Connect with us

ದಿನದ ಸುದ್ದಿ

ಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ

Published

on

ಸುದ್ದಿದಿನ,ದಾವಣಗೆರೆ:ಬಿಜೆಪಿ ಮಹಿಳಾ ಮತದಾರರನ್ನು ಒಂದು ಪ್ರಬಲ ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವಲ್ಲಿ ಪ್ರಯತ್ನಿಸಿತ್ತು. ‘ನಾರಿ ಶಕ್ತಿ’ ಎಂಬ ಬ್ರಾಂಡ್ ಅಡಿಯಲ್ಲಿ ಮಹಿಳೆಯರನ್ನು ನೇರವಾಗಿ ತಲುಪುವ ತಂತ್ರವನ್ನು ಬಿಜೆಪಿ ರೂಪಿಸಿತ್ತು. ಮಹಿಳಾ ಮೀಸಲಾತಿ ಮಸೂದೆಯನ್ನು ಈ ಬ್ರಾಂಡ್‌ನ ಸರ್ವೋಚ್ಚ ಸಾಧನೆಯಾಗಿ ಪ್ರಸ್ತುತಪಡಿಸಲಾಯಿತು. ಆದರೆ ಬಿಜೆಪಿ ಒಂದು ಅತ್ಯಂತ ವ್ಯವಸ್ಥಿತ ಮತ್ತು ಚಾಣಾಕ್ಷ ‘ಪಾಲಿಟಿಕಲ್ ಮಾರ್ಕೆಟಿಂಗ್’ ತಂತ್ರವಾಗಿ ಬಳಸಿಕೊಳ್ಳುವುದಕ್ಕೆಯತ್ನಿಸಿ ವಿಫಲವಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದರು.

ಗೃಹ ಕಚೇರಿಯಲ್ಲಿ ಇಂದು ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿಯನ್ನು ಕ್ಷೇತ್ರ ಪುನರ್‌ವಿಂಗಡಣೆಗೆ “ಬಲಿಪಶು” ಮಾಡುವುದು ಸರಿಯಲ್ಲ. ೨೦೨೩ರ ಕಾಯಿದೆಯಲ್ಲಿ ಜನಗಣತಿ ನಂತರ ಅನುಷ್ಠಾನ ಎಂದು ತಿಳಿಸಲಾಗಿದೆ. ಆದರೆ ಈಗ ೨೦೧೧ರ ಜನಗಣತಿ ಆಧಾರದಲ್ಲಿ ವೇಗಗೊಳಿಸುವುದು ಏಕೆ? ಜಾತಿ ಜನಗಣತಿಯನ್ನು ಸೇರಿಸದಿದ್ದರೆ ಪುನರ್‌ವಿಂಗಡಣೆಯು ಸಾಮಾಜಿಕ ನ್ಯಾಯಕ್ಕೆ ಹೊಂದುವುದಿಲ್ಲ. ದಕ್ಷಿಣ ರಾಜ್ಯಗಳಲ್ಲಿ ಕುಟುಂಬ ನಿಯಂತ್ರಣದ ಯಶಸ್ಸಿಗೆ ಶಿಕ್ಷೆ ನೀಡುವಂತಾಗಬಾರದು. ಜನಸಂಖ್ಯೆ ನಿಯಂತ್ರಣ ಮಾಡಿದ್ದು ದಕ್ಷಣ ಭಾರತ. ಇದರ ಆಧಾರದ ಮೇರೆಗೆ ಮಸೂದೆ ಜಾರಿಗಿದ್ದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗುತ್ತಿತ್ತು. ಬಿಜೆಪಿ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡಿತು. ಆದರೆ ಮೂರನೇ ಎರಡರಷ್ಟು ಬಹುಮತ ಸಿಗಲಿಲ್ಲ ಎಂದರು.

ಮಸೂದೆಯನ್ನು ವೋಟ್ ಬ್ಯಾಂಕ್ ಆಗಿ ಬಳಕೆ ಮಾಡಿಕೊಂಡು ಮಹಿಳೆಯರ ಭಾವನೆಗಳೊಂದಿಗೆ ಆಟವಾಡಲು ಹೋಯಿತು. ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡಿತು. ಆದರೆ ಅದು ನಡೆಯಲಿಲ್ಲ. ನಮ್ಮ ವಿರೋಧವೇನಿದ್ದರು ಪುನರ್ ವಿಂಗಡಣೆ ಮಸೂದೆ ತಿರಸ್ಕರಿಸಿದೆ ಹೊರತು ಮಹಿಳಾ ಮೀಸಲು ಮಸೂದೆ ಅಲ್ಲ ಎಂದರು.

ಪಂಚ ರಾಜ್ಯಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಿದ್ದರೂ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಿದ್ದು ಚುನಾವಣಾ ಆಯೋಗ ನಿರ್ಧಾರ ತೆಗೆದುಕೊಳ್ಳಬೇಕು. ಅವರು ಚುನಾವಣೆಯ ಸಂದರ್ಭದಲ್ಲಿ ದೇಶ ಉದ್ದೇಶಿಸಿ ಮಾಡಿದ ಭಾಷಣದಲ್ಲಿ ವಿರೋಧ ಪಕ್ಷಗಳನ್ನು ತೆಗಳಿಕೆ ಮಾಡಿದ್ದು ಸರಿಯಲ್ಲ. ಇದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿಮಾಡಿದರು.

ಮಸೂದೆ ಕುರಿತು ಸರ್ವ ಪಕ್ಷಗಳ ಸಭೆ ಕರೆಯುವಂತೆ ಮಾಡಿಕೊಂಡ ಮನವಿ ಉಪೇಕ್ಷೆ ಮಾಡಿತು ಕೇಂದ್ರ ಸರ್ಕಾರ. ಮಹಿಳಾ ಮೀಸಲಾತಿ ಮಸೂದೆ ಈಗಾಗಲೇ ಲೋಕಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಕ್ಷೇತ್ರ ಪುನರ್ ವಿಂಗಡಣೆ ಬಗ್ಗೆ ಆತಂಕ ಇದೆ. ಎಲ್ಲರ ಒಪ್ಪಿಗೆ ಪಡೆದು ಮುಂದುವರೆದಿದ್ದರೆ ಅನುಕೂಲ ಆಗುತ್ತಿತ್ತು. ೨೦೨೪ರಲ್ಲಿ ಮಹಿಳಾ ಮೀಸಲು ಜಾರಿಗೆ ತರುವ ಅವಕಾಶ ಇತ್ರು. ಇದನ್ನು ಮಾಡಲು ಮುಂದಾಗಲಿಲ್ಲ. ಕ್ಷೇತ್ರ ಪುನರ್ ವಿಂಗಡಣೆ ಜಮ್ಮು ಮತ್ತು ಕಾಶ್ಮೀರ ಹಾಗೂ ಅಸ್ಸಾಂ ದಲ್ಲಿ ತಮ್ಮ ಅನುಕೂಲ, ರಾಜಕೀಯ ಲಾಭಕ್ಕೆ ಅನುಗುಣವಾಗಿ ಮಾಡಿ ತೋರಿಸಿದ್ದಾರೆ. ಈ ಬಗ್ಗೆ ಹೆಚ್ಚು ಆತಂಕ ಇದೆ. ಆಡಳಿತ ಪಕ್ಷಕ್ಕೆ ಈ ಮಸೂದೆ ಜಾರಿಗೆ ತರುವ ಬದ್ದತೆ ಇದ್ದಿದ್ದರೆ ಸರ್ವ ಪಕ್ಷಗಳನ್ನು ವಿಶ್ವಾಸಕ್ಕೆ ಪಡೆಯುವ ಪ್ರಯತ್ನ ಮಾಡುತ್ತಿದ್ದರು. ರಾಜೀವ್ ಗಾಂಧಿ ಅವರು ಸ್ಥಳೀಯ ಸಂಸ್ಥೆಯಲ್ಲಿ ಶೇ ೫೦ ಜಾರಿಗೆ ತಂದಿದ್ದೇವೆ ಎಂದರು.

ಜನಸಂಖ್ಯೆ ನಿಯಂತ್ರಣ ಮಾಡಿದ್ದು ದಕ್ಷಣ ಭಾರತ. ಇದರ ಆಧಾರದ ಮೇರೆಗೆ ಜಾರಿಗೆ ತಂದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗಲಿದೆ. ಜನಗಣತಿಯಲ್ಲಿ ಜಾತಿ ಗಣತಿ ನಡೆಯುತ್ತಿದೆಯೇ ಎಂಹುದು ಇನ್ನೂ ಸ್ಪಷ್ಟವಾಗಿ ಹೇಳಿಲ್ಲ. ಉತ್ತರ ಪ್ರದೇಶ ಹಾಗೂ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ನಡುವೆ ಇರುವ ವ್ಯತ್ಯಾಸ ದೊಡ್ಡದು. ಉತ್ತರ ಭಾರತೀಯ ರಾಜ್ಯಗಳು ಹೆಚ್ಚು ಪ್ರಾಬಲ್ಯ ಸಾಧಿಸಿದರೆ ದಕ್ಷಿಣ ಭಾರತಕ್ಕೆ ತೊಂದರೆ ಆಗುತ್ತದೆ. ಮಸೂದೆ ಮಂಡನೆಗೆ ಇನ್ನೂ ಎರಡು ವರ್ಷಗಳ ಕಾಲಾವಕಾಶ ಇದೆಯಾವುದು ಒಳಿತು ಎಂಬುದು ಮಹಿಳೆಯರು ಆಲೋಚನೆ ಮಾಡಲಿ ಎಂದರು.

ಸುದ್ದಿಗೋಷ್ಟಿಯಲ್ಲಿ ‘ಧೂಡಾ’ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಕಾಂಗ್ರೆಸ್ ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ಅನಿತಾಬಾಯಿ, ಮುಖಂಡರಾದ ಶಿವಕುಮಾರ್, ಅಯೂಬ್ ಪೈಲ್ವಾನ್, ಎ.ನಾಗರಾಜ್ ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending