Connect with us

ದಿನದ ಸುದ್ದಿ

ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ

Published

on

ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ ಆತಂಕ ವ್ಯಕ್ತಪಡಿಸಿದ್ದಾರೆ.

ಎಸಿ, ತಹಸೀಲ್ದಾರ್, ಪೊಲೀಸ್ ಅಧಿಕಾರಿಗಳು, ಗ್ರಾಮದ ಮುಖಂಡರೊಂದಿಗೆ ಐಮಂಗಲ ಸಮೀಪದ ಹರಳಯ್ಯ ಮಠಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿ, ಚಿತ್ರದುರ್ಗ ಜಿಲ್ಲಾಸ್ಪತ್ರೆ ಬಳಿಕ ಮಠಕ್ಕೆ ಶ್ರೀಗಳು ಬಂದಿದ್ದಾರೆಂದು ಭಾವಿಸಿ ಧೈರ್ಯ ಹೇಳಲು ಬಂದಿದ್ದೇನೆ. ಆದರೆ, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿರುವುದು ಅವರ ಆರೋಗ್ಯ ಸ್ಥಿತಿ ಕುರಿತು ಕಳವಳ ವ್ಯಕ್ತವಾಗಿದೆ ಎಂದರು.

ಮುರುಘ ಮಠದ ಡಾ. ಶ್ರೀ ಶಿವಮೂರ್ತಿ ಮುರುಘ ಶರಣರು ಎಲ್ಲ ಶೋಷಿತ, ದಲಿತ, ಹಿಂದುಳಿದ ವರ್ಗಗಳಿಗೆ ಧಾರ್ಮಿಕ ಸ್ಥಾನ ನೀಡಲು ಹಲವರಿಗೆ ದೀಕ್ಷೆ ನೀಡಿ, ಜಮೀನು ಸೇರಿ ಅಗತ್ಯ
ಸಹಕಾರ ನೀಡಿದ್ದು ಸ್ಮರಣೀಯ. ಆ ಸಂದರ್ಭದಲ್ಲಿ ಹರಳಯ್ಯ ಮಠ ಸ್ಥಾಪನೆಗಾಗಿ ಜಮೀನು ಖರೀದಿಸಲು ಹಣ ಕೊಟ್ಟಿದ್ದರು. ಆ ಹಣದಲ್ಲಿ ಭೂಮಿ ಖರೀದಿಸಿ ಮಠ, ಶಾಲೆ ನಿರ್ಮಿಸಲು ಬಸವ ಹರಳಯ್ಯ ಸ್ವಾಮೀಜಿ ಶ್ರಮಿಸಿ ಸಾಧನೆ ಮಾಡಿದ್ದಾರೆ ಎಂದು ತಿಳಿಸಿದರು.

ಮಠ-ಮಾನ್ಯಗಳು ಮಾಡಬೇಕಾದ ಕಾರ್ಯವನ್ನು ಅತ್ಯಂತ ಶ್ರದ್ಧೆ, ಸವಾಲುಗಳ ಮಧ್ಯೆ,‌ ಹಗಲು-ರಾತ್ರಿ ಶ್ರಮಪಟ್ಟು ಹರಳಯ್ಯ ಸ್ವಾಮೀಜಿ ಮಾಡಿದ್ದಾರೆ. ಸಮಾಜ ಕಲ್ಯಾಣ
ಸಚಿವನಾಗಿದ್ದ ವೇಳೆ 1 ಕೋಟಿ ರೂ. ಅನುದಾನ ಕೊಡಿದ್ದೇ. ಬಳಿಕ ಅಸ್ಥಿತ್ವಕ್ಕೆ ಬಂದ ಸರ್ಕಾರ ಹಾಗೂ ಭಕ್ತರು, ಜನರಿಗೆ ದೇಣಿಗೆ ಸಂಗ್ರಹಿಸಿ ಭವ್ಯವಾದ ಮಠ ನಿರ್ಮಿಸಿದ್ದಾರೆ.
ಸುತ್ತಮುತ್ತಲ ಬಡ ಮಕ್ಕಳಿಗಾಗಿ ಶಾಲೆ, ಸತ್ ಚಿಂತನೆ ಮೂಡಿಸಲು ಧಾರ್ಮಿಕ ಕಾರ್ಯಕ್ಕಾಗಿ ಸಭಾಂಗಣ ನಿರ್ಮಿಸಿದ್ದಾರೆ ಎಂದರು.

ಈ ಸಂದರ್ಭ ತಗ್ಗುಗುಂಡಿ ಆಗಿದ್ದ ಅನುಪಯುಕ್ತ ಎರಡು ಗುಂಟೆ ಜಮೀನು ಗೊಂದಲದಿಂದ ಒತ್ತುವರಿ ಆಗಿದೆ. ಈ ವಿಷಯಕ್ಕಾಗಿ ಹಲವು ಬಾರಿ ವ್ಯಕ್ತಿಯೊರ್ವ ಗಲಾಟೆ ಮಾಡಿದ್ದಾನೆ. ಗೊತ್ತಿಲ್ಲದೆ ಎರಡು ಗುಂಟೆ ಜಾಗ ಒತ್ತುವರಿ ಆಗಿದ್ದು, ತಪ್ಪು ನನ್ನಿಂದಲೇ ಆಗಿದೆಯೆಂದು ಶ್ರೀಗಳು ಒಪ್ಪಿಕೊಂಡಿದ್ದಾರೆ. ಜತೆಗೆ ಆ ಜಾಗಕ್ಕೆ ಈಗಿನ ಮಾರುಕಟ್ಟೆ ಮೌಲ್ಯದಷ್ಟು ಹಣ ಕೊಡುತ್ತೇನೆ ಎಂದು ತಿಳಿಸಿದ್ದಾರೆ. ವ್ಯಕ್ತಿ ನಿರಾಕರಿಸಿದಾಗ ಒತ್ತುವರಿ ಜಾಗದಲ್ಲಿ ಕಟ್ಟಿದ್ದ ಕಾಂಪೌಂಡನ್ನು ಸ್ವಾಮೀಜಿ ಕೆಡವಿಸಿದ್ದಾರೆ. ಆದರೂ ಆ ವ್ಯಕ್ತಿ ದ್ವೇಷ ಮುಂದುವರಿಸಿದ್ದು ಏಕಾಏಕಿ ಮಠಕ್ಕೆ ನುಗ್ಗಿ ಸ್ವಾಮೀಜಿ ಮೇಲೆ
ಮಾರಾಣಾಂತಿಕ ಹಲ್ಲೆ ನಡೆಸಿದ್ದು, ದೂರು ಕೊಡಲು ಠಾಣೆಗೆ ತೆರಳಿರುವ ವಿಷಯ ತಿಳಿದು ಅಲ್ಲಿಗೆ ತೆರಳಿ ಕಾಲಿನಿಂದ ಸ್ವಾಮೀಜಿ ಎದೆಗೆ ಒದ್ದಿದ್ದಾನೆ ಎಂದರು.

ಧಾರ್ಮಿಕ ನೇತಾರರನ್ನು ಗೌರವಿಸುವ ನಾಡು ಭಾರತ. ಇಂತಹ ಸಂದರ್ಭ ಖಾವಿಧಾರಿಯೊಬ್ಬರ ಮೇಲೆ ಮಾರಾಣಾಂತಿಕವಾಗಿ ಹಲ್ಲೆ ನಡೆಸಿ, ಅವ್ಯಾಚ್ಯ ಶಬ್ದಗಳಿಂದ ನಿಂಧಿಸಿರುವುದು ಎಚ್ಚರಿಕೆ
ಗಂಟೆಯಾಗಿದೆ. ಈ ದುಷ್ಕೃತ್ಯವನ್ನು ನಾಡಿನ ಎಲ್ಲ ಮಠಾಧೀಶರು ಖಂಡಿಸಬೇಕು, ಸ್ವಾಮೀಜಿಗೆ ನೈತಿಕವಾಗಿ ಬೆಂಬಲಿಸಬೇಕು. ಇಲ್ಲದಿದ್ದರೇ ಇಂತಹ ಕೃತ್ಯಗಳು ಹೆಚ್ಚಾಗುವ ಸಾಧ್ಯತೆ ಎಂದು ಆತಂಕ ವ್ಯಕ್ತಪಡಿಸಿದರು.

ಹಲ್ಲೆ ನಡೆಸಿದ ಮೂವರನ್ನು ಮಟ್ಟಹಾಕುವ ಶಕ್ತಿ ನಮ್ಮಲ್ಲೂ ಇದೆ. ಆದರೆ, ನಾವು ವಾಮಮಾರ್ಗದಲ್ಲಿ ಸಾಗುವವರಲ್ಲ, ಕಾನೂನು ಪರಿಪಾಲಕರು. ನಮ್ಮ ಹಕ್ಕೋತ್ತಾಯ ಬಸವ
ತತ್ವದಡಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆ ಭೀತಿ ಹುಟ್ಟಿಸುವಂತದ್ದಾಗಿದೆ. ಈ ಕುರಿತು ತಕ್ಷಣವೇ ಎಲ್ಲ ಮಠಾಧೀಶರು, ಧರ್ಮಗಳ ಪ್ರತಿಪಾದಕರು ಖಂಡಿಸಬೇಕು ಎಂದು ಕೋರಿದರು.

ಈಗ ಯಾವುದೇ ಕಾರಣಕ್ಕೂ ಸಂಧಾನ-ಚರ್ಚೆ ಅಗತ್ಯವಿಲ್ಲ. ಮಠದ ಸಾಮಾಜಿಕ ಕಾರ್ಯಕ್ಕಾಗಿ ಸರ್ಕಾರ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕು. ಅದಕ್ಕೆ ತಗಲುವ ವೆಚ್ಚವನ್ನು ನಾನೇ‌ ಸ್ವಂತವಾಗಿ ಭರಿಸುತ್ತೇನೆ. ತಕ್ಷಣ ಅಧಿಕಾರಿಗಳು ಈ ಸಂಬಂಧ ಕಾರ್ಯಪ್ರವೃತ್ತರಾಗಬೇಕೆಂದು ಆಂಜನೇಯ ಆಗ್ರಹಿಸಿದರಲ್ಲದೇ ಒಂದು ವೇಳೆ ಭೂಮಿ ಯಾರದ್ದಾಗಿದ್ದರೇ ಅವರಿಗೆ ನ್ಯಾಯಯುತವಾಗಿ ಸಲ್ಲಬೇಕಾದ ಪರಿಹಾರ ನೀಡಬಹುದು. ಈ ನಿಟ್ಟಿನಲ್ಲಿ ನಾನು ತಗಲುವ ಸಂಪೂರ್ಣ ವೆಚ್ಚ ಭರಿಸುವೆ ಎಂದು ತಿಳಿಸಿದರು.

ಐಮಂಗಲ ಸುತ್ತಮುತ್ತಲ ಗ್ರಾಮಗಳ ಬಡ ಮಕ್ಕಳಿಗೆ ಶಿಕ್ಷಣ ನೀಡುವುದು, ಅನಾಥಾಲಯ ಸ್ಥಾಪನೆಯ ಸದುದ್ದೇಶ ಹೊಂದಿರುವ ಶ್ರೀಗಳ ಮೇಲೆ ಹಲ್ಲೆ ಇಡೀ ಧಾರ್ಮಿಕ ಮುಖಂಡರಿಗೆ ಮಾಡಿರುವ ಅಪಮಾನ ಮತ್ತು ಅವರಲ್ಲಿ ಭೀತಿ ಸೃಷ್ಠಿಸುವಂತದ್ದಾಗಿದೆ. ಆದ್ದರಿಂದ‌ ಮಾರಾಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿಗಳನ್ನು ತಕ್ಷಣವೇ ರಾಜ್ಯದಿಂದಲೇ ಗಡಿಪಾರು ಮಾಡಬೇಕು. ಜೊತೆಗೆ ಕಠಿಣ ಶಿಕ್ಷೆ ಆಗುವ ರೀತಿ ಕಾನೂನು ಪ್ರಕ್ರಿಯೆ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಈ‌ ಸಂದರ್ಭದಲ್ಲಿ ಎಸಿ ಕಾಂತರಾಜ್, ಡಿವೈಎಸ್ಪಿ ಶಿವಕುಮಾರ್, ಸಿಪಿಐ ಗುಡ್ಡಪ್ಪ ಹಾಗೂ ಗ್ರಾಮದ ಹಿರಿಯರು
ಉಪಸ್ಥಿತರಿದ್ದರು.

*ಪೋಟೊ ಕ್ಯಾಪ್ಷನ್* ಐಮಂಗಲದ ಹರಳಯ್ಯ ಗುರುಪೀಠಕ್ಕೆ ಶುಕ್ರವಾರ ಸಂಜೆ ಮಾಜಿ‌ಸಚಿವ ಎಚ್.ಆಂಜನೇಯ ‌ಅಧಿಕಾರಿಗಳೊಂದಿಗೆ ಭೇಟಿ‌ ನೀಡಿ‌ ಪರಿಶೀಲಿಸಿದರು.

ದಿನದ ಸುದ್ದಿ

ಡಾಲಿಯ ಕನಸು ಒಂದೇ ಹೀರೋ ಆಗೋದು

Published

on

ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!

ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!

ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.

ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!

ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ವಿಶೇಷ ಘಟಕ ಯೋಜನೆ, ಗಿರಿಜನ ಉಪ ಯೋಜನೆಯಡಿ ವಿವಿಧ ಯೋಜನೆಗಳಾದ ಸಾಫ್ಟ್ ಸೀಡ್ ಕ್ಯಾಪಿಟಲ್, ಶೇ.60 ರಷ್ಟು ಸಹಾಯಧನ ಸಾಲ ಶುಲ್ಕ ಮರುಪಾವತಿ ಮತ್ತು ವಿದ್ಯುಚ್ಚಕ್ತಿ ಸಹಾಯಧನ ಯೋಜನೆಯಡಿ ಅರ್ಹ ಉದ್ದಿಮೆದಾರರಿಗೆ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಈಗಾಗಲೇ ಬ್ಯಾಂಕಿನಿಂದ ಸಾಲ ಪಡೆದು ಘಟಕಗಳನ್ನು ಸ್ಥಾಪಿಸಿರುವ ಅರ್ಹ ಉದ್ದಿಮೆದಾರರು ಹಾಗೂ ಬ್ಯಾಂಕ ಸಾಲ ಪಡೆದು ಉದ್ದಿಮೆ ಸ್ಥಾಪಿಸಲು ಇಚ್ಚಿಸಿರುವ ಉದ್ದಿಮೆದಾರರು ಹೆಚ್ಚಿನ ವಿವರಗಳಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಪಿ.ಬಿ ರಸ್ತೆ ದಾವಣಗೆರೆ ಇವರನ್ನು ಸಂಪರ್ಕಿಸಬಹುದೆಂದು ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!

Published

on

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

  • ಜುಲೈ 25ರ ಭರವಸೆ ಜಾರಿಗೆ ವಿಳಂಬ: CJP ತೀವ್ರ ಆಕ್ರೋಶ
  • ಇಂಡಿಯಾ ಗೇಟ್‌ನಿಂದ ಪೊಲೀಸ್ ಕೇಂದ್ರ ಕಚೇರಿವರೆಗೆ ಮೆರವಣಿಗೆ
  • NEET ಅಭ್ಯರ್ಥಿಗಳ ಕುಟುಂಬಸ್ಥರು, ಪೊಲೀಸ್ ದೌರ್ಜನ್ಯ ಸಂತ್ರಸ್ತರು ಮುಂಚೂಣಿಯಲ್ಲಿ
  • “ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ” ಎಂದ CJP 

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಸುದ್ದಿದಿನ,ನವದೆಹಲಿ: ದೇಶದ ಯುವಜನರಿಗೆ ನೀಡಿರುವ ಭರವಸೆಗಳನ್ನು ಸರ್ಕಾರ ಈಡೇರಿಸಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಕ್‌ರೋಚ್ ಜನತಾ ಪಾರ್ಟಿ (CJP) ಸೆಪ್ಟೆಂಬರ್ 5ರಂದು ನವದೆಹಲಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸಲು ಕರೆ ನೀಡಿದೆ. ಜುಲೈ 25ರಂದು ಸಾರ್ವಜನಿಕವಾಗಿ ನೀಡಲಾಗಿದ್ದ ಭರವಸೆಗಳಿಗೆ ಒಂದು ತಿಂಗಳು ಕಳೆದರೂ ಅವುಗಳ ಅನುಷ್ಠಾನಕ್ಕೆ ಸ್ಪಷ್ಟ ಕ್ರಮಗಳು ಗೋಚರಿಸುತ್ತಿಲ್ಲ ಎಂಬುದು CJPಯ ಪ್ರಮುಖ ಆರೋಪವಾಗಿದೆ.

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದ್ದು, ಸರ್ಕಾರ ಹಾಗೂ ಬಿಜೆಪಿ-ಎನ್‌ಡಿಎ ಆಡಳಿತದ ರಾಜ್ಯಗಳು ಯುವಜನರಿಗೆ ನೀಡಿದ್ದ ಭರವಸೆಗಳ ಅನುಷ್ಠಾನವನ್ನು ಪರಿಶೀಲಿಸಿದ ಬಳಿಕ ಪ್ರತಿಭಟನೆ ನಡೆಸುವ ನಿರ್ಧಾರವನ್ನು ಸರ್ವಾನುಮತದಿಂದ ಕೈಗೊಳ್ಳಲಾಗಿದೆ ಎಂದು ಪಕ್ಷ ತಿಳಿಸಿದೆ.

http://Visit : www.suddidina.com

ಇಂಡಿಯಾ ಗೇಟ್‌ನಿಂದ ಮೆರವಣಿಗೆ

ಸೆಪ್ಟೆಂಬರ್ 5ರಂದು ಇಂಡಿಯಾ ಗೇಟ್‌ನಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ನವದೆಹಲಿ ಪೊಲೀಸ್ ಕೇಂದ್ರ ಕಚೇರಿಯತ್ತ ಸಾಗಲಿದೆ. ಮೃತ NEET ಅಭ್ಯರ್ಥಿಗಳ ಕುಟುಂಬಸ್ಥರು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರು ಮೆರವಣಿಗೆಯ ಮುಂಚೂಣಿಯಲ್ಲಿ ಸಾಗಲಿದ್ದಾರೆ ಎಂದು CJP ಹೇಳಿದೆ.

ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು, ಯುವ ಸಂಘಟನೆಗಳ ಪ್ರತಿನಿಧಿಗಳು ಮತ್ತು ಯುವಜನರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸರ್ಕಾರ ನೀಡಿದ್ದ ಭರವಸೆಗಳನ್ನು ಜಾರಿಗೆ ತರಬೇಕು ಎಂಬ ಒಂದೇ ಪ್ರಮುಖ ಬೇಡಿಕೆಯೊಂದಿಗೆ ಯುವಜನರು ಶಾಂತಿಯುತವಾಗಿ ಧ್ವನಿ ಎತ್ತಲಿದ್ದಾರೆ ಎಂದು ಪಕ್ಷ ಹೇಳಿದೆ.

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

‘ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ’

ಜುಲೈ 25ರಂದು ನೀಡಿದ ಭರವಸೆಗಳನ್ನು ನಂಬಿ ದೇಶಾದ್ಯಂತ ನಡೆದಿದ್ದ ಪ್ರತಿಭಟನೆಗಳನ್ನು ಯುವಜನರು ಉತ್ತಮ ನಂಬಿಕೆಯಿಂದ ಹಿಂಪಡೆದಿದ್ದರು. ಆದರೆ, ಭರವಸೆಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವುದು ಯುವಜನರಲ್ಲಿ ಮತ್ತೆ ಅಸಮಾಧಾನ ಮೂಡಿಸಿದೆ ಎಂದು CJP ಆರೋಪಿಸಿದೆ.

“ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ. ನಮ್ಮ ಸದುದ್ದೇಶವನ್ನು ಸರ್ಕಾರ ಯುವಜನರಿಗೆ ದ್ರೋಹ ಮಾಡುವ ಅವಕಾಶವಾಗಿ ಬಳಸಿಕೊಳ್ಳಬಾರದು” ಎಂದು CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಎಚ್ಚರಿಕೆ ನೀಡಿದೆ.

“ಭರವಸೆಗಳನ್ನು ಜಾರಿಗೆ ತರುವ ಬದಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್‌ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ” 

  • CJP ಆರೋಪ

ಮಾತಿನಿಂದ ಹಿಂದೆ ಸರಿಯಲು ಸಾಧ್ಯವಿಲ್ಲ

ಜುಲೈ 25ರಂದು ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಾರ್ವಜನಿಕವಾಗಿ ನೀಡಿದ್ದ ಭರವಸೆಗಳನ್ನು ಸರ್ಕಾರ ಈಡೇರಿಸಬೇಕು ಎಂಬುದು CJPಯ ಆಗ್ರಹ. ಮಕ್ಕಳನ್ನು ಕಳೆದುಕೊಂಡ ಕುಟುಂಬಗಳು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರ ನೋವಿನ ನಡುವೆ ನಡೆಯಲಿರುವ ಈ ಮೆರವಣಿಗೆ, ಯುವಜನರ ವಿಶ್ವಾಸ ಮತ್ತು ಸರ್ಕಾರದ ಹೊಣೆಗಾರಿಕೆಯ ಪ್ರಶ್ನೆಯನ್ನು ಮುನ್ನೆಲೆಗೆ ತರುವ ಪ್ರಯತ್ನವಾಗಿದೆ.

ಕೇಂದ್ರ ಸರ್ಕಾರ ಭರವಸೆಗಳನ್ನು ಜಾರಿಗೆ ತರುವ ಬದಲು ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್‌ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ ಎಂದು CJP ಆರೋಪಿಸಿದೆ.

ಸೆಪ್ಟೆಂಬರ್ 5ರಂದು ಹೆಚ್ಚಿನ ಸಂಖ್ಯೆಯಲ್ಲಿ ಇಂಡಿಯಾ ಗೇಟ್‌ನಲ್ಲಿ ಸೇರಿ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಯುವಜನರು, ವಿದ್ಯಾರ್ಥಿಗಳು ಹಾಗೂ ಯುವ ಸಂಘಟನೆಗಳಿಗೆ CJP ಮನವಿ ಮಾಡಿದೆ. ಪ್ರತಿಭಟನೆ ಸಂಪೂರ್ಣವಾಗಿ ಶಾಂತಿಯುತ ಮತ್ತು ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಯಲಿದೆ ಎಂದು ಅದು ಪುನರುಚ್ಚರಿಸಿದೆ.

Continue Reading

Trending