ವೆಚ್ಚ
  • ಕೇಂದ್ರದ 3ಎ ಹಂತದ ಅನುಮೋದನೆಗೆ PSD ಯೋಜನೆ ಜೋಡಣೆ
  • ಹಾಲಿ ನಿಲ್ದಾಣಗಳಲ್ಲಿ ರಾತ್ರಿ ವೇಳೆ ತಾಂತ್ರಿಕ ಕಾಮಗಾರಿ
  • ಹೆಬ್ಬಾಳ–ಸರ್ಜಾಪುರ 3ಎ ಯೋಜನೆಯ ಪರಿಷ್ಕೃತ ವೆಚ್ಚ ₹25,999 ಕೋಟಿ

http://Visit : www.suddidina.com

₹1,274 ಕೋಟಿ ಯೋಜನೆ: ಎಲ್ಲಿ ಎಷ್ಟು ಖರ್ಚು?

PSD ಯೋಜನೆಯ ಒಟ್ಟು ವೆಚ್ಚದಲ್ಲಿ ಸಾಮಗ್ರಿ ಖರೀದಿಗೆ ಸುಮಾರು ₹747 ಕೋಟಿ, ಸಿವಿಲ್ ಕಾಮಗಾರಿಗಳಿಗೆ ₹317 ಕೋಟಿ ಹಾಗೂ ಸಿಗ್ನಲಿಂಗ್, ಟೆಲಿಕಾಂ ಮತ್ತು ವಿದ್ಯುತ್ ವ್ಯವಸ್ಥೆಗಳ ಮಾರ್ಪಾಡಿಗೆ ₹210 ಕೋಟಿ ಮೀಸಲಿಡುವ ಪ್ರಸ್ತಾವನೆ ಇದೆ.

ಆದರೆ ಈ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಪ್ರತ್ಯೇಕವಾಗಿ ಸಲ್ಲಿಸಲಾಗಿಲ್ಲ. ಹೆಬ್ಬಾಳ–ಸರ್ಜಾಪುರ 3ಎ ಹಂತದ ಡಿಪಿಆರ್‌ನ ಭಾಗವಾಗಿಯೇ ಕಳುಹಿಸಲಾಗಿದೆ. ಹೀಗಾಗಿ 3ಎ ಹಂತದ ಯೋಜನೆಗೆ ಕೇಂದ್ರದ ಗೃಹ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಅನುಮೋದನೆ ದೊರೆಯುವವರೆಗೆ PSD ಯೋಜನೆಗೂ ಅಂತಿಮ ಒಪ್ಪಿಗೆ ಸಿಗುವುದಿಲ್ಲ.

ಹಾಲಿ ನಿಲ್ದಾಣಗಳಲ್ಲಿ ಕಾಮಗಾರಿ ಸವಾಲು

ಹೊಸ ನಿಲ್ದಾಣಗಳಲ್ಲಿ PSD ಅಳವಡಿಕೆ ತುಸು ಸುಲಭವಾದರೂ, ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ನೇರಳೆ, ಹಸಿರು ಮತ್ತು ಹಳದಿ ಮಾರ್ಗಗಳ ನಿಲ್ದಾಣಗಳಲ್ಲಿ ಕಾಮಗಾರಿ ನಡೆಸುವುದು ಸವಾಲಿನ ಕೆಲಸವಾಗಿದೆ. ತಾಂತ್ರಿಕ ಕಾಮಗಾರಿಗಳನ್ನು ಮುಖ್ಯವಾಗಿ ರಾತ್ರಿ ವೇಳೆ, ರೈಲು ಸಂಚಾರ ಸ್ಥಗಿತಗೊಂಡ ಬಳಿಕ ನಡೆಸಬೇಕಾಗುತ್ತದೆ. ಅಗತ್ಯವಿದ್ದರೆ ರೈಲುಗಳ ವೇಗ ಕಡಿಮೆ ಮಾಡುವುದು ಅಥವಾ ಸಂಚಾರವನ್ನು ತಾತ್ಕಾಲಿಕವಾಗಿ ನಿಯಂತ್ರಿಸುವ ಪರಿಸ್ಥಿತಿಯೂ ಎದುರಾಗಬಹುದು.

ಟ್ರ್ಯಾಕ್‌ಗೆ ಇಳಿಯುವ ಘಟನೆಗಳು ಆತಂಕ

ಮೆಟ್ರೋ ನಿಲ್ದಾಣಗಳಲ್ಲಿ ಪ್ರಯಾಣಿಕರು ಟ್ರ್ಯಾಕ್‌ಗೆ ಇಳಿಯುವುದನ್ನು ತಡೆಯಲು ಈಗಾಗಲೇ ಭದ್ರತಾ ಸಿಬ್ಬಂದಿ ಹಾಗೂ ಸ್ಟೀಲ್ ಗ್ರಿಲ್‌ಗಳಂತಹ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೂ ಟ್ರ್ಯಾಕ್‌ಗೆ ಇಳಿಯುವ ಘಟನೆಗಳು ಸಂಪೂರ್ಣವಾಗಿ ನಿಂತಿಲ್ಲ. ಈ ಹಿನ್ನೆಲೆಯಲ್ಲಿ PSD ಅಳವಡಿಕೆ ಪ್ರಯಾಣಿಕರ ಸುರಕ್ಷತೆಗೆ ಮಹತ್ವದ ಹೆಚ್ಚುವರಿ ಕವಚವಾಗಬಹುದು.

3ಎ ಹಂತದ ಪರಿಷ್ಕೃತ ಡಿಪಿಆರ್‌

ಹೆಬ್ಬಾಳ–ಸರ್ಜಾಪುರ 37 ಕಿ.ಮೀ. ಕಾರಿಡಾರ್‌ನ ಪರಿಷ್ಕೃತ ಡಿಪಿಆರ್‌ ಕೇಂದ್ರದ ಅನುಮೋದನೆಗಾಗಿ ಕಾಯುತ್ತಿದೆ. ವೆಚ್ಚ ಪರಿಷ್ಕರಣೆಯ ಬಳಿಕ ಯೋಜನೆಯ ಅಂದಾಜು ₹28,405 ಕೋಟಿಯಿಂದ ₹25,999 ಕೋಟಿಗೆ ಇಳಿಕೆಯಾಗಿದೆ. ಕೇಂದ್ರದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯ ಒಪ್ಪಿಗೆ ದೊರೆತ ಬಳಿಕವೇ ಮುಂದಿನ ಹಂತದ ಕಾಮಗಾರಿಗಳಿಗೆ ವೇಗ ಸಿಗಲಿದೆ.

Continue Reading

Trending